ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಸಂತೆಯಲಿ

ಕವಿತೆ ಸಂತೆಯಲಿ ವಿ.ಎಸ್.ಶಾನಬಾಗ್ ಸಂತೆಯಲಿಕೆಲವರು ಕೊಳ್ಳಲು ಬರುತ್ತಾರೆಕೆಲವರು ನೋಡಲು ಕೊಳ್ಳುತ್ತಾರೆಸಂತೆಗೆ ಗೋಡೆಗಳು ಇಲ್ಲ ಆದ್ದರಿಂದ ಎಲ್ಲಅಂಗಾಂಗಗಳ ಮಾತು ಖುಲ್ಲ ಮಹಿಳೆಯರು ಹಳೆಯಮಾತಿನಹೊಸ ಚರ್ಯೆ ಚರ್ಚೆ ಸ್ವಪಾಕಸುಕ್ಕುಗಳ ಅಡಗಿಸಿ ಮನೆಯಲಿ ಸ್ವಪಾತ್ರಗಂಡನ ಚಮತ್ಕಾರ ನೂಡಲ್‌ ನಂತಹಪರಿಹಾರಗರತಿಯರನ್ನು ತರಗತಿಗೆ ಕಳುಹಿಸಿಪಿಸುಮಾತಿನಲ್ಲಿ ದ್ವಿಪಾತ್ರಹೌಹಾರಿಸಿದ ಚಿತ್ರ ಪುರುಷರು ಸಂತೆಯಲ್ಲಿಹೆಂಡತಿ,ಬಡ್ತಿ,ಲೋನುಅನುಕಂಪಕ್ಕೆ ಕಾಯುವಶೋಷಿತರು ಪೆಗ್ ನಲ್ಲಿಮೀಟೂ ಕಥಾಸರಣಿ ಯುವಕರುಸಂಜೆ ಸಂತೆಯಲಿ ಸಂದವರು, ಪ್ರೀತಿಯಲಿ ದುಶ್ಯಂತರುಮಾತು ಬೇಡದ ಬರೀ ಸೂಚನೆವಿವರಣೆ, ಹಕ್ಕಿಯಂತೆ ಹಾರಿ ಮಾತು ಮತ್ತೇನೋ ಆದ ಬವಣೆಕೇಳದ ಕಿವಿಗೆ ಹೇಳದ ಬಾಯಿ ನೋಡದ ಕಣ್ಣುಮಾರುವವರ ಎದೆಯಿಂದ ಕೊಳ್ಳುವವರ ಕಣ್ಣ ಹೊರಗೆಯಾರದೋ ಹೊಂಡಕ್ಕೆ ಯಾರದೋ ಮಣ್ಣುಕೀ (ಎಲ್ಲಿದೆ ಹುಡುಕಿ)ಇಲ್ಲದೆ ಮರೆತ ಬಾವುಟಹಾರುತ ಪಟಪಟ ಕವಿಗಳುಸಂತೆಯಲಿ ಸಿಗುವುದು ಕವಿತೆಗೆ ಬದಲಾದ ರೂಪ,ಅನುಭವ ಕಾಡದು ಬರೆ ಅಳಲಿನ ಸ್ವಗತ ರೂಪ?ಅವೇ ಕವಿತೆಗಳು ಪುರವಣಿಗೆಗಳಲಿ ತದ್ರೂಪಮಾತಿನಲ್ಲಿ ವಿಮರ್ಶೆ ಯಾಕೋ ಮೌನ ಕವಿಗೆಕವಿಗೋಷ್ಟಿಯಲಿ ಕವಿಗಳು ಮಂಚದಲಿಸಂತೆಯಲಿ ಓದಿದ ಕವಿತೆಗಳುಹಾರಿಹೋದವುಗಂಗೆಯ ಎಂಟನೇ ಮಗುವಿನಂತೆವಾಟ್ಸಾಪ್ ಕವಿಗಳ ಗುಂಪನ್ನು ಅರಸಿ ಸಂತೆ ಅಮೂರ್ತ ನಿಂತಂತೆಸಂಜಯನ ಕಣ್ಣಂತೆ ************************

ಸಂತೆಯಲಿ Read Post »

ಕಾವ್ಯಯಾನ

ಕಾಪಿಟ್ಟು ಕಾಯುತ್ತಾಳೆ

ಕವಿತೆ ಕಾಪಿಟ್ಟು ಕಾಯುತ್ತಾಳೆ ಶ್ರೀವಲ್ಲಿ ಶೇಷಾದ್ರಿ ಋತು ಋತುವಿಗೊಂದೊಂದು ಹೊಸತುಹೆಚ್ಚುಗಾರಿಕೆಯ ಬಿಚ್ಚಿಡುತ್ತಾಳೆ,ಅಚ್ಚರಿ ಹುಟ್ಟಿಸಿಬೆಚ್ಚಿಸುವ ಈಹುಚ್ಚಿಪೆಚ್ಚಾಗಿಸುತ್ತಾಳೆ ಹುಚ್ಚುಗಳ ಹೆಚ್ಚಿಸಿಮನದಿಚ್ಚೆಗಳ ಅಚ್ಚು ಹಾಕಿಸಿಟ್ಟುರಚ್ಚೆ ಹಿಡಿದು ಅಚ್ಚು ಮೆಚ್ಚಾಗಿಕೊಚ್ಚಿ ಹೋಗದ ಹಾಗೆ ಬಚ್ಚಿಟ್ಟುಕಾಪಿಟ್ಟು ಕಾಯುತ್ತಾಳೆ ಬೆಚ್ಚಗೆ ಕಳಚಿಟ್ಟ ಪೊರೆ ಮತ್ತೆ ಹಸಿರು ಕೊನರಿಹಸಿ ಕರಗ ಮಣ ಭಾರ ಹೊತ್ತುಚೀರಿ ಹಾರಿ ಮೇಲೆರಗೊ ಹನಿಯರಭಸ ಭರಿಸಿ ಝಾಡಿಸಿ ತೂರಿಎಲ್ಲೆ ಇರದೆಡೆ ಹರಿದು ಬರಿಯರಾಡಿಯನ್ನಪ್ಪಿ ಒಪ್ಪಿ ಮುತ್ತಿಕ್ಕಿ ದಿನ ರಾತ್ರಿಯಾಟಕ್ಕೆ ಅದರಿ ಬೆದರಿಗರಿ ಕೆದರಿ ಮತ್ತೊಮ್ಮೆ ಹೂವಾಗುತ್ತಾಳೆ ಬಟ್ಟ ಬಯಲಿನಲಿ ದೃಷ್ಟಿ ತಾಗುವ ಹಾಗೆಪರಿಪರಿಯ ನಿಲುವಾಭರಣ ಪೇರಿಸಿಹೆಜ್ಜೆಗೊಂದು ಗೆಜ್ಜೆ ಎದೆ ಛಲ್ಲೆನ್ನಿಸಿಬೆಳಕು ಬೆಳದಿಂಗಳ ಕಲಕಿ ಕುಲುಕಿತಿಂಗಳ ತಿಳಿಗೊಳವ ಮುಳುಗಿ ತೇಲಿಸಿಅಳುವ ಕಡಲಿಗೆ ನಗೆ ದೋಣಿ ಹಾಯಿಸಿಏನೂ ಅರಿಯದೆ ಮಂಜು ಮುಸುಕಿನಲಿಎಲ್ಲೊ ದಿಟ್ಟೆ ನೆಟ್ಟು ನಿಲ್ಲುವ ಈ ಹುಚ್ಚಿ. *******************************

ಕಾಪಿಟ್ಟು ಕಾಯುತ್ತಾಳೆ Read Post »

ಕಾವ್ಯಯಾನ

ರುಬಾಯಿಗಳು

ರುಬಾಯಿಗಳು ಪ.ನಾ.ಹಳ್ಳಿ.ಹರೀಶ್ ಕುಮಾರ್ ೧. ಮಂಕುತಿಮ್ಮನಾಗು ಕೂಡಿಡುವುದು ಬಿಡು ಜಿಪುಣನೆಂಬ ಹೆಸರು ತಪ್ಪೀತು.ಓದಿ ಜ್ಞಾನಿಯಾಗು, ಅಜ್ಞಾನಿಯೆಂಬ ಹಣೆಪಟ್ಟಿ ತಪ್ಪೀತು.ಎಲ್ಲರೊಡನೆ ಒಂದಾಗಿ ಡಿವಿಜಿಯ ಮಂಕುತಿಮ್ಮನಾಗು,ರೌರವ ನರಕ ಲೋಕದ ದರ್ಶನವಾದರೂ ತಪ್ಪೀತು. ೨.ಕರ್ಮ ಹುಲಿಯ ಹೊಟ್ಟೆಯೊಳಗುಟ್ಟಿ ಹುಲಿಯಾದೆವುಹಸುವಿನೊಟ್ಟೆಯೊಳಗುಟ್ಟಿ ಹಸುವಾದೆವುಮನುಷ್ಯನ ಹೊಟ್ಟೆಯೊಳಗುಟ್ಟಿದಾ ಕರ್ಮಕ್ಕೆ,ಹಿಂದೂ ಕ್ರೈಸ್ತ ಜೈನ ಮುಸಲ್ಮಾನರೆಂದಾದೆವು **************************

ರುಬಾಯಿಗಳು Read Post »

ಕಾವ್ಯಯಾನ

ಕೆಂಡದ ಕೋಡಿ

ಕೆಂಡದ ಕೋಡಿ ವಿಶಾಲಾ ಆರಾಧ್ಯ ಬೆಳದಿಂಗಳಿನ ರಂಗೋಲಿಯಲೂಚಿತ್ತದಲಿ ನೆತ್ತರಿನ ಚಿತ್ರಗಳು ಮೂಡಿಕತ್ತಲ ಗರ್ಭಕ್ಕಿಳಿದು ಬಸಿರಾಗುತ್ತವೆಸೂಜಿಯ ಮೊನೆಯಲ್ಲಿ ಹುಟ್ಟಿದಮತ್ಸರದ ಕನಸುಗಳುದ್ವೇಷದ ಕೋರೆಹಲ್ಲಿನೊಡನೆಕತ್ತಿಯ ಝಳಪಿನ ತಾಳದಲಿನರ್ತಿಸಲು ಹವಣಿಸುತ್ತವೆ!! ಪಕ್ಷಗಳ ದಾಟಿ ಮಾಸದಮಾಸಗಳಲಿ ಇಣುಕಿ ಕಣ್ಣಲ್ಲೇಕೆಂಡದ ಕೊಂಡ ನಿಗಿನಿಗಿಸಿಮಿನುಗಿ ಮನದ ರಸವನುಕೊತಕೊತನೆ ಕುದಿಸಿ ನಾನುನೀನಿನಮೇಲು ಕೀಳಿನ ಧರ್ಮಾಧರ್ಮದತುಪ್ಪವ ಸುರಿಸಿ ಅಗ್ನಿಗೊಂಡವಮತ್ತೆ ಬಾನ ಕೊನೆವರೆಗೂ ಉರಿಸಿಧಗಧಗಿಸುವ ಹುಚ್ಚು ಕೋಡಿಹರಿಯುತ್ತದೆ!! ಏರಿಯ ದಾಟಿದ ಮತ್ಸರದ ಝರಿಕೊರಳ ಸೀಳೆ ಕಿರುದನಿಗೂಎಡೆಗೊಡದೆ ನೆತ್ತರು ಹರಿದಾಡುತ್ತದೆಆ ನೆತ್ತರಲೇ ಕಾರ್ಕೋಟ ಬೀಜಗಳುಮೊಳಕೆಯೊಡೆಯುತ್ತವೆ ಮತ್ತೆ ಮತ್ತೆ

ಕೆಂಡದ ಕೋಡಿ Read Post »

ಕಾವ್ಯಯಾನ

ಹೇ ರಾಮ್

ಕವಿತೆ ಹೇ ರಾಮ್ ನೂತನ ದೋಶೆಟ್ಟಿ ಸುತ್ತ ಕ್ಲಿಕ್ಕಿಸುವ ಕ್ಯಾಮರಾ ಕಣ್ಣುಗಳುಚಿತ್ರಪಟದಲ್ಲಿ ಸೆರೆಯಾದದ್ದೇನೋ ಹೌದು ಇದು ಯಾರ ಸಮಾಧಿ?ಪ್ರಶ್ನೆಗೆ ಅಪ್ಪನ ಮೆದು ಉತ್ತರಪೋಸು ಕೊಡುವವರ ಪಕ್ಕದಲ್ಲಿಹಿಡಿಯಾದ ನಾನು ಘೋಡ್ಸೆಯನು ಬಣ್ಣಿಸುವವರ ಮಾತುಎದೆ ಹಿಂಡಲಿಲ್ಲಇತಿಹಾಸ ಹೇಳಿತ್ತು ನಿನ್ನೆಗೆ ಮರುಗಬೇಡ ಗುಂಡಿಗೆ ಎದೆಯೊಡ್ಡಿದವಗೆಕಾವಲು ಬಂದೂಕುಗಳುವಿಪರ್ಯಾಸಕ್ಕೂ ಮಿತಿ ಇರಬೇಕು ತತ್ವಗಳೋ ಹೊದಿಕೆ ಹೊದ್ದ ಪುಸ್ತಕಗಳುಬಾಕ್ಸ್ ಆಫೀಸಿನಲ್ಲಿ ಗಾಂಧೀಗಿರಿಯ ಲೂಟಿಖಾದಿಯ ಫ್ಯಾಷನ್ ಮೇಳಸ್ವದೇಶಿ ಬೇಲಿಗೆ ವಿದೇಶಿ ಗೂಟನಾನೊಬ್ಬನೇ ‘ ನಗ್ನ ಫಕೀರ’ **********************************************************

ಹೇ ರಾಮ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ. ಹೇಮಗಂಗಾ ಬೆರಳುಗಳು ಯಾಂತ್ರಿಕವಾಗಿ ಹೂ ಕಟ್ಟುತ್ತಿವೆ ಮನಸೆಲ್ಲೋ ಕಳೆದುಹೋಗಿದೆಕಂಗಳು ಬರುವಿಕೆಯನ್ನೇ ನಿರೀಕ್ಷಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಪ್ರೀತಿ, ಪ್ರೇಮದಲ್ಲಿನ ಸುಖವೇನೆಂದು ತೋರಿಸಿಕೊಟ್ಟವನು ನೀನುಸವಿನೆನಪಲಿ ಅಧರಗಳು ಬಿರಿಯುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ನಿನಗಾಗೇ ಮಿಡಿಯುವ ಹೃದಯದಲಿ ನೂರೆಂಟು ತವಕ, ತಲ್ಲಣಗಳುಧಮನಿಗಳು ನಿನ್ನ ಹೆಸರನ್ನೇ ಜಪಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಕಣ್ರೆಪ್ಪೆಯೊಳು ಅವಿತಿಹ ಕನಸು ನನಸಾಗಲು ಕಾಯುವ ಕಾಯಕವಿದುಕಾಲದ ಘಳಿಗೆಗಳು ತಮ್ಮಂತೆ ಸರಿಯುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ವರ್ಷಗಳು ಉರುಳಿದರೇನು ಹೇಮ ಳ ಒಲವಿಗೆಂದೂ ಮುಪ್ಪು ಬಾರದುತನುವಿನ ಕಣಕಣಗಳೂ ಹಂಬಲಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ *****************************

ಗಝಲ್ Read Post »

ಕಾವ್ಯಯಾನ

ಎದೆ ಮಾತು

ಕವಿತೆ ಎದೆ ಮಾತು ನೀ.ಶ್ರೀಶೈಲ ಹುಲ್ಲೂರು ಕಣ್ಣ ಕೊಳದಲದೋನಮ್ಮೊಲವ ಬಾತುಅವುಗಳೇ ಹೇಳುತಿವೆನನ್ನೆದೆಯ ಮಾತು ಬಾನ ಸಾಗರದಲ್ಲಿನೀ ಹೊಳೆವ ತಾರೆಬೆಳದಿಂಗಳಮಲಿನಲಿನಿರುಕಿಸುವೆ ಬಾರೆ ಸೊಂಪಾದ ತಣ್ಣೆಳಲುನಿನ್ನ ಎದೆ ಬನದಿಬಿರುಬಿಸಿಲು ಅಲ್ಲಿರಲಿವಿರಹ ಕಾನನದಿ ಮಿರುಗುವಾ ಚಂದ್ರನನಗೆಯಾಟ ನೋಡುಮೋಡಗಳ ಹಿಗ್ಗಿನಲಿನಮ್ಮೊಲವ ಹಾಡು ನದಿ ದಡದಿ ಸೊಗಸುನವಿಲ ನಲಿದಾಟಹಕ್ಕಿಗಳ ಕಲರವವುಅದು ರಮ್ಯ ನೋಟ ಒಂಟಿ ಪಯಣ ಸಾಕಿನ್ನುಜೊತೆಯಾಗಿ ಇರುವವರುಷದಿ ಕಂದನ ಕೇಕೆಮಡಿಲಲ್ಲೆ ತರುವ **************************************

ಎದೆ ಮಾತು Read Post »

ಕಾವ್ಯಯಾನ

ಮಧುವಣಗಿತ್ತಿ

ಕವಿತೆ ಮಧುವಣಗಿತ್ತಿ ಎಚ್ ಕೆ ನಟರಾಜ ಆಕೆಗೆ ದಿನವೂಸಿಂಗರೀಸುವುದೇ ಕೆಲಸಅಕ್ಷರಗಳಿಗೆ ಉಡುಗೆ ತೊಡಿಸಿಅಲಂಕರಿಸಿ ಬಿಳಿ ಹಾಳೆಯ ಮೇಲೇ ಚಿತ್ತಾರಬಿಡಿಸಿ ಶಾಯಿಯ ರಂಗೋಲಿಸೂರ್ಯ ಚಂದ್ರನ ಹೂ ಮಾಲೆ ಮಾಡಿ..ನಕ್ಷತ್ರಗಳನ್ನು ಕೆನ್ನೆ ರಂಗಾಗಿಸಿಭಾವನೆಗಳಿಗೆ ಬಣ್ಣದುಡುಗೆ ತೊಡಿಸಿಕಾಮವನ್ನು.. ಕಾಮವಿಲ್ಲದ ಹೃದಯಭತ್ತಳಿಕೆಯ ಬಾಣವಾಗಿಸಿಪದಪುಂಜದರಮನೆಗೆ ಲಗ್ಗೆಹೀಗೆ ಈ ಮಧುವಣಗಿತ್ತಿ.. ಅಲ್ಲಿಂದ ಇಲ್ಲಿಇಲ್ಲಿಂದ ಅಲ್ಲಿ ಶಭ್ಧಗಳ ನರ್ತನ. ಆಡಂಭರದಾಟಕೂ ಅಂಕುಶ ತೊಡಿಸಿಪ್ರೇಮನಿವೇದನೆ.ಕನಸುಗಳ ಬಗೆದು ಅಲ್ಲೊಂದಷ್ಟು ಹೆಕ್ಕಿಮನದಾಳದಿ ಕುಕ್ಕಿ…. ದುಃಖದಲ್ಲಿ ಬಿಕ್ಕಿ..ನಗುವಿನಾಳದಲಿ ಒಲವ ಬಿತ್ತಿ.. ನಾಚಿನೀರಾದ ರಂಗಿನೋಕುಳಿಯಲಿ..ಮತ್ತೊಂದಷ್ಟು ಪದಗಳ ಮಾಲೆಕಟ್ಟಿ..ಜೋಡಿಸಿ.. ಕಾಡಿಸೀ.. ಕೂಡಿಸಿ.. ತೊಡಿಸಿಅಂತೂ.. ಒಂದು ಅಂತಿಮ ಸ್ಪರ್ಶ..ಭಾವದೊಲುಮೆಗೆ ಆಕರ್ಷಕ..ತೂರಲಿ ಕಣ್ಣೋಳೊಗೆ.. ಕವಿಭಾವಕೆಕವನದ ದೃಶ್ಯಹೀಗೆ ಮಧುವಣಗಿತ್ತಿ ಮೆರವಣಿಗೆಯಲಿಅಕ್ಷರ ಸೃಷ್ಟಿಯ ಭಾಷ್ಯ ****************************

ಮಧುವಣಗಿತ್ತಿ Read Post »

ಕಾವ್ಯಯಾನ

ನಾವು ಆಧುನಿಕ ಗಾಂಧಾರಿಯರು

ಕವಿತೆ ನಾವು ಆಧುನಿಕ ಗಾಂಧಾರಿಯರು ಲಕ್ಷ್ಮೀ ಪಾಟೀಲ್ ನೀನು ಅಪಾರವಾದ ಆತ್ಮವಿಶ್ವಾಸತುಂಬಿ ತುಳುಕುವಹೆಣ್ಣೆಂದುಆಗಾಗ ಹೇಳಿನನ್ನನ್ನು ಬಲೂನಿನಂತೆಉಬ್ಬಿಸಿದಾತಖರೇಖರೇಆತ್ಮವಿಶ್ವಾಸದಲ್ಲೇಬದುಕಲು ನಿಂತಾಗ ಬಲೂನಿನ ಹವಾ ತೆಗೆದುಇನ್ನೆಂದೂಉಬ್ಬದಂತೆ ಮಾಡಿ ಎಸೆದು ಬಿಟ್ಟ ಹೆಣ್ಣನ್ನು ಒರೆಗೆ ಹಚ್ಚಿ ಆತಹೀಗೆಯೇ ಉಬ್ಬಿಬದುಕುತ್ತತನಗೊಂದು ಸ್ವಚ್ಛಂದ ಇತಿಹಾಸ ಕಟ್ಟಿಕೊಂಡಆತ್ಮವಿಶ್ವಾಸದಿಂದಹೆಜ್ಜೆ ಹಾಕುವಹೆಣ್ಣನ್ನು ತುಳಿಯುತ್ತಲೇಬಂದ ಕಣ್ಣಿಗೆ ಪಟ್ಟಿ ಕಟ್ಟಿಕೊಳ್ಳದಿದ್ದರೂಇವರೆಲ್ಲಕರಾಮತ್ತುಗಳನ್ನುಕಣ್ಣಲ್ಲಿ ಹಿಂಗಿಸಿಕೊಂಡುಒಡಲಲ್ಲಿ ಅರಗಿಸಿಕೊಂಡುಕಂಡು ಕಾಣದಂತೆ ಉಂಡು ಉಗುಳದಂತೆಒಡಲದಾವಾಗ್ನಿಗಳನ್ನುಒಳಗೇಒತ್ತಿಕೊಳ್ಳುವನಾವು ಆಧುನಿಕ ಗಾಂಧಾರಿಯರಾಗಿದ್ದೇವೆ ಅಕ್ಷರಲೋಕಕ್ಕೆತೆರೆದುಕೊಂಡಿದ್ದುಪ್ರಜಾಪ್ರಭುತ್ವದಲ್ಲಿಸಂಖ್ಯೆ ಮುಖ್ಯವಾದದ್ದೇಪವಾಡವೆಂಬಂತೆಈಗಲೂ ಮೀಸಲಾತಿ ಆದ್ಯತೆಗೆಧನ್ಯರಾಗಲುಕುರುಡು ಪುರುಷನ ಮುಂದೆ ಬೇಡಿಕೆ ಇಟ್ಟುಕಣ್ಣಿದ್ದೂಕುರುಡರಂತೆಅವನ ನೆರಳಹಿಂಬಾಲಿಸುವನಾವು ಆಧುನಿಕ ಗಾಂಧಾರಿಯರಾಗಿದ್ದೇವೆ **************************************

ನಾವು ಆಧುನಿಕ ಗಾಂಧಾರಿಯರು Read Post »

ಕಾವ್ಯಯಾನ

ದೇವರ ಲೀಲೆ

ಕವಿತೆ ದೇವರ ಲೀಲೆ ಬಾಪು ಖಾಡೆ ನೀಲಿಯ ಹಾಳೆಗೆ ಚಿತ್ರವ ಬರೆದುಮೇಲಕೆ ಎಸೆದಿರುವೆಶಿವನೇ ಮೇಲಕೆ ಎಸೆದಿರುವೆಮೂಡಣ ರವಿಗೂ ಹುಣ್ಣಿಮೆ ಶಶಿಗೂಸ್ನೇಹವ ಬೆಸೆದಿರುವೆಬೆಳಕಿನ ಸ್ನೇಹವ ಬೆಸೆದಿರುವೆ ತುಂಬಿದ ಅಂಬುಧಿ ಅಲೆಗಳ ಮೇಲೆನರ್ತನ ನಡೆಸಿರುವೆಹರನೇ ನರ್ತನ ನಡೆಸಿರುವೆಹಕ್ಕಿಯ ಹಿಂಡಿನ ಮೆತ್ತನೆ ಮೈಗೆಅಂಗಿಯ ತೊಡಿಸಿರುವೆರಂಗಿನ ಅಂಗಿಯ ತೊಡಿಸಿರುವೆ ಬಳುಕುವ ಬಳ್ಳಿಗೆ ಬಣ್ಣದ ಹೂಗಳಚಿತ್ರವ ಬಿಡಿಸಿರುವೆಚಂದದ ಚಿತ್ರವ ಬಿಡಿಸಿರುವೆಕೋಗಿಲೆ ಕಂಠದಿ ಕಾಣದೆ ಕುಳಿತುವೀಣೆಯ ನುಡಿಸಿರುವೆಚೈತ್ರದ ವೀಣೆಯ ನುಡಿಸಿರುವೆ ಎಲ್ಲೊ ಅವಿತು ಸೋಲು-ಗೆಲುವಿನಸೂತ್ರವ ಹಿಡಿದಿರುವೆಜೀವನ ಸೂತ್ರವ ಹಿಡಿದಿರುವೆನಾಟಕವಾಡಿ ಪಾತ್ರವ ಮುಗಿಯಲುಪರದೆಯ ಸರಿಸಿರುವೆಅಂಕದ ಪರದೆಯ ಸರಿಸಿರುವೆ ***********************************

ದೇವರ ಲೀಲೆ Read Post »

You cannot copy content of this page

Scroll to Top