ಕಾವ್ಯಯಾನ
ಅಳುತ್ತಿರಬೇಕು ಅವನು! ಪುರುಷೋತ್ತಮ ಭಟ್ ಕೆ ನಿಯಾಮಕನೆಲ್ಲಿದ್ದಾನೆ,ತಿರುಗಿನಿಂತಿದ್ದಾನೆಬೆನ್ನು ತೋರಿಸಿದ್ದಾನೆತನ್ನದೇ ಸೃಷ್ಟಿಯ ದುರಂತ ಕಾಣಲಾಗದೆಅಳುತ್ತಿರಬೇಕು ಪಾಪ ತುಂಬಿದ ಕೊಡವ ಏನುಮಾಡೋಣವೆಂದು/ ಆಲಯಗಳ ಕಲ್ಲು-ಸಂದುಗಳಲ್ಲಿಕೆತ್ತಿದ ಕೆಡವಿದ ಹೆಸರುಗಳೆಷ್ಟುಹಾಸಿಗೆಗೆಳೆದು ಚೀರಾಡಿಸಿ ಗೋಳಾಡಿಸಿದ ಕಥೆಗಳೆಷ್ಟುಪರರ ಕಿಸೆಯೊಳಗಿನ ದ್ರವ್ಯದಾಸೆಗೆ ಧಮನಿಯ ಕೊಯ್ದವರೆಷ್ಟುಅಳುತ್ತಿರಬೇಕು ಬೆನ್ನು ಕಾಣಿಸುತ್ತಿದೆ ಬೆಣ್ಣೆಯಲಾಡಿದವನ/ ಕವಾಟುಗಳೊಳಗೆ ಪೇರಿಸಿಟ್ಟ ಹೊತ್ತಗೆಗಳಿಗೆ ತುಂಬಿದೆ ಧೂಳುತುಳುಕುವ ಮಾನಪತ್ರಗಳನ್ನು ಆಪೋಶನಗೈಯ್ಯುತ್ತಿವೆ ಗೆದ್ದಲುವಿದ್ಯಯಾಚೆಯ ಬುದ್ದಿ, ವಿವೇಕ ಪಾತಾಳಕೆಹೆಣ್ಣು-ಹೆಸರುಗಳ ಬಾಂಡಲೆಯ ಹೊತ್ತು ಸಾಗುತ್ತೇವೆಅಳುತ್ತಿರಬೇಕು ಬೆನ್ನಷ್ಟೇ ಕಾಣಿಸುತ್ತಿದೆನವಿಲಗರಿ ಮುರಿದು ಮುಪ್ಪಾಗಿದೆ/ ಪೂಜೆ-ಪ್ರಾರ್ಥನೆ ಆಡಂಬರಒಳಗೆಲ್ಲ ಕೊಳಕು-ದಿಗಂಬರಪ್ರಚಾರದ ಪ್ರವಚನಹುಡುಕುತ್ತಿದ್ದಾನೆ ತನ್ನಸೃಷ್ಟಿಯಊನ ಕಳೆಯಲು ದಾರಿ ಮಹಾಮಳೆ, ಕೇಳರಿದ ವ್ಯಾದಿ, ಲೋಹದ ಹಕ್ಕಿ ಇನ್ನೇನೋ/ ****************************









