ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಹುರುಪೇ ಇಲ್ಲದೆ ಬಣ್ಣಗಳ ಬಳಿದೇನು ಲಾಭ ಎದೆಯೇ ಇಲ್ಲದ ಹಾಡುಗಳ ಬರೆದೇನು ಲಾಭ ಹೊತ್ತಿದರೆ ಹೊತ್ತು ಬೆಳಗು ಮಿಂಚಂತೆ ಸಿಡಿಲಂತೆ ಬರೀ ಹೊಟ್ಟಿನ ಹೊಗೆಯಾದರೆ ಆಗಿದ್ದೇನು ಲಾಭ ವಿರೋಧಿಗಳ ಎದುರಿಸು ವಾದ, ಕರ್ಮಭೂಮಿಕೆಯಲ್ಲಿ ಅಣಕು ಬೊಂಬೆಗಳ ಸುಡುತ್ತ ಬಂತೇನು ಲಾಭ ಕುಡಿದರೆ ಕುಡಿಯಬೇಕು ಇಡೀ ಮಧು ಶಾಲೆಯನ್ನು ಸೆರೆಮುಕ್ಕ ಸೆರೆಯ ತುಟಿಗೆರೆದೇನು ಲಾಭ ಹೊತ್ತು ಹೊತ್ತಿಸು ಉರಿ ಬೆಳಗಿಸು ಹೋರು ಎಣ್ಣೆ ಬತ್ತಿ ಹಣತೆಯ ದೂರಿದರೇನು ಲಾಭ ಆಳಕ್ಕಿಳಿ ಬಗೆ ಬರೆ ಹಾಡು ಎದೆಯಲುಗುವಂತೆ ಬರೀ ನೀರ್ಗುಳ್ಳೆ ಊದುತ್ತ ಸವೆದೇನು ಲಾಭ *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಎ.ಹೇಮಗಂಗಾ ಎಲ್ಲ ಜಂಜಡಗಳ ಮರೆಸುವ ಮಾಯೆಯಿದೆ ನಿನ್ನ ನಗುವಿನಲ್ಲಿ ಎಲ್ಲ ಒತ್ತಡಗಳ ಶೂನ್ಯವಾಗಿಸುವ ಕಲೆಯಿದೆ ನಿನ್ನ ನಗುವಿನಲ್ಲಿ ನನಗೆಂದೇ ದೈವ ಬುವಿಗೆ ಕಳಿಸಿದ ಕೊಡುಗೆ ನೀನು ಮಗುವೇ… ಎಲ್ಲ ಚಿಂತೆಗಳ ಇಲ್ಲವಾಗಿಸುವ ಮೋಡಿಯಿದೆ ನಿನ್ನ ನಗುವಿನಲ್ಲಿ ಕಾಲದ ಪರಿವೆಯಿಲ್ಲದೇ ಕಾದೆ ಬರಿದಾದ ಮಡಿಲು ತುಂಬಲೆಂದು ಎಲ್ಲೆಡೆಯೂ ಮುದ ಹರಡುವ ಮುಗ್ಧತೆಯಿದೆ ನಿನ್ನ ನಗುವಿನಲ್ಲಿ ಹೆಣ್ತನಕೆ ಹಿರಿಮೆ ತಂದ ತಾಯ್ತನದ ಭಾಗ್ಯ ನನ್ನದಾಗಿದೆ ಇಂದು ಅಶಾಂತಿಯ ತೊಡೆವ ಶಾಂತಿಯ ನೆಲೆಯಿದೆ ನಿನ್ನ ನಗುವಿನಲ್ಲಿ ಕಿವಿಗಳ ತಣಿಸುತಿವೆ ನಿನ್ನ ಮೃದು ಮಧುರ ತೊದಲು ನುಡಿಗಳು ಬಳಲಿದ ಜೀವಕೆ ಬಲ ನೀಡುವ ಚೈತನ್ಯವಿದೆ ನಿನ್ನ ನಗುವಿನಲ್ಲಿ ಇನ್ನೆಂದೂ ನಾ ಏಕಾಂಗಿಯಲ್ಲ ನಿನ್ನೊಡನಾಟ ನಲಿವು ತಂದಿರಲು ಸಂಕಷ್ಟಗಳ ಇರುಳು ಕಳೆದು ಬೆಳಕು ಮೂಡಿದೆ ನಿನ್ನ ನಗುವಿನಲ್ಲಿ ಸಿರಿಸಂಪತ್ತೆಲ್ಲವೂ ಗೌಣವಾಗಿದೆ ಅಮೂಲ್ಯ ನಿಧಿಯೇ ನೀನಾಗಿರೆ ಆ ಸ್ವರ್ಗವನೇ ಧರೆಗಿಳಿಸಿದ ಚಮತ್ಕಾರವಿದೆ ನಿನ್ನ ನಗುವಿನಲ್ಲಿ *************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹೇ ರಾಮ್ ಡಿ.ಎಸ್.ರಾಮಸ್ವಾಮಿ ಅವತ್ತು ಆ ದುರುಳನ ಗುಂಡಿಗೆಹೇ ರಾಂ ಎನ್ನುತ್ತಲೇ ಗುಂಡಿಗೆಯಿತ್ತವನನ್ನೂಅನುಮಾನಿಸಿ ಅವಮಾನಿಸಿದವರುಮತ್ತೀಗ ವಿಝೃಂಭಣೆಯ ತುರೀಯದಲ್ಲಿಗತದ ನೋವುಗಳನ್ನರಿಯದೇ ಬರಿದೇಸ್ವಚ್ಛತೆಯ ಮಾತ ಭಜನೆ ಮಾಡುತ್ತಿದ್ದಾರೆ, ಪೊರಕೆ ಹಿಡಿದಂತೆ ಆ ಅವರ ಭಂಗಿಕುಡಿಸಿ ಅಮಲೇರಿಸುವ ಮಾತುನಾಳೆಗಿರಲಿ ಇವತ್ತಿಗೇ ನಕಲಿ ಸಾಬೀತಾಗಿನಿಜಕ್ಕೂ ಕೊಳೆ ತೆಗೆಯ ಹೊರಟವರೆಲ್ಲರಿಗೂಆಘಾತ, ಸಂವಿಧಾನದ ವಿಧಿಗೂ ವಿಧ ವಿಧದಮರು ಜೋಡಣೆಯ ವ್ಯಾಖ್ಯಾನ ಗಾಂಧಿ ಎಂದರೆ ಅವನೊಬ್ಬನೇ ತಾತಈ ದೇಶಕ್ಕಷ್ಟೇ ಅಲ್ಲ, ಅವನು ವಿಶ್ವ ವಿಖ್ಯಾತ.ಬೋಂಗು ಬಿಡುವವರಿಗೆ ಸತ್ಯ ಬೇಕಿರುವುದಿಲ್ಲಅವರದೇನಿದ್ದರೂ ಮನ ರಂಜನೆಯದೇ ಗುರಿಚಪ್ಪಾಳೆಗೆ ಖುಷಿಪಡುವವರಿಗೆ ಬೌದ್ಧಿಕತೆಯಅಗತ್ಯಕ್ಕಿಂತಲೂ ದಿರಿಸಿನದೇ ಸದಾ ಧ್ಯಾನ ತುಂಡುಡುಗೆಯ ಈ ಬಾಪು ಗರೀಬನೇನಲ್ಲಹುಟ್ಟುವಾಗಲೇ ಬಾಯಲ್ಲಿ ಚಿನ್ನದ ಚಮಚಪದವಿಗೆಂದು ವಿದೇಶಕ್ಕೆ ಹಾರಿದ್ದರೂ ಅವನಗಮನವಿದ್ದದ್ದೇ ಅಸಮಾನತೆಯ ಹದ್ದಿನ ಮೇಲೆರಗಿ ಸಾಧಿಸಿದ ವಿಜಯಕ್ಕೆ ಹರತಾಳ ಬಂಡವಾಳಸತ್ಯಕ್ಕೆ ಆಗ್ರಹಿಸುವುದಷ್ಟೇ ನಿಯತ ಕಾಯಕ ಹುತಾತ್ಮನಾಗುವನು ಈ ದೇಶದ ಸಿಪಾಯಿಪರದೇಶಕ್ಕವನು ಯಾವತ್ತಿಗೂ ಬದ್ಧ ವೈರಿಈ ಇಂಥ ಗಾಂಧಿಗೇ ಶತೃವೆನ್ನುವವನುಪರದೇಶಿಯಲ್ಲದೇ ದೇಶೀಯ ಹೇಗಾದಾನುಅಂದರೆ ಮತ್ತೆ ಬಿಚ್ಚುತ್ತಾರೆ ಅಂತೆ ಕಂತೆಯ ಕತೆಯಲ್ಲಷ್ಟೇ ಶ್ರೀ ರಾಮನದೂ ಕಲ್ಪನೆಯ ರಾಜ್ಯ!! ***********************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ರುಕ್ಮಿಣಿ ನಾಗಣ್ಣವರ ನೀ ಬರುವ ದಾರಿಯಲಿ ಕಂಗಳಿರಿಸಿ ಕಾಯುತಿರೆ ಕಾತುರದಿ ಸಂಧಿಸಲು ಬೇಗ ಬಾ ಕಾಣದ ನಿನ್ನನು ಹೊಳೆದಂಡೆಯೂ ಕೂಗುತಿರೆ ದಡಬಡಿಸಿ ಸಂತೈಸಲು ಬೇಗ ಬಾ ತುಟಿ ಮೇಲೆ ತರದ ಥರಥರ ಹೊಸಥರದ ಯೋಚನೆ ನೂರು ಪಟ್ಟಿ ಮಾಡಿರುವೆ ಎದುರು ಬದುರು ಕೂತು ಚರ್ಚಿಸಿ ನಾಳೆಗೊಂದ ಹೊಸಗನಸ ನೇಯಲು ಬೇಗ ಬಾ ಹೊತ್ತುಗಳೆಯಲರಿಯದ ಇಂದ್ರಿಯಗಳು ವಿರಹದಾಗ್ನಿಯಲಿ ಬೆಂದು ಚಡಪಡಿಸುತಿರೆ ಅಂಗೈಲ್ಹಿಡಿದ ಹರಳುಗಳು ಸಜೆ ಅನುಭವಿಸುತಿವೆ ಬಿಡುಗಡೆಗೊಳಿಸಲು ಬೇಗ ಬಾ ಹೃದಯಗೂಡಿನ ಬೆಚ್ಚನೆ ಭಾವಗಳು ನಿನಗಾಗಿ ಹಪಹಪಿಸಿ ಆತಂಕದಿ ತಲ್ಲಣಿಸುತಿರೆ ಎದೆಗೆದೆಯ ಬೆಸೆದು ತುಟಿಗೆ ತುಟಿ ಜಡಿದು ನನ್ನನ್ನೇ ಲೂಟಿ ಮಾಡಲು ಬೇಗ ಬಾ ಇರುಳ ದಾರಿಯಲಿ ಸುರಿದೊಲವ ಬೆಳಕ ತೊರೆದು ಹೋಗದಿರು ಕಡುವಿರಹ ಸುಡುತಲಿರೆ ‘ರುಕ್ಮಿಣಿ’ಯ ಒಂಟಿಹೆಜ್ಜೆಗೂ ನಿತ್ರಾಣ ಹೆಗಲಿಗ್ಹೆಗಲ ಜೋಡಿಸಿ ಕಾಲ ಸರಿಸಲು ಬೇಗ ಬಾ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಎದೆಕದದ ಅಗುಳಿ ತೆಗೆದಂತೆ ಅದೊಂದು ಹಾಡು ಮತ್ತಕಡಲಲಿ ಮುಳುಗಿದಂತೆ ಅದೊಂದು ಹಾಡು ಚಿಟ್ಟೆಗಳ ಹಿಂಬಾಲಿಸುತ್ತ ಪರವಶ ಹುಡುಗ ಪುಲಕಗಳೆ ಬೊಗಸೆಗಿಳಿದಂತೆ ಅದೊಂದು ಹಾಡು ಸಂತೆಯ ಝಗಮಗಗಳಿಗೆ ಕಣ್ಣು ತೆತ್ತು ಪೋರಿ ಬಯಕೆಗಳಿಗೆ ಹರಯ ಬಂದಂತೆ ಅದೊಂದು ಹಾಡು ಕೋಲೂರಿ ತಡವರಿಸಿ ನಡೆದು ಇಳಿಸಂಜೆಗೆ ನೆನಪಮಡುವಲಿ ಮಿಂದಂತೆ ಅದೊಂದು ಹಾಡು ಸವೆದ ಜಾಡುಗಳ ಸವೆಸಿ ತಿರುಗಣಿ ಬದುಕು ‘ವಿಶು’ ನಡುವೆ ಕಾಡುವ ಕೊಳಲುಲಿಯಂತೆ ಅದೊಂದು ಹಾಡು ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸುಜಾತಾ ರವೀಶ್ ಏಕೋ ತಿಳಿಯೆ  ವಿಷಾದದಲೆಗಳಲಿ ಮುಳುಗಿಬಿಟ್ದಿದೆ ಕವಿತೆ  ಏನೋ ಅರಿಯೆ ಅಂತರಂಗದಾಳದಲಿ ಹುದುಗಿಬಿಟ್ಠಿದೆಕವಿತೆ  ಸ್ಪರ್ಧೆಗಳ ಪ್ರವಾಹದ ಹುಚ್ಚುಹೊಳೆಯಲಿ ಕೊಚ್ಚಿಹೋಯ್ತೇಕೆ ಕವಿತೆ ? ಪರಸ್ಪರ ಪ್ರಶಂಸೆ ಮೆಚ್ಚುವಬ್ಬರದಲಿ ಮುಚ್ಚಿಬಿಟ್ಟಿದೆ ಕವಿತೆ  ಮನದಾಳದ ಭಾವಾಭಿವ್ಯಕ್ತಿ ಎಂಬುದೇ ಮರೆಸಿಬಿಟ್ಟಿದೆ ಕವಿತೆ  ಸವಾಲುಗಳ ಎದುರಿಸುತ ಯಶವನೇ ಮೆರೆಸಿಬಿಟ್ಟಿದೆ ಕವಿತೆ  ಪರರ  ನಿರ್ಣಯಗಳೆಂಬ ರಾಜಕೀಯದಲಿ ಸೋತುಬಿಟ್ದಿದೆ ಕವಿತೆ  ಪಕ್ಷಪಾತಗಳ ಸ್ಮಶಾನದಲಿ ಹೂತು ಹೋಗಿಬಿಟ್ಟಿದೆ ಕವಿತೆ ವಿಜಯವ ಅರಸುತಲಿ ಬಂಧನಗಳ ಮೀರಿಬಿಟ್ಟಿದೆ ಕವಿತೆ  ಸುಜಿಹೃದಯವ ಉರಿಸುತಲಿ ಚೈತನ್ಯ ಹೀರಿಬಿಟ್ಟಿದೆ ಕವಿತೆ ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಆಯುಧಕ್ಕಿಂತ ಹರಿತ ರಾಜು ದರ್ಗಾದವರ ಮೊನ್ನೆತಾನೆ ಗೊತ್ತಾಯ್ತು ಕವಿತೆಗಳು ಆಯುಧಕ್ಕಿಂತ ಹರಿತವೆಂದು! ಸಮಾಜಕ್ಕೆ ಅಪಾಯಕಾರಿಯೆಂದೀಗ ಘೋಷಿಸಿ ಜೈಲಿಗಟ್ಟಿದ್ದಾರೆ ಕವಿತೆಗಳನ್ನು ಬರೆದವನ. ಕವಿ ಸಿಕ್ಕಿರಬಹುದು ಆದರೆ ಆ ಕವಿತೆ ಅದೆಲ್ಲಿಯವರೆಗೂ ತಲುಪಿದಿಯೋ? ನಿಮ್ಮಲ್ಲಿಯೂ ಅಂತ ಕವಿತೆಯಿದ್ದರೆ ಪಸರಿಸಬೇಡಿ. ಸುಟ್ಟುಬಿಡಿ…! ಅವರಿಗೂ ಬೇಕಾಗಿದ್ದು ಅದೇ..!! ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸುಜಾತಾ ಲಕ್ಮನೆ ಧುಮ್ಮಿಕ್ಕಿ ಇಳಿದು ಬಾ ಜಲಧಾರೆಯಂತೆ ಕರೆವೆ ನನ್ನೊಳಗೆ ಒತ್ತಾಸೆಯಾಗಿ ನಿಲ್ಲು ಬಾ ನದಿ ದಂಡೆಗಳಂತೆ ಹರಿವೆ ನಿನ್ನೊಳಗೆ ನನ್ನ ನೆರಿಗೆ ನೆರಿಗೆಯೊಳಗೂ ಹುದುಗಿ ಹೀಗೆ ಕಾಡುವುದೇಕೆ ಚಿತ್ತಾರದಂಚಿನ ಸೆರಗಾಗಿ ಬೀಸಿ ಬಾ ತೊನೆವೆ ತೆಕ್ಕೆಯೊಳಗೆ ಮುಸ್ಸಂಜೆ ಮಾಧುರ್ಯ ಮಗುಚಿ ಬಿದ್ದಿದೆ ಇಲ್ಲಿ ನೀನಿಲ್ಲದೆ ಸಂಪ್ರೀತಿ ಕೊಡವ ಹೊತ್ತು ಬಾ ಮಧು ಸುರಿವೆ ಒಳಗೊಳಗೆ ಸುರಚಾಪದಲ್ಲೇನಿಹುದು ಬಿಡು ಅಂಥ ಬಣ್ಣ ಬಣ್ಣದ ಆಟೋಪ ರಂಗಿನೋಕುಳಿಯ ಎರಚಿ ಬಾ ಆಡೋಣವೆ ಕಣ್ ಕಣ್ಣೊಳಗೆ ಜೀವ ಸೊಬಗನ್ನೆಲ್ಲ ಒಂದೇ ಗುಕ್ಕಿನಲ್ಲಿ ಸೂರೆಗೊಂಡರೆ ಸಾಕೆ ಗುಟುಕು ಗುಟುಕಾಗಿ ಹೀರು ಬಾ ಉಸಿರಾಗುವೆ ಎದೆಯೊಳಗೆ ಪ್ರೀತಿಗೊಂದಿಷ್ಟು ಬದ್ಧತೆಯ ಬೆರೆಸಿ ಸಂತಸದಿ ಸಾಗೋಣ ಮುಂದೆ ಮೌನದಲೂ ಮಾತಾಗಿ ಮತ್ತೇರಿ ಬಾ ಮುತ್ತಾಗುವೆ ಮನದೊಳಗೆ “ಸುಜೂ” ಳ ಪರಮ ಸುಖದ ಕನಸ ಪರಿಯ ಬಣ್ಣಿಸಲೆಂತು ಹೇಳು ಪರಿ ಪರಿಯಲಿ ಬಯಸಿ ಒಲಿದೊಲಿದು ಬಾ ಪಲ್ಲವಿಸುವೆ ಬಾಳೊಳಗೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹಮ್ಮು ಬಿ.ಎಸ್.ಶ್ರೀನಿವಾಸ್ ಬಲ್ಲವನೆಂಬ ಭ್ರಾಮಕ ಹಮ್ಮು ತಲೆತಿರುಗಿಸುವ ಅಮಲು ಏನೂ ಅರಿಯದ ಪಾಮರನ ಪ್ರಾಮಾಣಿಕ ಅಳಲು ಅಮಾಯಕತ್ವವೆ ಮೇಲು ಅಗ್ಗದ ಉಪದೇಶಕ್ಕಿಂತ ನಡೆದು ತೋರಿಪುದು ಮೇಲು ನಿಜಸಾಧಕರಿಗೆ ಸವಾಲು ಸಲ್ಲದು, ನಾ ಕಂಡಿದ್ದೇ ಸತ್ಯವೆಂಬುದು ಅಹಮಿಕೆ ಡೌಲು ಬಲ್ಲವರು ಹೇಳುವರು ಸತ್ಯ ಒಂದೇ ಆದರೂ ಧೃಷ್ಟಿಕೋನ ನೂರಾರು ಹಿಮಾಲಯದ ಶಿಖರಕ್ಕೂ ಏರುವ ದಾರಿ ಹಲವಾರು ಮಾತಿನೀಟಿಯಲಿ ಪರರ ಘಾತಿಸುತ ಸಮನಾರಿಲ್ಲ ಎನಗೆಂದು ಬಿಂಕದಿ ಮೆರೆದು ಬೀಗಿದರೆ ಮೆಚ್ಚುವನೆ ಪರಮಾತ್ಮನು ಮೇಲೇರಿದರೆ ಕೆಳಗಿನದು ಕುಬ್ಜವಾಗುವುದು ಸಹಜ ಕೆಳಗಿರುವವರ ಕೈಹಿಡಿದು ಧನ್ಯತೆ ಪಡೆವವ ನಿಜ ಮನುಜ *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸಮಬಾಳು ಸಹಬಾಳ್ವೆ ಸಮತೆಯ ರೀತಿ ಗಣತಂತ್ರ ವೆಂದರೆ ಶಾಂತಿ ಸಹಿಷ್ಣುತೆ ಸಹನೆ ಪ್ರೀತಿ ಗಣತಂತ್ರವೆಂದರೆ ಪಾರತಂತ್ರ್ಯದ ಕತ್ತಲು ಅಳಿದರಷ್ಟೇ ಸಾಕೇ ಸ್ವಯಮಾಡಳಿತ-ಸಂವಿಧಾನದ ಕ್ರಾಂತಿ ಗಣತಂತ್ರವೆಂದರೆ ಎಷ್ಟೊಂದು ವೇಷ ಭಾಷೆ ಸಂಸ್ಕೃತಿ ವೈವಿಧ್ಯಗಳು ಎಲ್ಲರೆದೆ ಹೂಗಳನು ಪೋಣಿಸುವ ನೀತಿ ಗಣತಂತ್ರವೆಂದರೆ ಸಮಾನ ಆಶೋತ್ತರಗಳು ಸುರಾಜ್ಯದ ಕನಸು ಎಲ್ಲರ ಮುಗಿಲುಗಳ ವಿಸ್ತರಿಸುವ ಪ್ರಣತಿ ಗಣತಂತ್ರವೆಂದರೆ ಹೊರಗಿನ ಶತ್ರುಗಳ ಜೊತೆಗೆ ಒಳಗಿನ ವಿಕೃತಿಗಳು ಹುಸಿಗಳ ಮೀರುವ ನಿಜ ಬದುಕಿನ ಕಾಂತಿ ಗಣತಂತ್ರವೆಂದರೆ ನಮ್ಮ ರಾಷ್ಟ್ರ ನಮ್ಮ ಜೀವ ಭಾವ ಸದಾ ಜಾಗೃತ ಎಲ್ಲ ಸ್ವರಗಳನು ಬೆಸೆಯುವ ಸಮಶ್ರುತಿ ಗಣತಂತ್ರವೆಂದರೆ *************** ಡಾ.ಗೋವಿಂದ ಹೆಗಡ ೆ

ಕಾವ್ಯಯಾನ Read Post »

You cannot copy content of this page

Scroll to Top