ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಅವರು ಒಪ್ಪುವುದಿಲ್ಲ. ! ವಿಜಯಶ್ರೀ ಹಾಲಾಡಿ ಕಾಫಿಯಲ್ಲಿ ಕಹಿ ಇರಬೇಕುಬದುಕಿನ ಹಾಗೆ ಮುತ್ತುಗದ ಹೂ ರಸಕುಡಿವ ಮಳೆಹಕ್ಕಿರೆಕ್ಕೆ ಸುಟ್ಟುಕೊಳ್ಳುತ್ತದೆ ಬೂದಿಯಾದ ದಿನಗಳಆಲಾಪಿಸುವ ಇರುಳಹಕ್ಕಿನಿರಾಳ ಕಂಡುಕೊಳ್ಳುತ್ತದೆ ದಟ್ಟ ನೋವು ಒಸರುವಅಂಟಿನ ಮರ ಯಾರಸಾಂತ್ವನಕ್ಕೂ ಕಾಯುವುದಿಲ್ಲ ಬೋರಲು ಬಿದ್ದ ಆಕಾಶಬುವಿಯ ಕಣ್ಣೀರಿಗೇನೂಕರಗಿದ್ದು ಕಂಡಿಲ್ಲ ನದಿಯಲ್ಲಿ ತೇಲಿಬಂದಹಸಿಮರ -ನಾಗರಿಕತೆಯಹೆಣವೆಂದು ಅವರು ಒಪ್ಪುವುದಿಲ್ಲ.  *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸೂತಕ ಶಾಂತಾ ಜೆ ಅಳದಂಗಡಿ ಹುಚ್ಚು ತುರಗ ಈ ಮನ ದಿಕ್ಕೆಟ್ಟು ಓಡುತಿದೆ ಕಾಣಲು ಹೂ ಬನ ಪ್ರೀತಿ ಎಂದರೆ ನೀರ್ಗುಳ್ಳೆ ಒಲವ ನುಡಿಯಲಿರುವುದೆಲ್ಲ ಸುಳ್ಳೆ ಹೂವ ಮಧುವ ಹೀರುವ ವರೆಗು ಮೋಹದ ಮಾತುಗಳ ಬೆರಗು ದಾಹ ತೀರಿದಮೇಲೆ ನದಿಯ ಹಂಗಿಲ್ಲ ವಶವಾದನಂತರ ಅವಳು ನಲ್ಲೆಯಲ್ಲ ಪ್ರೇಮ ಸಾಯುತ್ತೆ ನರಳಿ ನರಳಿ ಬಾರದೆಂದಿಗೂ ಅದು ಮರಳಿ ಮರುದಿನವೂ ರವಿ ಉದಯಿಸುತ್ತಾನೆ ಹೊಂಗಿರಣಗಳ ಭುವಿಗೆಲ್ಲ ಚೆಲ್ಲುತ್ತಾನೆ ಸತ್ತಪ್ರೀತಿಯ ಸೂತಕ ಆನಂದಿಸಲಾಗದು ಸುಂದರ ಬೆಳಕ ಮೈ ಮರೆತರೆ ಒಂದು ಕ್ಷಣ ಬದುಕಾದೀತು ಜೀವಂತ ಹೆಣ *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನೀನೀಗ ಇದ್ದಿದ್ದರೆ ಚೈತ್ರಾ ಶಿವಯೋಗಿಮಠ “ನೀನೀಗ ಇದ್ದಿದ್ದರೆ” ಆ ಕಲ್ಪನೆಯೇ ಚಂದ ಬಹುಶಃ ಹೋಗುತ್ತಿದ್ದೆವು ಗಿರಿ-ಕಣಿವೆಗಳ ಮೇಲೆ ಹತ್ತಿಳಿಯಲು!, ಹೂವಿಂದ ಹೂವಿಗೆ ಹಾರುವ ಬಣ್ಣದ ಚಿಟ್ಟೆಗಳ ಹಿಡಿಯಲು, ಓಡುವ ನದಿಯ ಬೆನ್ನುಹತ್ತಲು, ಹಿಮ ಪರ್ವತಗಳ ಮೇಲೇರಿ ಹಿಮದ ಬೊಂಬೆಯ ಮಾಡಿ ನಲಿಯಲು.. ನೀನೀಗ ಇದ್ದಿದ್ದರೆ ಬಹುಶಃ ನನ್ನೆಲ್ಲ ಕ್ಷಣಗಳು ಅಪ್ಪನೆಂಬ ಮಂತ್ರ ಪಠಣವೇ! ಹೊಸ ಪುಸ್ತಕಗಳೋದುವ ನನ್ನ ನೆಚ್ಚಿನ ಸಹಪಾಠಿಯಾಗುತ್ತಿದ್ದೆ ಬಂದ ಹೊಸ ಸಿನಿಮಾಗಳ ನನ್ನ ಖಾಸಗಿ ವಿಮರ್ಶಕನಾಗುತ್ತಿದ್ದೆ! ಎಲ್ಲ ಪ್ರಚಲಿತ ವಿಷಯಗಳ ಮೆಚ್ಚಿನ ವಿಶ್ಲೇಷಕನಾಗುತ್ತಿದ್ದೆ! ನೀನೀಗ ಇದ್ದಿದ್ದರೆ ಬಹುಶಃ ಪ್ರತಿ ಸಂದೇಹಗಳಿಗೂ ನನ್ನ ನಡೆದಾಡುವ ಶಬ್ದಕೋಶ, ನುಡಿ ಕೋಶ, ಜ್ಞಾನ ಭಂಡಾರವೇ, ಗೂಗಲ್ ಗಿಂತ ಆಪ್ತ ಶೋಧಕ ನೀನೇ ಆಗಿರುತ್ತಿದ್ದೆ ಅಪ್ಪ! ನೀನೀಗ ಇದ್ದಿದ್ದರೆ ಬಹುಶಃ ನನ್ನ ಮಗುವಿಗೆ ಅತ್ಯುತ್ತಮ ಸ್ನೇಹಿತನಾಗಿರುತ್ತಿದ್ದೆ ಅದರೆಲ್ಲ ಆಟಪಾಠಗಳ ಅಚ್ಚುಮೆಚ್ಚಿನ ಸಹವರ್ತಿ ನೀನೇ ಆಗಿರುತ್ತಿದ್ದಿ ಅಪ್ಪ! ಅಮ್ಮನ ಪ್ರೀತಿಯ ಲಾಲನೆಯೊಂದಿಗೆ ನಿನ್ನ ವಾತ್ಸಲ್ಯದ ಪಾಲನೆ! ನೀನೀಗ ಇದ್ದಿದ್ದರೆ “ನೀನೀಗ ಇದ್ದಿದ್ದರೆ” ಎಂದು ಹೇಳುವ ಪ್ರಮೇಯವೇ ಇರುತ್ತಿರಲಿಲ್ಲ ಅಪ್ಪ!! ***********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಕ್ಕಳಪದ್ಯ ಅಪ್ಪನೇ ಪ್ರೀತಿ ನಾಗರೇಖಾ ಗಾಂವಕರ ಅಪ್ಪನದೇಕೆ ಕಂಚಿನಕಂಠ ನಿನ್ನಂತಿಲ್ಲಲ್ಲಾ ಕಣ್ಣುಗಳಂತೂ ಕೆಂಡದ ಉಂಡೆ ನೋಡಲು ಆಗೊಲ್ಲ ಅಮ್ಮ ಪುಕ್ಕಲು ನಾನಲ್ಲ. ಆದರೂಅಮ್ಮ ಅಪ್ಪನೇ ಪ್ರೀತಿ ಎದೆಯೊಳಗೊಂದು ಮೀಟುವ ತಂತಿ ಕಾರಣ ಹೇಳಮ್ಮ ಕೈಗಳ ಹಿಡಿದು ವಠಾರ ನಡೆದು ನಡೆಯಲು ಕಲಿಸಿದನು ದಾರಿಯ ಮಧ್ಯೆ ಸಿಕ್ಕವರಲ್ಲಿ’ ಮಗಳೆಂದು ಹೊಗಳಿದನು ಬೈಕಲಿ ಕೂರಿಸಿ, ಮರಗಿಡ ತೋರಿಸಿ, ಮನವನು ತಣಿಸುವನು ಅಪ್ಪನು ನಿನಗಿಂತ ಪ್ರಿಯನವನು. ಆಗೀಗೊಮ್ಮೆ ಉಪ್ಪಿನಮೂಟೆ ಮಾಡುತ ಮುದ್ದಿಸುವ ಮರುಕ್ಷಣ ನನ್ನ ಹಠವನು ಕಂಡು ಕೋಲನು ತೋರಿಸುವ ಅಮ್ಮಾ, ಕೋಲನು ತೋರಿಸುವ ಆದರೂ ಅಮ್ಮ ಅಪ್ಪನೇ ಪ್ರೀತಿ ಅಂಗಡಿಯೊಳಗಣ ಜೀಲೇಬಿ ರೀತಿ ಸಿಹಿಸಿಹಿ ಮನದವನು ಸೊಗಸಿನ ಮೊಗದವನು ಕೇಳೆ ಅಮ್ಮ, ಮುದ್ದಿನ ಅಮ್ಮ ಅಪ್ಪನ ಕೂಡ ನೀನಿರಬೇಕು ನಿಮ್ಮಿಬ್ಬರ ನಡುವೆ ನಾನೀರಬೇಕು ನಿನ್ನ ದಮ್ಮಯ್ಯ. ನನ್ನ ಮುದ್ದು ಅಮ್ಮಯ್ಯ. ****************

ಕಾವ್ಯಯಾನ Read Post »

ಕಾವ್ಯಯಾನ

ಗಝಲ್

ಗಝಲ್ ಸ್ಮಿತಾ ರಾಘವೇಂದ್ರ ನಟನೆಯೋ ನಿಜವೋ ನಂಟನ್ನು ಹುಸಿಯಾಗಿಸಬೇಡ ಬಳ್ಳಿಯ ಬೇರು ಚಿವುಟಿ ಚಿಗುರೆಲೆ ಹುಡುಕಬೇಡ ತುಪ್ಪದಂಥ ಒಲವಲ್ಲಿ ಉಪ್ಪು ಬೆರೆಸುವುದು ಸುಲಭ ಒಪ್ಪು ತಪ್ಪುಗಳ ಬರಿದೆ ಕೆದಕೆದಕಿ ಕೆಡಿಸಬೇಡ ಹೊಟ್ಟೆಯೊಳಗಿನ ಕಿಚ್ಚು ಉರಿದು ಸುಟ್ಟಿದೆ ಸೆರಗನ್ನು ಸಿಹಿ ಕೊಡುವ ನೆಪದಿ ಸವಿಯ ಸೂರೆ ಮಾಡಬೇಡ ಹಸಿರೆಲೆಯಾಗೇ ಬಹುದಿನ ಇರಲಾಗದು ನಿಜ ಹಣ್ಣಾಗುವ ಮೊದಲೇ ಹಿಸಿದು ಉದುರಿಸಬೇಡ ಹುತ್ತವ ಬಡಿಬಡಿದು ಹಾವು ಸಾಯಿಸುವ ಭ್ರಮೆಬೇಡ ಯಾವ ಹುತ್ತದಲಿ ಯಾವ ಹಾವೋ ಕೈಹಾಕಬೇಡ ಎಷ್ಟು ಅರಿತರೇನು ಸೋಗಿನ ಸ್ನೇಹಗಳ “ಸ್ಮಿತ”ವೇ ಪರಿವೆಯೇ ಇಲ್ಲದೇ ಕೈ ಕೊಡವಿ ನಡೆದಾಗ ಕೊರಗಬೇಡ *******************************************

ಗಝಲ್ Read Post »

ಕಾವ್ಯಯಾನ

ಕಾವ್ಯಯಾನ

ಮಣ್ಣಾಗುವ ಮುನ್ನ ಮರವಾಗುವೆ ಪ್ಯಾರಿಸುತ ನನ್ನೆಲ್ಲ ಪ್ರೀತಿ ಮಣ್ಣಾಗುವ ಮುನ್ನ ನೀ ಬಂದು ಬೀಜವ ನಡು ಇಂದಲ್ಲ, ನಾಳೆ ಎಂದಾದರೊಮ್ಮೆ ಮೊಳೆಕೆ ಬಿಡುವದು ನೋಡು ಹಸಿರಾಗಿ ಚಿಗುರಲಿ,ಮರವಾಗಿ ಬೆಳೆಯಲಿ ನಾ ಆರೈಕೆ ಮಾಡುವೆ ಬಿಡು ಹಿಂತಿರುಗಿ ನೋಡದೆ, ಮರು ಏನು ಹೇಳದೆ ಹೊಸದಾರಿ ಹಿಡಿದುಬಿಡು ಹೀಗೊಮ್ಮೆ ಬೈದುಬಿಡು, ನೆನಪಲ್ಲೆ ಕೊಂದುಬಿಡು ದೇಹಕ್ಕೆ ಉಸಿರೆ ಆಸರೆಯಂತೆ ಉಸಿರಂತೆ ಇದ್ದವಳು ನೀ ಹೋದ ಮೇಲೆ ಈ ದೇಹವೀಗ ಶವದಂತೆ ನೋಡು ನೀ ಬಂದು ಸುಟ್ಟರು ಇಲ್ಲವೇ, ಮಣ್ಣಲ್ಲಿ ಹೂತರು, ಅಲ್ಲಿ ಒಂದು ಬೀಜವ ನಡು ಮೊಳಕೆ ಬಿಡುವದು, ಮರವಾಗಿ ನಿಲ್ಲುವದು ನೋಡು…!! ತಾರೆಗಳೆಲ್ಲ ಮರುಗುವದು ನೋಡಲಾರೆ ಆಕಾಶ ಕೈಬೀಸಿ ಕರೆದರೂ ಹೋಗಲಾರೆ ಕಳೆಗುಂದ ಚಂದ್ರನ ಮುಖವನು ನೋಡಲಾರೆ ನೀ ನನ್ನ ಕ್ಷೇಮಿಸಿಬಿಡು, ಮರವಾಗಿ ಉಳಿಯಲು ಅವಕಾಶ ನೀಡಿಬಿಡು ನನ್ನ ಶವದ ಜೊತೆ ಬೀಜವ ಎಸಿದುಬಿಡು ಮರವಾಗಿ ನಿಲ್ಲುವದು ನೋಡು….!! ನೆರಳರಿಸಿ ಬರುವ , ಪ್ರೇಮಿಗಳಿಗೆ ತೊಟ್ಟಿಲು ಆಗುವೆ ಕಥೆಗಳನ್ನು ಕೇಳುವೆ ಹಾಡನ್ನು ಹೇಳುವೆ ಅವರಾದರು ಮನಬಿಚ್ಚಿ ಪ್ರೀತಿಸಲಿ, ಅಲ್ಲಿಯಾದರು ಪ್ರೀತಿಯು ಉಳಿಯಲಿ ನೀ ಬಂದು ಬೀಜವ ಎಸೆದು ಬಿಡು ಮರವಾಗಿಯೇ ಉಳಿಯುವೆ ನೋಡು….!! ****** ತಾರೆಗಳೆಲ್ಲ ಮರುಗುವದು ನೋಡಲಾರೆ ಆಕಾಶ ಕೈಬೀಸಿ ಕರೆದರೂ ಹೋಗಲಾರೆ ಕಳೆಗುಂದ ಚಂದ್ರನ ಮುಖವನು ನೋಡಲಾರೆ ನೀ ನನ್ನ ಕ್ಷೇಮಿಸಿಬಿಡು, ಮರವಾಗಿ ಉಳಿಯಲು ಅವಕಾಶ ನೀಡಿಬಿಡು ನನ್ನ ಶವದ ಜೊತೆ ಬೀಜವ ಎಸಿದುಬಿಡು ಮರವಾಗಿ ನಿಲ್ಲುವದು ನೋಡು….!! ನೆರಳರಿಸಿ ಬರುವ , ಪ್ರೇಮಿಗಳಿಗೆ ತೊಟ್ಟಿಲು ಆಗುವೆ ಕಥೆಗಳನ್ನು ಕೇಳುವೆ ಹಾಡನ್ನು ಹೇಳುವೆ ಅವರಾದರು ಮನಬಿಚ್ಚಿ ಪ್ರೀತಿಸಲಿ, ಅಲ್ಲಿಯಾದರು ಪ್ರೀತಿಯು ಉಳಿಯಲಿ ನೀ ಬಂದು ಬೀಜವ ಎಸೆದು ಬಿಡು ಮರವಾಗಿಯೇ ಉಳಿಯುವೆ ನೋಡು….!!

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹರೆಯದ ಹಬ್ಬ ಗೌರಿ.ಚಂದ್ರಕೇಸರಿ. ಹಣ್ಣೆಲೆಗಳೆಲ್ಲ ಉದುರಿ ಹೊಸತೊಂದು ಚಿಗುರಿಗೆ ಹಾದಿ ಮಾಡಿಕೊಟ್ಟಿವೆ ಎಳೆಯ ಹಸಿರ ಹೊದ್ದು ತೂಗಿ ತೊನೆದಾಡುವ ಪ್ರಕೃತಿಗೆ ಮತ್ತೊಂದು ಹುಟ್ಟಿನ ಸಡಗರ, ಸಂಭ್ರಮ. ದುಂಬಿ, ಚಿಟ್ಟೆಗಳ ಝೇಂಕಾರ ಬಾನಾಡಿಗಳ ಚಿಲಿಪಿಲಿ ವಾಲಗ ಸಮಷ್ಠಿಗೆಲ್ಲ ಬಿಡುವಿಲ್ಲದ ಕಾಯಕ ಮೊದಲ ಬಾರಿ ಅರಳಿ ನಿಂತ ಕುವರಿಯಂತೆ ವಧು ಧರಿಸಿದ ನಾಚಿಕೆಯಂತೆ ಇಳೆಗೆಲ್ಲ ಹರೆಯದ ಹಬ್ಬ. ಸಿಂಗಾರಗೊಂಡ ಪ್ರಕೃತಿಗೆ ಭುವಿಯೆಲ್ಲ ಹಸಿರ ತಳಿರ ತೋರಣ ಅರಳಿ ನಿಂತ ಸುಮಗಳ ಅಕ್ಷತೆ ರಂಗೇರಿದ ಕೆನ್ನೆ ತುಂಬ ಸರ‍್ಯನೆರಚಿದ ಚೈತ್ರದೋಕುಳಿ.

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಇಂತಿಷ್ಟೇ ಮನವಿ. ಮಧುಸೂದನ ಮದ್ದೂರು ಕನಸಲು ನೀ ಕಾಡುವೆ ಇಪ್ಪತ್ತು ವರುಷದ ಬಳಿಕ ಬಂದ ಓಲೆಯಂತೆ… ಓಲೆಯನ್ಬು ಬಿಚ್ಚಲು ಒಲೆಯಲ್ಲಿ ಕಾದು ಕಾದಬೆಚ್ಚಗಿನ ನೆನಪುಗಳು ನೆನಪುಗಳ ಬೆನ್ನಟ್ಟಲು ಮಾಯಜಿಂಕೆ ಬೆನ್ನಟ್ಟಿದಂತೆ.. ಬೆನ್ನಟ್ಟುತ್ತ ಬೆವರುತಾ ಬೇಸರಿಸಿ ಕೂರಲು ಸೋತನೆಂಬ ಅಪಮಾನದ ಕುದಿ… ಕುದಿ ಹೃದಯವಿದು ಕಾಯಿಸದೇ ಬಂದು ಬಿಡು ನನ್ನದೆಗೆ ನಿನ್ನುಡುಗ ಗಿಡುಗ ಇನ್ನೂ ಕಾಯಲಾರ… ಕಾದು ಸಂಭ್ರಮಿಸಲು ವಯಸ್ಸು ಮೀರಿದೆ ಬೆಳ್ಳಿಗೂದಲು ಇಣುಕಿವೆ.. ಇಣುಕಿದ ಬೆಳ್ಳಿಗೂದಲಿನಲ್ಲೂ ನಿನ್ನ ಬಂಗಾರದ ನೆನಪು ಒಸರಿವೆ.. ಬಂದು ಬಿಡು ಈ ಪ್ರೇಮ ಫಕೀರನ ಎದೆಯೊಮ್ಮೊಮ್ಮೆ ಹೊಕ್ಕಿಬಿಡು ಹಳೆಯ ನೆನಪುಗಳ ತೂರಿಬಿಡು.. ಇಂತಿಷ್ಟೆ ಮನವಿ….. ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಮಾಜ ಕೆ.ಸುಜಾತಾ ಗುಪ್ತ ಬಗ್ಗಿದವನ ಬೆನ್ನಿಗೊಂದು ಗುದ್ದು ಇರಲು ಹಾಗೆ ಮತ್ತೊಂದು ಗುದ್ದು ಇದಾಗಿದೆ ಪ್ರಸ್ತುತ ಸಮಾಜದ ನೀತಿ ಮೂರ್ಖತನದ ಪರಮಾವಧಿ ದಾಟಿರಲು ಶಾಂತಿಯ ತತ್ವವ- ಮಹತ್ವವ ಅರಿವ ಮನಗಳುಹೆಣಗಳಾಗಿವೆ. ಈಗೆಲ್ಲಿದೆ..ಶಾಂತಿ ಗೆ ತಾಣ!? ಎಲ್ಲಿದೆ ಶಾಂತಿಗೆ ಪ್ರಾಮುಖ್ಯತೆ.. ಬುದ್ಧನನ್ನು ನೆನೆಯೆ ಪೆದ್ದನೆನುವರು.. ‘ ಶಾಂತಿ ‘ ಅಸಹಾತೆಯಕತೆಯ ಚಿಹ್ನೆ ಎನುವರು.. ಕಲ್ಪನೆಯಲ್ಲಿ ‘ಶಾಂತಿ ಮಂತ್ರ’ ಚಂದವೋ ಚಂದ.. ವಾಸ್ತವದಲ್ಲಿ ಎಲ್ಲವೂ ಮಿಥ್ಯವೋ ಮಿಥ್ಯ… ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮೊಗ್ಗುಗಳು ತುಟಿ ಬಿಚ್ಚೆ ಕೆ.ಸುಜಾತ ಗುಪ್ತ ನಾ ಪ್ರಕೃತಿ ಪ್ರೇಮಿಯಾಗಿ ಸೂಕ್ಷ್ಮವಾಗಿ ಗಮನಿಸೆ ಪ್ರಕೃತಿಯ ಸೊಬಗು ನೂರ್ಮಡಿ ಹೆಚ್ಚಿತ್ತು… ಭಾವುಕತೆಯಲಿ ಪ್ರಕೃತಿಯ ಮಡಿಲಲ್ಲಿ ಕುಳಿತು ನನ್ನ ನಾ ಮರೆತು ಲಲ್ಲಗೆರೆಯಲು ಹರುಷದಿ ಸ್ಪಂದಿಸಿ ನಸು ನಕ್ಕಿತ್ತು ಪ್ರಕೃತಿ.. ಬಿರಿದು ಪರಿಮಳವ ಸೂಸಲು ರವಿ ಕಿರಣದ ಸ್ಪರ್ಶದ ನಿರೀಕ್ಷೆಯಲ್ಲಿರಲು ಮೊಗ್ಗುಗಳು, ಮಂಜಿನ ಮುಂಜಾನೆಯಲಿ ಭೂದರನ ಮರೆಯಲಿ ರಾಜೀವ ಸಖ ಇಣುಕೆ, ಸಜ್ಜಾಗಿ ನಿಂತು ವಯ್ಯಾರದೆ ಅವನೆಡೆಗೆ ಓರೆನೋಟ ಬೀರಿದ ಮೊಗ್ಗುಗಳು ನಸು ನಾಚಿ ತುಟಿ ಬಿಚ್ಚಿ ಲಯಬದ್ದವಾಗಿ …ಹಾಯ್ …ಎಂದಾಗ, ಹರುಷದೆ ರವಿ ಅಪ್ಪಿ ಮುತ್ತಿಡಲು ರವಿ ಕರಗಳ ಆಲಿಂಗನದಿ ಬಿರಿಯುತ್ತಿದ್ದ ಮೊಗ್ಗುಗಳು ಪ್ರೇಮ ಕಾವ್ಯಕೆ ಮುನ್ನುಡಿಯ ಬರೆಯುವಂತೆ ಭಾಸವಾಯ್ತು.

ಕಾವ್ಯಯಾನ Read Post »

You cannot copy content of this page

Scroll to Top