ವರ್ತಮಾನ
ಕವಿತೆ ವರ್ತಮಾನ ರೇಶ್ಮಾಗುಳೇದಗುಡ್ಡಾಕರ್ ಮನದ ಉದ್ವೇಗ ಕ್ಕೆ ಬೇಕುಒಲವು ,ಛಲವುಇವುಗಳಸೆಳವಿಗೆ ಖುಷಿ ಇರುವದುಅಶ್ರುತರ್ಪಣಧರೆಗುರುಳುವದು ಯಾವ ಸಾಗರಕೂ ಹೊಲಿಕೆಯಾಗದಬದುಕಿನ ಅಲೆಗಳ ಓಟ …..ಮೆಲ್ಲನೆ ದಡಕ್ಕೆ ಮುತ್ತಿಡುವವುಕೆಲವೊಮ್ಮೆ ಕೊಚ್ವಿಕೊಂಡ್ಯೊಯುವವುದಡವನ್ನೇ …. ಏನು ಆಟವಿದು ?ಕಾಣದ ಕೈ ಸೂತ್ರವದುತಲ್ಲಣ ತಂಪಾಗಿ ,ಸುಧೆ ವಿಷವಾಗಿ ಕೆರಳಿಮುರಿದು ಬೀಳುವುದುಕನಸಿನ ಮನೆ ವರವೊ,ಬರವೂ ತಿಳಿಯದಕಾಲವಿದುಮತ್ತೆ ಸಿಲುಕುವದುಉದ್ವೇಗದಚಕ್ರ ವೇಗ ಪಡೆದು ಓಡುವುದುಸ್ವಾರ್ಥ ಸೆಳವಿಗೆ ಸೆರೆಯಾಗಿ ದಿನಗಳು ಉರುಳಿದಂತೆಮಣ್ಣಲ್ಲಿ ಮಣ್ಣಾಗಿನಿರ್ಮಿಸಿದ ಮೂಕಅವಶೇಷಗಳು ಹುಡುಕುವವುಸ್ನೇಹ ,ಪ್ರೀತಿಗಾಗಿ ಹಂಬಲಿಸುತ ***************************************









