ಕಾವ್ಯಯಾನ
ಬರೆಯುವ ನಿತ್ರಾಣದ ತಾಣ ನೂರುಲ್ಲಾ ತ್ಯಾಮಗೊಂಡ್ಲು ಬರೆಯುವುದೆಂದರೆ ಬಿಳಿಯಾದ ಪರ್ವತಗಳ ಮೇಲೆಹಾರುವ ಹಕ್ಕಿಗಳ ರುಜುವಲ್ಲಕೊರಳೆತ್ತಿ ಕೂಗುವ ಕೋಗಿಲೆಯ ರೆಕ್ಕೆ ಪುಕ್ಕಗಳೊಳಗಿನ ಹೇನಿನ ಕಡಿತದ ಕುರಿತು ದಾಖಲಿಸುವುದು ಪಾಡು ಹಾಡಾಗುವ ಮಣ್ಣು ಬೀಜ ಗರ್ಭದ ತಪ್ತತೆ ಆವಾಹಿಸುವುದುಹೂವು ಹಣ್ಣು ಪತ್ರ ಮಾಗಿ ಬಾಗಿ ಶಿಶಿರದಲಿ ನಡುಗಿ ಕೊರಗಿಕೊನೆಗೆ ಪತ್ಝಡ್ ನಲಿ ಉದುರುವಅದರ ಕೊನೆಯುಸಿರ ನಾದವನು ಎದೆಗಿಳಿಸುವುದು ಬರಿ ಬೆಳಗು ಬಣ್ಣಗಳ ಪದಗಳೇ ಬೇಕಿಲ್ಲಸೂರ್ಯ ಚಂದ್ರರ ಕವಿತೆಯ ಬನಿಗೆಕರುಳು ಕತ್ತರಿಸುವ ಕರಾಳ ಇರುಳ ಇಳೆಯಲಿನೆಲ-ನೊಸಲು ಪದಗಳ ನಿಟ್ಟುಸಿರುದುಮುಗುಡಬೇಕು ಕಸುಬುದಾರಿಕೆಯಲಿ ಜನಮನದ ಪ್ರಭುತ್ವದ ಮೋಹ, ದೈವಪರತೆರಂಗಸ್ಥಳದ ಪರದೆ ಹಿಂದಿನ ಗುಲಾಮಿತನವಿದ್ದಂತೆಕಲೆಗೆ ಜೀವಸೆಲೆ ,ಕೃತಜ್ಞತೆ ಇಲ್ಲವೆಂದ ಮೇಲೆಯಾವ ಕಸುಬಿನ ನೆಲೆಯೂ ಕೊಲೆಯ ತಾಣವೇ. **********









