ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಮೌನದಲಿ ಕವಿತೆಯಾದವಳು

ಕವಿತೆ ಮೌನದಲಿ ಕವಿತೆಯಾದವಳು ವಿದ್ಯಾಶ್ರೀ ಅಡೂರ್ ಕವಿತೆಯಾದಳು ಆಕೆ ತಿಳಿದವರು ತಿಳಿದ ತರಹುಡುಕ ಹೋಗಲು ಬಗೆಯ ಬೇಗೆ ಬೆಂಬತ್ತಿತುಟಿತುದಿಯ ಕಿರುನಗೆಯ ಅರಿತವನ ಮನದ ಸ್ಥರಜಿಗಿವ ಜಿಂಕೆಯಂತೆ ಕವನವನ್ನು ಬಿತ್ತಿ ಹಣೆ ಮೇಲೆ ಆಕೆಯ ಗೆರೆಗಳನು ಕಂಡಾತಬರೆದಿಹನು ಪುಟಪುಟದ ಸಾಲುಗಳ ಹೆಚ್ಚಿತನ್ನನ್ನೇ ಬಣ್ಣಿಪನು, ಬಂದಿಹೆನು ತಾನೆಂದುಆಕೆಯ ಮನದೊಳಗೆ ದೀಪವನು ಹಚ್ಚಿ ಕಣ್ಣಂಚ ಹನಿಗಳನು ಮುತ್ತಂತೆ ಪೋಣಿಸುತರಂಗುಬಳಿದು ಅದಕೆ ಕಟ್ಟಿಹನು ಬೆಲೆಯಹಾದಿಬೀದಿಯ ಜನರು ಕೊಳ್ಳುವ ಸರಕಾಯ್ತುಅಳಿಸದೇ ಹೋಯ್ತವಳ ಕಣ್ಣೀರ ಸೆಲೆಯ ಮಾತಿನ ಪೇಟೆಯಲಿ ಬೆಲೆಯಿಲ್ಲ ಮೌನಕ್ಕೆಕುಗ್ಗಿಹಳು ಸಾಗರದ ಬಿಂದುವಾಗಿಮಾತಿರದ ಮೌನದಲಿ ಕವಿತೆಯಾದಳು ಅವಳುಕ್ಷಣಕೊಮ್ಮೆ ಕಣಕಣದಿ ಸಿಂಧುವಾಗಿ *******

ಮೌನದಲಿ ಕವಿತೆಯಾದವಳು Read Post »

ಕಾವ್ಯಯಾನ

ಹಾಯ್ಕುಗಳು

ಹಾಯ್ಕುಗಳು ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಗಹಗಹಿಸಿದೆನರನರವು ನಿತ್ರಾಣವೈಧ್ಯನ ಬಾಣ ಹಾಳಾದ ಗೋರಿಕೂಗಿ ಕರೆದಿದೆ ಕವಿಯಕಾವ್ಯ ಗೀಚಲು. ಗೋರಿಯ ಮೇಲೆಕೊನೆಯ ದಿನ-ಹಚ್ಚಿದಕಣ್ಣೀರ ದೀಪ. ಹಸಿದ ಹೊಟ್ಟೆಅವ್ವ-ಕಾವಿನ ಜೀವತುಂಬಿದೊಲವು. ನಿದ್ರೆಯಲೆದ್ದುರುದ್ರ ಲೀಲೆ ಕುಣಿತಕಾಂಚಣ ರಾಣಿ ಗಾಳಿಯ ಗುಟ್ಟುಬದುಕಿನಡಿ ಹೇಡಿಜೊಳ್ಳಿನ ಸುಳ್ಳು ಹೊನ್ನ ಬಳ್ಳಿಹೊತ್ತ ಹಾದಿಯ ಬುತ್ತಿಕನ್ನಡ ಪದ. ಒಂದೇ ‘ಎನಲು’ಗುಡಿ ಚರ್ಚು ಮಸೀದಿನಲಿವು ನಾಡು. ಎಳೆ ಹಸುಳೆತೊದಲು ನುಡಿದವುಮಾಗೀ-ಚಳಿಗೆ ಶಿಶಿರ ಋತುಭೂದೇವಿ-ಹೆಡಿಗೆಹುಗ್ಗಿ ಹೋಳಿಗೆ. ಮುಗುದೆ ‘ಒಲ್ಲೆ’ಮೂಕ ಮಾತಿನ ಎದಿಗೆನಲ್ಲನುರಿಗಾವು ಎಲೆಲೆ-ಬಾಳುಹಿತ ಮಿತಕೆ ಸೋಲುನೆಲೆ-ನೆರಳು ಕಾಗೆ ಗೂಗೆ ಬಾವ್ಲಿಬೇತಾಳ-ತಾಳಮೇಳರಾಜಕೀಯ. ಒಡಲೊಳಗಿದೆಕೊಳೆತನಾರು ಬೆಳೆಕಲ್ಮಶ ದೊರೆ ಒಳ-ಹೊರಗೆಕುರುಡು ಕುಂಟೆ ಬಿಲ್ಲೆಮೀರಿದ ಎಲ್ಲೆ. ಕಾವಿಯ ಚಿತ್ತಕಾಯ್ದ ಹಂಚಿನ ಮೇಲೆತತ್ವದ ಮಾತು. ಮನದ ಮಾಯೆಹಿಡಿಯೆ ಕಣ್ಣು ಕತ್ತಲುಉಲಿ-ಬದುಕು ಎಲೆಲೆ-ಕೀಟಜಗದ ತಲೆಕೆದರಿನಗದಿರಿಣುಕಿ ನವ-ತುಡುಗಎದೆಗೆ ಮುತ್ತಿಟ್ಟಬಾನಿಗೇರುತ ತೂತಾದ ಕೊಡದಾರಿಗೆ ನೀರ ಬಿತ್ತಿದಚಿತ್ತದ-ಗತ್ತು. ಬಣ್ಣದ ಬೆಕ್ಕುತುತ್ತನದು ನೆಕ್ಕಿತುಬಹು ವಿಲಾಸಿ. ನಾನೇ-ದುರುಳಯಾರು-ಯಾರನು ದೂರಲಿಪಾತಕೀ ಲೋಕ. ಜಿದ್ದಿನ ಪೀಳಿಗೆಬಕ್ಷಣಕೆ ಬಾಯ್ದೆರೆದರಣ ಹದ್ದುಗಳು. ****************************************************************

ಹಾಯ್ಕುಗಳು Read Post »

ಕಾವ್ಯಯಾನ

ಕುಸುಮಾಂಜಲಿ

ಕವಿತೆ ಕುಸುಮಾಂಜಲಿ ಅಭಿಜ್ಞಾ ಪಿ ಎಮ್ ಗೌಡ ಕುಸುಮವು ನಗುತಿರೆನಸುಕಿನ ವೇಳೆಯುಮುಸುಕನು ತೆರೆಯುತ ನಲಿಯುತಿದೆಕಸವರ ವರ್ಣದಿಜಸದಲಿ ಬೀಗುತರಸಮಯ ಸೃಷ್ಟಿಸಿ ಜೀಕುತಿದೆ|| ಕುಹಕವ ಕೇಳದೆಕಹಿಯನು ಮರೆಯುತಮಹಿಯಲಿ ಹಾಸವ ಚೆಲ್ಲುತಿದೆಸಹನೆಯ ದಳವದುಸಹಿಸುತ ಬಿಸಿಲನುಬಹಳಾಕರ್ಷಣೆ ಗಳಿಸುತಿದೆ|| ಶುದ್ಧತೆ ಭಾವವುಬದ್ದತೆಯಿಂದಲೆಸಿದ್ಧತೆ ಹೊಂದುತ ಪಸರಿಸಿದೆಮುದ್ದಿನ ಹೂವಿದುಮದ್ದಲು ಮುಂದಿದೆಸದ್ದನು ಮಾಡದೆ ನಗುತಲಿದೆ|| ಭ್ರಾಂತಿಯ ತೊಲಗಿಸಿಶಾಂತಿಯ ಹರಡುವಕಾಂತಿಯು ದೇವರ ಮುಡಿಯಲ್ಲಿಕಾಂತನು ಕೊಟ್ಟಿಹಕಾಂತೆಗೆ ಸುಮವನುಕಾಂತಿಯು ಗುಂದದೆ ಹೊಳೆಯುತಿದೆ|| ನೋಡುವ ಕಣ್ಣಿಗೆಮಾಡಿದೆ ಮೋಡಿಯಕಾಡುತ ನಿತ್ಯವು ಕಚಗುಳಿಯಬೇಡುವ ಮನಸಿಗೆಕೇಡನು ಬಯಸದೆಬಾಡುವ ನಿರ್ಮಲ ಕುಸುಮವಿದು|| **********************************************

ಕುಸುಮಾಂಜಲಿ Read Post »

ಕಾವ್ಯಯಾನ

ಹೈಕುಗಳು

ಹೈಕುಗಳು ಕೆ.ಸುನಂದಾ. ಬಾನಲ್ಲಿ ನಕ್ಕಶಶಿ ; ಕಂಡು ತಂಪಾಯ್ತುನೊಂದ ಮನಕ್ಕೆ* ತಳಮಳವತಾಳೆನಾ ; ಕೇಳು ಸಖಿಯಾರಿ ಸುಂದರಿ* ಅಡವಿಯಲ್ಲಿಬಿರಿದ ಮಲ್ಲೆ ಕಾಯ್ವೆನೀ ಯಾರಿಗಿಲ್ಲಿ* ವೃಕ್ಷಗಳಲ್ಲಿಸಾಕ್ಷಾತ್ ದೇವನಿಹನುಎಲ್ಲರ ಭಾಗ್ಯ * ಕಾಣೋ ಕಣ್ಣಿಗೆಸಂಭ್ರಮ ; ಈ ನಿಸರ್ಗಬೇಕು ಜೀವಿಗೆ* ಸೃಷ್ಟಿಯೇ ದೈವತಿಳಿದಂತೆ ಇರುವನಮ್ಮಂತೆ ಅವ* ಪ್ರೀತಿಯ ಗೂಡುಅನುಭವಿಸಿ ಹಾಡುಎನಿಲ್ಲ ನೋಡು ************************************

ಹೈಕುಗಳು Read Post »

ಕಾವ್ಯಯಾನ

ಜೀವನ

ಕವಿತೆ ಜೀವನ ಭಾರತಿ ರವೀಂದ್ರ ನೋವು ನಲಿವುಗಳನೆರಳು ಬೆಳಕಿನ ಜೋಕಾಲಿ ಈ ಜೀವನ. ಹುಣ್ಣಿಮೆಯ ಕಂಡುಉಕ್ಕಿ ಬರುವ ಸಾಗರ ದಷ್ಟೇ ಅಗಾಧ ಈ ಜೀವನ. ಸುರಿಯೋ ಸೋನೆಗೆಹೆಜ್ಜೆ ಹಾಕೋ ನವಿಲಿನಕಾಲ್ಗೆಜ್ಜೆಯ ದನಿಯ ಹಾಗೆಸದ್ದೇ ಇಲ್ಲದ ಹೆಜ್ಜೆಯಸಂಗೀತ ದಂತೆ ಈ ಜೀವನ. ಬಡತನದ ಬೇಗೆ ಇರಲಿಸಿರಿತನದ ಸೊಬಗಿರಲಿಪ್ರೀತಿಯ ಹೊನಲಾಗಲಿಈ ಜೀವನ. ಸಂತೃಪ್ತಿಯ ಮನಕೆಸಿರಿತನದ ಸೋಗು ಇರದು ಒಲವೇ ನಲಿವುಈ ಜೀವನ **********************************

ಜೀವನ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶಾಲಿನಿ ಆರ್. ಅನುರಾಗ ಆರಾಧನೆಯಿದೆ ಕಣ್ಣಂಚಿನ ಕೊನೆಯಲಿ ಮಿಂಚು ಸುಳಿದಿದೆ ನಾ ನಿನ್ನೆನೆವಾಗ/ಮನದಾಳದ ಮಾತಲ್ಲಿ ನವಿರಾದ ಭಾವೋತ್ಕರ್ಷ ಸಂಚು ಅಡಗಿದೆ ನಾ ನಿನ್ನ ನೆನೆವಾಗ// ನೆನೆದಷ್ಟು ಮನ ಮೃದುಲತೆಯ ತವರು,ಪೇಮ ಫಲದ ಗೊಂಚಲು/ರಾಗದೊಲವ ಎಲರು ಹಾದಿಗುಂಟ ತೂಗುತಿದೆ  ನಾ ನಿನ್ನ ನೆನೆವಾಗ//. ಬಾನಲಿ ಹೊಳೆವ ತಾರೆಗಳ ಕಾಂತಿಗೆ ನಿನ್ನ ವದನ ಚಂದಿರನ ಪ್ರತಿಫಲನವು/ಆಹಾ! ಮನವದು ನಿಲುಕದೆ ಒಲವಿನಂಕಣಕ ಬರೆಯುತಿದೆ, ನಾ ನಿನ್ನ ನೆನೆವಾಗ// ತಂಪೆಲರ ಒಲವಿಗೆ ಮನವು ಆರ್ದ್ರಗೊಂಡು  ಕರಗುತಿದೆ/ತನುವದು ಮುದದಿ ತಣಿದುಚರ್ವಿತ ಒಲವು ಹೊನಲಾಗಿದೆ, ನಾ ನಿನ್ನ ನೆನೆವಾಗ// ಭಾವಲೋಕದೀ ಸರಿತ ಸಲ್ಲಲಿತ ಕವನ ಮರುಳಿರಿಸಿ ಹರಿಯುತಿದೆ /ಶಾಲಿನಿಯ ಬಂಧದಲೀ ಒಲವ ಸಿಂಚನ ಕಚಗುಳಿಯಿಡುತಿದೆ ನಾ ನಿನ್ನ ನೆನೆವಾಗ// ********************************************************

ಗಜಲ್ Read Post »

ಕಾವ್ಯಯಾನ

ಕಾವ್ಯಯಾನ

ಮತ್ತೆ ನೆನಪಾಗುತ್ತಿದೆ ಚಂದ್ರು ಪಿ ಹಾಸನ್ ಮತ್ತೆ ನೆನಪಾಗುತ್ತಿದೆ, ನನ್ನ ಬಾಲ್ಯದೊಳುಕಳೆದ ದಿನಗಳು ಸುಂದರ ಆ ಮಧುರ ಕ್ಷಣಗಳುಕೆದಕಿದೆನು ನಾ ಇಂದು ಒಂದೊಂದು ಮನದೊಳುಚಿತ್ರಿಸಲೊರಟೆ ಸಾಲುಗಳಲ್ಲಿ ಆಕ್ಷಣಗಳ ಮುದದೊಳು ಮತ್ತೆ ನೆನಪಾಗುತ್ತಿದೆ, ನಾಲ್ಕೆಜ್ಜೆಯ ಮುಗ್ದ ಸಾಲುಅಮ್ಮನ ತೋಳು ಅದು ಸಂತಸದ ಸಾಲುರಾಜ ಸಿಂಹಾಸನ ನನ್ನ ತಾಯಿಯ ಮಡಿಲುಕುಣಿದು ಕುಪ್ಪಳಿಸಿದೆ ಪಡೆದೆ ಕೈತುತ್ತು ಅಲ್ಲಿ ನೆನಪಾಗುತ್ತಿದೆ ವಿದ್ಯಾರ್ಜನೆಯ ಆರಂಭಪ್ರಾಥಮಿಕ ಶಾಲೆಯ ಗಂಟೆ ಸದ್ದುಕೇಳಿದೊಡನೆ ಅಡ್ಡಗದ್ದೆ ಬಯಲಲ್ಲಿಓಡುತ್ತಿದ್ದೆವು ಗುಂಪಾಗಿ ಎದ್ದು-ಬಿದ್ದು ಮತ್ತೆ ನೆನಪಾಗುತ್ತಿದೆ, ಶಾಲೆಯ ಸಂಜೆಗಳುಅಣ್ಣನ ತೋಳು ಪ್ರತಿಸಂಜೆ ನಾ ಕೊಟ್ಟ ಗೋಳುದಿನಂಪ್ರತಿ ಅವಂಗೆ ನನ್ನ ಕಾಯುವ ಕಾರ್ಯರಸ್ತೆಬದಿ ಶುದ್ಧಕ್ಕಾಗಿ ನನ್ನ ಚಡ್ಡಿ ಹಿಡಿವಾಗ ಶೌರ್ಯ ಮತ್ತೆ ನೆನಪಾಗುತ್ತಿದೆ ರಾತ್ರಿಯ ಊಟಸಂಜೆಗೆ ಬಂದ್ ಆಗ್ತಿತ್ತು ಎಲ್ಲ ಆಟ-ಪಾಠಅಜ್ಜಿ ಹಾಸಿಗೆಯಲ್ಲಿ ನುಸುಳಿ ಗೊರಕೆ ಗೋಟರ್ ಗೊಟಮುಂಜಾನೆ ನಾಲ್ಕ್ಘಂಟೆಗೆ ಅಮ್ಮಂಗೆ ಗಿಳಿಪಾಠ ಮತ್ತೆ ನೆನಪಾಗುತ್ತಿದೆ, ಶಾಲೆಯ ಅಡ್ಡರಸ್ತೆಆ ಹಾದಿಯಲ್ಲಿ ಸಾಗಿದರೆ ಕಳೆಯುವುದೆಲ್ಲಾ ಸುಸ್ತುಅಲ್ಲೊಂದಿತ್ತು ಹುಣಸೆ, ಮಾವು, ನೇರಳೆ ಮರಪ್ರತಿ ಸೀಜನ್ ನಲ್ಲೂ ನಮ್ಮದೇ ರಾಜ್ಯಭಾರ ಮತ್ತೆ ನೆನಪಾಗುತ್ತಿದೆ, ಪರೀಕ್ಷೆಗಳ ಪ್ರಗತಿ ಪತ್ರಮಾರ್ಕ್ಸ್ ಕಾರ್ಡ್ ನಲ್ಲಿ ಅಂಕಗಳು ಕಡಿಮೆ ಬಂದದ್ದುಎಷ್ಟು ಬಾರಿ ಅಪ್ಪನ ಭಯದಲ್ಲಿ ತೋರಿಸದೆ ಕುಳಿತದ್ದುಬೆಳಗ್ಗೆ ಹೊರಡುವ ಸಮಯದಲ್ಲಿ ಅಮ್ಮನ ಕಾಲಿಡಿದಿದ್ದು ಮತ್ತೆ ನೆನಪಾಗುತ್ತದೆ, ಗದ್ದೆಯಲ್ಲಿನ ಆಟೋಟಭಾನುವಾರದಿ ನಡೆಯುತ್ತಿತ್ತು ನಮ್ಮದೇ ಒಂದು ಕೂಟಮುಂದಾಳತ್ವ ಸಿಗುತ್ತಿತ್ತು ಮಾಡಿಸಿದಂತೆ ಮಾಟಯಾಕಂದ್ರೆ ನಾ ಆಡ್ತಿದ್ದೆ ಚೆನ್ನಾಗಿ ಮರಕೋತಿಯಾಟ ಮತ್ತೆ ನೆನಪಾಗುತ್ತಿದೆ, ಜಾತ್ರೆ ಹಬ್ಬಗಳುಬಗೆಬಗೆಯ ತಿಂಡಿಗಳ ಬಿಡ ಬಿಡದೆ ಸವಿದಿದ್ದುಬಚ್ಚಿಟ್ಟಿದ್ದ ತಿನಿಸುಗಳ ಒಂದೊಂದೇ ಕದ್ದದ್ದುಎಂಟಾಣೆ ಹಿಡಿದು ಜಾತ್ರೆಯೆಲ್ಲಾ ಸುತ್ತಿದ್ದು ಮತ್ತೆ ನೆನಪಾಗುತ್ತಿದೆ ಕಾಲೇಜಲ್ಲಿ ನನ್ನ ಸ್ಥಿತಿಗತಿಅಲ್ಲಿ ಕಾಡಿತು ಪ್ರತಿದಿನ ವಿಜ್ಞಾನ ಕೋರ್ಸ್ನ ಭೀತಿಪ್ರಾರಂಭದಲ್ಲಿ ಹೃದಯದಲ್ಲಿ ಅಡಗಿಸಿದ್ದೆ ಚೊಚ್ಚಲ ಪ್ರೀತಿನಿಧಾನ ಹಂತದಲ್ಲಿ ಪಡೆದು ಜೀವನದಿ ಪ್ರಗತಿ ಮತ್ತೆ ಮತ್ತೆ ನೆನಪಾಗುತ್ತಿದೆ ಕಾಲೇಜು ಪಯಣಬಸ್ಸಿನಲ್ಲಿ ರಶ್ಶಾದರೆ ಬಾಗಿಲಲ್ಲಿ ನೇತಾಡ್ತಾ ನಮನಗೆಳತಿಯರ ಸೆಳೆಯಲು ಮಾಡ್ತಿದ್ದೆ ಆರೋಗ್ಯಕರ ಗಮನಸ್ನೇಹದ ಕಡಲಲ್ಲಿ ಹೇಗೋ ಸಾಗಿಸಿದ ಪಾರ್ವತಿರಮಣಾ ಮತ್ತೆ ನೆನಪಾಗುತ್ತಿದೆ ಪ್ರತಿ ಹೆಜ್ಜೆಗಳಲ್ಲಾಟಒಂದೊಂದು ಪರಿಸರದಲ್ಲೂ ಅನುಭವದ ಪಾಠಶಿಕ್ಷಕನಾಗಿ ಕಲಿಸಿದ ಕಂಡದ್ದೆಲ್ಲ ಬರೆಯುವ ಚಟಪರ ವಾಯಿತು ವಿಧಿಯಾಟ ಕಲಿಸಿತು ನೀತಿಪಾಠ ಮತ್ತೆ ನೆನಪಾಗುತ್ತಿದೆ ಬಾಲ್ಯದ ಸ್ನೇಹಜೀವಿಗಳುಕಂಡಾಗ ಹಾಯ್ ಹೋಗುವಾಗ ಬಾಯ್ ಅನ್ನೋ ಸಿಹಿ ಕ್ಷಣಗಳುಕಾಲಚಕ್ರವು ಎಲ್ಲವ ತಿರುಗಿಸಿ ಮರೆಸಿತುಆದರೆ ಮನಸ್ಸಿನ ಪುಟದಲ್ಲಿ ಅಚ್ಚರಿಯಾಗಿವೆ ನೆನಪುಗಳು ಮತ್ತೆ ನೆನಪಾಗುತ್ತಿದೆ ನೆನಪುಗಳ ನೆನಪುಗಳು ****************************************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ನಾ ನಿನ್ನ ಎಷ್ಟು ಪ್ರೇಮಿಸುತ್ತಿರುವೆನೆಂದು ನನಗೆ ಸರಿ ಗೊತ್ತಿಲ್ಲನೀ ಇಲ್ಲದೇ ನಾ ಬದುಕಿರಲಾರೆನೆಂದಿಗೂ ಅನ್ನೋದು ಸುಳ್ಳಲ್ಲ ನಿನ್ನನ್ನು ಬೇರೆಯವರು ಒಲಿಸಿಯಾರೆಂದು ಸದಾ ಭಯವಿದೆ ಈ ಹೃದಯಕೆಬಹು ಕಷ್ಟದಿ ಮತ್ತೆ ಮತ್ತೆ ಸಮಾಧಾನಿಸುವೆ ಹಾಗೇನು ಆಗಲಿಕ್ಕಿಲ್ಲ ಏನೇನು ಕಾಳಜಿ ಮಾಡಿ ಸಂಭಾಳಿಸಿಕೊಳ್ಳುವೆ ಅಂತ ನಿನಗೇನು ಗೊತ್ತುಈ ಮನಸ್ಸು ತಕರಾರಿಲ್ಲದೆ ಒಳಗೆ ನೊಯ್ಯುತ್ತಿದೆ ನಿನಗೆ ಅರಿವಿಲ್ಲ ಬೇಡವೆ ಮುಗಿಸು ಈ ಕಣ್ಣುಮುಚ್ಚಾಲೆಯಾಟ ಕಳೆಯಲಿ ಮಧು ಬಟ್ಟಲಲ್ಲಿಎಷ್ಟು ಸಲ ಮನದ ಮಾತು ಹೇಳಿದರೂ ನಿನ್ನ ಮನದ ಹಾಡೇ ನೀ ಹಾಡುತ್ತಿಲ್ಲ ಇಷ್ಟು ಗೊತ್ತಿರಲಿ ನೀನಿಲ್ಲದೆ ಬದುಕಿರಲಾರದು ಈ ಜೀವ ಇನ್ನೆಂದಿಗೂ‘ಹೊನ್ನು’ಪ್ರೀತಿಯಲ್ಲಿ ಬಿದ್ದಾಗಿದೆ ನೀ ತಬ್ಬದೆ ಗತಿಯಿಲ್ಲ ಮತಿಯಿಲ್ಲ ಸಿದ್ಧರಾಮ ಹೊನ್ಕಲ್ (ಹಿಂದಿ ಗೀತೆಯೊಂದರ ಪ್ರಭಾವದಿಂದ (ಹಿಂದಿ ಗೀತೆಯೊಂದರ ಪ್ರಭಾವದಿಂದ) *********************************************

ಗಜಲ್ Read Post »

ಕಾವ್ಯಯಾನ

ಅರಿವೇ ಗುರು

ಕವಿತೆ ಅರಿವೇ ಗುರು ವಸುಂಧರಾ ಕದಲೂರು ದೀಪ ಆರಿಸಿಬಿಟ್ಟೆ; ಸೂರ್ಯನೂಮುಳುಗಿದ. ಕತ್ತಲೆಂದರೆ- ಕತ್ತಲೀಗಒಳಹೊರಗೂ.. ಮೌನಕ್ಕೆ ಶರಣಾದೆ, ಕಿವುಡುತನದಲಿ.ಶಾಂತಿಯೆಂದರೆ ಶಾಂತಿಯೀಗ ಒಳಹೊರಗೂ.. ಇತಿಮಿತಿಗಳ ಅರಿವಾಯ್ತು,ನನ್ನದೂ ಮತ್ತವರಿವರದು.ಜಾಗರೆಂದರೆ ಜಾಗರೂಕಳೀಗ.ಒಳಹೊರಗೂ.. ಮಮತೆಯ ಕಣ್ತೆರೆದು, ಒಲವಿನಲಿನೋಡಿ ನುಡಿದೆ. ಹರುಷವೆಂದರೆಹರುಷವೀಗ. ಒಳಹೊರಗೂ.. ದೀಪ ಹಚ್ಚಿಟ್ಟೆ, ಬೆಳಕ ಹಂಬಲದಲಿ. ಇರುಳಿನಿಂದ ಸೂರ್ಯನೆದ್ದುಬಂದ. ಬೆಳಕೆಂದರೆ ಬೆಳಕೀಗಒಳಹೊರಗೂ.. **************************************

ಅರಿವೇ ಗುರು Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಮುಂಗಾರು ಮುಗಿಲೇ ಆರ್ಭಟಿಸುತ ಮಳೆ ಸುರಿಸದಿರು ಇನಿಯ ಬರುವಆಷಾಡದ ಬಿರುಸು ಗಾಳಿಯೇ ಮಣ್ಣು ತೂರದಿರು ಇನಿಯ ಬರುವ ನೂರು ಕನಸುಗಳ‌ ಜಾತ್ರೆ ಮಾಡಿಸುವ ಮೋಜಗಾರ ಅವನುಮುದ್ದಿನ ಗಿಳಿ ಸವಿಮಾತಿನಲಿ ಹಾದಿಯ ಕಟ್ಟದಿರು ಇನಿಯ ಬರುವ ವಿರಹದ ದಳ್ಳುರಿ ಆರಿಸುವ ಸುಂದರ ಶೀತಲ ಕುಮಾರ ಅವನುಬನದ ನವಿಲೆ ಗರಿಗಳ ಬಿಚ್ಚಿ ದಾರಿ ತಪ್ಪಿಸದಿರು ಇನಿಯ ಬರುವ ಬೆಂದ ಹೃದಯಕೆ ಒಲವಿನ ಅಧರ ಮುಲಾಮ ಹಚ್ಚುವ ವೈದ್ಯ ಅವನುಕೆಂಡ ಸಂಪಿಗೆ ಘಮ ಹರಡಿ ನಿನ್ನ ಕಡೆ ಸೆಳೆಯದಿರು ಇನಿಯ ಬರುವ “ಪ್ರಭೆ” ಎದೆಯಲಿ ಅನುರಾಗದ ಕಡಲನು ಉಕ್ಕಿಸುವ ಚಂದಿರ ಅವನುಚಕೋರ ಬೆಳದಿಂಗಳ ನುಂಗಿ ಕತ್ತಲು ಮಾಡದಿರು ಇನಿಯ ಬರುವ. *******

ಗಜಲ್ Read Post »

You cannot copy content of this page

Scroll to Top