ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಕುರುಡು ಕಾಂಚಾಣ ಸುಜಾತಾ ರವೀಶ್ ಕುರುಡು ಕಾಂಚಾಣ ಬೇಂದ್ರೆಯವರ ಕುರುಡು ಕಾಂಚಾಣ ಸಾಮಾಜಿಕ ಅನಿಷ್ಟವನ್ನು ವೈಭವೀಕರಿಸುವ ದೃಶ್ಯದಲ್ಲಿ ಆ ಕರಾಳತೆಯನ್ನು ಕಟ್ಟಿಕೊಡುವ ಒಂದು ಅತ್ಯಂತ ಶಕ್ತಿಯುತ ಪ್ರಯತ್ನ .ಹಣದ ದಾಹ ಎಂಬ ಪಿಶಾಚಿಯ ಯಾವ ರೀತಿ ತನ್ನ ಕ್ರೂರತೆಯನ್ನು ತೋರಿಸುತ್ತದೆ ಹೇಗೆ ಅದಕ್ಕೆ ಕೊಂಚವೂ ದಯವಿಲ್ಲ ಎಂಬುದನ್ನು ಕವಿಯ ಪದಗಳು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತದೆ ಆ ಭೀಭತ್ಸ ತೆಯು ಮೈ ಝುಮ್ ಎನ್ನುವಂತೆ ಮಾಡುತ್ತದೆ .ಬಾಣಂತಿ ಎಲುಬಿನ ಬಿಳುಪಿನ ಕಿರು ಗೆಜ್ಜೆ ,ಸಣ್ಣ ಕಂದಮ್ಮಗಳ ಕಣ್ಣಿನ ಕವಡೆ, ಬಡವರ ಹೊಟ್ಟೆಯ ಸಂಕಟದುರಿಯ ಪಂಜು ಅಬ್ಬಾ! ಕವಿಯ ಕಲ್ಪನೆಗೆ ಕವಿ ಕಲ್ಪನೆಯೇ ಸಾಟಿ . ಒಂದೊಂದು ವಿವರವೂ ಓದುಗನಲ್ಲಿ ಸುಪ್ತವಾಗಿರುವ ಯಾವುದೋ ಒಂದು ಭಾವನೆಯನ್ನು ಕೆಣಕುತ್ತದೆ ಅವನನ್ನೇ ಕಾವ್ಯದ ಅಂಗವನ್ನಾಗಿ ಮಾಡುತ್ತದೆ .ಪದ್ಯ ವಿಡೀ ಕುರುಡು ಕಾಂಚಾಣದ ಗೆಜ್ಜೆಯ ಕುಣಿತದ ಸದ್ದು ಓದುಗನ ಕಿವಿಗಳಲ್ಲಿ ಅನುರಣಿಸುತ್ತಿರುತ್ತದೆ ಮತ್ತು ಪದ್ಯ ಗೆಲ್ಲುವುದು ಅಲ್ಲೇ .ಹಣದ ಝಣಝಣ ಮನೆಗಳ ಮಹಡಿಗಳಲ್ಲಿ ನಾಟ್ಯ ವಾಡುತ್ತದೆ ಗುಡಿಗಳಲ್ಲಿ ಗಣಗಣಿಸುತ್ತದೆ ಮತ್ತುಅಂಗಡಿಗಳಲ್ಲಿಯೂ ಅದರದೇ ಕಾರುಬಾರು ಎಂದು ವರ್ಣಿಸುತ್ತಾ ಕವಿ ಕಟ್ಟಕಡೆಯಲ್ಲಿ ಎಂದು ಹಣ ಗೆಲ್ಲಲಾಗುವುದಿಲ್ಲ ಎಷ್ಟು ದಿನ ಕುಣಿದೀತು? ಒಂದಲ್ಲ ಒಂದು ದಿನ ಅಂಗಾತವಾಗಿ ಬೀಳಲೇಬೇಕು. ಆಗ ಅದನ್ನು ಮೇಲೆತ್ತಲು ಮಾನವೀಯತೆಯೇ ಬರಬೇಕು ಎಂದು ಸೂಚ್ಯವಾಗಿ ತಿಳಿಸುತ್ತಾರೆ . ಇಷ್ಟು ದಿನಗಳಾದರೂ ಈ ಕವನದ ಜನಪ್ರಿಯತೆ ಕಡಿಮೆಯಾಗಿಲ್ಲ ಎಂಬುದು ಕುರುಡು ಕಾಂಚಾಣಕ್ಕೂ ಕವಿ ಭಾವಕ್ಕೂ ಇರುವ ಸಂಬಂಧದ ದ್ಯೋತಕವೇ? ಕುರುಡು ಕಾಂಚಾಣಾ ಕುಣಿಯುತಲಿತ್ತು | ಕಾಲಿಗೆ ಬಿದ್ದವರ ತುಳಿಯುತಲಿತ್ತೋ || ಕುರುಡು ಕಾಂಚಾಣಾ || ಬಾಣಂತಿಯೆಲುಬ ಸಾ- ಬಾಣದ ಬಿಳುಪಿನಾ ಕಾಣದ ಕಿರುಗೆಜ್ಜೆ ಕಾಲಾಗ ಇತ್ತೋ; ಸಣ್ಣ ಕಂದಮ್ಮಗಳ ಕಣ್ಣೀನ ಕವಡಿಯ ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ; ಬಡವರ ಒಡಲಿನ ಬಡಬಾsನಲದಲ್ಲಿ ಸುಡು ಸುಡು ಪಂಜು ಕೈಯೊಳಗಿತ್ತೋ; ಕಂಬನಿ ಕುಡಿಯುವ ಹುಂಬ ಬಾಯಿಲೆ ಮೈ- ದುಂಬಿದಂತುಧೋ ಉಧೋ ಎನ್ನುತಲಿತ್ತೋ; ಕೂಲಿ ಕುಂಬಳಿಯವರ ಪಾಲಿನ ಮೈದೊಗಲ ಧೂಳಿಯ ಭಂಡಾರ ಹಣೆಯೊಳಗಿತ್ತೋ; ಗುಡಿಯೊಳಗೆ ಗಣಣ, ಮಾ ಹಡಿಯೊಳಗೆ ತನನ, ಅಂ- ಗಡಿಯೊಳಗೆ ಝಣಣಣ ನುಡಿಗೊಡುತಿತ್ತೋ; ಹ್ಯಾಂಗಾರೆ ಕುಣಿಕುಣಿದು ಮಂಗಾಟ ನಡೆದಾಗ ಅಂಗಾತ ಬಿತ್ತೋ, ಹೆಗಲಲಿ ಎತ್ತೋ. ಅಂಬಿಕಾತನಯದತ್ತ… *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪತ್ನಿಯ ದುಗುಡ ಮಾಲತಿ ಹೆಗಡೆ ಕತ್ತು ಚಾಚಿಕಣ್ಣು ಹಾಯುವವರೆಗೂ ನೋಡಿದರೂ ನೀ ಬರಲಿಲ್ಲ ಹೊರೆಗೆಲಸಗಳು ಮುಗಿದು ಕತ್ತಲಾವರಿಸಿದರೂ ನೀ ಬರಲಿಲ್ಲ ಸಂಜೆಗೊಂದಿಷ್ಟು ದೂರದ ಸಮುದ್ರತೀರದಲಿ ವಿಹರಿಸಬೇಕಿತ್ತು ಆಟ ಪಾಟಗಳೆಲ್ಲ ಮುಗಿಸಿ ಮಕ್ಕಳು ಮಲಗಿದರೂ ನೀ ಬರಲಿಲ್ಲ ಕಂಬನಿದುಂಬಿ ನಾಳೆಯಡುಗೆಗೆ ಖಾಲಿ ಡಬ್ಬಿಗಳ ತಡಕಾಡುತ್ತಿರುವೆ ಅಳಿದುಳಿದಿದ್ದರಲ್ಲೇ ಮಾಡಿದ ಅಡುಗೆ ಆರಿದರೂ ನೀ ಬರಲಿಲ್ಲ ಸಾಲ ಕೊಟ್ಟವರಿಗೆ ಅವಮಾನ ನುಂಗುತ್ತ ತಾರಮ್ಮಯ್ಯ ಆಡಿಸಿದೆ ನೀಲ ನಭದಿ ಚಂದಿರ ನನ್ನನ್ನು ಅಣಕಿಸಿದರೂ ನೀ ಬರಲಿಲ್ಲ ಮದಿರೆಗೆ ಮರುಳಾದವನಿಗೆ ಮಡದಿಯ ನೆನಪು ಕಿಸೆ ಬರಿದಾದಾಗ ಮೈಮುದುಡಿ, ಕಣ್ಣಿಂಗಿ, ಮನಸು ನುಗ್ಗಾದರೂ ನೀ ಬರಲಿಲ್ಲ ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕೊರಳು ಬಿಗಿದ ಪ್ರೀತಿ ತುಳಸಿ ಭಟ್ (ಸಿಂಧು ಭಾರ್ಗವ್ ಬೆಂಗಳೂರು) ಮರಳ ಮೇಲೆ ಗೆರೆಯ ಗೀಚಿ ನಿನ್ನ ಹೆಸರ ಬರೆದೆನು ಬಳಿಗೆ ಬಂದು ಏನು ಎಂದು ನೋಡಬಾರದೇ? ಪ್ರೀತಿಯೀಗ ಮೊಳಕೆಯೊಡೆದು ರಕುತದಲ್ಲಿ ಬೆರೆತಿದೆ ಸನಿಹ ನಿಂತು ಮೊಗವ ನೋಡಿ ಕೇಳಬಾರದೇ? ಎತ್ತ ಹೋದೆ ಬರುವೆ ಎಂದು ಮತ್ತೆ ಕಾಣದೂರಿಗೆ ಸಂಜೆ ಸೂರ್ಯ ಅಳುತ ಕರಗಿ ಕಡಲ ಸೇರಿದೆ ಅಲೆಗಲೆಲ್ಲ ಕೆಂಪುಗಟ್ಟಿ ನೊಂದು ಮೂಕವಾಗಿವೆ ಬಂಡೆ ಮೇಲೆ ಬಡಿದು ಬಡಿದು ಹಿಂದೆ ತಿರುಗಿವೆ ನಿನ್ನ ನೆರಳ ಹೋಲುವಂತ ಪಿಂಡ ರೂಪುಗೊಂಡಿದೆ ಹೆಸರು ಇಡಲು ನೀನು ಇಂದು ಬರಲೆ ಬೇಕಿದೆ ಕಾದು ಕುಳಿತೆ ತಿಳಿಗಾಳಿಯೊಂದು ಸುರುಳಿ ಸುತ್ತಿಕೊಂಡಿತು ಕೊರಳು ಬಿಗಿದು ಪ್ರೀತಿ ಹೆಸರ ಉಸಿರು ಕಟ್ಟಿಸಿತು *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಹುರುಪೇ ಇಲ್ಲದೆ ಬಣ್ಣಗಳ ಬಳಿದೇನು ಲಾಭ ಎದೆಯೇ ಇಲ್ಲದ ಹಾಡುಗಳ ಬರೆದೇನು ಲಾಭ ಹೊತ್ತಿದರೆ ಹೊತ್ತು ಬೆಳಗು ಮಿಂಚಂತೆ ಸಿಡಿಲಂತೆ ಬರೀ ಹೊಟ್ಟಿನ ಹೊಗೆಯಾದರೆ ಆಗಿದ್ದೇನು ಲಾಭ ವಿರೋಧಿಗಳ ಎದುರಿಸು ವಾದ, ಕರ್ಮಭೂಮಿಕೆಯಲ್ಲಿ ಅಣಕು ಬೊಂಬೆಗಳ ಸುಡುತ್ತ ಬಂತೇನು ಲಾಭ ಕುಡಿದರೆ ಕುಡಿಯಬೇಕು ಇಡೀ ಮಧು ಶಾಲೆಯನ್ನು ಸೆರೆಮುಕ್ಕ ಸೆರೆಯ ತುಟಿಗೆರೆದೇನು ಲಾಭ ಹೊತ್ತು ಹೊತ್ತಿಸು ಉರಿ ಬೆಳಗಿಸು ಹೋರು ಎಣ್ಣೆ ಬತ್ತಿ ಹಣತೆಯ ದೂರಿದರೇನು ಲಾಭ ಆಳಕ್ಕಿಳಿ ಬಗೆ ಬರೆ ಹಾಡು ಎದೆಯಲುಗುವಂತೆ ಬರೀ ನೀರ್ಗುಳ್ಳೆ ಊದುತ್ತ ಸವೆದೇನು ಲಾಭ *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಎ.ಹೇಮಗಂಗಾ ಎಲ್ಲ ಜಂಜಡಗಳ ಮರೆಸುವ ಮಾಯೆಯಿದೆ ನಿನ್ನ ನಗುವಿನಲ್ಲಿ ಎಲ್ಲ ಒತ್ತಡಗಳ ಶೂನ್ಯವಾಗಿಸುವ ಕಲೆಯಿದೆ ನಿನ್ನ ನಗುವಿನಲ್ಲಿ ನನಗೆಂದೇ ದೈವ ಬುವಿಗೆ ಕಳಿಸಿದ ಕೊಡುಗೆ ನೀನು ಮಗುವೇ… ಎಲ್ಲ ಚಿಂತೆಗಳ ಇಲ್ಲವಾಗಿಸುವ ಮೋಡಿಯಿದೆ ನಿನ್ನ ನಗುವಿನಲ್ಲಿ ಕಾಲದ ಪರಿವೆಯಿಲ್ಲದೇ ಕಾದೆ ಬರಿದಾದ ಮಡಿಲು ತುಂಬಲೆಂದು ಎಲ್ಲೆಡೆಯೂ ಮುದ ಹರಡುವ ಮುಗ್ಧತೆಯಿದೆ ನಿನ್ನ ನಗುವಿನಲ್ಲಿ ಹೆಣ್ತನಕೆ ಹಿರಿಮೆ ತಂದ ತಾಯ್ತನದ ಭಾಗ್ಯ ನನ್ನದಾಗಿದೆ ಇಂದು ಅಶಾಂತಿಯ ತೊಡೆವ ಶಾಂತಿಯ ನೆಲೆಯಿದೆ ನಿನ್ನ ನಗುವಿನಲ್ಲಿ ಕಿವಿಗಳ ತಣಿಸುತಿವೆ ನಿನ್ನ ಮೃದು ಮಧುರ ತೊದಲು ನುಡಿಗಳು ಬಳಲಿದ ಜೀವಕೆ ಬಲ ನೀಡುವ ಚೈತನ್ಯವಿದೆ ನಿನ್ನ ನಗುವಿನಲ್ಲಿ ಇನ್ನೆಂದೂ ನಾ ಏಕಾಂಗಿಯಲ್ಲ ನಿನ್ನೊಡನಾಟ ನಲಿವು ತಂದಿರಲು ಸಂಕಷ್ಟಗಳ ಇರುಳು ಕಳೆದು ಬೆಳಕು ಮೂಡಿದೆ ನಿನ್ನ ನಗುವಿನಲ್ಲಿ ಸಿರಿಸಂಪತ್ತೆಲ್ಲವೂ ಗೌಣವಾಗಿದೆ ಅಮೂಲ್ಯ ನಿಧಿಯೇ ನೀನಾಗಿರೆ ಆ ಸ್ವರ್ಗವನೇ ಧರೆಗಿಳಿಸಿದ ಚಮತ್ಕಾರವಿದೆ ನಿನ್ನ ನಗುವಿನಲ್ಲಿ *************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹೇ ರಾಮ್ ಡಿ.ಎಸ್.ರಾಮಸ್ವಾಮಿ ಅವತ್ತು ಆ ದುರುಳನ ಗುಂಡಿಗೆಹೇ ರಾಂ ಎನ್ನುತ್ತಲೇ ಗುಂಡಿಗೆಯಿತ್ತವನನ್ನೂಅನುಮಾನಿಸಿ ಅವಮಾನಿಸಿದವರುಮತ್ತೀಗ ವಿಝೃಂಭಣೆಯ ತುರೀಯದಲ್ಲಿಗತದ ನೋವುಗಳನ್ನರಿಯದೇ ಬರಿದೇಸ್ವಚ್ಛತೆಯ ಮಾತ ಭಜನೆ ಮಾಡುತ್ತಿದ್ದಾರೆ, ಪೊರಕೆ ಹಿಡಿದಂತೆ ಆ ಅವರ ಭಂಗಿಕುಡಿಸಿ ಅಮಲೇರಿಸುವ ಮಾತುನಾಳೆಗಿರಲಿ ಇವತ್ತಿಗೇ ನಕಲಿ ಸಾಬೀತಾಗಿನಿಜಕ್ಕೂ ಕೊಳೆ ತೆಗೆಯ ಹೊರಟವರೆಲ್ಲರಿಗೂಆಘಾತ, ಸಂವಿಧಾನದ ವಿಧಿಗೂ ವಿಧ ವಿಧದಮರು ಜೋಡಣೆಯ ವ್ಯಾಖ್ಯಾನ ಗಾಂಧಿ ಎಂದರೆ ಅವನೊಬ್ಬನೇ ತಾತಈ ದೇಶಕ್ಕಷ್ಟೇ ಅಲ್ಲ, ಅವನು ವಿಶ್ವ ವಿಖ್ಯಾತ.ಬೋಂಗು ಬಿಡುವವರಿಗೆ ಸತ್ಯ ಬೇಕಿರುವುದಿಲ್ಲಅವರದೇನಿದ್ದರೂ ಮನ ರಂಜನೆಯದೇ ಗುರಿಚಪ್ಪಾಳೆಗೆ ಖುಷಿಪಡುವವರಿಗೆ ಬೌದ್ಧಿಕತೆಯಅಗತ್ಯಕ್ಕಿಂತಲೂ ದಿರಿಸಿನದೇ ಸದಾ ಧ್ಯಾನ ತುಂಡುಡುಗೆಯ ಈ ಬಾಪು ಗರೀಬನೇನಲ್ಲಹುಟ್ಟುವಾಗಲೇ ಬಾಯಲ್ಲಿ ಚಿನ್ನದ ಚಮಚಪದವಿಗೆಂದು ವಿದೇಶಕ್ಕೆ ಹಾರಿದ್ದರೂ ಅವನಗಮನವಿದ್ದದ್ದೇ ಅಸಮಾನತೆಯ ಹದ್ದಿನ ಮೇಲೆರಗಿ ಸಾಧಿಸಿದ ವಿಜಯಕ್ಕೆ ಹರತಾಳ ಬಂಡವಾಳಸತ್ಯಕ್ಕೆ ಆಗ್ರಹಿಸುವುದಷ್ಟೇ ನಿಯತ ಕಾಯಕ ಹುತಾತ್ಮನಾಗುವನು ಈ ದೇಶದ ಸಿಪಾಯಿಪರದೇಶಕ್ಕವನು ಯಾವತ್ತಿಗೂ ಬದ್ಧ ವೈರಿಈ ಇಂಥ ಗಾಂಧಿಗೇ ಶತೃವೆನ್ನುವವನುಪರದೇಶಿಯಲ್ಲದೇ ದೇಶೀಯ ಹೇಗಾದಾನುಅಂದರೆ ಮತ್ತೆ ಬಿಚ್ಚುತ್ತಾರೆ ಅಂತೆ ಕಂತೆಯ ಕತೆಯಲ್ಲಷ್ಟೇ ಶ್ರೀ ರಾಮನದೂ ಕಲ್ಪನೆಯ ರಾಜ್ಯ!! ***********************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ರುಕ್ಮಿಣಿ ನಾಗಣ್ಣವರ ನೀ ಬರುವ ದಾರಿಯಲಿ ಕಂಗಳಿರಿಸಿ ಕಾಯುತಿರೆ ಕಾತುರದಿ ಸಂಧಿಸಲು ಬೇಗ ಬಾ ಕಾಣದ ನಿನ್ನನು ಹೊಳೆದಂಡೆಯೂ ಕೂಗುತಿರೆ ದಡಬಡಿಸಿ ಸಂತೈಸಲು ಬೇಗ ಬಾ ತುಟಿ ಮೇಲೆ ತರದ ಥರಥರ ಹೊಸಥರದ ಯೋಚನೆ ನೂರು ಪಟ್ಟಿ ಮಾಡಿರುವೆ ಎದುರು ಬದುರು ಕೂತು ಚರ್ಚಿಸಿ ನಾಳೆಗೊಂದ ಹೊಸಗನಸ ನೇಯಲು ಬೇಗ ಬಾ ಹೊತ್ತುಗಳೆಯಲರಿಯದ ಇಂದ್ರಿಯಗಳು ವಿರಹದಾಗ್ನಿಯಲಿ ಬೆಂದು ಚಡಪಡಿಸುತಿರೆ ಅಂಗೈಲ್ಹಿಡಿದ ಹರಳುಗಳು ಸಜೆ ಅನುಭವಿಸುತಿವೆ ಬಿಡುಗಡೆಗೊಳಿಸಲು ಬೇಗ ಬಾ ಹೃದಯಗೂಡಿನ ಬೆಚ್ಚನೆ ಭಾವಗಳು ನಿನಗಾಗಿ ಹಪಹಪಿಸಿ ಆತಂಕದಿ ತಲ್ಲಣಿಸುತಿರೆ ಎದೆಗೆದೆಯ ಬೆಸೆದು ತುಟಿಗೆ ತುಟಿ ಜಡಿದು ನನ್ನನ್ನೇ ಲೂಟಿ ಮಾಡಲು ಬೇಗ ಬಾ ಇರುಳ ದಾರಿಯಲಿ ಸುರಿದೊಲವ ಬೆಳಕ ತೊರೆದು ಹೋಗದಿರು ಕಡುವಿರಹ ಸುಡುತಲಿರೆ ‘ರುಕ್ಮಿಣಿ’ಯ ಒಂಟಿಹೆಜ್ಜೆಗೂ ನಿತ್ರಾಣ ಹೆಗಲಿಗ್ಹೆಗಲ ಜೋಡಿಸಿ ಕಾಲ ಸರಿಸಲು ಬೇಗ ಬಾ **********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಎದೆಕದದ ಅಗುಳಿ ತೆಗೆದಂತೆ ಅದೊಂದು ಹಾಡು ಮತ್ತಕಡಲಲಿ ಮುಳುಗಿದಂತೆ ಅದೊಂದು ಹಾಡು ಚಿಟ್ಟೆಗಳ ಹಿಂಬಾಲಿಸುತ್ತ ಪರವಶ ಹುಡುಗ ಪುಲಕಗಳೆ ಬೊಗಸೆಗಿಳಿದಂತೆ ಅದೊಂದು ಹಾಡು ಸಂತೆಯ ಝಗಮಗಗಳಿಗೆ ಕಣ್ಣು ತೆತ್ತು ಪೋರಿ ಬಯಕೆಗಳಿಗೆ ಹರಯ ಬಂದಂತೆ ಅದೊಂದು ಹಾಡು ಕೋಲೂರಿ ತಡವರಿಸಿ ನಡೆದು ಇಳಿಸಂಜೆಗೆ ನೆನಪಮಡುವಲಿ ಮಿಂದಂತೆ ಅದೊಂದು ಹಾಡು ಸವೆದ ಜಾಡುಗಳ ಸವೆಸಿ ತಿರುಗಣಿ ಬದುಕು ‘ವಿಶು’ ನಡುವೆ ಕಾಡುವ ಕೊಳಲುಲಿಯಂತೆ ಅದೊಂದು ಹಾಡು ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸುಜಾತಾ ರವೀಶ್ ಏಕೋ ತಿಳಿಯೆ  ವಿಷಾದದಲೆಗಳಲಿ ಮುಳುಗಿಬಿಟ್ದಿದೆ ಕವಿತೆ  ಏನೋ ಅರಿಯೆ ಅಂತರಂಗದಾಳದಲಿ ಹುದುಗಿಬಿಟ್ಠಿದೆಕವಿತೆ  ಸ್ಪರ್ಧೆಗಳ ಪ್ರವಾಹದ ಹುಚ್ಚುಹೊಳೆಯಲಿ ಕೊಚ್ಚಿಹೋಯ್ತೇಕೆ ಕವಿತೆ ? ಪರಸ್ಪರ ಪ್ರಶಂಸೆ ಮೆಚ್ಚುವಬ್ಬರದಲಿ ಮುಚ್ಚಿಬಿಟ್ಟಿದೆ ಕವಿತೆ  ಮನದಾಳದ ಭಾವಾಭಿವ್ಯಕ್ತಿ ಎಂಬುದೇ ಮರೆಸಿಬಿಟ್ಟಿದೆ ಕವಿತೆ  ಸವಾಲುಗಳ ಎದುರಿಸುತ ಯಶವನೇ ಮೆರೆಸಿಬಿಟ್ಟಿದೆ ಕವಿತೆ  ಪರರ  ನಿರ್ಣಯಗಳೆಂಬ ರಾಜಕೀಯದಲಿ ಸೋತುಬಿಟ್ದಿದೆ ಕವಿತೆ  ಪಕ್ಷಪಾತಗಳ ಸ್ಮಶಾನದಲಿ ಹೂತು ಹೋಗಿಬಿಟ್ಟಿದೆ ಕವಿತೆ ವಿಜಯವ ಅರಸುತಲಿ ಬಂಧನಗಳ ಮೀರಿಬಿಟ್ಟಿದೆ ಕವಿತೆ  ಸುಜಿಹೃದಯವ ಉರಿಸುತಲಿ ಚೈತನ್ಯ ಹೀರಿಬಿಟ್ಟಿದೆ ಕವಿತೆ ************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಆಯುಧಕ್ಕಿಂತ ಹರಿತ ರಾಜು ದರ್ಗಾದವರ ಮೊನ್ನೆತಾನೆ ಗೊತ್ತಾಯ್ತು ಕವಿತೆಗಳು ಆಯುಧಕ್ಕಿಂತ ಹರಿತವೆಂದು! ಸಮಾಜಕ್ಕೆ ಅಪಾಯಕಾರಿಯೆಂದೀಗ ಘೋಷಿಸಿ ಜೈಲಿಗಟ್ಟಿದ್ದಾರೆ ಕವಿತೆಗಳನ್ನು ಬರೆದವನ. ಕವಿ ಸಿಕ್ಕಿರಬಹುದು ಆದರೆ ಆ ಕವಿತೆ ಅದೆಲ್ಲಿಯವರೆಗೂ ತಲುಪಿದಿಯೋ? ನಿಮ್ಮಲ್ಲಿಯೂ ಅಂತ ಕವಿತೆಯಿದ್ದರೆ ಪಸರಿಸಬೇಡಿ. ಸುಟ್ಟುಬಿಡಿ…! ಅವರಿಗೂ ಬೇಕಾಗಿದ್ದು ಅದೇ..!! ************

ಕಾವ್ಯಯಾನ Read Post »

You cannot copy content of this page

Scroll to Top