ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ನೆನಪು ಮರೆಯಲು ಮದಿರೆಯ ಸಂಗ ಮಾಡಿದ್ದೆ ಸಖಿವ್ಯಸನ ತೊರೆಯಲು ಸುರೆಯ ಹಂಗ ಬಿಡದಾಗಿದೆ ಸಖಿ ಮಧುವಿನ ದಾಸನಾಗಿ ದಾಸ್ಯದಿ ಬದುಕ ನೂಕುತಿರುವೆತುಟಿಯಂಚಿಗಿಟ್ಟ ಬಟ್ಟಲಿನಲ್ಲಿ ನೀನು ಕಾಣುತಿರುವೆ ಮರೆಯದಾಗಿದೆ ಸಖಿ ನೀರವ ಮೌನದ ಕತ್ತಲೆಯಲಿ ಸಿಗಬಹದೆಂದು ಹುಡುಕಿರುವೆಶರಾಬಿನ ಸಿಸೆಯೊಳಗೂ ನಿನ್ನದೆ ಬಿಂಬವ ಕಾಣುತಿದೆ ಸಖಿ ಮರೆಯಲಾಗದ ಹವ್ಯಾಸ ನನ್ನನು ಬೆಂಬಿಡದೆ ಕಾಡಿದೆಅವಳನು ಮರೆಯುವ ಮಾತಾಡಿಮಿಣುಕು ದೀಪದ ಮುಂದೆ ಕುಳಿತಿದ್ದೆ ಸಖಿ ಸುರಪಾನದ ಸುಖದಲಿ ತೇಲಾಡಿ ನೊಂದ ಮರುಳನು ಮರುಗುತಿರುವನುಆದದ್ದೇಲ್ಲ ಮರೆತು ಹೊಸಬಾಳ್ವೆಗೆ ಹೊಂದಿ ನಡೆಯ ಬೇಕೆಂದಿದ್ದೆ ಸಖಿ ***********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಜಕ್ಕವಕ್ಕಿಗಳು ಕಮಲಾ ಹೆಮ್ಮಿಗೆ ೧. ನೆನಪಿದೆಯೆ ನಿಮಗೆ ಕಣವಿಯವರೆ      ಜಯನಗರದ ಹಳಿ ದಾಟಿದರೆ      ಹಳದೀ ಹೂವು ಚೆಲ್ಲಿದ ರಸ್ತೆ      ‘ ಚೆಂಬೆಳಕು’! ಹಕ್ಕಿ ಗೂಡಂಥ ನಿಮ್ಮ ಮನೆ      ಆಚೀಚೆ ಕೂತ ನೀವುಗಳು,ನಡುವೆ      ಬೂದಿ ಮುಚ್ಚಿದ ಕೆಂಡದಂಥ ನಾನು….ಮಧ್ಯೆ ವ್ಯಸ್ತ,ಮೂಸಿನೋಡುವ ನಿಮ್ಮ ‘ಗೂಫಿ’ನಾಯಿ!……….             ಗುಟುಕರಿಸುತ್ತ ಚಹಾ,ಮಾತು,ಬದುಕಿನ ಪಾಡು…………………………         ಜsರ್ ಮಳೆಯಿದ್ದಲ್ಲಿ, ದಾಟಿಸುತ್ತಿದ್ದಿರಿ ಬ್ರಿಡ್ಜು,ಛತ್ರಿ ಹಿಡಿದು….. ೨.  ನಿಮ್ಮ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲೊಮ್ಮೆ       ಓದಬೇಕಿತ್ತು ನಾನೂ,ಒಂದು ಕವಿತೆ       ರೈಲಲ್ಲಿ ಒಂದೇ ಬೋಗಿ….ಧಡಖ್ ಧಡಖ್       ಧಡಖ್ ಧಡಖ್….. ಮೆಲ್ಲಗೆ ಬಂದಿರಿ ಲಯಕೆ ತಕ್ಕಂತೆ..‌..       ‘ ಮನಿಯವರು ನಿಮಗು ಬುತ್ತಿ ಕಟ್ಯಾರೆ’ ಎಂದಾಗ, ಒಣರೊಟ್ಟಿ ಬದಿಗೆ ಸರಿಸಿದ್ದೆ ನಾನು…… ನೀವು ನೀಡಿದಿರಿ ಚಪಾತಿ, ಮೊಸರನ್ನ ಮತ್ತು    ಹೆಚ್ಚಿಟ್ಟ ಹಣ್ಣಿನ ವಾತ್ಸಲ್ಯದ ಹೋಳು,ಮಿನುಗಿತ್ತು ಕಣ್ಣು…… ೩. ಕಳೆದಬಾರಿ,ಕಲ್ಯಾಣನಗರಕ್ಕೆ ಬಂದಾಗ    ‘ ಕವಿನೆರಳು’! ನೀವೇ ಒಳಹೋಗಿ ಚಹ ತಂದಿರಿ.     ‘ ಇವರಿಗೆ ಮಂಡೀನೋವು,ಸದ್ಯ ನನಗಿಲ್ಲ’ ….ನಕ್ಕಿರಿ….. ಹೊರಡುವಾಗ ಅಚಾನಕ ಕಾಲಿಗೆರಗಿದೆ ನಾನು…. ಅಸ್ಪಷ್ಟ ಏನೋ ಉಲಿದಿರಿ,ತುಂಬು ಮನದಿಂದ ನೀವು! ೪. ಈಗ  ‘ಹಾರಿತು ಜಕ್ಕವಕ್ಕಿಗಳಲ್ಲೊಂದು’ ಎಂದಾರು,  ಆಲಂಕರಿಕವಾಗಿ ಮಂದಿ! ಒಂಟಿಹಕ್ಕಿ ನೆನಪು ಹಾರೀತು  ಆದರೆ ……..ನೀವು? —–    ಜsರ್ — ಒಂದುವೇಳೆ ,  ಕವಿನೆರಳು Twilight (ಹಿರಿಯ ಲೇಖಕಿ ಶಾತಾದೇವಿ ಕಣವಿಯವರು ತೀರಿದ ಸಂದರ್ಭ)

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಿನ್ನದೇ ಜಪದಲ್ಲಿ ವೀಣಾ ಪಿ. ಏಕಪತ್ನಿ ರಾಮನಿಗೆ ವನ-ವೈಭೋಗಗಳಲಿಅನ್ಯ ಸ್ತ್ರೀಯಿಲ್ಲ ಸತಿ ಸೀತೆ ಹೊರತು.. ಕೃಷ್ಣನನೆದೆಯಲ್ಲಿ ಅನುರಣಿತ ರಾಗದಲಿಅನ್ಯ ಪ್ರೇಮವದಿಲ್ಲಅನುರಾಗಿ ರಾಧೆ ಹೊರತು.. ಮೀರಾ-ಶಬರಿಯರಲ್ಲಿ ಅನ್ಯ ತುಡಿತವದಿಲ್ಲಕೃಷ್ಣ-ರಾಮರ ಪರಮ ಕಾಮ್ಯದ ಹೊರತು.. ಸ್ವರ-ಶೃತಿಯ ಬೆಸೆಯುವ ಸರಸತಿಯ ಮೀಟು ತಂತಿಅನ್ಯವಾದ್ಯವಲ್ಲವದು ವೀಣಾ.. ಹಂಗಿನರಮನೆ ತೊರೆದ ಪ್ರೇಮದೀ ಗುಡಿಯಲ್ಲಿಬೇರೆ ಮಾತುಗಳಿಲ್ಲ ನಿನ್ನ ಜಪದ ಹೊರತು.. *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಇನ್ನಷ್ಟು ಯೌವನ ಕೊಡು ಮಂಜುನಾಥ ನಾಯ್ಕ ಹಾಲುಮಾರುವ ಹುಡುಗ ಕಾಜುಗಣ್ಣಿನ ವಿನೋದನೊರೆ ಹಾಲಿನಂತವನು ಪೇಟೆಯ ತುಂಬಹಾಲು ಹಂಚುವ ಉಮೇದಿಕಾಜುಗಣ್ಣ ಬಿಂಬಗೊಳಗೆಉಫ್ ಉಫ್ ಎಂದು ರಸ್ತೆ ಉಬ್ಬಿನಲಿ ತುಳಿದಿದ್ದಕ್ಕೆ ಸೈಕಲ್ಲುಬಿದ್ದು ರಕ್ತಕಾರಿಕೊಂಡ ಹೆಬ್ಬಟ್ಟಿನ ಉರಿ ಬ್ರೇಕೊತ್ತಿದೆಸೈಕಲ್ಲಿನ ವೇಗಕ್ಕೆಅಪ್ಪನ ಕ್ಯಾನ್ಸರಿಗೆ, ಅಮ್ಮನ ಮಧುಮೇಹಕ್ಕೆಚಂದನದ ಕೊರಡುತೇಯುತ್ತಿದೆ ಬೀದಿಯಲಿಕಾಯುತ್ತಿದೆಹಾಲಿನ ಮನಸ್ಸೊಂದುಮಗನ ಬರುವಿಕೆಗೆಅಡುಗೆ ಮನೆಯಲಿ ಬೇನೆಯಲಿಬೇಯುವ ಹಂಚಿನ ರೊಟ್ಟಿ ಐನೋರ ತೋಟದ ಮರದ ತುದಿಗೇರಿ ಅಡಿಕೆಗೊನೆ,ಸಿಂಗಾರ,ಸಿಯಾಳಕಾಯಿ ಕೊಯ್ವ ಈರಜ್ಜಕಸರತ್ತುಗಯ್ಯುತ್ತಾಆಕಾಶ ಮುಟ್ಟುವಂತೆಮರದ ತುದಿಯಲಿಒಂದೊಂದೇ ಫಲಗಳಎಸೆಯುವ ಕೆಳಗೆನುಣ್ಣಗೆ ಜಾರುವ ಮರತಡವರಿಸುವುದು ಒಮ್ಮೊಮ್ಮೆ ಈರನ ಕಾಲುಕೆಳಗೆ ಭೂಮಿ ಬಾಯ್ತೆರೆದು ಕಾದಿದೆಬಿಡಾರದೊಳಗೆ ಈರಜ್ಜನಗುಡಿಸಲೊಡತಿಕೊಳೆ ಅಡಿಕೆ ಅಂಬಡಿ ಎಲೆಗೆತಿಕ್ಕುತ್ತಾ ಚಿಪ್ಪೆಕಲ್ಲಿನ ಸುಣ್ಣವ ನುಣ್ಣಗೆ ಬೈಗಿನಲಿಈರಜ್ಜನಡೆದು ಬರುವ ತೋಡಿನಲಿಇಣುಕಿಣುಕಿ ನೋಡುತ್ತಾಬೆಚ್ಚಗಾಗುತಿದೆ ಬಿಸಿನೀರುಹಬೆ ಹಬೆ ಹಂಡೆಯಲಿಬೆಚ್ಚನೆಯ ಬದುಕ ಗೂಡೊಳಗೆ ನಸುಕಲಲ್ಲಿ ಬೈಗೆ ಬಂಗುಡೆಸಮದಾಳೆ,ಕುಡುತ್ಲಿ,ಪೇಡಿ ಏಡಿಗಳ ಹೊತ್ತು ಬರುವ ನಮ್ಮೂರ ಬೆಸ್ತರ ಪದ್ಮಕ್ಕನ ಮಗಳು ತುಂಬು ಬಸುರಿಪಾತಿದೋಣಿಗೆ ಗಂಡಉದರದ ಗೇಣಿಗೆ ಅವ್ವದಣಪೆಯಾಚೆ ನಿಂತು ನೀಕುವಳುಖಾಲಿ ಬುಟ್ಟಿಹೊತ್ತ ಅಮ್ಮನನಿರಾಳ ಹೆಜ್ಜೆ ಸದ್ದಿಗೆಪೇಟೆಯಲಿ ಪದ್ಮಕ್ಕನ ಮೀನಿಗೆಚೌಕಾಸಿಯ ಕೂಗು ಜೋರಾಗಿದೆಸಾಸಿವೆಯ ದರಕ್ಕೆ ಮಾರಿಮನೆಯ ದಾರಿ ಹಿಡಿದಿದ್ದಾಳೆಅಲ್ಲಿ ತುಂಬು ಬಸುರಿಯವೇದನೆ ಜೋರಾಗಿದೆ ಸಾಗುವ ಹೆಜ್ಜೆಗಳಿಗೆಲ್ಲಾಇನ್ನಷ್ಟು ಯೌವನ ಕೊಡು ದಿವ್ಯವೇಕಾಯುವ ಹೃದಯಗಳೆಲ್ಲಾಹಸುಳೆಯಂತದ್ದು. ************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ರತ್ನರಾಯಮಲ್ಲ ಆಗಸದಲ್ಲಿ ನೇಸರ ಹುಟ್ಟುತಿದ್ದಾನೆ ನೋಡಿಕನಸುಗಳು ಮೂಟೆ ತರುತಿದ್ದಾನೆ ನೋಡಿ ಇರುಳು ಕಳೆದು ಹೋಗಿದೆ ಹಗಲಿನ ಒಡಲಲ್ಲಿಚೈತನ್ಯವನ್ನು ಹೊತ್ತು ಬಂದಿದ್ದಾನೆ ನೋಡಿ ಮೂಡಣದಲ್ಲಿ ರವಿ ಅಂಬೆಗಾಲು ಇಡುತಿರುವನುಅಕ್ಷಯ ಉಲ್ಲಾಸವನ್ನು ಹಂಚುತಿದ್ದಾನೆ ನೋಡಿ ಅವನಿಯನ್ನು ಹೊಂಗಿರಣಗಳು ಚುಂಬಿಸುತಿವೆಪಾದರಸದ ಚಲನೆಯನ್ನು ನೀಡುತಿದ್ದಾನೆ ನೋಡಿ ಹಕ್ಕಿಗಳ ಚಿಲಿಪಿಲಿಯು ಹೃದಯವನ್ನು ತಟ್ಟುತ್ತಿದೆನಿರಾಸೆಯ ಕೊಳೆಯನ್ನು ತೊಳೆಯುತಿದ್ದಾನೆ ನೋಡಿ ಗಿಡ-ಮರಗುಳು ತಂಗಾಳಿಯಿಂದ ಸ್ವಾಗತಿಸುತಿವೆಬಾಳಿನ ಅನನ್ಯ ಕಲೆಯನ್ನು ಕಲಿಸುತಿದ್ದಾನೆ ನೋಡಿ ಹಾಸಿಗೆಯನ್ನು ತೊರೆದು ಹೊರಗೆ ನೋಡು ಮಲ್ಲಿಮಂದಹಾಸದ ಪಾಠವನ್ನು ಹೇಳುತಿದ್ದಾನೆ ನೋಡಿ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನೀ ಹೋದರೂ.. ಶೀಲಾ ಭಂಡಾರ್ಕರ್ ನಿನ್ನ ನೆನಪುಗಳು..ನನ್ನ ಬಳಿಯೇ ಉಳಿದಿವೆನಿನ್ನ ಜತೆ ಹೋಗದೆ.. ಇನ್ನೂ ..ಚೆನ್ನಾಗಿ ಬೆಳೆಯುತ್ತಿವೆ..ದಟ್ಟವಾಗಿಮನದ ತೋಟದೊಳಗೆ ನೀನಾಡಿದ್ದ ಮಾತುಗಳುಆಸೆಯಿಂದ ಕತ್ತೆತ್ತುತ್ತವೆ ಆಗಾಗಹಳೆಯ ಆಲದ ಮರದಪೊಟರೆಯೊಳಗಿನಿಂದಮರಿ ಕೋಗಿಲೆಗಳು ಇಣುಕಿದ ಹಾಗೆ. ಎಷ್ಟು ದೂರದವರೆಗೆನಡೆದು ಬಂದಿವೆ ನೋಡುಆ ನೆನಪುಗಳು ಬರಿಗಾಲಿನಲ್ಲಿ.ಬೇಸಿಗೆಯಿಂದ ಮಳೆಯವರೆಗೆಬಾಲ್ಯದಿಂದ ತಾರುಣ್ಯದವರೆಗೆ ಅಡಗಿ ಕುಳಿತುಸಂಭಾಷಿಸುತ್ತವೆ ಕೆಲವುತಮ್ಮ ತಮ್ಮಲ್ಲೇಒಳಕೋಣೆಯೊಳಗೆ. ಎಲ್ಲವೂ ನೆನಪಿದೆ ನನಗೆನಿನ್ನ ಪ್ರೀತಿ. ನಿನ್ನ ಮಾತು..ತಿಳಿ ಹಾಸ್ಯ ಮತ್ತು ನಿನ್ನ ನಗೆ. ನೇರಳೆ ಹಣ್ಣೆಂದು ತಿನ್ನಿಸಿದಬೇವಿನ ಹಣ್ಣಿನ ರುಚಿಯೂಮರೆತಿಲ್ಲ ಇನ್ನೂ ನನಗೆ ಕಹಿ ಹಾಗೆಯೇ ಉಳಿದುಕೊಂಡಿದೆ..ನಾಲಿಗೆಯ ಮೇಲೆ. ********

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ಸುಜಾತಾ ಲಕ್ಮನೆ ಗಂಟಿಕ್ಕಿ ಹುರಿ ಹುಬ್ಬು ಹಾರಿಸಿದಂತೆಲ್ಲ ನಾನೇನೂ ಬೆದರುವುದಿಲ್ಲಪೊದೆ ಮೀಸೆಯಲ್ಲೇ ರೋಷ ಉಕ್ಕಿಸಬೇಡ ಸೊಪ್ಪು ಹಾಕುವುದಿಲ್ಲ ತವರಲ್ಲಿ ಮುದ್ದಾಗಿ ಅಂಗೈಲೇ ಬುವಿ ಬಾನು ದೋಚಿದವಳು ನಾನುಕಣ್ಣಲ್ಲೇ ಕೆಣಕಿದಂತೆಲ್ಲ ಮೈ ಮನದ ಕಣಗಳೆಲ್ಲ ನವಿರೇಳುವುದಿಲ್ಲ ನಿನ್ನಂತೆಯೇ ಆಡಿ ನಲಿದು ಬಣ್ಣದ ಲಂಗದಲಿ ಕನಸ ಜೀಕಿದವಳುಮಾತು ಮೌನಕೆ ಮಣಿವ ಬೆಳ್ನಗೆಯಲಿ ಸ್ವಂತಿಕೆ ನಳನಳಿಸುವುದಿಲ್ಲ ನಿನ್ನ ಸೇವೆಯೇ ಎನ್ನ ಜೀವನದ ಪರಮ ಗುರಿಯೆಂಬ ಭ್ರಮೆಯೇಕೆಸದಾ ಕೀಲುಗೊಂಬೆಯಂತೆ ನಡೆವ ಪರಿ ನನಗೂ ಇಷ್ಟವಾಗುವುದಿಲ್ಲ ಕಾಲ ಮೇಲೆ ಕಾಲು ಹಾಕಿ ಕೂತು ಗಂಡು ಜನ್ಮವೆಂಬ ಬೀಗುವಿಕೆಯೇಮಗ್ಗಲಿಗೆಳೆದು ಬರಸೆಳೆದರೆ ಹಗಲಿಡಿಯ ದರ್ಪ ಮರೆಯಾಗುವುದಿಲ್ಲ ಒಮ್ಮೆಯಾದರೂ ಅಹರ್ನಿಶಿ ನಾ ಏಗಿದಂತೆ ಏಗಬಲ್ಲೆಯ ನೀನೂನುಒಡಲಗುದಿಯ ಸವರದಿರೆ ದಾಂಪತ್ಯ ಒಳಗೊಳಗೆ ಪದುಳಿಸುವುದಿಲ್ಲ ನಿನಗಿರುವಂತೆಯೇ “ಸುಜೂ” ಗೂ ತನ್ನವರ ಹಿತಾಸಕ್ತಿ ಇರಬಾರದೇನುನಿನ್ನ ವರ್ತುಲವೇ ಅಂತಿಮವಾದರೆ ಸಾಮರಸ್ಯ ಸೊಗಯಿಸುವುದಿಲ್ಲ *************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ಅಸಲಿಗೆ ನಕಲಿಯ ಲೇಪನ ಬಳಿದಿರಬಹುದು ನೋಡುಕಂಗಳಿಗೆ ಆವರಿಸಿರುವ ಪೊರೆಯ ಸರಿಸಿ ಅರಿಯಬಹುದು ನೋಡು ಭಿತ್ತಿಯ ಮೇಲೆ ಬಿದ್ದ ಛಾಯೆಯು ಮಿಥ್ಯವಿರಬಹುದು ಒಮೊಮ್ಮೆಅಂತಃಕರಣದ ಅಕ್ಷಿಯರಳಿಸಿ ದಿಟವ ತಿಳಿಯಬಹುದು ನೋಡು ತಳವಿಲ್ಲದ ಬಾವಿ ಅನಂತ ಆಳವ ತೋರಿರಬಹುದು ಅಲ್ಲಿಭ್ರಮೆಯಿಂದ ಹೊರಬಂದು ನೈಜತೆಯ ಕಾಣಬಹುದು ನೋಡು ದಿಗಂತವು ಇಳೆ ಆಗಸವು ಸಂಧಿಸಿದಂತೆ ಭಾಸವಾಗುವುದುವಿಶ್ವವನ್ನೊಮ್ಮೆ ಪರ್ಯಟಿಸಿ ಅವಲೋಕಿಸಬಹುದು ನೋಡು ಅಖಂಡ ಆಗಸವು ನೀಲವರ್ಣದಿ ಗೋಚರಿಸುವುದು ಮೇಲೆಬೆಳಕಿನ ಮೂಲದ ಸತ್ಯಾಸತ್ಯತೆಯನ್ನು ಪರಾಮರ್ಶಿಸಬಹುದು ನೋಡು ********

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ತೇಜಾವತಿ ಹೆಚ್.ಡಿ. ಕೊರೆಯುವ ಚಳಿಯಲ್ಲೂ ವಹ್ನಿಯೊಡಲು ದಹಿಸುತ್ತಿದೆ ಸಾಕಿಬಹಿರಂಗದ ತೊಗಲು ಅಂತರಂಗದ ಜ್ವಾಲೆಯಲ್ಲಿ ಮೈ ಕಾಯಿಸುತ್ತಿದೆ ಸಾಕಿ ಹೆಪ್ಪುಗಟ್ಟಿದ್ದ ಹೃದಯ ರಂಧ್ರ ಮುಚ್ಚಿದ್ದ ಕಾಯದ ಬಾಯಿ ತೆರೆದುನರನಾಡಿಯಲ್ಲೂ ಶರವೇಗದಿ ಕಾವು ಮಿಂಚಂತೆ ಸಂಚರಿಸುತ್ತಿದೆ ಸಾಕಿ ರೆಕ್ಕೆ ಮೂಡದ ಹಕ್ಕಿಯ ಕನಸೊಳಗೆ ಮೌನದ ನೀರವತೆ ಮಡುಗಟ್ಟಿದೆಹನಿವ ಮಳೆಯೊಡನೆ ಹರಿವಕಂಬನಿ ಧರೆಯಲಿ ಲೀನವಾಗುತ್ತಿದೆ ಸಾಕಿ ಸಲಿಲದಿಂದ ಬೇರ್ಪಟ್ಟ ಮತ್ಸ್ಯದ ಒದ್ದಾಟದ ಚಡಪಡಿಕೆಯಲಿಜಾತಕಪಕ್ಷಿ ಜೀವಸೆಲೆಗಾಗಿ ಕಾತರಿಸಿ ಜವವ ಕಾಯುತ್ತಿದೆ ಸಾಕಿ ಇರುಳ ತಿಂಗಳ ತೇಜಸ್ಸನ್ನು ಭ್ರಮಿಸಿ ಸ್ಮೃತಿಪಟಲದ ಅಕ್ಷಿಗಳಲ್ಲಿಜಾರಿದ ಅಶ್ರುಬಿಂದುಗಳ ಒರೆಸಿ ದಿಂಬಿನ ಮಡಿಲು ಸಂತೈಸುತ್ತಿದೆ ಸಾಕಿ ********

ಗಝಲ್ Read Post »

ಕಾವ್ಯಯಾನ

ಕಾವ್ಯಯಾನ

ಸಮುದ್ರ ಸಂಗೀತ ಫಾಲ್ಗುಣ ಗೌಡ ಅಚವೆ. ದೂರ ದಿಗಂತದಿಂದ ಓಡಿ ಬರುವಅಲೆಗಳು ದಂಡೆಗೆ ಅಪ್ಪಳಿಸುತ್ತಿವೆನಿರಾಳವಾಗುತ್ತಿವೆ.ಗುರಿಯ ಸಾಫಲ್ಯತೆಪ್ರಯತ್ನದ ಫಲವತ್ತತೆಸಾರುತ್ತಿದೆ ಕಡಲುಹಾಗೆ ಒಳಗೆ ಇಣುಕಿದರೆದಂಡೆಯ ಮೌನ ಸಂಗೀತಕೇಳುವುದು. ಸತ್ತ ಮೀನು ಸೌದೆ ಕೋಲುಎಲ್ಲವನ್ನೂ ದಂಡೆಗೆಸೆವತಾನು ಶುಭ್ರಗೊಳ್ಳುವ ಪರಿಅಚ್ಚರಿ!ಒಂದು ಕ್ಷಣ ಮನದಲ್ಲಿಣುಕಿದರೆನಿನ್ನೊಳಗಿನ ದ್ವೇಷ, ಅಸೂಯೆಕೋಪ ಸಣ್ಣತನಗಳ ಇದೇದಂಡೆಯಲ್ಲಿ ಬಿಟ್ಟು ಹೊರಡುವೆನಿಶ್ಕಲ್ಮಶ ಮನಸ ಹೊತ್ತು. ಶರಧಿಯೋಳಗಿನ ಆಳ ವಿಸ್ತಾರಭೋರ್ಗರೆತ,ಭರತ ಇಳಿತಗಳುಲಾಗಾಯ್ತಿನಿಂದಿಲ್ಲಿವರೆಗೆಸೇರುವ ಹೊಳೆಹಳ್ಳ,ನದಿಗಳುಕೂಡುತ್ತಲೇ ಇವೆ.ಎಲ್ಲ ಇದ್ದು ಇಲ್ಲದಂತಿರುವಸಮುದ್ರ ಸಮತೋಲನದ ಪಯಣನಿನ್ನೊಳಗೆ ಬಿಂದು ಸಿಂಧುವಾಗಲಿ. ಆಗಾಗ್ಗೆ ಅಥವಾ ಸಂಜೆಯಲ್ಲಿಸಣ್ಣಗೆ ಅಲೆವ ಅಲೆ ತನ್ನೊಳಗಿನಸುಪ್ತ ಸಂಗೀತ ಸೃಷ್ಟಿಸುವುದುನಿನ್ನೊಳಗಿನ ಮಂದ್ರ ಮನಸುಅದನು ಕೇಳುವುದು. ಗಿಟಾರು ಹಿಡಿದು ಹೊರಟರೆಸಂಗೀತ ಹೃದಯಕೆ ಬರೋಲ್ಲಅದರೊಳಗಿನ ತಂತಿಗಳುಮೂಡಿಸುವ ತನನನಾದಗಳು ನಿನ್ನ ಮಂತ್ರ ಮುಗ್ಧಗೊಳಿಸುವುದು.ನಿನ್ನ ನೆರಳು ನಿನ್ನ ಅಸ್ತಿತ್ವ ಹೇಳುವುದು.!! *******

ಕಾವ್ಯಯಾನ Read Post »

You cannot copy content of this page

Scroll to Top