ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕೊನೆ ಆಗುವ ಮೊದಲು

ಕವಿತೆ ಕೊನೆ ಆಗುವ ಮೊದಲು ಅಕ್ಷತಾ‌ ಜಗದೀಶ ಬಿಸಿಲು‌‌ ಕುದುರೆ ಬೆನ್ನತ್ತಿಓಡಿದೆ ಮನವು ಕಾಲ್ಕಿತ್ತಿಬಯಸಿದ್ದು‌ ಎಲ್ಲಿಯು ಸಿಗದೆ ಹೋಯ್ತುಕಾದ ಜೀವಕೆ ಈಗ ಸುಸ್ತಾಯ್ತು… ಕಾಲವದು‌ ಕಣ್ಮುಂದೆ ಕರಗುತಿದೆಕೈಗೆ ಸಿಲುಕದೆ ಮರೆಯಾಗುತಿದೆಎಲ್ಲವೂ ‌ಬಹುಬೇಗ ಸಾಗುತಿದೆನಾನೇಕೋ ನಿಧಾನವಾದೆನೋ ಎನಿಸುತಿದೆ……. ಎಲ್ಲೋ ಒಂದು ಸಣ್ಣ ‌ಹೊಳಪುಪದೇ ಪದೇ ಅದೇ ಹಳೆ ನೆನಪುಬಾಡಿ ಹೊಗುವ ಮೊದಲೆ ಹೂ..ಮುಡಿ ಸೇರಲಾರದ ನೋವು.. ಮರುಭೂಮಿಯಲ್ಲಿ ಕಾಣಬಹುದೇ ಒರತೆ…ಸಣ್ಣ ಆಸೆ ಇಟ್ಟು‌ ಬರೆದೆ ಈ ಕವಿತೆಕಳಿಸಿ‌ಕೊಡುವೆ ದೇವ ಈ ಬರಹ‌ ನಿನಗೆಹೊಸ‌ ಚಿಲುಮೆ ‌ಉಕ್ಕಲಿ‌ಬಾಳಿಗೆ‌ ಪೂರ್ಣವಿರಾಮ ಇಡುವ ಮೊದಲು……… *********************************************

ಕೊನೆ ಆಗುವ ಮೊದಲು Read Post »

ಕಾವ್ಯಯಾನ

ನಾನು ದೀಪ ಹಚ್ಚುತ್ತೇನೆ

ಕವಿತೆ ನಾನು ದೀಪ ಹಚ್ಚುತ್ತೇನೆ ಕಾಡಜ್ಜಿ ಮಂಜುನಾಥ ನಾನು ದೀಪ ಹಚ್ಚುತ್ತೇನೆಮನದ ಕಹಿಗಳು ದಹಿಸಿಹೋಗಲೆಂದು ನಾನು ದೀಪ ಹಚ್ಚುತ್ತೇನೆದ್ವೇಷದ ಯೋಚನೆಗಳುಸುಟ್ಟು ಹೋಗಲೆಂದು ನಾನು ದೀಪ ಹಚ್ಚುತ್ತೇನೆಪ್ರೀತಿಸುವ ಮನಗಳುಹೆಚ್ಚಾಗಲೆಂದು ನಾನು ದೀಪ ಹಚ್ಚುತ್ತೇನೆಜಾತೀಯತೆಯ ಬೀಜಗಳುನಾಶವಾಗಲೆಂದು ನಾನು ದೀಪ ಹಚ್ಚುತ್ತೇನೆಧರ್ಮದ ಹೆಸರಿನಲ್ಲಿ ನಡೆಯುವದೌರ್ಜನ್ಯ ನಿಲ್ಲಲೆಂದು ನಾನು ದೀಪ ಹಚ್ಚುತ್ತೇನೆಬಡವರ ಮನೆಮಗಳ ಮೇಲೆ‌ಅತ್ಯಾಚಾರ ನಿಲ್ಲಲೆಂದು‌ ನಾನು ದೀಪ ಹಚ್ಚುತ್ತೇನೆಧನಿಕರ ದುಡ್ಡಿನ ದರ್ಪಹೊಗೆಯಾಗಿ ಕರಗಲೆಂದು ನಾನು ದೀಪ ಹಚ್ಚುತ್ತೇನೆಉನ್ನತ ಶಿಕ್ಷಣ ಪಡೆದವರು ಮಾಡುವಗುಲಾಮಗಿರಿಯ ನಿಲ್ಲಲೆಂದು ನಾನು ದೀಪ ಹಚ್ಚುತ್ತೇನೆನೊಂದವರಿಗೆ ನ್ಯಾಯಸಿಗಲೆಂದು ನಾನು ದೀಪ ಹಚ್ಚುತ್ತೇನೆಅತ್ಯಾಚಾರಿಗಳಿಗೆ ‌ ಶೀಘ್ರಶಿಕ್ಷೆಯಾಗಲೆಂದು ನಾನು ದೀಪ ಹಚ್ಚುತ್ತೇನೆವಿಶ್ವವಿದ್ಯಾಲಯಗಳಲ್ಲಿ ಜಾತಿಬೇರುಗಳು ನಶಿಸಿ ಹೋಗಲೆಂದು ನಾನು ದೀಪ ಹಚ್ಚುತ್ತೇನೆಶಿಕ್ಷಣವಂತರ ಭ್ರಷ್ಟಾಚಾರನಿರ್ಮೂಲನೆಯಾಗಲೆಂದು ನಾನು ದೀಪ ಹಚ್ಚುತ್ತೇನೆಧ್ವನಿ ಇಲ್ಲದವರಿಗೆಧ್ವನಿಯಾಗಲೆಂದು ನಾನು ದೀಪ ಹಚ್ಚುತ್ತೇನೆತಾಯ್ನಾಡಿಗೆ ದ್ರೋಹಬಗೆದವರುಅನಲನಿಗೆ ಆಹಾರವಾಗಲೆಂದು ನಾನು ದೀಪ ಹಚ್ಚುತ್ತೇನೆದೇಶದ ಸಂವಿಧಾನವನ್ನುಗೌರವಿಸುವವರು ಹೆಚ್ಚಾಗಲೆಂದು ನಾನು ದೀಪ ಹಚ್ಚುತ್ತೇನೆಅಜ್ಞಾನದ ಕತ್ತಲಲ್ಲಿರುವ ಜನರುಜ್ಞಾನದ ಬೆಳಕಿಗೆ ಬರಲೆಂದು ನಾನು ದೀಪ ಹಚ್ಚುತ್ತೇನೆದೀಪದ ಹೆಸರಲಿ ಮೋಸಗೈವಭ್ರಷ್ಟಾಚಾರಿಗಳು ಮಣ್ಣಾಗಲೆಂದು ನಾನು ದೀಪ ಹಚ್ಚುತ್ತೇನೆಕಾಯದ ನೋವಿನ ಗಾಯಕೆಉಪ್ಪು ಹಾಕುವರು ನಿಲ್ಲಲೆಂದು ನಾನು ದೀಪ ಹಚ್ಚುತ್ತೇನೆಹೆಣ್ಣನ್ನು ಗೌರವಿಸುವಮನೆಗಳು ಮನಗಳು ಬೆಳಗಲೆಂದು ನಾನು ದೀಪ ಹಚ್ಚುತ್ತೇನೆಕರೋನಾ ವೈರಸ್ಜಗತ್ತಿನಿಂದ ದಹನವಾಗಲೆಂದು ********************************** .

ನಾನು ದೀಪ ಹಚ್ಚುತ್ತೇನೆ Read Post »

ಕಾವ್ಯಯಾನ

ಯಾತ್ರೆ

ಕವಿತೆ ಯಾತ್ರೆ ರಾಜೇಶ್ವರಿ ಚನ್ನಂಗೋಡು ಮುಗಿವಾಗ ನೀನುನನ್ನೆದೆ ಧುತ್ತಂದುನಿಂದುಮುನ್ನಡೆದಿದೆ.ಎದೆಗಿನ್ನೇನು ದಾರಿ?ಇನ್ನೆಷ್ಟು ಮಂದಿ ನನ್ನವರುನನ್ನ ನಾನಾಗಿಸಿದವರುಹೋದಾಗಲೂ ಹೀಗೇ ಮುನ್ನಡೆಯುತಿರುವುದು…ಅರ್ಥಹೀನವೀ ಯಾತ್ರೆಹಿಂದಿದ್ದ ಸುಖವನೆಲ್ಲ ಬಿಟ್ಟು ಮುನ್ನಡೆಯಲೇ ಬೇಕಾದ ಯಾತ್ರೆಅಂದವ ಹುಡುಕಿ ಚಂದವ ಹುಡುಕಿನಡೆದಷ್ಟೂ ಹಿಂದಿನಂದುಗಳೇನೀನಿದ್ದಾಗಿನ ಅವರಿದ್ದಾಗಿನಂದುಗಳೇಸೊಗಸೆಂದರಿತೂಮುಂದಡಿಯಿಡುವ ಯಾತ್ರೆನಾಳೆ ಇವನೂ ಅವಳೂ ಇಲ್ಲದಕಂದರಗಳಿಹವೆಂದರಿತೂನಿಲ್ಲಿಸಲಾಗದ ಯಾತ್ರೆಬೆಳಕಿತ್ತ ನೀನಾರಿದಾಗಇನ್ನಾರೂ ಆರುವ ಮುನ್ನನಾನಾರಿದರೇ ಚೆನ್ನವೆಂದನಿಸುವ ಯಾತ್ರೆಹೇಗೆ ಕಲ್ಪಿಸಿಕೊಳಬೇಕು?ಯಾಕೆ ನಡೆಯಲೆ ಬೇಕೀ ಯಾತ್ರೆ?

ಯಾತ್ರೆ Read Post »

ಕಾವ್ಯಯಾನ

“ಬೆಳಕಾಗಲಿ ಬದುಕು”

ಕವಿತೆ ಬೆಳಕಾಗಲಿ ಬದುಕು ಪ್ರೊ.  ಚಂದ್ರಶೇಖರ ಹೆಗಡೆ ಪಲವಿನ್ನೂ ಹಸಿ ಹಸಿಯಾಗಿದೆ ಬನ್ನಿ ಗಿರಾಕಿಗಳೇ ಮುಖವಿಟ್ಟು ಆಸ್ವಾದಿಸಿಬಿಡಿ ಖಾಲಿಯಾಗಿರುವ ಎದೆಯ ಗೂಡಿನೊಳಗೊಮ್ಮೆ ಮಸಾಲೆಯ ಒಗ್ಗರಣೆಯೊಳಗೆ ಬೇಯಿಸಿ ಘಮಘಮಿಸಿಬಿಡಿ ಕಮಟಾಗಿ  ಹಳಸಿಹೋಗುವ ಮುನ್ನ ಯಾರ ಹೆಸರಿನ ಷರಾ ಬರೆದಿದೆಯೋ  ಕತ್ತಿಯಂಚಿನಲಿ ಕತ್ತರಿಸಿಕೊಂಡು  ಹೆಣವಾಗಿರುವ ಜೀವಕೋಶಗಳ ಮೇಲೆ  ಸಾವೊಂದು ಬದುಕಾಗಿದೆ ನನಗೆ ಬದುಕೊಂದು ಸಾವಾಗಿದೆ ಕೊನೆಗೆ ಪಯಣವಿನ್ನು ಯಾರದೋ ಮನೆಗೆ ನೇತುಹಾಕಿರುವ ಅಂಗಡಿಯೊಳಗೆ  ಒಡಲುಗೊಂಡದ್ದೆಲ್ಲವೂ ಬಿಕರಿಗೆ ಕಾಲು ಕೈ ಕಣ್ಣು ತೊಡೆಗಳೆಲ್ಲ ಮಾಗಿದ ಹಣ್ಣುಗಳ ಬನದ ಬೆಲ್ಲ ತನುವ ತುಂಬಿಕೊಳ್ಳಿ ಬಾಯಿ ಚಪ್ಪರಿಸಿ ಮುತ್ತಿಟ್ಟು ನಾಲಿಗೆಯ ಸುಲಿದ ರಸಗಲ್ಲದಲಿರಿಸಿ ಮುಗಿದು ಹೋಯಿತು ಕತೆಯೆಂದುಕೊಂಡೆ ಆರಂಭವಿದೆಂದು ಅಂತರಂಗ ತುಂಬಿಕೊಂಡೆ ಉಸಿರೆಳೆದುಕೊಂಡು ರಸಾಯನ ಕುದಿಸಿ ಶಾಶ್ವತವಾಗಿರುವಂತೆ ನೆನಹು ಹಸಿ ಹಸಿ ತುಂಡು ತುಂಡು ದಿಂಡು ಸುಖದ ಗೀರು ಏರಬೇಡಿ ಇಮ್ಮನದಿ ನಿಂತ ತೇರು ಮಿಗೆಯಾಗಲಿ ಆಯಸ್ಸು ಉಂಡು ಮರೆತ ಒಡಲ ಕನಸು ಅಳುವ ಕಂಡಿಲ್ಲ ಕೊಂದಹರೆಂದು ನಂಬಿಲ್ಲ ತಕ್ಕುದ ಮಾಡುವನೆಂದು ಬಯಲಾಗುವುದರಲ್ಲಿಯೇ ಬದಲು ಬೆಳಕಾಗಲಿ ಬದುಕೆನ್ನುವುದೇ ಮೊದಲು *********************************

“ಬೆಳಕಾಗಲಿ ಬದುಕು” Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ರವಿ.ವಿಠ್ಠಲ. ಆಲಬಾಳ. ತುಸು ಹೊತ್ತು ಕಳೆದೆ ,ತುಸು ದೂರ ನಡೆದೆ ,ಸಾಕಿಂದಿಗೆ ಈ ಪ್ರೀತಿಮೋಹಕ ನಗುವಿನಲಿ ಚೆಲುವೆಲ್ಲ ನೋಡಿದೆ ,ಸಾಕಿಂದಿಗೆ ಈ ಪ್ರೀತಿ. ಭಣಗುಡುವ ಎದೆಯಿಂದು ಉಲ್ಲಾಸವನು ತುಂಬಿ ತುಳುಕಿಸಿದೆತುಟಿಕೆಂಪಿನಲಿ ಹೊಸ ಮಿಂಚು ಕಾಣುತಿದೆ ,ಸಾಕಿಂದಿಗೆ ಈ ಪ್ರೀತಿ. ಕಳೆಕಟ್ಟಿಕೊಂಡು ಕಾಣುವ ಕನಸುಗಳಿಗೆ ಸಾವಿರದ ನೆನಕೆ ತಿಳಿಸುವೆಸವಿ ದಿನಗಳ ಕ್ಷಣವನು ತಿರುವಿ ಹಾಕುತಿದೆ ಸಾಕಿಂದಿಗೆ ಈ ಪ್ರೀತಿ . ಏನೆಲ್ಲ ಹೇಳಿದೆ,ಏನೆಲ್ಲ ಕೇಳಿದೆ ,ಬರೀ ಮಾತುಗಳಾಗೇ ಉಳಿದಿವೆದೂರವಿದ್ದರೂ ಸರಿಯೇ ,ನಿನ್ನ ಬಿಂಬ ಇಲ್ಲಿದೆ ಸಾಕಿಂದಿಗೆ ಈ ಪ್ರೀತಿ. ನೀ ಹೊರಟು ಹೋಗುವಾಗ ಕಣ್ಣೀರಲಿ ಎಷ್ಟೋ ಮಾತುಗಳಿದ್ದವುಧ್ವನಿಯಿಲ್ಲದ ಪದಗಳಲ್ಲಿ ಪ್ರೇಮವನೇ ಸುರಿದೆ ಸಾಕಿಂದಿಗೆ ಈ ಪ್ರೀತಿ. ಮರೆತುಬಿಡಲು ಹೃದಯವಿಲ್ಲದ ದೇಹ ನನ್ನದಲ್ಲ ಕೇಳು ಪ್ರಿಯತಮೆರವಿ ಹುಟ್ಟಿ ಮುಳುಗುವವರೆಗೆ ನಿನ್ನ ಗುಂಗಿದೆ ಸಾಕಿಂದಿಗೆ ಈ ಪ್ರೀತಿ. *********************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ನನ್ನ ಸಖಿ ಈ ಜಗದಿ ಅಪರೂಪ ಏನನೂ ಬೇಡಳುಕೊಡುವೆ ಅಂದಾಕ್ಷಣವೇ ಕೋಪದಿ ಕ್ಷಣ ಮುನಿವಳು ಏನು ಕೊಟ್ಟರು ಕಡಿಮೆ ಅವಳಿಗೆ ಅಂತಹ ಗುಣದವಳುಮುಳ್ಳು ತರಚುವ ಮೃದು ಮಧುರ ಗುಲಾಬಿ ಅಂಥವಳು ಬೇಡ ಕೊಟ್ಟಷ್ಟು ಆಸೆ ಬೆಳಿವವು ಅಂದು ಕೊಂಡಿಹಳುಆಸೆಯೇ ಇಲ್ಲದ ಅಪ್ಪಟ ಬಂಗಾರು! ನನಗೆ ಸಿಕ್ಕಿಹಳು ತಾ ಕೊಡುವದರಲು ಹೀಗೆ ಬಲೂ ಕಂಜೂಸಿ ಮನದವಳುಮಾತೇ ಮುತ್ತಾಗಿಸಿದವಳು ಬೇಗ ಮುತ್ತು! ಸಹ ನೀಡಳು ಅಭಿಮಾನದಿ ಪ್ರೀತಿ ಪ್ರೇಮದ ಹೊಳೆಯ ಹರಿಸುವಳುಹೊಟ್ಟೆ ಬಟ್ಟೆ ದೇಹ ಬದುಕು ಬರಹ ಚೆಂದ ಮಾಡಿಹಳು ನೋವುಗಳ ನುಂಗಿಬಿಟ್ಟು ಬರೀದೆ ನಗು ನಟಿಸುವಳುಆಗಾಗ ಸಿಟ್ಟು ಸೆಡವು ಹುಸಿ ಕೋಪವು ತೋರುವಳು ಬದುಕಲಾರೆ ಬಿಟ್ಟಿರಲಾರೆ ಈ ಜೀವದ ಜೀವವವಳುಎಲ್ಲಿಯದೋ ಈ ಬಂಧ ಅನುಬಂಧ ಆಗಿಸಿದವಳು ಇದ್ದಲ್ಲೆ ಕಡು ಒಲವಿನ ಮೋಹದ ಮಳೆ ಸುರಿಸುವಳುಹೊನ್ನಸಿರಿ’ಮನ ಸರೋವರದಿ ಶಾಂತ ಇರಿಸುವಳು *******************

ಗಜಲ್ Read Post »

ಕಾವ್ಯಯಾನ

ಕಾರ್ಮಿಕ

ಕವಿತೆ ಕಾರ್ಮಿಕ ಆನಂದ ಆರ್ ಗೌಡ ತಾಳೇಬೈಲ್ ಹೊತ್ತಿನ ಹಸಿವು ನೀಗಿಸಲುಸವೆದ ಶ್ರಮ ಬೆಮರಾಗಿ ಮುತ್ತಿಡುತ್ತಿದೆವಾಸವಿಯ ಹಣೆಗೆ ನಿನ್ನ ಅಳುಕು ನಿನ್ನ ಫೋಟೋಜಗವೇ ತೆಗೆದು ತುರುಕಿದೆ ಗ್ಯಾಲರಿಗೆನೀನು ನೀನೆಂದು ಸಾರಲು ನೀ ಮಾತ್ರ ಕೋಲೆಬಸವಕೊಟ್ಟ ಬಟ್ಟೆಗೆ ಇಟ್ಟ ಕೂಲಿಗೆ ಬಸವಳಿದರೂಅವರ ಇನಾಮಿಗೆ ಸಲಾಮು ನಿನ್ನದು ಶ್ರಮದ ಫಲ ತಟ್ಟೆ ತುಂಬಲಿಲ್ಲಕೊಟ್ಟ ಪಂಚೆ ಮಾನ ಮುಚ್ಚುತ್ತಿಲ್ಲಕಾಯಕಕಂಟಿದ ಚಟ ಚಟ್ಟವೇರಲು ಕಾದಿದೆ ಈ ಜೀತ ಜೀವ ಹಿಂಡಿದರುಮುಕ್ತಿ ಪಡೆಯಲು ಪ್ರೇರಕವಾಗಿಲ್ಲಮೋಕ್ಷವೇ ಹಸಿವಾಗಿ ಪ್ರೇತವಾಗಿ ಕಾಡಿದೆ ಬೆವರ ಕೈಗಳು ತೊಳೆವ ಕೊಳೆಯುಸಿರಿಯ ನುಂಗಿ ಪುಂಗಿ ಊದುವಪುಢಾರಿ ಬಾಯಿ ಕಾಯಕವೇ ಕೈಲಾಸವೆಂದಿದೆ ಗಂಧದ ಪರಿಮಳ ಅರಿಯದ ಕಲ್ಲುತಾನು ತೇಯ್ಸಿಕೊಂಡು ಸವೆದರುಮೈಯೊಡ್ಡಿದ ಕೀರ್ತಿ ಬದುಕಿಸಿದೆ ವಲ್ಲಿಗೆ ಶುಭ್ರ ಅರಿವೆ ತೊಡಿಸುವಅವರ ರೆಟ್ಟೆಗಟ್ಟಿಗೊಳಲಿಬಯಕೆ ಜೇನಾಗಲಿ *****************

ಕಾರ್ಮಿಕ Read Post »

ಕಾವ್ಯಯಾನ

ಜ್ಯೋತಿ

ಹಾಯ್ಕುಗಳು ಜ್ಯೋತಿ ಭಾರತಿ ರವೀಂದ್ರ ಬಾ ಓ ಬೆಳಕೆಬಾಳಿನ ಕತ್ತಲೆಯ ತೆರೆಸರಿಸಿ. ನೀಗು ನೀ ಮನಗಳಮೂಢತೆಯ ಅಂಧಕಾರವನು ತೊಲಗಿಸೋಮತಿಯನು . ನಾನು ನಾನೆಂಬದುರಭಿಮಾನವನುದೂರ ಮಾಡೋ ಬೇಗ ನೀ ಬಂದುಬೆಳಗಿಸು ಹೃದಯಜ್ಯೋತಿಯನು. ***********************************

ಜ್ಯೋತಿ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶ್ರೀಲಕ್ಷ್ಮಿ ಆದ್ಯಪಾಡಿ. ಕಣ್ಣ ಜಗತ್ತಿನಲ್ಲೇ ಸಾವಿರ ಸಾವಿರ ನಕ್ಷತ್ರಗಳ ಚಿಮ್ಮಿಸಿದವನು ಅವನಿರುವುದೇ ಹಾಗೆ ಮೀಸೆಯ ತುಂಟ ನಗೆಯಲ್ಲೇ ಸಾವಿರ ಕನಸುಗಳ ಹೊಮ್ಮಿಸಿದವನು ಅವನಿರುವುದೇ ಹಾಗೆ ಮೌನವನ್ನಪ್ಪಿದ್ದ ನನ್ನೆದೆಯ ತಂತಿಯನ್ನು ಮತ್ತೆ ಬಿಗಿದು ಹೊಸ ರಾಗ ಮೀಟಿದನು ನನ್ನದೆಯ ಪ್ರತಿ ಬಡಿತದಲ್ಲೂ ನಲಿವಿನ ರಾಗಗಳ ಬೆರೆಸಿದವನು ಅವನಿರುವುದೇ ಹಾಗೆ ಕುದಿಯುತ್ತಿದ್ದ ತಪ್ತ ಎದೆಗೆ ತಂಪಿನ ಹನಿ ಬೆರೆಸಿ ಬದುಕಿನಲ್ಲಿ ಹೊಸ ಕನಸ ಬಿತ್ತಿದನು ಕಮರಿ ಹೋಗಿದ್ದ ಕನಸುಗಳಿಗೆ ಮತ್ತೆ ಹೊಸ ಜೀವ ತುಂಬಿದವನು ಅವನಿರುವುದೇ ಹಾಗೆ ಮೊರೆಯುತ್ತಿದ್ದ ಕಡಲಿಗೇನು ಗೊತ್ತಿತ್ತು ತನಗಾಗಿ ಹಂಬಲಿಸುವ ನದಿ ಎಲ್ಲಿದೆಯೆಂದು ಕಾಯುವ ಬದುಕಿಗೇ ವಿದಾಯ ಹೇಳಿ ಒಲವಿನಿಂದ ನಲಿದು ಬಂದವನು ಅವನಿರುವುದೇ ಹಾಗೆ ಕಾರ್ಗತ್ತಲ ಗೂಡಿನೊಳಗೆ ಒಂಟಿತನದ ನೋವಿನಲ್ಲೇ ಕೊರಗುತ್ತಿದ್ದ ಪುಟ್ಟ ಹಕ್ಕಿಯಾಗಿದ್ದೆ ಹಾರಲು ಪ್ರೇಮದ ವಿಶಾಲ ಆಗಸವಿದೆಯೆಂದು ತೋರಿ ರೆಕ್ಕೆಯಾದವನು ಅವನಿರುವುದೇ ಹಾಗೆ **********************************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶಮಾ. ಜಮಾದಾರ. ತರಗಲೆಯ ಅಲುಗಾಟದಲಿ ನಿನ್ನ ಕಾಲ್ಸಪ್ಪಳಕೆ ಕಾಯುತಿರುವೆಕೊರಕಲಿನ ಇಳಿಜಾರಿನಲಿ ನಿನ್ನ ದರುಶನಕೆ ಕಾಯುತಿರುವೆ ಲೋಕದ ನಾಲಿಗೆ ಹೊಸದೊಂದು ಪಟ್ಟಕಟ್ಟಿ ನಗುತಿದೆಅಮವಾಸ್ಯೆ ರಾತ್ರಿಯಲಿ ಬೆಳದಿಂಗಳಕೆ ಕಾಯುತಿರುವೆ ಯುಗಗಳಿಂದಲೂ ಪ್ರೀತಿ ನಿರೀಕ್ಷೆಯಲಿ ಪರಿತಪಿಸಿದೆನಿರ್ಭೀತ ಹೊಸಗಾಳಿಯಲಿ ಉಸಿರಾಟಕೆ ಕಾಯುತಿರುವೆ ಮನುಜ ಮಾಡಿದ ಮತಪಂಗಡಗಳು ಬೇಲಿ ಕಟ್ಟುತ್ತಲಿವೆಸೌಹಾರ್ದದ ಹೃದಯಗಳಲಿ ಸಮನ್ವಯಕೆ ಕಾಯುತಿರುವೆ ಎದೆಯ ಗೂಡುಗಳಲಿ ನಗಬೇಕು ನಿಸ್ವಾರ್ಥ ಶಮೆಗಳುಕಳಚಿದ ಬೇಡಿಗಳಲಿ ಅನುಸಂಧಾನಕೆ ಕಾಯುತಿರುವೆ **********************************

ಗಜಲ್ Read Post »

You cannot copy content of this page

Scroll to Top