ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಹನಿಗಳು

ಹನಿಗಳು ಭಾರತಿ ರವೀಂದ್ರ ಕೆಂಪಿನ ಮುತ್ತು ಬೆಳಗಿನಿಂದ ಕೆಂಪಾದಕೆನ್ನೆಯೊಂದಿಗೆ ನನ್ನವರಿಗೆ ಖುಷಿಯೇಖುಷಿ, ಬಿಡಿಸಿ ಹೇಳಲಿಹೇಗೆ? ಆ ಕೆಂಪಿಗೆಕಾರಣ ನಾನಲ್ಲಇಡೀ ರಾತ್ರಿ ಸೊಳ್ಳೆ ಕೊಟ್ಟ ಮುತ್ತಿನ ಪ್ರಭಾವ ಅಂತಾ ನೆನಪು ನಸು ನಾಚುತ ನಲ್ಲೆಕೇಳಿದಳು. ನೆನಪಿದೆಯಾ ನಿಮಗೆನಾ ಮೊದಲ ಬಾರಿಮಾಡಿದ ಹಲ್ವಾ…ಮೊಗದಿ ನಗು ಸೂಸಿಮನದಲ್ಲಿ ಅಂದು ಕೊಂಡೆ ಹೇಗೆ ಕಣೆಮರೆಯಲು ಸಾಧ್ಯಕಾಗದ ಅಂಟಿಸೋಅಂಟಿನ ಹಾಗೆ ಬಳಸಿದ್ದೆಅಂತಾ… ಮುಡಿದ ಮಲ್ಲಿಗೆ ಮದುವೆ ಮನೆಯಲ್ಲಿಮುಡಿ ತುಂಬಾ ಮಲ್ಲಿಗೆದಂಡೆ ಮುಡಿದವಳ ನಡೆ ಬಲು ಸೊಕ್ಕಿನದು,ಪಾಪ ಅದೇನಾಯಿತೋ ಗದ್ದಲದಿ ಅವಸರದಿಓಡಿ ಬರೋ ಹುಡುಗನಕೈಲಿ ದಂಡೆ ಸಮೇತಕೃತಕ ಮುಡಿ… ಅವಳದು. ***********************

ಹನಿಗಳು Read Post »

ಕಾವ್ಯಯಾನ

ದೀಪಾವಳಿ

ಕವಿತೆ ದೀಪಾವಳಿ ವಿದ್ಯಾಶ್ರೀ ಅಡೂರ್ ಮನಗಳ ನಡುವಿನ ತಮಗಳ ಕಳೆಯಲಿಬೆಳಕಿನ ಹಬ್ಬ ದೀಪಾವಳಿನೀಗದ ಬೆಳಕು ತುಂಬುತ ಬದುಕಲಿಕಳೆಯಲಿ ಕತ್ತಲ ಅಸುರನ ಧಾಳಿ ಬಗೆಬಗೆ ಖಾದ್ಯದ ಚಪಲವ ಮನದಲಿಹುಟ್ಟಿಸುವಂತ ಖಾನಾವಳಿಸುಡುಮದ್ದಿನಲಿ ಪರಿಸರ ಕೆಡಿಸದೆಮಾಡದೆ ಇರೋಣ ಹಾವಳಿ ಹಿಂದಿನ ದಿನಗಳ ಹಬ್ಬದ ನೆನಪುಬಿಟ್ಟಿದೆ ಮನದಲಿ ಕಚಗುಳಿಹಿಂದೆಗೂ ಮುಂದೆಗೂ ಕೊಂಡಿಗಳಾಗುತಹರಡುವ ಹಬ್ಬದ ಬಳುವಳಿ. ****************************

ದೀಪಾವಳಿ Read Post »

ಕಾವ್ಯಯಾನ

ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ

ಕವಿತೆ ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ ನಾಗರಾಜ್ ಹರಪನಹಳ್ಳಿ ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ ; ಅದಕೆ ನಾಮಗುವಿನಂತೆ ‌ನಿನ್ನ ಎದೆಗೊತ್ತಿಕೊಂಡೇ ಇರುವೆ ಜಗದ ತುಂಬಾ ಮುಗಿಲ ಬೆಳಕ ಯಾಕೆ ತುಂಬಿದೆ ಒಲವೇಅದಕೆ ನಾಅವಳ ಜಗದ ಕತ್ತಲೆಯಲ್ಲೂ ದೂರ ಇರುವ ಅವಳಹುಡುಕುತಿರುವೆ ನೂರಾರು ಬಣ್ಣಬಣ್ಣದ ಹೂಗಳ ಯಾಕೆ ಈ ಭೂಮಿಗೆ ಕಳಿಸಿದೆ ಒಲವೇಅದಕೆ ನಾ ; ಅವಳ ಕನಸುಗಳಿಗೆ ಬಣ್ಣ ತುಂಬಿದೆ ಯಾಕೆ ಪ್ರತಿ ಉಸಿರಿಗೂ ನಿನ್ನ ಹೆಸರ ಬರೆದೆ ಒಲವೇಅದಕೆ ನಾನಿನ್ನ ಧ್ಯಾನಿಸುವೆ ಯಾಕೆ ದನಿಗೆ ದನಿ ಸೇರಿಸಿ ತಕರಾರು ತೆಗೆದು ಮುದ್ದಿಸಿ ಪ್ರೀತಿಸಿದೆ ಒಲವೇಅದಕೆ ನಾಪ್ರೀತಿಯ ಪ್ರೀತಿಯಾಗುರುವೆ ಒಲವು ಬಿತ್ತಿದ ಮೇಲೆ ಒಲವನ್ನೇ ಬೆಳೆಯುವುದುಎಲ್ಲಿಂದ ಕಡ ತರಲಿ ದ್ವೇಷವಅದನಿಡಲು ಎದೆಯಲ್ಲಿ ಜಾಗವೇ ಇಲ್ಲಹಾಗಾಗಿ ವೈರಿ ಕೈಗೂ ಪ್ರೀತಿ ಇಟ್ಟು ಬಂದೆ ಒಲವೇ*********************

ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ Read Post »

ಕಾವ್ಯಯಾನ

ಶುಭ ದೀಪಾವಳಿ

ಕವಿತೆ ಶುಭ ದೀಪಾವಳಿ ಮುರಳಿ ಹತ್ವಾರ್ ಒಣಗುವ ಮುನ್ನವೇ ಉದುರಿದ ಹಸಿ-ಹಸಿಯ ಎಲೆಗಳ ರಾಶಿ ಇಬ್ಬನಿಯ ತಬ್ಬಿದ ನೆಲವ ತುಂಬಿದೆ ಯಾವ ಹಸಿವಿನ ಹೊಟ್ಟೆಯ ಹೊಂಚೋ? ನಡುಗುತ ಸೊರಗಿವೆ ಬೋಳು ಮರಗಳು ಆಳದ ಬೇರಿಗೂ ಕರಗಿ ಹೋಗುವ ಚಿಂತೆಯಾವ ಕಾರಿರುಳ ರಕ್ಕಸ ಸಂಚೋ ? ಹಣತೆ ಹಣತೆಗಳ ಕಿರಣಗಳ ಬಾಣ ಬಂಧಿಸಲಿ ಭಯದ ಎಲ್ಲ ನೆರಳುಗಳ, ಹೊಸೆದ ಬೆಳಕಿನ ಶರ ಪಂಜರದಲಿ  ಒಲುಮೆಯ ಅಭಯದ ಆ ಬಯಲಲಿ ಮತ್ತೆ ಚಿಗುರಲಿ ಬಯಕೆಯ ಹಸಿರು ಹೊಸ ನಗೆಯ ತುಂಬಿ ಮುಖ ಪಂಕಜದಲಿ *******************

ಶುಭ ದೀಪಾವಳಿ Read Post »

ಕಾವ್ಯಯಾನ

ವಿರಹ ತಾಪ

ಕವಿತೆ ವಿರಹ ತಾಪ ನಿ.ಶ್ರೀಶೈಲ ಹುಲ್ಲೂರು ತಿರುತಿರುಗಿ ಒರಗುತಿದೆಭಾವಲಹರಿಯ ಬುಗುರಿನಲಿವಿನಲು ಹಸಿಗಾಯಹೀಗೇಕೆ ಎದೆ ನಗರಿ ? ಎನಿತೆನಿತೊ ಆಸೆಗಳಹೊತ್ತ ಒಡಲಿನ ತುಡಿತನಿನ್ನೊಲವಿನಮಲಿನಲೆತೊಪ್ಪೆಯಾಗಿದೆ ಮಿಡಿತ ಬಾನು ರಂಗೇರಿದರುಬಿಡದು ಕಡಲಿನ ಮೊರೆತಕತ್ತಲೆಯನಪ್ಪಿದ ಕಣ್ಬೆಳಕಲು ನೆನಪಿನದೆ ಇರಿತ ಹಿಡಿದಷ್ಟು ಉಕ್ಕುವುದುಹಾಲ ನೊರೆಯಂತೆನೀನಿರದ ಈ ಬದುಕುನೀರಿರದ ಕೆರೆಯಂತೆ ಬಳಲಿದರು ತೆವಳುತಿದೆನಿನ್ನೆಡೆಗೆ ಈ ದೇಹಅದಾವ ಪರಿ ಸೆಳೆದೆ ನೀನರಳುತಿದೆ ಮೋಹ ಸುಖದ ಸುಗ್ಗಿಯನೆಲ್ಲಮಾಡುತಿಹೆ ಕನಸಿನಲಿಹುರಿದು ಮುಕ್ಕುವೆ ಏಕೆಸೊಗಸಿರದ ಮನಸಿನಲಿ ಕಂಕಣಬಲವಿಲ್ಲೆನಗೆ ನೀನೋಡಿ ಬಂದು ಬಿಡುಬರದಿದ್ದರೆ ಬೇಗ ಕೈಯಾರೆ ಕೊಂದು ಬಿಡು **********************************

ವಿರಹ ತಾಪ Read Post »

ಕಾವ್ಯಯಾನ

ಅನುಬಂಧ

ಕವಿತೆ ಅನುಬಂಧ ಅಕ್ಷತಾ ಜಗದೀಶ ಆ ನೀಲಿ ‌ಆಗಸದಿ ಚಿತ್ತಾರ ಮೂಡಿಸಲೇನು…..ಮೌನದಲಿ ಅಡಗಿದ ಭಾವನೆಗಳಮಾತಿನಲ್ಲಿ ಬಹಿರಂಗ‌ ಪಡಿಸಲೇನು…. ಎಲ್ಲಾ ಆಸೆಗಳ , ಎಲ್ಲಾ ಕನಸುಗಳಎಲ್ಲೆಲ್ಲೂ ಓಡುವ ಮನದೊಳಗೆಬಂಧಿಸಿರುವೇ ಈಗ…… ಬರೆವ ಕವಿತೆಯೋಳಗೆಮನದ ಮಾತು ಕುಣಿದಾಡಿ…ಪದಗಳೊಡನೆ‌ ಪುಟಿದೆದ್ದುರಾಗದಲಿ‌ ಬೆರೆತು ಅರಳಿದಾಗ..ಆಹಾ ಸಂತೋಷವೇ…!ಎಂಥಹ ಆಹ್ಲಾದವು.. ಚೂರು ಪ್ರೀತಿ ಭಾವದೊಳು ಬೆರೆತಾಗಸುಂದರ ಬಾಳಿನ ಪ್ರಾರಂಭ ಆಗ..ಇರಲೀ ಹೀಗೆ ಈ ಬಂಧ..ಮರೆಯಲಾರದ ಅನುಬಂಧ. *************************

ಅನುಬಂಧ Read Post »

ಕಾವ್ಯಯಾನ

ಸ್ವೀಕರಿಸುವೆಯಾ?

ಕವಿತೆ ಸ್ವೀಕರಿಸುವೆಯಾ? ಚಂದ್ರು ಪಿ ಹಾಸನ್ ಇಂದ್ರನ ಬನದಲ್ಲಿ ಅರಳಿದಓ ಅಂದದ ಚೆಂದದ ಹೂವೆಚಂದ್ರನ ಬರುವಿಕೆಗೆ ಕಾದಿರುವೆಯಾ? ಚಿಟ್ಟೆಗಳು ಒಟ್ಟೊಟ್ಟಾಗಿ ಒಮ್ಮೆಲೆಹಿಗ್ಗುತಲಿ ನುಗ್ಗುತಿರಲಿ ಬಗ್ಗದೆಮುಖ ಮರೆಮಾಚಿ ನಿಂತೆಯಾ? ಮುಂಜಾವ ಭಾಸ್ಕರನು ಬೆಳ್ಳಿರಥವೇರಿಚೆಲ್ಲಿಹನು ಅವನ ಹೊನ್ನ ಬೆಳಕನ್ನುಚೆಲುವ ತೋರದೆ ಹೋಗುವೆಯಾ? ರವಿ ರಶ್ಮಿಯನ್ನು ಸ್ವೀಕರಿಸದೆತಮವನ್ನೇ ತನ್ನಲ್ಲಿ ಆವರಿಸಿಕೊಂಡುಯಾರಿಗಾಗಿ ಅರಳುತ್ತಿರುವೆಯಾ? ನನಗಾಗಿ ನೀ ಕಾದಿದ್ದರೆ ಸಾಕುಬೇರೇನು ನಿನ್ನಿಂದ ಬೇಡೆನಗೆಪ್ರೀತಿಗಾಗಿ ಹುಡುಕಿದೆ ನೀಡುವೆಯಾ? ನೆಲೆಸುವೆ ಹೃದಯದಲ್ಲಿ ಸ್ವೀಕರಿಸುವೆಯಾ? ********************************

ಸ್ವೀಕರಿಸುವೆಯಾ? Read Post »

ಕಾವ್ಯಯಾನ

ದೀಪಗಳ ಸಾಲು

ಕವಿತೆ ದೀಪಗಳ ಸಾಲು ಸುವಿಧಾ ಹಡಿನಬಾಳ ಹಚ್ಚೋಣ ಸುತ್ತೆಲ್ಲಾ ದೀಪಗಳ ಸಾಲುಹೊದೆಸೋಣ ಎಲ್ಲರಿಗೂ ಪ್ರೀತಿಯ ಶಾಲು ಬೆಳಕಿಂದೆ ಜಗವು ಬೆಳಗುತಿಹುದುಅನ್ಯಾಯ ಹಿಂಸೆಯಲಿ ದಹಿಸುತಿಹುದುಜ್ಞಾನದ ಬೆಳಕಿನಲಿ ತೆರೆಯಲಿಕಣ್ಣುವಾಸಿಯಾಗಲಿ ಮನದ ಕಲ್ಮಶದ ಹುಣ್ಣು ಜಗವ ಹಿಂಡುತಿಹ ‌ಅನಾರೋಗ್ಯ ದೂರಾಗಲಿಎಲ್ಲರೂ ತಿಂದುಂಡು ನೆಮ್ಮದಿಯಾಗಿರಲಿ ನೆಲಕಚ್ಚಿದ ಆರ್ಥಿಕತೆ ಮತ್ತೆ ಚೈತನ್ಯಗೊಳ್ಳಲಿದುಡಿಯುವ ಕೈಗಳಿಗೆ ಕೆಲಸವು ಲಭಿಸಲಿ ದಿನವೂ ಮೊರೆವ ಬಾಂಬು ಗುಂಡುಗಳ ಸದ್ದಡಗಲಿಆತಂಕವಾದಿಗಳ ಹೃದಯದ ಕತ್ತಲೆ ಕಳೆಯಲಿ ಬದುಕೆಂಬ ಅನಿಶ್ಚಿತ ಪಯಣದಲಿಸಕಲರ ಸಹಕಾರ ಋಣಭಾರವಿದೆಏಕೆ ವ್ಯಾಜ್ಯ, ಕಲಹ ಜೀವನದಲಿಪಯಣ ಸಾಗಲಿ ಹೊಂದಾಣಿಕೆ ಸಮರಸದಲಿ ಒಂದು ಸುದೀರ್ಘ ಸಂಕಟವಕಳೆದು ಬಂದಿದೆ ದೀಪಾವಳಿಮನೆ ಮನೆಯಲಿ ನೆಲೆಗೊಳ್ಳಲಿಶಾಂತಿ ಸಂಭ್ರಮದ ರಂಗವಲ್ಲಿ *********************************

ದೀಪಗಳ ಸಾಲು Read Post »

ಕಾವ್ಯಯಾನ

ದಿವ್ಯ ಅನಿಕೇತನ

ಕವಿತೆ ದಿವ್ಯ ಅನಿಕೇತನ ನೂತನ ದೇಹ ಆತ್ಮಗಳು ಮಾತಾಡಿಕೊಂಡವುನನ್ನೊಳಗೆ ನೀನೊನಿನ್ನೊಳಗೆ ನಾನೊ? ಯಾರೊಳಗೆ ಯಾರಿದ್ದರೇನುಇದ್ದೂ ಇರದಂತೆ ಇರುವವರೆಷ್ಟಿಲ್ಲ !ರೇಷಿಮೆಯ ಸಣ್ಣ ಅಂಚಿನ ಪತ್ತಲನಿಟ್ಟುಸಿರ ಬಿಡುವುದ ಕಾಣದಂತೆ ನಾವೀರ್ವರು ಒಂದಾದ ಕ್ಷಣಕ್ಕೆಹುಣ್ಣಿಮೆಯೇ ಸಾಕ್ಷಿಛಾಯೆ ಕನವರಿಸುತ್ತಾಳೆನೂರ್ಕಾಲದ ಬಾಳಿಗೆ ಹೊರನೋಟಕ್ಕೆ ಒಂದಾದರೆಒಳ ಹರಿವಿಗೆ ಒಂದು ನಾನು ನೀನೆಂಬಗಡಿಯಿರದ ಗೂಡಿನಲಿಜೇನು ಸವಿ ಹೀರಲುದೇಹದೊಲುಮೆಯಲಿಆತ್ಮಜ್ಯೋತಿ ಬೆಳಗಬೇಕು ಸದಾ ಆತ್ಮ ಬಿರಿದು ಕಣಕಣದಲಿ ಬೆಳೆದುಮಿಲನವ ಮೀರಿ ನಿಂತುಈಗ ಸರ್ವವ್ಯಾಪಿಬೇಧವಿರದ, ಬಂಧವೂ ಇರದದಿವ್ಯ ಅನಿಕೇತನ **************************

ದಿವ್ಯ ಅನಿಕೇತನ Read Post »

ಕಾವ್ಯಯಾನ

ಕವಿತೆ ಜಗ… ಸೋಜಿಗ ವಿದ್ಯಾಶ್ರೀ ಅಡೂರ್ ಯಾರು ಇಲ್ಲ ಎಂಬ ಭಾವಬಿಟ್ಟುಬಿಡಿರಿ ಎಲ್ಲ ಬೇಗದೇವನೊಬ್ಬ ಸಲಹುತಿಹನುಹೆಜ್ಜೆ ಹೆಜ್ಜೆಗೇ ಗೋಡೆ ಸಂಧಿಲಿರುವ ಜೇಡಮರಳಿ ಕಟ್ಟಿ ತನ್ನ ಗೂಡಗೊಡವೆಯಿರದೆ ಬದುಕುತಿಹುದುಹೊಟ್ಟೆಪಾಡಿಗೇ ಮೊಟ್ಟೆಯಿಟ್ಟು ಮಾಯವಾಗೋಅಟ್ಟಿಉಣುವ ಜೀವಗಳಿಗೆಹುಟ್ಟುಸಾವು ಮೂಲವರುಹೋಶಕ್ತಿಯಾವುದು ಬಾಯಿಬರದೆ ಇರುವ ಮೂಕಹಸುವು ಕೂಡ ತನ್ನ ಪ್ರಸವಹಲ್ಲುಕಚ್ಚಿ ಸಹಿಸಿ ಕರುಳಬಳ್ಳಿ ಹರಿವುದೂ ಎಷ್ಟು ಕಡಿದರೂನು ಚಿಗುರಿಮತ್ತೆ ಮತ್ತೆ ಟಿಸಿಲು ಒಡೆದುಬದುಕೋ ಭರವಸೆಯ ಗಿಡಕೆಯಾರು ಕೊಟ್ಟರೂ ಇಟ್ಟಜಾಗದಲ್ಲಿ ತನ್ನಬೇರನಿಳಿಸಿ ಗಟ್ಟಿಗೊಳುವಪುಟ್ಟಬೀಜಕಿಹರೆ ಸಾಟಿಯಾರು ದಿಟ್ಟರೂ ಅಕ್ಕಿಬೆಂದು ಅನ್ನವಾಗಿನಿನ್ನೆದಿಂದು ಹಳಸಿಹೋಗಿಭವದಬದುಕು ಇಷ್ಟೇ ಎಂದುಸಾರುತಿರುವುದು ಅರಿವ ಸೊಡರು ಹಚ್ಚಿ ಒಳಗೆಹೊರಗೆ ಮಿಣುಕು ಬೆಳಕು ಬೀರೆಸುತ್ತ ಕವಿದ ಕತ್ತಲೆಲ್ಲಇಂಗಿ ಪೋಪುದು. ************

Read Post »

You cannot copy content of this page

Scroll to Top