ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ನವನವೋನ್ಮೇಶಶಾಲಿನಿ !

ಕವಿತೆ ನವನವೋನ್ಮೇಶಶಾಲಿನಿ ! ಕಾತ್ಯಾಯಿನಿ ಕುಂಜಿಬೆಟ್ಟು ಕವನ ಹುಟ್ಟುತ್ತಿಲ್ಲನವಮಾಸ ಉರುಳಿದರೂಹೆರದೆ ಹೊಟ್ಟೆಯೇ ಮೈ ಆಗಿರುವ ತುಂಬುಬಸಿರಿಯ ಹಾಗೆ ಅಂಗಾತಏದುಸಿರಲಿ ಅವಡುಗಚ್ಚಿ ಕಾಯುತ್ತಿರುವೆ ನಾಳೆ ಮೋಡಗಳ ಗಭ೯ ಸೀಳಿಕೊಂಡುನೇಸರ ಹುಟ್ಟುತ್ತಾನೆಕಾಳುಗಳು ಕಣ್ತೆರೆದುಕವಿತೆಗಳನ್ನು ಹೆರುತ್ತವೆಕಿರಣಗಳು ಆಟಿಕೆಗಳಾಗುತ್ತವೆಸುರುಳಿ ಸುಳಿವ ಕೋಮಲ ಬೆರಳುಗಳಿಗೆಇರುಳಲಿ ಹೂವುಗಳು ಬಸಿರಲಿ ಕಾಯಿಬ್ರೂಣಗಳನ್ನು ಹೆರಲುಕಾಯುತ್ತವೆಎಲ್ಲ ನಾಮ೯ಲ್ ಡೆಲಿವರಿ ನಾಳೆಗಳು ನಗುತ್ತವೆ ಕಾಲದ ಧಾವಂತದ ನಡಿಗೆ ಕಂಡುಮುಸಿಮುಸಿ ಎಂತೆಂಥ ಭಾಸ ಭವಭೂತಿ ಬೋಜಕಾಳಿದಾಸರು ಕಾಳುಗಳಲ್ಲಿ ಕಣ್ತೆರೆದು ಹಾಲತೆನೆತೆನೆಗಳನ್ನು ಉಣಿಸಿ…ಭಾಸನು ಕಾಲಕ್ಕೆ ದಾಸನಾಗಿಭವಭೂತಿಯು ಕಾಲರುದ್ರನ ಹಣೆಯ ವಿಭೂತಿಯಾಗಿಕಾಲ ತಾನು ಹೆತ್ತದ್ದನ್ನೇ ತಾನೇ ತೆತ್ತು… ಕಾಳಿದಾಸನು ಕಾಲದಾಸನಾಗಿ… ಕಾವ್ಯ ಕಾಲ ಕಾಲಕ್ಕೂ ಹೊಸ ಹೊಸತಾಗಿ ಕಾಲಾತೀತವಾಗಿ… ನವನವೋನ್ಮೇಶಶಾಲಿನಿ ! ಓಹ್! ನಾನು ಈಗಷ್ಟೇ ಹೆತ್ತ ಕವಿತೆಒಂದು ಇರುವೆಯ ಹಾಗೆ ಒಂದು ಅಕ್ಕಿಕಾಳು ಹೊತ್ತು ನಡೆಯುತ್ತಲೇ ಇದೆಕಾಲನ ತುಟಿಯ ಸಂದಿಯಲ್ಲಿ *******************************************

ನವನವೋನ್ಮೇಶಶಾಲಿನಿ ! Read Post »

ಕಾವ್ಯಯಾನ

ಒಳ್ಳೆಯ ದಿನವೆಂದರೆ…

ವಿಲಿಯಂ ಬ್ಲೇಕ್ ನ Holy Thursday ಅನುವಾದ: ವಿಠ್ಠಲ ದಳವಾಯಿ ಕಂಪಿಸುವ ದನಿಯು ಹಾಡೇ?ಅದು ಸಂತಸದ ಪದವಾಗಿ ಬದಲಾದೀತೆ?ಬಹುಪಾಲು ಮಕ್ಕಳು ಮೂಳೆ ಚಕ್ಕಳವಾದರೆಇದು ಬಡವರ ಭೂಮಿಯೇ ಹೌದು! ಅವರ ಮಗನ ಕಣ್ಣು ಎಂದೂ ಹೊಳೆಯುವದಿಲ್ಲಬರದಿಂದ ಬಣ್ಣಗೆಟ್ಟು ಒಣಗಿಯೇ ಇವೆ ಹೊಲಬದುಕು ಪೂರಾ ಕಲ್ಲು ಮುಳ್ಳಿನ ಹಾದಿಎಂದಿಗೆ ಕೊನೆ ಮಾಗಿ ಚಳಿಯ ತೇದಿ? ಒಂದು ಸಿರಿವಂತ, ಫಲವತ್ತಾದ ಭೂಮಿಯಲ್ಲಿಅತ್ತು ಅತ್ತು ಸತ್ತು ಹೋಗುವ ಕಂದಮ್ಮಗಳಿಗೆತುತ್ತು ಉಣಿಸಲೂ ಕೈಯೇಳದಿದ್ದರೆಈ ನೆಲ ಭವ್ಯ, ಪವಿತ್ರ ಎನ್ನಬಹುದೇ? ಎಲ್ಲೆಡೆಗೂ ಸೂರ್ಯನ ಬೆಳಗು ಬಂದರೆಎಲ್ಲೆಡೆಗೂ ಭೋರ್ಗರೆದು ಮಳೆ ಸುರಿದರೆಎಂದೂ ಹಸಿವಿನಿಂದ ದಿಗಿಲಾಗೋದಿಲ್ಲ ಪರಿವಾರಆಗ ಕರೆಯಬಹುದು ಅದು ಪವಿತ್ರ ಗುರುವಾರ ****************************************

ಒಳ್ಳೆಯ ದಿನವೆಂದರೆ… Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ರತ್ನರಾಯ ಮಲ್ಲ ಇಲ್ಲಿ ಚುನಾವಣೆಯ ಹಸಿವು ಹೆಚ್ಚಾಗುತಿದೆಮುಖಂಡರುಗಳ ಓಡಾಟವು ಹೆಚ್ಚಾಗುತಿದೆ ಗಲ್ಲಿ-ಗಲ್ಲಿಗಳಲ್ಲಿ ಓಟು-ನೋಟಿನದ್ದೆ ಮಾತುಮನೆ-ಮನಗಳಲ್ಲಿ ಮತ್ಸರವು ಹೆಚ್ಚಾಗುತಿದೆ ಶಾಂತಿಗಾಗಿ ಅವಿರೋಧವೆ ಚಂದ ಎನ್ನುವರುಕೋಟಿ ಕಬಳಿಸುವ ದಾಹವು ಹೆಚ್ಚಾಗುತಿದೆ ಊರು ಉದ್ಧಾರದ ಮಾತುಗಳು ಕೇಳುತಿವೆದೊಡ್ಡವರಲ್ಲಿ ತಿನ್ನುವ ಗುಣವು ಹೆಚ್ಚಾಗುತ್ತಿದೆ ಬೇಲಿಯೇ ಎದ್ದು ಹೊಲ ಮೇಯುತಿದೆ ‘ಮಲ್ಲಿ’ಜನರ ಮನಸುಗಳಲ್ಲಿ ಕ್ರೋಧವು ಹೆಚ್ಚಾಗುತಿದೆ ******************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶುಭಲಕ್ಷ್ಮಿ ಆರ್ ನಾಯಕ ಇತರರ ಅಲ್ಲ ಸಲ್ಲದ ನುಡಿಗೆ ನೋಯದಿರು ಗೆಳತಿಪರರು ಆಡುವ ಬಿರುನುಡಿಗಳಿಗೆ ಅಂಜದಿರು ಗೆಳತಿ ನಿನ್ನಾತ್ಮ ಸಾಕ್ಷಿಯದು ನಿಜವನ್ನೇ ನುಡಿಯುವಾಗಕುಹಕಿಗಳ ಕುಹಕಕ್ಕೆ ಮನಕೆಡಿಸಿಕೊಳದಿರು ಗೆಳತಿ ಧರಣಿಯ ಮನುಜರಲ್ಲಿ ಮಾನವೀಯತೆಯ ತುಂಬಲುವ್ಯರ್ಥವಾಗಿ ಎಂದಿಗೂ ನೀನು ಹೆಣಗದಿರು ಗೆಳತಿ ಕೊಡುವ ದಾನ ಧರ್ಮಗಳಲಿ ಪುಣ್ಯವಿದೆ ಎಂದರಿತುಅಪಾತ್ರರಿಗೆ ದಾನ ಧರ್ಮವನು ಮಾಡದಿರು ಗೆಳತಿ ಸಾಂತ್ವನವ ನಯದಿ ಹೇಳುತ ಧೈರ್ಯ ನೀಡುವೆಯೆಂದುಸಂಕುಚಿತಮನದವರಿಗೆ ಉಪದೇಶಿಸದಿರು ಗೆಳತಿ ನಂಬಿಕೆ ವಿಶ್ವಾಸದಲಿ ಧೈರ್ಯ ತುಂಬುವ ಜನರನುನಿನ್ನ ಕಠೋರತೆಯಿಂದ ದೂರ ತಳ್ಳದಿರು ಗೆಳತಿ ಎಲ್ಲರೂ ಎಲ್ಲರ ಒಳಿತನೆ ಬಯಸುತ್ತಿರುವಾಗಜೀವನದಲಿ ಜಂಜಾಟದಿಂದ ಕುಗ್ಗದಿರು ಗೆಳತಿ ಅರಿತು ಬಾಳಿದರೆ ಜಗದಲಿ ಮುಳ್ಳು ಹೂವಾಗುವುದುಸಹನೆಯಿಂದ ಬಾಳ ನೂಕುವುದ ಮರೆಯದಿರು ಗೆಳತಿ ಆತ್ಮಸಾಕ್ಷಿಯಿಂದ ಒಳಿತ ಬಯಸಿದೆ ಶುಭಳ ಮನವುಅರಿಯದೇ ಅದನು ನೀ ಸುಮ್ಮನೆ ರೇಗದಿರು ಗೆಳತಿ ********************************

ಗಜಲ್ Read Post »

ಕಾವ್ಯಯಾನ

ಅಪ್ಪನ ಕೊನೇ ಪತ್ರ.!

ಕವಿತೆ ಅಪ್ಪನ ಕೊನೇ ಪತ್ರ.! ಅಲ್ಲಾಗಿರಿರಾಜ್ ಕನಕಗಿರಿ ಬರುವ ಹೊಸ್ತಿಲು ಹುಣ್ಣಿಮೆಗೆರಕ್ತ ಹೆಪ್ಪುಗಟ್ಟುವ ಚಳಿ ಗಾಳಿ. ಒಂದು ವೇಳೆ ನಾನು ಕೊರೆಯುವ ಚಳಿಗೆಬೀಸುವ ವಿಷ ಗಾಳಿಗೆ ದಿಲ್ಲಿ ಗಡಿಯಲ್ಲಿಹೆಣವಾದರೆ ಯಾರೂ ಹೆದರಬೇಡಿ. ನನ್ನ ಹೆಣಕ್ಕೆ ಗೋರಿ ಕಟ್ಟುವ ಬದಲುಕೊರೆಯುವ ಚಳಿಯಲ್ಲಿ ನನ್ನ ಹೆಣ ಸುಟ್ಟು ಮೈ ಬಿಸಿ ಮಾಡಿಕೊಳ್ಳಿ.ಮುಂದಿನ ದಿನಗಳ ಹೋರಾಟಕ್ಕೆ ಅಣಿಯಾಗಿ. ನನ್ಹೆಣ ಸುಟ್ಟ ಬೂದಿ ಮನೆಗೆ ಬಂದರೆ ನಿನ್ನವ್ವನ ಹಣೆಗೆ ಹಚ್ಚಿ.ಕಣ್ಣೀರು ಬಂದರೆ ಬೆಳೆಗೆ ಹರಿಸಿಬಿಡಿ.ನಾ ಇಲ್ಲವೆಂದು ಒಕ್ಕಲುತನ ಜೊತೆಗೆ ಹೋರಾಟಎಂದೂ ನಿಲ್ಲದಿರಲಿ ಮಗನೆ. ಇದು ನಿನಗೆ ಕೊನೇ ಪತ್ರ…. ಇಂತಿ ನಿನ್ನ ಅಪ್ಪ “ಅನ್ನದಾತ”. ************************************

ಅಪ್ಪನ ಕೊನೇ ಪತ್ರ.! Read Post »

ಕಾವ್ಯಯಾನ

ನೀಳ್ಗೆರೆ

ಕವಿತೆ ನೀಳ್ಗೆರೆ ಅಕ್ಷತಾ ರಾಜ್ ಯಾಕೆ ಹೀಗೆ ನಮ್ಮ ನಡುವೆ ಕಾಣದಿಹ ತೆಳ್ಗೊಡೆನಾನೋ !ನೀನೋ! ಉಸುರುತಿಹುದು ನೀಳ್ಗೆರೆ || ಊರು ಕೇರಿ ಸುತ್ತಿ ಸವೆದ ಪಾದ ತಿರುಗಿ ಸೋಲಲುಅಲ್ಲೇ ಮಂಡಿಯೊಳಗೆ ನಿಂತ ಕಾಲ್ಗಳವು ನಕ್ಕವುಮುಸುಕಿನೊಳಗೆ ಜಟ್ಟಿಗುದ್ದು ಕಂಡವನಾರೋ ಅರಿಯರುಮೊದಲು ಯಾರು ಎಂಬ ಈರ್ಷ್ಯೆ ಸುತ್ತಲಿದ್ದ ಜಗದೊಳು ಹಲವು ಬಣ್ಣ ಇಹುದು ಅಲ್ಲಿ ಕಾಣದಿಹ ಕತ್ತಲುನೂರು ರುಚಿಯು ಸೇರಿ ನಡೆಯುತಿಹುದು ಹಿಮನದಿಬೀಸುಗಾಳಿಯೆಲ್ಲಿ ಒಂಟಿ? ಸುತ್ತಲಿಹರು ಬೇಡರುಆದರೊಂದು ಪ್ರಶ್ನೆಯಿಹುದು ಯಾರು ಮುಂದೆ ನಡೆಯೊಳು ಅರಳಿ ನಿಂತ ಕಿರಣದೆದುರು ‘ನಾನು’ ಮಂಜುಬಿಂದುಕರಗಲೇನೋ! ಉಳಿಯಲೇನೋ! ಪ್ರಶ್ನೆಯಿಹುದೇ ಅಲ್ಲಿ?ನಡೆದು ನಡೆವ ಕಾಲುಹಾದಿ ತಿರುವು ಹಲವು ಇಲ್ಲಿಗೆರೆಯ ದಾಟಿ ನಡೆದರದುವೆ ಮಂದೆ ತೊರೆದ ಹಾದಿ ಯಾಕೆ ಹೀಗೆ ನಮ್ಮ ನಡುವೆ ಕಾಣದಿಹ ತೆಳ್ಗೊಡೆನಾನೋ ! ನೀನೋ ! ಉಸುರುತಿಹುದು ನೀಳ್ಗೆರೆ || ******************************************

ನೀಳ್ಗೆರೆ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ವಿನುತಾ ಹಂಚಿನಮನಿ ಹುಟ್ಟಿನಿಂದ ಚಟ್ಟದ ವರೆಗೆ ಹೆಣ್ಣಿಗೆ ಅಸ್ತಿತ್ವಕ್ಕಾಗಿ ಹೋರಾಟಸಿಕ್ಕ ಬದುಕ ಭವಸಾಗರದಲಿ ಈಜಿ ದಾಟುವದಕ್ಕಾಗಿ ಹೋರಾಟ ತಾಯಿಯ ಗರ್ಭದಲ್ಲಿರುವ ಹೆಣ್ಣುಭ್ರೂಣ ನೇಣು ತಪ್ಪಿಸಲು ಸೆಣಸಾಟಪುರುಷಪ್ರಧಾನ ಲೋಕದಲಿ ಪ್ರಾಣಸಹಿತ ಬರುವದಕ್ಕಾಗಿ ಹೋರಾಟ ಒಡಹುಟ್ಟಿರುವ ಅಣ್ಣ ತಮ್ಮಂದಿರೊಂದಿಗೆ ಹಕ್ಕಿಗಾಗಿ ಪರದಾಟಕನಿಷ್ಠ ವಿದ್ಯೆ ಅನ್ನ ಬಟ್ಟೆಯ ಪಾಲು ಪಡೆಯುವದಕಾಗಿ ಹೋರಾಟ ಯೌವನಾವಸ್ಥೆಯಲ್ಲಿ ಕಾಮುಕರಿಂದ ಅತ್ಯಾಚಾರದ ಕೆಣಕಾಟಕನ್ಯೆಗೆ ಬಹುಮೂಲ್ಯ ಶೀಲ ಕಾಯ್ದುಕೊಳ್ಳುವದಕ್ಕಾಗಿ ಹೋರಾಟ ಪತ್ನಿಯ ಬೇಕು ಬೇಡಗಳ ಹತ್ತಿಕ್ಕುತ ಬಾಳ ಬಂಡಿಯ ಎಳೆದಾಟಅವಲಂಬಿತರ ಅವಶ್ಯಕತೆಗಳ ಪೂರೈಸುವದಕ್ಕಾಗಿ ಹೋರಾಟ ಇಳಿವಯಸ್ಸಿನಲಿ ಪರಾಧೀನತೆ ತಂದ ಅವಮಾನದಿಂದ ಸಂಕಟವಿನುತಳ ಜೀವನ ಸಂಜೆಯಲಿ ಪತಿಸುತರ ಆಸರೆಗಾಗಿ ಹೋರಾಟ *********************************

ಗಜಲ್ Read Post »

ಕಾವ್ಯಯಾನ

ಪ್ರೇಮವ್ಯೋಮಯಾನ…!

ಕವಿತೆ ಪ್ರೇಮವ್ಯೋಮಯಾನ…! ಡಾ. ಅರಕಲಗೂಡು ನೀಲಕಂಠ ಮೂರ್ತಿ. ಡಾ. ಅರಕಲಗೂಡು ನೀಲ ಚಂದ್ರನ ಗುರುತು ಹಿಡಿಯುವುದೇ ಹಾಗೆಗುರುತ್ವ ಹಗುರುಮೇಲ್ಮೈ ಭೂಮಿಗಿಂತ ನವುರುಮೇಲೆ ಬಿದ್ದುದೆಲ್ಲದರ ಅಲ್ಪ ಜಿಗಿತಹಾಗಿದ್ದೂ ನಮ್ಮ ಜನ ನೂರಾರುನಗರಿ ನಿರ್ಮಿಸಿ ಚಂದಿರನೀಗನಿರ್ಭರ ಭರ್ತಿ ಭಾರ! ಚಂದ್ರನಾಗರಿಕ ಸೂರ್ಯಕುವರತಾನಲ್ಲಿಂದಲೆ ಇಣುಕಿಅವನಿಯತ್ತ ಕಣ್ಣಲ್ಲೆ ಕುಟುಕಿಭುವನಸುಂದರಿ ವಸುಕಾಂತೆಗೆಗಂಟು ಮೂರನುಅಂಘ್ರಿ ಏಳನುಅಂಗೀಕರಿಸಿ ಪೂರ್ಣಚಂದ್ರನ ಕಡೆರಾಕೆಟ್ಟು ಬಿಟ್ಟನು! ದಿಗ್ಭ್ರಾಂತಳಾದಳು ವಸುಕಾಂತೆಕೇಳರಿಯದೆ ಕಂಡ ಆ ಚಂದ್ರಸಂತೆ!ಭುವಿಯಲ್ಲಿ ಬರಿ ಬಸ್ಸು, ಈಗೀಗಸೂಪರ್ ಸ್ಪೀಡ್ ರೈಲು, ವಿಮಾನಮಾನವರಹಿತ ಅಥವಾಅವನನ್ನೂ ಹೊತ್ತ ರಾಕೆಟ್ಟುಆಗೊಮ್ಮೆ ಈಗೊಮ್ಮೆ ವಿರಳವಾಗಿ! ಇಲ್ಲಿ, ವ್ಯೋಮದ ಉತ್ತುಂಗಕ್ಕೇಅಂತರಂಗಕ್ಕೇ ಪಯಣತಾಸುತಾಸಿಗೂ ಹತ್ತಿಪ್ಪತ್ತುಝೇಂಕರಿಸಿ ಹಾರಾಡುವದೈತ್ಯಾಕಾರ ರಾಕೆಟ್ಟು!ನಭೋನಿಲ್ದಾಣಗಳಲಿ ಎಲ್ಲೆಲ್ಲೂಕಂಡರಿಯದ ಸೌಲಭ್ಯ ಸಂಪತ್ತು…ಕ್ಷೀರಪಥದ ಎಲ್ಲ ಗ್ರಹಕ್ಕೂಕ್ಷುದ್ರಗ್ರಹ ಒಂದೊದಕ್ಕೂಸಂಪರ್ಕದೊತ್ತಡಹಾಗೆಯೇ ವ್ಯೋಮಗರ್ಭದಅನಂತದಲ್ಲಿ ಅವಿತಕಂಡು ಕಾಣದೆಲ್ಲ ದೈತ್ಯ ಕಾಯಕ್ಕೂಕ್ಷಣಾರ್ಧದಲಿ ಚಿಮ್ಮಿ ಮಿಂಚಂತೆಭುಸುಗುಟ್ಟು ಹರಿದೋಡಿ ಮಾಯಸುರಿಮಳೆ ರಾಕೆಟ್ಟು…! ಸೂರ್ಯಕುವರ ವಸುಕಾಂತೆಇಬ್ಬರೂ ವೈವಾಹಿಕ ಮಧುಸ್ಪರ್ಷಕೆಹಾರಿದಲೆಲ್ಲ ವಿನೂತನ ಚಂದ್ರರೂಪಕಣ್ಣು ತುಂಬಿ ಚಲ್ಲುವ ಬೆಳದಿಂಗಳುಅಮರಾಮೃತ ಮೀರಿದಮೃದು ಮಧುರ ಮಧುಪಾತದಓಕುಳಿಯಲಿ ಈಜು ಈಜಾಟ… ***************************** ಕಂಠ ಮೂರ್ತಿ.

ಪ್ರೇಮವ್ಯೋಮಯಾನ…! Read Post »

ಕಾವ್ಯಯಾನ, ಗಝಲ್

ಗಜಲ್‌

ಗಜಲ್ ಪ್ರಭಾವತಿ ಎಸ್ ದೇಸಾಯಿ ಬಳ್ಳಿಯಂತೆ ಬಳಕುತ ಗೆಜ್ಜೆ ಸದ್ದಲಿ ಜಗ ಗೆಲ್ಲುವ ಆಸೆಕಣ್ಣ ನೋಟದಲಿ ಹೂ ಬಾಣ ಹೂಡಿ ಹೃದಯ ಕೊಲ್ಲುವ ಆಸೆ ಎದೆ ಹೊಲದಲಿ ಗೆಜ್ಜೆ ಹೆಜ್ಜೆ ಮೂಡಿಸುತ ಹೊಸ ಹಾದಿ ಮಾಡಿದೆಒಲವಿನ ಅಮಲೇರಿಸುವ ಹನಿ ಹನಿ ಶರಾಬು ಚೆಲ್ಲುವ ಆಸೆ ಪ್ರೀತಿಯ ಬನದಲಿ ಚಿಗುರಿದ ಹೂ ಕಾಯಿ ಹಣ್ಣು ಮನ ಸೆಳೆಯುತಿವೆಅನುರಾಗದ ತೋಟದಲ್ಲಿನ ಮಾಗಿದ ಮಾವು ಮೆಲ್ಲುವ ಆಸೆ ಮನದಂಗಳದಲಿ ಗರಿಬಿಚ್ಚಿದ ನಾಟ್ಯ ಮಯೂರಾಗಿ ಕುಣಿದೆಬೆರಗು ಮೂಡಿಸುವ ಚೆಲುವ ಶಿಲಾ ಬಾಲೆಯಾಗಿ ನಿಲ್ಲುವ ಆಸೆಗೆ ಮೃದಂಗದ ನಾದ ತಾಳಕ್ಕೆ ತುಂಡಾಯಿತು ನೂಪುರ ಮಾಲೆಅವನ ಧ್ಯಾನ “ಪ್ರಭೆ”ಯಲಿ ತಲೀನಳಾಗಿ ಸೋಲುವ ಆಸೆ ************************************

ಗಜಲ್‌ Read Post »

ಕಾವ್ಯಯಾನ

ಹೊಸ‌ ದಿಗಂತ

ಕವಿತೆ ಹೊಸ‌ ದಿಗಂತ ಅಕ್ಷತಾ ಜಗದೀಶ ಚುಮ್ಮು ಚುಮ್ಮು‌ ನಸುಕಿನಲಿಮುಂಜಾನೆಯ ನಡಿಗೆ..ತಾ ಬರುವ ಸೂಚನೆ ನೀಡುತದಿನಕರ ಮೂಡುವ ಘಳಿಗೆ..ಹಕ್ಕಿಗಳ ಮಧುರ ಇಂಚರ ನಾದತಲೆ ತೂಗುತ ನಿಂತಿವೆನಡೆವ ದಾರಿಯ ಇಕ್ಕೆಲಗಳಲ್ಲಿಹೂ ಗಿಡ ಬಳ್ಳಿಗಳು….. ಅದೇಕೋ ಏನೋ..ಕಾಣದಾಗಿದೆ ಇಂದುಆ ಸುಂದರ ಕ್ಷಣಗಳು..ಮುಂಜಾನೆ ನಡಿಗೆ ಇದೆ…ಮೈ ಕೊರೆಯುವ ಚಳಿಯು ಇದೆದಿನಕರನ ಆಗಮನವು ಆಗುತಿದೆ..ಆದರೇನು…?ಹಕ್ಕಿಗಳ ನಾದವಿಲ್ಲದಾರಿಯ ಇಕ್ಕೆಲಗಳಲ್ಲಿಸ್ವಾಗತ ಕೋರುತ ನಿಂತಮರಗಿಡಗಳು ಕಾಣದಾಗಿದೆ… ಹಾ! ಈಗ ಅರಿವಾಯಿತೆನಗೆನಾ ನಡೆದ ದಾರಿ ಈಗಮರ ಗಿಡಗಳ‌ ನುಂಗಿ ನಗರವಾಗಿದೆಕೆರೆಗಳಿಲ್ಲ ಮರ ಗಿಡಗಳಿಲ್ಲಚಿಲಿಪಿಲಿ ಹಾಡುವ ಹಕ್ಕಿಗಳಿಲ್ಲ ವಿಪರ್ಯಾಸವೆಂದರೆ …..ಅದರ ಆಲೋಚನೆ ನಮಗಿಲ್ಲ‌‌..ಹೊಸ ದಿಗಂತದ ಹಾದಿಯಲಿಬಾಡಿಹೋಗಿವೆ ಹೂ ಗಿಡ ಬಳ್ಳಿ.. ಮತ್ತೆ ಮೂಡಣದಲಿ ರವಿ ಮೂಡುತಲಿರುವ…ಮುಂಜಾನೆಯ ನಡಿಗೆ ಮತ್ತೆನಿರಂತರವಾಗಿ ಸಾಗಿದೆಹೊಸ ದಿಗಂತದೆಡೆಗೆ….. *********************************

ಹೊಸ‌ ದಿಗಂತ Read Post »

You cannot copy content of this page

Scroll to Top