ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಓ ಸಖಿ! ನಿರ್ಮಲಾ ಆರ್. ಹೊಲದಾಗಿನ ಹಸಿರು ಎಷ್ಟು ಚೆಂದ ಓ ಸಖಿ ಪುರ್ರೆಂದು ಹಾರುವ ಹಕ್ಕಿ ತಿನ್ನುತ್ತಿತ್ತು ಮೆಕ್ಕೆ ತೆನೆಯ ಕುಕ್ಕಿ ಕುಕ್ಕಿ ಒಂದು ಬದಿ ಕರಿ ಎಳ್ಳಿನ ರಾಶಿ ಬಣ್ಣದ ಹೂಗಳು ನಲಿಯುತ್ತಿದ್ದವು ಕಂಪ ಸೂಸಿ ಬದುವಿನ ಹೂ ಬಳ್ಳಿ ಸ್ವಾಗತ ಮಾಡುತಿತ್ತು ತನ್ನ ತಾ ಹಾಸಿ ಪ್ರಕೃತಿಯ ಬಣ್ಣಿಸಲು ಪದಗಳಿಲ್ಲ ಸಖಿ ತಂಗಾಳಿಯು ಹಾದು ಹೋಗುತ್ತಿತ್ತು ನಮ್ಮ ಸೋಕಿ ರಾಶೀಯಲ್ಲಿನ ಎಳ್ಳು ತಿನ್ನುತ್ತಿದ್ದೆವು ಮುಕ್ಕಿ ಮುಕ್ಕಿ ಸಂಜೆಗೆ ವಿದಾಯ ಹೇಳಲು ಮೂಡುತ್ತಿತ್ತು ಆಗಸದಲಿ ಚುಕ್ಕಿ ಎಲ್ಲಿ ಹೋದವು ಸುಗ್ಗಿಯ ಆ ದಿನಗಳು ಸಖಿ ಹಾದಿ ತಪ್ಪಿದನಾ ಮನುಜ ಸ್ವಾರ್ಥಕೆ ತನ್ನ ತಾ ನೂಕಿ ಇನ್ನೂ ತೀರುತ್ತಿಲ್ಲ ಬರಗಾಲದ ಬಾಕಿ. *****

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಅಪ್ಪ ಅಂದರೆ ಆಕಾಶ ದೇವಿ ಬಳಗಾನೂರ ಅಪ್ಪ ಅಂದರೆ ಆಕಾಶ ಅಪ್ಪ ಅಂದ್ರೆ ಅಗೋಚರ ಪ್ರೀತಿಯ ಕಡಲು ನನ್ನಮ್ಮನಂತ ಕರುಣೆಯ ಮಡಿಲು ಮಗಳ ಸಾಧನೆಯು ಪ್ರಜ್ವಲಿಸಲು ಕಾರಣವಾದ ತಿಳಿಮುಗಿಲು ಮಗಳಿಗಾಗಿ ದಣಿದನದೆಷ್ಟೋ ಹಗಲು ಅವಳಿಗಾಗಿಯೇ ಕಾಯ್ದಿರಿಸಿದನು ತನ್ನ ಇರುಳು ಅಪ್ಪ ಅಂದ್ರೆ ಮಗಳ ಪಾಲಿನ ನಾಯಕ ಅವಳ ಬದುಕ ದೋಣಿಯ ನಿಜ ನಾವಿಕ ಮಗಳ ಮುಗ್ದ ನಗುವಿಗಾಗಿ ಕಾದ ಅಮಾಯಕ ಅವಳ ಬದುಕ ರೂಪಣೆಯ ನಿಜ ಮಾಲಿಕ ಅಪ್ಪ ಅಂದ್ರೆ ಮಗಳಿಗಾಗಿಯೇ ಬದುಕೋ ಜೀವ ಅವಳ ಖುಷಿಯಲ್ಲೆ ಮರೆವನು ತನ್ನೆಲ್ಲ ನೋವ ಮಗಳೇ ತನ್ನ ಅತಿದೊಡ್ಡ ಸಂಪಾದನೆಯೆಂಬ ಭಾವ ಮತ್ತೊಮ್ಮೆ ಮಗದೊಮ್ಮೆ ಹೇಳುವೆನು ಕೇಳಿ ಅಪ್ಪ ಅಂದ್ರೆ ಆಕಾಶ ಅಪ್ಪ ಅಂದ್ರೆ ತಾಯಿಯೆಂಬ ಭೂಮಿಗೇ ಒಡಲು ಮಗಳಿಗವನೇ ಪ್ರೀತಿಯ ಕಡಲು

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆ ಯಶು ಬೆಳ್ತಂಗಡಿ ಮೊದಲು ಶಿಶುವಾಗಿ ಭುವಿ ಸ್ಪರ್ಶಿಸಿ,, ಮೊದಲ ಉಸಿರಾಟ ನಡೆಸಿ,, ಮೊದಲ ಕಣ್ಣೀರ ಸುರಿಸಿ,, ಮೊದಮೊದಲು ಕಂಡ ತೊದಲು ಮಾತಿನ ಕನಸು… ಮೊದಲ ತರಗತಿಗೆ,, ಮೊದಲ ಹೆಜ್ಜೆಯಿಟ್ಟಾಗ,, ಭಯದಲ್ಲೇ ಕಂಡ ನೂರೊಂದು ಕನಸು.. ಮೊದಲ ಬಾರಿ ರಾಷ್ಟ್ರನಾಯಕರ ಕಥೆ ಕೇಳಿದಾಗ,, ಮೊದಲು ಸ್ವಾತಂತ್ರ್ಯದ ಘಟನೆ ಓದಿದಾಗ,, ಅರಳಿದ ದೇಶಪ್ರೇಮದ ಕನಸು… ಮೊದಲು ಚಲನಚಿತ್ರದಿ ಮಧ್ಯಪಾನ ನೋಡಿದಾಗ,, ಮೊದಮೊದಲು ಗಲಾಟೆ ದೊಂಬಿಗಳ ನೋಡಿದಾಗ,, ಅವರಂತೆ ನಾಯಕನಾಗಬೇಕೆಂದು ಕಂಡ ಹುಚ್ಚು ಕನಸು.. ಅವನ ಸುಂದರ ಕಣ್ಣು ಕಂಡಾಗ,, ಅವನು ಮೌನದಿ ಮಾತಾಡಿದಾಗ,, ಅವನ ಸ್ಪರ್ಶದಿ ಜಗವನ್ನೇ ಮರೆತ ಸುಂದರ ಕನಸು.. ಅವನ ಹಸ್ತದಿ ತಾಳಿ ಕಟ್ಟಿಸಿಕೊಂಡಾಗ,, ಕಂಡ ಹತ್ತಾರು ಕನಸು.. ತಾಳಿ ಬೆಲೆಕಳೆದುಕೊಂಡಾಗ,, ನುಚ್ಚುನೂರಾದ ಬದುಕಿನ ಕನಸು.. ಊಟ ತಿಂಡಿ ಬಿಟ್ಟು ಆರೋಗ್ಯ ಹದೆಗೆಟ್ಟಾಗ,, ಜೀವದ ಆಸೆ ಮರೆತಾಗ,, ಸಕಲವ ತೊರೆದು ಸಾವಿನ ಮನೆಗೆ ಹೊರಟಾಗ,, ಕನಸಾಗೇ ಉಳಿದ ಸಾವಿರ ಕನಸು.. ಕನಸಾಗೇ ಉಳಿದ ಬದುಕಿನ ಕನಸು.. ಕಣ್ಣೀರಲ್ಲೇ ಕೊಚ್ಚಿಹೋದ ನೂರೊಂದು ಕನಸು.. ========

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಂಕ್ರಾಂತಿ ಅನಿಲ್ ಕರೋಲಿ ಸಂಕ್ರಾಂತಿ ಸಡಗರ ಪ್ರೀತಿಯ ಉಡುಗೊರೆ ಹಳ್ಳಿ ಹಳ್ಳಿಯು ಹಬ್ಬವೂ ..ಹಬ್ಬವೊ.. ರೈತರ ಪ್ರತಿ ಮನೆಯಲ್ಲೂ ಸಂಭ್ರಮ ಸಾಗರ ದನ-ಕರುಗಳು ಹೊಸ ಬಗೆಯ ಶೃಂಗಾರ ರೈತರು ಸಂಕ್ರಾತಿಯಲ್ಲಿ ಬೆಳೆದ ಬೆಳಯ ನಿರೀಕ್ಷೆಯಲ್ಲಿ ಎಲ್ಲರೂ ಏಳ್ಳು-ಬೆಲ್ಲ ಹಂಚಿ ಖುಷಿಯ ಹಂಚುವರು ಹಳ್ಳಿಗಳಲ್ಲಿ ಇದೊಂದು ವಿಶೇಷ ಹಬ್ಬವು ಜಗಳ ಮನಸ್ಥಾಪ ಮಾಡಿಕೊಂಡವರನ್ನು ಒಬ್ಬರನ್ನೊಬ್ಬರು ರಾಜಿಮಾಡಿಸುವುದು ನಮ್ಮಿ ಹಳ್ಳಿ ಹಬ್ಬ ಪ್ರೀತಿಯು ಇಲ್ಲಿ ಲಭ್ಯ ಖುಷಿಯಲೇ ನಾವು ತೇಲುವೆವು ಇಂದು ========

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಾಕು ಬಿಡು ಸಖಿ ಬಸವರಾಜ ಜಿ ಸಂಕನಗೌಡರ ಸೂರ್ಯ ಚಂದ್ರರಿಬ್ಬರನೂ ಮಧುಶಾಲೆಯಲೇ ಕಾಣುತ್ತಿರುವೆ ಸಾಕು ಬಿಡು ಸಖಿ . ನನ್ನೆದೆಯ ನೋವ ನೀ ಸುರಿಸೋ ಕಣ್ಣೀರು ತಣ್ಣಗಾಗಿಸಲಾರದು ಸಾಕು ಬಿಡು ಸಖಿ ಊರ ಮುಂದಿನ ಅಗಸಿ ಕಲ್ಲು ನೀ ಹೋದದ್ದಕ್ಕೆ ಸಾಕ್ಷಿ ಕೊಟ್ಟಿದೆ. ಮತ್ತೇಕೆ ಕನಸಲಿ ಕಾಡುವೆ ಸಾಕು ಬಿಡು ಸಖಿ. ನೀ ಬರುವ ಹಾದಿಗೆ ಬೇಲಿ ಬೆಳೆದಿದೆ. ನಾನೀಗ ಮಧುಶಾಲೆಯ ಖಾಯಂ ಗಿರಾಕಿ ಕಾಡಬೇಡ ಸಾಕು ಬಿಡು ಸಖಿ ಡೋಲಿಯಲಿ ಮಲಗಿದ ಹೆಣದ ಮೇಲೆ ನೀ ಒಂದು ಹೂ ಹಾಕಲಿಲ್ಲ ನನ್ನವರು ಮಣ್ಣು ಹಾಕಲಿ ಬಿಡು ಸಖಿ ಊರ ಬೀದಿಯಲಿ ಹೊರಟಿದೆ ಬಸವರಸನ ಹೆಣದ ಮೆರವಣಿಗೆ ಮತ್ತೇಕೆ ಕಣ್ಣೀರು ಕೊನೆಗೊಮ್ಮೆ ನಕ್ಕು ಬಿಡು ಸಖಿ ========

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಾತು-2 ಡಾ.ಗೋವಿಂದ ಹೆಗಡೆ ಮಾತು ಮಾತನಾಡುವಾಗ ಹೀಗೇನಾದರೂ ಕಿಟಕಿ ತೆರೆದುಬಿಟ್ಟಿದ್ದರೆ ಎಂಥ ಅನಾಹುತವಾಗುತ್ತಿತ್ತು ತೂರಿ ಹೋಗಿ ಕೆಳಗೆ ರಸ್ತೆಯಲ್ಲಿ ಬ್ಯಾಡ್ಮಿಂಟನ್ ಆಡುತ್ತಿರುವ ಚಿಣ್ಣರ ರಾಕೆಟ್ ಮೇಲೆ ಬಿದ್ದು ಆ ಕಡೆ ಈ ಕಡೆ ಹಾರಿ ಬಿದ್ದು ಹಾರಿ ಬಿದ್ದು ಹೇಗೆ ಇಳಿಯಬಹುದಿತ್ತು ಕುರ್ಚಿ ಹಾಕಿ ಮುಗುಮ್ಮಾಗಿ ಕೂತು ಈ ಮಾಗಿಯ ಇಳಿ ಹೊತ್ತು ತೆರೆದು ಕೂತು ಮಾತಿನ ಲೋಕ ಎಂಥ ವಿಚಿತ್ರ ಈ ಮಾತಿನದು ಮಾತು ಮಾತಾಗಲು ಕಂಠ ನಾಲಗೆ ತುಟಿ ಅಷ್ಟೇ ಸಾಲದು ಕಿವಿಯೂ ಬೇಕು ಮೆದುಳಿಂದ ಕೇಳಿಸಿಕೊಳ್ಳುತ್ತಾರೆ ಅವರು ಕೆಲವರು ಮಾತ್ರ ಒಡಲಿಂದ ಮಾತು ಮಾತ್ರ ಮರಳುತ್ತದೆ ಆಡಿದ ಮರುಕ್ಷಣ ಮೌನಕ್ಕೆ ಗೂಡಿಗೆ ಮರಳುವ ಹಕ್ಕಿ ಮತ್ತೆ ಎದ್ದಾಗ ಅದು ಅದೇ ಮೌನವೇ ಮಾತು ಅದೇನೇ ಬಣ್ಣ ಬೆಳಕು ಆಡಲು ಬೇಕು ಕತ್ತಲ ಭಿತ್ತಿ ಮಾತಿಗೆ ಮೌನ ಬೆಳೆ ಬೆಳೆದಂತೆಲ್ಲಾ ಅದು ಕಡಲಿಂದ ಆವಿ ಎದ್ದು ಮೋಡವಾಗಿ ಮಳೆ ಸುರಿದು ಮತ್ತೆ ಕಡಲನು ಕೂಡಿ ತಾಸು ತಾಸು ಸನಿಹವಿದ್ದೂ ಮಾತೇ ಆಡದ ಉಲ್ಲಾಸ ತನ್ನ ನಗೆಯಿಂದಲೇ ಎಷ್ಟೋ ನುಡಿದಂತೆ ಥಟ್ಟನೆ ಎದ್ದು ಹೊರಟೇ ಹೋದಾಗಲೂ ಉಳಿದೇ ಇರುವಂತೆ ಪರಿಮಳ- ಮಾತಿಲ್ಲದೆ. ಮೌನದಲ್ಲಿ ನಿರುಮ್ಮಳತೆಯನ್ನು ಶಬ್ದದಲ್ಲಿ ನಿರರ್ಥಕತೆಯನ್ನು ಹುಡುಕಿ ಹೊರಟಾಗಲೂ ಅದು ಇದ್ದೇ ಇರುತ್ತದೆ ಕಾಗೆ ಕಾ ಎಂದರೂ ಎನ್ನದಿದ್ದರೂ ಕಂಠವನ್ನು ಅದುಮಿ ಹಿಡಿದಾಗಲೂ ಕಿಟಕಿ ತೆಗೆದಾಗಲೂ ಮುಚ್ಚಿದಾಗಲೂ ಅಲ್ಲಿ ರಾಕೆಟ್ ಮೇಲೆ ಆ ಕಡೆ ಈ ಕಡೆ ಆಡುತ್ತ ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿತೆಯ ಘನತೆ ಬಿ.ಎಸ್.ಶ್ರೀನಿವಾಸ್ ಕವಿತೆಗೊಂದು ಘನತೆಯಿದೆ ಭಾವಗಳ ತೂಕವಿದೆ ಬಂಧಗಳ ಭಾರವಿದೆ ಹೃದಯದ ಪಿಸುದನಿಯಿದೆ ಕವಿತೆಗೊಂದು ಘನತೆಯಿದೆ ಕಾಣದ ಕಂಬನಿಯಿದೆ ಕೇಳಿರದಾ ರಾಗವಿದೆ ರವಿಕಾಣದ ರಸತುಂಬಿದೆ ಕವಿತೆಗೊಂದು ಘನತೆಯಿದೆ ಮೈಮರೆಸುವ ಶ್ರುತಿಲಯವಿದೆ ನೊಂದ ಮನವ ಸಂತೈಸುವ ಸಾತ್ವಿಕ ಶಕ್ತಿಯಿದೆ ಕವಿತೆಗೊಂದು ಘನತೆಯಿದೆ ಹರಿವ ನದಿಯ ಬಳುಕಿದೆ ಗರಿಗೆದರಿ ನರ್ತಿಸುವ ನವಿಲಿನ ಲಾಸ್ಯವಿದೆ ಕವಿತೆಗೊಂದು ಘನತೆಯಿದೆ ಭಕ್ತಿಯಿದೆ ವಿರಕ್ತಿಯಿದೆ ತಿಮಿರವನ್ನು ತೊಲಗಿಸುವ ಸೃಜನ ಸ್ವಯಂಪ್ರಭೆಯಿದೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಾತು ಡಾ.ಗೋವಿಂದ ಹೆಗಡೆ ಮಾತು ಏನನ್ನಾದರೂ ಹೇಳುತ್ತಲೇ ಇರಬೇಕೆಂದು ಯಾರಾದರೂ ಏಕೆ ಒತ್ತಾಯಿಸಬೇಕು ಪಟ್ಟು ಹಿಡಿಯಬೇಕು ಮಾತು ಮಾತ್ರವಲ್ಲ ಮೌನ ಕೂಡ ಮಾತಿಗೂ ಇದ್ದೀತು ಬೇಸರ ಆಯಾಸ ಅಥವಾ ಬರೀ ಆಕಳಿಕೆ ಮತ್ತು ಮೌನ ಹೊದ್ದು ಉಸ್ಸೆನ್ನುವ ಕೇವಲ ಬಯಕೆ ಈ ಮಾತು ಕೂಡ ಎಷ್ಟು ಅಸಹಾಯ! ಕುಬ್ಜ ಹೆಳವ ಮತ್ತು ಚೂರು ಕಿವುಡ ಮತ್ತು ಉಬ್ಬಸ ಪಡುತ್ತ ಅದು ಹೇಳುವುದೇನನ್ನು? ಬಿಡು, ಕವಿತೆಯೆಂದರೆ ಬರಿ ಗೋಳಲ್ಲ ಎಲ್ಲ ಅಸಂಗತತೆಯಲ್ಲಿ ಏನೋ ಸೂತ್ರ ಅಥವಾ ವಿಪರೀತವೂ ಸರಿಯೇನು ಯಾರಿಗೆ ಗೊತ್ತು ಮೊನ್ನೆ ಅಷ್ಟೊಂದು ಮಾತಿನ ಲೋಕದಲ್ಲಿ ಮುಳುಗಿ ಎದ್ದು ಹೊರಟಾಗ ಊರಿಗೆ ಊರೇ ಮಾಗಿಯ ಸಂಜೆಗೆ ಮೈಯೊಡ್ಡುತ್ತ ಮಂಕು ಸೂರ್ಯನ ಮಾತಿಲ್ಲದೆ ಕಂತಿಸುತ್ತ ಹಿಂದಿನ ಸೀಟಿನಲ್ಲಿ ಅಮ್ಮನ ಕೈಯಲ್ಲಿ ಬೆಚ್ಚಗೆ ಮೊಲೆಗೂಸು ಥಟ್ಟನೆರಗಿ “ಉವ್ವೇ ಉವ್ವೇ” ರಚ್ಚೆ ಚಕಿತತೆಯಲ್ಲಿ ದಿಟ್ಟಿಸಿ ಮಾತಿಲ್ಲದೆ ಅದೊಂದು ದಿವ್ಯ ಆ ಮಗು ಆ ಸಂಜೆ ಆ ಪಯಣ- ಕ್ಕೆ ಪಕ್ಕಾದ ನನ್ನ ಪಕ್ಕ ಒರಲೆ ಹತ್ತಿದಂತೆ ಮಾತು ಸೋತಂತೆ ಆದರೂ ತಾನೇ ಮಾತಾದಂತೆ ಮುದುಕಿ ತಾಯಿ ಮಾತು ಮೌನದಲ್ಲಿ ರಮಿಸಿ ಮೌನ ಮಾತಿನಲ್ಲಿ ಕಲಸಿ ಮಾತಾದರೆ ‘ಆರಾಂ ಮಾಡು ಆಮೇಲೆ ಮಾತು’ ಸುಮ್ಮನಾದರೆ “ಅರೇ ಏನಾಯಿತು?” ಆತಂಕದಲ್ಲಿ ಮಾತು ಏನಾದರೂ ಹೇಳಲೆಂದು ಯಾರಾದರೂ ಯಾಕೆ ಒತ್ತಾಯಿಸುತ್ತಾರೆ… ===========

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸೃಷ್ಟಿಯ ಮಿಲನ. ರಾಮಾಂಜಿನಯ್ಯ ವಿ ಕಾಡ ಕಗ್ಗತ್ತಲು ಆವರಿಸಿ ಮುತ್ತಿರಲು ಜೇನ್ ಪರಾಗ ರಿಂಗಣ! ಚೆಲುವ ಮಧು ಮೃದಂಗ, ಅಧರಗಳ ಮಧುರ ಗಾನ. ಚಂದಿರನವೆ ಬಡಿತ, ಪಕಳೆಗಳ ಚಿಟಪಟ ಕೇಸರಗಳ ಆಗಮನದಿ ಸೃಷ್ಟಿಯ ಮಿಲನ.. ದುಂಬಿ ಮದರಂಗಿ ಚಲನ.. ಪೇಳ್,ಹೆಣ್ಣೆ ನಾಭಿಯಲಿ ನೆತ್ತರು ಬಿಸಿ ಎದೆಯಲ್ಲಿ ಸಮುದ್ರದಲೆ ಭೋರ್ಗರೆವ ನಾದ ತನ್ಮಯ ವಿನೋದ.. ಕರಗುವ ಮುನ್ನ ಕರಗಿಸೆನ್ನ; ಪೆಣ್ಣೆ, ಅರಳುವ ಹೂವೆ.. ಮದನದ ವದನಕ್ಕಿದು ತನು ತರುಲತೆ ಗಾನ. ಸ್ಪರ್ಶಿಸುವ ನೆಲೆಯಲ್ಲಿ ಪರಾಗಗಳ ಸೆಲೆ! ಸುಳಿಯಿರದ ಸಮುದ್ರದಿ ಕವಲುಗಳ ಕಲನ ಇದೋ, ಸೃಷ್ಟಿಯ ಮಿಲನ! =============

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಾನಲ್ಲ ದೇವದಾಸಿ ನಿರ್ಮಲಾ ನನ್ನ ಬದುಕಿದು ನನ್ನ ಸ್ವತ್ತು ಬಲವಂತವಾಗಿ ಕಟ್ಟಿಸಿದಿರಿ ನನಗೆ ಮುತ್ತು ಬೆಲೆ ಇಲ್ಲವೇ ನನ್ನಾವ ಆಸೆಗೆ ಬಲಿಯಾದೆ ಕಾಮಪಿಶಾಚಿಗಳ ಲಾಲಸೆಗೆ ಭಗವಂತನ ಸೇವೆಗೆಂದೇ ಮಾಡಿದಿರಿ ನನ್ನ ದಾಸಿ ಆದರೆ ವೇಶ್ಯೆಯೆಂದೆ ನಾನಾದೆ ಹೆಸರುವಾಸಿ ಶಾಸ್ತ್ರ ಹೇಳಿತು ದೇವನಿಗೆ ಸಂಗೀತ, ನೃತ್ಯ ಪ್ರಿಯ ದೇವನ ಹೆಸರಲಿ ಸಮಾಜ ಮಾಡಿತು ನನ್ನ ಬದುಕು ಹೇಯ ಮಾಡಿದಿರಿ ನನಗೆ ಗೆಜ್ಜೆ ಪೂಜೆ ನನ್ನಾವ ತಪ್ಪಿಗಾಗಿ ಈ ಸಜೆ ನಾನಾಗ ಬೇಕಿತ್ತಲ್ಲವೇ ಸಂಸಾರಿ ಅದೇಕೆ ಮಾಡಿದಿರಿ ನನ್ನ ವ್ಯಭಿಚಾರಿ ಹುಟ್ಟುತಾ ನಾನಲ್ಲ ದೇವದಾಸಿ ಬದುಕ ಕತ್ತಲಾಗಿಸಿದಿರಲ್ಲ ನನ್ನ ಶೋಷಿಸಿ ನನ್ನ ಬದುಕು ಬಲಿಕೊಟ್ಟು ಧರ್ಮವ ಬೆಳೆಸಿದಿರಿ ನನ್ನ ರಕ್ತವ ಬಸಿದು ನಿಮ್ಮ ಭಕ್ತಿಯ ತೋರಿಸಿದಿರಿ ಧರ್ಮದ ಹೆಸರಲಿ ನಿಮ್ಮ ಭಕ್ತಿಯ ಭಾವುಟ ಆಕಾಶಕ್ಕೆ ಹಾರಿಸಿದಿರಿ ನನ್ನ ಪಾತಾಳಕ್ಕೆ ತುಳಿದಿರಿ ವಾಕರಿಕೆಯಾಗಿದೆ ಬದುಕು ಹೇ ದೇವ ಮತ್ತೆ ಹುಟ್ಟಿ ಬರಲೊಲ್ಲೆ ನಾ ಈ ಮಾನವ ಜನುಮವ. ==========

ಕಾವ್ಯಯಾನ Read Post »

You cannot copy content of this page

Scroll to Top