ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ನೆನಪುಗಳು:

ಕವಿತೆ ನೆನಪುಗಳು: ಡಾ. ಅರಕಲಗೂಡು ನೀಲಕಂಠ ಮೂರ್ತಿ 1.ನೆನಪುಗಳೇ ಹಾಗೆ —ಒಮ್ಮೆ ಚುಚ್ಚುಸೂಜಿಗಳುಒಮ್ಮೆ ಚಕ್ಕಳಗುಳಿ ಬೆರಳುಗಳುಮತ್ತೊಮ್ಮೆ ಮುಗುಳುನಗೆಯ ಜೋಕುಗಳುಇನ್ನೊಮ್ಮೆ ಕಣ್ಣ ಬಸಿಯುವ ಹಳೆಯ ಹೊಗೆಯ ಅಲೆಗಳು…ಮತ್ತುಪಿಸುಮಾತಲಿ ಮುಲುಗುವಒಲವಿನ ಬಿಸಿ ಬಂಧುರ ಬಂಧನಗಳು…! 2.ನೆನಪುಗಳು —ಪ್ರಪ್ರಥಮ ಮಳೆಗೆ ವಟಗುಟ್ಟುವಕೊರಕಲ ಕಪ್ಪೆಗಳು;ಹರೆಯದ ಹುತ್ತದಲಿ ಭುಸುಗುಟ್ಟುಮತ್ತೆಲ್ಲೋ ಹರಿದು ಮರೆಯಾದಹಾವಿನ ಪೊರೆಗಳು…!ನೆನಪುಗಳು ಏಕಾಂತದಲಿ ಕಳಚುತ್ತವೆದಿರಿಸು ಒಂದೊಂದಾಗಿ,ಎಂದೋ ಹಂಬಲಿಸಿದ ಬಿಸಿಯಬೆಂಕಿಯಾಗಿ… 3.ನೆನಪುಗಳು —ಕಳೆದುಹೋದ ಕೋಲ್ಮಿಂಚಿನ ಹಸಿರ ಚಿಗುರುಈ ಋತು ಒಣಗಿ ಉದುರುವ ತರಗು…ಸಗಣಿ ಗೋಡೆಗೆಸೆವುದು ಬೆರಣಿಗಾಗಿ,ಆ ಬೆರಣಿಯುರಿದು ಬೆಂಕಿ…ಅಷ್ಟೆ! ಎಂಥ ಸುಕೃತವೋ ಏನೋ —ನೆನಪಿನ ಆಯಸ್ಸು ನಮ್ಮಷ್ಟೆಅಥವಾ…ಇನ್ನೂ ಕಮ್ಮಿ…! ****************************

ನೆನಪುಗಳು: Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಶುಭಲಕ್ಷ್ಮಿ ಆರ್ ನಾಯಕ ಹೃದಯ ಸಿರಿವಂತಿಕೆಗೆ ಅರಮನೆ ಗುಡಿಮನೆಗಳೆಂಬ ಭೇದವುಂಟೇ ಸಖೀಗುಣ ಅವಗುಣಗಳಿಗೆ ಬಡವನು ಬಲ್ಲಿದನೆಂಬ ಅಂತರಗಳುಂಟೇ ಸಖೀ ಅವರವರ ಭಾವಗಳಲಿ ಅವರವರ ಅರಿವಿಂಗೆ ಬಂದಂತೆ ಮಾಡುತಿಹರುಸನ್ನಡತೆ ದುರ್ನಡತೆಗಳಿಗೆ ನಾನು ನೀನೆಂಬ ದೂರಗಳುಂಟೇ ಸಖೀ ಸಂಕುಚಿತ ಭಾವದಲಿ ಸ್ವಾರ್ಥದ ಬೆಂಬತ್ತಿ ತಮ್ಮ ತನಗಳ ಮರೆತಿಹರುಜೀವನದಿ ಸ್ವಾರ್ಥವೆಂಬ ಮುಸುಕಿಗೆ ಬಲಿಯಾಗಿ ಗೆದ್ದವರುಂಟೇ ಸಖೀ ಬಡವನಲಿ ಕಾಣಬಹುದಲ್ಲವೇ ನಯ ವಿನಯತುಂಬಿರುವ ವಿಶಾಲ ಹೃದಯವಅವನ ಕಷ್ಟ ತ್ಯಾಗ ಸಹನೆಗಳ ಅಸಹನೆಯಿಂದ ಮರೆಯಲುಂಟೇ ಸಖೀ ಸಂಕುಚಿತ ಸ್ವಾರ್ಥದ ಬದುಕ ಕಂಡು ಶುಭ ಳ ಕೋಮಲ ಹೃದಯ ಚೂರಾಗಿದೆಭೇದ ಭಾವ ಸ್ವಾರ್ಥ ಮೋಹಗಳಿಂದ ಮಹಲುಗಳ ಕಟ್ಟಲುಂಟೇ ಸಖೀ *****************************

ಗಝಲ್ Read Post »

ಕಾವ್ಯಯಾನ

ಮಂಜು

ಕವಿತೆ ಮಂಜು ನಳಿನ ಡಿ ಕಾಡುಮಲ್ಲಿಕಾರ್ಜುನನ ಚರಣ ಸೇರಲು ಹಾಡುಹಗಲೇ ಹಂಬಲಿಸಿ,ಬಿದ್ದ ವರುಣನ ತಿರಸ್ಕರಿಸಿ,ಮಾಟಗಾರ ಮಹಾಮಹಿಮ, ಓಜಸ್ವಿ ಓಡೋಡಿ ಹಿಡಿಯಲಾರೆ,ತಪ್ಪಾದರೂ ತಿರುಗಿ ಬರಲಾರೆ,ಕನವರಿಸಿ ಕಾಡಹಾದಿಯ ತಪ್ಪಿಸಿ,ಊರಿಗೆ ದಾರಿ ಒಪ್ಪಿಸಿ,ಗೂಬೆ ಕೂಗಿಗೆ ಕಾಗೆ ಓಡಿಸಿ,ಮುಸ್ಸಂಜೆ ಕಳೆಯಲು, ಬೆಟ್ಟದ ಬಂಡೆಗೆ ಬೆನ್ನುಹಾಸಿ,ಮರೆತು ಹೋದರೂ ಹುಡುಕಿ ತರುವ ಯಾಚಕ,ಸುಭದ್ರ ಸನಿಹದ ಇಳಿಮುಖ ಪ್ರತಿಫಲನ,ಪ್ರೇಮದ ವಕ್ರೀಭವನ,ಘಟಿಸುವವರೆಗೂ,ಮಂಜು ಅರಸಿ ಹಬ್ಬಿ ಕವಿಯುವವರೆಗೂ,ತಬ್ಬಿಬ್ಬು ಮನಸು…ಮಂಜು ನಗಲಿ,ಮಳೆ ಬರಲಿ..ನನ್ನಿರವು ನಿನ್ನಲ್ಲಿ ಸದಾ ಇರಲಿ.. ***********************************

ಮಂಜು Read Post »

ಕಾವ್ಯಯಾನ

ಓ.. ಮನಸೇ

ಕವಿತೆ ಓ.. ಮನಸೇ ವಿಭಾ ಪುರೋಹಿತ್ ಕ್ಷಣದ ಏಕಾಂತದಲಿಅಮೂರ್ತವಾಗಿನನ್ನೆದುರಲ್ಲೇಯಿರುವಿಎದೆಯಲ್ಲಿ ಗೆಜ್ಜೆ ಕಟ್ಟಿ ಥಕಥಕಕುಣಿಸಿ ಅಟ್ಟಕ್ಕೇರಿದ ಅತಿರೇಕನಿನ್ನ ನೋಡಬೇಕೆಂಬಉತ್ಕಟತೆ ಜಲಪಾತಕ್ಕೂಜೋರಾಗಿ ಜೀಕಿದೆಹಾರಿದ ಹನಿಗಳುಚಂದಿರನ ಗಲ್ಲಕ್ಕೆ ಸವರಿದ್ದೇ ತಡತಂಪಿನಲ್ಲೇ ತಾಪ ಅನುಭವಿಸಿಧಗಧಗ ಉರಿಯುತ್ತ ಉರುಳಿಅವಳ ಸ್ಪರ್ಶಕ್ಕೆ ಘರ್ಷಕ್ಕೆಆತು ಕೂತಿರುವೆಮರಿ ಭಾಷ್ಪವಾಗಿನುಡಿಯುತಿರೆ ಮಿಡಿಗಾವ್ಯ ಓ… ಮನಸೇ ಅದ್ಭುತ !ಏನೋ ಭೋರ್ಗರೆತಅದರಲ್ಲೊಂದು ಥಳುಕುಸಣ್ಣ ಸೆಳೆತ ದೇದೀಪ್ಯಮಾನಊಹಿಸಿರಲಿಲ್ಲಶಬ್ದಾತೀತ ಅನುಭೂತಿಮನಸ್ಸು ವಿಚಾರಗಳುಆಯಸ್ಸಿನ ಅಂಕೆವಯಸ್ಸಿನ ಶಂಕೆಇವೆರಡನ್ನೂ ಮೀರಿದನಳನಳಿಸುವ ತಾಜಾತನನವೊನವೋನ್ಮೇಶಎಂಥ ವಿಚಿತ್ರ !ಮನಸಿಗೆ ಪ್ರವಾಸ ಪ್ರಯಾಸಇದ್ದಂತಿಲ್ಲಥಟ್ಟಂತ ಪ್ರತ್ಯಕ್ಷಥಟ್ಟಂತ ಅಂತರ್ಧಾನಸೇರದ ದಾರಿಯೇನಲ್ಲಸೇರುವೆ ಎಂದಾದರೊಮ್ಮೆ

ಓ.. ಮನಸೇ Read Post »

ಕಾವ್ಯಯಾನ

ಎರಡು ಕವಿತೆಗಳು

ಕವಿತೆ ಧನಪಾಲ ನಾಗರಾಜಪ್ಪ ಧನ ನಿನ್ನದನಿಕೇಳರಾರೂನಿನ್ನಪಾಡುನೋಡರಾರೂನೆಲ, ಜಲಜನ, ಮನಅಂತೆಲ್ಲಾ ಯಾಕೆ‌ ಬಡಬಡಿಸುವೆ?ಧನವೇ ಇಂಧನಧನವೇ ಪ್ರಧಾನಜಮಾನ ಇದರ ದೀವಾನನಿನಗೆ ಅರ್ಥವಾಗದೆ ಧನು? ಜಾಡ್ಯ ಇಲ್ಲಿಯ ತನಕಏಡ್ಸ್ ಒಂದರ ಹೊರತುಬಹುತೇಕ ಜಾಡ್ಯಗಳಿಗೆಇಲಾಜು ಮಾಡಬಲ್ಲರುಈಗಿನ ವೈದ್ಯರುಶ್ಲಾಘನೀಯ ಸಾಧನೆಯೇ ಸರಿ ಜಾತಿಯ ಅಹಂ ಕೂಡಾಮಾರಕ ಜಾಡ್ಯ ಅಲ್ಲವೆ?ದೂರವಿರಿ ಇದು ಸಾಂಕ್ರಾಮಿಕಮುಂದೆ ಎಂದಾದರೂಏಡ್ಸಿಗೂ ಸಹಔಷಧ ಕಂಡುಹಿಡಿಯಬಹುದೇನೋ!ಆದರೆ ಜಾತಿಯ ಜಾಡ್ಯಕ್ಕೆಮದ್ದು ಅದೆಂದು ಸಿಗುವುದೋ ಧನು? ***************************************

ಎರಡು ಕವಿತೆಗಳು Read Post »

ಕಾವ್ಯಯಾನ

ಸತ್ಯಕ್ಕೆ ಸಾಕ್ಷಿ ಬೇಕಾಗಿದೆ

ಕವಿತೆ ಸತ್ಯಕ್ಕೆ ಸಾಕ್ಷಿ ಬೇಕಾಗಿದೆ ಆರ್.ಉಷಾ ಸತ್ಯ ಸುಳ್ಳುಗಳ ಮಧ್ಯೆ ಬೆಸುಗೆ ಬೆಳೆದುಸುಳ್ಳು ಎಲ್ಲೆಲ್ಲೂ ಝೇಂಕರಿಸಿ ವಾಮನನಂತೆ ಬೆಳೆದುಬಲಿಗೊಟ್ಟು ಸತ್ಯವನುಮೋಸದ ಜೊತೆ ಒಡನಾಡಿಯಾಗಿದ್ರೋಹದ ಜೊತೆ ಸ್ನೇಹ ಪಲ್ಲವಿಸಿಅಪನಂಬಿಕೆಯ ಮಿತ್ರನ ನೆರವು ಪಡೆದುದ್ರೋಹದ ಬಲೆಯಲ್ಲಿ ಸತ್ಯವನು ಮೂಲೆಗುಂಪು ಮಾಡಿಕಾರ್ಗತ್ತಲಿನ ಖೋಲಿಯಲ್ಲಿ ಬಂಧಿಯನ್ನಾಗಿಸಿತು ಸುಳ್ಳು ಕಟ್ಟಿದ ಅರಮನೆಯಲ್ಲಿ ಕೂಪಮಂಡೂಕದಂತೆಸೂರ್ಯೋದಯವನ್ನೇ ಕಾಣದ ಸತ್ಯಕತ್ತಲಲ್ಲೇ ಕುರುಡಾಗಿಇರುಳ ಕರುಳ ಬಗೆದುಬಟ್ಟ ಬಯಲಾಗಲಾರದೆಸುಳ್ಳಿನ ವಿದ್ರೋಹದ ಮುಳ್ಳು ಬೇಲಿಯಲಿ ಸಿಲುಕಿನರಳಿ ನರಳಿ ನರ ಸತ್ತು ಗಂಟಲ ಪಸೆ ಆರಿಬೊಬ್ಬಿರಿಯಲಾಗದೆ ಕಗ್ಗತ್ತಲ ಕೂಪದಲಿ ಬೆಂದು ಒಂಟಿಯಾಗಿ ಸಾಕ್ಷಿಯ ಸಹಚರನಿಲ್ಲದ ಸತ್ಯ ಕಾಯುತಿದೆ ಬಿಡುಗಡೆಗಾಗಿಅರಸುತ್ತಿದೆ ತನ್ನ ಪರ ವಕಾಲತ್ತು ವಹಿಸುವ ಮಿತ್ರನನ್ನುತನ್ನ ಅಸ್ತಿತ್ವ ನಿರೂಪಿಸಲು ಇಂದಿಗೂ ಚಾತಕಪಕ್ಷಿಯಂತೆ *************************************************

ಸತ್ಯಕ್ಕೆ ಸಾಕ್ಷಿ ಬೇಕಾಗಿದೆ Read Post »

ಕಾವ್ಯಯಾನ

ನಂಬಿಕೆ

ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ ಬದುಕುಸತ್ವರಜದ ತೇಜಸ್ಸುಪರಿಪೂರ್ಣ ಬಂಧುತ್ವ ವಿಶ್ವಾಸದ ಹೊನಲುಆಸರೆಯ ತೋರಣನೆರಳು ಬೆಳಕಿಗೆ ಸಮಸ್ಥಿತಿ ***************************

ನಂಬಿಕೆ Read Post »

ಕಾವ್ಯಯಾನ

ಅಸಹನೆ

ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ ಸಾಗುತ್ತಿರುವ ದಾರಿ‌ ಮುಟ್ಟುವುದೆಲ್ಲಿಗೆಪರಿಶ್ರಮವಿಲ್ಲದೆ ಯಶಸ್ಸಿನ ಬಯಕೆ ಏಕೆ?ಅಂಧರೇನಲ್ಲ ಬಿದ್ದರು ಮೇಲೆಳಬಹುದುಸ್ವಚ್ಛಂದವಾಗಬೇಕು ಜಿಗುಟುತನ ತೊರೆದು ಬಿರುಗಾಳಿ ಯಿಂದ ಅಸ್ತವ್ಯಸ್ತ ಜೀವನವಿವೇಚನೆಯಿಲ್ಲದ ಹುಚ್ಚು ನಿರ್ಧಾರವೈರುಧ್ಯಗಳ ನಡುವೆ ಋಣಾತ್ಮಕತೆಜಂಟಿ ಹೋರಾಟ, ಹೊರನಡೆ ಶೀಘ್ರದಲಿ ತಲೆಹರಟೆ ಪ್ರಕ್ರಿಯೆಗಳ ತೊರೆದುಭ್ರಮಾ ಲೋಕ ಬಿಟ್ಟು ವಾಸ್ತವದೆಡೆಗೆನಡೆ ತನ್ನ ಉಳಿವಿನ ಬೆಳಕಿನೆಡೆಗೆಅಸಹನೆ ತೊರೆದು ಮಿನುಗುವ ನಕ್ಷತ್ರವಾಗಿ **********************************************

ಅಸಹನೆ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಶ್ರೀದೇವಿ ಕೆರೆಮನೆ ನೀನು ಮತ್ತೆ ಬರುವುದಿಲ್ಲವೆಂದು ಬುದ್ಧಿಗೆ ಅರ್ಥವಾಗಿದೆಹಾಳಾದ ಮನಸ್ಸು ಇನ್ನೂ ನಿನಗಾಗಿ ಕಾತರಿಸುತ್ತಿದೆ ಹೀಗೆ ಬಂದು ಹಾಗೆ ಹೋಗಲು ನಾನೇಕೆ ಬೇಕಿತ್ತು ಹೇಳುನನ್ನ ಮನೆಯಂಗಳದ ಮಲ್ಲಿಗೆ ನಿನಗೀಗ ಮರೆತು ಹೋಗಿದೆ ಅಗಲುವ ಮಾತಾಡಿದ್ದು ಇಂದು, ನಿರ್ಧಾರ ಎಂದಾಗಿತ್ತು?ಮಾಮರದ ಕೋಗಿಲೆಯೇಕೆ ಹೀಗೆ ಕರ್ಕಶವಾಗಿ ಅಳುತಿದೆ ಕೊನೆಯ ಕ್ಷಣದವರೆಗೂ ಗುಟ್ಟು ಬಿಡದ ಮಹಾ ಚತುರ ನೀನುನೆತ್ತರಿಲ್ಲದೇ ಇರಿಯುವುದನು ನಿನ್ನಿಂದ ಕಲಿಯಬೇಕಿದೆ ನಾಟಕದ ಮಂದಿರದಲ್ಲೀಗ ಕಣ್ಣು ಕುಕ್ಕುವ ಬೆಳಕಿಲ್ಲಮನಸನು ಬಲಿ‌ಪಡೆದ ಪ್ರಹಸನವು ಜಗಜ್ಜಾಹೀರಾಗಿದೆ ನಿನ್ನವಳೆಂಬ ಹೆಮ್ಮೆ ಎದೆಯೊಳಗೆ ಮೊರೆದು ನೆತ್ತಿಗೇರಿತ್ತುಸುರೆಗೂ ಮಿಗಿಲಾಗಿ ಆವರಿಸಿದ ಯೌವನದ ನಶೆ ಇಳಿದಿದೆ ಸದಾ ಜೊತೆಗಿದ್ದ ಗೆಲುವಿಗು ನಾನೆಂದರೀಗ ತಿರಸ್ಕಾರಎಂದು ಬತ್ತದ ಉಕ್ಕುವ ಸೆಲೆಯಂತಹ ತುಟಿಯ ನಗು ಮಾಸಿದೆ ಶ್ರೀ, ಎರಡು ದಿನ ನಿನ್ನ ಹೆಸರಿನ ಸೆರಗಿನಲ್ಲಿ ಮೆರೆದಾಡಿದೆಮೇಲಕ್ಕೇರಿ ಕೆಳಗಿಳಿದ ಮೇಲೀಗ ಬದುಕು ಸಾಕೆನಿಸಿದೆ ***************************************************************

ಗಝಲ್ Read Post »

ಕಾವ್ಯಯಾನ

ಸಿಂ(ಹ)ಪತಿ

ಕವಿತೆ ಸಿಂ(ಹ)ಪತಿ ವಿಶಾಲಾ ಆರಾಧ್ಯ ಮನದ ಮೆಟ್ಟಿಲುಗಳನೀ ಒಂದೊಂದಾಗಿಎಷ್ಟೇ ಬಾರಿ ಇಳಿದುಹೋದರೇನು ಗೆಳೆಯ ?ಮತ್ತೆ ಮತ್ತೆ ನೀ ಕೂರುವೆಬಂದು ಅಧಿಪತಿಯಾಗಿ …// ಒಡಲ ಕಣದಲಿನೀ ಅಂಗಾಂಗುಲವೂಎಷ್ಟೇ ಗಾಯಗೊಳಿಸಿಕೊರಗಿಸಿದರೇನು ಗೆಳೆಯ ?ಮತ್ತೆ ಮತ್ತೆ ನೀನೇ ಬರುವೆನನ್ನ ಭೂಪತಿಯಾಗಿ…// ಮೋಹಕ ನೋಟದಕಣ್ಣ ಕಂಬನಿಗೆನೀ ಕಾರಣವಾಗಿಎಷ್ಟೇ ಕಾಡಿದರೇನು ಗೆಳೆಯ ?ಆ ಕಣ್ಣ ಕನಸಲಿಮತ್ತೆ ಮತ್ತೆ ನೀನೇ ಬರುವೆನನ್ನ ಪತಿಯಾಗಿ…!!ಅದಕ್ಕೆ ನಾವಾಗಿರುವೆವುದಂಪತಿಯಾಗಿ …// ***************************

ಸಿಂ(ಹ)ಪತಿ Read Post »

You cannot copy content of this page

Scroll to Top