ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಗಝಲ್ ಶಶಿಕಾಂತೆ ನೀನು ಮುಗ್ದೆ,ಅಮಾಯಕಿ,ಮೋಸ ಮಾಡಲಾರೆ ನಿನಗೆ ಎಂದನವಳಿಗವನು ಸಾಕಿ.. ಮೋಸ ಮಾಡಿದರೆ ದೇವರೊಳಿತು ಮಾಡೋಲ್ಲ ಎಂದು ನಂಬಿಸಿದನು ಸಾಕಿ.. ನನ್ನ ಸ್ವಂತ ನೀನು,ನಿನ್ನ ಸ್ವಂತ ನಾನು ಎಂದು ಪ್ರೀತಿಮಳೆಗರೆದಾಗ ಸೋತಳು. ಪ್ರೀತಿಯನ್ನೇ ಕಾಣದ ಹೆಣ್ಣೊಂದು ನಂಬದಿರಲು ಸಾಧ್ಯವೇ ಅಂತಹವನನು ಸಾಕಿ.. ದೇವತೆ ಅವಳು ಕೇಳಿದ ವರ ಕೊಡುವಳು ತನ್ನನ್ನು ಪ್ರೀತಿಸುವವರಿಗೆ. ಉಪಯೋಗ ಪಡೆದು ಮರೆಯಾದ ಕಣ್ಣಿಂದ ಬಹಳದೂರ ಮನೆಹಾಳನವನು ಸಾಕಿ. ಫಕೀರ,ಸಂತನೆಂದರೆ ತಾನೇ ಎಂಬ ಮಾತಿಗೆ ಜನ ಮರುಳಾದರು ತಿಳುವಳಿಕೆಯಿಲ್ಲದವರು ಅವಳಂತೆ.. ಅವನ ಆಟ ನೋಡುತಾ,ಅವನಿಗೇ ಕಿರೀಟ ತೊಡಿಸುತಾ ಇದ್ದಾರೆ ಜನ, ದೇವರಿದ್ದಾನೇನು ಸಾಕಿ.. ಆ ಶಶಿಯೊಬ್ಬನೇ ಅವಳ ಗೆಳೆಯ ಅವಳ ನಗಿಸಲು ಸದಾ ನಗುಮೊಗ ತೋರುತಿರುವ. ಅಲ್ಲಾನೋ,ಏಸುವೋ,ರಾಮನೋ ದೇವರಿಗೆ ಅವಳ ಕೊರಗು,ಕಣ್ಣೀರು ಕಾಣದಾಯ್ತೇನು ಸಾಕಿ.. ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಶವದಮಾತು ಪ್ಯಾರಿಸುತ ಶವದ ಮನೆಮುಂದೆ ನಿರರ್ಥಕಭಾವದ ಬೆಂಕಿಮಡಿಕೆಯೊಂದು ಹೊಗೆಯ ಉಗುಳುತಾ ಕುಳಿತಿದೆ…! ಕಾಯುತ್ತಿದ್ದದ್ದು ಯಾರಿಗೆಂದು ಬಲ್ಲಿರಾ…? ಚಟ್ಟವೊಂದು ಕಾಯುತ್ತಿದ್ದದ್ದು ನನಗೆ ಮಾತ್ರ ಅಲ್ಲವೇ..? ಅಂತ್ಯಯಾತ್ರೆಗೆ ಬಿಳ್ಕೊಡಲು ನಮ್ಮವರು ಬರುವುದು ಯಾರಾದರೂ ಕಂಡಿರಾ..? ಬರುವವರೆಲ್ಲರೂ ಮನೆವರೆಗೆ ಮಾತ್ರ ಬಂದವರೆಲ್ಲ ಮಸಣದ ಮಧ್ಯನಿಂತು ಮರಳಿ ಹೋಗುವವರು ಎತ್ತೋವರೆಗೂ ಅವರು ಬರ್ತಾರೆ ಇವರು ಬರ್ತಾರೆ, ಎತ್ತಿದ ಮೇಲೆ ಅವರು ಬಂದಿದ್ದಾರೆಯೇ…?ಇವರು ಬಂದಿದ್ದಾರೆಯೇ…? ಸ್ಮಶಾನದ ಹಾದಿ ಮಧ್ಯ ಅವರು ಬರುವವರಿದ್ದರು ಇವರು ಬರುವವರಿದ್ದರು ಚಿತೆಮೇಲೆ ಇಟ್ಟಾಗ ಅವರು ಬರಬೇಕಿತ್ತು ಇವರು ಬರಬೇಕಿತ್ತು ಸುಡಲು ಆರಂಭಿಸುತ್ತಿದಂತೆ ಅವರು ಬರಲೇ ಇಲ್ಲ ಇವರು ಬರಲೇ ಇಲ್ಲ… ಅವರೆಲ್ಲ ಯಾರು ಕಷ್ಟದಲ್ಲಿ ನೆಂಟರಾದವರಾ..? ಬಂಧುಬಳಗ ಎನಿಸಿದವರಾ..? ಅಣ್ಣತಮ್ಮಂದಿರಂತೆ ಇದ್ದವರಾ…? ಜೀವ ಕೊಟ್ಟು ಜೀವ ಉಳಿಸಲು ಹೆಣಗಿದವರಾ…? ಅಲ್ಲವೇ ಅಲ್ಲ ..! ನಮ್ಮವರು ಯಾರು ಕಾಣಲೇ ಇಲ್ಲ ಕಂಡವರೆಲ್ಲರು ನಮ್ಮಂತೆ ಇದ್ದವರು… *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಧಿಕ್ಕಾರವಿರಲಿ                            ಗೌರಿ.ಚಂದ್ರಕೇಸರಿ ನೇಣಿನ ಕುಣಿಕೆಯ ನೆನೆದು ಝಲ್ಲನೆ ಬೆವರುವ ನೀವು ಎರಡು ಕ್ಷಣದ ನೋವಿಗೆ ಕೊರಳೊಡ್ಡಲಾರದ ರಣ ಹೇಡಿಗಳು ಅರಳಿ ನಿಂತು ನಸು ನಗುವ ಹೂವನ್ನು ಹೊಸಕಿ ಹಾಕುವಾಗಿನ ಭಂಡತನ ಯಾರದೋ ಮನೆಯ ನಂದಾ ದೀಪವ ನಂದಿಸಿ ಗಹ ಗಹಿಸಿ ನಕ್ಕು ನಲಿದ ನಿಮ್ಮ ಗುಂಡಿಗೆಯ ಕುದಿ ರಕ್ತ ಗಲ್ಲು ನೆನೆದು ಗಡ್ಡೆ ಕಟ್ಟಿತೆ? ಹೆಣ್ಣಿನಲ್ಲಿ ತಾಯ ತಂಗಿಯರ ಕಾಣದ ನೀವು ಹುಣ್ಣೊಳಗಿನ ಹುಳುಗಳು ಯಾರದೋ ತೋಟದ ಸುಮಗಳನು ಹೊಸಕಿ ಹಾಕಿ ಅಟ್ಟಹಾಸದ ಮೀಸೆಯ ಹುರಿಗೊಳಿಸುವ ನೀವೆಂದರೆ ಕೊರಳಿಗೆ ಬೀಳುವ ಹಗ್ಗಕ್ಕೂ ಹೇಸಿಗೆ ನಿಮ್ಮ ಸಾವಿನ ದಿನವನ್ನು ನೆನೆ ನೆನೆದು ಸುರಿಸುವ ನಿಮ್ಮವರ ಕಣ್ಣೀರಿಗೆ, ನೇಣು ಬೇಡವೆಂಬ ಅವರ ಕೂಗಿಗೆ ಹೆಣ್ಣು ಹೆತ್ತವರದೊಂದು ಧಿಕ್ಕಾರವಿರಲಿ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಚಂದ ಕಣೆ ನೀನು ಅವ್ಯಕ್ತ ಕಣ್ಣಿನಲ್ಲೇ ಅರ್ಥವಾಗಿಯೂ ಆಗದಂತೆ  ಆಡುವ ಮಾತುಗಳ ಸವಿ ಚೆಂದ.. ತುಟಿಯಂಚಿನಲಿ ಹಿಡಿದಿಟ್ಟಿರುವ ಒಲವಿನ  ರಸಗವಳದ ಕೆನ್ನೀರ ಪರಿ ಚೆಂದ.. ಕೇಳಿಯೂ ಕೇಳದಂತೆ ಆಡುವ  ಹೆಜ್ಜೆ ಗೆಜ್ಜೆಗಳ ನಲಿವು ಚೆಂದ,. ಚಂದ ಕಣೆ ನೀನು ಹೇಗಿದಿಯೋ ಹಾಗೆ ಚಂದ… ಸೊಂಟದ ಬಳುಕಿನಲ್ಲಿ ಲೋಕವನ್ನೇ ಆಡಿಸುತ ತಾನೇ ಆಡುವ ಪರಿ ಚೆಂದ.. ಏರಿಳಿತಗಳ ಲೆಕ್ಕವಿಡದೆ ,ರಸಿಕತೆಯ ಸವಿಯುಣಿಸಿ ನಾನಲ್ಲ ನನ್ನದಲ್ಲ ಎಂಬ ಸುಳ್ಳೇ ಚೆಂದ.. ಪ್ರೀತಿಯ ತುಂತುರು ಮಳೆಯಲಿ ನೀರಾಗಿ  ಸಮುದ್ರದಾಳದ ಮುತ್ತಾಗ ಬಯಕೆಯೇ ಚೆಂದ… ಚಂದ ಕಣೆ ನೀನು ಹೇಗಿದಿಯೋ ಹಾಗೆ ಚಂದ… ಮೋಹದ ಮಿಶ್ರಪಾಕದಲಿ ಶೀತಲದುರಿಯ ಮೋಸ ಬೀಸಿರುವ ಸಾತ್ವಿಕತೆಯೇ ಚೆಂದ.. ಪ್ರೇಮಾಂಕುರಕೆ ಅಂಕುಶ ಹಾಕಿದಂತೆ ಮಾಡಿ ಶಿಲೆಯ ಮಿಡಿತವ ಕದರುವುದೇ ಚೆಂದ.. ಕಾಮಾಂಕುಷಗಳ ಹೂವು ಎಳೆಯಂತೆ ಹಿಡಿದು ಸರಿಸಿ  ಗಾಳಿ ಸೋಕದಂತೆ ತೇಲಿಯ ಹೋಗುವ ಗರಿಯೇ ಚೆಂದ ಚಂದ ಕಣೆ ನೀನು ಹೇಗಿದಿಯೋ ಹಾಗೆ ಚಂದ… ನಿಂದಿಸಲಿ, ಛೇಡಿಸಲಿ, ನಗಲಿ ಯಾರೇನೇ ಹೇಳಲಿ ಇರಲಿ ಬಿಡು, ಅಷ್ಟೇ.. XX ವರ್ಣತಂತು ಇರುವ ಸಾಮಾನ್ಯ ಜೀವಿಯೆಂದರೆ ಇರಲಿ ಬಿಡು, ಅಷ್ಟೇ.. ಕಾಲ್ಗೆಜ್ಜೆ ಕೈಬಳೆ ಬೊಟ್ಟು ಸೀರೆ ಹಳೆಕಾಲ ಎಂದರೆ ಇರಲಿ ಬಿಡು, ಅಷ್ಟೇ.. ಬಿಗಿದ ಬಟ್ಟೆ ಎತ್ತರದ ಸ್ಯಾಂಡಲ್ ದಾರಿತಪ್ಪಿದಳೆಂದರೆ ಇರಲಿ ಬಿಡು, ಅಷ್ಟೇ.. ಮೋಹಗಾರ್ತಿ ಮೋಜುಗಾರ್ತಿ ಜಂಬಗಾರ್ತಿ ಎಂದರೆ ಇರಲಿ ಬಿಡು, ಅಷ್ಟೇ.. ಅಮ್ಮ ಅಕ್ಕ ತಂಗಿ ಮಗಳು ಅಜ್ಜಿ ಗೆಳತಿ ಒಡತಿ ಪ್ರೇಯಸಿ ಮನದರಸಿ ಎಲ್ಲಾ ನೀನೆ….  ನಿನ್ನೊಳಗಿನ ಭಾವ ಅದರ ಮರ್ಮ ಆರಿತವಳು ನೀನೊಬ್ಬಳೇ ಸಖಿ… ಚಂದ ಕಣೆ ನೀನು ಹೇಗಿದಿಯೋ ಹಾಗೆ ಚಂದ… ***********************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ ರಾಮಸ್ನಾಮಿ ಡಿ.ಎಸ್ ಸಂಗೀತಕಛೇರಿಯತಂಬೂರಿಶೃತಿಹೆಣ್ಣು. ಬಿಗಿತ ಹೆಚ್ಚಾದರೆತುಂಡಾಗುವ ತಂತಿಸಡಿಲಾದರೆ ಹೊಮ್ಮದು ನಾದ ತನ್ನ ಕಂಠಸಿರಿಗೆತಕ್ಕಂತೆ ಶೃತಿಹೊಂದಿಸಿಕೊಳ್ಳುವುದುಗಾಯಕನ ಜವಾಬ್ದಾರಿ. ವೀಣೆ ಸಿತಾರು ಸರೋದುಗಳನ್ನುಬೆರಳಿನಿಂದಲೇ ನುಡಿಸಬಹುದಾದರೂರಕ್ಷಣೆಗೆ ಕವಚ ಇರುವಂತೆಯೇಪಿಟೀಲು ನುಡಿಯುವುದು ಕಮಾನಿಗೆ ಶೃತಿ ತಪ್ಪದೇ ಇದ್ದರೆಕಛೇರಿ ಕಳೆಗಟ್ಟುವುದಕ್ಕೆಇದ್ದೇ ಇವೆ ಪಕ್ಕ ವಾದ್ಯದಸಹಕಾರ, ತನಿ ಆವರ್ತನ. ಸಂಸಾರದ ಕಛೇರಿಯೂಥೇಟು ಸಂಗೀತದ ಹಾಗೇ ಶೃತಿ ತಪ್ಪದ ಹಾಗೆತಾಳ ಮರೆಯದ ಹಾಗೆಪರಸ್ಪರರ ಗೌರವಕ್ಕೆ ಹಾನಿ ಮಾಡದ ಹಾಗೆ ಬದುಕ ಹಾಡು ಹಾಡಬೇಕುಇಹದ ಇರವ ಮರೆಯಬೇಕು. *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಶಶಿಕಾಂತೆ ಇಂದು ನಿನ್ನೆಯದಲ್ಲ ನನ್ನ ನಿನ್ನ ಪ್ರೇಮ ಯಾವ ಜನ್ಮದ ಮೈತ್ರಿಯೋ ನಾಕಾಣೆ.. ಇನ್ನೆಂದಿಗೂ ನನ್ನನು ಬಿಟ್ಟು ದೂರ ಹೋಗಬೇಡಾ,ನಮ್ಮ ಪ್ರೀತಿ ಮೇಲಾಣೆ.. ತಿಳಿನೀರ ಕೊಳದಂತಿದ್ದ ಮನಸಲಿ ಒಲವೆಂಬ ಕಲ್ಲೆಸೆದು ಹೋದೆಯಲ್ಲಾ.. ಕೂತರೂ ನಿಂತರೂ ,ಮಲಗಿದರೂ ನಿನ್ನದೇ ಧ್ಯಾನ ,ತಾಳಲಾರೆ ಈ ಭವಣೆ.. ಕುಡಿನೋಟ ನೀ ಬೀರಿದಾಗಿ ನಾಚಿನಾಚಿ ಕೆಂಪುಕೆಂಪು ಸೇಬಾಯ್ತು ನನ್ನ ಕೆನ್ನೆ.. ಯಾರನ್ನೂ ಒಪ್ಪದ ಮನಸು ನಿನಗೊಲಿ ಯಲು ಕಾರಣ ನಿನ್ನ ಸ್ನೇಹ ಸಂಭಾಷಣೆ.. ಕಣ್ಣಿಗೆ ಕಾಣ್ಣದ್ದು ಹೃದಯಕ್ಕೆ ತಿಳಿಯಲು ತಡವಿಲ್ಲ. ನಿನ್ನ ಪ್ರೀತಿ ನನಗರಿವಾಯ್ತು.. ನಿನ್ನ ನೆನಪಲ್ಲಿ ,ಭವಿಷ್ಯದ ನೆಪದಲ್ಲಿ ನನಗಾಯ್ತು ರಾತ್ರಿಯೆಲ್ಲಾ ಜಾಗರಣೆ.. ಹೆದರುವಂತಹುದೇನೂ ಇಲ್ಲ ನಿನ್ನ ಬೆಂಬಲ ಸದಾ ನನ್ನ ಜೊತೆಗಿರುವಾಗ.. ನನ್ನ ಕಂಡರೆ ನಗುವ ಆ ಶಶಿಗೆ ನಾನೇಕೆ ಕೊಡಬೇಕು ನಮ್ಮ ಪ್ರೀತಿಯ ವಿವರಣೆ.. ********

ಕಾವ್ಯಯಾನ Read Post »

ಕಾವ್ಯಯಾನ

ಮಹಿಳಾದಿನದ ವಿಶೇಷ

ದ್ವೇಷ.. ಶ್ವೇತಾ. ಎಂ.ಯು. ದ್ವೇಷವಿಲ್ಲ ಸುಡಲು ಬೆಂಕಿ ಮಾತ್ರ ಇದೆ ನಿಮ್ಮ ಊರಿನ ಉಲ್ಕಾಪಾತಗಳ ಉಸಿರುಗಟ್ಟಿಸೋಣವೆಂದರೆ ಪ್ರಾಣವಾಯು ಹೊರತು ಮತ್ತೇನೂ ಉಳಿದಿಲ್ಲ; ಆಸೆಗಣ್ಣುಗಳಲಿ ನೀವು ತುಂಬಿಕೊಂಡರೆ ನನ್ನ ನಗಬೇಕು ಎನಿಸುತ್ತದೆ, ಸುಮ್ಮನಾಗುತ್ತೇನೆ ರಂಜಕ ಹಾಕಿ ಸುಡುವ ಮನಸಾದರು ಕಣ್ಣುಗಳು ನೋಡಿಕೊಳ್ಳಲಿ ಒಮ್ಮೆ ನಿಮ್ಮನ್ನೇ ಎಂಬ ಆಸೆಯಿಂದ.. ಬಾಯಾರಿದರೆ ಕುಡಿಯ ಬೇಕು ನೀರು; ಕೊಳದಲ್ಲಿ ಈಜುವುದು ಕೊಳಕಾದವರು ಮಾತ್ರವೇ ? ಇಲ್ಲದಿರಬಹುದು ನಾಲಗೆಗೆ ಎಲುಬು ಹೃದಯಕ್ಕೆ ದಾರಿಗಳಿವೆ ಸಂಯಮವೇ ಸಂಬಂಧ ಗುಣಗಳೇ ಬೆಳಕು ನಗುವಿಗೆ ಹಲವು ಮುಖ ಬದಲಿ ಇಲ್ಲ ಜೀವಕ್ಕೆ ಕತ್ತರಿಸಿದರೆ ಕರುಳ ಬಳ್ಳಿ ಬಳ್ಳಿಯೊಳಗಣ ಬಳ್ಳಿ ನಿನ್ನ ಹೂ ಬಳ್ಳಿ ನೀನೂ ಹಾಗೆ ನಾನು ಎಲ್ಲರೊಳಗೊಂದು ಜೀವ ಅದಕೆ ಹೆಸರು ಬೇರೆ ಬೇರೆ ಒಂದೇ ಅರ್ಥ ಅದು ಹೆಣ್ಣು ! *******

ಮಹಿಳಾದಿನದ ವಿಶೇಷ Read Post »

ಕಾವ್ಯಯಾನ

ಮಹಿಳಾದಿನದ ವಿಶೇಷ

ಒಂದು ಹೆಣ್ಣಿನ ಸ್ವಗತ. ಜ್ಯೋತಿ ಡಿ.ಬೊಮ್ಮಾ ನನಗಾರ ಭಯ..! ನಾನು ಜನ್ಮ ಕೊಡುವ ಹೆಣ್ಣು ಮಗುವನ್ನು ಈ ಲೋಕದಿ ತರಲು ನನಗಾರ ಭಯ.. ಇಲ್ಲ.. ಭಯ ಲೋಕದ್ದಲ್ಲ..ನನ್ನಂತರಂಗದ್ದು.. ಮತ್ತೊಂದು ಹೆಣ್ಣನ್ನು ಈ ಲೋಕಕ್ಕೆ ತರುವ ಧೈರ್ಯ ನನಗಿಲ್ಲದಿರುವದು.. ಬೇಡ ಎಂದವರಿಗೆ ನಾನೇಕೆ ವೀರೋಧಿಸಲಿಲ್ಲ..! ನನಗೂ ಎಲ್ಲೊ ಬೇಡವೇ ಆಗಿತ್ತಲ್ಲ.. ಗಂಡು ಮಗುವಿನ ಮೋಹವೇ ಅಧಿಕವಾಗಿತ್ತಲ್ಲ.. ಸ್ತ್ರೀ ಸಬಲಿಕರಣಕ್ಕಾಗಿ ಹೋರಾಡುವ ನನಗೂ ಹೆಣ್ಣು ಮಗು ಬೇಕಾಗಿಲ್ಲ.. ಏಕೆ.. ನಾನನುಭವಿಸಿದ ತವಕ ತಲ್ಲಣಗಳು ಅವಳು ಅನುಭವಿಸುವದು ಬೇಡವೆಂದೇ… ಕೆಟ್ಟ ಕಾಮುಕರಿಗೆ ಬಲಿಯಾದೀತೆಂದು ದಿಗಿಲುಗೊಂಡೇ… ವರದಕ್ಷಿಣೆಗಾಗಿ ಸುಟ್ಟು ಬಿಟ್ಟಾರೆಂದು ಭಯಗೊಂಡೆ… ಅಸಹಾಯಕತೆ ಯನ್ನು ಉಪಯೋಗಿಸಿಕೊಳ್ಳುವರ ದುರುಳುತನಕ್ಕಂಜಿಯೇ… ಸರಿ ಬಿಡು..ಹೆಣ್ಣನ್ನು ಹೇರದಿದ್ದರೇನಾಯಿತು.. ಭ್ರೂಣದಲ್ಲೆ ಹತ್ಯೆ ಮಾಡಿದರಾಯಿತು. ಹೆಣ್ಣು ಗಳಿಲ್ಲದೆ ಬರೀ ಗಂಡಸರೇನು ಮಾಡುವರು..! ಸೃಷ್ಟಿಯನ್ನು ಮುಂದುವರೆಸುವರಾ ಅವರೋಬ್ಬರೆ.. ಹೆದರದಿರು ಮನವೇ.. ಹೆಣ್ಣನ್ನು ಅಷ್ಟೊಂದು ಅಸಹಾಯಕಳೆಂದು ತಿಳಿದಿರು.. ಅಕ್ಕನಂಥ ವಿರಾಗೀನಿಯರು ಹಾಕಿಕೊಟ್ಟ ದಾರಿ ಇದೆ.. ಸೀತೆ ಸಾವಿತ್ರಿಯಂಥವರ ದಿಟ್ಟ ನಿಲುವುಗಳಿವೆ.. ಮಲ್ಲವ್ವ ಓಬವ್ವರ ಸಾಹಸ ಗಾಥೆಗಳಿವೆ.. ಹೆಣ್ಣು ಹೆಣ್ಣೆಂದು ಜರೆಯಬೇಡ.. ಹೆಣ್ಣು ಹೇರಲು ಅಂಜಬೇಡ.. ಹೆಣ್ಣು ‌ಬಾಳಿನ ಕಣ್ಣೆಂಬುದು ಮರೆಯಬೇಡ. ************

ಮಹಿಳಾದಿನದ ವಿಶೇಷ Read Post »

ಕಾವ್ಯಯಾನ

ಮಹಿಳಾದಿನದ ವಿಶೇಷ

ಅಹಂಕಾರ ಅಣ್ಣೇಶಿ ದೇವನಗರಿ ಹೆಣ್ಣೆಂದು ಜರಿದರು ಹಣ್ಣಂತೆ ಹರಿದು ಮುಕ್ಕಿದರು, ಭುವಿಗೆ ಹೋಲಿಸಿದರು ಒಡಲ ಬಗೆದರು , ಪ್ರಕೃತಿ ಎಂದರು ವಿಕೃತಿ ಮೆರೆದರು , ಭುವಿಗೆ ಹೋಲಿಸಿದ್ದೂ ಪ್ರಕೃತಿಯೆಂದು ವರ್ಣಿಸಿದ್ದು ಮುಂದೊಂದು ದಿನ ತಾನು ಗೈಯ್ಯಲಿರುವ ಕ್ರೌರ್ಯ ಕಾರ್ಯವ ಮೂಕಳಾಗಿ ಸಹಿಸಿಕೊಳ್ಳಲೆಂಬ ದೂ(ಧು)ರಾಲೋಚನೆಯಿದೆಂಬಂತೆ ನಿರಂತರ ಸುಲಿಗೆ ಮಾಡಿದರೂ , ಅವಳದು ಮೌನ ಆಕ್ರಂದನ , ಅರಣ್ಯರೋದನ . ಈ ಅತ್ಯಾಚಾರ ತಡೆಯಲು ಮತ್ತೆ ಅವಳೇ ಎತ್ತಬೇಕಿದೆ ದುರ್ಗೆಯ ಅವತಾರ , ಮುರಿಯ ಬೇಕಿದೆ ಅತ್ಯಾಚಾರಿಗಳ ಅಹಂಕಾರ..! **************************

ಮಹಿಳಾದಿನದ ವಿಶೇಷ Read Post »

ಕಾವ್ಯಯಾನ

ಮಹಿಳಾದಿನದ ವಿಶೇಷ

ಇಲ್ಲಿ ಕೇಳಿ… ದಾಕ್ಷಾಯಿಣಿ ವಿ ಹುಡೇದ. ಅದಾಗಲೇ ಒಂದು ದೋಣಿಯನೇರಿ ಹರಿವ ನದಿಯ ಮುಕ್ಕಾಲು ದೂರ ದಾಟಿ ದಡ ಮುಟ್ಟಲಿರುವವನನ್ನು ಹಚ್ಚಿಕೊಳ್ಳುವುದೂ ನೆಚ್ಚಿಕೊಳ್ಳುವುದೂ ಸಣ್ಣ ಮಾತೇ? ಇಲ್ಲಿ ಹೇಳುವೆ ಕೇಳಿ ; ಹಾಗೆ ಹೊರಟವನ ಮೊಗ ನೋಡಿ ಮುಗುಳ್ನಗೆ ಬೀರಿ ನನಗೆ ನಾನೇ ಭರವಸೆಯ ಚಿಮಣಿ ದೀಪ ಕಡ ತಂದುಕೊಳ್ಳುವುದು ಸಣ್ಣ ಮಾತೇ? ವಾರದಲ್ಲೆರಡು ಸಲ ಒಮ್ಮೊಮ್ಮೆ ತಿಂಗಳಿಗೊಂದು ಸಲ ಹುಡುಕಿಕೊಂಡು ಬಂದು ಮೊಳ ಮಲ್ಲಿಗೆ ತುಂಡು ಬ್ರೆಡ್ಡು ತಂದು “ನಾ ನಿನ್ನವನೇ” ಎಂದುಲಿವವನ ನಂಬುವುದು ಸಣ್ಣ ಮಾತೇ? ಇಲ್ಲಿ ಹೇಳುವೆ ಕೇಳಿ ; ನೀತಿ ಅನೀತಿಯ ಖಾತೆ ಕಿರ್ದಿಯಲ್ಲಿ ಗುಣಾಕಾರ ಭಾಗಾಕಾರ ಮಾಡಿ ಎದುರಿನವರೆದೆಗೆ ಬಾಣ ಹೂಡುವವರ ಮಾತುಗಳಿಗೆ ಉತ್ತರ ನನ್ನಲ್ಲೂ ಇವೆ. ಆದರೆ.. ಆದರೆ… ಇದ್ದುದನ್ನು ಇದ್ದಂತೆ ಹೇಳಿ ನಿಮ್ಮ ಮನಸು ಮುರಿವ ಇರಾದೆ ನನ್ನೆದೆಯಲ್ಲಿ ಹುಟ್ಟಲಿಲ್ಲ, ಪ್ರೀತಿ ಬಯಸಿ ಬಂದವನ ಎದೆಗೆ ಮಳೆ ಸುರಿಸಿದ ಒಂಟಿ ಹೆಣ್ಣು ನಾನು, ನೀವಾಡಿದ ಮಾತುಗಳು ನನ್ನ ಸೆರಗ ಚುಂಗಿನಲ್ಲಿ ಹಾಕಿಕೊಂಡಿರುವೆ ಗಂಟು, ಬಿಡುವಾದಾಗ ಬಿಚ್ಚಿ ನೋಡಿ ನಿಮಗೂ ಅಲ್ಲಿ ಪ್ರೀತಿ ಉಂಟು. ಒಡೆದ ಮನೆಯ ಬಿದ್ದ ಗೋಡೆಯ ಮುಗಿದ ಯುದ್ಧದ ಸೂತಕ ಏನೆಂದು ಬಲ್ಲವಳು ನಾನು, ನನ್ನೊಲವ ಪ್ರಶ್ನಿಸುವ ಮೊದಲೊಮ್ಮೆ ನಿಮ್ಮನ್ನು ನೀವು ಓದಿ, ಉತ್ತರ ಸಿಕ್ಕ ದಿನ ಪಂಚಾಯ್ತಿಗೆ ಚಂದ್ರನನ್ನು ಕರೆಯೋಣ. **********

ಮಹಿಳಾದಿನದ ವಿಶೇಷ Read Post »

You cannot copy content of this page

Scroll to Top