ಆವಿಷ್ಕಾರ
ಆವಿಷ್ಕಾರ ಡಾ.ಅಜಿತ್ ಹರೀಶಿ ಗುಪ್ತಗಾಮಿನಿ ರಕುತಹೃದಯದೊಡಲಿಂದ ಚಿಮ್ಮುತಕೋಟಿ ಜೀವಕಣಗಳಿಗುಣಿಸುತಜೀವಿತವ ಪೊರೆಯುವುದುಎಷ್ಟು ಸಹಸ್ರಕಾಲದ ನಡೆಯುಹೀಗೆ ಅರಿವಾದಂತೆಹೊಸ ಕಾಯಕಲ್ಪ ಜೀವನಕ್ಕೆ…! ಪರಮಾಣುಗಳಲಿ ಅದುಮಿಟ್ಟಬಹಳ ಬಲವಾದ ಸ್ಫೋಟಅಣ್ವಸ್ತ್ರಗಳೊಳಗೆ ಬಿಗಿದಿಟ್ಟುಲಕ್ಷ ಜೀವಗಳ ಮರಣಪಟ್ಟಿರಣಕಹಳೆ ಊದುವ ಮೊದಲೇಯುದ್ಧ ನಡೆಸುವ ರಣನೀತಿಅಸ್ತ್ರಗಳು ಅಣುವಾದಂತೆಬೃಹತ್ ದ್ವೇಷ ಜಗಕ್ಕೆ…! ಧರಣಿ ಹೂಡದ ಧರೆಯ ಮೇಲೆಹಸಿರುಟ್ಟು ನಿಂತ ಸಸ್ಯಶ್ಯಾಮಲೆಕಾಡು, ನಾಡಿಗೆ ಜೀವಂತ ದೇವರೇಇವು ಜೀವಿಸುತ್ತವೆ, ಎಂಬ ವಿಜ್ಞಾನಈ ತಿಳಿವು ಬಂದಂತೆಮುನ್ನಡೆಯಾಯಿತು ವಿನಾಶಕ್ಕೆ..! **********








