ಕಾವ್ಯಯಾನ
ಸೋಲೆಂಬ ಸಂತೆಯಲಿ ದೀಪ್ತಿ ಭದ್ರಾವತಿ ಹೀಗೇಕೆ ಬೆನ್ನು ಬಿದ್ದಿದೆ ಸೋಲುರಚ್ಚೆ ಹಿಡಿದ ಮಗುವಿನಂತೆಹೆಜ್ಜೆ ಇಟ್ಟೆಡೆಗೆ ಕಣ್ಣು ನೆಟ್ಟಿದೆತಾಳಬಲ್ಲೆನೇಸವಾರಿ?ಕಣ್ಣಂಚಲಿಮುತ್ತಿಕ್ಕುತ್ತಿದೆ ಸೋನೆಸುಡುವ ಹರಳಿನಂತೆಒರೆಸಿಕೊಳ್ಳಲೇ ಸುಮ್ಮನೆ?ಎಷ್ಟೊಂದು ಸಂಕಟದ ಸಾಲಿದೆಸೋಲೆಂಬ ಮೂಟೆಯೊಳಗೆನಟ್ಟ ನಡು ಬಯಲಿನಲಿ ಒಂಟಿಮತ್ತು ಒಂಟಿ ಮಾತ್ರಹರಿಯಬಲ್ಲದೇ ಹರಿದಾರಿ?ನಡೆಯುತ್ತದೆಯೇ ದಿಕ್ಕು ಮರೆತ ನೌಕೆ?ಸುತ್ತ ಹತ್ತೂರಿಂದ ಬಂದ ಪುಂಡಗಾಳಿ ಹೊತ್ತೊಯ್ದು ಬಿಡುವುದೇನೆಟ್ಟ ಹಗಲಿನ ಕಂಪು?ಯಾವ ದಾರಿಯ ಕೈ ಮರವೂಕೈ ತೋರುತ್ತಿಲ್ಲಮರೆತು ಹೋಗಿದೆ ದಿಕ್ಸೂಚಿಗೂಗುರುತುಕಗ್ಗತ್ತಲ ಕಾರ್ತಿಕದಲಿಹಚ್ಚುವ ಹಣತೆಯೂ ನಂಟು ಕಳಚಿದೆಮುಖ ಮುಚ್ಚಿಕೊಂಡೀತೆಬೆಳಕು ಬಯಲ ಬೆತ್ತಲೆಗೆ?ಮುಗ್ಗರಿಸಿದ ಮಧ್ಯಹಾದಿಯಮಗ್ಗಲು ಬದಲಿಸಲೇ?ನೂರೆಂಟು ನವಿಲುಗರಿಗಳನಡುವೆ ಹಾರಿದ ಮುಳ್ಳುಎದೆ ಚುಚ್ಚಿದೆ, ಕಣ್ಣು ನೆಟ್ಟಿದೆಮತ್ತು ನೆತ್ತಿಯನ್ನೂ ಕೂಡಸೋಲು ಭಾಷೆ ಬದಲಿಸುವುದಿಲ್ಲನನಗೋ ಭಾಷೆಗಳು ಬರುವುದೇ ಇಲ್ಲ.. ***************









