ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾಯುವಿಕೆ

ಕವಿತೆ ಕಾಯುವಿಕೆ ತೇಜಾವತಿ ಹೆಚ್.ಡಿ. ಎಷ್ಟು ಘಮಘಮಿಸಿತ್ತಿದ್ದೆ ನೀನು..ಸುತ್ತೆಲ್ಲಾ ಮೂಲೆಗೂ ಕಂಪ ಪಸರಿಸುತ್ತಿದ್ದೆಯಲ್ಲ.. !ದಾರಿಹೋಕರನ್ನೂ ಕೈಬೀಸಿ ಕರೆದುತನ್ನೆಡೆಗೆ ಸೆಳೆವ ಮಾಯಾವಿ ನೀನು! ನಿನ್ನ ನೋಡಿದಾಗೆಲ್ಲ ಮುದ್ದಿಸಲೇ ಒಮ್ಮೆ ಎನ್ನಿಸುತ್ತುತ್ತು..ನೀನೋ…ಮುಟ್ಟಿದರೆ ಮಾಸುವಷ್ಟು ಶುಭ್ರ ಮೃದುಮಲ್ಲಿಗೆ..ಹಿತವೆನಿಸುತ್ತಿತ್ತು ಸಾಂಗತ್ಯಸಿಕ್ಕರೆ ದಿನವೂ ಮುಡಿಯಬೇಕೆನಿಸುತ್ತಿತ್ತು.. ಈಗಲೂ ಅಲ್ಲೇ ನಿನ್ನ ವಾಸ್ತವ್ಯಅದೇ ಗಿಡ ಅದೇ ಬಳ್ಳಿಎಲ್ಲೆಡೆ ಹರಡಿ ಮೈತುಂಬಾ ಹೂಗಳ ಪರಿಮಳ ! ಆದರೆ ಈಗೀಗ ಯಾಕೋನೀನೇ ತಲೆನೋವಾಗಿರುವೆಯಲ್ಲ !ಮುಡಿಯುವುದಿರಲಿ ವಾಸನೆಯೂ ಸೇರದುಇಲ್ಲಿ ಬದಲಾಗಿದ್ದು ಘಮಲೋ ಭಾವವೋ ನಾನರಿಯೆಅಂತೂ ಅಂದು ಆಕರ್ಷಿತವಾಗಿದ್ದೆ ಇಂದು ತಿರಸ್ಕೃತವಾಯ್ತು.. ನಾನು ಅಂದು ಸವಿದ ಸುಗಂಧಇಂದು ಮತ್ಯಾರದ್ದೋ ಪಾಲುಇಂದಿನ ನನ್ನ ತಲೆನೋವುನಾಳೆ ಇನ್ಯಾರದ್ದೋ… ಇಲ್ಲಿ ಯಾವುದು ಸ್ಥಿರ ಹೇಳಿಹಗಲಿಂದೆ ಇರುಳು ಇರುಳಿಂದೆ ಹಗಲುಕಾಲಚಕ್ರದಲ್ಲಿ ಎಲ್ಲವೂ ಸರತಿ..ಕಾಯುವಿಕೆ ಮಾತ್ರ ನಮ್ಮದು.. ****************************************

ಕಾಯುವಿಕೆ Read Post »

ಕಾವ್ಯಯಾನ

ಮೂಕ ಸಾಕ್ಷಿ

ಕವಿತೆ ಮೂಕ ಸಾಕ್ಷಿ ಸರೋಜಾ ಶ್ರೀಕಾಂತ್ ಇತ್ತೀಚೆಗೆ ಸುಣ್ಣವಿರದ ಗೋಡೆಯೂ ಸನಿಹ ಬರಗೊಡದುಬಣ್ಣಿಸುವ ಕಿವಿಯಾಗುವುದು ಬಿಟ್ಟು ವರ್ಷಗಳೇ ಆದವೇನು!? ನೆಪಕ್ಕಾದರೂ ಸಾಂತ್ವನದ ನುಡಿಗಳಾರೂ ಆಡಲಿಲ್ಲದಿನಂಪ್ರತಿ ಸಾಯೋರಿಗೆ ಅಳುವರಾರು ಅಂದರೆಲ್ಲ ಈಗೀಗ ಜೋತು ಬಿದ್ದ ಸೂರಿನ ಜಂತಿಗೂ ಜಿಗುಪ್ಸೆಸಂಕಷ್ಟದ ಮಾಳಿಗೆ ಬಿಟ್ಟು ಕಾಲನಡಿ ಅಡಗಿ ಮಾಯವಾಗುವುದೇ ಇಷ್ಟವಂತೆ ಇಲಿ ಬಿಡಿ,ಇರುವೆ ಜಿರಳೆಗಳ ಹಾವಳಿಯಾವುದೂ ಇಲ್ಲಿಲ್ಲಬರಿದಾದ ಡಬರಿಗೆ ಯಾವ ಸಪ್ಪಳದ ಖಬರಿಲ್ಲ….! ನಿದ್ರೆ ಇರದ ರಾತ್ರಿಗಳಲ್ಲೆಲ್ಲಾ ಹರಕು ಹಾಸಿಗೆಯಿಂದ ಹೊರ ಬರುತ್ತಲೇ ಇರುವ ಕಾಲುಗಳುಸುಳ್ಳಾಗಿಸುತ್ತವೆ ಗಾದೆ ಮಾತನ್ನು ನಿತ್ಯ ಒಂದಿಷ್ಟು ಹೊತ್ತಾದರೂ ತಣ್ಣಗಿರುವುದೊಂದೆ , ಅದೇಬೆಳಗಾಗುತ್ತಲೇ ಕಣ್ಣೊರೆಸಿ ಖಾಲಿಯಾಗುವ ಮಣ್ಣಿನ ಪಾತ್ರೆ ಅವನಿಂದಾಚೆ ಏನೂ ಇಲ್ಲಅವನಿಚ್ಛೆಯ ಆಯ್ಕೆಯಲ್ಲಿ ನಾವೂ ಇರುವೆವಲ್ಲಆದಿಗೊಂದು ಅಂತ್ಯವೂ ಇದೆಯಲ್ಲ….!!!. ********************************

ಮೂಕ ಸಾಕ್ಷಿ Read Post »

ಕಾವ್ಯಯಾನ

ಗುಟ್ಟು

ಕವಿತೆ ಗುಟ್ಟು ಎಸ್ ನಾಗಶ್ರೀ ಸಣ್ಣ ಊರಿನ ಪ್ರೇಮಿಗಳಪಾಡು ಹೇಳಬಾರದುರಂಗೋಲಿ ಗೆರೆಯಲ್ಲಿನಸಣ್ಣ ಮಾರ್ಪಾಡುಮೂಲೆಯಂಗಡಿಯ ಕಾಯಿನ್ನುಬೂತಿನನಿಮಿಷಗಳ ಲೆಕ್ಕಕಾಲೇಜು ಬಿಟ್ಟ ಕರಾರುವಕ್ಕುನಿಮಿಷ ಸೆಕೆಂಡುಯಾವ ಬಸ್ಸಿನ ದಾರಿಯಲಿಅಡ್ಡ ನಿಂತಳು ಪೋರಿಯಾರ ಮನೆಯ ಚಿತ್ರಾನ್ನತಿಂದುಂಡ ಕೈ ಘಮನಾಯಿಗೇಕೆ ಅಲ್ಲೇ ನಡೆದಾಟಕೆನ್ನೆಗುಳಿ ಹೆಚ್ಚು ಹೊತ್ತುಯಾರ ಮುಂದಿತ್ತುಬೆಳಿಗ್ಗೆ ಮುಡಿಯದ ಹೂಸಂಜೆ ಹೆರಳಿಗೆ ಬಂದದ್ದು ಹೇಗೆಂಬಸೂಕ್ಷ್ಮಗಳು ಇಲ್ಲಿನಗೋಡೆ, ಗಿಡ, ಮರ, ಬೇಲಿಗಳಿಗೆ ಸಲೀಸುಕಣ್ಣಲ್ಲೇ ತೂಕದ ಬಟ್ಟು ಹೊತ್ತುತಿರುಗುವ ತಕ್ಕಡಿಗಳುರಸ್ತೆಬದಿಗೆ ನಿರಪಾಯ ನಿಂತುಮನೆ ಹಿರಿಯರಿಗೆಸಂದೇಶ ಕಳಿಸಿಮಜಾ ನೋಡುತ್ತವೆ ಸಣ್ಣ ಊರಿನ ಹೆಂಗೆಳೆಯರಬುದ್ಧಿ ಬ್ರಹ್ಮಾಂಡ ಬೆಳೆಯುವುದು ಹೀಗೆಪ್ರೀತಿಸಿದಾಗ ಬುದ್ಧಿ ಕಳೆಯದೆಜೋಪಾನ ಮನೆಗೊಯ್ಯುವ ಕಲೆನೊಸಲ ಮೇಲಿನ ಮುತ್ತುಕೆನ್ನೆರಂಗಿಗೆ ಇಳಿಯದಂತೆತೋರುವ ಹುಷಾರುಉಹೂಂಅರ್ಥವಾಗುವುದಿಲ್ಲ ಹುಡುಗಿಯರೆಮಹಾನಗರದ ಅನಾಮಿಕಸುಖದಲಿಪ್ರೇಮಿಸುವ ನಿಮಗೆ ************************

ಗುಟ್ಟು Read Post »

ಕಾವ್ಯಯಾನ

ಸಾವು ಮಾತಾದಾಗ

ಕವಿತೆ ಸಾವು ಮಾತಾದಾಗ ವಿಶಾಲಾ ಆರಾಧ್ಯ ಭಯವೆನ್ನದಿರು ಕೊನೆಯೆನ್ನದಿರುಮೈಲಿಗೆ ಎನ್ನದಿರು ನನ್ನನುಹಗುರಾಗುವಿ ಮೃದುವಾಗುವಿಕೂಡಿದ ಕ್ಷಣದೊಳು ನನ್ನನು ಭವದೊಳು ಮಾಡಿದ ಪಾಪವತೊಳೆಯುವ ಹೊನಲು ನಾನುತರತರ ಮುಖವಾಡ ಹೊತ್ತವರಿಗೆಹೊಸ/ಕಳೆಯನು ಕೊಡುವೆ ನಾನು ಬಂಧು ಬಳಗವೇ ಹಿರಿದೆನ್ನದಿರುಎನಗಿಂ ಹಿರಿಯರ ನಾ ಕಾಣೆಸತಿ ಪತಿ ಸಂಸಾರ ಜೊತೆ ಮಮಕಾರನಾ ಬಂದರೆ ಅಲ್ಲಿಯೆ ಮಾಯೇ ಅಮ್ಮ ಅಪ್ಪ ಅಣ್ಣಾ ಅಕ್ಕಾಎನ್ನುವುದೆಲ್ಲಾ ಮೋಹಕೆಬಂದೊಡನೆಯೆ ನಾ ಕ್ಷಣಕರೆವರು ಹೆಣವೆಂದಾ ದೇಹಕೆ ————-

ಸಾವು ಮಾತಾದಾಗ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರೇಷ್ಮಾ ಕಂದಕೂರ. ಮುಗ್ದ ಮನಸುಗಳು ನಾವು ಚಿವುಟದಿರಿ ನಮ್ಮನ್ನಕಂಡ ಕನಸುಗಳು ನನಸಾಗ ಬೇಕಿದೆ ಇನ್ನ ನೋವುಗಳ ಸಹಿಸದ ಹಸುಳೆಗಳು ನಾವುಕ್ರೌರ್ಯದ ದಾಳಿಗೆ ಸಿಲುಕಿಸದಿರಿ ತನುವನ್ನ ಭರವಸೆಗಳ ಬೆಳಕಿನಡಿ ಸಾಗಬೇಕಿದೆ ಜೀವನಎಸೆಯ ಬೇಡಿ ಮೃದುಲತೆಗೆ ಮೋಹದ ಜಾಲವನ್ನ ಜ್ಞಾನದ ಹಂಬಲಕೆ ಕೈ ಚಾಚಿದೆ ಕರೆದಿದೆ ಮನವುವಿವಾಹ ಕೂಪಕೆ ವಶಪಡಿಸದಿರಿ ಕುಸುಮವನ್ನ ನಿರ್ಮಲತೆಯ ನಾಜೂಕು ನನ್ನೊಡನಾಟಹೊಸಕಿ ಹಾಕದಿರಿ ನಾಜೂಕು ರೇಷಿಮೆಯನ್ನ

ಗಝಲ್ Read Post »

ಕಾವ್ಯಯಾನ

ಪ್ರೀತಿ ಹೊನಲು

ಕವಿತೆ ಶ್ರೀವಲ್ಲಿ ಶೇಷಾದ್ರಿ ಮನದ ಮಾತಿನ್ನು ಮುಗಿದಿಲ್ಲ ನಲ್ಲಮೆಲ್ಲನೆದ್ದು ಯಾಮಾರಿಸ ಬೇಡನಿನ್ನೆದೆಯೊಳಗೊಂದು ಮುಳ್ಳಿನ ಪಕ್ಕಕೆಂಪು ಗುಲಾಬಿ ಗಂಧವಿದೆಯೆಂದುನೀ ಹೇಳದಿದ್ದರೂ ನಾ ಬಲ್ಲೆಗಂಡಸು ಹಾಗೆ ಬಲು ಗಡಸುಎಲ್ಲಿಂದ ಬಂದೀತು ನಯ ಸೊಗಸುಬೇಕೆಂದೆ ಮುಖ ಗಂಟಿಕ್ಕಿ ಮುನಿಸುಲಘು ಬಿಗು ಮುತ್ತುದುರಿದ ಮಾತುಕೋಪವಾರಿದಾಗ ಅಪರೂಪಕ್ಕೊಂದು ನಗುದೂರ ನಿಂತ ಬಾನಲ್ಲಿ ಮಿಂಚಂತೆಆಲಿ ಕಲ್ಲುಗಳ ಕಲ್ಲೆಂದರಾದೀತೆಧರೆ ತಬ್ಬಿದೊಡೆ ನೀರಾದಂತೆಪ್ರೀತಿ ಹೊನಲು ಹರಿವ ಬಾ ಇನಿಯ *************************

ಪ್ರೀತಿ ಹೊನಲು Read Post »

ಕಾವ್ಯಯಾನ

ಕಡಲು ಕರೆದ ಗಳಿಗೆ

ಕವಿತೆ ಕಡಲು ಕರೆದ ಗಳಿಗೆ ಪ್ರೇಮಶೇಖರ ಕಡಲ ತಡಿಯಲ್ಲೊಂದು ಗುಡಿಯ ಕಂಡುಮಿಂದು ಮಡಿಯಾಗಿ ದರ್ಶನಕ್ಕೆಂದುನಡೆದರೆಗುಡಿಯಲ್ಲಿ ದೇವತೆಇರಲಿಲ್ಲ. ಮರಳಲ್ಲಿ ದಿಕ್ಕುಮರೆತು ಕಾಲಾಡಿಸಿ,ಬೊಗಸೆ ತುಂಬಶಂಖಚಿಪ್ಪಿ ಆಯ್ದು,ಪುಪ್ಪುಸ ಪೂರ್ತಿಪಡುವಣದ ಗಾಳಿಯೆಳೆದು,ಕಣ್ಣತುಂಬಾ ನೀಲಿನೀಲಿಕಡಲನು ಆಹ್ವಾನಿಸಹೊರಟರೆಅಲ್ಲಿ ಕಂಡಳು ಅವಳು. ಮುಂಗುರುಳ ಹಾರಲು ಬಿಟ್ಟುಸೆರಗಿಗೂ ಸ್ವಾತಂತ್ರ್ಯ ಕೊಟ್ಟು,ಜತೆಗೆ ಮನಕೂ ರೆಕ್ಕೆ ಕಟ್ಟಿ,ಎತ್ತಿಕೋಎಂದು ಕಾಲಪ್ಪಿದ ಅಲೆಗಳಿಗೆಕವನ ಜೋಗುಳದ ಗುಟುಕು ಕೊಡುತ್ತಲೇಕಡಲಿಗೆ ಹಾಯಿಯೇರಿಸಿಯಾನ ಹೊರಡುವಸನ್ನಾಹದಲ್ಲಿದ್ದಳು.ನನಗೆ ದೇವತೆ ಸಿಕ್ಕಿದ್ದಳು. ಶತಶತಮಾನಗಳಿಗೊಮ್ಮೆ ಬರುವಸುಮುಹೂರ್ತ ಅದು.ಗಡಬಡಿಸಿ ಎದೆಗೂಡಲ್ಲಿ ಗುಡಿಕಟ್ಟಿ ದೇವತೆಯನುಪ್ರತಿಷ್ಟಾಪಿಸಿಬಿಟ್ಟೆ. ಇಂದು ನನ್ನೆದೆಯೊಂದುಅಗಾಧ ಕಡಲು,ಕಡಲಲ್ಲೊಂದುಬೆಳ್ಳನ್ನ ಬಿಳೀ ಹಾಯಿದೋಣಿ,ದೋಣಿಯಲ್ಲಿ ದೇವತೆ. ನನ್ನ ಉಸಿರೀಗ ಅನುದಿನವೂ ಅನಂತಕಾವ್ಯಯಾನ. ಪ್ರೇಮಶೇಖರ

ಕಡಲು ಕರೆದ ಗಳಿಗೆ Read Post »

ಕಾವ್ಯಯಾನ

ಮುಗಿಯದ ಪಯಣ

ಕವಿತೆ ಮುಗಿಯದ ಪಯಣ ವೀಣಾರಮೇಶ್ ಸಾವೇ ಕಾಡದಿರು ನನ್ನಮುಗಿದಿಲ್ಲ ಇನ್ನೂ ಬದುಕುವ ಹಲವುಕಾರಣ ಮನಸ್ಸಿಗಿದೆ ಇನ್ನೂ ದ್ವಂದ್ವಅರ್ಥ ಆಗದಮುಗ್ದ ಮನಸ್ಸುಗಳ ಜೊತೆ ಯುದ್ಧ ,.ಆಸೆ ಆಮಿಷಗಳಕತ್ತು ಹಿಸುಕಿ ಕಟ್ಟಬೇಕಿದೆನನ್ನ ಸೌಧಹೇಗೆ ಮುಗಿಯುವುದುನನ್ನ ಪಯಣನನ್ನ ಜೇಬಿನ್ನೂ ಭಣ ಭಣ ತಡಕಾಡಿದರೂ ಸಿಗದು ಕಾಂಚಾಣ ಪಾಪ ಪ್ರಜ್ಞೆಗಳು ಸುತ್ತುವರಿದು,ಮೋಸ,ಭ್ರಷ್ಟಾಚಾರ ದಿಕ್ಕು ತಪ್ಪಿಸಿಭಾವನೆಗಳೆಲ್ಲ ಸತ್ತು ಹೆಣವಾಗಿದೆ ನೀನು ಮತ್ತೆ ಕಾಡದಿರುಸಾವೇ, ನಾನಿಲ್ಲಿ ಸುಟ್ಟುಕರಕಲಾಗಿದ್ದೀನಿನನ್ನ ದಾರಿಗೆ ಅಡ್ಡ ಬರಬೇಡ ಎಲ್ಲದಕ್ಕೂಹೇಳುವೆ ಸಕಾರಣ

ಮುಗಿಯದ ಪಯಣ Read Post »

ಕಾವ್ಯಯಾನ

ಸ್ಮಿತಾಭಟ್ ಕಾವ್ಯಗುಚ್ಛ

ಸ್ಮಿತಾಭಟ್ ಕಾವ್ಯಗುಚ್ಛ ನಿರಂತರ ಈಗೀಗ ಒಲವಾಗುವದಿಲ್ಲಅವನ ಮೇಲೆಮುನಿಸು ಕೂಡಾ,, ಹೇಗಿದ್ದೀ ಎಂದು ಕೇಳದಿರೂಕೇಳದೇ ಹೋದರೂಅಂತಹ ವ್ಯತ್ಯಾಸವೇನಿಲ್ಲ, ಸಿಡಿಮಿಡಿ ಬಹಳ-ದಿನ ಉಳಿಯುವುದಿಲ್ಲಪ್ರೀತಿ ಆಗಾಗ-ಹುಟ್ಟಿದ್ದು ಗೊತ್ತೇ ಆಗುವದಿಲ್ಲ. ಇಣುಕಿಣುಕಿ ನೋಡುವ ರಸಿಕತೆಯಿಲ್ಲತಿರುಗಿ ನೋಡುವ ಆತುರವೂ ಇಲ್ಲಉಪಸ್ಥಿತಿ ಅನುಪಸ್ಥಿತಿಯಲ್ಲಿಬದಲಾವಣೆ ಇಲ್ಲ. ಎತ್ತಿಟ್ಟ ಸಾಲೊಂದುಓದದೇ ಹೋಗುತ್ತಾನವ,ಬರೆಯದೇ ಇಟ್ಟ ಹಾಡಿಗೆರಾಗ ಹುಡುಕಿ ಗುನುಗಿಕೊಳ್ಳುವಾಗಕದ್ದು ಕೇಳುವ ನವಿರುಅರಿತೂ ಅರಿಯದೇ ಆತುಕೊಳ್ಳುವ ಬೆರಗು ನೀ ನನ್ನೊಳಗಿರುವದಕ್ಕೆನಾ ನಿನ್ನೊಳಗಿರುವದಕ್ಕೆಸಾಕ್ಷಿ ಆಗಾಗ ಸಿಗುತ್ತದೆಮತ್ತದು ಅಧಿಕಾರವೂಮಾತೊಗೆದು ಹೋಗುವಾಗ ಸಣ್ಣ ಮೌನಮರಳಿ ಬರುವಾಗ ಎಲ್ಲ ದಮನ ಸವೆದ ದಾರಿಯಲೂ ಗರಿಕೆತಲೆಯೆತ್ತುತ್ತಲೇ ಇರುತ್ತದೆ.ಸಂಪೂರ್ಣ ಸಮ್ಮೋಹನಗೊಂಡ ಹಾಡೊಂದುಆಗಾಗ ಅಪರಿಚಿತವಾಗುತ್ತಲೇ ಇರುತ್ತದೆ ನೋವುಗಳಿಗೆ ಒಡ್ಡಿಕೊಂಡಷ್ಟೂಗಟ್ಟಿಯಾಗುತ್ತೇವೆಂಬುದುನಾವೇ ಗೀಚಿದ ಬರಹಕ್ಕೆ ಶರಾ ಬರೆದಂತೆ. ಎಂದೂ ಮುಗಿಯದ ನರಳಿಕೆಗೆಅಳುವ ಮನಸಿಗೂ ಸಣ್ಣ ಅಸಹ‌ನೆಸಹಿಸಿದಷ್ಟೂ ಸಹನೆ ಜಾಸ್ತಿ ಹೌದುಸೀದು ಹೋಗಿದ್ದು ಮಾತ್ರ ಮನಸು.. ಶಾಂತ ಕೊಳದಲಿ ಕಲ್ಲೊಗೆದುಇಣುಕುವ ಪ್ರವೃತ್ತಿ ಇಂದು ನಿನ್ನೆಯದಲ್ಲ.ಮೌನ ಕೊಲ್ಲುವ ಹತ್ಯಾರ;ಮಾತು ಇರಿಯುವ ಹತ್ಯಾರ; ಹೂತಿಟ್ಟ ಕನಸಿಗೆ ಕಾಮನಬಿಲ್ಲು-ಕಟ್ಟುವಾಗ ದಟ್ಟ ಮೋಡ;ಸಿಗದ ನಕ್ಷತ್ರಕ್ಕೆ ದಿನವೂ ಎಣಿಕೆ,ಬಾವಿಯಲಿ ಬಿದ್ದ ಚಂದ್ರನಿಗೆ ಮುಗಿಯದ ಹರಕೆ. ಎತ್ತಿಟ್ಟುಕೊಂಡಿದ್ದೆಲ್ಲ ಆಪತ್ತಿನೊಳಗಿಲ್ಲ.ಆಪ್ತಭಾವದೊಳಗೆ ಬರದೇ ಹೋದದ್ದು!?ಸಹಿಸಿಕೊಂಡಿದ್ದೂ ಸಹಿತವಲ್ಲ.ಅಳತೆಗೋಲೇ ಇಲ್ಲದ ಅನಾದರಚುಕ್ಕಿ ಇಟ್ಟಾಗಲೇ ಮುಗಿದು ಬಿಡಬೇಕು ಸಾಲು. ಮುಳ್ಳು ಕಿತ್ತಮೇಲೂ ಚುಚ್ಚುವ ನೋವು,ಬೇಕಂತಲೇ ಹಾಕಿಸಿಕೊಂಡ ಹಚ್ಚೆ,ಅಳಿದೂ ಉಳುಯುವ ತೊಳಲಾಟಕೊಡವಿಕೊಳ್ಳಲೂ ಒಂದು ಘಟ್ಟಿತನ ಬೇಕು.. ಕೂಡುವ ದಾರಿ* ವಿಶಾಲವಾಗಿ ಹರಡಿದ ಮರದ ಬುಡದಲ್ಲಿದಾರಿಗಳು ಸಂದಿಸುತ್ತಿದ್ದವು.ನಿತ್ಯ ಬರುವವರೂ ಮರದ ಸುತ್ತ ಕುಳಿತುದಣಿವಾರಿಸಿಕೊಂಡು ಮುಂದುವರಿದುಸಾಗುತ್ತಿತ್ತು ದಾರಿ. ಎಷ್ಟೊಂದು ಸಮಸ್ಯೆ ಗಳನ್ನು ಕೇಳುತ್ತಿತ್ತುಆ ಮರ ಮತ್ತು ಅದಕ್ಕಾತುಕೊಂಡ ದಾರಿ! ನನಗಾಗಿ ಕಾಯುತ್ತಿದ್ದ ನೀನು.ನಿನಗಾಗಿಯೇ ಕಾಯುತ್ತಿದ್ದ ನಾನು.ಈ ಕೂಡುವ ದಾರಿಯಲಿ ಕೂಡದೇ ಸಾಗಿಸಂಧಿಸುವ ದಿನಗಳು ಹುಟ್ಟಿ ಕೊಳ್ಳಲೇ ಇಲ್ಲ!ಅಲ್ಲಿಯೇ ಹುಟ್ಟಿ ಗರಿ ಗೆದರಿದ ಭಾವಗಳಿಗೆಗೂಡಿನಲಿದ್ದ ಮೊಟ್ಟೆಯಷ್ಟು ಬೆಚ್ಚಗಿನ ಭಾವ. ಈಗಲ್ಲಿ ಕವಲುಗಳು ಬಹಳ ಒಡೆದಿದೆ.ಗುರುತುಗಳಿಗೆಲ್ಲ ತೇಪೆ ಹಾಕಿದಂತೆಮೆತ್ತಿಕೊಂಡ ಟಾರುಮರಕ್ಕೆ ಕೆತ್ತಿದ ಗೆರೆಗಳು ನಿಧಾನವಾಗಿ ಮುಚ್ಚಿತ್ತಿದೆ.ನೆಲಕ್ಕೆ ಅಂಟಿಕೊಂಡ ಮೊಟ್ಟೆಯ ಜೀವಸಂಧಿಸುವ ಕಾಲುದಾರಿಬೆನ್ನು ಮಾಡಿ ನಿಂತ ಭಾವವೃತ್ತವೊಂದು ಸುತ್ತುವರಿದುಎತ್ತ ಸಾಗಿದರೂಒಂದು ದಾರಿ ಚಾಚಿಕೊಳ್ಳುತ್ತದೆ. ಮತ್ತದರ ಗಮ್ಯನಡೆದೇ ಅರಿಯಬೇಕಿದೆ! ***************************************** , **************************************************

ಸ್ಮಿತಾಭಟ್ ಕಾವ್ಯಗುಚ್ಛ Read Post »

ಕಾವ್ಯಯಾನ

ತೇಜಾವತಿ ಕಾವ್ಯಗುಚ್ಚ

ತೇಜಾವತಿ ಕಾವ್ಯಗುಚ್ಚ ಕಾರಣ ಕೇಳದಿರಿ ನೀವು.. ! ಸಪ್ಪೆ ಮೊಗದ ಹಿಂದಿನ ಕಾರಣ ಕೆಳದಿರಿ ನೀವುದುಃಖದ ಕಟ್ಟೆಯೊಡೆದುನೋವಿನ ಕೋಡಿಹರಿದುಕಂಬನಿಯ ಪ್ರವಾಹ ಹರಿದೀತು….! ಕ್ಷೇಮ ಕುಶಲೋಪರಿಯ ವಿಚಾರಿಸದಿರಿ ನೀವುಮುಳ್ಳುಹಾಸಿನ ಮೇಲೆ ನಡೆದುಬೆಂಕಿಯ ಕೆನ್ನಾಲಿಗೆಯಲಿ ಸಿಲುಕಿಅರೆಬೆಂದಿರುವ ಪಾದಗಳಲಿ ನೆತ್ತರು ತುಳುಕಾಡೀತು…! ಭವಿಷ್ಯದ ಗುರಿಯೇನೆಂದು ಪ್ರಶ್ನಿಸದಿರಿ ನೀವುತಮದ ಕೂಪದಲಿ ಮಿಂದುಕಣ್ಣೆದುರು ಹರಿದಾಡಿದ ನೆರಳು ಕಂಡುಮನಸು ಮತಿಭ್ರಮಣೆಗೆ ಒಳಗಾದೀತು.. ! ಕಲ್ಪನೆಯಾಚೆಗಿನ ವಾಸ್ತವವ ನೆನಪಿಸದಿರಿ ನೀವುಭರವಸೆಯ ಬೆಟ್ಟ ಕುಸಿದುನೆಮ್ಮದಿಯ ಕಣಿವೆ ಸವೆದುಕಂಡ ಕನಸುಗಳು ಕೊಚ್ಚಿ ಹೋದಾವು…! ಎಷ್ಟು ದಿನ ಅಂತ ಉಪ್ಪಿನಕಾಯಿ ಆಗಿರಲಿ ನಾನು? ಮೂಗಿಗೆ ಕಮ್ಮನೆ ಪರಿಮಳ ಬಂದೊಡನೆ ಬಾಯಲ್ಲಿ ನೀರೂರಿ ನಾಲಗೆ ಚಪ್ಪರಿಸಿ ನೆಕ್ಕುವರು…! ಉಪ್ಪಿನಕಾಯಿ ಊಟದ ರುಚಿಗಷ್ಟೇ ಹೊರತು ಊಟಕ್ಕಲ್ಲ..ಉಪ್ಪಿನಕಾಯಾಗಿ ನಾನಿಲ್ಲದಿದ್ದರೂ ಹೊಟ್ಟೆ ತುಂಬಾ ಉಣಬಹುದಲ್ಲದೆಊಟವೇ ಇಲ್ಲದಿದ್ದರೆ..?! ಉಪ್ಪಿನಕಾಯಾಗುವ ಕ್ಷಣಿಕ ಕೀರ್ತಿಗೆ ನಾನೇಕೆ ಭಾಜನವಾಗಲಿ..?ಒಪ್ಪತ್ತಿಗಾದರೂ ಊಟವಾಗಬೇಕು ನಾನುಉಂಡ ಕರುಳಿಗೆ ತೃಪ್ತಿ ನೀಡಬೇಕು ಬಹುಕಾಲದವರೆಗೆ. ರುಚಿಯೆಂದು ಅತಿಯಾಗಿ ಉಪ್ಪಿನಕಾಯನ್ನು ಸೇವಿಸಿದೆಯೋಬಿಪಿ ಏರುವುದು ಗ್ಯಾರಂಟಿ.ಜೊತೆಗೆ ಸರಣಿ ರೋಗರುಜಿನಗಳೂ ಫ್ರೀ.. ಬರಿದೇ ಊಟವಾದರೆಸ್ವಲ್ಪಮಟ್ಟಿಗಾದರೂ ಅರೋಗ್ಯ ವೃದ್ಧಿಸುವುದು ಮಿಂಚಿ ಮರೆಯಾಗುವ ಮಿಂಚುಹುಳಕ್ಕಿಂತಮಾಗಿದ ರಸಭರಿತ ಹಣ್ಣಾಗಬೇಕು ನಾನು..ನನ್ನ ಜೀವನ ಸಾರ್ಥಕವಾಗಬೇಕು ಖಗ ಮೃಗ ಹದ್ದು ಗಿಡುಗಗಳ ಕಾಟದ ಆರ್ಭಟದಲ್ಲಿಮಿಡಿಗಾಯಿ ಬಲಿಯುವುದಾದರೂ ಹೇಗೆ?ಹೌದು.. ನಾನೀಗ ಅವಿತು ಕೂರಲೇಬೇಕುಎಲೆಯ ಮರೆಯೊಳಗೆ ಅನಿವಾರ್ಯವಾಗಿ ಲೋಕಕ್ಕೆ ಕಣ್ಣಾಗಬೇಕಾದ ಹೆಣ್ಣಾಗಿರುವನಾನಂತೂ ಉಪ್ಪಿನಕಾಯಿ ಆಗಲಾರೆ ಬಿಡಿ..,ಹೂ ಹೀಚಾಗಿ ಕಾಯಾಗಿ ಬಲಿತುಮಾಗಿದ ಸತ್ವಯುತ ಹಣ್ಣಾಗಬಯಸುವೆರಸಪುರಿ ಮಾವು ನಾನು….. !

ತೇಜಾವತಿ ಕಾವ್ಯಗುಚ್ಚ Read Post »

You cannot copy content of this page

Scroll to Top