ವಾರದ ಕವಿತೆ
ಹುಡುಗ ನೀ ಸಾಯಬೇಕಿತ್ತು ಲಕ್ಷ್ಮೀ ಪಾಟೀಲ್ (ಶ್ರೀ ಕೆ ವಿ ಅಯ್ಯರ್ ಬರೆದಿರುವ “ರೂಪದರ್ಶಿ “ಕಾದಂಬರಿಯಲ್ಲಿ ಬರುವ ” ಆರ್ನೆಸ್ಟ್” ನನ್ನು ಕುರಿತ ಕವಿತೆಯಿದು) ಹೊಟ್ಟೆಯಲ್ಲೇ ಅಪ್ಪ ಅಮ್ಮರಿಗಾಗಿಗೋರಿಗರಸ ಎಬ್ಬುವಾಗ ಹಾಳಮಣ್ಣ ಹಾಸಿನಲ್ಲಿಭ್ರಮೆಯ ಬದುಕು ಬಿಕ್ಕುವ ಮುನ್ನಹುಡುಗ ನೀ ಸಾಯಬೇಕಿತ್ತು ಅಜ್ಜಿಯ ಪೊರೆವ ಬಾಂಧವ್ಯದಲ್ಲಿಬದುಕನ್ನು ಒದ್ದೆಯಾಗಿಸಿಕೊಳ್ಳುವಾಗಅವಳ ನೋವಿಗೆ ಬಾಲ ಕನಸುಗಳತೇಪೆ ಜೋಡಿಸುವಾಗ ದೂರ ದುರಂತ ಕಾಣದ ಮುನ್ನಹುಡುಗ ನೀ ಸಾಯಬೇಕಿತ್ತು ಕೈಯಾಡಿಸಿದ ಕೈಗೆ ಬಾಲ ಭಾವದ ಹಾಲು ಗೆಣ್ಣೆಅಪರೂಪದ ಬಾಲ ಯೇಸುವಿನ ವಿರಾಜತೆಮೈಕಲ್ ಏಂಜಲೋನ ದಿವ್ಯ ಅಪ್ಪುಗೆಯ ತಂಪೇಅಮರ ಶಿಲ್ಪಿಯ ನಿರೀಕ್ಷೆಯ ಕಕ್ಷೆ ಯಲ್ಲಿ ಅಪರಂಜಿಯಾದ ಪ್ಲಾರೆನ್ಸ್ ಪಟ್ಟಣದ ಜಾಜಿಯೇಸಂದ ಭಾಗ್ಯ ಸರಿದು ಹೋಗುವ ಮುನ್ನಹುಡುಗ ನೀ ಸಾಯಬೇಕಿತ್ತು ಒಡೆಯನರಮನೆಯಲ್ಲಿ ಸರ್ಪ ಪೀಠದ ಉತ್ತರಾದಿಕಾರ ವಿಸಂಚಿನ ಮಜಭೂತ ಅಮಲಿನಲ್ಲಿ ನಿನ್ನ ಕೌಮಾರ್ಯಯೌವ್ವನವೆಲ್ಲ ಜಾದುವಾಗುವ ಮುನ್ನಹುಡುಗ ನೀ ಸಾಯಬೇಕಿತ್ತು ಲೀಸಾ ನನ್ನೆಟ್ಟಿ ದಂಪತಿಗಳ ಆಸರೆಯಲ್ಲಿಹದುಳಿದ್ದೆ ಆ ಕ್ಷಣ ಕಾಲೋಂದು ಕೈಯೊಂದು ಕಡೆಎಳೆದು ಭೀಕರ ಆವಾಂತರಗಳಲ್ಲಿ ಸಿಗಿತಅದೇ ದಿವಾಳಿಯನ್ನು ಪಥ್ಯವೆಂದು ನುಂಗುವ ಮುನ್ನ ಹುಡುಗ ನೀ ಸಾಯಬೇಕಿತ್ತು ಹೆಗ್ಹೇಗೋ ತಿರುಗಾಡಿ ಗ್ಯಾರಿಬಾಲ್ಡಿಯ ವ್ಯಂಗ್ಯನಾಗಿ ಬದುಕ ಪರದೇಶಿಯಾದ ಹುಡುಗಜಗತ್ತು ಪ್ರೀತಿಸದ ನತದೃಷ್ಟ ತಲೆ ಎದೆ ಸೀಳಿದಜುದಾಸನ ಭಂಗಿಯಲ್ಲಿ ಮತ್ತದೇ ಮೈಕಲ್ ನಅಪೇಕ್ಷಿತ ಅನುವರ್ತಿ ಬಾಲಯೇಸುವಿಗೆ ರೂಪದರ್ಶಿ ಅರ್ನೆಸ್ಟ ಈಗ ಜುದಾಸನತಲೆಹಿಡುಕಕ್ಕೂ ಮಾದರಿ !ಜುದಾಸ್ ಅಲ್ಲನೆಂಬ ನಿರ್ಲಿಪ್ತತೆಮತ್ತದೇ ಹಸುಗೂಸಿನ ಮುಗ್ಧತೆನಿಂತ ನೆಲ ಬಿರಿದಂತೆ ಅಟ್ಟವೇ ಕುಸಿದಂತೆದೇವಶಿಲ್ಪಿಯ ಅಂಗೈಯಲ್ಲಿ ಜೀವಬಿಟ್ಟ ಮಗು“ಪಾಪದಿಂದ ದೂರವಿರು ಪಾಪಿಯಿಂದಲ್ಲ “ಏಸುವಿನ ದಿವ್ಯಧ್ವನಿ ಮೊಳಗುವ ಕಾಲ“ತಂದೆಯೇ ಈತ ಪಾಪದಿಂದ ದೂರ ನಿಷ್ಪಾಪಿ ಮುಗ್ದ ನಿನ್ನದೇ ರೂಪ ” ಅಮರಶಿಲ್ಪಿಯ ಪ್ರಾರ್ಥನೆ ಮೈಕಲ್ ತೊಡೆಯಲ್ಲೀಗ” ಶಿಲುಬೆಯ ಯೇಸು” ಸಮಾನರು ಸಾವಿನಲ್ಲೀಗಅದೆಂತಹುದೋ ಅಮರತ್ವ ದಿವ್ಯತ್ವದ ಸೆಳೆತ ಇತ್ತಿತ್ತಲಾಗಿ ಸಾಯಬಾರದೆಂದುಕೊಂಡಿದ್ದಹುಡುಗ ನೀ ಏನೇ ಹೇಳು…..ಸಾಯುವುದಕ್ಕಾಗಿಯೇ ಹುಟ್ಟಿದ್ದ ನೀನು ಸಾಯಲೇಬೇಕಾಗಿತ್ತು ಹುಡುಗ ನೀಸಾಯಲೇ ಬೇಕಾಗಿತ್ತುಘನಘೋರ ಬದುಕಿನಿದಿರಲ್ಲಿಸಾವೆಂಬುದೆಷ್ಟು ಘನ ಅರ್ನೆಸ್ಟ್ಏಸುವಿನಂತೆ ಮೈಕಲ್ ನಂತೆ ದಿವ್ಯಾತ್ಮನಾಗಲಿಲ್ಲಿಸಾಯಬೇಕಾಗಿತ್ತು ನೀನೀಗಅಮರನಾಗಬೇಕಾಗಿತ್ತು ************************









