ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಬೆಳಗು

ಕವಿತೆ ಬೆಳಗು ವೀಣಾ ನಿರಂಜನ ಈಗಷ್ಟೇ ಏಳುತ್ತಿದ್ದೇನೆಒಂದು ಸುದೀರ್ಘ ನಿದ್ರೆಯಿಂದಇನ್ನೇನು ಬೆಳಕು ಹರಿಯಲಿದೆತನ್ನದೇ ತಯಾರಿಯೊಡನೆ ಪ್ರತಿ ದಿನ ಸೂರ್ಯ ಹುಟ್ಟುತ್ತಾನೆಸೂರ್ಯನೊಂದು ಕಿರಣಕತ್ತಲೆಯ ಎದೆಯ ಹಾದುಬಗೆಯುತ್ತದೆ ಬೆಳಕು ಮೂಡುತ್ತದೆ ಬರೀ ಸೂರ್ಯ ಹುಟ್ಟಿದ್ದುಕೋಳಿ ಕೂಗಿದ್ದುಹಕ್ಕಿ ಕಲರವ ಕೇಳಿದ್ದೇ –ಬೆಳಗಾಯಿತೀಗ ಎಂಬರು ಕಾನು ಕತ್ತಲೆಯ ಸರಿಸಿಭೂಮಿ ಬೆಳಗಿದರಷ್ಟೆ ಸಾಕೇಎದೆಯ ಕತ್ತಲು ಬಗೆಯದೆಬೆಳಗಾಗುವುದೆಂತು ಸಹಸ್ರ ಬೆಳಗುಗಳ ಸೂರ್ಯಹೊತ್ತು ತರುವ ಬೆಳಕಿನ ಕಿರಣಗಳಲ್ಲಿಒಂದು ಕಿರಣ ದಕ್ಕಿದರೂ ಸಾಕುನಡು ನೆತ್ತಿಯ ಸುಟ್ಟು ಕೊಂಡುಸಾರ್ಥಕ ಈ ಬದುಕು.     **************************

ಬೆಳಗು Read Post »

ಕಾವ್ಯಯಾನ

ಹಕ್ಕಿಯ ದುರಂತ

ಅನುವಾದಿತ ಕವಿತೆ ಹಕ್ಕಿಯ ದುರಂತ ವಿ.ಗಣೇಶ್ ಸಗ್ಗದ ಚೆಲುವಿನ ಹಕ್ಕಿಯು ಒಂದುಭಾನಂಗಳದಿಂದ ಧರೆಗಿಳಿದುಊರಿನ ಮನೆ ಮಂದಿರಗಳ ಮೇಲ್ಗಡೆಹಾರುತಲಿದ್ದಿತು ನಲಿನಲಿದು. ಚಿನ್ನದ ವರ್ಣದ ರನ್ನದ ರೆಕ್ಕೆಯನೀಲಿಯ ಕಂಗಳ ಆ ಹಕ್ಕಿಹಾರುತ ಬರುವುದ ನೋಡಿದ ಮಕ್ಕಳಎದೆಯಲಿ ಆನಂವೆ ಉಕ್ಕಿ ಹಕ್ಕಿಯು ಹಾರುತ ಸಾಗುವ ಜಾಡಲಿತಾವೂ ಓಡುತ ಕೆಳಗಿಂದಕೇಕೆಯ ಹಾಕುತ ನಲಿಯುತಲಿರಲುಜನ ಸೇರಿತು ಅಚ್ಚರಿಯಿಂದ ಎಂಥ ಚೆಂದದ ಚೆಲುವಿನ ಹಕ್ಕಿಏನದು ಚೆಂದ ಆ ಮೈ ಬಣ್ಣ!ಕೈಗದು ಸಿಕ್ಕರೆ ಮಾರಲು ಆಗಕೈತುಂಬ ಹಣ ಝಣ ಝಣ ಮಾರುವುದೇತಕೆ ನಾವೇ ಹಿಡಿದುಕೊಂದೇ ತಿಂದರೆ ಬಹಳ ಮಜಎನ್ನುತ ಬಾಯಲಿ ನೀರೂರಿಸುತಲಿಹೇಳಿದ ಅಲ್ಲಿಯ ಹಿರಿಯಜ್ಜ ಅಷ್ಟರೊಳಗಾಗಲೆ ಬಿಲ್ಲು ಬಾಣಗಳಹಿಡಿದು ಬಂದೊಬ್ಬ ತಲೆ ತಿರುಕಹಕ್ಕಿಯ ನೇರಕೆ ಗುರಿಯನು ಇಟ್ಟುಬಾಣವ ಬಿಟ್ಟನು ಆ ಕಟುಕ ಯಾವ ಪಾಪವನು ಯಾರ ಶಾಪವನುಹೊತ್ತು ಬಂದಿತ್ತೋ ಆ ಹಕ್ಕಿಬಾಣದ ಪೆಟ್ಟಿಗೆ ರಕ್ತವ ಕಾರುತಕೆಳಗಡೆ ಬಿದ್ದಿತು ಮಣ್ಮುಕ್ಕಿ ಚಿನ್ನದ ಬಣ್ಣದ ರನ್ನದ ರೆಕ್ಕೆಯಸುಂದರ ಹಕ್ಕಿಯ ಗತಿ ನೋಡಿನೆರೆದಿಹ ಮಕ್ಕಳು ಊರ ಕರುಣಾಳುಜನರು ಮರುಗಿದರು ಒಗ್ಗೂಡಿ ಬಾಣದ ರಭಸದ ಪೆಟ್ಟಿಗೆ ಹಕ್ಕಿಯುಪುಟ್ಟ ಹೊಟ್ಟೆ ಮಾಂಸವು ಸಿಡಿದುರಕ್ತವು ಚೆಲ್ಲಿ ಮಣ್ಣುಗೂಡಿರಲು‘ತಿನ್ನಲು ಬಾರದು ಇದು’ ಎಂದು ಕೊಂದಿಹ ಕಟುಕ ಸತ್ತ ಹಕ್ಕಿಯನುಎತ್ತಿ ಗಿರಗಿರನೆ ತಿರುಗಿಸುತದೂರಕೆ ಎಸೆಯಲು ಅದು ಅಲ್ಲಿನ ಹೊಳೆಸೇರಿತು ಮೌನವ ಸಾರುತ್ತ ಹೊಳೆಯನು ಅಪ್ಪಿದ ಹಕ್ಕಿಯ ಆತ್ಮವುಹೊಳೆಯ ಕಿವಿಗಳಲಿ ದುಃಖದಲಿಮಾನವ ಕ್ರೌರ್ಯದ ಪರಿಯನು ವರ್ಣಿಸಿಹೇಳುತ ಆ ಹೊಳೆ ಜೊತೆಯಲ್ಲಿ ಸಾಗುತಿರಲು ಆ ಹೊಳೆ ದೇವಿಯುಅಪ್ಪಿ ಅದನು ಸಂತೈಸಿತ್ತುಚೈತ್ರದ ಅಂದಿನ ಆಗಸ ಮೊಗದಲಿಕೆಂಬಣ್ಣದ ತೆರೆ ಮೂಡಿತ್ತು. ************************************************************ ಮೂಲ; In London Town By Mary E.Colridge

ಹಕ್ಕಿಯ ದುರಂತ Read Post »

ಕಾವ್ಯಯಾನ

ತಮಂಧದೆಡೆಗೆ

ಕವಿತೆ ತಮಂಧದೆಡೆಗೆ ನೂತನ ದೋಶೆಟ್ಟಿ ತುತ್ತಿಡುತ್ತ ತೋರಿದ ಚಂದಮಾಮಬೆದರಿ ಅಡಗಿದ ಮೊಲಕಣ್ಣ ಕ್ಯಾನ್ವಾಸಿನಲ್ಲಿ ಕಳೆದು ಹೋದ ಕೌತುಕ ಆಕೆಯೊಂದಿಗಿನ ಬೆಳದಿಂಗಳ ರಾತ್ರಿಕ್ಯಾಂಡಲ್ ಡಿನ್ನರ್ಭ್ರಮೆಯಲ್ಲಿ ಕರಗಿದ ಕಲ್ಪನಾ ಲೋಕ ಚಂದ್ರನ ಮೇಲೀಗ ಸೈಟ್ ಬುಕ್ಕಿಂಗ್!ನೀರಿಲ್ಲದ ಚದರಡಿಯ ಬೆಲೆ ಕೊಂಚ ಕಮ್ಮಿಪಸೆಯ ನೆಲ ಚಿನ್ನಕ್ಕೂ ಮಿಗಿಲುಲೋಡ್ ಶೆಡ್ಡಿಂಗ್ ನ ಹೋಗಲು ರಾತ್ರಿಗಳಲೂಮನೆಯ ಸ್ಕೆಚ್ಚು ತಯಾರು ಓಡುವ ಚಂದಿರನ ಹಿಡಿಯಲುಆಕಾಶಕ್ಕೆ ಇಟ್ಟು ಏಣಿಯ ಮೇಲೆವಾಮನನ ಎರಡು ಪಾದಗಳುಇನ್ನೊಂದಕ್ಕೆ ಮಂಗಳನ ಆಹ್ವಾನ ನೀರು ಗುರುತಿದ್ದರೆ ಹೇಳಿಗಾಳಿ,ಮಳೆ, ಬೆಳಕೆಲ್ಲಹುಟ್ಟುವವು ಲ್ಯಾಬಿನಲ್ಲಿನಾಳೆಗಳು ಕರೆದೊಯ್ಯಲುಬೆಳಕಿನಿಂದ ಕತ್ತಲೆಡೆಗೆ. *********************************

ತಮಂಧದೆಡೆಗೆ Read Post »

ಕಾವ್ಯಯಾನ

ಶ್…. ! ನಿಶ್ಯಬ್ದವಾಗಿರಿ ನೀವು

ಕವಿತೆ ಶ್…. ! ನಿಶ್ಯಬ್ದವಾಗಿರಿ ನೀವು ತೇಜಾವತಿಹೆಚ್.ಡಿ. ಅದೇ ದಾರಿಯಲ್ಲಿನಿತ್ಯ ಪ್ರಯಾಣಿಸುತ್ತಿದ್ದೆನನ್ನದೇ ಲಹರಿಯಲ್ಲಿಐಹಿಕದ ಜಂಜಾಟದಲ್ಲಿಮನಸ್ಸಿನ ಹೊಯ್ದಾಟದಲ್ಲಿ ನಿಗೂಢ ಬದುಕ ಬಯಲಿನಲ್ಲಿಎಲ್ಲವೂ ಬೆತ್ತಲೆನಮ್ಮದೇನಿದೆ ಇಲ್ಲಿ,? ಆಗೋ.. ಅಲ್ಲಿ ಗೋಚರಿಸುತ್ತಿದೆಪ್ರಶಾಂತ ನೀರವ ತಾಣ…ಇಲ್ಲೇ ಹಿತವೆನಿಸುತ್ತದೆ ನನಗೆ ಶ್……! ನಿಶ್ಯಬ್ದವಾಗಿರಿ ನೀವುಎಚ್ಚರಗೊಂಡಾರು ಮತ್ತೆ ಇದ್ದಾಗಹಾಸಿಗೆ ಹೊದಿಕೆಯಿಲ್ಲದೆ ನಲುಗಿದ ಜನರುಬೆಚ್ಚಗೆ ಮಲಗಿಹರಿಲ್ಲಿಮಣ್ಣಿನ ಪದರಗಲಾಗಿ! ಅಹಮ್ಮಿನ ಕೋಟೆಯೊಳಗೆಅಹಂಕಾರದಿಂದ ಮೆರೆದವರೆಲ್ಲಾಮಣ್ಣುಸೇರಿ ಗೆದ್ದಲಿಡಿದಿಹರಿಲ್ಲಿ.. ! ತಾನು ತಾನೆಂದು ತನ್ನವರ ಸ್ವಾರ್ಥಕ್ಕಾಗಿಕಚ್ಚಾಡಿದವರೆಲ್ಲಾಏಕಾಂಗಿಯಾಗಿ ಕೊಳೆಯುತಿಹರಿಲ್ಲಿ.. ! ಕ್ಷಣಿಕ ಬಾಳಲಿ ವಿಶ್ವ ಗೆಲ್ಲುವಶಾಶ್ವತ ಕನಸು ಕಂಡುನನಸಾಗದೇ ಉಳಿದುಕನವರಿಸಿ ನರಳಿವಸ್ತಿ ಮಾಡಿಹರಿಲ್ಲಿ.. ! ಸೂರ್ಯನ ರಶ್ಮಿ ತಾಕದ ಕಾಯಗಳುಹಸಿವು ಚಳಿ ಮಳೆ ಗಾಳಿಯ ಹಂಗಿಲ್ಲದೆಪಂಚಭೂತಗಳನ್ನು ಸೇರಿಹರಿಲ್ಲಿ.. ! ಹೆಸರಿಗಾಗಿ ಹಾರಾಡಿಹೆಸರಿಲ್ಲದೇ ಅಳಿದುಕೊನೆಗೆ…ಆರಡಿ ಮೂರಡಿಯಲಿಫಲಕವ ಹಾಕಿಸಿಕೊಂಡಿಹರಿಲ್ಲಿ..! ಧರ್ಮ -ಅಧರ್ಮಗಳಾಚೆಮನುಷ್ಯನೇ ರೂಪಿಸಿಕೊಂಡನೀತಿ – ನಿಯಮಗಳಾಚೆಎಲ್ಲರೂ ಒಂದಾಗಿ ಬೆರೆತಿಹರಿಲ್ಲಿನಿಸರ್ಗದ ನಿಜ ಸೂತ್ರದ ಸ್ಮಶಾನದ ಗೋರಿಗಳಲ್ಲಿ….. ! ಶ್….! ಶಬ್ದ ಮಾಡದಿರಿ ನೀವು..ಎಚ್ಚರಗೊಂಡಾರು ಮತ್ತೆ….! *******************************

ಶ್…. ! ನಿಶ್ಯಬ್ದವಾಗಿರಿ ನೀವು Read Post »

ಕಾವ್ಯಯಾನ

ಭವದ ಭಾವಸೇತು

ಕವಿತೆ ಭವದ ಭಾವಸೇತು ನಾಗರೇಖಾ ಗಾಂವಕರ್ ಮನದೊಡಲ ಕಡಲಪ್ರಕ್ಷುಬ್ಧ ಸುಳಿಗಳುಮುತ್ತಿಕ್ಕುವ ಅಲೆಗಳಾಗುತ್ತವೆ,ಆ ಪ್ರೀತಿಗೆ ಯಮುನೆ ತಟದಿ ಕೂತಹೂತ ಕಾಲಿನ ಆಕೆಮುರುಳಿಯಲಿ ಬೆರೆತಉಸಿರ ತೇಕುತ್ತಾಕಣ್ಣ ಬೆಳಕನ್ನೆ ಹಾಸಿಭಾವ ಸೇತುವಿನ ನಾಡಿ ಹಿಡಿದುಭವದ ನೆರಳಿಗೆ ಹಂಬಲಿಸುತ್ತಾಳೆ. ಯಾವ ರಾಗವದು, ಬೆಸೆದದ್ದುಒಪ್ಪುತಪ್ಮ್ಪಗಳ ಭಿನ್ನಸಹಮತಗಳ ನಡುವೆಸಂಕಲಿಸಿ ಹೃದಯಗಳ ಬೆಸುಗೆ ಹೊನಲು ಬೆಳಕಿನ ಕೂಡಮಂದ್ರಸ್ಥಾಯಿಯ ನುಡಿಸಿಅಗೋಚರದ ಮಹಲಿನಲಿಮುಕ್ತಿ ಮಂಟಪವಿಟ್ಟುರಾಗದ್ವೇಷದ ಬೆಂಕಿಯನುತಣ್ಣಗಾಗಿಸಿ ಪರವತೋರುತ್ತಾನೆ ಪ್ರೀತಿಯಲಿ ಮುಳುಗುವ ಹರಿಗೋಲುತೂತುಗಳ ಹೊದ್ದ ಬರಿದುಜೀವದ ಗೋಳು.ಅಲ್ಲೂ ಪಯಣದ ಹಂಬಲದಮುಗಿಯದಾ ಬದುಕಪ್ರೀತಿಯ ಪಾಡುಹಾಡುತ್ತಾನೆ ಪ್ರೀತಿಸುವುದೆಂದರೆಆತ್ಮಕ್ಕೆ ಆತ್ಮವೇ ಆಗಿನಿಲುಕದ ನೆಲೆಯಲ್ಲೂಆಲಿಂಗನದ ಕನಸ ಹೊತ್ತುಸಾಗುವುದು,ಎಂದವನ ಪ್ರೀತಿಯರಾಧೆಯಾಗುವುದೆಂದರೆ ಅವನ ಪರವಶತೆಗೆತನ್ನೆಲ್ಲವನ್ನೂ ಮರೆತುಬಿಡುವುದು.ನಾಗರೇಖಾ ಗಾಂವಕರ *****************************

ಭವದ ಭಾವಸೇತು Read Post »

ಕಾವ್ಯಯಾನ

ಗುಪ್ತಗಾಮಿನಿ

ಕವಿತೆ ಗುಪ್ತಗಾಮಿನಿ ಮಮತಾ ಶಂಕರ ಇಲ್ಲಿ ಹುಟ್ಟಿದ ಮೇಲೆನಾವು ಇಲ್ಲಿನ ಕೆಲವುಅಲಿಖಿತ ಆದೇಶಗಳ ಪಾಲಿಸಲೇಬೇಕಾಗುತ್ತದೆ ಯಾರೋ ಅಜ್ನಾತ ಕ್ರೂರಿಗಳ ಕೈಗೆ ಸಿಕ್ಕುನಾವು ನಲುಗಬಹುದೆಂಬ ಒಣ ಗುಮಾನಿಯಿಂದತಮ್ಮ ಕರುಣಾಳು ಕೈಯಿಂದ ನಮ್ಮನ್ನು ರಕ್ಷಿಸುತ್ತೇವೆಂದುಮುಸುಕಲ್ಲಿ ಮುಚ್ಚಿಟ್ಟು ಕಾಪಿಡುತ್ತಾರೆ….ಮತ್ತು ಪತಿ ಪಿತ ಸುತರಾದಿಯಾಗಿಅವರೆಲ್ಲಾ ನಮ್ಮನ್ನು ಪೊರೆಯುವವರೆಂದುಕರೆಯಲ್ಪಡುವವರಾಗಿ ನಮ್ಮನಡೆಯಲಾಗದ ನಿಶ್ಯಕ್ತ ಕಾಲುಗಳಾಗಿರುತ್ತಾರೆಹಾಗೆಯೇಇವರೆಲ್ಲಾ ಶೂರರೇ ಆಗಿರಬೇಕೆಂಬ ಕರಾರೇನಿರುವುದಿಲ್ಲ…. ಕೆಲವೊಮ್ಮೆ ನಾವುನಿರ್ವೀರ್ಯರ ನಿಷ್ಪಂದರ ಸುಪರ್ದಿಯಲ್ಲಿಸುಖಿಗಳೆಂದು ಜಗತ್ತಿಗೆ ತೋರಿಸುವಲ್ಲಿನೆಮ್ಮದಿಯ ಪಡೆದವರಾಗಿರುತ್ತೇವೆ…. ಹೇಗಿದೆ ನೋಡಿ….ಸುಳ್ಳಿನ ಪ್ರತಿಬಿಂಬವನ್ನು ಜಗತ್ತು ನಂಬುತ್ತದೆಅಷ್ಟೇಕೆ…..? ಪೋಷಿಸುತ್ತದೆ ಕೂಡ….. ಓ…… ಮಾಯೆ ಮುಸುಕಿದ ಜಗದ ಕಣ್ಣೇನಿನಗೆಂದೂ ಕಾಣದಸತ್ಯದ ಮುಖ ನಮ್ಮಂತರಂಗ…ಅಘೋಷಿತ ನಿಷೇಧಾಜ್ಞೆಗಳಲ್ಲಿಬದುಕುವ ನಾವುನಿಮ್ಮನ್ನು ದ್ವೇಷಿಸುತ್ತೇವೋ, ಪ್ರೀತಿಸುತ್ತೇವೋಅಥವಾ ಕ್ಷಮಾಕರಗಳಿಂದ ನಿಮ್ಮನ್ನಪ್ಪಿದೇವರಾಗಿರುತ್ತೇವೋ…….ನಮಗೇ ಗೊತ್ತು….ನೀವೇನ ಬಲ್ಲಿರಿ……..? ****************************************

ಗುಪ್ತಗಾಮಿನಿ Read Post »

ಕಾವ್ಯಯಾನ

ಸವಿ ಬೆಳದಿಂಗಳು

ಕವಿತೆ ಸವಿ ಬೆಳದಿಂಗಳು ರಾಘವೇಂದ್ರ ದೇಶಪಾಂಡೆ ಈ ಸಂಜೆ, ಈ ಒಂಟಿತನಸಾಕ್ಷಿಯಾಗುತಿದೆ ಆಕಾಶದಿನದ ವಿದಾಯಕೆಸಂಜೆ ಸಮೀಪಿಸುತ್ತಿದ್ದಂತೆನೆನಪಾದೆ ನೀ ನನ್ನಲಿ…ಗಾಳಿಯಲ್ಲಿ ತೇಲಿ ಬರುತಿದೆಸುವಾಸನೆಯೊಂದು ಅಪರಿಚಿತವಾಗಿಕೆಲವೊಮ್ಮೆ ಪರಿಚಿತವಾಗಿಯೂಹೇಳುವುದು ಕಥೆಯನ್ನು ಒಮ್ಮೊಮ್ಮೆಕೇಳಲು ಪ್ರಯತ್ನಿಸುವೆನೆನಪಾದೆ ನೀನಾಗಆಗಸದಿ ಚಂದ್ರ ಇಳಿದು ಬರುತಿರುವಾಗಹುಡುಕಿಕೊಂಡು ಬಂದನೇ ಚಂದ್ರಆಕಾಶದಲ್ಲಿ ಯಾರನ್ನಾದರೂ …! ತಿಳಿದುಕೊಳ್ಳಲು ಬಯಸುವೆನುಚಂದ್ರನ ಬಗ್ಗೆ ಯಾರಲ್ಲಾದರುನೆನಪಾದೆ ನೀನಾಗಪಸರಿಸುವ ಸುಗಂಧದಲ್ಲಿಆಸ್ವಾದಿಸುವೆ ತಂಗಾಳಿಯಲಿ ನಿನ್ನನು…ಕರೆಯುವರಾರೊ ಮೆದುಧ್ವನಿಯಲಿಬೆಳದಿಂಗಳ ಹೆಸರಿನಲಿನಿರ್ಮಿಸುತಿರುವೆ ಮೆಟ್ಟಿಲುಗಳಏರಿ ಬೆಳದಿಂಗಳ ಸವಿಯಲು.ಪ್ರಯತ್ನಿಸುತ್ತೇನೆ ಏರಲುನೆನಪಿಸಿಕೊಂಡು ನಿನ್ನನುಕೇವಲ‌ ನಿನಗಾಗಿ ಮಾತ್ರವೇ …! *****************************************

ಸವಿ ಬೆಳದಿಂಗಳು Read Post »

ಕಾವ್ಯಯಾನ

ಅವಳನ್ನು ಸಂತೈಸುವವರು

ಕವಿತೆ ಅವಳನ್ನು ಸಂತೈಸುವವರು ಮಾಲಾ ಮ ಅಕ್ಕಿಶೆಟ್ಟಿ ಕಳೆದುಕೊಂಡೆ ನನ್ನವನನ್ನ ಶಾಶ್ವತವಾಗಿಮತ್ತೆ ಸಿಗಲಾರ’ ದುಃಖಿಸಿತು ಹೆಣ್ಣುಜೀವಮನದ ನೋವು ಹಂಚಿಕೊಳ್ಳಲುನನ್ನೊಂದಿಗೆ, ಆ ಗೆಳತಿಯ ಹೃದಯನೋವನ್ನು ತಡೆಯಲಾರದೆ, ಸಿಡಿಲುಮಳೆಯಿಲ್ಲದೇ ಬಡಿದಿತ್ತು ಬೇಸಿಗೆಯಲ್ಲಿ ಯಾವತ್ತೂ ಗಂಭೀರ ಮೂರ್ತಿತೂಕದಲ್ಲಿ ಮಾತುಗಳ ಸಂಕಲನಅಪಘಾತದಲ್ಲಿ ಬಾರಲಾರದಲೋಕಕ್ಕೆ ತೆರಳಿದ ಮರಣಒಟ ಒಟ ಎಂದು ಒಟಗುತ್ತಿದ್ದಳುತಡೆಯಲಾರದ ಸೊಲ್ಲುಗಳಲ್ಲಿ ಮೊನ್ನೆ ಇನ್ನೀತರ ಗೆಳೆತಿಯರೊಂದಿಗೆಭೇಟಿಯಾಗಿದ್ದಳು ಇಕೆ ಅಕಸ್ಮಾತ್ನೋವು ನೋವು ಎಂದು ಜರ್ಜರಿತವಾದದೇಹ, ಮತ್ತೆ ಮತ್ತೆ ಒಟಗುಡುತ್ತಿತ್ತುಸ್ಥಿತಿಯನ್ನು ಅರಿಯಲಾರದ ಇತರರುಒಟಗುಟುವಿಕೆ ನೋವು ಅರಿಯದೇ ಬೆಸರಿಸುತ್ತಿದ್ದರು ದುಃಖದ ಸುಣ್ಣದಲ್ಲಿ ಅದ್ದಿತೆಗೆದ ನನ್ನ ದೇಹಕ್ಕೆ ತುಸುಅರ್ಥವಾಗಿತ್ತು ಆಕೆಯ ವೇದನೆಸಹಜವಲ್ಲಾ? ಆತ್ಮೀಯಕೊಂಡಿ ಕಳಚಿದಾಗ ಕೈಯಿಂದನಿಲುಕದು ಸಂವೇದನೆರಹಿತರಿಗೆ ಭ್ರಮೆಯೇ ಎಲ್ಲಾ?ಹೆಣ್ಣು, ಹೆಣ್ಣನ್ನು ಅರ್ಥೈಸುವುದುರುಚಿ ಗೊತ್ತು ನೋವುಂಡವರಿಗೆವಿಚಿತ್ರ ನೋಡಿ ಪ್ರಸಂಗನನ್ನ ಮತ್ತು ಆಕೆಯ ಭೇಟಿ,ಇತ್ತುಮರುದಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ******************************

ಅವಳನ್ನು ಸಂತೈಸುವವರು Read Post »

ಕಾವ್ಯಯಾನ

ದ್ವೇಷ

ಅನುವಾದಿತ ಕವಿತೆ ದ್ವೇಷ ಇಂಗ್ಲೀಷ್ ಮೂಲ: ಸ್ಟೀಫನ್ಸ್ ಕನ್ನಡಕ್ಕೆ: ವಿ.ಗಣೇಶ್ ಕಗ್ಗತ್ತಲ ಆ ಕರಾಳ ರಾತ್ರಿಯಲಿ ಬಂದುಎದುರಿಗೆ ನಿಂತ ಆ ನನ್ನ ಕಡುವೈರಿದುರುದುರುಗುಟ್ಟಿ ನನ್ನ ನೋಡುತ್ತಿದ್ದಾಗತುಟಿಯದುರುತ್ತಿತ್ತು, ತನು ನಡುಗುತ್ತಿತ್ತು. ಹರಿದು ತಿನ್ನುವ ತೆರದಿ ವೈರಿಯ ನೋಡುತದೂರ್ವಾಸನಂತೆ ಉರಿಗಣ್ಣು ಬಿಟ್ಟಾಗನನ್ನ ಎರಡು ಕಣ್ಣುಗಳು ಕಾದ ಕಬ್ಬಿಣದಂತೆಕೆಂಪಾಗಿ ಕೆಂಡ ಕಾರುತ್ತಾ ಉರಿಯುತ್ತಲಿದ್ದವು ಶಾಂತಿಸಹನೆಯ ಮೂರ್ತಿಯಾದ ನನ್ನ ವೈರಿನಸುನಗುತ “ಗೆಳೆಯಾ, ಏಕಿಷ್ಟು ಉಗ್ರನಾಗಿರುವೆ?ಬಾಲ್ಯದಿಂದಲೂ ಕೂಡಿ ಕಳೆದ ಆ ಸಿಹಿ ದಿನಗಳನ್ನುಅದಾಗಲೇ ಮರೆತುಬಿಟ್ಟೆಯಾ?” ಎನ್ನ ಬೇಕೇ? “ಏನೋ ನಡೆಯ ಬಾರದ ಕಹಿ ಘಟನೆ ನಡೆದುನಮ್ಮಿಬ್ಬರ ಹಾದಿಯಲ್ಲಿ ಒಡಕಾದ ಮಾತ್ರಕ್ಕೆನಮ್ಮಿಬ್ಬರ ಪ್ರೀತಿಯ ತೊರೆ ಬತ್ತಿ ಬರಡಾಗಿಬದುಕು ಇಲ್ಲಿಗೇ ಮುಗಿದು ಹೋಯಿತೆನ್ನುವೆಯಾ?” “ನಿನ್ನ ಬತ್ತಳಿಕೆಯ ವಿಷಪೂರಿತ ಮೊನಚಾದಬಾಣಗಳೆಲ್ಲಾ ಬರಿದಾದಾಗ, ‘ನಾವೇಕೆ ಹೀಗೆದ್ವೇಷಿಸುತ್ತಿದ್ದೆವು?’ ಎಂಬುದಕ್ಕೆ ಉತ್ತರಿಸಬಲ್ಲೆಯಾ?ಅರ್ಥವಿಲ್ಲದ ಈ ದ್ವೇಷಕ್ಕೆ ಕೊನೆಯಿಲ್ಲವೇ?” ಎಂದಾಗ ಆ ವೈರಿಯ ಮುಂದೆ ತುಂಬಾ ಚಿಕ್ಕವನಾಗಿಮಾತೇ ಹೊರಡದೆ ಮೂಕನಾಗಿಬಿಟ್ಟೆತಗ್ಗಿಸಿದ ತಲೆಯನಾಗ ಮೇಲೆತ್ತಲಾರದೇಅದಾಗಲೇ ತಣ್ಣಗಾಗಿ ಕುಸಿಯ ತೊಡಗಿದೆ ಪ್ರೀತಿಯ ಸಿಹಿ ಕೋಪದ ಕಹಿಯ ಕರಗಿಸಿದಾಗನಾಚಿ ನೀರಾಗುತ್ತ ಅವನತ್ತ ನೋಡಿದೆನಮ್ಮಿಬ್ಬರ ದೃಷ್ಟಿ ಮತ್ತೆ ಕಲೆತಾಗ, ಬಾಲ್ಯದನೆನಪು ಮನದಾಳದಿಂದ ಚಿಮ್ಮತೊಡಗಿತು ಆಗ ನಾನೇನು ಹೇಳುವೆನೋ ಎಂದು ಕಾತರದಿನನ್ನೆಡೆಗೆ ನೋಡುತ್ತಿದ್ದವನ ಎದುರಿಸಲಾಗದೇಎಲ್ಲಿ ಹಿಡಿದು ಮುತ್ತಿಡುವೆನೋ ಏನೋ ಎಂದುಮುಖನೋಡಲಾಗದೇ ಹಾಗೇ ಒಳಕ್ಕೆ ಓಡಿದೆ. ಬಾಡಿ ಮುದುಡಿದ ಗೆಳೆತನದ ಸಸಿ ಅಂದುಚಿಗುರೊಡೆದು ಹಸಿರಾಗಿ ಬೆಳೆಯತೊಡಗಿದಾಗನನ್ನ ಕೋಪದ ಬಂಡೆ ಅದಾಗಲೇ ಕರಗಿ ನೀರಾಗಿಚಿಗುರುತಿಹ ಆ ಸಸಿಗೆ ನೀರೆರೆಯತೊಡಗಿತ್ತು. ********************************

ದ್ವೇಷ Read Post »

You cannot copy content of this page

Scroll to Top