ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕವಿತೆ ನತಭಾವ ಶಾಲಿನಿ ಆರ್ ಒಡಲಾಳದಲಿ ಒಡಮೂಡಿದತಪ್ತತೆಯ ಪ್ರಶ್ನೆಗಳ ಸುರಿಮಳೆ/ಉತ್ತರ ಹುಡುಕುವಿಕೆ ಬೈಗು ಜಾವದ ಸರಹದ್ದಿನ ಅಂಚಿನಲಿ ಈ ಇಳೆ// ಕಳಚುವ ಹುನ್ನಾರು ಒದೊಂದೆ ಭಾವಗಳು ಬೆತ್ತಲಾಗಿ ಬಯಲಿಗೆ/ಸೊಬಗಿನ ಪಾತರಗಿತ್ತಿ ನೋವಿನ   ಹುಳುವಾಗಿ  ಮತ್ತೆ ಗೂಡಿಗೆ// ಉಕ್ಕಿದ ಕಡಲಾಳದಿ ನೂರು ಭಾವಗಳಸಮಾಧಿ ಪಳೆಯುಳಿಕೆಯಂತೆ/ಬಿಚ್ಚಿಡುವ ತವಕದಲಿ ಕಾಲ ಸರಿದಿದೆ ದಡಕಪ್ಪಳಿಸದ ಅಲೆಯಂತೆ// ಮಂಜಿನ ಮುಸುಕಿನ ಚಳಿಯ ಕುರ್ಳಿಗಾಳಿ ಸುಳಿದು ಬಳಿಗೆ/ತುಂಬಿದ ಎನ್ನೆದೆಗೆ ಮೋಹದ ಮುತ್ತನೊತ್ತಿದೆ ಒಲವ ಸುಳಿಗೆ// ಜನುಮವಿದು ಬರಿದಾಗಬೇಕುಮತ್ತೆ ಮತ್ತೆ ಚಿಗುರ ಹಡೆಯಲು/ಒಳಬೇಗುದಿಗಳ ಬಿಕ್ಕು ನಿಲ್ಲಬೇಕುಮತ್ತೆ ಮತ್ತೆ ನಿನ್ನ ಪಡೆಯಲು// ಸೂತ್ರವಿದು ಬಾಳ ಭವಣೆಗೆ ನೀತಿ ಮಂತ್ರದ ಪಾಠ/ಬಿದ್ದ ಎಲೆಯಲು ಸಾವಿರಾರು ಕನಸಿದೆಮತ್ತೆ ಅನುಭವದ ರಸದೂಟ// ಶರದೃತುವಿನ ಮಾಧುರ್ಯವಿದೆ ನತಭಾವ ಆದಿಯಲಿ/ಒದೊಂದೆ ಎಲೆಗಳು ಕಳಚಿ ಬೀಳುವವಿಸ್ಮಯದ ಬಾಳ ಪಯಣದಲಿ// *************************

Read Post »

ಕಾವ್ಯಯಾನ

ಕವಿತೆ ಧ್ಯಾನಿಸುವ ಹೃದಯ ಡಾ.ಸುಜಾತಾ.ಸಿ ದೂರ ಸರಿದು ಸತಾಯಿಸಬೇಡಾದಾರಿ ಉದ್ದಕ್ಕೂ ನಾಲ್ಕಹೆಜ್ಜೆ ಇಟ್ಟು ನೋಡು ಬೆಳದಿಂಗಳ ನಡಿಗೆಗೆ ಕಾರ್ಮೊಡ ಕಟ್ಟಬೇಡಾಹಾಲ್ದೆನೆ ಇರುಳ ಸರಿಸಿ ಸವಿದು ನೋಡು ಸುರಿದ ಮಳೆಯಲಿ ಕಣ್ಣ ಹನಿ ಹುಡುಕ ಬೇಡಾಕಣ್ಣಾವಲಿಯಲಿ ಅರಳಿದ ನಿಂತ ಮುಖ ನೋಡು ಗಾಯದ ಮೆಲೆ ಉಸಿರು ಹರಡಿಬಿಡು ಒಮ್ಮೆಎದೆಭಾರ ತಂಗಾಳಿಯಾಗಿ ಬಿಡದು ನೋಡು ಕಣ್ಣು ರೆಪ್ಪೆ ಹಾಗೇ ಕಾಪಿಟ್ಟುಕೊ ಅಲುಗಿಸಬೇಡಾಕಂಡ ಕನಸಿಗೆ ಘಾಸಿಯಾದಿತು ನೋಡು ಮನಸುಗಳ ಸೇತುವೆಯ ಏಣಿ ಏರಿ ಬಿಡು ಒಮ್ಮೆನಿನ್ಮನ್ನೇ ಧ್ಯಾನಿಸುತ ಕುಳಿತ ಹೃದಯ ಮತ್ತೆ ಸಿಕ್ಕರೆ ಸಿಗಬಹುದು ಒಮ್ಮೆ *************************

Read Post »

ಕಾವ್ಯಯಾನ

ಹಾಯ್ಕುಗಳು ಭಾರತಿ ರವೀಂದ್ರ ಸ್ವರ್ಗ ತಾಯಿ ಸ್ವರೂಪ :ಅಕ್ಕನ ಮಡಿಲದು,ಇದುವೇ ಸ್ವರ್ಗ. ಮನ ಹಸಿದ ಹೊಟ್ಟೆ :ನಿದ್ರೆಗೆ ಜಾಗವೆಲ್ಲಿ,ಜಾಗ್ರತ ಮನ. ನೆಮ್ಮದಿ ಇರೆ ನೆಮ್ಮದಿ :ಒಬ್ಬರಿಗೊಬ್ಬರದು,ಚಿಂತೆ ಮಾತೆಲ್ಲಿ. ಹೃದಯ ಶಿಲೆ ಹೃದಯ :ಈ ಜಗ, ಮಮತೆಯಸೆಲೆ ಸಿಗದು. ಸ್ನೇಹ ತುಂಟು ಮನಸ್ಸು :ಬಳಲಿದ ತೃಷೆಗೆ,ಸ್ನೇಹ ಸಿಂಚನ. *************************

Read Post »

ಕಾವ್ಯಯಾನ

ಕವಿತೆ ಗೆಜ್ಜೆನಾದ ಅಕ್ಷತಾ ಜಗದೀಶ್ ಸಾವಿರ ಸಾಲಿನ ಪದಗಳಲಿಅಡಗಿ ಕುಳಿತವಳು….ಯಾರಿಗೂ ಕಾಣದಂತೆನಾ ಬರೆವ ಕವನಗಳಲಿ ಮೂಡುತಿರುವಳು…….. ಕವನದ ಸಾಲುಗಳುಅವಳ ಗೆಜ್ಜೆಯನಾದದಹೆಜ್ಜೆಯ ಗುರುತುಗಳು..ಹಾಡಿನ ಪಲ್ಲವಿಯೂಅವಳು ಬಿರುವ ಕಿರುನಗೆಯೂ….ಆಕೆಯ‌ ಸಿಹಿ ಮುತ್ತುಗಳೇ..ಮಳೆಯ‌ ಆ ತುಂತುರು ‌ಹನಿಗಳು.. ಬಾನಲ್ಲಿ ಬಂದು‌ ಹೋಗುವಕಾಮನಬಿಲ್ಲಿನಂತೆ ನೀನು..ಬಣ್ಞಬಣ್ಣದ ನೆನಪು ಬಿತ್ತಿ ಹೋದೆಯೇನು….? ನನ್ನ ಹಾಡಿನ‌ ಅಂತರಾಳ ಅವಳುನನ್ನ ಬಾಳಿನ ಒಡತಿ ಇವಳು..ಹಾಡಿಗೆ ಸ್ಪೂರ್ತಿಯಾಗಿ….ಪದಗಳಿಗೆ ಭಾವವಾಗಿ…ನನ್ನೊಡನೆ ಸೇರು‌ ಮೆಲ್ಲಗೆ.. *********************************

Read Post »

ಕಾವ್ಯಯಾನ

ಹಾಯ್ಕುಗಳು

ಹಾಯ್ಕುಗಳು ಜಯಶ್ರೀ ಭ.ಭಂಡಾರಿ ಬಂದರೆ ನೀನುಬಾಳಿಗೆ ಬೆಳಕಾಗಿಬಾಳುವೆನು ನಾ. ದೂರಾಗಿ ಹೋದೆ.ನಡುನೀರಲಿ ಬಿಟ್ಟು.ಪ್ರಿಯತಮೆಯ. ಅಲೆಗಳಲ್ಲಿಸಾಗರದಿ‌ ನಲಿವುತೀರದ ಮೋಹ. ಕಾಡಬೇಡ ‌ನೀಈ ಹೃದಯ ನಿನ್ನದುತೋರು ಕರುಣೆ. ಮುಂಗಾರು ಮಳೆನಿಲ್ಲದೇ ಸುರಿತಿಹೆಕಾಡುತಿಹೆ ನೀ. ರಾಧೆಯ ನೋವುಕೊಳಲ ನಾದದಿಂದದೂರವಾಯಿತು. ಕೃಷ್ಣ ಸನಿಹಇದ್ದರೆ ಮರೆವಳುರಾಧೆ ತನ್ನ ‌‌‌‌ತಾ ಗೋಪಾಲನಿಗೆಗೋಪಿಕೆಯರ ಆಟಯಮುನೆಯಲಿ ******************

ಹಾಯ್ಕುಗಳು Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ವತ್ಸಲಾ ಶ್ರೀಶ ಕೊಡಗು ಕಲೆಯ ನೆಲೆಗೆ ಒಲವ ಬಳಸಿ ಸೆಳೆದೆಯಲ್ಲ ಗೆಳೆಯಹಲವು ಮಾತು ಗುನುಗಿ ದೂರ ನಿಂತೆಯಲ್ಲ‌ ಗೆಳೆಯ ಕಿವಿಯ ಜುಮುಕಿ ಮುತ್ತಿನಲ್ಲಿ ಹೆಸರ ಬರೆದೆ ಗುಟ್ಟಲಿತುಂಟತನದಿ ಕೆನ್ನೆ ಮುಟ್ಟಿ ಮತ್ತೇರಿದೆಯಲ್ಲ ಗೆಳೆಯ ದೂರದಲ್ಲಿ ಹಾಡನೊಂದು ಕೇಳೆ ಮನವು ಪುಳಕವಿಲ್ಲಿಹಣೆಯ ಮುತ್ತ ನೆನಪು ನೀಡಿ ಕಾಡಿದೆಯಲ್ಲ ಗೆಳೆಯ ಬೆರಳಿಗೊಂದು ಬೆರಳು ಸೇರಿಸಿ ನಾಲ್ಕು ಹೆಜ್ಜೆ ಇರಿಸಿದೆನೂರು ಜನ್ಮ ಜೊತೆಯ ಬೇಡಿ ನಿಂತೆಯಲ್ಲ ಗೆಳೆಯ ಬಿಸಿಯುಸಿರು ಕೊರಳ ತಾಗಿ ಪ್ರೀತಿ ಕವನ ಗೀಚಿದೆಕಣ್ಣಿನಲ್ಲಿ ಪ್ರೇಮ ಬಿಂಬ ಪ್ರತಿಷ್ಠೆಯಾಗಿದೆಯಲ್ಲ ಗೆಳೆಯ ಕದಪುಗಳ ರಂಗು ನುಡಿಯುತಿದೆ ಕೇಳದ ಕತೆಯೊಂದನುಭೂಮಿ ಬಾನು ಸಂಜೆ ಪ್ರಣಯ ಗುಲ್ಲಾಗಿದೆಯಲ್ಲ ಗೆಳೆಯ ಒಲವಿಗೆ ತೆರಿಗೆ ಪಾವತಿಸಿ ಬಂದು ನಿಂತಂತೆ ನಿಲ್ಲುವೆತಪಸ್ಯಾಳ ಗೆಲ್ಲಲು ಹೊಸ ವರಸೆಯಂತಿದೆಯಲ್ಲ ಗೆಳೆಯ *********************************** **************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ಮನಸ್ಸೇಕೋ ಮತ್ತೆ ನೊಂದು ಮೌನದಿ ಕಮರಿಹೋಗಿದೆಯಾಕೋ ಸುಮ್ಮನೇ ಮನಸಲ್ಲೆ ಬೆಂದು ಲೀನವಾಗಿದೆ ಯಾಕೆ ಏನು ಯಾರಿಗಾಗಿ ಇದೆಲ್ಲ ಒಂದು ತಿಳಿಯದಾಗಿದೆಕಾರಣವಿಲ್ಲದೇ ಸಂಕಟ ಆಗುವದೇಕೋ ಅರಿಯದಾಗಿದೆ ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರುಚಿ ಸಿಗದಾಗಿದೆಭರಪುರ ಬೆಳೆದ ರೈತನ ಫಸಲು ಹೊಲವೇ ಕದ್ದಂತಾಗಿದೆ ಬಿತ್ತುವದು ಅವನ ಧರ್ಮ ಬೆಳೆ ಪಡೆವುದು ಕರ್ಮವಾಗಿದೆಉಂಡು ಕೊಂಡು ಹೋದ ಲಂಡರದೇ ಬಲು ಹಿತವಾಗಿದೆ ಕೊಚ್ಚೆಯಲ್ಲಿ ಬಿದ್ದ ಮಾಣಿಕ್ಯಕ್ಕೆ ತನ್ನ ಬೆಲೆ ತಿಳಿಯದಾಗಿದೆಹೊನ್ನಸಿರಿ’ ಇರಲಿ ನೋಯಬೇಡ ಈ ಭೂಮಿ ಗುಂಡಾಗಿದೆ *****************************

ಗಜಲ್ Read Post »

ಕಾವ್ಯಯಾನ

ಮಧ್ಯಕಾಲ

ಕವಿತೆ ಮಧ್ಯಕಾಲ ಸ್ಮಿತಾ ಭಟ್ ಈ ಶರತ್ ಕಾಲವೆಂದರೆನೆನಪಾಗುವುದುಮದುವೆಯಾಗಿ ವರ್ಷಗಳು ಸಂದಮಧ್ಯಕಾಲದ ಜೋಡಿ . ಇತ್ತ ಪ್ರೇಮವೂ ಇಲ್ಲಅತ್ತ ಪಕ್ವತೆಯೂ ಇಲ್ಲಬರೀ ಒಣ ಹವೆ. ಶರವೇಗದಲಿ ಸರಿದೇ ಹೋದಮಳೆ ಮತ್ತದರ ಸೆಲೆರೆಂಬೆಗಂಟಿದ ಎಲೆಗಳಅಮಾಯಕ ನೋಟಕಳೆದ ಕಿಲ ಕಿಲ ಪ್ರೇಮದ್ದೂ. ಮುಂಜಾವಿಗೆ ಹೊದ್ದ ಶೀಕರಮುದುಡಿಯೇ ಕುಳಿತ ಅಲರುಬಿಸುಪಿಲ್ಲದ ವಿಷಾದ ನಸುಕು. ಕೈ ಚಾಚಿದ ತರುಹಕ್ಕಿ ಕುಳಿತ ಒಲವುಕೊಟ್ಟ ಪುಟ್ಟ ಕಾವು ಅಪ್ಪಿದ ಆಪ್ಯಾಯತೆಗಳಿಗೆಸುಳಿಗಾಳಿಯ ಪರೀಕ್ಷೆಕೊನರದ ಕಾಲದಸ್ಥಬ್ಧ ಭಾವಗಳ ನಕ್ಷೆ.ಹಗೂಽರ ರೂಢಿಯಾಗೇ ಬಿಡುತ್ತದೆಉದುರುವದು ಮತ್ತುಚಿಗುರಿಕೊಳ್ಳುವುದೂ… ******************************

ಮಧ್ಯಕಾಲ Read Post »

ಕಾವ್ಯಯಾನ

ಹಾಯ್ಕು

ಕವಿತೆಗಳು ಹಾಯ್ಕು ಭಾರತಿ ರವೀಂದ್ರ. 1) ನೆನಪುಮೊದಲ ಮಳೆನೆನಪುಗಳ ಧಾರೆಮನಸ್ಸು ಒದ್ದೆ. 2) ಸ್ವಾಗತಮೂಡಣ ದೊರೆಹಕ್ಕಿಗಳ ಸ್ವಾಗತಹೊಸ ಬದುಕು. 3) ನೆಪಬೀಸೋ ಗಾಳಿಗೆಅವಳದೇ ಧ್ಯಾನವು,ಸೋಕಿದ ನೆಪ. 4) ನಾಚಿಕೆಇಳೆ ನಾಚಿಕೆ :ಕದ್ದು ನೋಡಿದ ರವಿ,ಶಶಿ ಮುನಿಸು 5) ಸೋನೆನವಿಲು ನೃತ್ಯ :ಬೆರಗಾದ ಮುಗಿಲು,ಸುರಿದ ಸೋನೆ. 6) ಗೆಜ್ಜೆಮನ ಮಯೂರ:ನಿನ್ನ ನಗು ಕಂಡಾಗ,ಗೆಜ್ಜೆ ನಾಚಿತು. 7) ಕನ್ನಡಿಕಣ್ಣ ಕನ್ನಡಿ:ತುಂಬೆಲ್ಲ ನಲ್ಲ ನೀನೇ,ಮೌನ ಪ್ರೀತಿಗೆ. 8) ಹರ್ಷಭೂ ತಾಯಿ ಹರ್ಷ:ಹೂವಾಗಿ ಅರಳೈತಿ,ಮಧು ಸಂಭ್ರಮ. 9) ಮುತ್ತುನೀನಿತ್ತ ಮುತ್ತುಮಿಂಚೈತಿ ನೋಡು,ನನ್ನಕಣ್ಣ ಕಾಡಿಗೆ. 10) ಮಧುಮುತ್ತಿನ ಮಧು :ಮತ್ತೇರಿತು ದುಂಬಿಗೆ,ಶೃಂಗಾರ ಕಾವ್ಯ. *******************************************

ಹಾಯ್ಕು Read Post »

ಕಾವ್ಯಯಾನ

ಏನು ಬರೆಯಲಿ ……!

ಕವಿತೆ ಏನು ಬರೆಯಲಿ ……! ಅಕ್ಷತಾ ಜಗದೀಶ. ಬರೆಯೆಂದೊಡನೆ‌ ಏನುಬರೆಯಲಿ ನಾನುಕವನದ ಸಾಲುಗಳಿವುತಾವಾಗಿ‌ ಸಾಗುತಿಹವು… ಎಂದೂ ಕಾಣದ ಮೊಗವಜೊತೆಯಲಿ ಕಳೆಯದ ದಿನವಆ ಕ್ಷಣಗಳ ಕುರಿತು….ಏನೆಂದು‌ ಬರೆಯಲಿ ನಾನು… ದೂರದ ಕಾನನದೊಳಿರುವತೊರೆಯ‌ ಮೇಲಿನ ಬುಗ್ಗೆನಾ ಕಾಣ ಹೊರಟಾಗ…ಮಾಯವಾಗಿ‌ ಹೋದಾಗ….ಆ ಬುಗ್ಗೆಯ ಕುರಿತು‌ ನುಡಿಯೆಂದರೆಏನು‌ ನುಡಿಯಲಿ ನಾನು…. ಬಾನಲಿ ಮೂಡಿದ‌ ಮಿಂಚೊಂದುಕ್ಷಣದಲಿ ಮೂಡಿ ಮಾಯವಾಗಿಇರುಳ ದಾಟಿ ನಾ ಬಂದಾಗಹಗಲಲಿ ಏನು‌ ಹೆಳಲಿ ನಾನು.. ಬರೆಯೆಂದೊಡನೆ ಏನು‌ಬರೆಯಲಿ ನಾ‌ನು…….***

ಏನು ಬರೆಯಲಿ ……! Read Post »

You cannot copy content of this page

Scroll to Top