ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಪದಗಳೇ ಹೀಗೆ ಜಿ.ಲೋಕೇಶ್ ಪದಗಳೇ ಹೀಗೆ ಪದಗಳೇ ಹೀಗೆ ಅಲೆಸುತ್ತವೆ ಇಂದು ಬಾ ನಾಳೆ ಬಾ ಎಂದು ಕವಿತೆಗಳನ್ನು ಕಟ್ಟಲು ಎರವಲು ಪಡೆಯಲು ಹೋಗಬೇಕಾಗಿದೆ ನಮ್ಮೂರ ಶೆಟ್ಟಿ ಬಳಿಗೆ ನನ್ನವ್ವ ಸಾಲ ಪಡೆಯಲು ಹೋಗುವಂತೆ ಬಡ್ಡಿ ಬೇಕಾದಷ್ಟು ನೀಡುತ್ತೇನೆಂದರೂ ಏನೋ ಅನುಮಾನ ಪದಗಳಿಲ್ಲಿ ಸಿಗಲೊಲ್ಲವು ಸರಿ ಕಾಯುತ್ತಿದ್ದೇನೆ ಬಾಗಿಲು ತೆರೆಯುವ ಮುನ್ನವೇ ಸರದಿಯಲ್ಲಿ ನಿಂತು ಇವತ್ತು ನಾನೇ ಮೊದಲು!! ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬೆಳಕಿನ ಬೀಜಗಳು.. ಚಂದ್ರಪ್ರಭ ಬೆಳಕಿನ ಬೀಜಗಳು.. ಪುರುಷನೆಂದರು ಪ್ರಕೃತಿಯೆಂದರು ನಾವು ತಲೆದೂಗಿದೆವು ಗಂಡೆಂದರು ಹೆಣ್ಣೆಂದರು ನಾವು ತಲೆದೂಗಿದೆವು ಅವನೆಂದರು ಅವಳೆಂದರು ನಾವು ತಲೆದೂಗಿದೆವು ತುದಿಯೆಂದರು ಮೊದಲೆಂದರು ನಾವು ತಲೆದೂಗಿದೆವು ಅಖಿಲವೆಂದರು ಅಣುವೆಂದರು ನಾವು ತಲೆದೂಗಿದೆವು ಅನಾದಿಯಿಂದ ಇದು ನಡೆದೇ ಇದೆಯಲ್ಲ ಹೊಸತೇನಿದೆ ಇದರಲ್ಲಿ!! ನಾವು ಒಡಲು ತುಂಬಿ ಹೆತ್ತು ಹೊರುತ್ತ ಬಂದಿದ್ದೇವೆ ಅಟ್ಟು ಬೇಯಿಸಿ ಹಸಿವ ನೀಗುತ್ತೇವೆ ಚಳಿ ಗಾಳಿ ಮಳೆ ಬಿಸಿಲಿಗೆ ತತ್ತರಿಸುವಾಗ ಜೀವವನು ವಾತ್ಸಲ್ಯದ ಸೆರಗಲ್ಲಿ ಕಾಪಿಡುತ್ತೇವೆ ಸೂರುಗಳಿಗೆ ಜೀವ ತುಂಬಿ ಲವಲವಿಕೆಯ ಮನೆಯಾಗಿಸುತ್ತೇವೆ ಗೋಡೆಗಳನು ಕೆಡವಿ ಸೇತುವೆ ಕಟ್ಟುತ್ತೇವೆ ಮನೆ ಅಂಗಳ ರಸ್ತೆಗಳನೆಲ್ಲ ಗುಡಿಸಿ ಅಂದದ ರಂಗೋಲಿ ಬಿಡಿಸುತ್ತೇವೆ ಬಟ್ಟೆ ಪಾತ್ರೆ ನೆಲ ಗೋಡೆ ಎಲ್ಲ ತಿಕ್ಕಿ ತೊಳೆದು ಹಸನುಗೊಳಿಸುತ್ತೇವೆ ಮನಮನದೊಳು ದೀಪ ಉರಿಸಿ ಅಲ್ಲೊಂದಿಷ್ಟು ಬೆಳಕು ಇಣುಕುವಂತೆ ಮಾಡುತ್ತೇವೆ ಮುಟ್ಟು ಬಸಿರು ಬಾಣಂತನ ಎಂಬೆಲ್ಲವುಗಳನು ಜೀವ ಕಾರುಣ್ಯದ ಕಣ್ಣಿಂದಲೇ ನಿರುಕಿಸುತ್ತೇವೆ ಅದನೆಲ್ಲ ಅಕ್ಕರೆಯಿಂದ ಒಪ್ಪಿ ಅಪ್ಪಿಕೊಳ್ಳುತ್ತೇವೆ ಕೂಸು ಕುನ್ನಿ ಮುದಿ ಜೀವಗಳು ಆರೋಗ್ಯ ಬಾಧೆಯಿಂದ ಪೀಡಿತರು ಮನೋವ್ಯಾಕುಲತೆಗೆ ಒಳಗಾದವರೆಲ್ಲ ನಮಗೆ ನೊಂದ ಜೀವಗಳಾಗಿ ಕಂಡಿವೆ ಅವರ ಸಾಂತ್ವನ ಸೇವೆಗೆ ನಮ್ಮೊಳಗಿನ ತಾಯಿ ದಾದಿ ಸದಾ ತುದಿಗಾಲಲ್ಲಿ ನಿಂತು ತುಡಿಯುತ್ತಾಳೆ ಪ್ರಕೃತಿ ಎನಿಸಿದ ಕ್ಷಣದಿಂದ ನಮ್ಮನ್ನು ಎರಡನೇ ಸಾಲಿಗೆ ದೂಡಲಾಗಿದೆ ಸಹಸ್ರಮಾನಗಳಿಂದ ನಮ್ಮನ್ನು ಹಿಡದೆಳೆದು ತೊಟ್ಟ ಬಟ್ಟೆ ಸೆಳೆದು ಅಂಗ ಅಂಗವನು ಛಿದ್ರಗೊಳಿಸಿ ಹೃದಯವನ್ನು ಬಟಾ ಬಯಲಿನಲ್ಲಿ ಬಿಕರಿಗಿಡಲಾಗಿದೆ ಆದರೂ ಮಿಡಿಯುವುದ ತೊರೆದಿಲ್ಲ ನಾವು ಹೃದಯ ತನ್ನ ಮಿಡಿತ ಮರೆತರೆ ಜಗ ನಿಶ್ಚಲವಾಗುವುದೆಂಬ ಎಚ್ಚರ ಸದಾ ನಮ್ಮನ್ನು ಪೊರೆದಿದೆ ಮನೆ ಮಕ್ಕಳು ಪಾತ್ರೆ ಪಗಡದೊಂದಿಗೆ ನಮ್ಮನ್ನು ಹಿಂಸೆ ಅತ್ಯಾಚಾರಗಳ ಭೀಬತ್ಸಕ್ಕೆ ನಿರಂತರ ಗುರಿ ಮಾಡಲಾಗಿದೆ ಸೆರಗಿನ ಮರೆಯಲ್ಲಿ ನಾವು ನಮ್ಮ ಕರುಳ ಕುಡಿಗಳನು ಪೊರೆದಿದ್ದೇವೆ ಗುಂಡು ಗೋಲಿ ಬಡಿಗೆ ಕತ್ತಿ ಖಡ್ಗಳಿಗೆ ವಿನಾಕಾರಣ ಜೀವ ತೆತ್ತ ಜತೆಗಾರ ಇಂದು ಬರುವ ನಾಳೆ ಬರುವನೆಂಬ ಹುಸಿ ಭರವಸೆಯನೆ ತುಂಬುತ್ತ ಎಳೆಯ ಜೀವಗಳ ಸಲಹಿದ್ದೇವೆ ಬೆಂಕಿ ಬಯಲು ಕಂಬಿ ಜೈಲುಗಳು ನಮ್ಮ ಕಾರುಣ್ಯದೆದುರು ಮಂಡಿಯೂರಿವೆ ಗಾಢ ಅಗಾಧ ಎಂಬ ಬಣ್ಣನೆಗೆ ಪಾತ್ರವಾಗುವ ಅಂಧಕಾರ ನಮ್ಮೊಂದು ಸೆಳಕಿನೆದುರು ನಿಲ್ಲದೆ ಸೋತು ಕಾಲ್ಕಿತ್ತಿದೆ ಈ ಊರು ಆ ಊರು ಈ ದೇಶ ಆ ದೇಶ ಎನುವ ಭೇದವೇ ಇರದೆ ಬುವಿ ಎಲ್ಲೆಡೆ ಮೆಲ್ಲಗೆ ಕುಡಿಯೊಡೆದು ಬೆಳಕು ಸೂಸಿ ನಿಧಾನವಾಗಿ ಬಿಸಿಲು ಚೆಲ್ಲುತ್ತೇವೆ ಹರಿತ್ತುವಿನಲ್ಲಿ ಜೀವ ಸಂಚಾರವಾಗುತ್ತದೆ ನೋಯಿಸುವ ನೊಂದ ಪೊರೆದ ಈರ್ಷೆಗೆ ನಿಂತ ಜೀವಗಳೆಲ್ಲ ಕೈ ಮುಂದೆ ಮಾಡುವಾಗ ನಾವು ಕೈ ತುತ್ತು ನೀಡುತ್ತೇವೆ.. ಆಗ ಎಲ್ಲ ಇಲ್ಲಗಳ ನಡುವೆ ಜಗತ್ತು ಸುಂದರವಾಗಿ ಕಾಣತೊಡಗುತ್ತದೆ ರೊಟ್ಟಿಯೆದುರು ಬಣ್ಣ ಬಣ್ಣದ ಪತಾಕೆಗಳು ಗುಡಿ ಗುಂಡಾರ ದೈವಗಳೆಲ್ಲ ಸೋತು ನೆಲ ಕಚ್ಚುತ್ತವೆ ಸಂದಿಗೊಂದಿಗಳಲ್ಲಿ ಬೆಳಕಿನ ಎಳೆ ಎಳೆ ಸೂಸಿ ಒಂದಿಷ್ಟು ಕರುಳ ಬಳ್ಳಿಯ ಬೇರಿಗೂ ತಾಕುವಾಗ ಬುದ್ಧ ಬಸವ ಬಾಬಾ.. ಕನಕ ಕಬೀರ ಏಸು ಅಕ್ಕ ಮೀರಾ ಲಲ್ಲಾ.. ಕಪ್ಪು ಕೆಂಪು ಹಸಿರು ಎಲ್ಲ ಒಂದರೋಳು ಇನ್ನೊಂದು ಬೆರೆತು ಬೆಳ್ಳನೊಂದು ಬೆಳಕು ಹೊಮ್ಮುತ್ತದೆ…. ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಗಜ಼ಲ್ ನಿನ್ನ ಕಣ್ಣಲ್ಲಿ ಕಂಡ ನೆರಳುಗಳ ಬರೆಯಲಾರೆ ಕೆನ್ನೆಯಲಿ ಮಡುವಾದ ಬಣ್ಣಗಳ ಬರೆಯಲಾರೆ ಕಡಲೇಕೆ ಕುದಿಕುದಿದು ಮರಳಿದೆ ಹೀಗೆ ಎದೆಯಾಳದ ಉಮ್ಮಳಗಳ ಬರೆಯಲಾರೆ ನಿನ್ನನ್ನು ಒಮ್ಮೆ ಸೋಕಲು ಎಂಥ ತಪನೆಯಿತ್ತು ಚಾಚಿ ಚಾಚಿ ಮರಗಟ್ಟಿದ ಬೆರಳುಗಳ ಬರೆಯಲಾರೆ ತೋಳಲ್ಲಿ ತಲೆಯಿಟ್ಟಾಗ ಎದ್ದ ಕಂಪನವೆಷ್ಟು ಬದುಕಿನ ಬದುಕಾದ ಚಣಗಳ ಬರೆಯಲಾರೆ ಬರಿಯ ಮಾತುಗಳಿಗೆ ದಕ್ಕಿದ್ದು ಏನು ‘ಜಂಗಮ’ ನುಡಿಯುಂಬರದಲ್ಲೆ ನಿಂತ ಭಾವಗಳ ಬರೆಯಲಾರೆ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ದಂಗೆ. ಜ್ಯೋತಿ ಡಿ.ಬೊಮ್ಮಾ. ಶಾಂತಿದೂತ ಪಾರಿವಾಳವೇ ಇನಿತು ಹೇಳಿ ಬಾ ಅವರಿಗೆ ದ್ವೇಷ ತುಂಬಿದ ಎದೆಗೂಡೊಳಗೆ ಕೊಂಚ ಪ್ರೀತಿಯ ಸಿಂಚನ ಮೂಡಿಸಲು.. ಪ್ರೀತಿಯ ಮೇಘದೂತನೆ ಸ್ವಲ್ಪ ಅರುಹಿ ಬಿಡು ಅವರನ್ನು ಸೇಡಿನ ಜ್ವಾಲೆಯಿಂದ ಒಬ್ಬರನ್ನೊಬ್ಬರು ದಹಿಸಿಕೊಳ್ಳದಿರೆಂದು.. ಎಲ್ಲೆಡೆ ಸಮನಾಗಿ ಹಬ್ಬಿದ ಬೆಳದಿಂಗಳೆ ತಿಳಿಸಿ ಹೇಳು ಅವರಿಗೆ ಹಿಂದಿನಂತೆ ಮುಂದೆಯೂ ಇದು ರಾಮ ರಹೀಮರ ನಾಡೇ ಎಂದು.. ಎಲ್ಲರಿಗೂ ಬೆಳಕನ್ನು ಹಂಚುವ ಬಿಸಿಲೆ ಅರ್ಥ ಮಾಡಿಸು ಅವರಿಗೆ ಅಮಾಯಕರನ್ನೂ ಪ್ರಚೋದಿಸಿ ದಂಗೆ ಎಬ್ಬಿಸಿ ಶಾಂತಿ ಕದಡುವ ಆಗಂತುಕರಿದ್ದಾರೆಂದು.. ನಾಲ್ಕು ದಿಕ್ಕಿಗೂ ಬೀಸುವ ಗಾಳಿಯೆ ದೃಢ ಪಡಿಸು ಅವರನ್ನೂ ಇಲ್ಲಿ ಯಾರು ಯಾರ ಹಕ್ಕು ಕಸಿಯುತ್ತಿಲ್ಲವೆಂದೂ ದಾಖಲೆ ಹೊಂದುವದರಿಂದ ನಮ್ಮ ಹಕ್ಕುಗಳು ಇನ್ನಷ್ಟೂ ಗಟ್ಟಿಗೊಳ್ಳುತ್ತವೆಂದು.. ಎಲ್ಲರ ತೃಷೆ ತೀರಿಸುವ ಜಲದೇವಿಯೇ ಶುಧ್ಧ ಗೊಳಿಸು ಮನಕ್ಕಂಟಿದ ಮಲೀನವನ್ನೂ ಭಾರತದಲ್ಲಿರುವ ನಾವೆಲ್ಲರೂ ಭಾರತೀಯರಾಗಿರೋಣ ಎಂದೆಂದಿಗೂ. ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸುಜಾತಾ ರವೀಶ್ ಆಸೆಯ ತೇರನೇರು ಮರೆತು ಹಳತನು ಹೊಸತು ನಿರೀಕ್ಷೆಯಲಿ ಗೆಳತಿ  ಭಾಷೆಯ ರಥದಲ್ಲಿ ಕಲೆತು ಬಾಳಪಥ ನಿರತ ಪರೀಕ್ಷೆಯಲ್ಲಿ ಗೆಳತಿ  ಒಲವು ಬಂದಿರಲು ದಿನವು ಹೃದಯದಿ ನಿನ್ನದೇ ಆರಾಧನೆ ಏತಕೆ?  ಬಲವು ತಂದಿರಲು ಮನದಿ ಉಪಾಸನೆ ಪಾವನ ಪ್ರತೀಕ್ಷೆಯಲಿ ಗೆಳತಿ ಸಂಗಾತಿ ಬರೆದಿರಲು ಮುನ್ನುಡಿ ಬದುಕಿನ ಪ್ರಣಯ ಕಾದಂಬರಿಯಲಿ  ಸಂಪ್ರೀತಿ ಮೆರೆದಿರಲು ಕನ್ನಡಿ ಬಾಳಿನ ಬರಹ ಸಮೀಕ್ಷೆಯಲಿ ಗೆಳತಿ   ನಿನ್ನಯ ಆಗಮನದಿ ಮನಸಿದು ಮುಗಿಲನು ನೋಡಿದ ನವಿಲಿನಂತೆ ನನ್ನ ಆಂತರ್ಯದ ಕನಸಿದು ನಲಿವಿನ ಮೋಡಿಯ ಅಪೇಕ್ಷೆಯಲಿ ಗೆಳತಿ ಬೆಸುಗೆ ತಂತಿಗಳು ಜೋಡಿಸಿ ಭರವಸೆ ನೇದಿಹ ಅನುಬಂಧ ವಿದು  ಒಸಗೆ ವಿನಂತಿಗಳು ಸುಜಿಯ ವಿಶ್ವಾಸ  ಕೋರುವ ಅಕಾಂಕ್ಷೆಯಲಿ ಗೆಳತಿ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಲುಗೆ ಮೀರಿ ಬಂದಾಕಿ ರೇಖಾ ವಿ.ಕಂಪ್ಲಿ ಸಲುಗೆ ಮೀರಿ ಬಂದಾಕಿ ಮಲ್ಲಿಗೆ ಮುಡಿದು ನನ್ನ ಮೆಲ್ಲನೆ ತಬ್ಬವಾಕಿ ಸಲುಗೆ ಮೀರಿ ಬಂದಾಕಿ ನನ್ನೊಲವ ಬಯಸಿದಾಕಿ…….. ಮನಸ್ಸೆಂಬ ಗುಡಿಯಲಿ ನನ್ನ ಪೂಜಿಸಿವಾಕಿ ಹಗಲಿರುಳು ನೋಡದೆ ದುಡಿಯುವಾಕಿ ಜೀವದ ಹಾದಿಬೆಳ್ಚುಕ್ಕಿ ಮೂಡಿಸಿದಾಕಿ ಸಲುಗೆ ಮೀರಿ ಬಂದಾಕಿ ನನ್ನೊಲವ ಬಯಸಿದಾಕಿ……… ತನ್ನವರ ಮರೆತು ನನ್ನ ನಂಬಿದಾಕಿ ನನ್ನ ಹುಚ್ಚಿಹಾಂಗ ಪ್ರೀತಿಸುವಾಕಿ ಗುಡಿ ಗೋಪುರಗಳ ಸುತ್ತಿ ನನಗಾಗಿ ಪ್ರಾಥಿ೯ಸುವಾಕಿ ಸಲುಗೆ ಮೀರಿ ಬಂದಾಕಿ ನನ್ನೊಲವ ಬಯಸಿದಾಕಿ……… ಹಾಗಾಗ ಗುದ್ದಾಡಿ ನನ್ನ ಕ್ಷಮಿಸುವಾಕಿ ನನಗಿಂತ ಹೆಚ್ಚಾಗಿ ಚಿಂತಿಸುವಾಕಿ ಹಾಗಾಗ ಬಿಕ್ಕಿಬಿಕ್ಕಿ ಅಳುವಾಕಿ ಸಲುಗೆ ಮೀರಿ ಬಂದಾಕಿ ನನ್ನೊಲವ ಬಯಸಿದಾಕಿ………. ***************************

ಕಾವ್ಯಯಾನ Read Post »

ಕಾವ್ಯಯಾನ

ಅನುವಾದ ಸಂಗಾತಿ

ಪಾತರಗಿತ್ತಿಯ ನಗು ಮೂಲ: ಕ್ಯಾಥರೀನ್ ಮ್ಯಾನ್ಸ್ ಫೀಲ್ಡ್ ಕನ್ನಡಕ್ಕೆ: ಕಮಲಾಕರ ಕಡವೆ ನಮ್ಮ ಗಂಜಿಯ ಬಟ್ಟಲಿನ ಮಧ್ಯಒಂದು ನೀಲಿ ಪಾತರಗಿತ್ತಿಯ ಚಿತ್ರ;ಪ್ರತಿ ಮುಂಜಾನೆ ಅದರ ತಲುಪಿದ ಮೊದಲಿಗರಾಗಲು ನಮ್ಮ ಪ್ರಯತ್ನ.ಅಜ್ಜಿ ಹೇಳುತ್ತಿದ್ದಳು: “ಪಾಪ, ಆ ಪಾತರಗಿತ್ತಿಯ ತಿಂದುಬಿಡಬೇಡಿ!”ಹಾಗೆಂದಾಗ ನಾವು ನಗುತ್ತಿದ್ದೆವು.ಅಜ್ಜಿ ಯಾವಾಗಲೂ ಹಾಗೆ ಹೇಳುತ್ತಿದ್ದಳು, ಪ್ರತಿಸಲ ನಮಗೆ ನಗು.ಅದು ಅಷ್ಟು ಅಪ್ಯಾಯಮಾನ ಜೋಕಾಗಿತ್ತು.ನನಗೆ ಖಾತ್ರಿ ಇತ್ತು, ಒಂದು ಮುಂಜಾನೆಆ ಪಾತರಗಿತ್ತಿ ವಿಶ್ವದ ಅತ್ಯಂತ ಹಗುರ ನಸು ನಗುವ ನಗುತ್ತ,ನಮ್ಮ ಬಟ್ಟಲಿನಿಂದ ಎದ್ದು ಹಾರಿ ಹೋಗುವುದೆಂದು,ಹೋಗಿ ಅಜ್ಜಿಯ ಮಡಿಲ ಮೇಲೆ ಕೂರುವದೆಂದು. ******* “Butterfly Laughter” In the middle of our porridge platesThere was a blue butterfly paintedAnd each morning we tried who should reach thebutterfly first.Then the Grandmother said: “Do not eat the poorbutterfly.”That made us laugh.Always she said it and always it started us laughing.It seemed such a sweet little joke.I was certain that one fine morningThe butterfly would fly out of our plates,Laughing the teeniest laugh in the world,And perch on the Grandmother’s lap.

ಅನುವಾದ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಆರೋಪಿ!! ಚೈತ್ರ ಶಿವಯೋಗಿಮಠ ಆರೋಪಿ!! ಕಾಲನ ವಿರುದ್ಧ ಸಿಕ್ಕಾಪಟ್ಟೆ ಆರೋಪಗಳಿವೆ!! ಅವನು ಸರಿಯಿಲ್ಲ, ಕೆಟ್ಟು ಹೋಗಿದ್ದಾನೆ, ಮೋಸ ಮಾಡಿದ್ದಾನೆ… ಹೀಗೇ ಓಡುತ್ತಲೇ ಇದ್ದಾನೆ ಅವ, ಆರೋಪದ ಪಟ್ಟಿಯಿಂದ ತಪ್ಪಿಸಿಕೊಳ್ಳಲು! ಅರೆ, ಯಾರೋ ಮೊಕದ್ದಮೆ ಹೂಡೇ ಬಿಟ್ಟಿದ್ದಾರೆ… ಓಡುತ್ತಿದ್ದಾನೆ ಅಂತ!! ಇದೆಂತ ಸಂಕಷ್ಟ ಬಂದೊದಗಿತು!! ಮತ್ತಷ್ಟು ಗತಿ ಹೆಚ್ಚಿಸಿದ ಓಡುವವನ ಕಾಲ ಅಡಿಯಲ್ಲಿ ಸಿಕ್ಕು ನರಳುತ್ತಿದ್ದಾರೆ ಕೆಲರು ಮತ್ತೊಂದಷ್ಟು ಅವನ ತೆಕ್ಕೆಯಲ್ಲಿನ ಸಂಪತ್ತನ್ನ ಸಿಕ್ಕಷ್ಟು ಬಾಚಿಕೊಳ್ಳಲೆತ್ನಿಸಿದ್ದಾರೆ.. ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ!! ಆದರೆ ಆರೋಪಿಯನ್ನ ಮಾತ್ರ ಇನ್ನೂ ಬಂಧಿಸಲಾಗಿಲ್ಲ! *********************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಲಂಗರು ಹಾಕಿದ ಹಡಗು ವಿಜಯಶ್ರೀ ಹಾಲಾಡಿ ಕಾಡಿಗೆ ಕಪ್ಪಿನ ಕತ್ತಲಲ್ಲಿ ಅವಳು ಬಿರಬಿರನೆ ಸಂಚರಿಸುತ್ತಿದ್ದಳು ಮಸಿ ಇರುಳಿನ ಹಾಗೆ ಚೆಲ್ಲಿಕೊಂಡ ಕೂದಲ ಕಡಲು ತೂರಾಡುತ್ತಿದ್ದವು ಕಂಪಿಸಿದ ಎಲೆಎಲೆ ಮಣ್ಣ ಕಣ ಕಣ ಉದುರುತ್ತಿದ್ದ ಧೂಳುಮಳೆ ಅಲ್ಲೇ ಯಥಾಸ್ಥಿತಿಯಲ್ಲೇ ಗಾಬರಿಬಿದ್ದು ಸ್ತಬ್ಧವಾದವು ಕಾಲ್ಗೆಜ್ಜೆಯ ರಿಂಗಣಕ್ಕೆ ಕಪ್ಪೆ ಕೀಟ ರಾತ್ರಿ ಸಡಗರಿಸಿ ಪುಳಕವಾದವು .. ನದೀ ತೀರದಲ್ಲಿ ಮರ ಗಿಡ. ತಂಗಾಳಿಯೊಂದಿಗೆ ಘಲ್ ಘಲ್ ಸಪ್ಪಳ -ವಾಲಿಸಿದ ಗೂಬೆಯೊಂದು ಬಂಡೆಯಾಚೆ ಸರಿದು ಕ್ಷಣದಲ್ಲಿ ಮರೆಯಾಯಿತು ಅದರ ಮಿದು ಕಂದಮ್ಮ -ಗಳು ತೋಳದಿಂಬೊಳಗೆ ಹುದುಗಿ ಕೂತು ಕಣ್ಣಗಲಿಸಿದವು! ಅವಳ ನೀಳ ಬೆರಳುಗಳಲ್ಲಿ ಮಿಂಚುಹುಳದ ಕಂದೀಲು ತೂಗಾಡುತ್ತಿತ್ತು …. ಚಂದಿರನಾದರೂ ತುಸು ಬಾಗಿ ಜೇನುಮರಳಿಗೆ ಮುತ್ತಿಟ್ಟು ದಾರಿ ತೋರುತ್ತ ಅನುಸರಿಸುತ್ತಿದ್ದ. ಹೂ ಪಕಳೆಯಂತಾ ತನ್ನ ಗೋಧಿ ಪಾದವ ತುಸುವೇ ನದಿ ನೀರಿಗೆ ಸೋಕಿಸಿ ಮಂದಹಾಸ -ದಲ್ಲಿ ಮಿಂದು ಸುಯ್ದಳು ತೊಯ್ಯುವ ಉಡುಪು ಲೆಕ್ಕಿಸದೆ ಕಚಗುಳಿ ಇಡುವ ಮೀನು -ಮರಿಗಳ ಸ್ಪರ್ಶಕ್ಕೆ ತೆರೆಯುತ್ತ ಇಳಿದಳು ಕೊರೆವ ನದಿಗಿಳಿದಳು …. ರೊಯ್ಯರೊಯ್ಯನೆ ಬೀಸು ಹೆಜ್ಜೆಯ ಸುಖಿಸುತ್ತ ನೀರ ಮೇಲೆ ಕಾಲೂರಿ ಲೀಲಾಜಾಲ – ಜಾಲ ದೊಳಗೆ ನಡೆದೇಬಿಟ್ಟಳು ತೀರದಿಂದ ತೀರದಾಚೆ ಗಾಳಿಯಲೆ ಎಣಿಸುತ್ತ ಲಂಗರು ಹಾಕಿದ ಹಡಗೊಂದು ಬೆಚ್ಚಿ ಪಟಪಟನೆ ರೆಕ್ಕೆಬಡಿದು ಸುಮ್ಮನಾಯಿತು ಚುಕ್ಕಿಬೆಳಕು ಸುರಿದಿದ್ದ ಕಂದೀಲು ಅಗೋ …. ಚೂರು ಚೂರೇ ದಿಗಂತ -ದಲ್ಲಿ ಮಾಯವಾಯಿತು ..! ********************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸತ್ತ ದೇಹದ ಉಸಿರು ಶ್ರೀದೇವಿ ಕೆರೆಮನೆ “ನೀನು ತುಂಬ ಗಟ್ಟಿ” ಒಂದಿಷ್ಟು ಜಗಳ, ವಾದವಿವಾದ ಮುಗಿಸಿದ ನಂತರ ಎರಡು ದಿನ ಅಖಂಡ ಮೌನವೃತವನ್ನಾಚರಿಸಿ ಇನ್ನೇನು ದಿನ ಮುಗಿದು ಎಲ್ಲರೂ ನಿದ್ದೆಗೆ ಜಾರಿ ನಾನು ಮಾತ್ರ ನಿದ್ರಾಹೀನಳಾಗಿ ಹೊರಳಾಡುವ ರಾತ್ರಿಯ ಮೊದಲ ಪ್ರಹರದ ಕೊನೆಯಲ್ಲಿ ಹೇಳಿದ ನಾನು ಮಾತನಾಡಲಿಲ್ಲ “ನನ್ನ ಬಿಟ್ಟು ನೀನು ಬದುಕಬಲ್ಲೆ ಬಿಡು” ಒಂದುವರೆ ನಿಮಿಷದ ಚಿಕ್ಕ ಮೌನದ ನಂತರ ಮತ್ತೊಮ್ಮೆ ತಣ್ಣನೆಯ ದನಿಯಲ್ಲಿ ಕೂರಲಗಿನಂತೆ ಉಸುರಿದ ನಾನು ಮಾತಾಡಲಿಲ್ಲ ಆಗಲೂ ಯಾವ ಮಾತಿಂದಲೂ ಏನೂ ಪ್ರಯೋಜನವಿಲ್ಲವೆಂಬುದು ವೇದ್ಯವಾಗಿತ್ತು ಅರ್ಥ ಕಳೆದುಕೊಂಡ ಪದಗಳು ಎದೆಯೊಳಗೆ ಬಿಕ್ಕುತ್ತಿರುವುದನ್ನು ಅವನಿಗೆ ತೆರೆದು ತೋರಿಸುವುದಾದರೂ ಹೇಗೆ ಹನಿಗೊಂಡಿದ್ದ ಕಣ್ಣಂಚು ನೋಡುವ ವ್ಯವಧಾನ ಅವನಿಗಿರಲಿಲ್ಲ ಚೆನ್ನಾಗಿ ಗೊತ್ತು ನನಗೆ ಕೆಲವು ದಿನಗಳ ನಂತರ ಮತ್ತೊಮ್ಮೆ ಇಂತಹುದೇ ಜಗಳ ಮನಸ್ತಾಪದ ಸಮಯದಲ್ಲಿ ಆ ದಿನ ಹೇಳಿದ್ದೆನಲ್ಲ ನೀನು ತುಂಬ ಗಟ್ಟಿ ಎಂದು ಎನ್ನುತ್ತ ಈಗ ಹೇಳಿದ್ದಕ್ಕೆ ಅಧಿಕೃತ ಮುದ್ರೆಯೊತ್ತಿ ದೃಢಪಡಿಸಿ ಸೀಲು ಒತ್ತಬಹುದು ಎದೆಯೊಳಗೆ ಭಾವನೆಗಳೆಲ್ಲ ಮುದುಡಿ ದೇಹ ಸತ್ತು ಕೇವಲ ಉಸಿರು ತೇಕುತ್ತಿರುವುದನ್ನು ಹೇಗೆ ತೋರಿಸಲಿ ಅವನು ಮಾತಾಡದ ಒಂದೊಂದು ಕ್ಷಣವೂ ನನ್ನ ಆಯುಷ್ಯದ ಒಂದೊಂದು ವರ್ಷವನ್ನು ಕಡಿಮೆ ಮಾಡುತ್ತಿರುವುದನ್ನು ಹೇಗೆ ಪ್ರಮಾಣಿಸಲಿ ಸತ್ತ ದೇಹದ ಉಸಿರು ತಾಗಿ ಕೊಳೆತ ವಾಸನೆ ಸುತ್ತೆಲ್ಲ ಅಡರಿ ಮೌನ ಇಂಚಿಂಚಾಗಿ ಕೊಲ್ಲುತ್ತಿರುವಾಗ ಜೀವಮಾನದ ಲೆಕ್ಕ ಇಡುವುದಾದರೂ ಯಾರು? ******

ಕಾವ್ಯಯಾನ Read Post »

You cannot copy content of this page

Scroll to Top