ಕನ್ನಡದ ದಿವ್ಯೋತ್ಸವ
ಕವಿತೆ ಕನ್ನಡದ ದಿವ್ಯೋತ್ಸವ ವೀಣಾ. ಎನ್. ರಾವ್ ಕನ್ನಡದಾ ಮನಗಳೆ ಎದ್ದು ನಿಲ್ಲಿಹರಿಸೋಣ ಅಮೃತದ ಸುಧೆಯನ್ನಿಲ್ಲಿಸಿರಿಗನ್ನಡದ ಶರಧಿಯೊಳಗಿನ ಮಾಧುರ್ಯಸವಿದು ನೋಡಲು ಬೇಕು ಔದಾರ್ಯ ! ಬೆನ್ನೀರ್ ಮುನ್ನೀರ್ ಪನ್ನೀರ ಸಿಂಚನಕೆಧ್ಯಾನಸ್ಥ ತುಷಾರ ಗಿರಿಯ ಸಿಂಚನಕೆಕನ್ನಡದಾ ಮಣ್ಣಲಿ ಚಿಗುರೊಡೆದಾ ಹಸಿರೇಶತಮಾನದ ಸಂಸ್ಕೃತಿಗೆ ನೀನಿದ್ದರೆ ಊಸಿರೇ ! ಮೈಲಿ ಮೈಲಿಗೂ ಕನ್ನಡದಾ ಶೈಲಿಯುಮೂಡಿದೆ, ಕೂಡಿದೆ ಪೃಥ್ವಿಯ ಕೈಯಲ್ಲಿಯುಮುಕುಟ ಮಣಿಯು ಎಂದೂ ನರ್ತಿಸುತ್ತಿರುವುದಲ್ಲಿಹೊನ್ನುಡಿಯ ಪಾಂಚಜನ್ಯ ಮೊಳಗುತಿಹುದಲ್ಲಿ ! ಮರೆಮಾಡದಿರು ಪರಕೀಯರೆದುರು ನಿನ್ನ ಕನ್ನಡಸರಳ ವಿರಳವಾಗಲು ಬಿಡದಿರು ನಿನ್ನ ಕನ್ನಡಕಾವ್ಯದ ಕಲೆಗಳಿಗೆ ರಸಸೃಷ್ಟಿ ಈ ಕನ್ನಡಭಾರತಾಂಬೆಯ ಹೆಗ್ಗಳಿಕೆಗೆ ಹೊಸ ಉಕ್ತಿ ಈ ಕನ್ನಡ ! ಕನ್ನಡವೆಂಬ ದಿವ್ಯೋತ್ಸವಆಗಲಿ ನಿತ್ಯೋತ್ಸವಕನ್ನಡವೆಂಬ ದಿವ್ಯೋತ್ಸವ ಆಗಲಿ ನಿತ್ಯೋತ್ಸವ !! ***************************









