ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಅವರು-ಇವರು ಕೆ.ಎ. ಎಂ. ಅನ್ಸಾರಿ ಮುಸ್ಸಂಜೆಯ ಹೊತ್ತುಮನೆಯತ್ತಹೆಜ್ಜೆಯಿಡಲುಮಡದಿಯಬಾಡಿದ ಮುಖ ದರ್ಶನ… ಗೊತ್ತಾ ಇವರು ಇನ್ನಿಲ್ಲವಾದರಂತೆ…ನಾನುಇನ್ನಾ ಲಿಲ್ಲಾಹ್.. ಎನ್ನುವಾಗಮೊಗದಲ್ಲಿ ನಗುವ ಕಂಡ ಅವಳು…ನಗಬಾರದೆಂದಳು… ಒಂದೆರಡು ವರುಷಗಳ ಹಿಂದೆಇವರು ಅವರನ್ನುಕೊಂದಿ ದ್ದರು..ಸಾವಿಗೆ ಸಂಭ್ರಮಿಸಬಾರದು.. ದಫನ ವಾಗಿರಬಹುದೇ..ನಾ ಕೇಳಿದ ಪ್ರಶ್ನೆ..ಹೌದು. ಈಗ ಮುಗಿದಿರಬಹುದೆನುವಉತ್ತರ.. ಇವರು-ಅವರುಇಬ್ಬರೂ ಊರಿನವರು ..ಅದೇನೋ ಜಗಳ ತಾರಕಕ್ಕೇರಿದಾಗಇರಿತದಿಂದ ಅವರುಪರಲೋಕ ತಲುಪಿದ್ದರು..ಇಂದು ಇವರ ಸರದಿ.. ಮೆಲ್ಲನೆ ಮಸೀದಿಯತ್ತ ಹೆಜ್ಜೆ ಹಾಕಿದೆ..ಪಕ್ಕದಲೇ ಖಬರಸ್ಥಾನ.ಗುಂಪು ಕಟ್ಟಿ ನಡೆದ ಇವರುಒಬ್ಬಂಟಿ ಮಲಗಿದ್ದರು..ಹೊತ್ತೊಯ್ದವರು ಮಣ್ಣು ಮಾಡಿಮರಳಿದ್ದರು.. ಬಡ-ಸಿರಿವಂತ ರೆಲ್ಲರೂಮಲಗುವ ತಾಣವಿದು..ಇವರೀಗ ಒಬ್ಬಂಟಿ..ಸುಮ್ಮನೇ ಪಕ್ಕದಲಿ ಯಾರು ಮಲಗಿರುವುದೆಂದುಕುತೂಹಲದಿ ನೋಡಿದೆ… ಹೌದು..ಪಕ್ಕದಲಿ ಅವರ ಹೆಸರು ಕೆತ್ತಿದ ಕಲ್ಲುನಗುವಂತೆ ಕಾಣಿಸಿತು..ಅಂದಿನ ಶತ್ರುಗಳು ಇಂದುಅಕ್ಕ-ಪಕ್ಕದಲಿ ಮಲಗಿದ್ದರು ..!!! *****************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬರೆಯದಿರಲಾರೆ…. ನಾಗರಾಜ ಹರಪನಹಳ್ಳಿ ಅಕ್ಷರಗಳು ಆತ್ಮಹತ್ಯೆ ಮಾಡಿಕೊಂಡಿವೆಕೆಲವರಿಗೆ ಮಾರಾಟವಾಗಿವೆ ಹಸಿ ಮಾಂಸಲ ದಂಧೆಗೆಗೊತ್ತಾ ನಿನಗೆ?ಕೆಲವೆಡೆ ಫತ್ವಾ ಇದೆ ಬೆಳಕಿಗೆ ಇನ್ನೇನಾಗಬಹುದು??ಪನ್ಸಾರೆ, ಕಲಬುರ್ಗಿ, ಗೌರಿ ಕೊಂದ ನಾಡಿನಲ್ಲಿ??ಬರೆವ ಕೈಗಳ,ನಿಜದ ಮಾತಿಗೆ ಬೀಗ ಜಡಿದ ಮೇಲೆ ??ಕೊಲೆಯಾಗಿದೆ ಅಭಿವ್ಯಕ್ತಿ! ಗೊತ್ತಾ ನಿನಗೆ ??ಅಮಾಸ, ಠೊಣ್ಣಿಯರ ಹಸಿವು ಹಿಂಗಿಲ್ಲಸಾಕವ್ವ ಬದುಕಿನ ಜಂಜಾಟ ನಿಂತಿಲ್ಲ; ಹರಕು ಸೀರೆ ,ಮುರಿದ ಮನೆ ಕಟ್ಟಲಾಗಿಲ್ಲಐತ ಪೀಂಚಲು ಬದುಕ ಕಟ್ಟಲು ಅಲೆದಾಡುತ್ತಿದ್ದಾರೆಚೋಮುನ ಭೂಮಿ ಹೊಂದುವ ಕನಸು ಕನಸಾಗಿಯೇ ಇದೆ…ನಾಡದೊರೆಯ ಕಣ್ಣು ಬದಲಾಗಿಲ್ಲ ಹೀಗಿರುವಾಗ…ನನಗೆ ನಾಚಿಕೆಯಾಗುತ್ತದೆಮಳೆ ನದಿ ಕಾಡು ಬೆಟ್ಟ ಕಡಲು ದಂಡೆ ಕಾಮನಬಿಲ್ಲನ ಬಗ್ಗೆ ಕವಿತೆ ಬರೆದದ್ದಕ್ಕೆ… ಇನ್ನು ಬರೆಯದಿರಲಾರೆ ಮನುಷ್ಯರ ಸಂಚುಗಳ ಬಗ್ಗೆಆತ್ಮವಂಚನೆಗಳ ಬಗ್ಗೆಹಸಿದವರ ಬಗ್ಗೆಬರೆಯದೇ ಇರಲಾರೆ ಹಾಗೆ ಬರೆಯದೇ ನಾಮೌನಿಯಾದರೆ ; ಅಕ್ಷರಗಳ ಯಜಮಾನಿಕೆಗೆ ಒತ್ತೆ ಇಡದೆಅಕ್ಷರಗಳ ಜೊತೆ ಬದುಕುತ್ತೇನೆ‌ಇಲ್ಲವೇ …… *****************************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಭಾಗೆಪಲ್ಲಿ ಕೃಷ್ಣಮೂರ್ತಿ ನೀ ದರ್ಷನಕೆ ಸಿಗದೆ ಕಾಡಿ ಕಾಡಿ ನೋಯಿಸುವೆನಿನ್ನ ಭಾವ ಚಿತ್ರವ ನೀಡದೆ ಕಾಡಿ ನೋಯಿಸುವೆ ನಮ್ಮ ಅಗಲಿಕೆ ಇಷ್ಟು ಧೀರ್ಘ ಕಾಲ ಆಗಿರುವಾಗಕನಸಲೂ ಅಪ್ಪಲು ಸಿಗದೆ ಹಿಂಸಿಸಿ ನೋಯಿಸುವೆ ನಮ್ಮ ಪ್ರೀತಿಯ ವಿಷಯ ಎಷ್ಟು ಗೋಪ್ಯ ವೆನೆನನ್ನ ಅಂತಿಮ ಕ್ಷಣವೂ ಅರಿಯದೆ ಬಹಳ ನೋಯಿಸುವೆ ಬೇರ್ಪಡಿಕೆಯಲಿ ನಮ್ಮ ಪ್ರೀತಿ ಇಷ್ಟು ಗಾಢವಾಗಿರೆಸೇರ್ಪಡಿಕಯ ಊಹೆ ಇದ್ದೂ ಹೀಗೇಕೆ ನೋಯಿಸುವೆ ಯಾವುದಾದರೂ ಬಹನೇ ಹುಡುಕಿ ಭೇಟಿಯಾಗು ಬಾಸುಮ್ಮನೆ ಹೆದರಿ ನೀನೂ ನೊಂದು ನನ್ನನೂ ನೋಯಿಸುವೆ ಕಾಲಕೂಡಿ ಬರಬೇಕೆಂದು ಕಾರಣ ಹೇಳುತ ‘ಮಂಕೇ ‘ಕೈಲಿರುವ ಅದ್ಭುತ ಕ್ಷಣ ಕಳೆದು ವೃಥಾ ನೋಯಿಸುವೆ. *************************

ಗಝಲ್ Read Post »

ಕಾವ್ಯಯಾನ

ಗಮ್ಯದಾಚೆ

ಕವಿತೆ ಗಮ್ಯದಾಚೆ ವಿಜಯಶ್ರೀ ಹಾಲಾಡಿ ಧೂಪ. ಹಿಡಿದು ಊರಿಡೀಘಮಲು ಹತ್ತಿಸುತ್ತಅಲೆವ ಅವಳಕೋಮಲ ಪಾದಕ್ಕೆತುಂಬು ಹೆರಳ ಗಂಧಕ್ಕೆಜೀವವಿದೆ. ….ಮಣ್ಣಿನಂತೆ ನೀರಿನಂತೆಕಡಲು -ಗಾಳಿಯಂತೆ ನಾರಿನ ಬೇರು ಅರೆಯುತ್ತಅರೆಮುಚ್ಚಿದ ಕಣ್ಣೆವೆಆಳದ ಹೊಳಪಿನೊಂದಿಗೆಮಾತಿಗಿಳಿಯುತ್ತಾಳೆತುಟಿ ಲಘು ಕಂಪಿಸುತ್ತವೆಅವಳ ಮೈಮಾಟಕ್ಕೆಚಿರ ಯೌವನಕ್ಕೆಮಿಂಚುಹುಳುಗಳ ಮಾಲೆ-ಯೇ ಕಾಣ್ಕೆಯಾಗುತ್ತದೆ. ಸಂಜೆಸೂರ್ಯನ ಬೆವರೊರೆಸಿಮನೆಗೆ ಹೆಜ್ಜೆಹಾಕುವ ನನ್ನಕಂಡು ಅವಳ ಕಾಲ್ಗೆಜ್ಜೆನಸು ಬಿರಿಯುತ್ತವೆಗುಡಾರದೊಳಗಿಂದ ತುಸುಬಾಗಿದ ಅವಳ ಸ್ಪರ್ಶಕ್ಕೆದಿನವೂ ಹಾತೊರೆಯುತ್ತೇನೆಗುನುಗಿಕೊಳ್ಳುವ ಹಾಡೆಂಬನೀರವಕ್ಕೆ ಪದವಾಗುತ್ತೇನೆ‘ಲಾಟೀನು ಬೆಳಗುವುದೇಕೆಇವಳೇ ಇಲ್ಲವೇ ‘ ಎಂದುಫಕ್ಕನೆ ತಿರುಗುವಾಗೊಮ್ಮೆಗುಡುಗುಡಿಯ ಸೇದಿನಿರುಮ್ಮಳ ಹೀರುತ್ತಾಳೆಒದ್ದೆಮಳೆಯಾದ ನಾನುಛತ್ರಿ ಕೊಡವುತ್ತ ಕೈಚಾಚಿದರೆ ತುಸುವೇನಕ್ಕುಬಿಡುತ್ತಾಳೆ.ಡೇರೆಯೊಳಗಿನ ಮಿಶ್ರಘಮಕ್ಕೆ ಸೋತು ಅವಳಅಲೆ ಅಲೆ ಸೆರಗ ಚುಂಗನ್ನು ಸೋಕಿ ಬೆರಳುಹಿಂತೆಗೆಯುತ್ತೇನೆ …ನಿಡಿದು ಉಸಿರಬಿಸಿಗೆ ಬೆಚ್ಚುತ್ತ ! ದಿನವೊಂದು ಬರುತ್ತದೆಹಿಡಿ ಗಂಟು ಇಟ್ಟಿದ್ದೇನೆಹೂವಿನಾಚೆಕಣಿವೆಯಾಚೆಅವಳ ಜೊತೆಪಯಣಿಸಿಯೇತೀರುತ್ತೇನೆ ! *********************************************************** ಚಿತ್ರಕೃಪೆ:ವಿಜಯಶ್ರೀ ಹಾಲಾಡಿ

ಗಮ್ಯದಾಚೆ Read Post »

ಕಾವ್ಯಯಾನ

ಕಾವ್ಯಯಾನ

ಅಳುತ್ತಿರಬೇಕು ಅವನು! ಪುರುಷೋತ್ತಮ ಭಟ್ ಕೆ ನಿಯಾಮಕನೆಲ್ಲಿದ್ದಾನೆ,ತಿರುಗಿನಿಂತಿದ್ದಾನೆಬೆನ್ನು ತೋರಿಸಿದ್ದಾನೆತನ್ನದೇ ಸೃಷ್ಟಿಯ ದುರಂತ ಕಾಣಲಾಗದೆಅಳುತ್ತಿರಬೇಕು ಪಾಪ ತುಂಬಿದ ಕೊಡವ ಏನುಮಾಡೋಣವೆಂದು/ ಆಲಯಗಳ ಕಲ್ಲು-ಸಂದುಗಳಲ್ಲಿಕೆತ್ತಿದ ಕೆಡವಿದ ಹೆಸರುಗಳೆಷ್ಟುಹಾಸಿಗೆಗೆಳೆದು ಚೀರಾಡಿಸಿ ಗೋಳಾಡಿಸಿದ ಕಥೆಗಳೆಷ್ಟುಪರರ ಕಿಸೆಯೊಳಗಿನ ದ್ರವ್ಯದಾಸೆಗೆ ಧಮನಿಯ ಕೊಯ್ದವರೆಷ್ಟುಅಳುತ್ತಿರಬೇಕು ಬೆನ್ನು ಕಾಣಿಸುತ್ತಿದೆ ಬೆಣ್ಣೆಯಲಾಡಿದವನ/ ಕವಾಟುಗಳೊಳಗೆ ಪೇರಿಸಿಟ್ಟ ಹೊತ್ತಗೆಗಳಿಗೆ ತುಂಬಿದೆ ಧೂಳುತುಳುಕುವ ಮಾನಪತ್ರಗಳನ್ನು ಆಪೋಶನಗೈಯ್ಯುತ್ತಿವೆ ಗೆದ್ದಲುವಿದ್ಯಯಾಚೆಯ ಬುದ್ದಿ, ವಿವೇಕ ಪಾತಾಳಕೆಹೆಣ್ಣು-ಹೆಸರುಗಳ ಬಾಂಡಲೆಯ ಹೊತ್ತು ಸಾಗುತ್ತೇವೆಅಳುತ್ತಿರಬೇಕು ಬೆನ್ನಷ್ಟೇ ಕಾಣಿಸುತ್ತಿದೆನವಿಲಗರಿ ಮುರಿದು ಮುಪ್ಪಾಗಿದೆ/ ಪೂಜೆ-ಪ್ರಾರ್ಥನೆ ಆಡಂಬರಒಳಗೆಲ್ಲ ಕೊಳಕು-ದಿಗಂಬರಪ್ರಚಾರದ ಪ್ರವಚನಹುಡುಕುತ್ತಿದ್ದಾನೆ ತನ್ನಸೃಷ್ಟಿಯಊನ ಕಳೆಯಲು ದಾರಿ ಮಹಾಮಳೆ, ಕೇಳರಿದ ವ್ಯಾದಿ, ಲೋಹದ ಹಕ್ಕಿ ಇನ್ನೇನೋ/ ****************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ತೆರವುಗೊಳಿಸಿದ್ದು ಡಾ.ಗೋವಿಂದಹೆಗಡೆ ಆ ವಿಶಾಲ ಮೂಲೆ ನಿವೇಶನವನ್ನುತೆರವುಗೊಳಿಸಲಾಯಿತುತ್ರಿಭುಜದಂತಿರುವ ಸೈಟು. ಎರಡು ಕಡೆರಸ್ತೆ. ವಿಶಾಲ ಹಳೆಯ ಮನೆಒತ್ತಾಗಿ ಬೆಳೆದ ಹಲವು ಗಿಡ ಬಳ್ಳಿಹೂವು ಚಿಗುರು ಮೊದಲುಮಲ್ಲಿಗೆ ಹಂಬು ನಂದಿಬಟ್ಟಲುಗುಲಾಬಿ ದಾಸವಾಳ ಕ್ರೋಟನ್‌ಗಳಿಗೆಮುಕ್ತಿ ಸಿಕ್ಕಿದ್ದು. ಮರುದಿನ ಮನೆ ಬಿದ್ದುಗುಪ್ಪೆ ಮಣ್ಣು, ಸೊಟ್ಟ ತಂತಿಗಳಅಸ್ಥಿಪಂಜರ. ನಾಲ್ಕು ದಿನ ಕಳೆದಾಗ ಹಸಿರೇ ಮೈಯಾಗಿದ್ದಮಾವು ಮಾಯ. ಹಬ್ಬದ ಈ ದಿನಗಳಲ್ಲಿಪುಕ್ಕಟೆ ಸೊಪ್ಪು ಸಿಕ್ಕ ಸಂಭ್ರಮದ ನೆರೆ.ಅವರಿವರ ತೋರಣ, ಮಂಟಪಗಳಲ್ಲಿ ಖುಷಿಸಿರಬಹುದೇಮಾವಿನ ಚಿಗುರು,ಬಾಡುವ ಮುನ್ನ ಇಂದುಅಂಚುಗಳಲ್ಲಿ ಕಾವಲಿಗೆ ಎಂಬಂತೆನಿಂತಿದ್ದ ಹತ್ತಾರುತೆಂಗಿನ ಮರಗಳು ನೆಲ ಕಂಡವುಅಳತೆ ಮಾಡಿ ಸಮವಾದ ತುಂಡು-ಗಳಾಗಿ ಅವನ್ನು ಕತ್ತರಿಸಲಾಗಿತ್ತು ಹೀಗೆ ಇಂಚಿಂಚೂ ತುಂಬಿದ್ದೆಲ್ಲಖಾಲಿಯಾದ ಅಲ್ಲಿ ಈಗ ಉಳಿದದ್ದು-ಗೇಟಿನ ಒಂದೇ ರೆಕ್ಕೆಒಳಗೆ ಅಷ್ಟು ದೂರದಲ್ಲಿಒಂಟಿ ನಿಂತ, ಗಿಡವಿಲ್ಲದ ಬೋಳು ತುಳಸೀಕಟ್ಟೆ *****************************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರೇಮಾಸಂ ಎದೆಯ ಗೂಡಲಿ ಅವಿತಿರು ಕಾಣದಂತೆ ಯಾರಿಗೂಸಣ್ಣದನಿಲಿ ಹಾಡುತಿರು ಕೇಳಿಸದಂತೆ ಯಾರಿಗೂ ಒಪ್ಪಿದ ಮನಗಳ ಆಳವನು ಇವರಾರು ಅರಿಯರುಕಣ್ಣ ಸನ್ನೆಯಲಿ ಕರೆಯದಿರು ಎಂದಿನಂತೆ ಯಾರಿಗೂ ಲೋಕವು ಹುಚ್ಚನೆಂದು ಕೂಗಿದರೂ ಕೊರಗದಿರುಬೆಸುಗೆಯಲಿ ಹೆದರದಿರು ಬೆಪ್ಪನಂತೆ ಯಾರಿಗೂ ಇಂದು ಇರುವಿಕೆಯನು ತೋರಬೇಕಾಗಿದೆ ಜಗಕೆಬಂಧನದಲಿ ನೀ ಬೆಳಗುತಿರು ಸುಡದಂತೆ ಯಾರಿಗೂ ಬಳಲದಿರು ಪ್ರೇಮವಿರದ ಬಿರುಸಿನ ಗಡಸು ನುಡಿಗಳಿಗೆತಾಯಿ ಮಡಿಲಲಿ ಒರಗಿರು ಬೇಸರಿಸದಂತೆ ಯಾರಿಗೂ *****************

ಗಝಲ್ Read Post »

ಕಾವ್ಯಯಾನ

ಕಾವ್ಯಯಾನ

ಭೂಕ೦ಪವಾದ ಮೇಲೆ ಮೇಗರವಳ್ಳಿ ರಮೇಶ್ ಭೂಕ೦ಪವೊ೦ದು ಸ೦ಭವಿಸಿಊರಿಗೆ ಊರೇ ಅವಶೇಷ ವಾದಾಗಹಾಗೇ ಬಿಡಲಾಗುತ್ತದೆಯೆ?ಅಣಿಗೊಳಿಸಲೇ ಬೇಕು ಮತ್ತೆ. ಯದ್ವಾ ತದ್ವಾ ಬಿದ್ದಿರುವಇಟ್ಟಿಗೆ. ಕಬ್ಬಿಣದ ರಾಡುಗಳು, ಗರ್ಡರ್ ಗಳುಛಾವಣಿಯ ಸ್ಲ್ಯಾಬ್,ಮುರಿದ ಫ಼ರ್ನಿಚರ್ಗಳುಒಡೆದ ಕನ್ನಡಿಯ ಚೂರು, ಟೀವಿಪಾತ್ರೆ ಪಡಗ, ನುಜ್ಜುಗುಜ್ಜಾದ ಟ್ರ೦ಕು,ಹರಿದ ಮಣ್ಣಾದ ಬಟ್ಟೆ ಬರೆ,ಚೆಲ್ಲಿದ ಅನ್ನ, ರೊಟ್ಟಿ, ಬ್ರೆಡ್ಡುದೇವರ ಪಟಇವುಗಳ ಮಧ್ಯ ದಾರಿ ಮಾಡಿಕೊಳ್ಳುತ್ತಾಅವಶೇಷಗಳಡಿಯಲ್ಲಿ ಆಕ್ರ೦ದಿಸುತ್ತಿರುವವರನ್ನುನಿಧಾನಎತ್ತಿ ಹತ್ತಿರದ ಆಸ್ಪತ್ರೆಗೆ ಸೇರಿಸ ಬೇಕುಹೆಣಗಳನ್ನೆತ್ತಿ ಸ೦ಸ್ಕಾರ ಮಾಡ ಬೇಕು ಬೃಹತ್ ಯ೦ತ್ರಗಳನ್ನು ತ೦ದುಅವಶೇಷಗಳನ್ನೆಲ್ಲ ಎತ್ತಿಅಣಿಗೊಳಿಸ ಬೇಕು ಮತ್ತೆಹೊಸದಾಗಿ ಊರು ಕಟ್ಟಲು. ವಿನಾಶದ ಒಡಲಿ೦ದ ಮತ್ತೆಬದುಕು ಚಿಗುರಿಸಲು. **************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನುಡಿ ನಾಗರ ಅರುಣಾ ರಾವ್ ಮನುಜನ ಮುಖದಲ್ಲಿನಗೆಯ ಮುಖವಾಡಮರೆಮಾಚುವುದುದುಗುಡ, ದುಮ್ಮಾನಅಷ್ಟೇಕೆ ?ಅಸೂಯೆ ಅನುಮಾನ! ಮುಖವಾಡದ ಹಿಂದಿನ ಮನಅರಿಯದೇ ನಿಜವನ್ನ?ಕಣ್ಣು ಹೇಳದಿದ್ದೀತೇಎದೆಯ ಮಾತನ್ನ?ನಂಬಬಹುದೇ ನಿನ್ನನ್ನಓ ನಾಲಿಗೆಯೇ?ನುಡಿವೆ ನೀ ಏನನ್ನ?ನೀ ಸುಮ್ಮನಿದ್ದರೇನೆ ಚೆನ್ನ! ನಿನ್ನಿಂದ ನೋವುಂಡ ಮನನಯನದಲ್ಲಿ ತೋರೀತುತನ್ನ ನೋವನ್ನ|ಎಲುಬಿಲ್ಲದ ಜಿಹ್ವೆ ನೀನುಡಿದ ನುಡಿಯದುಗಾಯಪಡಿಸೀತು ಎನ್ನ! ಬಿಗಿತುಟಿಯ ದುಡಿವಂದುನೋವಪಡುವಂದು, ಎಂದೆಂದಮಾತಿನಲಿ ಹುಡುಗಿಹುದು ಸತ್ಯಬಿಗಿದ ತುಟಿ ತರಬಲ್ಲದು ಹಾಸಕಟು ಮಾತಿಗಾತಿಗದೆರಾಮಬಾಣ! *********************************

ಕಾವ್ಯಯಾನ Read Post »

You cannot copy content of this page

Scroll to Top