ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ನಿನ್ನ ಬಿಟ್ಟು ನಾನು ಬಹುದೂರ ಬಂದಿರುವೆನು ಗೆಳೆಯ ನೀನು ಅತ್ತು ಕೂಗಿದರೂ ಕೇಳಿಸದಾಗಿದೆ ನನಗೀಗ ಗೆಳೆಯ ಇಷ್ಟು ದಿನ ಪ್ರೀತಿಯ ಭ್ರಮಿಸಿ ಕನವರಿಸಿ ನಿತ್ರಾಣವಾಗಿರುವೆನು ನಾನು ಮನವೀಗ ಅರಸಿಬಂದರು ಮರುನೋಡದೆ ಒಪ್ಪಿಕೊಳ್ಳದಾಗಿದೆ ಗೆಳೆಯ ಬಿಸಿಲ್ಗುದುರೆಯೇರಿ ಮೋಹದ ಓಣಿಯ ಜೀವಜಲಕ್ಕಾಗಿ ಓಡಿದೆ ನಾನು ಹೆಜ್ಜೆಗಳು ಬಸವಳಿದು ಕಣ್ಣರಳಿಸಲಾರದೆ ಕಳೆಗುಂದಿದೆ ಗೆಳೆಯ ಘಮಭರಿತ ಸುಮವೀಗ ನಿರ್ವಾತಕ್ಕೆ ಸಿಲುಕಿ ಕಠಿಣ ಶಿಲೆಯಾಗಿ ಬದಲಾಗಿದೆ ಕ್ರಿಯೆಗೆ ಪ್ರತಿಕ್ರಿಯಿಸುವ ಸೂಕ್ಷ್ಮ ಸಂವೇದನೆಗಳ ಕಳೆದುಕೊಂಡಿದೆ ಗೆಳೆಯ ನೀನೀಗ ಒಲವ ಅಮೃತಧಾರೆಯನ್ನೇ ಸ್ಪುರಿಸಿದರೂ ಹಿತವಾಗುತ್ತಿಲ್ಲ ನನಗೆ ಗೋರ್ಕಲ್ಲ ಮೇಲೆ ಮಳೆ ಸುರಿದು ನಿಷ್ಪ್ರಯೋಜಕವಾಗಿದೆ ಗೆಳೆಯ ಐಹಿಕದ ಯಾವುದೂ ಬೇಡ ದೂರದ ಬೆಳಕೊಂದ ಅರಸಿ ಹೊರಟಿಹೆ ಈಗ ನನ್ನಷ್ಟಕ್ಕೆ ನನ್ನ ಬಿಟ್ಟುಬಿಡು ನನ್ನಿಷ್ಟದ ಬದುಕು ಸನಿಹವಾಗಿದೆ ಗೆಳೆಯ ಹೋಗಬೇಕೆಂದಿರುವೆ ಜಾತಿಮತ ಲಿಂಗಭೇದ ತೂರಿ ನೀತಿನಿಯಮಗಳಾಚೆ ಸ್ವಚ್ಛಂದವಾಗಿ ನಿತ್ಯ ತೇಜದಿ ಪ್ರಜ್ವಲಿಸುವ ತಾರೆಯಾಗುವ ಹಂಬಲವಾಗಿದೆ ಗೆಳೆಯ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಿರುಪದ್ರವಿ ವಸುಂಧರಾ ಕದಲೂರು ಗಿಡಗಂಟಿ ಬಳಿ ಹೂ ಕೊಯ್ಯಲು ಹೋದೆ; ಮೈ ಮೇಲೆ ಕಪ್ಪು ಇರುವೆ ಹತ್ತಿದೆ. ಅದು ಹಾದಿ ತಪ್ಪಿತೆ ಅಥವಾ ನಾನು ತಪ್ಪಿದೆನೆ ಬೆರಳ ಬೆಟ್ಟಗುಡ್ಡ ಏರಿಳಿದು, ಅಂಗೈ ರೇಖೆ ಅಳೆದು, ಸರಸರಾ ಸರಸರಾ ಸಂಚರಿಸಿತು ಸಾವಧಾನವೇ ಇಲ್ಲ ಸರಸರಾ ಸರಸರಾ.. ನೋಡುತಿದ್ದೆ ಕಂಗೆಟ್ಟದ್ದು ಯಾರು ಭುಜದ ಮೇಲೆ; ಹಣೆ, ಮೂಗು, ಕೆನ್ನೆ ಮೇಲೆಲ್ಲಾ ಹರಿದಾಡಿತು ಸರಸರಾ ಸರಾಸರಾ.. ಈ ಮೈ, ಈ ಜೀವವುಳ್ಳ ನನ್ನನ್ನು ಹೊತ್ತ ಮೈ ; ಬಲು ಬಂಜರೆನಿಸಿತೇನು ಎದೆಗಿಳಿಯಲಿಲ್ಲ; ಒಲವ ಪಸೆ ಕಾಣಲಿಲ್ಲ. ಹರವಾದ ಈ ದೇಹ ಒಂದು ಇರುವೆಗೂ ಆಗಿಬರದಷ್ಟು ದೊಡ್ಡದು; ಸತ್ತ ಮೇಲೆ ಬೂದಿಕಸ. ಸರಸರಾ ಸರಸರಾ.. ತಡಕಾಡಿತು ಬಿಡುಗಡೆಯ ಹಾದಿಗೆ ಸರಸರಾ ಸರಸರಾ.. ಸಿಕ್ಕಿತದೋ ಕಾಲ ಬುಡದಲ್ಲಿ ನೆಲ, ಹಸಿರು, ಬದುಕು, ಒಲವು.. ಸರಸರಾ ಸರಸರಾ.. ಒಮ್ಮೆಗೆಲೆ ಕಳಚಿತು. ಹೇಗೆ ಜಾರಿಕೊಂಡಿತೋ ತಿಳಿಯದು ಯಾರಿಲ್ಲಿ ಆ ನಿರುಪದ್ರವಿ ! ••••••••••••• —

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಅಯ್ಯೋ… ಸಂತೇಬೆನ್ನೂರು ಫೈಜ್ನಾಟ್ರಾಜ್ ಮುರಿದು ಬಿಟ್ಟಿರಾ…ಛೆ..ಬಿಟ್ಟಿದ್ದರೆ ನೆಲದ ಮೇಲೆ ಆಕಾಶ ನೋಡ್ತಾ ನಾಲ್ಕು ದಿನ ಹೇಗೋ ಬಾಳುತ್ತಿತ್ತು ಅಯ್ಯೋ ಹರಿದು ಹಾಕಿದಿರಾ…ಛೆ ಮನವರಳೋ ನಾಲ್ಕಕ್ಷರ ಬರೆದು ಹಾಕಿದ್ದರೆ ಸಾಕಿತ್ತು ಕಿತ್ತೇಕೆ ಎಸೆದಿರಿ…ಛೆ ಮಳೆ ಬಂದಿದ್ದರೆ ಮೈ ಮುರಿದು ಚಿಗುರುತ್ತಿತ್ತೇನೋ ಪಾಪ ಏನಂದಿರಿ….ಛೆ ತುಸು ಕಾದು ನೋಡಿದ್ದರೆ ನಿಮ್ಮಂತೆಯೇ ಇರುತ್ತಿದ್ದರೋ…ಏನೋ… ಮುಖ ತಿರುವಿ ಬಿಟ್ಟಿರಾ… ಛೆ ನಗ್ತಾ ಒಂದೆರಡು ಮಾತಾಡಿದ್ದರೆ ಹೂ ನಗೆ ಕೊಡುತ್ತಿದ್ದರೇನೋ….! ಬಾಗಿಲು ಹಾಕಿಯೇ ಬಿಟ್ಟಿರಾ…‌ಛೆ ಒಲವ ಒಲವಿಂದ ನೋಡದೇ ಹಳದಿ ಕಣ್ಣೇಕೆ ಬಿಟ್ಟಿರಿ ಪಾಪ ದೂರಾಗುತ್ತಿರಲಿಲ್ಲವೇನೋ! ಛೆ…ಬಿಡಿ, ನಾನೂ ಹಾಗೆಯೇ ಬದಲಾಗಿದ್ದರೆ…ನನಗೂ ಹೊಸ ನೋಟ ಕಾಣುತ್ತಿತ್ತೇನೋ!! *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹಸಿರು ಕುದುರೆ ನೀ.ಶ್ರೀಶೈಲ ಹುಲ್ಲೂರು ಹಸಿರು ಕುದುರೆ ರಾಜನೊಂದು ಸಂಜೆ ತನ್ನ ರಾಜ ತೋಟದಲ್ಲಿ ಬರಲು ಮೋಜುಗರೆವ ಹಕ್ಕಿಯುಲಿಗೆ ಸೋತುಹೋದನು ಹಚ್ಚಹಸಿರು ಕಂಡ ತಾನು ಮೆಚ್ಚಿ ಹರುಷ ಸೂಸುತಿರಲು ಹುಚ್ಚು ಮನದಿ ಆಸೆಯೊಂದು ಹುಟ್ಟಿಕೊಂಡಿತು ಹಸಿರು ಸಿರಿಯ ನಡುವೆ ನಲಿದು ಹೊಸತನೊಂದ ಯೋಚಿಸುತಲಿ ಹಸಿರು ಕುದುರೆ ಏರೊ ಕನಸು ತುಂಬಿಕೊಂಡನು ಬೀರಬಲ್ಲನನ್ನು ಕರೆದು ಕೊರೆವ ಆಸೆ ಹೇಳಿಕೊಂಡು ವಾರದಲ್ಲಿ ಹಸಿರು ಕುದುರೆ ತರಲು ಹೇಳಿದ ಉಕ್ಕಿಬರುವ ನಗೆಯ ತಡೆದು ಅಕ್ಕರೆಯಲಿ ಒಪ್ಪಿಕೊಂಡು ಸಿಕ್ಕ ಸಿಕ್ಕ ಊರಿನಲ್ಲಿ ಸುಮ್ಮನಲೆಯತೊಡಗಿದ ಉಂಟೆ ಜಗದಿ ಹಸಿರು ಕುದುರೆ? ಕುಂಟು ನೆಪವ ಮಾಡಿ ರಾಜ ಗಂಟು ಬಿಡಿಸಲವಗೆ ಒಂದು ದಾಳ ಹಾಕಿದ ಏಳು ದಿನಕೆ ಸಭೆಗೆ ಬಂದು ಹೇಳಿಕೊಂಡ ಹಸಿರು ಕುದುರೆ ನಾಳೆಗೇನೆ ತರಲುಬಹುದು ಇಚ್ಛೆಪಟ್ಟರೆ ಕುದುರೆ ಒಡೆಯನೆರಡು ಮಾತು ಮುದದಿ ನೆರವೇರಿಸಲೆಬೇಕು ಅದನು ಕೇಳಿ ಮೊದಲು ನೀವು ಗಮನದಿಂದಲಿ ಮೊದಲ ಮಾತು ರಾಜನಷ್ಟೆ ಕುದುರೆ ತರಲು ಹೋಗಬೇಕು ಇದಕೆ ತಮ್ಮಭಿಮತವದೇನು ಹೇಳಿ ಈಗಲೆ ಒಪ್ಪಿಕೊಂಡ ರಾಜನದಕೆ ತಪ್ಪಿನಡೆಯೆ ಎನಲು ಅವಗೆ ಗಪ್ಪನೆಯೆ ಮತ್ತೊಂದು ಮಾತ ಹೇಳಿಬಿಟ್ಟನು ವಾರದೇಳು ದಿನವ ಬಿಟ್ಟು ಬರಲುಬೇಕು ನಿಮ್ಮ ರಾಜ ಕರೆದು ಬೇಗ ತರಹೋಗೆಂದು ನನಗೆ ಹೇಳಿದ ಇದನು ಕೇಳಿ ಬೆಚ್ಚಿ ರಾಜ ವದನ ಮುಚ್ಚಿ ನಾಚಿಕೊಂಡು ಸದನದೆದುರು ತನ್ನ ಸೋಲನೊಪ್ಪಿಕೊಂಡನು ಬೀರಬಲ್ಲ ನಿನ್ನ ಜಾಣ್ಮೆ ಮೀರಬಲ್ಲ ಮನುಜರಿಲ್ಲ ಅರಸನ ಕೊಹಿನೂರ ವಜ್ರ ನೀನು ಎಂದನು ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನನ್ನೂರಲಿ ಏನಿದೆ….? ರೇಖಾವಿ.ಕಂಪ್ಲಿ ನನ್ನೂರಲಿ ಏನಿದೆ….? (ನನ್ನದು ಪ್ರಾಸವಿಲ್ಲದ ಹಾಡು) ನಾಲ್ಕಾರು ಪುಡಿಗಾಸು ಮಾಡಿಕೊಳ್ಳುವ ನನ್ನೂರಲಿ ಏನಿದೆ ಎಂದೆನುತ ಊರಕೇರಿ ಬಿಟ್ಟು ದೂರದೂರಿಗೆ ಪಯಣ ಬೆಳಸಿದರು ನನ್ನನ್ವ ನನ್ನಪ್ಪ ತಮ್ಮನೊಂದಿಗೆ……… ಮಹಾನಗರದಲಿ ಅಲ್ಲೊಂದು ಮೇಲ್ಚಾವಣಿ ಇಲ್ಲದ ಗುಡಾರದಲ್ಲಿ ಬೀದಿ ಬದಿಯ ಒಲೆಯಲಿ ರೊಟ್ಟಿ ತಟ್ಟಿ ನನ್ನನ್ವ ಪುಡಿಗಾಸು ದುಡಿದು ಬರುವ ನನ್ನಪ್ಪನಿಗಾಗಿ ಕಾದು ಕುಳಿತಳು ತಮ್ಮನೊಂದಿಗೆ… ಅದಾವ ಮಸಣದ ಕರೆಯೊ ತಿಳಿಯೆ ನನ್ನಪ್ಪನ ಕೂಗಿ ಕರೆಯಿತು ಬಾರದೂರಿಗೆ ಕರೋನಾ ಎನ್ನುವ ರೋಗದ ರೂಪದಲಿ ತಪ್ಪಿತಸ್ಥನಂತು ಖಂಡಿತ ಅಲ್ಲ ನನ್ನಪ್ಪ…… ಮಾಯೆಗೆ ಕಣ್ಣ ರೆಪ್ಪೆ ಮುಚ್ಚಿಬಿಟ್ಟ ನನ್ನಪ್ಪ ನನ್ನನ್ವನ ಗೋಳು ಕೇಳುವ ಕಿವಿಗಳಿಲ್ಲ ಪುಡಿಗಾಸು ದುಡಿವವನ ಕಳೆದುಕೊಂಡು ಬಿಡಿಗಾಸು ಇಲ್ಲದೆ ಮತ್ತೆ ನಮ್ಮೂರಿನತ್ತ ಪಯಣ… ಬರಿಗಾಲಿನಲಿ ಬಿಸಿಲ ಧಗೆಯಲಿ ತಮ್ಮನೊತ್ತು ಕಣ್ಣ ಹನಿ ನುಂಗಿಕೊಂಡು ಕಾದ ಹೊಟ್ಟೆಗೆ ಬಟ್ಟೆ ಕಟ್ಟಿ ದುಃಖದ ಬುಟ್ಟಿ ಹೊತ್ತು ಬರುವ ದಾರಿಯಲಿ ಬೇಡಿ ತಿನ್ನುತಾ…… ಮುಳ್ಳು ಕಲ್ಲುಗಳ ತುಳಿಯುತಾ ಧೂಳು ದುಮ್ಮು ವರಸಿಕೊಳ್ಳುತಾ ಬೇವರ ಹನಿ ಸೆರಗಲಿ ವರಸಿ ಹೊತ್ತ ತಮ್ಮನ ಸರಸಿಕೊಳ್ಳುತಾ ರಕ್ತಗಾಲಲಿ ಬಂದು ಸೇರಿದಳು ನನ್ನನ್ವ ನನ್ನೂರನು.. ********

ಕಾವ್ಯಯಾನ Read Post »

ಕಾವ್ಯಯಾನ

ಗಝಲ್

ಗಝಲ್ ರತ್ನರಾಯಮಲ್ಲ ಧ್ಯಾನ ಮಾಡಲು ಜಾಗ ಹುಡುಕುತಿರುವೆ ಶರಣ ನನ್ನ ಹೃದಯವನ್ನೇ ಸ್ವಚ್ಛ ಮಾಡುತಿರುವೆ ಶರಣ ಪಡೆದುಕೊಳ್ಳಲು ಹತ್ತು ಹಲವಾರು ದಾರಿಗಳಿವೆ ಇಲ್ಲಿ ಕಳೆದುಕೊಳ್ಳಲು ದಾರಿಯನ್ನು ಅರಸುತಿರುವೆ ಶರಣ ಬದುಕುತಿದ್ದೇವೆ ಬಣ್ಣ ಬಣ್ಣದ ಮನಸ್ಸುಗಳೊಂದಿಗೆ ಕನಸುಗಳೊಂದಿಗೆ ಸಾಗಲು ಹೆಣಗುತಿರುವೆ ಶರಣ ಭೋಗದ ಗರ್ಭಗುಡಿ ಚಂಚಲಗೊಳಿಸುವುದೇ ಹೆಚ್ಚು ಕಾನನದ ಗುಹೆಗಳಿಂದ ಹಿಂತಿರುಗುತಿರುವೆ ಶರಣ ಸಂಸಾರದಿ ಓಡಿ ಹೋಗವುದು ಸಾಧನೆಯಲ್ಲ ‘ಮಲ್ಲಿ’ ಜೀವನದ ರಂಗಭೂಮಿಯಲ್ಲಿ ನಟಿಸುತಿರುವೆ ಶರಣ

ಗಝಲ್ Read Post »

ಕಾವ್ಯಯಾನ

ಕಾವ್ಯಯಾನ

ತೋರಣ ಕಟ್ಟುವೆವು ಸುಜಾತ ಗುಪ್ತ ಜಗನ್ನಾಥನು ಜೊತೆ ನಿವಸಿಸಿ ನಮ್ಮನ್ನು ಕಾಯಲು ಅನವರತ ಹೃದಯದ ಭಾವಕೆ ಮಾನವತಾ ತೋರಣ ಕಟ್ಟುವೆವು.. ಜಗದಂಬೆಯ ಮನ ಒಲಿಸಿ ಹಸನ್ಮುಖಿಯಾಗಿರಿಸಲು ಮನದ ದ್ವಾರಕೆ ನೀತಿಯ ತೋರಣ ಕಟ್ಟುವೆವು… ಬಾಳಲಿ ಹಿನ್ನಡೆಸುವ ಸೋಲಿನ ಸಾಲಿಗೆ ನಾವ್ ಚೇತನಾಪ್ರದ ಗೆವುವಿನ ತೋರಣ ಕಟ್ಟುವೆವು. ಕಂದನ ಖುಷಿಯ ಸಿರಿಗೆ ಹರಸುತ ಹರುಷದೆ ಮುತ್ತಂತ ತ್ಯಾಗದ ತೋರಣ ಕಟ್ಟುವಳಮ್ಮ ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕೆಂಡ ಸಂಪಿಗೆ ರೇಮಾಸಂ ನೀರಾಡಿದೆ ಕಣ್ಣಲಿ ಮಂದಹಾಸೆ ಗಂಟಲುಬ್ಬಿದರು ನಸುನಗು ಮಾಸೆ ಸೆರಗಲಿ ಕೆಂಡವು ನಿಗಿನಿಗಿಸುತಿದೆ ಎದೆಯ ಕ್ಷೀರಧಾರೆ ಅಮೃತವಾಗಿದೆ/ ಭೇದಭಾವದ ನೊಗದಲಿ ಕಳೆದೆ ಬಾಲ್ಯ ಅಯ್ಯೋ ನೀನು ಮಹಿಳೆಯಂದು ಕೂಗಿದರು ರೆಕ್ಕೆಗಳನು ಕತ್ತರಿಸಿದ್ದು ಲಕ್ಷ್ಮಣರೇಖೆ ಹೊಸ್ತಿಲವು ಹೆಬ್ಬಾವಾಗಿದೆ/ ಧಾರೆಗೆ ಬಾಲ್ಯಕೆ ಮನೆಯರಡು ಬೆಳಗಿದರೂ ಅವಳು ಕೊರಡು ಜ್ಯೋತಿಯಾದರೂ ಚುಕ್ಕೆಯೆಂದರು ಅಡುಗೆ ಗಡುಗೆಗವಳನು ಮೀಸಲಿಟ್ಟರು/ ಹೊತ್ತು ಗರ್ಭದಿ ನವಮಾಸಗಳು ನೋವನುಂಗಿ ನಗುವ ಹರಡಿದಳು ಕುಲವಧುವಾಗಿ ಕುಲಜ್ಯೋತಿಯಾದಳು ಮರಣಶಯ್ಯೇನೇರುತ ಜೀವದಾನಿಯಾದಳು/ ಮೊಗ್ಗುಗಳು ಕಾಮಿಗಳ ಅಟ್ಟಹಾಸಕೆ ಬಲಿಯಾಗಿ ಹೊಸಕಿದ ಅನಾಗರಿಕ ನಡೆಯಲಿ ಭ್ರಾತೃತ್ವ ನಗ್ನವಾಗಿದೆ ಅಬಲೆ ನಡತೆಗೆ ಸಬಲೆ ಭಾಷಣಕ್ಕಾಗಿದೆ/ ನಿರ್ಭಯದಿ ಒಂಟಿ ನಡಿಗೆಯಲಿ ನಿರ್ಭಯಾಳಾಗುವಳು ಹತ್ಯೆಯಲಿ ಅಮಾನುಷ ಹಸಿವಿನ ಪುಂಗವರಲಿ ಮಾನವೀಯತೆ ಸತ್ತಿದೆ ಕಾಮಕೇಳಿಯಲಿ/ ಜನನಿ ಸ್ತನಪಾನ ಹರಿಸಿದ ಅವನಿ ಮಮತೆಯ ಮಡಿಲಲಿ ತೂಗಿದ ಜೀವನದಲಿ ಪ್ರತಿಕ್ಷಣ ಸಿಗುವ ಸಂಗಾತಿ ಮರೆಯದಿರಿ ಅವಳು ಬಹು ಪಾತ್ರಗಳ ಒಡತಿ / *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹಸನಾಗಲಿ ಬಾಳು ಜ್ಯೋತಿ ಹೊಸಕೋಟೆ ನನ್ನ ಜೀವದ ಜೀವ ನೀ ನನ್ನೊಲವ ಉಸಿರು ನೀ// ಮೊಲೆಹಾಲ ಕುಡಿಸುವಾಗ ಪುಟ್ಟ ಪುಟ್ಟ ಹೆಜ್ಜೆಗಳಿಂದ ಎದೆಗೆ ಒದ್ದ ಕ್ಷಣ ಪುಳಕಗೊಂಡಿತ್ತು ತನು ಮನ ಎದೆ ಎತ್ತರಕ್ಕೆ ಬೆಳೆಸಿಹೆ ನಾನಿಂದು ಒದೆಯದಿರು ಚುಚ್ಚು ಮಾತುಗಳಿಂದ ನಿನ್ನ ಪ್ರೀತಿಗಾಗಿ ಹಾತೊರೆಯುವ ತಾಯಿಯ ಮನ ತಡೆಯಲಾರದು ಎಡವಿದಾಗ ಕೈ ಹಿಡಿದು ನಡೆಸಿ ದಾರಿ ತೋರಿದ್ದೆ ಅಂದು ಎಡವದಿರು ಮುಗ್ಗರಿಸದಿರು ನೋಡಿ ಸಹಿಸಲಾಗದು ಇಂದು ತಾಯಿಯ ಸೆರಗು ಹಿಡಿದವ ಸಂಗಾತಿಯ ಕೈ ಹಿಡಿದಿರುವೆ ಅವಳಲ್ಲೂ ಮಾತೃತ್ವ ತುಂಬಿಹುದು ನೋಯಿಸದೆ ಬಾಳಿಸು ಕೊನೆಯವರೆಗೂ ಮಮತೆಯ ಕುಡಿಯೊಂದು ನಿನ್ನ ಎದೆ ತಬ್ಬಲಿ ಹಬ್ಬಲಿ ಪ್ರೀತಿ ಹಚ್ಚ ಹಸಿರಾಗಿ ಹಸನಾಗಲಿ ಬಾಳು ಬೆಳಕಾಗಲಿ ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸಹದೇವ ಯರಗೊಪ್ಪ ಹರವಾದ ಎದೆಯ ಹೊಲ ಹರಗಿ ಮಿದುಗೊಳಿಸಿ ಮಳೆಗಾಗಿ ಕಾಯುತಿರುವೆ| ಕಸ ಕಡ್ಡಿಗಳನು ಎರೆಹುಳುವಿನ ಜರಡಿಯಿಂದ ಸಾಣಿಸಿ ಮಳೆಗಾಗಿ ಕಾಯುತಿರುವೆ|| ಎಲ್ಲೇ ಮೀರಿ ಓಡುವ ಮೋಡಗಳಿಗೆ ಬಲೆ ಬಿಸಿ ನಾಲ್ಕು ಹನಿ ಉದುರಿಸಿ ಬಿಸಿಲು ತಣಿಸುವೆ| ಇಳಿಜಾರಿನ ಎದೆಗೆ ನೀರುಣಿಸಲು ಒಡ್ಡು ಬಿಗಿಗೊಳಿಸಿ ಮಳೆಗಾಗಿ ಕಾಯುತಿರುವೆ|| ಇರಿದು ಹರಿದೋಡುವ ಭಾವದಲೆಗಳಿಗೆ ಅಲ್ಲಲ್ಲಿ ತಡೆಗೋಡೆ ನಿರ್ಮಿಸಿರುವೆ| ಬಾಯ್ದೆರೆದ ರೆಂಟೆ ಸಾಲುಗಳ ಗಂಟಲು ಒಣಗಿಸಿ ಮಳೆಗಾಗಿ ಕಾಯುತಿರುವೆ|| ಮಳೆ ಮೈದುಂಬಿ ಸುರಿದು ಇಳೆಗೆ ಆಲಂಗಿಸಿ ಹಸಿರು ಅಚ್ಛಾದಿಸುವ ವಿಶ್ವಾಸ| ಕಪ್ಪು ಮೂತಿಯ ಮುಗಿಲ ಕಣ್ಣೀರು ಕೋಡಿ ಹರಿವು ಆಶಿಸಿ ಮಳೆಗಾಗಿ ಕಾಯುತಿರುವೆ|| ನೆಲ ಮುಗಿಲು ಮಿಲನ ಮರೆತರೆ ಕಂಗಳ ಕೊಳದ ನೀರುಣಿಸಿ ಬರ ಚಿಗುರಿಸುವೆ| ಸಾಚಿ ಉಡಿ ಮುತ್ತುಗಳನ್ನು ಕೂರಿಗೆ ಕಣ್ಣಲ್ಲಿ ಪೋಣಿಸಿ ಮಳೆಗಾಗಿ ಕಾಯುತಿರುವೆ|| ***********

ಕಾವ್ಯಯಾನ Read Post »

You cannot copy content of this page

Scroll to Top