ನನ್ನ ಸಖಿಯರಿಗೆ…
ಕವಿತೆ ನನ್ನ ಸಖಿಯರಿಗೆ… ಸುರೇಖಾ. ಜಿ.ರಾಠೋಡ. ರಾವಣನನ್ನು ಪ್ರೀತಿಸಲೇ,ಇಲ್ಲಾ ರಾಮನನ್ನು ದ್ವೇಷಿಸಲೇ? ರಾವಣನು ಸೀತೆಯಒಪ್ಪಿಗೆಯಿಲ್ಲದೆ ಅವಳನ್ನುಮುಟ್ಟದಿರವ ಹಠ ತೊಟ್ಟನೋ? ರಾಮನು ಸೀತೆಯನ್ನುಒಪ್ಪಿಕೊಳ್ಳಲು ಅವಳನ್ನುಅಗ್ನಿ ಪರೀಕ್ಷೆಗೆ ಒಳಪಡಿಸಲು ಹಠ ತೊಟ್ಟನೋ? ಹಠ ತೊಟ್ಟ ಈರ್ವರುರಾಜರಲ್ಲಿ ಯಾರನ್ನು ನಾಯುಗ ಪುರುಷ,ಆದರ್ಶಪುರುಷನೆಂದು ಹೇಳಲಿ??ನನ್ನ ಸಖಿಯರಿಗೆ…..! ರಾಮ ಲಕ್ಷ್ಮಣರ ಮುಂದೆಶೂರ್ಪನಖೀಯು ತನ್ನಪ್ರೇಮ ನಿವೇದನೆಯನ್ನುಇಟ್ಟಾಗ, ಪ್ರೇಮದ ಬದಲಿಗೆದಂಡಿಸುವ ರೂಪದಲ್ಲಿಅವಳ ಮೂಗನ್ನು ಕತ್ತರಿಸಿದರು..! ತಮ್ಮ ಪೌರಷತ್ವವನ್ನುತೋರಿಸಿ, ಹೆಣ್ಣನ್ನುಅವಮಾನ, ಅಪಮಾನಗೊಳಿಸಿದಇವರನ್ನು ವೀರರೆಂದು ಕಥೆಹೇಳಲೇ ನನ್ನ ಸಖಿಯರಿಗೆ…!**************************************************









