ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಹೂಗನಸು ಬಾಲಕೃಷ್ಣ ದೇವನಮನೆ ಹಿತವಾದ ಹೂಗನಸಲಿಸಂಚಾರಿ ಮಧುರ ಭಾವದುಂಬಿತಿಳಿಯಾದ ಬಾನಲ್ಲಿ ರೆಕ್ಕೆ ಹರಡಿಇಳೆಗೆ ಚಂದ್ರನನೇ ಹೊತ್ತುತಂದಿದೆ ಕತ್ತಲೆ ಮೈಗೆ ಮುಸ್ಸಂಜೆಬಳಿದ ರಂಗು ಹಾಗೇ ಉಳಿದಿದೆತಬ್ಬಿಕೊಳುವ ತೆರೆಯ ಆಟದಂಡೆಯಲಿ ಇನ್ನೂ ಮುಂದುವರಿದಿದೆ… ಎಲೆಯುದುರಿದ ಶಿಶಿರಕೆತಂಗಾಳಿ ಬೀಸಿ ಚೈತ್ರ ಬಂದಿದೆಹೂ ದಳದ ಮೇಲೆಇಬ್ಬನಿ ಸಾಲು ಸಂತೆ ತೆರೆದಿದೆ ಚಿಗುರು ಮೊಗ್ಗಿನ ಮನಸುಪರಿಮಳದ ಪಯಣ ಹೊರಟಿದೆತುಂತುರು ಹನಿಗಳ ಹಿಂಡು ರೆಪ್ಪೆ ತೆರೆದುಹೂಗನಸಿಗೆ ಬೆಳಕು ಹರಿದಿದೆ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಳೆಹಾಡು-2 ಆಶಾ ಜಗದೀಶ್ ಚಿಟಪಟ ಸದ್ದಿಗೆ ಸೋಲದ ಗುಂಡಿಗೆಇದೆಯೇ ಹೇಳು ಮಳೆ ಹನಿಯೇ… ಗೂಡಿನೊಳಗೆ ಬಚ್ಚಿಟ್ಟುಕೊಂಡಗುಬ್ಬಿ ಕಣ್ಣ ಬೆರಗು ನೀನುನೆಂದ ಗರಿಗಳ ಹರವಿ ಒಣಗಿಸಿಕೊಳ್ಳುವಾಗಕಾಡಿದ ಕಾಡುವ ನೆನಪು ನೀನುಶಂಕು ಹೊತ್ತ ಹುಳುವಿನಕೋಡು ನೀನು ಅಂಜಿಕೆ ನೀನುನಾಚಿಕೆ ನೀನು ಮೈಯ್ಯ ಪಸೆಯೂ ನೀನು ನೂರು ವರ್ಷವನ್ನೇ ಕ್ಷಣಿಕ ಎಂದುಕೊಳ್ಳುವನಮ್ಮೆದುರು ಮಳೆಗೆ ಹುಟ್ಟಿ ಸಾಯುವಹುಳುಗಳೆಷ್ಟೋ ಎಷ್ಟೊಂದು ಪಾಠಗಳಬಿಟ್ಟು ಹೋಗುತ್ತವೆ!ಮಳೆಯೇ.. ನಿನ್ನದೊಂದು ಸ್ಪರ್ಷಕ್ಕೆಬಲಿಯಾಗಲೇಂದೇ ಹುಟ್ಟು ಪಡೆಯುತ್ತವೆಮತ್ತೆ ಮತ್ತೆ ಹುಟ್ಟಿ ಸಾಯುತ್ತವೆ ನಾವು ಮಳೆಯೊಂದರ ಹನಿಯನ್ನೂಒಳಗಿಟ್ಟುಕೊಳ್ಳಲಾಗದೆ ಕುಡಿದುಹೊರ ಚೆಲ್ಲುತ್ತೇವೆ…ಆರದ ದಾಹವನ್ನು ಪೊರೆಯುತ್ತಾಮಳೆಯ ಕರೆಯುವ ವಿಧಾನವನ್ನುಮರೆಯುತ್ತೇವೆ ಮಳೆಯೇ ಈಗೊಂದು ಹಾಡನ್ನುಗುನುಗಬೇಕೆನಿಸುತ್ತಿದೆನಿನ್ನದೇ ಪಲ್ಲವಗಳ ಹಾಡೊಂದನ್ನು ಕಟ್ಟಿನಿನ್ನನ್ನು ಮುಚ್ಚಟೆಯಿಂದಕರೆಯಬೇಕೆನಿಸುತ್ತಿದೆಸೋ….. ಗುಟ್ಟುತ್ತಾ…ರಿಮಝಿಮ ತಾಳಕ್ಕೆ ಸರಿಗಟ್ಟಿ…. **********

ಕಾವ್ಯಯಾನ Read Post »

ಕಾವ್ಯಯಾನ

ನಾವು ಪ್ರಜ್ವಲಿಸಬೇಕು’

 ‘ ವಸುಂಧರಾ ಕದಲೂರು ಸೂರ್ಯನನ್ನು ನಮ್ಮಿಂದ ಬಚ್ಚಿಟ್ಟಿದ್ದಾರೆ.ನಾವಂತೂ ಕತ್ತಲಲ್ಲಿ ಕೂರುವಜಾಯಮಾನದವರಲ್ಲ, ಹುಡುಕುತ್ತೇವೆಬೆಳಕಿನ ನಾನಾಮೂಲಗಳನ್ನುನಮ್ಮ ಹಾದಿಗಳಲಿ. ನಮಗೆ ಬೆಳಕು ಬೇಕಿದೆ. ಅವರು ಬಂದೂಕು ತೋರುತ್ತಾರೆಉಸಿರು ಬಿಡಬಾರದೆಂದು ನಮಗೆಭಯವೆಂಬುದು ನಿರ್ಧಾರಕವಲ್ಲ ಕಡೆಗೆನಿರ್ಣಾಯಕವೂ ಅಲ್ಲ. ನಮಗೆ ಉತ್ತರ ಬೇಕಿದೆ. ಹಸಿದ ಬದುಕಿಗೆ ಹಳಸಿದ ಮೇಲೋಗರವೇಮೃಷ್ಟಾನ್ನ ಎಂಬ ಆಸೆಹುಟ್ಟಿಸುವಕನ್ನಕೋರರು ನಮ್ಮ ಕನಸಿನ ತಿಜೋರಿಗೆಹುಡುಕಾಡುತ್ತಾರೆ ಸದಾ ಎಚ್ಚರಿರುವನಾವು ಮಲಗುವುದಿಲ್ಲ. ನಮಗೆ ಜಾಗೃತಿ ಬೇಕಿದೆ ನಿಡುಗಾಲದ ಮೌನಕ್ಕೆ ದನಿಯ ತುಂಬುತ್ತಾ, ಅನುಗಾಲದ ನೋವಿಗೆ ಮುಲಾಮು ಹಚ್ಚುತ್ತಾಸಂತೈಸುವ ನಮ್ಮದೇ ಕೈಗಳನ್ನು ನಾವೀಗಬಲಪಡಿಸಬೇಕಿದೆ, ನಮಗೆ ನಿಯತ್ತಿನ ಹೆಗಲು ಬೇಕಿದೆ. ಮಣಭಾರದ ದುಃಖ ಮರೆತು ತೆರೆದುಕೊಳ್ಳಲುನಾವು ನಿರುಮ್ಮಳಾಗಬೇಕು. ನಮಗೆ ನ್ಯಾಯ ಬೇಕು ನಮ್ಮ ದನಿಗೆ ಕಿವಿ ಬೇಕು, ನಮಗೆ ಶಕ್ತಿ ಬೇಕು.ಸ್ವಯಂ ಪ್ರಜ್ವಲಿಸಲು ನಾವೇ ಉರಿಯಬೇಕು.ನಮಗೆ ಹೊಳೆವ ಯುಕ್ತಿ ಬೇಕಿದೆ. ********* .

ನಾವು ಪ್ರಜ್ವಲಿಸಬೇಕು’ Read Post »

ಕಾವ್ಯಯಾನ

ಕಾವ್ಯಯಾನ

ನೆಲ ಮುಗಿಲು ಫಾಲ್ಗುಣ ಗೌಡ ಅಚವೆ. ಗುಡ್ಡಗಳ ಮಲೆಯನ್ನು ತಬ್ಬಿ ಮಲಗಿದೆ ಬಾನುಮುಸುಕಿ ಮುದ್ದಾಡುತಿದೆ ಮಂಜು ತಾನು ಚಂದಿರನ ರಮಿಸುವ ಅಬ್ಬರದ ಕಡಲಂತೆಹಿಮ ಹೊದಿಕೆ ಹೊದೆಯುತಿದೆ ಇಳೆಯು ತಾನು ಸಂಗೀತದಾಲಾಪ ಅನುರಣಿಸುತಿದೆ ಇಲ್ಲಿಕಲೆಯ ಸಾಕ್ಷಾತ್ಕಾರ ಸಾಕಾರವಿಲ್ಲಿ ದಿಗಂತದಾಚೆಯೂ ವ್ಯಾಪಿಸಿದೆ ಅಗಸವುಅಲೆವ ನದಗಳನೇರಿ ತಾನು ಸೂರ್ಯನನು ಮರೆಸುತ್ತ ಏಕಾಂತವ ಸರಿಸಿಲೋಕಾಂತ ಸಾರಿತಿದೆ ಮರವು ತಾನು ಸಾಲು ಬೆಟ್ಟಗಳೆಲ್ಲ ನಿನ್ನಂತೆ ಕಾಣುತಿವೆಪ್ರಕೃತಿಯಂತಿಹ ನಿನ್ನ ತಬ್ಬಿ ಹಿಡಿದುಹೂಮಳೆಯ ದನಿಯಂತ ಹೂನಗೆಯು ನಿನ್ನದುಮಳೆಯುಂಟು ನಿನ್ನ ಹೆಸರಿನೊಳಗು! *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬರೆಯುವ ನಿತ್ರಾಣದ ತಾಣ ನೂರುಲ್ಲಾ ತ್ಯಾಮಗೊಂಡ್ಲು ಬರೆಯುವುದೆಂದರೆ ಬಿಳಿಯಾದ ಪರ್ವತಗಳ ಮೇಲೆಹಾರುವ ಹಕ್ಕಿಗಳ ರುಜುವಲ್ಲಕೊರಳೆತ್ತಿ ಕೂಗುವ ಕೋಗಿಲೆಯ ರೆಕ್ಕೆ ಪುಕ್ಕಗಳೊಳಗಿನ ಹೇನಿನ ಕಡಿತದ ಕುರಿತು ದಾಖಲಿಸುವುದು ಪಾಡು ಹಾಡಾಗುವ ಮಣ್ಣು ಬೀಜ ಗರ್ಭದ ತಪ್ತತೆ ಆವಾಹಿಸುವುದುಹೂವು ಹಣ್ಣು ಪತ್ರ ಮಾಗಿ ಬಾಗಿ ಶಿಶಿರದಲಿ ನಡುಗಿ ಕೊರಗಿಕೊನೆಗೆ ಪತ್ಝಡ್ ನಲಿ ಉದುರುವಅದರ ಕೊನೆಯುಸಿರ ನಾದವನು ಎದೆಗಿಳಿಸುವುದು ಬರಿ ಬೆಳಗು ಬಣ್ಣಗಳ ಪದಗಳೇ ಬೇಕಿಲ್ಲಸೂರ್ಯ ಚಂದ್ರರ ಕವಿತೆಯ ಬನಿಗೆಕರುಳು ಕತ್ತರಿಸುವ ಕರಾಳ ಇರುಳ ಇಳೆಯಲಿನೆಲ-ನೊಸಲು ಪದಗಳ ನಿಟ್ಟುಸಿರುದುಮುಗುಡಬೇಕು ಕಸುಬುದಾರಿಕೆಯಲಿ ಜನಮನದ ಪ್ರಭುತ್ವದ ಮೋಹ, ದೈವಪರತೆರಂಗಸ್ಥಳದ ಪರದೆ ಹಿಂದಿನ ಗುಲಾಮಿತನವಿದ್ದಂತೆಕಲೆಗೆ ಜೀವಸೆಲೆ ,ಕೃತಜ್ಞತೆ ಇಲ್ಲವೆಂದ ಮೇಲೆಯಾವ ಕಸುಬಿನ ನೆಲೆಯೂ ಕೊಲೆಯ ತಾಣವೇ. **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನೀ ಬದಲಾದರೆ ನಾಗರಾಜ್ ಹರಪನಹಳ್ಳಿ ಆಕೆ ಎದುರಾದಾಗ ಹೀಗೆಒಂದು ಪ್ರಶ್ನೆ‌ ಎಸೆದಳುನೀ ಬದಲಾದರೆ…. ನಾ‌ ಸ್ವಲ್ಪ ಹೊತ್ತು ಮಾತಾಡಲಿಲ್ಲ ಆಕೆ ಒತ್ತಾಯಿಸಿದಳುತುಟಿಗೆ ಮುತ್ತಿಟ್ಟು ಮತ್ತೆ ಕೇಳಿದಳುನೀ ಬದಲಾದರೆ ?? ದೀರ್ಘ ನಿಟ್ಟುಸಿರು ಬಿಟ್ಟೆಹಾಗೂ ಹೇಳಿದೆ ;ಕನ್ನಡಿಯ ಎದುರು ನಿಂತು ಪ್ರಶ್ನಿಸಿಕೊ ಎಂದೆ ಮತ್ತೆ ಅವಳೆಡೆಗೆ ಹೊರಳಿಕತ್ತು ಬಳಸಿ ,ಹೆರಳಿನ ಹಿಂಬಾಗಕೆ ಮುತ್ತಿಟ್ಟು ಹೇಳಿದೆ;ಸೂರ್ಯನ ಗಮನಿಸುಆಕಾಶ ಗಮನಿಸುಬಯಲ ಓದುವುದ ಕಲಿಸಮುದ್ರದ ಎದುರು ನಿಂತುಅದರ ರೋಧನವ ಅರಿ ಮನುಷ್ಯರ ಬದುಕಿನ‌‌ ದೇಹದ‌ ನಶ್ವರತೆಯ ಅವಲೋಕಿಸು ಹಾಗೂ ….ಹಾಗೂನನ್ನ ಕಣ್ಣುಗಳ ದಿಟ್ಟಿಸುನನ್ನ ತೋಳಿನಲ್ಲಿ ಸುಮ್ಮನೆ ಕರಗಿ‌ಹೋಗು….. ಚಾಡಿಗಳ ಜಾಡಿಸಿ ಒದೆಕಿವಿ ಕಚ್ಚುವವರ ಕುಡಗೋಲಿನಿಂದ‌ ಕೊಚ್ಚಿಹಾಕುಹಾಳು ಹಡಬೆ ರಂಡೆಯರಮಾತಿಗೆ ಅಡುಗೆ ಮನೆಯ ಲಟ್ಟಣಿಗೆಯಿಂದ ತಿವಿ ನಾನು ಉರಿವ ಕೆಂಡದಂಡೆ ದಿಗ್ಭ್ರಮೆಗೊಳ್ಳುವಂತೆ ಹರಿವ ನದಿ…ಜಗದ ಮೌನ ಗರ್ಭೀಕರಿಸಿಕೊಂಡ ಕಣಿವೆಸುಮ್ಮನೆ ನನ್ನೆದುರು ಕುಳಿತು ಅಪ್ಪಿ ಆಲಂಗಿಸು … ನೀ ಬದಲಾದರೆ ಎಂಬ ಪ್ರಶ್ನೆಗಳ ಹುಟ್ಟಿದಲ್ಲಿ ನೇತು ಹಾಕು ಬಿಮ್ಮನೆ ಘಮ್ಮನೆ ಮಘ ಮಘಿಸುವ ಮಲ್ಲಿಗೆಯಂತೆ ಪ್ರೀತಿಸು, ಪ್ರೀತಿಸು…; ಅಪ್ಪಟವಾಗಿ ಪ್ರೀತಿಸು…ಪ್ರೀತಿ ಬೆಳಕೆಂಬ ಬೆಳಕಿನ ಬೆನ್ನು ಹತ್ತು…. *********************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸೋಲೆಂಬ ಸಂತೆಯಲಿ ದೀಪ್ತಿ ಭದ್ರಾವತಿ ಹೀಗೇಕೆ ಬೆನ್ನು ಬಿದ್ದಿದೆ ಸೋಲು ರಚ್ಚೆ ಹಿಡಿದ ಮಗುವಿನಂತೆ ಹೆಜ್ಜೆ ಇಟ್ಟೆಡೆಗೆ ಕಣ್ಣು ನೆಟ್ಟಿದೆ ತಾಳಬಲ್ಲೆನೇ ಸವಾರಿ? ಕಣ್ಣಂಚಲಿ ಮುತ್ತಿಕ್ಕುತ್ತಿದೆ ಸೋನೆ ಸುಡುವ ಹರಳಿನಂತೆ ಒರೆಸಿಕೊಳ್ಳಲೇ ಸುಮ್ಮನೆ? ಎಷ್ಟೊಂದು ಸಂಕಟದ ಸಾಲಿದೆ ಸೋಲೆಂಬ ಮೂಟೆಯೊಳಗೆ ನಟ್ಟ ನಡು ಬಯಲಿನಲಿ ಒಂಟಿ ಮತ್ತು ಒಂಟಿ ಮಾತ್ರ ಹರಿಯಬಲ್ಲದೇ ಹರಿದಾರಿ? ನಡೆಯುತ್ತದೆಯೇ ದಿಕ್ಕು ಮರೆತ ನೌಕೆ? ಸುತ್ತ ಹತ್ತೂರಿಂದ ಬಂದ ಪುಂಡ ಗಾಳಿ ಹೊತ್ತೊಯ್ದು ಬಿಡುವುದೇ ನೆಟ್ಟ ಹಗಲಿನ ಕಂಪು? ಯಾವ ದಾರಿಯ ಕೈ ಮರವೂ ಕೈ ತೋರುತ್ತಿಲ್ಲ ಮರೆತು ಹೋಗಿದೆ ದಿಕ್ಸೂಚಿಗೂ ಗುರುತು ಕಗ್ಗತ್ತಲ ಕರ‍್ತಿಕದಲಿ ಹಚ್ಚುವ ಹಣತೆಯೂ ನಂಟು ಕಳಚಿದೆ ಮುಖ ಮುಚ್ಚಿಕೊಂಡೀತೆ ಬೆಳಕು ಬಯಲ ಬೆತ್ತಲೆಗೆ? ಮುಗ್ಗರಿಸಿದ ಮಧ್ಯಹಾದಿಯ ಮಗ್ಗಲು ಬದಲಿಸಲೇ? ನೂರೆಂಟು ನವಿಲುಗರಿಗಳ ನಡುವೆ ಹಾರಿದ ಮುಳ್ಳು ಎದೆ ಚುಚ್ಚಿದೆ, ಕಣ್ಣು ನೆಟ್ಟಿದೆ ಮತ್ತು ನೆತ್ತಿಯನ್ನೂ ಕೂಡ ಸೋಲು ಭಾಷೆ ಬದಲಿಸುವುದಿಲ್ಲ ನನಗೋ ಭಾಷೆಗಳು ಬರುವುದೇ ಇಲ್ಲ..   ***********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಳೆ ಹಾಡು… ಆಶಾ ಜಗದೀಶ್ ತಾರಸಿಯಿಂದ ಇಳಿಯುತ್ತಿರುವಒಂದೊಂದೇ ಹನಿಗಳನ್ನುನಿಲ್ಲಿಸಿ ಮಾತನಾಡಿಸಿಮೆಲ್ಲಗೆ ಹೆಸರ ಕೇಳಿಹಾಗೇ ಮೆಟ್ಟಿಲ ಮೇಲೆನಯವಾಗಿ ಕೂರಿಸಿಕೊಂಡುಈಗ ಬಿಟ್ಟು ಬಂದವನ ನೆನಪೋಬಂದು ಸೇರಿದವನ ನೆನಪೋಒಮ್ಮೆ ಕೇಳಬೇಕಿದೆ ಜಡಿ ಹಿಡಿದು ಸುರಿವಾಗಯಾರ ಮೇಲಿನ ಮೋಹಆವೇಶವಾಗಿ ಆವಾಹಗೊಳ್ಳುತ್ತದೆಜೀವ ಮರಗುಟ್ಟುವ ಶೀತಲೆತೆಯೊಳಗೆಬೆಂಕಿಯೊಂದನ್ನು ನಂದದಂತೆಹೇಗೆ ತಾನೆ ಬಚ್ಚಿಟ್ಟುಕೊಂಡಿರುವೆಎಂದಾದರೂ ಒಂದು ಸಣ್ಣ ಪ್ರಶ್ನೆಗೆಉತ್ತರ ಕೇಳಿಟ್ಟುಕೊಳ್ಳಬೇಕಿದೆ ಮುಚ್ಚಿದ ಕಿಟಕಿಯ ದಾಟಿ ಹಾಯುವತಂಗಾಳಿ ಮೈ ಸೋಕುವಾಗೆಲ್ಲಒಂದು ಮಳೆಹನಿಯ ಹಟದ ಮುಂದೆಯಾವುದೂ ಸಮವಲ್ಲ ಎನಿಸಿಬಿಡುತ್ತದೆಮತ್ತೆ ಮತ್ತೆ ಇಷ್ಟಿಷ್ಟೆ ಚೈತನ್ಯ ಒಟ್ಟಾಗಿಸಿಕೊಂಡುಹನಿಯುವ ಇಚ್ಛಾಶಕ್ತಿಗೆ ಜಗವೇ ಬಾಗಿದೆಅಂತಲೂ ಋತುಚಕ್ರ ತಿರುಗಿದಾಗಲೆಲ್ಲಾಅನಿಸುತ್ತಲೇ ಇರುತ್ತದೆ ಸಣ್ಣದೊಂದು ಹನಿಯೊಡೆದುಸಹಸ್ರಪಟ್ಟು ಅಧಿಕ ಪಾದಗಳ ಗುರುತುಹನಿಗಳುದುರಿ ಹೋದದ್ದರನೆನಪಿಗೆ ಭುವಿಯ ತುಂಬಾ ಬುಗುಟುಒಂದೊಂದು ಬುಗುಟಿನೊಳಗೂಮಿಡಿವ ಹೃದಯ… ಅದು ಸತ್ತಿಲ್ಲಅದು ಬದುಕಿಯೂ ಇಲ್ಲ *************

ಕಾವ್ಯಯಾನ Read Post »

ಕಾವ್ಯಯಾನ

ಅನುವಾದ ಸಂಗಾತಿ

ಗುಟ್ಟು ಮೂಲ: ಶರತ್ ಚಂದ್ರ ಬರ್ (ಬೋಡೊ) ಕನ್ನಡಕ್ಕೆ: ನಾಗರಾಜ ಹರಪನಹಳ್ಳಿ ಯಾವ ಕಣ್ಣೀರಿನಲ್ಲಿಹೃದಯ ಮಿಡಿತದ ಸಂದೇಶವಿಲ್ಲವೋ ಯಾವ ಕಣ್ಣೀರಿನಲ್ಲಿಪವಿತ್ರವಾದ ಸತ್ಯವಿಲ್ಲವೋಯಾವ ಕಣ್ಣೀರಿನಲ್ಲಿಒಡೆದ ಹೃದಯದ ಸದ್ದು ಇಲ್ಲವೋಆ ಕಣ್ಣೀರು ಅಪ್ಪಟ ಕಣ್ಣೀರಲ್ಲ ಯಾವ ನಗುವಿನಲ್ಲಿ ಮೌಲ್ಯದ ಬೆಳಗು ಇಲ್ಲವೋಯಾವ ನಗುಕಲ್ಮಶದ ಪರದೆಯಲ್ಲಿ ಅಡಗಿದೆಯೋಅಂತಹ ನಗು ಸಂತಸದ ನಗುವಲ್ಲ ಯಾವ ಪ್ರೀತಿ ತನ್ನಷ್ಟಕ್ಕೆ ತಾನು ಅರಳುವುದಿಲ್ಲವೋಯಾವ ಪ್ರೀತಿಯಲ್ಲಿ ಬೆಸುಗೆಯ ಗುಣವಿಲ್ಲವೋಅಂತಹ ಪ್ರೀತಿಆದರಣೀಯ ಪ್ರೀತಿಯಲ್ಲ ಯಾವ ಕಾಣಿಕೆಯಲ್ಲಿಮರಳಿ ಪಡೆವ‌ ವ್ಯಾಮೋಹವಿದೆಯೋಯಾವ ಕಾಣಿಕೆಯಲ್ಲಿಪ್ರಶಂಸೆಯನ್ನು ಪಡೆವ‌ ಅಪೇಕ್ಷೆಯಿದೆಯೋಅಂತಹ ಕಾಣಿಕೆ ಕಾಣಿಕೆಯಲ್ಲ………………….. ನಾಗರಾಜ್ ಹರಪನಹಳ್ಳಿ

ಅನುವಾದ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಎ ಎಸ್. ಮಕಾನದಾರ ತಲೆ ಬಾಗಿಲಿಗೆ ಕೈಹಚ್ಚಿ ಕಾಯುತಿರುವೆ ಪ್ಯಾರಿಭಾವರಸ ನೊರೆಹಾಲ ತುಂಬುತಿರುವೆ ಪ್ಯಾರಿ ಅಚ್ಚೇರು ಬಂಗಾರದಲಿ ಅಚ್ಚು ಒತ್ತುತ್ತಿರುವೆಸ್ನೇಹ ಅಚ್ಚುಮೆಚ್ಚೆಂದು ಸಾರುತಿರುವೆ ಪ್ಯಾರಿ ಹಾಯಿದೋಣಿಗೆ ನಾವಿಕನಾಗಿ ಸಾಗುತಿರುವೆಚೂರಾದ ಹೃದಯ ತೋರಣ ಕಟ್ಟಿರುವೆ ಪ್ಯಾರಿ ನದಿಗಳ ಜಾಡಿನೊಳಗೆ ಚಹರೆ ಕಾಣುತಿರುವೆವಿಶ್ವಪ್ರೇಮ ಬಾವುಟ ಹಾರಿಸುತ್ತಿರುವೆ ಪ್ಯಾರಿ ಅಂತರಂಗ ಜ್ಯೋತಿಗೆ ಧೋಖಾ ಮಾಡದಿರುಸಾಹೇಬ್ ಮಸ್ತಕಕ್ಕೆ ಇಳಿದು ಬರುವೆ ಪ್ಯಾರಿ **********

ಕಾವ್ಯಯಾನ Read Post »

You cannot copy content of this page

Scroll to Top