ಬಂದಿಯಾಗಿಹ ರವಿ
ಕವಿತೆ ನೀ.ಶ್ರೀಶೈಲ ಹುಲ್ಲೂರು ಉದಯಿಸುವ ರವಿಯ ದಿನದೋಟಕೆಅಡ್ಡಿಯಾಗಿದೆ ಕುರಿಮೋಡ ಕರಿಸಾಲುಕುರಿಗಾರ ಪವನನೆದ್ದು ಬರುವನಕಹಿಂಡು ಕುರಿಗಳ ನಡುವೆ ರವಿ ಕಂಗಾಲು ಮಳೆಗಾಲದೀಗಿನೀ ಹಗಲ ಹೊತ್ತುಮೋಡಗಳದು ನಿಲದ ನಿತ್ಯ ರಂಪಾಟಕೆಂಪಾದವನಿಗದೇನೋ ಮಮಕಾರಮೋಡಗಳೊಂದಿಗವನದೂ ತುಂಟಾಟ ಶುಕಪಿಕಗಳ ಇನಿದನಿಯ ಗಾಢಮೌನಮಂಕಾದ ಮನಗಳಲಿ ಗೌಣ ಸೊಗಸುಅವನೆದ್ದರೆ ಬೆಳಗು ಏಳುವರು ಎಲ್ಲಹೊದಿಕೆಯಡಿಯಲೆ ಕಾಣುವರು ಕನಸು ಸುರಿವ ವರುಣನ ನಡುವೆ ನೆಲದ ಗಾನಝರಿ ತೊರೆ ನದಿಗಳಲಿ ರಭಸದೋಟತಡೆವರಾರಿಲ್ಲ ತಿಮಿರದಾಲಿಂಗನವಮೋಡಗಳಡಿಯೆ ರವಿಯ ಮಿಲನ ಕೂಟ ಕಡಲಿನೊಡಲಿಗದೇನೋ ಸಡಗರರವಿಯ ಚುಂಬನವು ಮರೆತ ಗೀತಅಮ್ಮನೊಡಲಲಿ ನದಿಗೆ ಧನ್ಯ ಭಾವಕಡಲ ಕುಡಿಗಳಲದೋ ನವ ಸಂಗೀತ **********









