ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕೆಂಪು ಐರಾವತ

ಕವಿತೆ ಡಾ.ಪ್ರೇಮಲತ ಬಿ.  ರೆಕ್ಕೆಬಿಚ್ಚಿ ಉಡ್ಡಯನಗೈಯ್ಯುವ ಮುನ್ನವೇ ಹಿಡಿಯಬೇಕೆಂದು ಓಡಿದೆ ಒರೆಸುತ್ತ ಹಣೆಯ ಮೇಲಿನ ಬೆವರು ಒಡಲ ತುಂಬುತ್ತ, ಹರಟೆಯೊಡೆಯುತ್ತ ಪುಕ್ಕವರಡಿ ವಿರಮಿಸಿ ನಿಂತಿತ್ತು ದೇದೀಪ್ಯಮಾನವಾದ  ಕೆಂಪು ಐರಾವತ ಏನೋ ಸಂಕಟ, ಬಿಟ್ಟು ಹೊರಟ ತವಕ ನನ್ನದಲ್ಲದ ಊರ, ಮೂರ್ತವಲ್ಲದ ಭಾವ ದಿನಕೊಂದು ಕೊನೆಕಟ್ಟಿ ಗಟ್ಟಿಯಾಗಿರದ ಅಳ್ಳಕ   ಒಂದೇ ಗಂಟೆ ಊರ ತಲುಪಲು ಒಂದೆರಡೇ ದಿನದ ಗಡುವು ಮತ್ತೆ ಮರಳಲು ನಿಟ್ಟುಸಿರಿಟ್ಟೆ ನಕ್ಕು..” ಎಲ್ಲ ಮರುಳು” ಯಾರೋ ಬಂದರು, ಯಾರೋ ಇಳಿದರು ಕಣ್ಣ ಮುಚ್ಚಿ ಕಿಟಗಿಗೊರಗಿ ಗುನುಗಿ ಹಾಡು ವಿದಾಯಗಳ ಮಾತು,ಬೈ ಬೈ ಟಾ..ಟಾ ಪ್ಲಾಸ್ಟಿಕ್ಕಿನ ಸರಬರ ನನ್ನದೇ ಸನಿಹ ಕಣ್ಬಿಟ್ಟರೆ ಸೇಬು ,ಕಿತ್ತಳೆ ,ಬಾಳೆ ಹಿಡಿದು  ಬಂದಿದ್ದೆ ಏನಚ್ಚರಿ ನಿನ್ನ ಆ ಕಕ್ಕುಲಾತಿ.. ಮಾತು ಹೊರಡದ ನಿನ್ನ ಅಮಾಯಕತೆ ಮಾಗಿದ ಪ್ರೀತಿ ಹಣ್ಣಾಗಿ ಹೊಳೆದು ಕಣ್ಣಲ್ಲಿ ಕೂತಿದ್ದವು ನನ್ನ ಉಡಿಯ ತುಂಬಿ…. ************************************************************************ .

ಕೆಂಪು ಐರಾವತ Read Post »

ಕಾವ್ಯಯಾನ

ಮಾತು – ಮಳೆ ಹಾಡು

ಕವಿತೆ ಬಾಲಕೃಷ್ಣ ದೇವನಮನೆ ಚಿತ್ರ ಕಟ್ಟಿದ ಚೌಕಟ್ಟು      ಮಾತು ಮಳೆಯಂತೆ      ಧೋ… ಎಂದು ಸುರಿಯುತ್ತಿರುತ್ತದೆ ನಿಲ್ಲುವುದಿಲ್ಲ      ಒಮ್ಮೊಮ್ಮೆ ಮಳೆ ನಿಂತರೂ      ಮಾತು ನಿಲ್ಲುವುದಿಲ್ಲ…      ಮೌನವೂ ಮಾತಾದಂತೆ      ಮಳೆ ನಿಂತ ಮೇಲಿನ ಮರದ ಹನಿಯಂತೆ…      ಚೌಕಟ್ಟಿನೊಳಗೆ ಮಾತು ಮಳೆ ಹಾಡು. ದೃಶ್ಯ ಒಂದು      ಆಕಸ್ಮಿಕದ ಭೇಟಿ      ಎಷ್ಟೋ ಕಾಲದ ಮೇಲೆ      ಮರು ಮಿಳಿತವಾದ ಗೆಳೆತನ      ಮುಗಿಯುತ್ತಿಲ್ಲ ಕ್ಷೇಮ ಕುಶಲೋಪರಿ      ಕೂಡಿ ಆಡಿದ ಹಳೆ ನೆನಪು      ಹೊಸ ಕೆಲಸ, ನೆಲೆ ನಿಂತ ಬದುಕು      ಒಳಗೊಳಗೆ ತಳಮಳದ ಕನಸು      ಎಲ್ಲವೂ… ಮೊಗೆದರೂ ಮುಗಿಯದ ಮಾತು      ಸೇರಿಸಿ ಕೊಟ್ಟಿದೆ ಈ ಮಳೆ      ಒಂದೇ ಕೊಡೆಯ ಕೆಳಗೆ ದೃಶ್ಯ ಎರಡು      ಎಷ್ಟು ಬೆಚ್ಚಗೆ ಬೆಸೆದಿದೆ      ಹಲ ದಿನದ ಸಲ್ಲಾಪಕೆ ಅನಿರೀಕ್ಷಿತವಾಗಿ      ಎದೆಯ ದನಿಯಾಗಿ      ಪಿಸು ನುಡಿಗಳು ಬಿಸಿ ಮಿಡಿತಗಳು      ಜಗವೇ ನಾಚಿ ಕಣ್ಮುಚ್ಚುವಂತೆ      ಯಾರ ಹಂಗೂ ಇರದ ತಮ್ಮದೇ ಪ್ರಪಂಚದಲ್ಲಿ      ಮೈಮರೆವಂತೆ ಸೇರಿಸಿ      ಸುರಿಯುತ್ತಲೇ ಇದೆ ಮಳೆ      ಒಂದೇ ಕೊಡೆಯ ಮರೆಗೆ ದೃಶ್ಯ ಮೂರು      ಸುರಿ ಮಳೆ ನೀ ಸುರಿಯುತ್ತಿರು      ನಾ ನೆನೆವೆ ನಿನ್ನೊಳಗೆ      ನನ್ನ ಸುತ್ತಲ ಜಗವು ಅಣಕಿಸಿ ನಗುತಿರಲು      ನನ್ನೊಳಗಿನ ನೋವು ಹರಿಯಲಿ      ಕಂಬನಿಯಾಗಿ ನಿನ್ನ ಜೊತೆಗೆ      ಬೆನ್ನಲಿ ಕಟ್ಟಿಕೊಂಡ ಉರಿ-      -ಯುವ ಹತಾಶೆಯ ಮೂಟೆ      ತಂಪಾಗಲಿ, ಮೊಳೆಯಲಿ ಒಳಗೊಂದು      ಚೈತನ್ಯದ ಓಟೆ      ಚಿಗುರಿ ಹಸುರಾಗಿ      ಮೋಡ ಮುಸುಕಿದ ಬಾಳ ಕ್ಷಿತಿಜದಲ್ಲಿ      ಕತ್ತಲು ಕರಗಿ ಭರವಸೆಯ ಬೆಳಕಾಗಿ      ಸುರಿ ಮಳೆಯೇ ಮೌನಕ್ಕೆ ಮಾತಾಗುವಂತೆ      ಕೊಡೆಯಿಲ್ಲದೇ ನೆನೆವೆ ನಾ ನಿನ್ನೊಳಗೆ      ಮಳೆಯೇ ಹಾಡಾಗುವಂತೆ…!! *************************

ಮಾತು – ಮಳೆ ಹಾಡು Read Post »

ಕಾವ್ಯಯಾನ

ಕಾವ್ಯವಾಗಿ ಕರಗುತ್ತೇನೆ

ಕವಿತೆ ಪೂಜಾ ನಾರಾಯಣ ನಾಯಕ ನಾನರಿಯಲಾಗದ  ಶೂಲೆಗಳೇ ಆಪ್ತವಾಗಿ ನನ್ನನ್ನು ಬಿಗಿದಪ್ಪಿಕೊಂಡಾಗ ಬದುಕು ಬರಡಾಗಿ ಬೆಂಬಿಡದೆ ಕಾಡಿದಾಗ ನನಗನಿಸುತ್ತದೆ, ನಾನೊಮ್ಮೆ ಜ್ವಾಲಾಮುಖಿಯಂತೆ ಭುಗಿಲೇಳಬೇಕು! ಕಳೆದುಕೊಂಡ ಮಧುರವಾದ ಪ್ರೇಮ ನೆನಪಿನಾಳದಲಿ ಪುಟಿದೆದ್ದು ಕೂತಾಗ ನನ್ನ ನಿಟ್ಟುಸಿರಿನಲೂ ಮಿಣುಕು ಹುಳುವಂತೆ ಮಿನುಗ ತೊಡಗಿದಾಗ ನನಗನಿಸುತ್ತದೆ, ನಾನೊಮ್ಮೆ ಅಗ್ನಿ ಪರ್ವತದಂತೆ ಧಗಧಗಿಸಿ ಉರಿಯಬೇಕು! ಕಗ್ಗತ್ತಲ ವೇಳೆಯಲಿ ನಿಶ್ಯಬ್ದ ನೂರಾರು ಬಯಕೆಗಳ ಹೊತ್ತ ದೂರ ದೂರ ನೇರ ಹಾದಿಗಳಲಿ ನೀರವತೆಯೇ ಮುಗುಳ್ನಕ್ಕಾಗ ನನಗನಿಸುತ್ತದೆ, ನಾನೊಮ್ಮೆ ಶಿವನಂತೆ ರುದ್ರವಾಗಿ ನರ್ತಿಸಬೇಕು! ಏಕಾಂತದಲಿ ಮರೀಚಿಕೆಯಂತ ಕನಸುಗಳು ಎಡಬಿಡದೆ ತಿವಿದಾಗ ಹಿಂದಿನ ಕಹಿ ನೆನಪೇ ತುಡಿದಾಗ ಕಂಬನಿಯೇ ಬೇರುರಿದಾಗ ನನ್ನೆದೆಯ ಶರಧಿಯಲಿ ಮತ್ತೆ ಮತ್ತೆ ಪ್ರವಾಹ ಬಂದೆರಗಿದಾಗ ನನಗನಿಸುತ್ತದೆ, ನಾನು ಹೀಗೆಯೆ ಕಾವ್ಯವಾಗಿ   ಮಂಜುಗಡ್ಡೆಯಂತೆ ಕರಗಿಬಿಡಬೇಕು!. **************

ಕಾವ್ಯವಾಗಿ ಕರಗುತ್ತೇನೆ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ.ಹೇಮಗಂಗಾ ಕಡುಗಪ್ಪು ಕುರುಳ ನಡುವೆ ಮೊಗ ಚಂದಿರನಂತೆ ಹೊಳೆದಿದೆ ಗೆಳತಿಬಿರಿದ ಅಧರಗಳ ನಡುವೆ ಮಿಂಚು ನಗು ಹೊರಹೊಮ್ಮಿದೆ ಗೆಳತಿ ಅಪೂರ್ವ ಸೌಂದರ್ಯ ಬಣ್ಣಿಸಲು ಕವಿಯಾಗುವನು ನಿನ್ನ ನಲ್ಲಸೆಳೆವ ಕಾಡಿಗೆ ಕಂಗಳ ಮೇಲಿನ ಹುಬ್ಬು ಕಬ್ಬಿನಂತೆ ಬಾಗಿದೆ ಗೆಳತಿ ಆಗಸದತ್ತ ದಿಟ್ಟಿ ನೆಟ್ಟ ನೋಟದಿ ಅದಾವ ಭಾವ ತುಂಬಿದೆಯೋವಿಚಲಿತಳಾಗದೇ ನೀ ಕುಳಿತ ಭಂಗಿ ಮೋಹಕವಾಗಿ ಕಂಡಿದೆ ಗೆಳತಿ ನಿನ್ನವನ ಚರಣಕೆ ಸಮರ್ಪಿಸಲು ಹೂಗಳ ಗುಚ್ಛ ಹಿಡಿದಿಹೆ ಏನು?ಇಹದ ಅರಿವಿಲ್ಲದೇ ನಗುತಿಹ ಅಭಿಸಾರಿಕೆ ನೀನಾದಂತಿದೆ ಗೆಳತಿ ತುಸು ಹೊತ್ತು ತಾಳಿದರೆ ಸಾಕು ಬಂದೇ ಬರುವನು ಪ್ರಿಯತಮಪ್ರತಿಕ್ಷಣವೂ ಮೆಲುಕು ಹಾಕುವ ಒಡನಾಟದ ಸವಿ ಕಾದಿದೆ ಗೆಳತಿ *************************

ಗಝಲ್ Read Post »

ಕಾವ್ಯಯಾನ, ವಾರದ ಕವಿತೆ

ವಾರದ ಕವಿತೆ

ಬದುಕುಮರುಗುತ್ತಿದೆ ಸುಜಾತಾ ಲಕ್ಮನೆ ಬದುಕು ಮರುಗುತ್ತಿದೆಕನಸುಗಳು ಶಿಥಿಲಗೊಂಡು ರಚ್ಚೆ ಹಿಡಿದುಮುರುಟ ತೊಡಗಿದಂತೆಲ್ಲಬದುಕ ಭಿತ್ತಿಯ ಆಚೀಚೆ ನೀನು ಎಗ್ಗಿಲ್ಲದೇ ಜಡಿದ ಮೊಳೆಗಳುಆಳಕ್ಕಿಳಿದಂತೆಲ್ಲಾ ಹೊರಳಿ ನರಳಿ ಅನಾಮತ್ತಾಗಿ ಹರಡಿಬೆದರುಬೊಂಬೆಗಳಾಗಿ ನಿಲ್ಲುತ್ತವೆ ಭಾವಗಳು !!ದಿಕ್ಕೆಟ್ಟು, ಸೋತು ಹೆಜ್ಜೆ ಮೂಡಿಸಲಾಗದ ಕೊರಗು ತುಂಬಿ ನಿಂತಈ ಭಾವಗಳ ತಬ್ಬಿದರೆಬರೀ ನಿಟ್ಟುಸಿರ ಮೇಳಗಳು !!ಧೂಳು ಹೊದ್ದು ಮಸುಕಾದ ಗೋಡೆಗಂಟಿದ ನಮ್ಮೀವಿವಾಹದ ಜೋಡಿ ಪಟದಿಂದ ಒಳಗೊಳಗೇ ನಕ್ಕು ಸೂಸುವ ಹಳವಂಡಗಳು!ಜೇಡ ನೇಯ್ದ ಬಲೆಯೊಳಗೆ ಬಿದ್ದು ಹೊರಳಾಡುವ ಪಟದ ಬಗ್ಗೆ ನಮಗೇಕೆ ಚಿಂತೆ?ಬದುಕೇ ಚೌಕಟ್ಟು ಮೀರಿ ಮೂರಾಬಟ್ಟೆಯಾದ ಮೇಲೆ ಇನ್ನೇನಂತೆ ?ಅದೆಷ್ಟು ಬೆಳ್ಳಗೆಯಲ್ಲಿ ಮುಖವಾಡ ಹೊದ್ದು ಹಗಲು ತಳ್ಳಿದರೂಎದೆ ಸುಡುವ ಮಂಚದ ಮೇಲೆರಾಗ ಲಯಗಳು ಸತ್ತ ಬಾಳು ರಿಕ್ತಗೊಂಡ ಸತ್ಯದರ್ಶನ !ನಿದ್ದೆ ತಬ್ಬದ ರಾತ್ರಿಗಳಲ್ಲಿ ಕಣ್ಣಾಲಿಗಳ ಸುತ್ತ ಸತ್ತ ಕನಸುಗಳ ಒಸರುಗಿರಕಿ ಹೊಡೆಯುವ ತವಕ-ತಲ್ಲಣ !!ಈ ಉತ್ಕಲಿಕೆ ತಾಳಲಾರದೇ ತಟ್ಟಿ ಮಲಗಿಸಿದಂತೆಲ್ಲಾಉಟ್ಟ ಸೀರೆಯ ಸೆರಗಿನಂಚೇ ಪಿಸುಗುಡಲು ಶುರುವಿಟ್ಟುಕೊಳ್ಳುತ್ತದೆ ನನ್ನಲ್ಲಿ !ಎದೆಯ ಬೀದಿಯ ಮೇಲೆ ಗೀಚಿದ ಒಲುಮೆ ಅಕ್ಷರಗಳುಇದ್ದಕ್ಕಿದ್ದಂತೆ ಮಾಯವಾಗಿದ್ದಾದರೂ ಎಲ್ಲಿ?ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದುಹೋಗುವ ಈ ಅನಿವಾರ್ಯತೆಯಆರ್ತನಾದಕ್ಕೆ ಕೊನೆಯಲ್ಲಿ ?ಸಾಲ್ಗೊಳಿಸಲಾಗದ ಪ್ರೀತಿಯ ವ್ಯಾಖ್ಯೆ ಎಡವಿದಂತೆಲ್ಲಸುಕರಗೊಳ್ಳದ ಬದುಕು ಅನಂತ ಸುಳ್ಳುಗಳಿಂದ ತುಂಬಿ ಅಣಕಿಸುತ್ತಿದೆ!!ನಿನ್ನ ಮೆಲ್ನುಡಿ, ಮೆಲ್ದನಿ, ಮೆಲ್ನಗೆಗೆ ಹಾತೊರೆದು ಹೀಗೆ ಗೀಚುವ ಕವನ ಕನಲುತ್ತಿದೆ: ಕರಗುತ್ತಿದೆ: ಕನವರಿಸುತ್ತಿದೆ!!ಕಂಡೂ ಕಾಣದ ಆಸೆ ಕುಡಿಯು ಚಿಗುರಲಾರದೇ ಇತ್ತ ಸಾಯಲಾರದೇ-ಗೆಜ್ಜೆಕಟ್ಟಿದ ಹೆಜ್ಜೆ ಪ್ರೀತಿಯ ರಂಗಸ್ಥಳದಲ್ಲಿ ನರ್ತಿಸಲಾರದೇಬದುಕೇ ಮರುಗುತ್ತಿದೆ : ನರಳುತ್ತಿದೆ : ನೋಯುತ್ತಿದೆ !!ಸಾಂಗತ್ಯ ಗೊಳ್ಳದ ಬದುಕ ಪದುಳಿಸಲು ಒಮ್ಮುಖವಾಗಿನಾನು ಹೆಣಗಿದಂತೆಲ್ಲ ನಿನ್ನ ವಿಮುಖತೆಯೇ ಮೂರ್ತೀಭವಿಸಿದಿನ-ರಾತ್ರಿಗಳು ಬಸವಳಿದು ಚಾದರ ದಡಿಯಲ್ಲಿ ಬಿಕ್ಕುತಿವೆ!!ನಾನು ನೀನು ದಾಂಪತ್ಯದಲ್ಲಿ ಕಾಲಿಟ್ಟ ಸಂಭ್ರಮದ ಆ ದಿನಕ್ಕೆಬೇಕಿತ್ತೇ ದಿಬ್ಬಣ ಒಡ್ಡೋಲಗ ಮಂತ್ರಗಳ ಘೋಷ ಹೂ ಮಾಲೆ?ಸನಿಹವಿದ್ದೂ ನಿನ್ನ ಬಿಸುಪೇ ತಾಗದೆ ಸಾಯುವ ನನ್ನ ಭಾವಲಹರಿಯ ಬಿಕ್ಕಿಗೆಇನ್ನೆಷ್ಟು ತೇಪೆ ಹಚ್ಚುವ ಶ್ರಮ –ಮನಸ್ಸಿಗೆ ಮನಸ್ಸೇ ಬೆಸೆಯದಿದ್ದ ಮೇಲೆ?ಪ್ರೀತಿ ಇಲ್ಲದ ಮೇಲೆ ಎಲ್ಲ ತೊರೆದು ಕಾರಣವ ಕೊಟ್ಟು ಹೊರಟು ಬಿಡು !ವಿಕ್ಷೋಭ ವಿಕ್ಲಬಗಳೆಲ್ಲ ದೂರಾಗಿ ಹೋಗಲಿನನ್ನ ಬಿಸಾಕಿ ಬಿಡು ನಿನ್ನ ಬಾಳಿಂದಒಳ ಕುದಿತ ತಹಬಂದಿಗೆ ಬಂದುಇನ್ನುಳಿದ ಎನ್ನ ಬಾಳಾದರೂ ಆಗಲಿ ಅಂದ ಚಂದ !! *******************

ವಾರದ ಕವಿತೆ Read Post »

ಕಾವ್ಯಯಾನ

ಅಪ್ಪನ ಆತ್ಮ

ಕವಿತೆ ಫಾಲ್ಗುಣ ಗೌಡ ಅಚವೆ. ಇಲ್ಲೇ ಎಲ್ಲೋಸುಳಿದಾಡಿದಂತೆ ಭಾಸವಾಗುವಅಪ್ಪನ ಅತ್ಮನನ್ನ ತೇವಗೊಂಡ ಕಣ್ಣುಗಳನ್ನುನೇವರಿಸುತ್ತದೆ. ಅಪ್ಪನ ಹೆಜ್ಜೆ ಗುರುತುಗಳಿರುವಗದ್ದೆ ಹಾಳಿಯ ಮೇಲೆನಡೆದಾಡಿದರೆಇನ್ನೂ ಆಪ್ತವಾಗಿಸುಪ್ತ ಭಾವನೆಗಳನ್ನುಆಹ್ಲಾದಕರಗೊಳಿಸುತ್ತದೆ. ನಾನು ನಡೆದಲ್ಲೆಲ್ಲನೆರಳಿನಂತೆ ಬರುವ ಅದುನನಗೆ ಸದಾ ಗೋಚರಿದಂತೆ ಭಾಸ! ನನ್ನನ್ನೇ ಕುರಿತು ನೇರಬೊಟ್ಟು ಮಾಡಿ ತೋರಿಸಿದಂತೆಏನನ್ನೋ ಹೇಳುತ್ತದೆ!ದ್ವೇಷದ ಬೆಂಕಿಯಲ್ಲಿಮಗನ ಮುಖವ್ಯಗ್ರವಾಗಿರುವುದ ಕಂಡುಬೇಸರಿಸಿಕೊಂಡಿದೆಆತ್ಮದ ಮ್ಲಾನ ವದನ!! ಅನ್ಯರಿಗೆ ಅಗೋಚರವೆನಿಪಅಪ್ಪನ ಅತ್ಮಕ್ಕೂ ನನಗೂಅದೆಂಥದೋಅಲೌಕಿಕ ನಂಟು! ಅವನ ನೆನಪಿನೊಂದಿಗಿನಮುಕ್ತ ತಾದಾತ್ಮ್ಯವೇನನ್ನ ಅದ್ಯಾತ್ಮ!!! ********

ಅಪ್ಪನ ಆತ್ಮ Read Post »

ಕಾವ್ಯಯಾನ

ನನ್ನಜ್ಜ

ಕವಿತೆ ಚೈತ್ರಾ ಶಿವಯೋಗಿಮಠ ಬಸ್ಟ್ಯಾಂಡ್ ನ್ಯಾಗ ನಿಂತುಬಾರಕೋಲು ಬೇಕಾ ಅಂದಾಗಮಂದಿ ಬೇಡಿ ಕೊಡಿಸ್ದಾವ ನನ್ನಜ್ಜಇದ ಕಥಿ ನೂರ ಸರತಿ ಹೇಳಿ“ಹಠಮಾರಿ ಚೈತ್ರಾ” ಅಂದಾವ ನನ್ನಜ್ಜ ಹೆಗಲ ಮ್ಯಾಲೆ ಹೊತ್ತು ಓಣಿತುಂಬಾ ತಿರಗ್ಯಾಡಿದಾವ ನನ್ನಜ್ಜಬಾಯಿ ಒಡದರ, ತುಂಬಾ ಬಿಳಿ ಬೀಜಕೆಂಪಗ ಕಾಣೂ ಪ್ಯಾರಲ ಹಣ್ಣ ತರಾವ ನನ್ನಜ್ಜನಿಂಬುಹುಳಿ, ಪೇಪರಮಟ್ಟಿ, ಚಾಕಲೇಟ್ಗಾಂಧಿ ಮುತ್ಯಾನ ಫೋಟೋ ಮುಂದ ನಿಂದರೀಸಿಕಣ್ಮುಚ್ಚಿಸಿ, ಮುತ್ಯಾ ಕೊಟ್ಟ ನೋಡನ್ನವ ನನ್ನಜ್ಜ ಮುದುಕಿ, ನರಿ-ಒಂಟಿ ಅಂತ ನೂರ ಕಥಿಅವನ ಅಂಗಿ ಕಿಶೆದಾಗ. ಸ್ವತಂತ್ರ ಸಿಕ್ಕಾಗನಡುರಾತ್ರಿ ಮಾಸ್ತಾರ ಎಬ್ಬಿಸಿದ್ದನ್ನ ಕಥಿಮಾಡಿ ಹೇಳಿದಾಗ ಹೀರೋ ಗತೆ ಕಂಡಾವ ನನ್ನಜ್ಜಓಡಿಹೋಗಾವ ಇದ್ದೆ ಅಂತರಪಟ ಸರದು ಬೆಳ್ಳನ್ನಚೆಲುವಿ ಕಂಡ್ಲು, ಬದುಕಿದ್ನಪಾ ಅಂತಹೇಳಿ ಅಜ್ಜಿನತಾ ಲಗ್ನಾದ ಕಥಿ ಹೇಳಿ ನಗಸಾವ ನನ್ನಜ್ಜ. ತಾಯಿ ಸೇವಾ ಮಾಡಿ ತುಂಬು ಜೀವನ ಕಂಡುತನಗಿಂತ ಕಿರಿಯರ ಕಣ್ಮುಂದ ಕಳ್ಕೊಂಡುನೂವಿನ ನಂಜೆಲ್ಲಾ ಎದಿಯಾಗಾ ಮಂಜ ಮಾಡಿಗಟ್ಟಿ ಮನಸು, ಗಟ್ಟಿ ಶರೀರದಾವ ನನ್ನಜ್ಜಸೈಕಲ್ ಏರಿ ದೂರದೂರಿಗೆ ಹೋಗಿ ಸಾಲಿಕಲಿಸಿ ಬಂದು, ರಾತ್ರಿ ಹೊಲಕ್ಕ ನೀರ ಕಟ್ತಿದ್ದ ರೈತ ಮಾಸ್ತಾರನನ್ನಜ್ಜ ಸ್ವಚ್ಛ ಆಕಾಶದಾಗ ಹತ್ತಿಯಂತ ಮಾಡ ತೇಲಿಹಚ್ಚ ಹಸುರು ಶ್ರಾವಣ ಬಂತಂತ ಹಿಗ್ಗುಮುಂದಊರಿಗ ಹೊಂಟ್ರ “ಬಾರವಾ ಚೈತ್ರಾ’ ಅಂತಬಚ್ಚ ಬಾಯಿ ತಗದ ಬೆಚ್ಚಗ ಕರಿಯಾಕ ಇನ್ನಿಲ್ಲ ನನ್ನಜ್ಜ.ಮೊಮ್ಮಕ್ಕಳ ಸಾಮ್ರಾಜ್ಯದಾಗಿನ ಮಹರಾಜಾ ನೀ, “ಪ್ರಭುಗಳೆ, ಹೀಗೆ ಬನ್ನಿ” ಅಂತ ಆಡಿಶ್ಯಾಡಿದ್ರನಗಾವ ದೊರೆ ಆಳ್ವಿಕಿ ಮುಗಿಸಿ ಹೊಂಟ ನನ್ನಜ್ಜ! ***************************

ನನ್ನಜ್ಜ Read Post »

ಕಾವ್ಯಯಾನ

ವಿನಂತಿಯಷ್ಟೇ…

ಕವಿತೆ ಮಧುಸೂದನ ಮದ್ದೂರು ನಿನ್ನ ಒಂದೇ ಒಂದು ಕನಸಿಗೆ ಇಷ್ಟು ಪರಿತಪಿಸ ಬೇಕಿತ್ತೆ…..? ನಿನ್ನ ಕುಡಿಮಿಂಚ ಕಣ್ಣೋಟಎದೆ ಇರಿದಿದ್ದರೆ ಸಾಕಿತ್ತು..ಎದೆಗೆ ನಿನ್ನ ನೆನಪುಗಳ ಭರ್ಜಿಯಿಂದಇರಿದುಕೊಳ್ಳಬೇಕಿರಲಿಲ್ಲ..ನಿನ್ನ ತುಸು ಸ್ಪರ್ಶದ ಕೆನೆಗಾಳಿ ಎದೆಗೆ ಸೊಂಕಿದ್ದರೆ ಸಾಕಿತ್ತು… ನಿನ್ನ ಸಿಹಿ ಮುತ್ತೊಂದು ಸಿಕ್ಕಿದ್ದರೆ ಸಾಕಿತ್ತು..ಮಧುಶಾಲೆಗೆ ಎಡತಾಕಿ ಮತ್ತಿನ ಬಾಟಲಿಗಳಿಗೆ ಮುತ್ತಿಕ್ಕುವ ಪ್ರಮೇಯವೇ ಇರುತ್ತಿರಲಿಲ್ಲ… ನಿನ್ನ ನವಿರು ಬಿಸಿಯುಸಿರು ನನ್ನೆದೆಗೆ ಸುಳಿಗಾಳಿಯಾಗಿದ್ದರೆ ಸಾಕಿತ್ತು..ಧೂಮಲೀಲಾ ವಿನೋದವಳಿಗೆ ಅಗ್ನಿಮಿತ್ರನಾಗುತ್ತಿರಲಿಲ್ಲ.. ಈಗಲೂ ಕಾಲ‌ಮಿಂಚಿಲ್ಲ..ಒಂದೇ ಒಂದು ಬಾರಿ ಕನಸಿಗೆ ಬಂದು ಬಿಡು ಸಾಕುಈ‌ ನನ್ನಿ ವ್ಯಸನಗಳ ಸಾಮ್ರಾಜ್ಯವ ಸೋಲಿಸಿಎದೆಯ ಸಿಂಹಾಸನದ ಪಟ್ಟದ ಸಾಮ್ರಾಜ್ಞಿಯಾಗು…ಇದೀಷ್ಟೇ ಈ ಬಡ ಪಕೀರನ ವಿನಂತಿ ಮಾತ್ರವಷ್ಟೇ… **********

ವಿನಂತಿಯಷ್ಟೇ… Read Post »

ಕಾವ್ಯಯಾನ

ಗಝಲ್

ಗಝಲ್ ಶಶಿಕಾಂತೆ ನಿನ್ನನ್ನು ಎದೆಯಾಳದಿಂದ ಅನಂತವಾಗಿ ಪ್ರೀತಿಸುತಿರುವೆನುಆಣೆ ಇಡಲೇ,ನನ್ನೊಲವನ್ನೆಲ್ಲಾ ನಿನಗಾಗೇ ಮುಡಿಪಾಗಿಡುವೆನು. ಜೀವನವೆಂಬುದು ಮೂರು ದಿನದ ಸಂತೆಯಂತೆ ಚೆಲುವೆ.ಆ ಸಂತೆಯಲ್ಲಿ ನೀ ನೀಡಿದೆ ನನಗೆ ಯಾರೂ ನೀಡದ ಸ್ನೇಹವನು. ನೀನೀಗ ಹೃದಯ ವೀಣೆ ಮೀಟಿಯಾಗಿದೆ ದೂರ ಹೋಗದಿರು ಸಖಿ ತಾಳಿಕೊಳ್ಳಲಾರದು ನನ್ನೆದೆ ವಿರಹದ ಬೇಗೆಯನು. ಈ ಬಾಳು ಬರಡು ಬಂಜರುಭೂಮಿ ಆಗಿತ್ತು ನಿನ್ನಾಗಮದ ಮೊದಲು.ಪ್ರೇಮ ಸಿಂಚನದಿಂದ ಮನದಲಿ ನೀ ಮೂಡಿಸಿದೆ ಹೊಸ ಬಯಕೆಗಳನು ನಿನ್ನ ಹೆಸರೇ ನನ್ನುಸಿರಾಗಿದೆ ನಾವು ಕಣ್ಣಲ್ಲಿ ಕಣ್ಣಿಟ್ಟು ಮಾತಾಡಿದಾಗದಿಂದ.ಬಾ ಜಾನು, ನನ್ನೆದೆಗೊರಗಿ ಮಲಗಿ ಕೇಳು ನನ್ನ ಪ್ರೇಮದೇವತೆಯ ಹೆಸರನು. ಮನಸುಗಳು ಒಂದಾದ ಮೇಲೆ ಬಳಿ ಇರಲು ಭಯವೇತಕಿನ್ನು ನಿನಗೆ.ಅಧರಗಳ ಮಧುಪಾನ ಮಾಡೋಣ ಮರೆಯಲು‌ ಎಲ್ಲಾ ಚಿಂತೆಯನು. ನಗುವ ಶಶಿಯಿಲ್ಲದ ಬಾನಿನಲ್ಲಿ ಏನಾದರೂ ಕಳೆ ಇದೆಯೇ ಹೇಳು ಚಿನ್ನು.ನಿನ್ನ ಪ್ರೀತಿಯಿಲ್ಲದೆ ಹೋದರೆ ಈ ಜೀವನ ಶೂನ್ಯವಲ್ಲವೇನು.

ಗಝಲ್ Read Post »

ಕಾವ್ಯಯಾನ

ಉತ್ತರ ಏನು?

ಕವಿತೆ ನಂದಿನಿ ಹೆದ್ದುರ್ಗ ಅವನೆನ್ನ ಅಗತ್ಯವಲ್ಲ.ಅನಿವಾರ್ಯವಲ್ಲಅಭೇದ್ಯವೂ ಅಲ್ಲ.ನಡುದಾರಿಯಲಿ ಸಿಕ್ಕ ದಾರಿಹೋಕ.ನನ್ನ ನೋಡಿ ಸಣ್ಣಗೆ ನಕ್ಕ. ಒಡ್ಡಿಕೊಂಡೆವು ಎಂದುಎರಡುಅಲುಗಿನ ನಡೆಗೆ ನಾವಿಬ್ಬರೂ.? ಅವನೀಗ ನನ್ನೆದೆಯ ರಾಗ.ಬೆವರ ಬೆಳಕು.ಹೆರಳ ಸಿಕ್ಕು.ಕಣ್ಣ ಚುಕ್ಕಿ.ಒಳಗಿನೊಳಗಿನ ಭಕ್ತಿ. ಅವನೆನ್ನ ಬಯಕೆ ಎನ್ನ ಬಳಲಿಕೆಮಳೆಗರೆವ ಮುಗಿಲುಆಳದ ದಿಗಿಲುಅವನೆನ್ನ ಬೇಕುಪದ್ಯದ ಪರಾಕು.ಅವನು…ಸಿಹಿಯಾದ ಕತ್ತಲುಹೂ ಹಿಡಿದ ಹಿತ್ತಿಲು.ಅವನೆನ್ನ ಸುಖ ನನ್ನ ಮೋಹದ ಸಖ ಜಗದ ಆ ಬದಿಯಲಿ ಅವನುಸಮೃದ್ಧ ಏಕಾಂತದಲಿ ನಾನುಹರಿದು ಅಲೆಗಳ ಬಣ್ಣಸುತ್ತೆಲ್ಲಾ ತಿಳಿಗೆಂಪು ಉದ್ಯಾನ.ಹೊರಳಿದರೆ ಹಗಲುಅವನೆದೆಯ ಮಗ್ಗುಲು ನನ್ನಇಂದು ನಾಳೆ ನಿನ್ನೆಗಳೆಲ್ಲಾಕಣ್ಣು ಕೂಡಿದಕ್ಷಣದ ಧ್ಯಾನದಲ್ಲಿ ಅದೇ ಹಾದಿಯಲಿ ಮರಳುವಾಗಮಂಡಿಯೂರಿದ ಸ್ಥಳವ ಮರೆಯದೇನೋಡೆನ್ನುವಅವನಕಣ್ಣು ಹೊಮ್ಮಿಸುವಸಣ್ಣ ಹಾಡಿನ ನಾದ ನಾನು ಸುಮ್ಮನೆ ಇಣುಕಿಣುಕಿನೋಡುವ ನನ್ನ ಕಂಡುಹುಟ್ಟುವಅವರಿವರ ಪ್ರಶ್ನೆಗಳಿಗೆ ಉತ್ತರ ಏನು.? *******

ಉತ್ತರ ಏನು? Read Post »

You cannot copy content of this page

Scroll to Top