ನಂಬಿಕೆ
ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ ಬದುಕುಸತ್ವರಜದ ತೇಜಸ್ಸುಪರಿಪೂರ್ಣ ಬಂಧುತ್ವ ವಿಶ್ವಾಸದ ಹೊನಲುಆಸರೆಯ ತೋರಣನೆರಳು ಬೆಳಕಿಗೆ ಸಮಸ್ಥಿತಿ ***************************
ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ ಸಾಗುತ್ತಿರುವ ದಾರಿ ಮುಟ್ಟುವುದೆಲ್ಲಿಗೆಪರಿಶ್ರಮವಿಲ್ಲದೆ ಯಶಸ್ಸಿನ ಬಯಕೆ ಏಕೆ?ಅಂಧರೇನಲ್ಲ ಬಿದ್ದರು ಮೇಲೆಳಬಹುದುಸ್ವಚ್ಛಂದವಾಗಬೇಕು ಜಿಗುಟುತನ ತೊರೆದು ಬಿರುಗಾಳಿ ಯಿಂದ ಅಸ್ತವ್ಯಸ್ತ ಜೀವನವಿವೇಚನೆಯಿಲ್ಲದ ಹುಚ್ಚು ನಿರ್ಧಾರವೈರುಧ್ಯಗಳ ನಡುವೆ ಋಣಾತ್ಮಕತೆಜಂಟಿ ಹೋರಾಟ, ಹೊರನಡೆ ಶೀಘ್ರದಲಿ ತಲೆಹರಟೆ ಪ್ರಕ್ರಿಯೆಗಳ ತೊರೆದುಭ್ರಮಾ ಲೋಕ ಬಿಟ್ಟು ವಾಸ್ತವದೆಡೆಗೆನಡೆ ತನ್ನ ಉಳಿವಿನ ಬೆಳಕಿನೆಡೆಗೆಅಸಹನೆ ತೊರೆದು ಮಿನುಗುವ ನಕ್ಷತ್ರವಾಗಿ **********************************************
ಗಝಲ್ ಶ್ರೀದೇವಿ ಕೆರೆಮನೆ ನೀನು ಮತ್ತೆ ಬರುವುದಿಲ್ಲವೆಂದು ಬುದ್ಧಿಗೆ ಅರ್ಥವಾಗಿದೆಹಾಳಾದ ಮನಸ್ಸು ಇನ್ನೂ ನಿನಗಾಗಿ ಕಾತರಿಸುತ್ತಿದೆ ಹೀಗೆ ಬಂದು ಹಾಗೆ ಹೋಗಲು ನಾನೇಕೆ ಬೇಕಿತ್ತು ಹೇಳುನನ್ನ ಮನೆಯಂಗಳದ ಮಲ್ಲಿಗೆ ನಿನಗೀಗ ಮರೆತು ಹೋಗಿದೆ ಅಗಲುವ ಮಾತಾಡಿದ್ದು ಇಂದು, ನಿರ್ಧಾರ ಎಂದಾಗಿತ್ತು?ಮಾಮರದ ಕೋಗಿಲೆಯೇಕೆ ಹೀಗೆ ಕರ್ಕಶವಾಗಿ ಅಳುತಿದೆ ಕೊನೆಯ ಕ್ಷಣದವರೆಗೂ ಗುಟ್ಟು ಬಿಡದ ಮಹಾ ಚತುರ ನೀನುನೆತ್ತರಿಲ್ಲದೇ ಇರಿಯುವುದನು ನಿನ್ನಿಂದ ಕಲಿಯಬೇಕಿದೆ ನಾಟಕದ ಮಂದಿರದಲ್ಲೀಗ ಕಣ್ಣು ಕುಕ್ಕುವ ಬೆಳಕಿಲ್ಲಮನಸನು ಬಲಿಪಡೆದ ಪ್ರಹಸನವು ಜಗಜ್ಜಾಹೀರಾಗಿದೆ ನಿನ್ನವಳೆಂಬ ಹೆಮ್ಮೆ ಎದೆಯೊಳಗೆ ಮೊರೆದು ನೆತ್ತಿಗೇರಿತ್ತುಸುರೆಗೂ ಮಿಗಿಲಾಗಿ ಆವರಿಸಿದ ಯೌವನದ ನಶೆ ಇಳಿದಿದೆ ಸದಾ ಜೊತೆಗಿದ್ದ ಗೆಲುವಿಗು ನಾನೆಂದರೀಗ ತಿರಸ್ಕಾರಎಂದು ಬತ್ತದ ಉಕ್ಕುವ ಸೆಲೆಯಂತಹ ತುಟಿಯ ನಗು ಮಾಸಿದೆ ಶ್ರೀ, ಎರಡು ದಿನ ನಿನ್ನ ಹೆಸರಿನ ಸೆರಗಿನಲ್ಲಿ ಮೆರೆದಾಡಿದೆಮೇಲಕ್ಕೇರಿ ಕೆಳಗಿಳಿದ ಮೇಲೀಗ ಬದುಕು ಸಾಕೆನಿಸಿದೆ ***************************************************************
ಕವಿತೆ ಸಿಂ(ಹ)ಪತಿ ವಿಶಾಲಾ ಆರಾಧ್ಯ ಮನದ ಮೆಟ್ಟಿಲುಗಳನೀ ಒಂದೊಂದಾಗಿಎಷ್ಟೇ ಬಾರಿ ಇಳಿದುಹೋದರೇನು ಗೆಳೆಯ ?ಮತ್ತೆ ಮತ್ತೆ ನೀ ಕೂರುವೆಬಂದು ಅಧಿಪತಿಯಾಗಿ …// ಒಡಲ ಕಣದಲಿನೀ ಅಂಗಾಂಗುಲವೂಎಷ್ಟೇ ಗಾಯಗೊಳಿಸಿಕೊರಗಿಸಿದರೇನು ಗೆಳೆಯ ?ಮತ್ತೆ ಮತ್ತೆ ನೀನೇ ಬರುವೆನನ್ನ ಭೂಪತಿಯಾಗಿ…// ಮೋಹಕ ನೋಟದಕಣ್ಣ ಕಂಬನಿಗೆನೀ ಕಾರಣವಾಗಿಎಷ್ಟೇ ಕಾಡಿದರೇನು ಗೆಳೆಯ ?ಆ ಕಣ್ಣ ಕನಸಲಿಮತ್ತೆ ಮತ್ತೆ ನೀನೇ ಬರುವೆನನ್ನ ಪತಿಯಾಗಿ…!!ಅದಕ್ಕೆ ನಾವಾಗಿರುವೆವುದಂಪತಿಯಾಗಿ …// ***************************
ಕವಿತೆ ಒಂದು ಸಾಂದರ್ಭಿಕ ಚಿತ್ರ ಬಸವರಾಜ ಹೂಗಾರ ಕರಿಕಲ್ಲಿನ ಮೇಲೆಚಂದದ ನಾಮಫಲಕಚಿಕ್ಕ ಗೇಟುಎರಡು ಕುರ್ಚಿ ಹಾಕುವಷ್ಟೇ ವರಾಂಡಇಣುಕಿ ನೋಡಿದರೆದೊಡ್ಡ ಪಡಸಾಲೆಎರಡು ಕೋಣೆಗಳ ಮಧ್ಯೆಅಂಗೈಯಗಲದ ದೇವರಮನೆ.ಬಾಡಿಗೆ ಮನೆಯಲಿಇದ್ದೂ ಇದ್ದೂ ಸಾಕಾಗಿಸಾಕಿಷ್ಟು ನಮಗೆಎನ್ನುವಷ್ಟಿತ್ತು ಮನೆ. ರಸ್ತೆಯಲ್ಲಿ ಹೋಗುವಾಗಆ ಮನೆ ಈ ಮನೆಬಣ್ಣ ಬಣ್ಣದ ಮನೆಗಳನೂರು ನೋಟ ಆಸೆ ಕನಸುಗಳಗಿಲಕಿ ಹಳವಂಡಎಚ್ಚರಾದವನಿಗೆ ಲೋಕ ಸುಂದರ. ಎಲ್ಲ ಮನೆಗಳೂ ಚಂದಕಂಡವರ ಮನೆ ಸಿಟೌಟಿನಲಿಪೇಪರ್ ಓದುವವನು ನಾನೊಬ್ಬನೆ !ಹತ್ತುವಾಗ ಇಳಿಯುವಾಗಹೆಚ್ಚು ಕಂಡದ್ದು ಈ ಚಿಕ್ಕ ಮನೆಗಂಡ ವ್ಯಾಪಾರಿ ಹೆಂಡತಿ ಸಂಸಾರಿಕಂಪೌಂಡಿನಂಗಳದಲಿಗೆಜ್ಜೆ ಗಿಲಕಿಯ ಹೆಜ್ಜೆವೂರುವ ಮಗು. ಈ ಊರಲ್ಲೇ ಇದ್ದುಬಿಡಿತೆಗೆದುಕೊಳ್ಳಿ ಮನೆ ಇಲ್ಲ ಕಟ್ಟಿಸಿಸೈಟಾದರೂ ಇರಲಿದಿನಕ್ಕಿಷ್ಟು ಹಿತಚಿಂತಕರಮಾತಿನ ಏಣಿಗೆಹತ್ತವವನಿಗಿರಬೇಕು ತಾಕತ್ತು. ರೂಮು ಖಾಲಿ ಮಾಡಿದೆ ಒಂದು ದಿನದಾಟಿ ತಿರುವಿನಲಿ ಹೊರಟೆಎದುರಿಗೆ ಬಂದಳು ಕೆಲಸದಾಕೆಮಾರುತ್ತಾರಂತೆ ಆ ಮನೆಕೇಳಿದೆನು ಸುಮ್ಮನೆ ಎಷ್ಟಂತೆ?ಕೋಟಿ ಒಂದೂವರೆಯಂತೆ. ತಿರುತಿರುಗಿ ಅದೇ ಕನಸುಅಲ್ಲಿದ್ದೆ ನಾನು ಅದೇ ಮನೆಯಲ್ಲಿ !ರಸ್ತೆಯಲಿ ರವಿವಾರ ಹೊರಟಿದ್ದೆಮನೆ ಮುಂದೆಅರೆ !ಒಡೆದು ಹಾಕಿದ್ದಾರೆ ಇಡೀ ಮನೆಖಾಲಿ ಸೈಟಿನಲ್ಲಿ ಬಿದ್ದಕೆಂಪು ಕಲ್ಲಿನ ಚೂರುಗಳುಒಡೆದವರಿಬ್ಬರ ಕೇಳಿದೆಯಾಕೆ ಒಡೆಯಲಾಯಿತು ಮನೆ ?ಒಡೆಯುವುದಷ್ಟೇ ನಮ್ಮ ಕೆಲಸಒಡೆ ಎಂದರು ಒಡೆದೆವು. ಒಡೆಯುವವರು ಕೂಲಿಯಾಳುಗಳುಒಡಿಸುವವರ ಅಂಗೈ ರಕುತದಲಿಎಷ್ಟು ಮನೆಗಳು ಕರಗಿದವೋಒಡೆಯುತ್ತಲೇ ಇದ್ದಾರೆ ಇನ್ನೂ…. ********************************************
ಒಂದು ಸಾಂದರ್ಭಿಕ ಚಿತ್ರ Read Post »
ಕವಿತೆ ಕಾವ್ಯ ಲೋಕದ ರವಿತೇಜ ಶಿವರಂಜಿನಿ ,ಎಂಆರ್ ಶಿವಣ್ಣ ಸಾರಸ್ವತ ಅಂಗಳದಲಿಮಂದಹಾಸ ಬೀರುತಅರಳಿದಸುಂದರ ಹೂನೀವು ತಾನೆ ?ಕಾವ್ಯ ಸುಮದಿ ಘಮ ಘಮಿಸಿದನಿಮ್ಮ ಭಾವಗಳ ಐಸಿರಿಗೆಸೋತವಳು ನಾನು ತಾನೆ ? ಗೀತ ಸಂಗೀತ ಸ್ವರಗಳಲಿಸುರ ತರಂಗಗಳನೇಳಿಸಿದವರುನೀವು ತಾನೆ ?ಮನ ತುಂಬಿ ಅದರ ಗಾನ ರಸಸ್ವಾದಸವಿಯುಣುತ ಮೈಮರೆತವಳು ನಾನು ತಾನೆ ? ಗಾನ ಸರಸ್ವತಿಗೆ ಅಕ್ಷರ ಮಾಲೆಗಳ ತೊಡಿಸಿ,ಮಾಸದ ರವಿತೇಜನೀವೇ ತಾನೆ ?ನಿಮ್ಮಗೀತಿಕೆಗಳ ಮಂದಾರ ಚೆಂದವೆನಿಸಿಮಧುರ ರಾಗಗಳ ಗುನು ಗುನುಸುತಮುಗ್ಧಗೊಂಡವಳು ನಾನು ತಾನೆ? ಜನ ಮೆಚ್ಚಿದ ಜಗ ಮೆಚ್ಚಿದನಾನೂ ಮೆಚ್ಚಿದ ಕವಿ ನೀವು ತಾನೆ ?ನಿಮಗೇ ಗೊತ್ತಿರದ ಅಭಿಮಾನಿನಾನು ತಾನೆ ? ಸಂಜೆ ಮುಂಜಾನೆಗಳ ಸೊಬಗಿನಲಿಕಾವ್ಯ ಸಿರಿ ಮಂದೆಲರ ತಂಪಿನಲಿಮೆರೆವ ಕೀರ್ತಿ ಶಿಖರದ ಚೆಲುವಿನಲಿಸೃಜನಶೀಲ ಸಂಪನ್ನತೆಯಲಿ ನಿಂತವರುನೀವೆ ತಾನೆ ?ನಿಮ್ಮೊಲುಮೆಯ ಕಾವ್ಯ ಚೆಲುವಿಗೆ ಹಾರೈಸಿ,ನಾದಲೋಕದ ನಲುಮೆಯ ಹಿರಿಕವಿಗೆನಮಿಸುತಿರುವ ಕೂಸುನಾನು ತಾನೆ ?ಹಾಡ್ಬರಹಗಳ ಏರಿಳಿತಗಳಲಿಲಯಗಳ ಸಂಚಲನದಿಸಾಹಿತ್ಯ ರಂಗೇರಿಸಿನಿಮಗೆ ಸಾಟಿಯಾದವರುನೀವು ತಾನೆ ?ಅಶ್ವಮೇಧ ಯಾಗದ ಕಿಚ್ಚಿಗೆ ಬೆಚ್ಚಿಮುಖವಾಡಗಳುಗುಳುವಜ್ವಾಲೆಗಳಲಿ ನೊಂದರೂನಿಷ್ಕಪಟತೆಯ ದೊಡ್ಡ ಹೊಳೆ ಹರಿಸುವನಿಮ್ಮ ಹಿಂಬಾಲಿಸುತಿರುವೆ,ಇದು ಸರಿ ತಾನೆ.? ***************************.( ಡಾ.ದೊಡ್ಡರಂಗೇಗೌಡರ ಜನಮ ದಿನದಂದು ಅವರಿಗೆ ಬರೆದ ನುಡಿ ನಮನ)
ಕವಿತೆ ಬಾಳ ಬೆಳಕೇ.. ವೀಣಾ ಪಿ. ಸುಧೆಗಡಲ ಸೊಗದೊಡಲಸವಿ ಆತ್ಮ ಚೇತನದಹಾಲು ಗಲ್ಲದಹದ ಭಾವವೇ.ಹೊಳೆವ ನಕ್ಷತ್ರದಮಿನುಗು ಕಣ್ಗಳ ಮಿಂಚೇ..ಮುಗ್ಧತೆಯು ಮೈವೆತ್ತಮುದ್ದು ಮಾಟದಬೊಂಬೆಯೇ..ಬೆಳಕು ಬೃಂದಾವನದಎಳೆ ತಳಿರು ತೋರಣದಚಿಗುರೊಡೆದಹಸಿರೇ..ಹೊಸ ವರಸೆಯಭರವಸೆಯನುಮೆಲ್ಲನರಳಿ ಮುಡಿಸುವನಗೆ ಮಲ್ಲಿಗೆ ಮೃದು ದಂಡೆಯೇ..ಕತ್ತಲೆಯ ಕಾರ್ಮೋಡಕಳೆದು ಬೆಳಕಾಗುವಬೆಳ್ಳಿ ಬೆಳದಿಂಗಳೇ..ನಿನ್ನಿಂದಲೇ ಬೆಳಕು ಬಾಳ್ಗೆ… *********************************************
ಕವಿತೆ ಕವಚದಲ್ಲಿ ಭದ್ರ ತಮ್ಮಣ್ಣ ಬೀಗಾರ ಕವಚದಲ್ಲಿ ಭದ್ರ…ಅದು ಯಾವಾಗ ಹೋಗುತ್ತದೆಅಥವಾ ಹೋಗುವುದಿಲ್ಲವೆಂದುಹೇಳುವುದು ಹೇಗೆ…ನನಗಂತೂ ಬಂದಿದೆ ಕಾಯಿಲೆಮರದ ಬೇರು ಕೊಳೆಯುವಷ್ಟುಮಳೆಯಾದರೆ ಚಿಗುರುವುದು ಯಾವಾಗ…ತಲೆಯ ತುಂಬಾ ಕೆಲಸ ತುಂಬಿಕೊಂಡಿದೆಕಿಸೆ ಖಾಲಿಯಾಗಿ ಕೈಗಳನ್ನು ಜೇಡರ ಬಲೆಕಟ್ಟಿ ಹಾಕಿದೆ…ಒಂದು ದಿನ ರಜೆ ಸಿಕ್ಕಿದರೆ ನನ್ನೊಂದಿಗಾಡುತ್ತಿದ್ದಕಂದ… ದಿನವೂ ನನ್ನೊಂದಿಗೆಕುಸ್ತಿ ಹಿಡಿಯುತ್ತಾನೆ ತಲೆ ಕೆಡಿಸುತ್ತಾನೆಅಲ್ಲಿ ಬಸ್ ನಲ್ಲಿ ಜನರಿಲ್ಲ ಅಂಗಡಿಯಲ್ಲಿಜನರಿಲ್ಲ ಹೊಟೆಲಿನಲ್ಲಿ ಜನರಿಲ್ಲಆದರೂ ಕಾಯ್ದುಕೊಂಡಿಲ್ಲ ಅಂತರರೋಗ ಹರಡುತ್ತಲೇ ಇದೆಇವಳು ಯುಟ್ಯೂಬ್ ನೋಡಿ ಮಾಡುವಹೊಸ ತಿಂಡಿ ರುಚಿಯಾಗುವುದಿಲ್ಲಮತ್ತೆ ಕಂಪನಿಯಿಂದ ಬರುವ ಮೇಲ ಎಷ್ಟುನಿಧಾನವೆಂದರೆ ನಡೆದು ಬರುವಪೋಷ್ಟಮ್ಯಾನ ಗಿಂತಲೂ ಹಿಂದೆಊರ ತುಂಬೆಲ್ಲ ಜನರಿದ್ದಾರೆಎಲ್ಲರಿಗೂ ಈಗ ಬಾಯಿಗೆ ಮಾಸ್ಕ ಕಟ್ಟಿದ್ದಾರೆಮತ್ತು ಕಣ್ಣೂ ಮಾತಾಡುತ್ತಿಲ್ಲಸಾಲದ ಕಂತು ರಸ್ತೆಯ ಹೊಂಡಮತ್ತು ಕಚೇರಿಯ ಕೆಲಸ ಹಾಗೇ ಇವೆಯಾವುದೋ ಕಾಯಿಲೆಗಳಿಗೆಲ್ಲತಡೆ ಹಾಕಿಕೊಂಡವರು…ಆರಾಮ ಇದ್ದೇವೆ ಎನ್ನುತ್ತಾರೆಎಲ್ಲರೂ ಕೋವಿಡ ಕವಚದಲ್ಲಿ ಭದ್ರಹಲವರಿಗೆ ಜೈಲು… ಕೆಲವರಿಗೆ ರಕ್ಷಣೆ… ************************************
ಕವಿತೆ ನೀವು-ನಾವು ಸಿ.ಎಚ್.ಮಧುಕುಮಾರ ಇಲ್ಲಿ ನೀವೇನು ಮಾಡುತ್ತಿದ್ದೀರಿ ಎಂದುನಿಮ್ಮನ್ನು ಕೇಳುವಂತಿಲ್ಲ;ಏಕೆಂದರೆ ನೀವು ಸಿಟ್ಟುಗೊಳ್ಳುವಿರಿ. ಇಲ್ಲಿ ನೀವೇನು ಮಾಡುತ್ತಿದ್ದೀರಿ ಎಂದುನೀವು ನಮ್ಮನ್ನು ಪದೇ ಪದೇ ಕೇಳಬಹುದುನಾವಾಗ ಶಾಂತವಾಗಿದ್ದರೆನಿಮ್ಮ ಆತ್ಮಕ್ಕೆ ಸ್ವರ್ಗಸುಖನಿಮ್ಮ ಮಾತಿಗೆ ಸಿಟ್ಟಾದರೆತಟ್ಟನೇದುರಹಂಕಾರಿಯ ಪಟ್ಟ ಹೊರಿಸುವಿರಿ. ನೀವು ಸದಾ ಮುಂದೆ ನಡೆಯಲು ಬಯಸುವಿರಿ; ಅದಕ್ಕೂ ಮೊದಲುಹಿಂದೆ ನಾವಿರುವುದ ಖಚಿತ ಪಡಿಸಿಕೊಳ್ಳುವಿರಿ.ನಿಮ್ಮೊಂದಿಗೆ ಹೆಜ್ಜೆ ಹಾಕುವ ಬಯಕೆಯಿದೆ,ಅದು ಯಾವತ್ತೂ ಈಡೇರದ ಬಯಕೆಯೆಂದು ತಾವು ಆಗಾಗ್ಗೆ ಧೃಢಪಡಿಸಿರುವಿರಿಆದರೂ ಪಟ್ಟು ಬಿಡದೆ ನಡೆಯುವೆವು ನಾವು! *************************************************
ಕವಿತೆ ಮೊಬೈಲಾಯಣ ಪೂರ್ಣಿಮಾ ಸುರೇಶ್ ಹಳೆಯದು,ಉಪಯೋಗಕ್ಕೆ ಬಾರದು ಎಂದು ಸರಿಸಿಟ್ಟಮೂಲೆ ಸೇರಿದ ಮೊಬೈಲ್ಇಂದು ಅಚಾನಕ್ ಸಿಕ್ಕಿದೆ ಗಾತ್ರದಲ್ಲಿ ಚಿಕ್ಕದುಅಡ್ಡಡ್ಡ ತರಚಿದ ಕವಚಪರದೆ ದೃಷ್ಟಿ ಮಂದಇದರ ಮಿದುಳಲ್ಲಿ ನಾನು ಎಷ್ಟೊಂದು ಭಾವರಸ, ಚಿತ್ರಪಟಕಸವನ್ನೂ ತುಂಬಿಟ್ಟಿದ್ದೆಬೇಕಾದಾಗ ನೆರವಾಗುವುದೆಂದು ನಂಬಿದ್ದೆ ಕುತೂಹಲ ಆಶ್ಚರ್ಯಕರಹಿಡಿಯಲ್ಲಿ ಬ್ರಹ್ಮಾಂಡಧರ ಅಳಿಸದ ಮಾತು ತಳದಲ್ಲಿ ಉಳಿದಿರಬಹುದೇನನ್ನೊಡನೆ ಅನುಸಂಧಾನ ನಡೆಸಬಹುದೇಬಿಚ್ಚದೆ ರೆಕ್ಕೆ ತೆಪ್ಪಗಿದೆಚಾರ್ಜರ್ ಗೆ ಸಿಕ್ಕಿಸಿದೆಧ್ಯಾನಬಿಂದು ಮಿನುಗುವಂತೆಆಹಾ! ಕೆಂಪು ಚುಕ್ಕಿ ಅತ್ತ ಸರಿದು ದಿಟ್ಟಿಸಿದೆಈಡಾಗಿ ಸೂಕ್ಷ್ಮ ಸೆಳೆತಕ್ಕೆ ಈಗ ತನ್ನನ್ನು ತಾನೇತೆರೆದುಕೊಂಡಿತು ಕ್ಷಣಾರ್ಧದಲ್ಲಿನನ್ನ ಮೊಗದಲ್ಲಿ ಮುಗುಳ್ನಗೆಯ ಚೆಲ್ಲಿ- ಜಾತ್ರೆಯಲ್ಲಿ ಕಳೆದುಹೋದಹಸುಳೆ ಸಿಕ್ಕಂತೆಆಪ್ತತೆಯಿಂದ ಅಪ್ಪಿ,ಕೆನ್ನೆ ಸವರಿ ಸಂಭಾಷಿಸಿದೆಮುಗುಳ್ನಗು,ಅರೆನಗು, ಚೂರುಮಾತುಹಳಹಳಿಕೆ ಪ್ರಶ್ನೆಗಳ ಖಜಾನೆ;ಸ್ವಲ್ಪ ಹಾಡಿ ಬಿಟ್ಟ ಹಾಡು,ಕಾವ್ಯ ಆಗದ ಪದಗಳ ತಂಡ,ಕಥೆ, ಚುಟುಕು,ಲಹರಿಪೆಚ್ಚುಮುಖ, ವಿಜಯದ ನಿಶಾನೆರವಾನೆಯಾದ ದಾಖಲೆ ಕಳಚಿ ಬಿದ್ದ ಕ್ಷಣಗಳುಪರಾಗಸ್ಪರ್ಶ ನಡೆಸಿವೆಮೌನದ ಮೊಗ್ಗಿಗೆ ಸುಗಂಧವನು ಕೂಡಿಸಿದೆ ನೀನೆಂಬ ಕಳಚಿಹೋದ ನಾನುಕಳಚಲಾಗದಂತೆಎದುರಾದೆವು ನುಡಿಯಲಾಗದೆಪರಿಸ್ಥಿತಿಗೆ ತುಡಿಯಲಾಗದೆ ಈಗ ಗುಂಗಿನ ಸುರಿಮಳೆಎಲ್ಲೆಲ್ಲೂ ಹೊಮ್ಮಿದಂತೆ ಜೀವಸೆಲೆಎದೆ ಒದ್ದೆಹರವಾಗಿ ಉತ್ತ ಗದ್ದೆಕವನ ಪಲ್ಲವಿಸಿಪರಿಮಳಿಸಿದ ಮುಹೂರ್ತ; ಬದುಕಿಗೆ ದೊರಕಿದಂತೆ ಅರ್ಥ ********************************************************************************************************
You cannot copy content of this page