ಕ್ಷಮಿಸಿ ಬಿಡು ಬಸವಣ್ಣ
ಕವಿತೆ ಕ್ಷಮಿಸಿ ಬಿಡು ಬಸವಣ್ಣ ಡಾ.ಶಿವಕುಮಾರ್ ಮಾಲಿಪಾಟೀಲ ನೀ ಹಾಕಿದ ಸಮಾನತೆಯಭದ್ರ ಬುನಾದಿ ಮೇಲೊಂದುಅಸಮಾನತೆಯ ಸೋರುವ ಗುಡಿಸಲು ಹಾಕಿದ್ದೇವೆ— ಕ್ಷಮಿಸಿಬಿಡು ಬಸವಣ್ಣ. ನೀನು ಗಳಿಸಿದ ನೈತಿಕಆಸ್ತಿಯ ಮಾರಿಮಹಾಮನೆಯ ಜಂತಿಮುರಿದು ಉರುವಲಾಗಿಬಳಸುತ್ತಿದ್ದೇವೆ— ಕ್ಷಮಿಸಿಬಿಡು ಬಸವಣ್ಣ. ನಿನ್ನ ಜನ್ಮದಿನದಂದೆಆಸ್ತಿ, ಬಂಗಾರ ಖರೀದಿಸಿಅಕ್ಷಯ ನಿಧಿ ತುಂಬಿಸಿಕೃತಕ ಜಗತ್ತು ಕಟ್ಟುತ್ತಿದ್ದೇವೆ–ಕ್ಷಮಿಸಿಬಿಡು ಬಸವಣ್ಣ ದೇಶ ವಿದೇಶಗಳಲಿ ನಿನ್ನ ಮೂರುತಿ ಸ್ಥಾಪಿಸಿ,ನಿನ್ನ ವಚನಗಳನ್ನುಎಲ್ಲಾ ಭಾಷೆಗಿಳಿಸಿ,ಕಲ್ಯಾಣ ನಾಡನ್ನೆಕಟ್ಟುವುದ ಮರೆತಿದ್ದೇವೆ— ಕ್ಷಮಿಸಿಬಿಡು ಬಸವಣ್ಣ ನಿನ್ನ ವಚನಗಳನ್ನು ಹೇಳುತ್ತ ಕೇಳುತ್ತ ವಚನ ಭ್ರಷ್ಟರಾಗಿ,ಕಾಯಕವೇ ಕಷ್ಟವೆಂದುನಿನ್ನನ್ನು ಕೂಡಲಸಂಗಮದಲ್ಲಿ ದಿನವೂ ಮುಳುಗಿಸುತ್ತಿದ್ದೇವೆ–ಕ್ಷಮಿಸಿಬಿಡು ಬಸವಣ್ಣ ಜಾತಿ ಅಳಿಸಲು ನೀನು ಚಳುವಳಿ ರೂಪಿಸಿದಿಜಾತಿ ಉಳಿಸಲು ನಾವು ಪೀಠಗಳನ್ನು ಸ್ಥಾಪಿಸಿಜಾತಿ ಸಮಾವೇಶಗಳ ಧೂಳಿನಲ್ಲಿ ನಿನ್ನನ್ನುಹುಡುಕಲು ಹೊರಟಿದ್ದೇವೆ— ಕ್ಷಮಿಸಿಬಿಡು ಬಸವಣ್ಣ ನಿನ್ನ ಕ್ರಾಂತಿಯ ಕಣಗಳುನಮ್ಮ ರಕ್ತದಲ್ಲಿಂದು ಮಾಯವಾಗಿವೆ“ಬಸವಾ ಮತ್ತೆ ಹುಟ್ಟಿ ಬಾ” ಎಂದ್ಹೇಳಲು ನಾವು ಅರ್ಹತೆ ಕಳೆದುಕೊಂಡಿದ್ದೇವೆ–ಕ್ಷಮಿಸಿಬಿಡು ಬಸವಣ್ಣ.ಕ್ಷಮಿಸಿ ಬಿಡು ….************************
ಕ್ಷಮಿಸಿ ಬಿಡು ಬಸವಣ್ಣ Read Post »









