ಪಟ್ಟಣಕ್ಕೆ ಬುದ್ಧ ಬರಬೇಕಿತ್ತು
ಕವಿತೆ ಪ್ಯಾರಿಸುತ ಅದು ಒಂದು ದಾರಿಬುದ್ಧ ಹೋಗುತ್ತಿದ್ದ ದಾರಿಯದುಅವನು ಎದ್ದು ಹೋದ ಸಮಯಕ್ಕೆನಾನೂ ಎದ್ದು ಯಾರಿಗೂ ಹೇಳದೆಹೋಗಿಬಿಟ್ಟೆ;ಅವನಿಗೆ ಕಂಡಂತೆ ನನಗೆ ಯಾವಹೆಣವಾಗಲಿ,ಮುದಿಯನಾಗಲಿಯಾರೂ ಒಬ್ಬರೂ ಸಿಗಲೇ ಇಲ್ಲಅಥವಾನನ್ನ ಕಣ್ಣೇ ಕಾಣಲಿಲ್ಲವೋ ಗೊತ್ತಿಲ್ಲನಾನು ಮಾತ್ರ ಅವನು ಸಿಗುವಭರವಸೆಯ ಭರದಲ್ಲಿ ಹೆಜ್ಜೆಗಳನ್ನುಹಾಕುತ್ತಲೇ ಹೋಗುತ್ತಿದ್ದೆನನ್ನ ಚಪ್ಪಲಿಗಳೂ ಅದೇ ಭರವಸೆಯನ್ನುಹುಟ್ಟು ಹಾಕಿದ್ದವುಒಳಗೊಳಗೆ ಬುದ್ಧನಾಗುವ ಜಂಬಕಾರಂಜಿಯಂತೆ ರಂಜಿಸುತ್ತಿತ್ತುನಾನು ರಾಜನ ಮಗನಲ್ಲದಕ್ಕೋ,ಗುಡಿಸಲು ಹೊರತು ಬೇರೇನೂಇಲ್ಲದಕ್ಕೋತಿಳಿಯಲಿಲ್ಲ ಮತ್ತೆ ಮುಂದೆ ಹೆಜ್ಜೆ ಹಾಕಿದೆಕಾಡೆಲ್ಲ ಅಲೆದರೂ ಯಾವ ಪಾಪಪ್ರಜ್ಞೆಯುಕಾಡದಿರುವದುನನ್ನಲ್ಲೂ ಆಶ್ಚರ್ಯ ಉಂಟು ಮಾಡಿತ್ತುಅಲ್ಲಿಂದ ನೇರವಾಗಿ ಪಟ್ಟಣದ ಎದೆಯ ಮೇಲೆನಡೆಯುತ್ತಿದ್ದೆಗುಡಿಯ ಪಕ್ಕ ಹಸಿವಿಗಾಗಿ ಹಂಬಲಿಸುವಮಾಸ್ಕು ಧರಿಸಿದ,ಕೊಳಕು ಬಟ್ಟೆಯುಟ್ಟಬಲಗೈಯನ್ನು ಮುಂದೆ ಚಾಚಿರುವಒಬ್ಬ ಸುಂದರ ಯುವತಿ ಕಂಡಳುಅವಳಲ್ಲಿ ಸೌಂದರ್ಯವಿತ್ತು,ಸಾಕ್ಷಾತ್ ಭಗವಂತನಿದ್ದ ಆದರೆ ಅದಕ್ಕಿಂತಅವಳ ಹಸಿವು ಕಾಣುತ್ತಿತ್ತುಹಸಿವನ್ನು ನಿಗಿಸಿದ್ದರೆ ಭಗವಂತ ಹೊರಬರುತ್ತಿದ್ದನೇನೋಈ ದಾರಿಯಲ್ಲಿ ನಾ ಬರುವ ಬದಲು ಬುದ್ಧನೇಬರಬೇಕಿತ್ತುಕಾಡನ್ನು ಬಿಟ್ಟು ಪಟ್ಟಣವನ್ನೆಲ್ಲ ಸುತ್ತಬೇಕಿತ್ತುಅಲ್ಲಿ ಕಾಣುತ್ತಿದ್ದ ಹೆಣ,ಒಂಟಿ ಮುದಿ ಜೀವಇಲ್ಲಿ ಎಲ್ಲವೂ ಬಹುವಾಗಿ ಕಾಣುತ್ತಿದ್ದವು ************************************
ಪಟ್ಟಣಕ್ಕೆ ಬುದ್ಧ ಬರಬೇಕಿತ್ತು Read Post »









