ಕಾವ್ಯಯಾನ
ಅಂತಃಸಾಕ್ಷಿ ವೀಣಾ ರಮೇಶ್ ನನ್ನ ಪ್ರತಿಹೆಜ್ಜೆಯಲ್ಲೂ ನೀಹೆಜ್ಜೆ ಹಾಕು ಎಂದು ನಾನುಕೇಳುವುದಿಲ್ಲ ನನ್ನ ಪ್ರತಿಮಾತಿಗೂಕಿವಿಯಾಗಿರು ಎಂದುನಾನು ಹೇಳುವುದಿಲ್ಲ ನನ್ನ ನುಡಿಗೆ ದನಿಯಾಗಿರುನನ್ನ ಉಸಿರಿಗೆಎದೆಯ ಬಡಿತದ ಸದ್ದಾಗಿರು ಎಂದು ಕೇಳುವುದಿಲ್ಲ ತಂಪಾಗಿ,ನನ್ನ ಬೆನ್ನ ಹಿಂದೆನೆರಳಾಗಿ, ಕಾವಲಾಗಿರುಎಂದು ನಾನು ಕೇಳುವುದಿಲ್ಲ ನನ್ನ ಆತ್ಮಸಾಂಗತ್ಯಕ್ಕೆನಿನ್ನ ಅಂತರಾತ್ಮನೀಡುವ ಸಂವೇದನೆಗೆಸುಪ್ತಮನಸ್ಸಾಗಿರೂ ಎಂದೂಬೇಡುವುದಿಲ್ಲ ಆದರೆ ನಾನು,ನೀನು,ನಾವಿಬ್ಬರೂಒಂದೇ ಅನ್ನುವ ಅಂತಃಸಾಕ್ಷಿನಿನ್ನ ಅಂತರಂಗ ಹೇಳಿದರೆಸಾಕು,ನಾನೇನೂ ಕೇಳುವುದಿಲ್ಲ ***********









