ಕಾವ್ಯಯಾನ
ಬಾಬಾರವರ ನೆನಪಲ್ಲಿ ಹೆಚ್ ರಾಠೋಡ ಬಾಬಾ ನಿನ್ನ ನೆರಳಿನಲ್ಲಿಭರತಖಂಡ ನಡೆದಿದೆ ಶ್ರೇಷ್ಠ ಭಾರತದೇಶ ಎಂಬ ಹೆಗ್ಗಳಿಕೆಯು ಪಡೆದಿದೆ ಭರತ ಭೂಮಿ ನಿತ್ಯ ನಿನ್ನ ನೆನೆದು ಹೆಜ್ಜೆ ಇಡುತ್ತಿದೆ ಪ್ರತಿ ಹೆಜ್ಜೆ ಹೆಜ್ಜೆಯಲ್ಲೂ ಧನ್ಯ ಸಾರ್ಥಕತೆ ಮೆರೆದಿದೆ ನೀನುಹಾಕಿಕೊಟ್ಟ ದಾರಿಯಲ್ಲೇ ಇಂದು ದೇಶ ಸಾಗಿದೆ ನಿನ್ನ ಜ್ಞಾನ ಪಾಂಡಿತ್ಯಕ್ಕೆ ವಿಶ್ವವೇ ತಲೆದೂಗಿದೆ ಸಮಾನತೆಯ ಭಾವದಲ್ಲಿ ಸಂವಿಧಾನ ರಚಿಸಿದೆ ಶ್ರೇಷ್ಠ ಸಂವಿಧಾನ ರಚಿಸಿದ ಶಿಲ್ಪಿ ಎಂದೆನಿಸಿದೆ ಭಾರತೀಯರ ಎದೆಯಲ್ಲಿ ನಿನ್ನ ಪ್ರತಿಮೆ ನಿಂತಿದೆ ಅಂಬೇಡ್ಕರ್ ಎಂಬ ನಾಮ ಅಜರಾಮರವಾಗಿದೆ ಭೀಮನೆಂಬ ನಾಮ ಸ್ಮರಣೆ ನಾಲಿಗೆಯಲಿನಲಿತಿದೆ ದೀನ ದಲಿತರುಳವಿಗಾಗಿ ಕಾನೂನು ರೂಪ ನೀಡಿದೆ ಹಲವು ದೇಶ-ಕೋಶ ಓದಿ ಜ್ಞಾನ ಕಣಜ ಎನಿಸಿದೆ ಲೆಕ್ಕವಿಲ್ಲದಷ್ಟು ಪದವಿ ಪುರಸ್ಕಾರ ಗಳಿಸಿದೆ ತೋರು ಬೆರಳು ತೋರಿ ಪ್ರತಿಮೆ ಕೈ ಎತ್ತಿ ನಿಂತಿದೆ ತಮ್ಮ ಪಡೆದ ಭರತಮಾತೆ ವಿಶ್ವಮಾತೆಯ ಎನಿಸಿದೆ ಪುಟಕ್ಕಿಟ್ಟ ಬಂಗಾರವಾಗಿ ಭಾರತ ರತ್ನ ಎನಿಸಿದೆ ಸದಾ ಜೈ ಭೀಮ ಎಂಬ ಘೋಷವಾಕ್ಯ ಮೊಳಗಿದೆ ********








