ಕಾವ್ಯಯಾನ
ಬದುಕು ಮತ್ತು ಬಣ್ಣಗಾರ ನೂರುಲ್ಲಾ ತ್ಯಾಮಗೊಂಡ್ಲು ಬದುಕು ಮತ್ತು ಬಣ್ಣಗಾರ ಹೊರಗೆ ಎಷ್ಟೊಂದು ಗೊಂದಲ, ಗಲಭೆ, ಚೀರಾಟ ಹುಟ್ಟು ಹಾಕಿದೆಪಾರ್ಲಿಮೆಂಟ್ ನ ಕೊಣೆಗಳು ಮೌನದ ಜಪದಲ್ಲಿ ಮುಳುಗಿವೆಯೋ ?ಇಲ್ಲ , ಹಾಗೆ ಆಗಲು ಸಾಧ್ಯವಿಲ್ಲಜೀವಮಿಡಿತದ ಸದ್ದು ಅಷ್ಟು ಬೇಗ ಅಳಿದುಹೋಗದುನಾನು ನನ್ನಂಥಹ ಲಕ್ಷ ಲಕ್ಷ ಎದೆಗಳಲಿ ಜೀಕುತ್ತಿರುವ ರಕ್ತ, ದಂಗೆ ,ಕ್ರಾಂತಿ ,ಬಂಡಾಯ ದನಿ ಕಮರಿ ಹೋಗದು ಕಾಲಭೈರನ ಹಾದಿ ಮುಗಿಲು ಹರಿಯೊವರೆಗೂ ಹಾದಿದೆರಂಗದ ಮರೆಯಲಿ ನಿನ್ನ ಮುಖವಾಡದ ವ್ಯಂಗ್ಯ ನಗೆಬೋಳೆ ಶಂಕರನ ಕಥಿತ ಕಥನ !ನಾಟಕಾಂಕಕ್ಕೆ ನೂರೆಂಟು ನೆಪದ ಪಾತ್ರ ಈಗ ನಿನ್ನಿಂದ ಸಾಧ್ಯ… ದೂರಿದಷ್ಟು ದುಬಾರಿಯಾದ ಬೈಗಳುಆದರೆ ಪೆಟ್ರೋಲ್ , ಗ್ಯಾಸ್, ಈರುಳ್ಳಿಗಿಂತ ಹೆಚ್ಚೇನಲ್ಲಜನರ ಸಂಕಟ ,ತಾಳ್ಮೆ , ಸಾವು ನೋವುಗಳ ಪಾತ್ರ ನಿಜದ ರಂಗದಲ್ಲಿ ರಣ ರಣಿಸುತ್ತಿವೆನೀನು ಮಾತ್ರ ಗೋಸುಂಬೆ ಬಣ್ಣಧಾರಿ !ನಿನಗೆ ಮಣ್ಣ ಕುಲದ ಬದುಕಿನ ಪಾತ್ರ ತಿಳಿಯದುಏಕೆಂದರೆನೀನು ಬಣ್ಣ ಕಲಸಿ ವರೆಸಿ ಈಗನೀನೇ ಮೆತ್ತುಕೊಂಡವನುಬಣ್ಣಗಳ ಬಣ್ಣನಿಯ ಮಾತಷ್ಟೇ ಆಡುವ ನೀನೇನುಸೂತ್ರಧಾರನೇನಲ್ಲನಿನ್ನ ಬಣ್ಣ ಬಣ್ಣ ತರ್ಕದ ಮುಖವಾಡ ಕಳಚಿಸಾಧ್ಯವಾದರೆ ಹೊರಗೆ ಬಾಇಲ್ಲ ಬಣ್ಣ ಬಳಿದುಕೊಂಡೇ ಉಳಿ…ನಾಳೆ ಮುಂಗಾರಲಿ ಬಣ್ಣ ಕೊಚ್ಚಿಹೋಗುವವರೆಗೂಈಗ, ಬಣ್ಣಗಾರನ ನಿಜದ ಬಣ್ಣ ಬಯಲಾಗಿದೆ ***********









