ಕಾವ್ಯಯಾನ
ನುಡಿ ನಾಗರ ಅರುಣಾ ರಾವ್ ಮನುಜನ ಮುಖದಲ್ಲಿನಗೆಯ ಮುಖವಾಡಮರೆಮಾಚುವುದುದುಗುಡ, ದುಮ್ಮಾನಅಷ್ಟೇಕೆ ?ಅಸೂಯೆ ಅನುಮಾನ! ಮುಖವಾಡದ ಹಿಂದಿನ ಮನಅರಿಯದೇ ನಿಜವನ್ನ?ಕಣ್ಣು ಹೇಳದಿದ್ದೀತೇಎದೆಯ ಮಾತನ್ನ?ನಂಬಬಹುದೇ ನಿನ್ನನ್ನಓ ನಾಲಿಗೆಯೇ?ನುಡಿವೆ ನೀ ಏನನ್ನ?ನೀ ಸುಮ್ಮನಿದ್ದರೇನೆ ಚೆನ್ನ! ನಿನ್ನಿಂದ ನೋವುಂಡ ಮನನಯನದಲ್ಲಿ ತೋರೀತುತನ್ನ ನೋವನ್ನ|ಎಲುಬಿಲ್ಲದ ಜಿಹ್ವೆ ನೀನುಡಿದ ನುಡಿಯದುಗಾಯಪಡಿಸೀತು ಎನ್ನ! ಬಿಗಿತುಟಿಯ ದುಡಿವಂದುನೋವಪಡುವಂದು, ಎಂದೆಂದಮಾತಿನಲಿ ಹುಡುಗಿಹುದು ಸತ್ಯಬಿಗಿದ ತುಟಿ ತರಬಲ್ಲದು ಹಾಸಕಟು ಮಾತಿಗಾತಿಗದೆರಾಮಬಾಣ! *********************************









