ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಒಂದಲ್ಲ—— ಎರಡು ಸೌಜನ್ಯ ದತ್ತರಾಜ ಹೇಳುತ್ತಾರೆಲ್ಲರೂ ನಾನು ನೀನು ಒಂದೇ ಎಂದು ಹೌದೆನಿಸುತ್ತದೆ ನೋಡಲು ಎದುರಿಗೆ ಇಬ್ಬರಿಗೂ ಇದೆ ಎರಡು ಕಣ್ಣು’ ಒಂದು ಮೂಗು ಒಂದು ಬಾಯಿ ಆದರೆ ಬಾಯೊಳಗಿನ ಹಲ್ಲುಗಳ ಲೆಕ್ಕ ಸಿಗುತ್ತಿಲ್ಲ ಮೆದುಳೊಳಗಿನ ಹುಳುಕುಗಳದ್ದು ಸಹ. ಈಗ ಹೇಗೆ ಹೇಳುವುದು ಮತ್ತೆ ಮತ್ತೆ ನಾನು ನೀನು ಒಂದೇ ಎಂದು!? ನಾನು ನೀನೂ ಒಂದೇ ಎನ್ನುತ್ತಲೇ ಇಬ್ಬರೂ ಒಂದಾಗಿ ಎರಡಾದವರು ನಾವು!…. ಇಬ್ಬರೂ ಒಂದಾಗಿದ್ದಾಗ ಸುತ್ತಲಿನವರೆಲ್ಲಾ ಹೇಳಿದರು ಇಬ್ಬರೂ ಒಂದಲ್ಲ ಬೇರೆ ಬೇರೆ ಎಂದರು ಈಗ ಹೇಳುತ್ತಿದ್ದಾರೆ ಬೇರೆ ಬೇರೆಯಾದರೂ ನೀವಿಬ್ಬರೂ ಒಂದೇ ಎಂದು. ನಾನು ಒಪ್ಪಿಸಲಾರೆ ಜಗದ ಜನತೆಯನ್ನು ಸಹಿಸಲಾರೆ ನಿನ್ನೊಳಗಿನ ನಿರ್ದಯತೆಯನ್ನು ಈಗ ಹೇಳುತ್ತಿದ್ದೇನೆ ಕೂಗಿ ಕೂಗಿ ಕೇಳು ಜಗದ ಹಂಗು ತೊರೆದು’ ಬಿಗುಮಾನವನ್ನು ಬಗೆದು ನಾನು ನೀನು ಎಂದೆಂದಿಗೂ ಒಂದಲ್ಲ ಎರಡೆಂದು *****

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬದಲಾಗದ ಕ್ಷಣಗಳು… ಶಾಲಿನಿ ಆರ್. ಬದಲಾಗದ ಕ್ಷಣಗಳು, ನೀ’ ಬಂದು ಹೋದ ಘಳಿಗೆಗಳು, ಅದೇ ಚಳಿಗಾಳಿಯ ಇರುಳುಗಳು, ಚಂದ್ರಿಕೆಯ ಸುರಿವ ಬೆಳದಿಂಗಳು, ನಿನ್ನರಸುವ ಕಣ್ಣರೆಪ್ಪೆಗಳು, ಹ್ಞಾಂ, ಕಣ್ಣಂಚಿನಾ ಕೊನೆಯಲಿ ಕಂಡು ಕಾಣದ್ಹಾಂಗೆ ಜಿನುಗಿದ ಹನಿಗಳು, ಮತ್ತೇನಿಲ್ಲ,! ಮೌನದುಯ್ಯಾಲೆಯಲಿ ಬಿಗಿದ ಕೊರಳು, ಒಣನಗೆ , ದಾಹ! ಅಷ್ಟೇ, ಸಂಜೆಯ ಚಳಿಗಾಳಿಯಿರುಳಲಿ ನೀ ನಡೆದ ದಾರಿಯುದ್ದಕ್ಕೂ ಮಂಜುಮುಸುಕಿದ ಧೂಳ ಕಣಗಳು, ಮನದಾಳದಲ್ಲಿ ಅಲ್ಲ, ಮತ್ತೆ! ಯಾವುದು ಬದಲಾಗಿಲ್ಲ ನೀ ಬಂದು ಹೋದ ಘಳಿಗೆಗಳು, ಅದೇ ಚಳಿಯ ಇರುಳುಗಳು, ಚಂದ್ರಿಕೆಯ ಸುರಿವ ಬೆಳದಿಂಗಳು, ಸುಳಿಯದ ನಿದಿರೆಯ ಹೊರತು! *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪ್ರೀತಿಯ ಗೆಳೆಯರೇ ಮೂಗಪ್ಪ ಗಾಳೇರ ಪ್ರೀತಿಯ ಗೆಳೆಯರೇ……. ನಿಮಗೊಂದು ಕತೆ ಹೇಳಬೇಕೆಂದಿರುವೆ ಎರೆಮಣ್ಣ ಕರಿ ಚೆಲುವು ಸುಳಿಗಾಳಿಯ ಅಲೆಮಾರಿಯ ನಡಿಗೆ ಬೈಕೊಂಡು ಹುರ್ಕೊಂಡು ಸರಿಯಾಗಿ ಕೇಳಿ ನಾ ಹೇಳುವ ಕಥೆಯಾ……..! ಪ್ರೀತಿಯ ಗೆಳೆಯರೇ……. ನಿಮಗೊಂದು ಪತ್ರ ಬರೆಯುವೆ ನಿಟ್ಟುಸಿರು ಬಿಡದೆ ಬಿಟ್ಟ ಕಣ್ಣುಗಳ ಮುಚ್ಚದೆ ಓದಿ ಅಲ್ಲಲ್ಲಿ ಹುಡುಕಿ ತಡಕಿ ಭಯಬಿದ್ದ ಮನಸ್ಸುಗಳನ್ನು ಪತ್ರದಲ್ಲಿ ಬಚ್ಚಿಟ್ಟಿರುವೆ……..! ಪ್ರೀತಿಯ ಗೆಳೆಯರೇ…… ನಿಮಗೊಂದು ಗುಟ್ಟು ಹೇಳಬೇಕೆಂದಿರುವೆ ಬಾರದ ದಿನಗಳಲ್ಲಿ ಕಳೆದ ಕಂಬನಿಯ ಕನಸುಗಳು ಚಿರತೆ ನಡಿಗೆ ಕದ್ದ ಪೂರ್ವಜರ ಉಸಿರು ಒಲವಿನ ಬಗೆಬಗೆಯ ಗುಟ್ಟನ್ನು ಬೆಂಕಿಯ ಹೃದಯದಲ್ಲಿ ಹೊರಬಂದ ತಣ್ಣನೆಯ ನಾಲಿಗೆಯ ಗುಟ್ಟೊಂದು ಹೇಳುವೆ…….! ಪ್ರೀತಿಯ ಗೆಳೆಯರೇ…… ನಿಮಗೊಂದು ಕವಿತೆ ಕೇಳಿಸಬೇಕೆಂದಿರುವೆ ಇರುಳ ಕತ್ತಲೆಯಲ್ಲಿ ಖಾಲಿಯಾದ ಕನಸುಗಳನ್ನು ಬಯಲುಗಳಲ್ಲಿ ಒಂಟಿಯಾದ ಜೀವಿಗಳ ಒಲವನ್ನು ಕಾಡು ಕಡಲ ಮಡಿಲಲ್ಲಿ ಜಂಡು ಜನಗಳ ಅಸಾಯಕ ತೋಳುಗಳ; ಶಬ್ದಶ್ಮಶಾನದಾಚೆ ಇರುವ ಕಡಲಾಳದ ಕವಿತೆಯೊಂದು ಕೇಳಿಸುವೆ………! ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಅನ್ವೇಷಾ  ರಶ್ಮಿ ಕಬ್ಬಗಾರ ಅನ್ವೇಷಾ    ೧ ಮತ್ತೆ ಹೊಸದಾಗಿ ನಿನ್ನ ಪ್ರೀತಿಸ ಬೇಕೆಂದಿದ್ದೇನೆ ನೀ ನನ್ನ ಮಹತ್ವಾಕಾಂಕ್ಷೆಯೋ ಹಳೇ ಪ್ರೇಮಿಯೋ ಪತ್ತೆ ಮಾಡಬೇಕಿದೆ      ೨         ಇಲ್ಲ ಮತ್ತೆ ಮತ್ತೆ ನಿನ್ನ ಕಾಯಿಸುವ ಇರಾದೆಯಿಲ್ಲ ಸೀದ ಇಳಿದು ಮನವೊಲಿದಲ್ಲಿ ಮಳೆ ಕರೆದು ಮೊಳೆವೆ ೩ ರಾಗ ರಂಜನೆ ಧ್ಯಾನ ಸಾಧನೆಗೆಲ್ಲ ವ್ಯವಧಾನವಿಲ್ಲೀಗ ಇದು ಕವಿ ಹುಟ್ಟುವ ಪದ ಪಾದ ನಾಭಿಯೊಳ್ ಮುಟ್ಟುವ ಖುಷಿ ಋಷಿ ಮೊಟ್ಟೆಯೊಡೆದುಟ್ಟುವ ಮುಂಜಾವು ಮತ್ತೀಗ  ಗಾಳಿಗೆ ಬೆಂಕಿ ಎದುರಾದಂತೆ ಎದು ರಾಗಬೇಕಿದೆ ನಾವು . *****

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ರೇಮಾಸಂ ಡಾ.ರೇಣುಕಾತಾಯಿ.ಎಂ.ಸಂತಬಾ ಸುಳ್ಳು ಶಬ್ದಗಳ ಪೋಣಿಸಿ ಸರಮಾಲೆ ಹಾಕದಿರು ಗೆಳೆಯ/ ಪೊಳ್ಳು ಮಾತಿನಲಿ ಸಿಲುಕಿಸಿ ಬಲೆಯ ಬೀಸದಿರು ಗೆಳೆಯ// ಚಂದಿರ ನಕ್ಕಾನು ನಕ್ಷತ್ರಗಳನು ಪಿಡಿದು ಮುಡಿಸುವ ಪರಿಗೆ/ ವಾಸ್ತವಕ್ಕೆ ಮರಳು ಹಗಲುಗನಸು ಕಾಣದಿರು ಗೆಳೆಯ// ಎದೆಯ ಹೊಲದಲಿ ಪ್ರೀತಿ ಬಿತ್ತಲು ಬೇಕೆನು ಕಾಣಿಕೆ/ ಧನವೇ ಮನವನು ಗೆಲ್ಲುವದೆಂದು ತಿಳಿಯದಿರು ಗೆಳೆಯ// ವಾಸ್ತವಿಕತೆ ಕನ್ನಡಿಯನು ಗಮನಿಸಿ ನೋಡಲಾರೆಯೇನು/ ಪ್ರೇಮದಲಿ ಮಿಂದ ಕಣ್ಣ ದೃಷ್ಟಿ ಬದಲಿಸಿದಿರು ಗೆಳೆಯ// ಉಷೆಯಿಂದ ನಿಶೆಯವರೆಗೆ ನಿನ್ನ ನೆನೆಯುವಳು ನೆನಪಿಲ್ಲವೇ/ ಪರರ ನಶೆಯಲಿ ರೇಮಾಸಂನು ಮರೆಯದಿರು ಗೆಳೆಯ// *****************************

ಕಾವ್ಯಯಾನ Read Post »

ಕಾವ್ಯಯಾನ

ಶಿಶುಗೀತೆ

ಕಾಡಿನಿಂದ ನಾಡ ಪ್ರವಾಸ. ಸುಜಾತಾ ಗುಪ್ತ ಜಿಂಕೆ ಮರಿ ಜಿಂಕೆ ಮರಿ ನೀ ನನ್ನ ಮುದ್ದು ಮರಿ ನಾಡಿಗೋಗೋಣ ಬರ್ತೀಯಾ ನಾವ್ ನಾಡಿಗೋಗೋಣ ಬರ್ತೀಯಾ ಆನೆ ಮರಿ ಆನೆ ಮರಿ ನೀ ನಾಡಿಗೇಕ್ ಹೋಗ್ತೀಯ ನಾಡಿಗೋಗಿ ಏನ್ಮಾಡೋದು ನಾವ್ ಏನ್ಮಾಡೋದು.. ಶಸ್ತ್ರಧಾರಿಯಾಗಿ ಬರಲು ಮನುಜನಂದು ಹೆದರಿ ಬೆದರಿ ಪೊದೆಗಳಲ್ಲಿ ಅಡಗಿದೆವು ಸ್ವಚ್ಛಂದದೆ ಇಂದು ನಾಡು ಸುತ್ತೋಣ ನಾವ್ ನಾಡು ಸುತ್ತೋಣ.. ನಾ ಬರಲ್ಲಪ್ಪ, ಅಮ್ಮ ಕಳಿಸಲ್ಲ ಬಾಣಧಾರಿ ಬೇಟೆಗಾರ ಇಹನಲ್ಲಿ ನಂಗ್ ಭಯ ನಾ ಬರಲ್ಲ ನಾಡಿಗೆ ನಾನೆಂದೂ ಬರಲ್ಲ.. ಹೆದರಿ ಬೇಡ ಜಿಂಕೆ ಮರಿ ಕರೋನ ರಕ್ಕಸಕೆದರಿ ಮನುಜ ಮನೆಯ ಬಂಧಿ ಆಗಿಹ ಬೇಡ ನಿಂಗೆ ಭಯ ನಾಡ ಸುತ್ತಿ ಅಂದ ಚಂದ ನೋಡುವ.. ಬೇಗ ರೆಡಿಯಾಗು ಜಿಂಕೆ ಮರಿ ಮೊಬೈಲು, ಕ್ಯಾಮೆರಾ ಹಿಡಿದು ಹೊರಡುವ ಸ್ವಾರ್ಥಿ ಮನುಜರ ಭಾವಚಿತ್ರ ತೆಗೆದು ನಕ್ಕು ನಲಿಯುವ.. ಮತ್ತೆ ಮತ್ತೆ ಬಾರದಿಂತ ಒಂದು ಸುದಿನ ಭಯವ ಮರೆತು ನೀ ಬರಲು ನಾಡ ಸುತ್ತಿ ಬರುವ ನಾವ್ ಧೀಮಂತರೆನಿಸೋಣ ನಾವ್.. ಜಿರಾಫೆ,ಒಂಟೆ ,ಮೊಲ ಬಂದರು ಕುಟುಂಬದೊಂದಿಗೆ ಪ್ರವಾಸಕೆಂದು ನಾಡಿಗೆ, ಊರು ಖಾಲಿ, ನಾಡು ಖಾಲಿಯೆಂದು ರಸ್ತೆ ಸುತ್ತಿ, ಗೃಹ ಖೈದಿಗಳ ನೋಡಿ ಕಿಲಕಿಲನೆ ನಗಲೆಂದು ಬಂದರು.. *********

ಶಿಶುಗೀತೆ Read Post »

ಕಾವ್ಯಯಾನ

ಕಾವ್ಯಯಾನ

ಚರಿತ್ರೆ ಚಿರನಿದ್ರೆ ದೇವು ಮಾಕೊಂಡ ಜಗದ ಬಲೆ ಬಲೆಯೊಳಗಿನ ಮುಸುಕು ಸಿಕ್ಕಿಸಿಕೊಂಡ ಬದುಕ ಕೊಂಡಿ ಕಳಚಲು ಯತ್ನಿಸುವ ವೈರಾಗಿ ರಾತ್ರಿ ಹೆದರುತ್ತದೆ ಹೊರಬರಲು ಹಗಲ ಬಯಲು ನರ್ತನಕ್ಕೆ ಅನುಗಮನ ನಿಗಮನದರಿವು ಏಕಮುಖಗೊಂಡಿದೆ ಗೊಂದಲ ಜಗದಿ ದಿನ ದಿನ ನಂಬಿಕೆಗಳೆ ಬೋಣಿಗೆ ಮಾಡುವಾಗ ಬೋದಿಗೆ ಶಾಸನ ಮೌನ ಮಾತಾಗಿದೆ ಮಹಾಸತಿ ಕಲ್ಲುಗಳು ಮನಸು ತೇವ ಮಾಡಿ ನಕ್ಕು ಮತ್ತೆ ಮತ್ತೆ ಶರಣಾಗುತ್ತಿವೆ ಅಂಧಗೋಪುರಕ್ಕೆದರಿ ನೀರವರಾತ್ರಿ ದಮನಿತ ದೀಪಗಳುರಿಸುವಾಗ ವಿಲೋಮಗಾಳಿ ಜನಜನಿತ ಅವಮಾನಿತ ! ತನ್ನೊಳಗಿನ ತನ್ನದರಿವು ಹುಡುಕುವ ಆಗುಂತಕನೊಬ್ಬ ನಿನ್ನೆ ಸತ್ತ ಹೆಣದ ಮುಂದೆ ನಿಂತ ಬೈರಾಗಿ ಕಣ್ಣೀರು ಹಾಕಲು ಹೇಸುತ್ತಿದ್ದ ನಾಳೆಯ ನಗಾರಿಗಳ ದನಿ ನಂಬಿ ಜಡಜಗದ ಬಲೆಗೆ ಬಿದ್ದ ಜೀನಗಂಬ ಮೂಕಗೊಂಡಿದೆ ಕಾವ್ಯಶಾಸನ ಲ್ಯಾವಿಕಟ್ಟಿ ಕೆರೆ ಕಟ್ಟಿಸಿ ಬಾವಿ ತೋಡಿಸಿ ಹಂಸರೆಕ್ಕೆ ಮುರಿದು ಒಳಗೆ ಒಗೆದು ಮೇಲೊಂದು ಶಾಸನ ಕೆತ್ತಿ ಫಲಕವಿಟ್ಟು ಅಕ್ಷರಗಳು ನೇತಾಡುತ್ತಿವೆ ತೇವಗೋಡೆಯಲಿ ‘ಸತ್ಯಂ ಶಿವಂ ಸುಂದರಂ’ ‘ಅಹಿಂಸಾ ಪರಮೋ ಧರ್ಮಂ’ ಶಾಂತಿ ಅಗೋಚರ ಚರಿತ್ರೆ ಚಿರನಿದ್ರೆ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಆಗಬಹುದು. ಎಂ.ಆರ್.ಅನಸೂಯ ಆಗಬಹುದು ಧುಮ್ಮಿಕ್ಕುವ ಕಣ್ಣೀರು ಕೇವಲ ಕಣ್ಣಂಚಿನ ಕಂಬನಿ ಮಲಗಬಹುದು ಕೆರಳಿ ನಿಲ್ಲುವ ದ್ವೇಷ ಮೊಂಡಾದ ಮಚ್ಚಾಗಿ ಮರಗಟ್ಟಬಹುದು ಬೆಂಕಿಯುಗುಳುವ ಕೋಪವೂ ಕೊರೆವ ಹಿಮಗಡ್ಡೆಯಾಗಿ ಇಳಿಯಬಹುದು ಉಕ್ಕಿ ಹರಿವ ಉನ್ಮಾದವೂ ನೆರೆಯಿಳಿದ ನದಿಯಾಗಿ ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಎ ಎಸ್ ಮಕಾನದಾರ. ಗಲ್ ಗಲ್ ಗಜ್ಜೆಯ ನಾದ ಹೊಮ್ಮಿಸುತ ಮನದ ಅಂಗಳದಲಿ ಒಮ್ಮೆ ಓಡಾಡಿ ಬಿಡು ಕತ್ತಲು ತುಂಬಿದ ಮನೆಯ ಮೂಲೆ ಮೂಲೆಯಲೂ ನಗುವ ತೂರಾಡಿ ಬಿಡು ಸೂರ್ಯ ಚಂದ್ರ ನಕ್ಷತ್ರಗಳ ಬೆಳಕೇಕೆ ನಿನ್ನ ಕಣ್ಣ ಬೆಳದಿಂಗಳು ಸಾಕು ಬೆಳಕ ಹಬ್ಬಕೆ ಬಾಗಿಲು ಕಿಟಕಿಗಳಾಚೆ ಇರಲಿ ಆ ಮುಗಿಲ ತಾರೆಯರು ಬಾಚಿಕೊಳ್ಳುತ್ತೇನೆ ಒಲವನ್ನೊಮ್ಮೆ ತೂರಾಡಿ ಬಿಡು ಬಾಳನಂದನಕ್ಕಿಗ ಚೈತ್ರ ಬಂದಾಗಿದೆ ಹಸಿರು ಬಳ್ಳಿಯ ತುಂಬ ಆಸೆಗಳ ಒಸಗೆ ಮೊಗ್ಗು ಹೂವಾಗಿ ಅರಳಿ ನಲಿಯುವ ಕಾಲ ತೋಳ ತೆಕ್ಕೆಯಲಿ ಒಲಾಡಿ ಬಿಡು ಹೃದಯ ಸಿಂಹಾಸನದಲಿ ನೀನೇ ಮಹಾರಾಣಿ ಯಾವ ದಾಳಿಗೂ ನಾನು ಹೆದರಲಾರೆನು ಎದೆ ಹಿಗ್ಗಿ ಹಾಡುವ ಹಾಡು ಕಿವಿಗೊಟ್ಟು ಕೇಳುತ್ತಾ ಪ್ರೀತಿಯ ಮತ್ತಲಿ ತೇಲಾಡಿ ಬಿಡು ಕನವರಿಕೆಯ ಕದ ತೆರೆದು ಕರಿ ನೆರಳ ಪರದೆ ಸರಿಸಿ ನೋಡು ಜಗವನೊಮ್ಮೆ ಎಷ್ಟು ಸುಂದರ ನೀ ಹೆಜ್ಜೆ ಇಟ್ಟಲ್ಲೆಲ್ಲಾ ಹೊನ್ನ ಸಾಲಿನ ಬೆಳೆಯು ಮಕಾನ ಎದೆ ಹೊಲದ ತುಂಬ ನಲಿದಾಡಿ ಬಿಡು ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬಚ್ಚಿಟ್ಟ ನೆನಪುಗಳು ವೀಣಾ ರಮೇಶ್ ನೀ ಬರುವೆಯೆಂದು ಕಾಯುತ್ತಿದ್ದೆ……. ಒಡಲಸೆರಗಲಿ ಅದುಮಿಟ್ಟ ಬಯಕೆಗಳು ತಬ್ಬಲಿಯಾದ ನಿನ್ನ ಕನಸುಗಳ ಜೊತೆ ನನ್ನ ಕನಸುಗಳು ಕಾಡುವುದು ಬಸಿರಾಗದ ಆಸೆಯ ಕುಡಿಗಳು, ,ಹಸಿಯಾಗಿ, ಹುಲ್ಲುಜಾಡಿನಲಿ ಕಳೆಗೂಡಾದ ಬದುಕು ಹೊಸಕಿ.. ನೀ ಬರುವೆಯೆಂದು ಕಾಯುತ್ತಿದ್ದೆ …… ಹಾಕಿದ ಏಳು ಹೆಜ್ಜೆಗಳು ಬಿಸಿಯ ಕೆಂಡದ ಮೇಲಿನ ಅವಳ ತಪ್ಪಿನ ನಡೆಗಳು ಹೊಸಿಲ ಮೇಲೆ ಜಾಡಿಸಿ ಒದ್ದ ಸೇರಿನ ಜೊತೆ ಕನಸುಗಳ ಒದ್ದೋಡಿಸಿದೆ ಸರಕಾಗಿದೆ ನಿನ್ನ ಮೌಲ್ಯಗಳು, ಬಿಕರಿಯಾಗುತ್ತಿದೆ ಕನಸುಗಳು,…. ಬೆತ್ತ ಲಾಗಬೇಡ ಬತ್ತಿದ ಕನಸುಗಳಿಗೆ, ಮನಸು ಹರಿದ ಪುಟಗಳ ಮತ್ತೆ ಸೇರಿಸಿ ಸಂಬಂಧಗಳ ದಾರದಿಂದ ಬಿಗಿದು,ನಿನ್ನ ಕನಸುಗಳ ಬಸಿರಿಗೆ ಮೆಲುವಂಗಿ ಹೊದಿಸು ,ನೀ ಕಟ್ಟುವ ಕನಸಿಗೆ ಪ್ರೀತಿಯ ದೇಣಿಗೆ ನಾ ನೀಡುವೆ, ಮಾತು ಮೌನದಲ್ಲೆ ಅಡಗಿಸಿ ಪದಗಳು ಸ್ಪರ್ಶ ವಿಲ್ಲದೆ ಎದೆಯಲಿ ಬಚ್ಚಿಟ್ಟು ನೆನಪುಗಳು ನೀ ಇಲ್ಲದೆ ಒದ್ದಾಡಿವೆ….. ಅಲ್ಲೊಂದು ಇಲ್ಲೊಂದು ಕರಗಿಬಿದ್ದ ನೀರಹನಿಯೊಂದು ಚಿಗುರೊಡೆದ ಹಸಿರೊಂದು ಬಸಿರಾಗುವ ಕನಸಿಗೆ, ನೀಳಗೆನ್ನೆಯ ಮೇಲೆ ತುಸು ಹರಿದು ಎದೆಯ ತಂಪಾಗಿಸಿದ ಕಣ್ಣೀರ ಹನಿ ತಂದು, ಹೊಸ ಮನ್ವಂತರದ ಪರ್ವದಲ್ಲೊಂದು ಬದಲಾಯಿಸಿದ ಬದುಕಿನ ಗತಿ ಹಚ್ಚಿದ ಕನಸಿನ ಹಣತೆಗೆ ಬಾಳ ಸಮತೆಯಲಿ ಉರಿವ ದೀಪವಾಗಿ, ನಿನ್ನೊಡಲ ಕಾಂತಿಗೆ ಬೆಳಕಾಗುವೆ ನಾ ಕಾಯುತ್ತಿರುವೆ. ನೀ …ಬಂದೆ ಬರುವೆಯೆಂದು….. ********

ಕಾವ್ಯಯಾನ Read Post »

You cannot copy content of this page

Scroll to Top