ಕಾವ್ಯಯಾನ
ಮುಗಿಯದ ಮಾತು ಅಕ್ಷತಾ ಕೃಷ್ಣಮೂರ್ತಿ ಮನದ ಪ್ರಶ್ನೆಗಳಿಗೆ ಉತ್ತರವಿಲ್ಲಕೇಳಿದರೆ ಸಿಟ್ಟುಜಮದಗ್ನಿಯಂಥವರುಮೌನದಲಿ ಉತ್ತರವಿದೆ ಎನಿಸಿದರೂಆಲಿಸಲು ನಿಶಕ್ತಿಯಿದೆಹೇಳಿದರೆ ಸಲೀಸುಗೊತ್ತಿದ್ದರೂಗೊತ್ತಿಲ್ಲದಂತಿರುವುದೇ ಒಲವಿಗೆಶ್ರೇಯಸ್ಸು ಆದರೂಹೊಟ್ಟೆಕಿಚ್ವು ಎಂದನವ ಯಾಕಾಗಿ ಯಾರಿಗಾಗಿಸ್ವಂತದ್ದು ಆಗಿದ್ದರೆಒಪ್ಪುತ್ತಿದ್ದೆನೆನೋರವಿ ಕಿರಣಕೆಪಾಲುದಾರರೆ ಹೆಚ್ಚಿರುವಾಗಈಗ ಹುಟ್ಟಿದ ನಾನುನೀ ನನ್ನವನೆನಲು ಒಪ್ಪಿತವೇನು?ಅಷ್ಟಕ್ಕೂ ಅವನೊಲವುಅರಿವಿಗೂ ದಕ್ಕದಿರುವಾಗಗೆಲ್ಲುವೆನೆಂಬ ಉಮೇದುತಕ್ಕಡಿಯಲ್ಲಿ ಲೆಕ್ಕ ಹಾಕುತಿದೆಒಲವು ಅಂಟಿಸಿಕೊಳ್ಳುವುದಲ್ಲ. ಅವನೇಕೆ ಒಂದು ನಮೂನಿನೇರ ಇದ್ದಾನೆ ನುಡಿಯುತ್ತಾನೆಎದುರಿಗಿರುವುದು ಪ್ರೀತಿಸುವಮನಸು ಮರೆಯುತ್ತಾನೆಹೇಳಿಯೇ ಬಿಡುತ್ತಾನೆಎಲೆ ಉದುರುವ ಕಾರಣವನಾ ನೀರೆರೆಯುತ್ತೇನೆನಂಬಿ ನನ್ನ ವಸಂತತಪ್ಪದೆ ಬರುವ ಎಲ್ಲತಪ್ಪುಗಳ ಮೀರಿಎಂದೆ ಅಂವ ಆಡಿದ ಮಾತುಮರೆತು ಮತ್ತೆಹೇಳಿಯೇ ಬಿಡುತ್ತಾನೆನೆಟ್ಟ ಮರ ಮುರಿಯಲು ಬಿಡೆ ಎಂದು ಈಗ ಅನಿಸುತ್ತದೆ ಇಬ್ಬರ ದಾರಿ ಒಂದೆನಡೆಯುತ್ತೇವೆ ಓಡುತ್ತೇವೆಒಮ್ಮೊಮ್ಮೆ ಕುಂಟುತ್ತೇವೆಇದ್ದಕ್ಕಿದ್ದಲ್ಲೇ ದಾರಿ ಎರಡಾಗುತ್ತದೆಮಾತಾಡುತ್ತೇವೆ ದೊಡ್ಡದಾಗಿಕೂಗುತ್ತೇವೆ ಕಿರುಚುತ್ತೇವೆಅರೇ! ತಪ್ಪು ತಿಳಿಯಬೇಡಿಎರಡಾದ ದಾರಿ ಒಂದಾಗುವರೆಗೆಕೂ..ಅಂದಿದ್ದುಕೇಳಬೇಕಲ್ಲಮತ್ತೇ ಎಲ್ಲೊ ಒಂದು ಕಡೆದಾರಿ ಸೇರುತ್ತದೆಒಂದಾದ ದಾರಿಯಲ್ಲಿಸೇರುತ್ತೇವೆ ಸಾಗುತ್ತೇವೆಕೊನೆ ನಿಲ್ದಾಣಪರಿಚಯವಾಗುವವರೆಗೆ. ***********









