ಕಾವ್ಯಯಾನ
ನೆನಪುಗಳಲ್ಲಿ ಅವಳು ಲಕ್ಷ್ಮೀ ಪಾಟೀಲ್ ಅವಳ ಏಕಾಂತ ತೆರೆಯುತ್ತದೆ ನಿತ್ಯ ಕೈ ಮುಟ್ಟಿಕೂದಲು ಹಿಡಿದರೆ ಎದುರು ಮರದ ಕೆಳಗೆಸಂಧ್ಯಾ ರಾಗದ ಸಂಜೆ ಅದೇ ಮರ ಕೈ ಮಾಡಿ ಕರೆಯುತ್ತದೆ ಕೂದಲ ಸಿಕ್ಕು ಬಿಡಿಸಿಕೊಳ್ಳಲುನೀಟಾಗಿ ನೆನಪುಗಳ ತಲೆ ಬಾಚಲುಏಕಾಂತಕ್ಕೆ ಜೊತೆ ಹುಡುಕಿ ಧ್ಯಾನಿಸಲು ಸಂಧ್ಯಾರಾಗದೆ ದುರು ತಾನು ಮತ್ತೊಂದು ಕವಿತೆಯಾಗಲು !ಬರೆಯದ ಭಾವ ಗಳೆಲ್ಲ ಸಿಕ್ಕುಗಳಂತೆ ಮುತ್ತುವವು ಧ್ಯಾನಸ್ಥಳಾಗುವಳಾಗ ಕವಿತೆಯ ಸುತ್ತ !ಎಷ್ಟೊಂದು ಕವಿತೆ ಬದುಕಿದೆನಲ್ಲ ಬರೆಯಲು ಬಂದಿದ್ದರೆಪೈಪೋಟಿಯಲ್ಲಿ ಕವಿತೆ ಗೆಲ್ಲಿಸಬಹುದಿತ್ತುಈ ಹೇನು ಹರಿದಾಡಿಸಿಕೊಳ್ಳುವ ಹಿಂಸೆಗೆಮುಕ್ತಿ ಸಿಗಬಹುದಿತ್ತು ಎಂದುಕೊಳ್ಳುವಳುಈ ಕವಿತೆಗಳಿಗೆಲ್ಲ ಆಕ್ರಮಿಸುವ ಚಟಏನೆಲ್ಲಾ ಕಿತ್ತು ಖಜಾನೆ ಖಾಲಿ ಮಾಡಿ ಹೋಗುತ್ತವೆಅಕಾಲ ವ್ರದ್ಧಾಪ್ಯಕ್ಕೆ ದೂಕಿ ಯವ್ವನ ಕೊಲೆ ಮಾಡಿದ ಕೈದಿಯಾಗುತ್ತವೆ ದಂಡ ತೆತ್ತು ಪಡೆಯುವ ತೀರ್ಪಿ ನಂತೆಭಯ ಕಟ್ಟುತ್ತವೆ ಈ ಒಳ ಮುಖದ ಮಂಕತ್ವಕ್ಕೆಆ ನೆರಳು ನೀಡುವ ಮರ ನಿತ್ಯಜ್ಞಾನೋದಯಮಾಡಿಸುವ ಬೋದಿ ವ್ರಕ್ಷದಂತೆ ಆಕಾಶಕ್ಕೆ ದಿಟ್ಟಿಸಿದರೆವ್ಯಥೆ ಗೊಂದುಷರಾ ಬರೆದ ನೀಲಮೇಘ ಶಾಮ ನಂತೆತಾನೀಗ ಕಾವ್ಯಕ್ಕೆ ಜೀವ ತುಂಬಲು ನಡೆಯುವಳುದಿಟ್ಟ ಬದುಕಿನ ಪಾಠ ಹೀಗೆ ನಿತ್ಯ ಪಡೆಯುವಳು ಕೃಷ್ನೆಅವಳು ಉರಿಯಕುಂಡದಿಂದ ಎದ್ದವಳುಉರಿಯನುಂಗಿ ಉಳಿಯುವುದು ತಿಳಿದವಳುಉರಿಯಬದುಕಿನ ಕಲೆ ಯಾದವಳುನೆನಪುಗಳಲ್ಲಿ ನೆಲೆಯಾದವಳು ನಮ್ಮಲ್ಲೂ ಹೀಗೆ ಕೃಷ್ನೆ *************









