ಕಾವ್ಯಯಾನ
ಅವರು-ಇವರು ಕೆ.ಎ. ಎಂ. ಅನ್ಸಾರಿ ಮುಸ್ಸಂಜೆಯ ಹೊತ್ತುಮನೆಯತ್ತಹೆಜ್ಜೆಯಿಡಲುಮಡದಿಯಬಾಡಿದ ಮುಖ ದರ್ಶನ… ಗೊತ್ತಾ ಇವರು ಇನ್ನಿಲ್ಲವಾದರಂತೆ…ನಾನುಇನ್ನಾ ಲಿಲ್ಲಾಹ್.. ಎನ್ನುವಾಗಮೊಗದಲ್ಲಿ ನಗುವ ಕಂಡ ಅವಳು…ನಗಬಾರದೆಂದಳು… ಒಂದೆರಡು ವರುಷಗಳ ಹಿಂದೆಇವರು ಅವರನ್ನುಕೊಂದಿ ದ್ದರು..ಸಾವಿಗೆ ಸಂಭ್ರಮಿಸಬಾರದು.. ದಫನ ವಾಗಿರಬಹುದೇ..ನಾ ಕೇಳಿದ ಪ್ರಶ್ನೆ..ಹೌದು. ಈಗ ಮುಗಿದಿರಬಹುದೆನುವಉತ್ತರ.. ಇವರು-ಅವರುಇಬ್ಬರೂ ಊರಿನವರು ..ಅದೇನೋ ಜಗಳ ತಾರಕಕ್ಕೇರಿದಾಗಇರಿತದಿಂದ ಅವರುಪರಲೋಕ ತಲುಪಿದ್ದರು..ಇಂದು ಇವರ ಸರದಿ.. ಮೆಲ್ಲನೆ ಮಸೀದಿಯತ್ತ ಹೆಜ್ಜೆ ಹಾಕಿದೆ..ಪಕ್ಕದಲೇ ಖಬರಸ್ಥಾನ.ಗುಂಪು ಕಟ್ಟಿ ನಡೆದ ಇವರುಒಬ್ಬಂಟಿ ಮಲಗಿದ್ದರು..ಹೊತ್ತೊಯ್ದವರು ಮಣ್ಣು ಮಾಡಿಮರಳಿದ್ದರು.. ಬಡ-ಸಿರಿವಂತ ರೆಲ್ಲರೂಮಲಗುವ ತಾಣವಿದು..ಇವರೀಗ ಒಬ್ಬಂಟಿ..ಸುಮ್ಮನೇ ಪಕ್ಕದಲಿ ಯಾರು ಮಲಗಿರುವುದೆಂದುಕುತೂಹಲದಿ ನೋಡಿದೆ… ಹೌದು..ಪಕ್ಕದಲಿ ಅವರ ಹೆಸರು ಕೆತ್ತಿದ ಕಲ್ಲುನಗುವಂತೆ ಕಾಣಿಸಿತು..ಅಂದಿನ ಶತ್ರುಗಳು ಇಂದುಅಕ್ಕ-ಪಕ್ಕದಲಿ ಮಲಗಿದ್ದರು ..!!! *****************************









