ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಜಲ್

ಗಜಲ್ ವತ್ಸಲಾ ಶ್ರೀಶ ಕೊಡಗು ಕಲೆಯ ನೆಲೆಗೆ ಒಲವ ಬಳಸಿ ಸೆಳೆದೆಯಲ್ಲ ಗೆಳೆಯಹಲವು ಮಾತು ಗುನುಗಿ ದೂರ ನಿಂತೆಯಲ್ಲ‌ ಗೆಳೆಯ ಕಿವಿಯ ಜುಮುಕಿ ಮುತ್ತಿನಲ್ಲಿ ಹೆಸರ ಬರೆದೆ ಗುಟ್ಟಲಿತುಂಟತನದಿ ಕೆನ್ನೆ ಮುಟ್ಟಿ ಮತ್ತೇರಿದೆಯಲ್ಲ ಗೆಳೆಯ ದೂರದಲ್ಲಿ ಹಾಡನೊಂದು ಕೇಳೆ ಮನವು ಪುಳಕವಿಲ್ಲಿಹಣೆಯ ಮುತ್ತ ನೆನಪು ನೀಡಿ ಕಾಡಿದೆಯಲ್ಲ ಗೆಳೆಯ ಬೆರಳಿಗೊಂದು ಬೆರಳು ಸೇರಿಸಿ ನಾಲ್ಕು ಹೆಜ್ಜೆ ಇರಿಸಿದೆನೂರು ಜನ್ಮ ಜೊತೆಯ ಬೇಡಿ ನಿಂತೆಯಲ್ಲ ಗೆಳೆಯ ಬಿಸಿಯುಸಿರು ಕೊರಳ ತಾಗಿ ಪ್ರೀತಿ ಕವನ ಗೀಚಿದೆಕಣ್ಣಿನಲ್ಲಿ ಪ್ರೇಮ ಬಿಂಬ ಪ್ರತಿಷ್ಠೆಯಾಗಿದೆಯಲ್ಲ ಗೆಳೆಯ ಕದಪುಗಳ ರಂಗು ನುಡಿಯುತಿದೆ ಕೇಳದ ಕತೆಯೊಂದನುಭೂಮಿ ಬಾನು ಸಂಜೆ ಪ್ರಣಯ ಗುಲ್ಲಾಗಿದೆಯಲ್ಲ ಗೆಳೆಯ ಒಲವಿಗೆ ತೆರಿಗೆ ಪಾವತಿಸಿ ಬಂದು ನಿಂತಂತೆ ನಿಲ್ಲುವೆತಪಸ್ಯಾಳ ಗೆಲ್ಲಲು ಹೊಸ ವರಸೆಯಂತಿದೆಯಲ್ಲ ಗೆಳೆಯ *********************************** **************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ಮನಸ್ಸೇಕೋ ಮತ್ತೆ ನೊಂದು ಮೌನದಿ ಕಮರಿಹೋಗಿದೆಯಾಕೋ ಸುಮ್ಮನೇ ಮನಸಲ್ಲೆ ಬೆಂದು ಲೀನವಾಗಿದೆ ಯಾಕೆ ಏನು ಯಾರಿಗಾಗಿ ಇದೆಲ್ಲ ಒಂದು ತಿಳಿಯದಾಗಿದೆಕಾರಣವಿಲ್ಲದೇ ಸಂಕಟ ಆಗುವದೇಕೋ ಅರಿಯದಾಗಿದೆ ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರುಚಿ ಸಿಗದಾಗಿದೆಭರಪುರ ಬೆಳೆದ ರೈತನ ಫಸಲು ಹೊಲವೇ ಕದ್ದಂತಾಗಿದೆ ಬಿತ್ತುವದು ಅವನ ಧರ್ಮ ಬೆಳೆ ಪಡೆವುದು ಕರ್ಮವಾಗಿದೆಉಂಡು ಕೊಂಡು ಹೋದ ಲಂಡರದೇ ಬಲು ಹಿತವಾಗಿದೆ ಕೊಚ್ಚೆಯಲ್ಲಿ ಬಿದ್ದ ಮಾಣಿಕ್ಯಕ್ಕೆ ತನ್ನ ಬೆಲೆ ತಿಳಿಯದಾಗಿದೆಹೊನ್ನಸಿರಿ’ ಇರಲಿ ನೋಯಬೇಡ ಈ ಭೂಮಿ ಗುಂಡಾಗಿದೆ *****************************

ಗಜಲ್ Read Post »

ಕಾವ್ಯಯಾನ

ಮಧ್ಯಕಾಲ

ಕವಿತೆ ಮಧ್ಯಕಾಲ ಸ್ಮಿತಾ ಭಟ್ ಈ ಶರತ್ ಕಾಲವೆಂದರೆನೆನಪಾಗುವುದುಮದುವೆಯಾಗಿ ವರ್ಷಗಳು ಸಂದಮಧ್ಯಕಾಲದ ಜೋಡಿ . ಇತ್ತ ಪ್ರೇಮವೂ ಇಲ್ಲಅತ್ತ ಪಕ್ವತೆಯೂ ಇಲ್ಲಬರೀ ಒಣ ಹವೆ. ಶರವೇಗದಲಿ ಸರಿದೇ ಹೋದಮಳೆ ಮತ್ತದರ ಸೆಲೆರೆಂಬೆಗಂಟಿದ ಎಲೆಗಳಅಮಾಯಕ ನೋಟಕಳೆದ ಕಿಲ ಕಿಲ ಪ್ರೇಮದ್ದೂ. ಮುಂಜಾವಿಗೆ ಹೊದ್ದ ಶೀಕರಮುದುಡಿಯೇ ಕುಳಿತ ಅಲರುಬಿಸುಪಿಲ್ಲದ ವಿಷಾದ ನಸುಕು. ಕೈ ಚಾಚಿದ ತರುಹಕ್ಕಿ ಕುಳಿತ ಒಲವುಕೊಟ್ಟ ಪುಟ್ಟ ಕಾವು ಅಪ್ಪಿದ ಆಪ್ಯಾಯತೆಗಳಿಗೆಸುಳಿಗಾಳಿಯ ಪರೀಕ್ಷೆಕೊನರದ ಕಾಲದಸ್ಥಬ್ಧ ಭಾವಗಳ ನಕ್ಷೆ.ಹಗೂಽರ ರೂಢಿಯಾಗೇ ಬಿಡುತ್ತದೆಉದುರುವದು ಮತ್ತುಚಿಗುರಿಕೊಳ್ಳುವುದೂ… ******************************

ಮಧ್ಯಕಾಲ Read Post »

ಕಾವ್ಯಯಾನ

ಹಾಯ್ಕು

ಕವಿತೆಗಳು ಹಾಯ್ಕು ಭಾರತಿ ರವೀಂದ್ರ. 1) ನೆನಪುಮೊದಲ ಮಳೆನೆನಪುಗಳ ಧಾರೆಮನಸ್ಸು ಒದ್ದೆ. 2) ಸ್ವಾಗತಮೂಡಣ ದೊರೆಹಕ್ಕಿಗಳ ಸ್ವಾಗತಹೊಸ ಬದುಕು. 3) ನೆಪಬೀಸೋ ಗಾಳಿಗೆಅವಳದೇ ಧ್ಯಾನವು,ಸೋಕಿದ ನೆಪ. 4) ನಾಚಿಕೆಇಳೆ ನಾಚಿಕೆ :ಕದ್ದು ನೋಡಿದ ರವಿ,ಶಶಿ ಮುನಿಸು 5) ಸೋನೆನವಿಲು ನೃತ್ಯ :ಬೆರಗಾದ ಮುಗಿಲು,ಸುರಿದ ಸೋನೆ. 6) ಗೆಜ್ಜೆಮನ ಮಯೂರ:ನಿನ್ನ ನಗು ಕಂಡಾಗ,ಗೆಜ್ಜೆ ನಾಚಿತು. 7) ಕನ್ನಡಿಕಣ್ಣ ಕನ್ನಡಿ:ತುಂಬೆಲ್ಲ ನಲ್ಲ ನೀನೇ,ಮೌನ ಪ್ರೀತಿಗೆ. 8) ಹರ್ಷಭೂ ತಾಯಿ ಹರ್ಷ:ಹೂವಾಗಿ ಅರಳೈತಿ,ಮಧು ಸಂಭ್ರಮ. 9) ಮುತ್ತುನೀನಿತ್ತ ಮುತ್ತುಮಿಂಚೈತಿ ನೋಡು,ನನ್ನಕಣ್ಣ ಕಾಡಿಗೆ. 10) ಮಧುಮುತ್ತಿನ ಮಧು :ಮತ್ತೇರಿತು ದುಂಬಿಗೆ,ಶೃಂಗಾರ ಕಾವ್ಯ. *******************************************

ಹಾಯ್ಕು Read Post »

ಕಾವ್ಯಯಾನ

ಏನು ಬರೆಯಲಿ ……!

ಕವಿತೆ ಏನು ಬರೆಯಲಿ ……! ಅಕ್ಷತಾ ಜಗದೀಶ. ಬರೆಯೆಂದೊಡನೆ‌ ಏನುಬರೆಯಲಿ ನಾನುಕವನದ ಸಾಲುಗಳಿವುತಾವಾಗಿ‌ ಸಾಗುತಿಹವು… ಎಂದೂ ಕಾಣದ ಮೊಗವಜೊತೆಯಲಿ ಕಳೆಯದ ದಿನವಆ ಕ್ಷಣಗಳ ಕುರಿತು….ಏನೆಂದು‌ ಬರೆಯಲಿ ನಾನು… ದೂರದ ಕಾನನದೊಳಿರುವತೊರೆಯ‌ ಮೇಲಿನ ಬುಗ್ಗೆನಾ ಕಾಣ ಹೊರಟಾಗ…ಮಾಯವಾಗಿ‌ ಹೋದಾಗ….ಆ ಬುಗ್ಗೆಯ ಕುರಿತು‌ ನುಡಿಯೆಂದರೆಏನು‌ ನುಡಿಯಲಿ ನಾನು…. ಬಾನಲಿ ಮೂಡಿದ‌ ಮಿಂಚೊಂದುಕ್ಷಣದಲಿ ಮೂಡಿ ಮಾಯವಾಗಿಇರುಳ ದಾಟಿ ನಾ ಬಂದಾಗಹಗಲಲಿ ಏನು‌ ಹೆಳಲಿ ನಾನು.. ಬರೆಯೆಂದೊಡನೆ ಏನು‌ಬರೆಯಲಿ ನಾ‌ನು…….***

ಏನು ಬರೆಯಲಿ ……! Read Post »

ಕಾವ್ಯಯಾನ, ಗಝಲ್

ಲಂಕೇಶ-೭೮

ಲಂಕೇಶ-೭೮ ಸಿದ್ಧರಾಮ ಹೊನ್ಕಲ್ ಯಾರಿಗೂ ಏನನ್ನೂ ಬೇಡಲಿಲ್ಲ,ಬಯಸಲಿಲ್ಲ ಈ ಲಂಕೇಶಎಲ್ಲರಿಗೂ ಪಾಪಪ್ರಜ್ಞೆಯಾಗಿ ಕಾಡದೇ ಬಿಡಲಿಲ್ಲ ಈ ಲಂಕೇಶ ತಾನು ನಡೆದದ್ದು ಬರೀ ದಾರಿಯಲ್ಲ ಈ ಲಂಕೇಶನಿಗೆಅದು ರಾಜಮಾರ್ಗವೆಂದು ತೋರಿದನಲ್ಲ ಈ ಲಂಕೇಶ ಕನ್ನಡದ ಮೇರು ಲೇಖಕ ಮೇಲಾಗಿ ನಿರ್ಭೀತ ಪತ್ರಕರ್ತಶತಮಾನದ ದೃಷ್ಟಿಕೋನ ಬದಲಿಸಿದನಲ್ಲ ಈ ಲಂಕೇಶ ಕಥೆ,ಕವಿತೆ,ಪತ್ರಿಕೆ,ಸಿನೆಮಾ ನಿರ್ದೇಶನ ಹೀಗೆ ನಡೆದಂತೆಲ್ಲಾ ದಾರಿಗಳುನಡೆದ ದಾರಿಯಗುಂಟ ಬರೀ ಮುಳ್ಳುಗಳೇ ಹಸನಾದವಲ್ಲ ಈ ಲಂಕೇಶ ಯಾರಿಗೂ ಅಂಜಲಿಲ್ಲ ಅಳುಕಲಿಲ್ಲ ಯಾರ ಬಿಢೆಗೂ ಬೀಳಲಿಲ್ಲ“ಹೊನ್ನಸಿರಿ”ಕರ್ನಾಟಕಕ್ಕೆ ಹೊಸ ಮನ್ವಂತರ ಸೃಷ್ಟಿಸಿದರಲ್ಲ ಈ ಲಂಕೇಶ ******************************

ಲಂಕೇಶ-೭೮ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರತ್ನರಾಯ ಮಲ್ಲ ಅಸಹಾಯಕತೆಯ ಬೇರಿಗೆ ನೀರೆರೆಯಬೇಡಿಮನಸ್ಸಿನ ಆತ್ಮವಿಶ್ವಾಸವನ್ನು ಚಿವುಟಬೇಡಿ ಕರುಣೆ-ಕನಿಕರದಿಂದ ಒಡಲ ಹಸಿವು ನೀಗದುಸಹಾನುಭೂತಿಯ ಜಾಲದಲ್ಲಿ ಸಿಲುಕಬೇಡಿ ಪಾಪ ಎಂದು ಪಾಪಿ ಎನ್ನುವರು ಜಗದೊಳಗೆಸಾಧನೆಯ ಶಿಖರದಿಂದ ಜಾರಿ ಬೀಳಬೇಡಿ ಕಾರಣಗಳು ಇತಿಹಾಸವನ್ನು ನಿರ್ಮಿಸುವುದಿಲ್ಲನೋವನ್ನು ಪ್ರದರ್ಶನದ ವಸ್ತು ಮಾಡಬೇಡಿ ‘ಮಲ್ಲಿ’ ಮಲ್ಲಿಗೆಯ ಮೊಗ್ಗನ್ನು ಪ್ರೀತಿಸುವರೆಲ್ಲರುಅನ್ಯರ ಕೈಯಲ್ಲಿ ಆಡುವ ಗೊಂಬೆ ಆಗಬೇಡಿ ***************************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಮಾತನಾಡುವದೇ ಬಿಟ್ಟಿರುವೆ ನುಡಿಗಳು ತಿರುಚಲಾಗುತ್ತಿದೆ |ಕೇಳಿಸಿಕೊಳ್ಳುವುದೇ ಬಿಟ್ಟಿರುವೆ ಸುಳ್ಳುಗಳು, ವಿಜೃಂಭಿಸಲಾಗುತ್ತಿದೆ || ನೋಡುವುದೇ ಬಿಟ್ಟಿರುವೆ ಬೆಂಕಿ ಹಚ್ಚುವುದು ಚಿತ್ರಿಸಲಾಗುತ್ತಿದೆ |ಪ್ರಶ್ನಿಸುವುದೇ ಬಿಟ್ಟಿರುವೆ ನಾಲಿಗೆಗೆ ಬೀಗ ಹಾಕಲಾಗುತ್ತಿದೆ || ಪುಸ್ತಕ ಓದುವದೇ ಬಿಟ್ಟಿರುವೆ ಕಂದಕ ಉಂಟು ಮಾಡುವುದೇ ಮುನ್ನೆಲೆಗೆ |ತಿನ್ನುವದೇ ಆತಂಕ ಹೊಲಗಳಲ್ಲಿ ವಿಷವನ್ನು ಬಿತ್ತಿ ಬೆಳೆಯಲಾಗುತ್ತಿದೆ || ಕಲಾ ಲೋಕದಲ್ಲಿ ಬಣ್ಣದ,ಬಾಚಣಿಗೆಯ ಮಂದಿಯೇ ತುಂಬಿಕೊಂಡಿದ್ದಾರೆ |ಎಲ್ಲಾ ಉಚಿತವಾಗಿ ವಿತರಣೆ ಮನುಜ ಪ್ರೀತಿ ಪೇಟೆಯಲಿ ಬಿಕರಿಯಾಗುತ್ತಿದೆ || ಜೀವನ ಪುಷ್ಪ ಮೊಗ್ಗಾಗಿ ಅರಳುವ ಕಾಲದಲಿ ಬಾಗಿಸಬಹುದು ಮುತ್ತು |ಪ್ರೀತಿ ತುಂಬಿದ ಮಾರ್ಗದರ್ಶನ ಈಗೀಗ ಎಳೆಯ ಮನಸಿಗೆ ಮಿಥ್ಯವಾಗುತ್ತಿದೆ | **********************************

ಗಝಲ್ Read Post »

ಕಾವ್ಯಯಾನ

ಬಿಂದಿಗೆ ಕಳೆದಿದೆ

ಕವಿತೆ ಬಿಂದಿಗೆ ಕಳೆದಿದೆ ಸುಮಾವೀಣಾ ನಂಬಿಕೆಯೆಂಬೋ ಬಿಂದಿಗೆ ಕಳೆದಿದೆಕಳ್ಳನ ಮನೆಗೆ ಮಹಾಕಳ್ಳ ಹೊಕ್ಕಂತೆ!ಅಪನಂಬಿಕೆಯ ಮೇಲೆ ಅವಿಶ್ವಾಸ ಹೊಕ್ಕಿದೆನಂಬಿಕೆ ಕಳೆದರೂ ಕಳೆಯಿತುಕಳೆದು ಹೋಗುವ ಮುನ್ನ ಹೇಳಲೇಬೇಕಿತ್ತು!ಹೇಗೆ ?ಹೇಳುವೆ! ನಾ ಮರೆತಿದ್ದೆ ನೀ ಕಳ್ಳ ತಾನೆ!ನಂಬಿಕೆ ಮೂರು ಕಾಸಿನದ್ದೆ?ನಿನಗಿದ್ದರೂಇರಬಹುದು!ಇರಬಹುದು!ಮೂರು ಕಾಸಾದರೂ ಕಾಸೇ ತಾನೇಆತ್ಮಘಾತಕತನ ಮಾಡಲುಬಾರದುಬಿಂದಿಗೆ ಕಳೆದಿದೆ! ಬಿಂದಿಗೆ ಕಳೆದಿದೆ!ಕದ್ದು ಹೋಗಿದೆ ನಂಬಿಕೆತಿರುಗಿ ಬಂದರೂ ವಿಶ್ವಾಸವಲ್ಲದ ನಂಬಿಕೆಹೋದರೆ ಹೋಗಲಿ ಬಿಂದಿಗೆಒಳಿತೇ ಆಯಿತುನಿನ್ನ ವ್ಯಘ್ರತೆ, ರಾಕ್ಷಸತ್ವ ದರ್ಶನವಾಯಿತಲ್ಲ! *******************************

ಬಿಂದಿಗೆ ಕಳೆದಿದೆ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಪ್ರತಿಮಾ ಕೋಮಾರ ನೆನಪುಗಳನ್ನೆಲ್ಲ ಕಣ್ರೆಪ್ಪೆಯಲಿ ಸೆರೆಯಾಗಿಸಿದ್ದೇನೆ ಕುಕ್ಕಬೇಡ ನೋಡುನಿರೀಕ್ಷೆಗಳನ್ನೆಲ್ಲ ಅಟ್ಟ ಏರಿಸಿದ್ದೇನೆ ಇಳಿಸಬೇಡ ನೋಡು ಒಳಗುದಿಯ ಒಳಗೇ ಇಟ್ಟು ಕುದಿಯುವುದೇಕೆ? ಹೇಳಿಬಿಡುಕೇಳಲೆಂದೆ ಎದೆಗಿವಿಯನ್ನು ತೆರೆದಿದ್ದೇನೆ ಮುಚ್ಚಿಡಬೇಡ ನೋಡು ಎನ್ನೆಲ್ಲ ಭಾವಗಳ ಚಿತ್ರ ಶಾಲೆಗೆ ಚಿತ್ತಾರಿಗನಾದವನು ನೀನುನಿನ್ನಾಸರೆಯಲಿ ನಲಿವ ರಾಶಿ ಹಾಕಿದ್ದೇನೆ ತೂರಬೇಡ ನೋಡು ತಪ್ಪನ್ನು ಕ್ಷಮಿಸಿ ಮುಂದಡಿ ಇಟ್ಟಾಗಲೇ ಸಾಗುವುದು ಪಯಣಘಾತದ ಭೂತವನ್ನೆಲ್ಲ ಮರೆತು ಬಿಟ್ಟಿದ್ದೇನೆ ಕೆದಕಬೇಡ ನೋಡು “ಪ್ರತಿ” ಯ ನಿಗ೯೦ಧ ಬಾಳು ಬಂಜರು ಭೂಮಿಗೆ ಸಮಾನಕನಸಗನ್ನಡಿಯ ಜೋಪಾನ ಮಾಡಿದ್ದೇನೆ ಒಡೆಯಬೇಡ ನೋಡು ********************************

ಗಝಲ್ Read Post »

You cannot copy content of this page

Scroll to Top