ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಒಮ್ಮೆ ಪೌರ್ಣಿಮೆಯಾಗಬೇಕಿದೆ ನನಗೆ

ಕವಿತೆ ವಿದ್ಯಾ ಕುಂದರಗಿ ನಿರ್ಬಂಧಗಳ ಜಡಿದು ಬಂಧಿಸಲಾಗಿದೆ ಇಲ್ಲಿರೆಕ್ಕೆ ಬಡಿದು ಬಾನಿಗೆ ಹಾರಬೇಕಿದೆ ನನಗೆ ಕಣ್ಕಟ್ಟಿದ ಖುರಪುಟಕೆ ಒಂದೇ ಗುರಿಯುದೆಸೆದೆಸೆಗೆ ಕಣ್ಣಗಲಿಸಿ ನೋಡಬೇಕಿದೆ ನನಗೆ ಗೊರಕೆಯ ಸದ್ದಿಗೆ ಗೋಡೆಯಾಗುತ್ತಿದೆ ಪಟಲಗಾಳಿಪಟವಾಗಿ ಆಕಾಶ ಚುಂಬಿಸಬೇಕಿದೆ ನನಗೆ ರಾತ್ರಿಕನಸು, ಭಾವಗಳಿಗೆ ಕೊಡಲಾಗದ ಕಾವುಸಂಜೆ ಮುಂಜಾವಿಗೆ ಚಿಂವ್‌ಗುಟ್ಟಬೇಕಿದೆ ನನಗೆ ಚಿವುಟಿ ಚಿಮ್ಮಿದರೂ ಟಿಸಿಲೊಡೆಯುವ ಪಸೆಹಬ್ಬಿ ಆಕಾಶದೆತ್ತರಕೆ ಕೈ ಚಾಚಬೇಕಿದೆ ನನಗೆ ‘ಸಖಿ’ ನಿಸ್ಸಂಗವಾಗಿ ಕಳೆದ ಮಾಸಗಳೇಷ್ಟೋಒಮ್ಮೆ ಚಿತ್ತಪೌರ್ಣಿಮೆ ಆಗಬೇಕಿದೆ ನನಗೆ *******************

ಒಮ್ಮೆ ಪೌರ್ಣಿಮೆಯಾಗಬೇಕಿದೆ ನನಗೆ Read Post »

ಕಾವ್ಯಯಾನ

ಆಯ್ಕೆ

ಕವಿತೆ ಮಾಲತಿಹೆಗಡೆ ಹೆತ್ತವರ ಹುಟ್ಟೂರವ್ಯಾಮೋಹ ಬಿಟ್ಟವರು..ಕತ್ತರಿಸಿ ನೆಟ್ಟ ಗಿಡದಂಥವರುನಗರವಾಸಿಗಳಿಗೊಲಿದವರುಹೋದೆಡೆಯೆಲ್ಲ ಚಿಗುರುವಹಟದಲ್ಲಿ ಬೇರು ಬೆಳೆಸಿಕೊಂಡವರಲ್ಲವೇ ನಾವು ? ಅಂಗೈ ಗೆರೆ ಮಾಸುವಷ್ಟುಪಾತ್ರೆ ಬಟ್ಟೆ ಉಜ್ಜಿ ಉಜ್ಜಿಮುಂಬಾಗಿಲು ತೊಳೆದುರಂಗೋಲಿಯಿಕ್ಕಿಕಟ್ಟಡವನ್ನುಮನೆಯಾಗಿಸಿಯೂತವರು ಮನೆ ಯಾವೂರು?ಗಂಡನ ಮನಿ ಯಾವೂರು?ಪ್ರಶ್ನೆ ಎದುರಿಸುತ್ತಅಡುಗೆಮನೆ ಸಾಮ್ರಾಜ್ಯದಲಿಹೊಗೆಯಾಡುವ ಮನಕ್ಕೆತಣ್ಣೀರೆರೆಚಿ ಹೂನಗೆ ಬೀರುವವರಲ್ಲವೇನಾವು? ತೊಟ್ಟಿಲು ತೂಗಿ,ಹೆಮ್ಮೆಯಲಿ ಬೀಗಿವಿರಮಿಸಲೂ ಬಿಡುವಿರದೇಸಂಸಾರ ಸಾವರಿಸಿಹೀಗೆಯೇ ಸಾಗುವುದುಹಣೆಬರಹ ಎನ್ನುತ್ತಬದುಕುವ‌ ನಗರವಾಸಿ ನಾರಿಯರಲ್ಲವೇ ನಾವು? *************

ಆಯ್ಕೆ Read Post »

ಕಾವ್ಯಯಾನ

ಹೇಳಲೇನಿದೆ

ಕವಿತೆ ಡಾ.ಗೋವಿಂದಹೆಗಡೆ ಇಲ್ಲ, ನಿಮ್ಮೆದುರು ಏನನ್ನೂಹೇಳುವುದಿಲ್ಲ ಹೇಳಿದಷ್ಟೂ ಬೆತ್ತಲಾಗುತ್ತೇನೆಮತ್ತೆ ಬಿತ್ತಿಕೊಳ್ಳಲು ಏನುಉಳಿಯುತ್ತದೆಹೇಳಿದಷ್ಟು ಜೊಳ್ಳಾಗುತ್ತೇನೆಮೊಳೆಯಲು ಮತ್ತೆಉಳಿಯುವುದೇನು ಖರೇ ಅಂದರೆನಿಮಗೆ ಏನನ್ನೂ ಹೇಳುವಅಗತ್ಯವೇ ಇಲ್ಲ ಕಣ್ಣುಗಳಲ್ಲೇ ಸೆರೆಹಿಡಿದುದೋಷಾರೋಪಪಟ್ಟಿ ಸಲ್ಲಿಸಿಯಾವ ಪಾಟೀಸವಾಲೂಇಲ್ಲದೇಶಿಕ್ಷೆ ವಿಧಿಸಿ… ಹೇಳಲೇನಿದೆ? ***********

ಹೇಳಲೇನಿದೆ Read Post »

ಕಾವ್ಯಯಾನ

ಬೊಗಸೆಯೊಡ್ಡುವ

ಕವಿತೆ ಗೋಪಾಲ ತ್ರಾಸಿ ಅಹೋರಾತ್ರಿಬಾನು ಭುವಿಯ ನಡುವೆ ಚಲನಶೀಲ ಶಿಖರದಂದದಿ ಉದ್ದಾನುದ್ದಕೆರಾಶಿರಾಶಿ ಮೋಡಗಳ ಜಂಬೂಸವಾರಿ,ಕಾರಿರುಳ ದಿಬ್ಬಣಕೆ,ಅಲ್ಲೊಂದು ಇಲ್ಲೊಂದುಅಂಜುತ್ತಂಜುತ್ತ ಇಣುಕುವಮಿಣುಕು ನಕ್ಷತ್ರಗಳು, ಸಾಕ್ಷಿ. ಮೈಭಾರವಿಳಿಸಿಕೊಳ್ಳಲೇನೊ, ತಾನೇತಾನು ಮೈತುಂಬ ಕನ್ನಕೊರೆದುನಸುಕಿನಿಂದಲೆ, ಧಸಧಸ ಸುರಿದುಕೊಂಡಮೋಡ;ರ್ರೊಯ್ಯನೆ ಹೊಯಿಲೆಬ್ಬಿಸುವ ಗಾಳಿಗೌಜು,ಧಡಾಂಧುಡೂಂ, ಛಟ್ ಛಟ್ ಛಟೀಲ್ಗುಡುಗು ಮಿಂಚಿನ ಜುಗಲ್ಬಂಧಿಏರುಮಧ್ಯಾಹ್ನವೇ ಸಂಜೆಗತ್ತಲ ಭ್ರಾಂತಿ;ಹೊರಗೆ. ಆಯಾಸದಿಂದ ಕಿಟಕಿಬಾಗಿಲು ಸಂದಿತೂರಿಸುಯ್ಯನೆ ಒಳಸುಳಿದುಅಪ್ಯಾಯಮಾನವಾಗಿ ಕಚಗುಳಿಯಿಡುವಒದ್ದೆಗಾಳಿಗರಿಗರಿಯಾಗಿ ಮೈಮನಸ್ಸು ಬೆಚ್ಚಗೆಗರಿಗೆದರಬೇಕಿತ್ತು ; ಒಳಗೆ. ಮಾಗಿಯ ಚುಮುಚುಮು ಚಳಿಯ ಜೊತೆ ಅನಾಯಾಸ ಬೆವರಿಳಿಸುವನಿರ್ಜೀವ ಜಡ ಜಂತುಭೂಮ್ಯಾಕಾಶ ಬಾಹು ಚಾಚಿಕೊಳ್ಳುತ್ತಲೆ, ಎಲ್ಲೋ ಕ್ಷಿತಿಜದಂಚಿಂದದಿಢೀರನೆ, ಹೊಸ್ತಿಲಲಿ ಹೊಂಚು ! ಹೊರಟೇ ಹೋಯಿತೆನ್ನಿಬಂದಂತೆ ವೈಶಾಖ, ಪೆಚ್ಚುಮೋರೆ ಹಾಕಿಅಟ್ಟಕ್ಕೇರಿದ ಹರ್ಷೋಲ್ಲಾಸವರ್ಷಾಕಾಲಿಟ್ಟರೂ ಮಿಸುಕಾಡಲಿಲ್ಲರಾಹು ಬಡಿದಂತೆ ಮಂಕು ಸಮಯ ! ರೆಕ್ಕೆ ಪುಕ್ಕ ತೊಯ್ದುಹಿಂಜಿ ಹಿಂಡಿ ಇನ್ನಿಲ್ಲವೆಂಬಂತೆಮುದುಡಿ ಹಿಡಿಯಾದ ತೈನಾತಿ ದಿನಚರಿಪಿಳಿಪಿಳಿಗಣ್ಣು ನಿಸ್ತೇಜ ಪಾಪೆತೆರೆಗಣ್ಣಲಿ ಮೂರ್ಛೆ ಹೋದಮಾನವನಹಮಿಕೆಅಳಿದುಳಿದ ಅಂತ:ಸ್ಥೈರ್ಯಮಂಡಿಯೂರಲೂ ಘನಕಾರಣವಿರಬೇಕು;ಇರಲಂತೆ, ಇರುವಂತೆ. ತೊಯ್ಯಲಾಗದ ಮೃದುಲ ಮನಸ್ಸಿನವಿಭ್ರಾಂತಿನಿಮ್ನೋನ್ನತ ಹಾದಿಗುಂಟ ತಲ್ಲಣಗಳ ಸಂತೈಸುತ್ತಲೇ ಪಾರಾಗಬೇಕಿನ್ನುಸಕಲ ಪೀಡಾವಿನಾಶಕ ವಿಪ್ಲವಕ್ಕೆಗದ್ಗದಿತ ಮೋಡ ತೊಟ್ಟಿಕ್ಕುವ ಆ ಕೊನೇಯಸಂಜೀವಿನಿ ಹನಿಗೆಭೊಗಸೆಯೊಡ್ಡುವ ಆವೊಂದುತಂಪು ಬೆಳಕಿನ ಬೆಳಗಿಗೆ…

ಬೊಗಸೆಯೊಡ್ಡುವ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸುಜಾತಾ ಲಕ್ಮನೆ ಇಲ್ಲಿ ಅಬ್ಬರದ ಬಿನ್ನಾಣ, ಮಾತಿನ ಸಂಚಲಿ ಮೌನ ಗೆಲ್ಲುವುದಿಲ್ಲಸಭ್ಯ ನಡೆಗೆಲ್ಲ ನ್ಯಾಯದ ತಕ್ಕಡಿಯಲಿ ಮಾನ್ಯತೆ ಸಿಗುವುದಿಲ್ಲ ತಾ ನಡೆವ ದಾರಿಯೆಲ್ಲವೂ ರಾಜಪಥವೆಂಬ ವಿಭ್ರಮೆ ತರವೇಯಾವ ಪಯಣವೂ ಕವಲೊಡೆಯದೇ ಗುರಿ ತಲುಪುವುದಿಲ್ಲ ಶಶಿ ಸೂಸುವ ಕಿರಣ ಪ್ರಭೆ ಇಳೆಯ ಕಣಕಣಕೂ ತಂಪನ್ನೆರಚದೇಒಳತೋಟಿಗಳ ತೂರಿದಂತೆ ಎದೆಯ ತೊಳಲಾಟ ತಗ್ಗುವುದಿಲ್ಲ ಅಂತರಂಗ ತೆರೆದಿಟ್ಟ ಭಾವಗಳು ಬೀದಿಗಳಲಿ ಬಿಕರಿಯಾಗುತ್ತವೆಸುಳ್ಳಿನ ಜಗದಲಿ ಸತ್ಯದ ಕದಪಿಗಿಟ್ಟ ಮಸಿ ಬಿಳಿಯಾಗುವುದಿಲ್ಲ ನೇರವಾಗಿ ನಿಂತಷ್ಟೂ ವಕ್ರರೇಖೆಯ ಬಣ್ಣ ಬೆನ್ನಿಗೆ ಮೆತ್ತುವರುಒಳದನಿಯ ಧಿಕ್ಕರಿಸಿ ನಡೆದಂತೆಲ್ಲ ಬಂಧ ಹಿತವಾಗುವುದಿಲ್ಲ ಕೈ ಚೀಲ ಹಿಡಿದು ಹಲ್ಕಿರಿದು ಓಲೈಸುವವರಿಗಷ್ಟೇ ಮನ್ನಣೆಯಿಲ್ಲಿನಲ್ನುಡಿಗಳಿಗೂ ಕೆಸರೆರಚುವವರ ಘನತೆ ಅಟ್ಟಕ್ಕೇರುವುದಿಲ್ಲ ಒಲವು, ಆದರವಿಲ್ಲದ ಕಡೆ ಇದ್ದು ಸಾಧಿಸುವುದೇನು “ಸುಜೂಅಸಲಿ, ನಕಲಿಯನೆ ಒರೆ ಹಚ್ಚಲು ಸೋತರೆ ಮೌಲ್ಯವಿರುವುದಿಲ್ಲ **************************

ಗಜಲ್ Read Post »

ಕಾವ್ಯಯಾನ

ವರುಣರಾಗ

ಕವಿತೆ ಅರುಣ್ ಕೊಪ್ಪ ಹಸಿರು ಚಿಮ್ಮುವ ಬುವಿಯೊಳು….ವರುಣನ ಹನಿಗಳ ಸದ್ದು.!ಕವಿದ ಮೋಡಗಳು…ಎಲ್ಲೋ ಸೇರಿಹೋದವು…ಹನಿಯೊಂದೇ …..ಕೂಗುತ್ತಾಕ್ರಮಿಸುತ್ತಿದೆ….ಭೂ ಗರ್ಭವ!ಆಳ ಆಳವನು ಸೇರುವಾಸೆ….ಎಲ್ಲ ಕಡೆ ನರ್ತನ ಮಾಡುವಾಸೆ…ನಿನ್ನ ಹಾಡಿಗೆ ದ್ವನಿಗೂಡುವಹಿಂಡೇ ಈ ಪ್ರಪಂಚ!!ನೀ ಇದ್ದರೆ ಜೀವವೇ ಸಂಗೀತಮಯ…ಹಸಿರು…,ಹಸೀವು…,ಒಲವು ಎಲ್ಲ…..ನೀ ನರಿಯದಿಹ ಮಿಂಚು!!ಬಿರುಗಾಳಿ ಬೆನ್ನಟ್ಟಿ ಬಂದಾಗಆಗುವ ಭಯ!!ನೀ ಕಾಣದಾದಾಗ ಆಗುವ ವ್ಯಥೆ …..ಬಣ್ಣಿಸಲಾಗದಷ್ಟು ಭಾವಪೂರಿತ…ನೀ ಸುರಿವ ಸದ್ದೆ ಚಂದನೀ ಬೆರೆವ ಸಾಲು ಸಾಲುನೆರೆಗಳೇ ….ಪ್ರಾಕೃತಿಕ ಸೌಂದರ್ಯದ ಅಂತರಾಳ….ಆದರೆ ನಿನ್ನ ಆಳವ ಬಲ್ಲವರಾರಿಲ್ಲ….ಸಾಗರವೇ….??ನೀ ಮಳೆಯ ಮಗು,ನಗು,ಮಡದಿ,ಎಲ್ಲ ವೂ ನೀನೇ. ಎಲ್ಲ ನಿನ್ನ ಮಾಯೇ **************

ವರುಣರಾಗ Read Post »

ಕಾವ್ಯಯಾನ

ಬಂದಿಯಾಗಿಹ ರವಿ

ಕವಿತೆ ನೀ.ಶ್ರೀಶೈಲ ಹುಲ್ಲೂರು ಉದಯಿಸುವ ರವಿಯ ದಿನದೋಟಕೆಅಡ್ಡಿಯಾಗಿದೆ ಕುರಿಮೋಡ ಕರಿಸಾಲುಕುರಿಗಾರ ಪವನನೆದ್ದು ಬರುವನಕಹಿಂಡು ಕುರಿಗಳ ನಡುವೆ ರವಿ ಕಂಗಾಲು ಮಳೆಗಾಲದೀಗಿನೀ ಹಗಲ ಹೊತ್ತುಮೋಡಗಳದು ನಿಲದ ನಿತ್ಯ ರಂಪಾಟಕೆಂಪಾದವನಿಗದೇನೋ ಮಮಕಾರಮೋಡಗಳೊಂದಿಗವನದೂ ತುಂಟಾಟ ಶುಕಪಿಕಗಳ ಇನಿದನಿಯ ಗಾಢಮೌನಮಂಕಾದ ಮನಗಳಲಿ ಗೌಣ ಸೊಗಸುಅವನೆದ್ದರೆ ಬೆಳಗು ಏಳುವರು ಎಲ್ಲಹೊದಿಕೆಯಡಿಯಲೆ ಕಾಣುವರು ಕನಸು ಸುರಿವ ವರುಣನ ನಡುವೆ ನೆಲದ ಗಾನಝರಿ ತೊರೆ ನದಿಗಳಲಿ ರಭಸದೋಟತಡೆವರಾರಿಲ್ಲ ತಿಮಿರದಾಲಿಂಗನವಮೋಡಗಳಡಿಯೆ ರವಿಯ ಮಿಲನ ಕೂಟ ಕಡಲಿನೊಡಲಿಗದೇನೋ ಸಡಗರರವಿಯ ಚುಂಬನವು ಮರೆತ ಗೀತಅಮ್ಮನೊಡಲಲಿ ನದಿಗೆ ಧನ್ಯ ಭಾವಕಡಲ ಕುಡಿಗಳಲದೋ ನವ ಸಂಗೀತ **********

ಬಂದಿಯಾಗಿಹ ರವಿ Read Post »

ಕಾವ್ಯಯಾನ

ಕಣ್ಣುಗಳಲಿ ಮುಚ್ಚಿಡಲಾಗುತ್ತಿಲ್ಲ ಒಲವ

ಕವಿತೆ ನಾಗರಾಜಹರಪನಹಳ್ಳಿ ಪ್ರತಿಕ್ಷಣದ ಉಸಿರುನನ್ನೆದೆಯಲ್ಲಿ ಬಿಸಿರಕ್ತವಾಗಿದೆಕೈ ಬೆರಳ ಸ್ಪರ್ಶಹಾಡಿದ ರಾಗ ಅನುರಣಿಸುತ್ತಿದೆಕಣ್ಣುಗಳಲ್ಲಿ ಮುಚ್ಚಿಡಲಾಗುತ್ತಿಲ್ಲಒಲವ ಒಳಹರಿವು ……..** ಹಗಲು ರಾತ್ರಿಗಳನ್ನುಂಡು ನಿಶಬ್ದವಾಗಿಮಲಗಿರುವ ಬೆಟ್ಟಸಾಲುಗಳೇಬಯಲು ಕಣಿವೆ ಮುದ್ದಿಸಿ ಸಾಗುವಮಂಜು ಮೋಡಗಳೇಆಕೆಗೆಮುಗಿಲ ಸಂದೇಶವ ಅನುವಾದಿಸಿ ಬಿಡಿ ಈಗೀಗಪ್ರತಿ ಮಾತು ಒಲವಿನ ಸಂದೇಶಹೊತ್ತು ತರುತ್ತಿದೆಬದುಕು ಹಿತವೆನಿಸುತ್ತಿದೆಹಕ್ಕಿಯ ಇಂಚರಮಳೆಯ ಧ್ಯಾನಕ್ಕೂಹೊಸ ಅರ್ಥವ್ಯಾಪ್ತಿ ದಕ್ಕುತ್ತಿದೆ…….** ನಿನ್ನ ಬೆರಳಸ್ಪರ್ಶದಿಂದಕವಿತೆಗೆ ಹೊಸಅರ್ಥ ದಕ್ಕಿತುನಿನ್ನ ಹೆರಳಪರಿಮಳ ನನ್ನೆದೆಯಲ್ಲಿಹೊಸ ತರಂಗಗಳಅಲೆ ಎಬ್ಬಿಸಿತು

ಕಣ್ಣುಗಳಲಿ ಮುಚ್ಚಿಡಲಾಗುತ್ತಿಲ್ಲ ಒಲವ Read Post »

ಕಾವ್ಯಯಾನ

ಅರಮನೆ

ಕವಿತೆ ಕೃಷ್ಣಮೂರ್ತಿ ಕುಲಕರ್ಣಿ. ಅರಮನೆಗಳು ಎಂದರೆಹಾಗೇಯೆ ಸ್ವಾಮಿ,ಒಂದಿಲ್ಲ‌ ಒಂದುದಿನಅವು ತಮ್ಮದಿಮಾಕು ದೌಲತ್ತುಕಳೆದುಕೊಳ್ಳುತ್ತವೆ!ಬದುಕಿನಲ್ಲಿ ಬರುವಸುಖ ದುಃಖಗಳಂತೆ,ದುಃಖದ ನೋವಿಗೆ ನರಳದೆ,ಸುಖದ ಸಡಗರಕ್ಕೆ ಹಿಗ್ಗದೆ,ಅಲ್ಲಿರುವ ಬಾಗಿಲು ಕಿಟಕಿಗೋಡೆಯಲಿ ಹೂತಿರುವ ಗೂಟಗಳು ಮಾತ್ರ ನಿರಂಬಳವಾಗಿಉಳಿಯಲು ಸಾಧ್ಯ,ಅಲ್ಲಿಯೇ ಹುಟ್ಟಿಬೆಳೆದಇರುವೆಗಳು ಸಾಗಿಹೋಗುತ್ತವೆ,ಅರಮನೆ ಇರುವ ಮನೆಯಲ್ಲ,ಅದೊಂದು ಸ್ಮಾರಕ ಎಂಬುದು ಅವುಗಳ ಗಮನಕ್ಕೆ ಬಂದಿರಬೇಕು,ತಾವು ಕಟ್ಟುವ ಗೂಡಿಗೆಗೆದ್ದಿಲೊ ಹಾವೋ ಬರುವಹಾಗೆ,ದುಃಸ್ವಪ್ನ ಕಂಡಿರಲೂಬೇಕು,ವಿಶಾಲವಾದ ಸೌಧ ಕಟ್ಟಿದವರು,ವಿಶಾಲ ಮನೋಭಾವ ಬೆಳೆಸಲಿಲ್ಲ,ಅರಮನೆಯ ಅಂಗಳದಲ್ಲಿ,ಭಿನ್ನತೆಯ ಕರ್ಕಿ ಆಳಕ್ಕೆಬೇರುಗಳ ಇಳಿಬಿಟ್ಟು ದಟ್ಟವಾಗದಿದ್ದರೂ,ದಿಟ್ಟವಾಗಿಯೇ ಹಬ್ಬಿಹರಡಿದ್ದು,ಕಟ್ಟಿದವರ ಗಮನಕ್ಕೆ ಬರಲೇಇಲ್ಲ,ಸಂಕುಚಿತ ಮನೋಭಾವಗಳಸಂತೆ ಜರುಗಿದಾಗ,ಅರಮನೆ ಆಡಂಬರ‌ ಕಳೆದುಕೊಂಡು ಬರಡಾಯಿತು,ಏಕಾಂಗಿ ಸ್ಮಾರಕದ ಸುತ್ತಲೂ,ಬೀಸುವ ಬಿರುಗಾಳಿ ರಭಸಕ್ಕೆಮಾಗಿದ ಜೀವದಂತೆ ಸಹಿಸದನೋವು,ಮನೆಮುಂದೆ ಬೆಳೆದ ತುಳಸಿಹಿತ್ತಲಿನ ಮಲ್ಲಿಗೆ ಬಳ್ಳಿ,ಹೇಗೊ ಅಸ್ತಿತ್ವ ಉಳಿಸಿಕೊಂಡಿವೆ,ಪೂಜೆಗೆ ಕೊಂಡ್ವ್ಯಲು ಬರುವರೆಂದು,ದೊರೆ ಇರದ ಅರಮನೆಗೆಕಾವಲುಗಾರನೇಕೆ ಇದ್ದಾನು?ಪರಿವಾರದವರೇಕೆ ಸುಳಿದಾರು?ಸಂತೆ ಮುಗಿದಮೇಲೆಅಲ್ಯಾರು ಉಳಿದಾರು?ಅರಮನೆ ಅಂಗಳದಿ ಬೀಜಬಿತ್ತಲು ಮುಂದಾದರೈತರಿಗೂ ತಕರಾರು,ಗೊಂದಲದ ಗೂಡು ಅರಮನೆ, *********

ಅರಮನೆ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಅನ್ನಪೂರ್ಣಾ ಬೆಜಪ್ಪೆ ಇದ್ದರೂ ನೋವುಗಳು ಹಲವಾರು ನಗುತಿರು ಸಖೀಬಿದ್ದರೂ ಧೃತಿಗೆಡದೆ ಪುಟಿದೆದ್ದು ಸಾಗುತಿರು ಸಖೀ ವಿಶಾಲ ಜಗವಿದು ಅವಕಾಶಗಳಿಗಹುದೇನು ಕೊರತೆವಿಷಮ ಭಾವಗಳಳಿಸಿ ಹೊಸತನಕೆ ತೆರೆಯುತಿರು ಸಖೀ ಮುಂದೆ ಸರಿದಂತೆಲ್ಲ ಜಗ್ಗಲೆತ್ನಿಸುವ ಮನವೆ ಬಹುವಿಲ್ಲಿಹಿಂದೆ ಜಾರದಂತೆ ಸಮಸ್ಥಿತಿಯ ಕಾಯುತಿರು ಸಖೀ ಸೋಲು ಬಂತೆನಲು ಕೊರಗಿ ಹತಾಶೆ ತೋರುವುದೇಕೆಗೆಲುವು ಪಡೆಯುವ ತನಕವೂ ಬಿಡದೆ ಓಡುತಿರು ಸಖೀ ಕ್ಲೇಶ ಕಳೆಯಲು ಅನುವಿಗೆ ವಿಶ್ವಾಸವೇ ಬಲವಲ್ಲವೇನುತೋಷಕಾಗಿ ಕರ್ಮ ಸಾಧನೆಯ ಕಡೆ ನಡೆಯುತಿರು ಸಖೀ ********

ಗಝಲ್ Read Post »

You cannot copy content of this page

Scroll to Top