ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯ ಯಾನ

ಆದೇ ಅಪ್ಪನಂತೆ ಏಕೆ? ಜಿ.ಲೋಕೇಶ್ ನನ್ನಪ್ಪಂಥನಾಗಲು ನನಗಿಷ್ಟೂ ಇಷ್ಟವಿರಲಿಲ್ಲ ಮೌನವಾಗಿರಲು ಬಯಸುತ್ತಿದ್ದ ನನಗೆ ಹೇಳಿದ್ದೆ ಹೇಳುತ್ತಿದ್ದ ಅವನ ಮಾತುಗಳು ಸದಾ ಅವೇ ಅಕ್ಷತೆಯ ಮಂತ್ರಗಳು ಶಾಲೆಯಲ್ಲಿ ಮಗುವೊಂದು ಮರೆಯದೇ ಹೇಳುತ್ತಿದ್ದ ರಾಷ್ಟ್ರಗೀತೆಯಂತೆ ಗುಡಿಯ ಕಲ್ಲು ವಿಗ್ರಹ ಕಿವಿಯಿದ್ದರೂ ಕೇಳಿಸಿಕೊಳ್ಳದಂತೆ ನಾನು ನಿಲ್ಲುತ್ತಿದ್ದೆ ತಡೆದು ವಾಕರಿಕೆ, ಬೇಸರಿಕೆ. ಯಾವತ್ತೂ ಪ್ರತಿಕ್ರಯಿಸದೇ ನನ್ನೊಳಗೆ ಸತ್ತೇ ಹೋಗುತ್ತಿದ್ದ ಪ್ರತಿ ಹೇಳಿಕೆ ಇದ್ದಕ್ಕಿದ್ದಂತೆ ಒಂದು ದಿನ ನನ್ನಪ್ಪ ಮಾತುಗಳನ್ನು ಅನಾಥವಾಗಿಸಿ ಹೊರಟುಬಿಟ್ಟ! ಎಂಥಾ ಆಶ್ಚರ್ಯ! ನಾನೀಗ ಸಲುಹುತ್ತಿದ್ದೇನೆ ಅವನದೇ ಮಾತುಗಳನ್ನು ಯಥಾ ಪ್ರಕಾರ! ಅಪ್ಪನಂತಾಗಲು ಒಂದಿಷ್ಟು ಇಷ್ಟವಿಲ್ಲದವನಾಗಿ ಬದುಕಿದ ಮೇಲು ನನ್ನ ಮಕ್ಕಳಿಗೆ ಥೇಟ್ ಅಪ್ಪನಂತೆ ಆಗಿ! **********************************

ಕಾವ್ಯ ಯಾನ Read Post »

ಕಾವ್ಯಯಾನ

ಕಾವ್ಯಯಾನ

ಯಾರು ಯಾರಿಗೆ ರೇಖಾ.ವಿ.ಕಂಪ್ಲಿ ಹೂಳುವ ಭೂಮಿಯನು ಹಾಳು ಮಾಡಿತಾ ಮನೆ ಮಠ ಮಸೀದಿ ಮಂದಿರ ಮಹಾಲ್ಗಳನು ಕಟ್ಟಿದರು….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಜಾಗತೀಕರಣದ ಜಾಗಟೆ ಮೊಳಗಿಸಿ ಜಾಗೃತಿ ಹೆಸರಲಿ ಜನಜೀನವದ ರಸವೀರಿದರು…….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಬಿರುಸು ಮಾತುಗಳ ಹುರುಪು ಹಚ್ಚುತ್ತಾ ತಮ್ಮ ತಮ್ಮ ಬೆಳೆ ಬೆಯಿಸಿಕೊಂಡರು……. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ರಂಗುರಂಗಿನ ಮಾತಿನಲಿ ಸೆಳೆಯುತ ಚಪಲದ ಉಪಟಳವ ತೀರಿಸಿಕೊಂಡರು…….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಹಣದ ಆಸೆಗೆ ಹೆಣದ ಮೇಲೆಯೂ ಹೆಗ್ಗಿಲ್ಲದೆ ಅತ್ಯಾಚಾರ ಎಸಗಿದರು………… ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದಹೆಗಡೆ ಪ್ರಾಜ್ಞ ಎಂದುಕೊಂಡವರ ಸೋಗಲಾಡಿತನಕ್ಕೆ ನಗು ಬರುತ್ತದೆ ಬೇಲಿಯ ಮೇಲೆ ಕೂತವರ ದಿವಾಳಿತನಕ್ಕೆ ನಗು ಬರುತ್ತದೆ ಸೂರ್ಯ ಬೆಳಗುವನೆಂದರೆ ಸಾಕ್ಷಿ ಕೇಳುವರು ಇವರು ನೋಡು ತನಗೇ ತಾನು ಹುಸಿಯಾದ ಈ ಅಧಃಪತನಕ್ಕೆ ನಗು ಬರುತ್ತದೆ ರತ್ನದ ಕಾಂತಿಗೆ ಯಾರ ಶಿಫಾರಸಿನ ಹಂಗೇನಿದೆ ಹೇಳು ತಿಳಿದೂ ಬೊಗಳುವವರ ಧಾಡಸೀತನಕ್ಕೆ ನಗು ಬರುತ್ತದೆ ಕಪ್ಪುಕನ್ನಡಕ ಧರಿಸಿದರೆ ಕಣ್ಣನಷ್ಟೇ ಮರೆಸಬಹುದು ಜಗವನ್ನೇ ಯಾಮಾರಿಸುವ ಮಂಕುತನಕ್ಕೆ ನಗು ಬರುತ್ತದೆ “ನಾ ಕಂಡ ಮೊಲಕ್ಕೆ ಮೂರೇ ಕೊಂಬು” ಎಂಥ ವಾದ ‘ಜಂಗಮ’ ಅಡಿಪಾಯವಿಲ್ಲದೇ ಮಹಲೆಬ್ಬಿಸುವ ಜಾಣತನಕ್ಕೆ ನಗು ಬರುತ್ತದೆ *****

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ರೆಕ್ಕೆ ಬಿಚ್ಚಲು ಪ್ಯಾರಿಸುತ ಎಲ್ಲಿ ನೀನಿಲ್ಲವೋ… ಎಲ್ಲಿ ನೀನಿಲ್ಲವೋ ಅಲ್ಲಿ ನಾನೂ ಇಲ್ಲ ಅದು ನಿಲಯವಾಗಿದ್ದರು, ಆಲಯದಂತಿದ್ದರೂ, ಇದ್ದರೂ ಅದು ಶರೀರವಷ್ಟೇ..! ಮನಸು ನಿನ್ನ ಬೆನ್ನು ಬಿದ್ದಿದೆ ಆ ಕರಿನೆರಳಿನಂತೆ, ಮಾರುದ್ದ ಜಡೆಗೆ ಮುಡಿದ ಮಲ್ಲಿಗೆಯಂತೆ, ಹಿಂದೆ ಅಲೆಯುವ ಸೀರೆಸೆರಗಿನ ಗಾಳಿಯಂತೆ, ಗಾಳಿಯಲ್ಲಿ ಬರುವ ಹೂಡಿದೂಳಿನಂತೆ ಯಾವಾಗಲೂ ನೀ ನನ್ನಲ್ಲೇ ಇರುವೆ ಸದಾ ನೀರಿನಲಿರುವ ಮೀನಿನಂತೆ ನೀ ಪ್ರೇತವೆಂದರು,ಭೂತವೆಂದರು…! ನಾನಂತೂ ನಿನ್ನ ಬೆನ್ನು ಬಿಡೇನು ನಿನ್ನೊಮ್ಮೆ ತಿರುಗಿ ನೋಡುವಂತಿದ್ದರೆ ನಾ ಯಾವಾಗಲೂ ನಿನ್ನ ಕಣ್ಣ ಮುಂದೆ ಕಾಯ ಎರಡಾದರೇನು…? ಹೃದಯದ ಗರ್ಭದಲ್ಲಿರುವ ಪ್ರೀತಿ ಒಂದೇ ಅಲ್ಲವೇ..? ಈ ಬಿಳಿಹಾಳೆಯಲಿ ಅದೆಷ್ಟು ನಾ ತೋರ್ಪಡಿಸಲಿ ಅದೆಷ್ಟೇ ನಾ ತೋರ್ಪಡಿಸಿದರೂ ಅದು ಗುಲಗಂಜಿ ತೂಕವಷ್ಟೇ. ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ ವಿಜಯಶ್ರೀ ಹಾಲಾಡಿ ಚಿತ್ರ ಬಿಡಿಸುವ ಮರಚಳಿಗೆ ನರಳಿ ಇಬ್ಬನಿಅಡರಿ ಹಿಮಗಾಳಿಶೀತ ಹಿಡಿದುಕೊಂಡಿದೆ ಗಳಿತ ಎಲೆಯೊಂದುಹಳದಿ ಉಸಿರಿನ ಕೂಡೆಮಣ್ಣಿಗೆ ಸೋಕಿ ನಿಡಿದುನಿರಾಳ ಅಪ್ಪಿಕೊಂಡಿದೆ ಧೂಳ ಹೆಜ್ಜೆಗಳಲ್ಲಿಪಾದವೂರಿದ ಬೀಜಮುಗಿಲೂರಿನ ಕನಸರಂಗುಗಳ ಕವಿದುಕೊಂಡಿದೆ ಮೈಮುರಿದು ಆಕಳಿಸುವನಿಗೂಢ ಇರುಳು ಮಾತ್ರಬಿಟ್ಟ ಕಣ್ಣು ಬಿಟ್ಟಹಾಗೆಗೂಬೆದನಿಗೆ ಆಲಾಪಿಸಿದೆ. *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಾಂಧಿ ನಕ್ಕರು ಅಶ್ವಥ್ ಗಾಂಧಿ ನಕ್ಕರು ಗಾಂಧಿತಾತ ರಾಷ್ಟ್ರಪಿತ ತನ್ನೊಳಗೇ ತಾನು ದೈವಭಕ್ತ ಸಂಪತ್ತಿನುತ್ತುಂಗ ಎಂಜಿ ರಸ್ತೆ ಗಾಂಧಿಗೆಂದು ಮೀಸಲಂತೆ ಬೀದಿ ಬದಿಯ ಬಡವನ ಪಾಲು ಚಿತ್ರಮಂದಿರದ ಕೊನೆಯ ಸಾಲು ಕಣ್ಣರಳಿಸಿ ಕತ್ತನೆತ್ತಿ ತುಣುಕು ತುಣುಕೇ ದೃಶ್ಯವುಂಡು ಬೆರಗಾಗುವ ಬೆಪ್ಪನ ಕಂಡು ಗಾಂಧಿ, ಸುಮ್ಮನೆ ನಕ್ಕುಬಿಟ್ಟರು ಹೊಸ ಕಾಲದ ಅಭ್ಯುದಯಕೆ ಒಂದು ಸಂಜೆ ಕಾರ್ಯಕ್ರಮಕೆ ಸೆಲ್ಫಿ ತೆಗೆದುಕೊಳ್ಳಲೊಂದು ಪೊರಕೆ ತಂದು, ಕ್ಯಾಮರ ಬಂದು ಸಾವಧಾನ ಕೊಂಡುತಂದು ಗಾಂಧಿಯನ್ನು ಬಳಸಿಕೊಂಡು ನೀರು ಸಿಂಪಡಿಸಿಕೊಂಡು ಹುಸಿಬೆವರು ಬರಿಸಿಕೊಂಡು ಸಮಾಧಾನ ಭಂಗಿಯಲ್ಲಿ ಕ್ಲಿಕ್ ಕ್ಲಿಕ್ ಚಿತ್ರ ತೆಗೆವ ಹುಸಿ ಮುಸಿ ನಗುವ ಮುಡಿಸಿ ಮಸಿಯ ಬಳಿವ ನಾಯಕ ನಾಲಾಯಕ್ಕರ ನೆನೆದು ಗಾಂಧಿ, ನಕ್ಕು ಸುಮ್ಮನಾದರು ವಿಶ್ವಗುರುವು ನಮ್ಮ ಬೃಹತ್ ದೇಶ ಉದ್ದಗಲಕೂ ಇದೇ ವೀರಾವೇಶ ಕೂತರೆ ಖಂಡಾಂತರ ನಿಂತರೆ ಹಿಮಾಲಯದೆತ್ತರ ಸಮಾನತೆಗಿಲ್ಲ ಅರ್ಥ ಸನಾತನವದೊಂದೇ ತೀರ್ಥ ಫಡಫಡ ಬಾಯಿ, ಬಡಾಯಿ ದಂಡು ಗಗನ ನೌಕೆ ತೇಲ್ವುದನ್ನು ಕಂಡು ಗಾಂಧಿ, ಸುಮ್ಮನಿರದೇ ನಕ್ಕರು ಆಟಗಾತಿ ಓಡಿ ಪದಕ ತಂದರಲ್ಲಿ ಜಾತಿ ಹುಡುಕಿಕೊಂಡು ಬಂದರಿಲ್ಲಿ ಕಣ್ ಮುಚ್ಚಿ ಹಾಲು ಕುಡಿವ ಬೆಕ್ಕು ಮುಲ್ಲಾನ ಮಿಯಾಂವೇ ಇರಬೇಕು! ಬಾಂಬಿನಲ್ಲೂ ಧರ್ಮವ ಕಂಡು ನಿಂತಲ್ಲಿಯೇ ಬೆರಗುಗೊಂಡು ಗಾಂಧಿ, ನಗಲಾರದೇ ಸುಮ್ಮನಿದ್ದರು! ಬಂಗಾರದ ರಸ್ತೆಯ ಮಾತನಾಡಿ ಬಡವರ ಬುಡಮೇಲು ಮಾಡಿ ನೂರೈವತ್ತನೇ ಜಯಂತಿ ಕಂಡು ಗಾಂಧಿ, ನಕ್ಕು ಸುಮ್ಮನಾದರು ‘ಮತ್ತೆ ಹುಟ್ಟಿ ಬಾ’ ಎಂಬುದನ್ನು ಕೇಳಿ ಗಾಂಧಿ, ನಕ್ಕು ನಕ್ಕು ಸುಸ್ತಾದರು *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಜಾತ್ರೆ ಅಂಜನಾ ಹೆಗಡೆ ಬಯಲಿಗಿಳಿದ ದೇವರೆದುರು ತಲೆಬಾಗಿ ನಿಂತರೆ ಮೆದುಳಿಂದ ಮೃದುವಾಗಿ ಎದೆಗಿಳಿದ ಜಯಜಯ ಶಂಕರಿ ಜಯ ಜಗದೀಶ್ವರಿ…. ತಂಪಾದ ಹಾಡು ತಲೆಗೆ ಮೆತ್ತಿದ ಬಣ್ಣಕ್ಕೂ ಎದೆಗಿಳಿದ ಮೆದುಳಿಗೂ ಸಂಪರ್ಕವೇ ಇಲ್ಲದಂತೆ ದೇವರೇ ಮೈಮೇಲೆ ಬಂದಂತೆ ಮನಬಂದಂತೆ ಒದರುವ ಮೈಕಿನಲ್ಲಿ ಧೂಮ್ ಮಚಾಲೇ ಧೂಮ್… ತಲೆ ಕುಣಿಸುತ್ತ ನಿಂತ ತೊಟ್ಟಿಲ ಸಾಲು ತಿರುಗಿಸುವವನನ್ನು ಕಂಡವರಿಲ್ಲ ಹತ್ತಾರು ಸುತ್ತು ಸುತ್ತಿ ಒಮ್ಮೆ ಮೇಲಕ್ಕೆ ಇನ್ನೊಮ್ಮೆ ನೆಲಕ್ಕೆ…. ಪ್ರಪಂಚ ತೋರಿಸಿದ್ದೇ ಸುಳ್ಳೆನ್ನುವಂತೆ ನಿಂತುಹೋದ ತೊಟ್ಟಿಲಿಂದ ಇಳಿದ ಪೋರ ಹುಡುಕಿದ್ದು ಅಪ್ಪನ ಕಿರುಬೆರಳಿಗೆ ಹರಕೆ ತೀರಿಸಿ ಬೆವರೊರೆಸಿಕೊಳ್ಳುವವಳ ಕೈಗಂಟಿದ ಕುಂಕುಮದ ಚಿತ್ರ ಕುತ್ತಿಗೆ ಮೇಲೆ ಕುತ್ತಿಗೆಯಿಂದ ಬೆನ್ನಿಗಿಳಿದ ಕೆಂಪು ಬೆವರಿಗೆ ಬಣ್ಣದ ಘಮ ಸ್ಲೀವ್ ಲೆಸ್ ಟಿ ಶರ್ಟಿನ ಹುಡುಗನ ಕುತ್ತಿಗೆ ಮೇಲೊಂದು ತ್ರಿಶೂಲದ ಟ್ಯಾಟೂ ಘನಗಾಂಭೀರ್ಯದಿಂದ ಹಗ್ಗದ ಮೇಲೆ ನಡೆಯುತ್ತಿದ್ದಾಳೆ ಹುಡುಗಿ ಏಳುಬೀಳಿನ ಭಯವಿಲ್ಲದಂತೆ ಭವದ ಸದ್ದುಗಳಿಗೆ ಕಿವುಡಾದ ಬಾಲೆ ಹಗ್ಗದ ಮೇಲೆಯೇ ಭುವನೇಶ್ವರಿಯಾಗುತ್ತಾಳೆ ದೂರದಿಂದ ಘಂಟೆಯ ಸದ್ದು ಬೆಚ್ಚಗೆ ಎದೆಗಿಳಿಯುತ್ತಿದೆ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪದಗಳೇ ಹೀಗೆ ಜಿ.ಲೋಕೇಶ್ ಪದಗಳೇ ಹೀಗೆ ಪದಗಳೇ ಹೀಗೆ ಅಲೆಸುತ್ತವೆ ಇಂದು ಬಾ ನಾಳೆ ಬಾ ಎಂದು ಕವಿತೆಗಳನ್ನು ಕಟ್ಟಲು ಎರವಲು ಪಡೆಯಲು ಹೋಗಬೇಕಾಗಿದೆ ನಮ್ಮೂರ ಶೆಟ್ಟಿ ಬಳಿಗೆ ನನ್ನವ್ವ ಸಾಲ ಪಡೆಯಲು ಹೋಗುವಂತೆ ಬಡ್ಡಿ ಬೇಕಾದಷ್ಟು ನೀಡುತ್ತೇನೆಂದರೂ ಏನೋ ಅನುಮಾನ ಪದಗಳಿಲ್ಲಿ ಸಿಗಲೊಲ್ಲವು ಸರಿ ಕಾಯುತ್ತಿದ್ದೇನೆ ಬಾಗಿಲು ತೆರೆಯುವ ಮುನ್ನವೇ ಸರದಿಯಲ್ಲಿ ನಿಂತು ಇವತ್ತು ನಾನೇ ಮೊದಲು!! ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬೆಳಕಿನ ಬೀಜಗಳು.. ಚಂದ್ರಪ್ರಭ ಬೆಳಕಿನ ಬೀಜಗಳು.. ಪುರುಷನೆಂದರು ಪ್ರಕೃತಿಯೆಂದರು ನಾವು ತಲೆದೂಗಿದೆವು ಗಂಡೆಂದರು ಹೆಣ್ಣೆಂದರು ನಾವು ತಲೆದೂಗಿದೆವು ಅವನೆಂದರು ಅವಳೆಂದರು ನಾವು ತಲೆದೂಗಿದೆವು ತುದಿಯೆಂದರು ಮೊದಲೆಂದರು ನಾವು ತಲೆದೂಗಿದೆವು ಅಖಿಲವೆಂದರು ಅಣುವೆಂದರು ನಾವು ತಲೆದೂಗಿದೆವು ಅನಾದಿಯಿಂದ ಇದು ನಡೆದೇ ಇದೆಯಲ್ಲ ಹೊಸತೇನಿದೆ ಇದರಲ್ಲಿ!! ನಾವು ಒಡಲು ತುಂಬಿ ಹೆತ್ತು ಹೊರುತ್ತ ಬಂದಿದ್ದೇವೆ ಅಟ್ಟು ಬೇಯಿಸಿ ಹಸಿವ ನೀಗುತ್ತೇವೆ ಚಳಿ ಗಾಳಿ ಮಳೆ ಬಿಸಿಲಿಗೆ ತತ್ತರಿಸುವಾಗ ಜೀವವನು ವಾತ್ಸಲ್ಯದ ಸೆರಗಲ್ಲಿ ಕಾಪಿಡುತ್ತೇವೆ ಸೂರುಗಳಿಗೆ ಜೀವ ತುಂಬಿ ಲವಲವಿಕೆಯ ಮನೆಯಾಗಿಸುತ್ತೇವೆ ಗೋಡೆಗಳನು ಕೆಡವಿ ಸೇತುವೆ ಕಟ್ಟುತ್ತೇವೆ ಮನೆ ಅಂಗಳ ರಸ್ತೆಗಳನೆಲ್ಲ ಗುಡಿಸಿ ಅಂದದ ರಂಗೋಲಿ ಬಿಡಿಸುತ್ತೇವೆ ಬಟ್ಟೆ ಪಾತ್ರೆ ನೆಲ ಗೋಡೆ ಎಲ್ಲ ತಿಕ್ಕಿ ತೊಳೆದು ಹಸನುಗೊಳಿಸುತ್ತೇವೆ ಮನಮನದೊಳು ದೀಪ ಉರಿಸಿ ಅಲ್ಲೊಂದಿಷ್ಟು ಬೆಳಕು ಇಣುಕುವಂತೆ ಮಾಡುತ್ತೇವೆ ಮುಟ್ಟು ಬಸಿರು ಬಾಣಂತನ ಎಂಬೆಲ್ಲವುಗಳನು ಜೀವ ಕಾರುಣ್ಯದ ಕಣ್ಣಿಂದಲೇ ನಿರುಕಿಸುತ್ತೇವೆ ಅದನೆಲ್ಲ ಅಕ್ಕರೆಯಿಂದ ಒಪ್ಪಿ ಅಪ್ಪಿಕೊಳ್ಳುತ್ತೇವೆ ಕೂಸು ಕುನ್ನಿ ಮುದಿ ಜೀವಗಳು ಆರೋಗ್ಯ ಬಾಧೆಯಿಂದ ಪೀಡಿತರು ಮನೋವ್ಯಾಕುಲತೆಗೆ ಒಳಗಾದವರೆಲ್ಲ ನಮಗೆ ನೊಂದ ಜೀವಗಳಾಗಿ ಕಂಡಿವೆ ಅವರ ಸಾಂತ್ವನ ಸೇವೆಗೆ ನಮ್ಮೊಳಗಿನ ತಾಯಿ ದಾದಿ ಸದಾ ತುದಿಗಾಲಲ್ಲಿ ನಿಂತು ತುಡಿಯುತ್ತಾಳೆ ಪ್ರಕೃತಿ ಎನಿಸಿದ ಕ್ಷಣದಿಂದ ನಮ್ಮನ್ನು ಎರಡನೇ ಸಾಲಿಗೆ ದೂಡಲಾಗಿದೆ ಸಹಸ್ರಮಾನಗಳಿಂದ ನಮ್ಮನ್ನು ಹಿಡದೆಳೆದು ತೊಟ್ಟ ಬಟ್ಟೆ ಸೆಳೆದು ಅಂಗ ಅಂಗವನು ಛಿದ್ರಗೊಳಿಸಿ ಹೃದಯವನ್ನು ಬಟಾ ಬಯಲಿನಲ್ಲಿ ಬಿಕರಿಗಿಡಲಾಗಿದೆ ಆದರೂ ಮಿಡಿಯುವುದ ತೊರೆದಿಲ್ಲ ನಾವು ಹೃದಯ ತನ್ನ ಮಿಡಿತ ಮರೆತರೆ ಜಗ ನಿಶ್ಚಲವಾಗುವುದೆಂಬ ಎಚ್ಚರ ಸದಾ ನಮ್ಮನ್ನು ಪೊರೆದಿದೆ ಮನೆ ಮಕ್ಕಳು ಪಾತ್ರೆ ಪಗಡದೊಂದಿಗೆ ನಮ್ಮನ್ನು ಹಿಂಸೆ ಅತ್ಯಾಚಾರಗಳ ಭೀಬತ್ಸಕ್ಕೆ ನಿರಂತರ ಗುರಿ ಮಾಡಲಾಗಿದೆ ಸೆರಗಿನ ಮರೆಯಲ್ಲಿ ನಾವು ನಮ್ಮ ಕರುಳ ಕುಡಿಗಳನು ಪೊರೆದಿದ್ದೇವೆ ಗುಂಡು ಗೋಲಿ ಬಡಿಗೆ ಕತ್ತಿ ಖಡ್ಗಳಿಗೆ ವಿನಾಕಾರಣ ಜೀವ ತೆತ್ತ ಜತೆಗಾರ ಇಂದು ಬರುವ ನಾಳೆ ಬರುವನೆಂಬ ಹುಸಿ ಭರವಸೆಯನೆ ತುಂಬುತ್ತ ಎಳೆಯ ಜೀವಗಳ ಸಲಹಿದ್ದೇವೆ ಬೆಂಕಿ ಬಯಲು ಕಂಬಿ ಜೈಲುಗಳು ನಮ್ಮ ಕಾರುಣ್ಯದೆದುರು ಮಂಡಿಯೂರಿವೆ ಗಾಢ ಅಗಾಧ ಎಂಬ ಬಣ್ಣನೆಗೆ ಪಾತ್ರವಾಗುವ ಅಂಧಕಾರ ನಮ್ಮೊಂದು ಸೆಳಕಿನೆದುರು ನಿಲ್ಲದೆ ಸೋತು ಕಾಲ್ಕಿತ್ತಿದೆ ಈ ಊರು ಆ ಊರು ಈ ದೇಶ ಆ ದೇಶ ಎನುವ ಭೇದವೇ ಇರದೆ ಬುವಿ ಎಲ್ಲೆಡೆ ಮೆಲ್ಲಗೆ ಕುಡಿಯೊಡೆದು ಬೆಳಕು ಸೂಸಿ ನಿಧಾನವಾಗಿ ಬಿಸಿಲು ಚೆಲ್ಲುತ್ತೇವೆ ಹರಿತ್ತುವಿನಲ್ಲಿ ಜೀವ ಸಂಚಾರವಾಗುತ್ತದೆ ನೋಯಿಸುವ ನೊಂದ ಪೊರೆದ ಈರ್ಷೆಗೆ ನಿಂತ ಜೀವಗಳೆಲ್ಲ ಕೈ ಮುಂದೆ ಮಾಡುವಾಗ ನಾವು ಕೈ ತುತ್ತು ನೀಡುತ್ತೇವೆ.. ಆಗ ಎಲ್ಲ ಇಲ್ಲಗಳ ನಡುವೆ ಜಗತ್ತು ಸುಂದರವಾಗಿ ಕಾಣತೊಡಗುತ್ತದೆ ರೊಟ್ಟಿಯೆದುರು ಬಣ್ಣ ಬಣ್ಣದ ಪತಾಕೆಗಳು ಗುಡಿ ಗುಂಡಾರ ದೈವಗಳೆಲ್ಲ ಸೋತು ನೆಲ ಕಚ್ಚುತ್ತವೆ ಸಂದಿಗೊಂದಿಗಳಲ್ಲಿ ಬೆಳಕಿನ ಎಳೆ ಎಳೆ ಸೂಸಿ ಒಂದಿಷ್ಟು ಕರುಳ ಬಳ್ಳಿಯ ಬೇರಿಗೂ ತಾಕುವಾಗ ಬುದ್ಧ ಬಸವ ಬಾಬಾ.. ಕನಕ ಕಬೀರ ಏಸು ಅಕ್ಕ ಮೀರಾ ಲಲ್ಲಾ.. ಕಪ್ಪು ಕೆಂಪು ಹಸಿರು ಎಲ್ಲ ಒಂದರೋಳು ಇನ್ನೊಂದು ಬೆರೆತು ಬೆಳ್ಳನೊಂದು ಬೆಳಕು ಹೊಮ್ಮುತ್ತದೆ…. ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಗಜ಼ಲ್ ನಿನ್ನ ಕಣ್ಣಲ್ಲಿ ಕಂಡ ನೆರಳುಗಳ ಬರೆಯಲಾರೆ ಕೆನ್ನೆಯಲಿ ಮಡುವಾದ ಬಣ್ಣಗಳ ಬರೆಯಲಾರೆ ಕಡಲೇಕೆ ಕುದಿಕುದಿದು ಮರಳಿದೆ ಹೀಗೆ ಎದೆಯಾಳದ ಉಮ್ಮಳಗಳ ಬರೆಯಲಾರೆ ನಿನ್ನನ್ನು ಒಮ್ಮೆ ಸೋಕಲು ಎಂಥ ತಪನೆಯಿತ್ತು ಚಾಚಿ ಚಾಚಿ ಮರಗಟ್ಟಿದ ಬೆರಳುಗಳ ಬರೆಯಲಾರೆ ತೋಳಲ್ಲಿ ತಲೆಯಿಟ್ಟಾಗ ಎದ್ದ ಕಂಪನವೆಷ್ಟು ಬದುಕಿನ ಬದುಕಾದ ಚಣಗಳ ಬರೆಯಲಾರೆ ಬರಿಯ ಮಾತುಗಳಿಗೆ ದಕ್ಕಿದ್ದು ಏನು ‘ಜಂಗಮ’ ನುಡಿಯುಂಬರದಲ್ಲೆ ನಿಂತ ಭಾವಗಳ ಬರೆಯಲಾರೆ **********

ಕಾವ್ಯಯಾನ Read Post »

You cannot copy content of this page

Scroll to Top