ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಮಾತು ಡಾ.ಗೋವಿಂದ ಹೆಗಡೆ ಮಾತು ಏನನ್ನಾದರೂ ಹೇಳುತ್ತಲೇ ಇರಬೇಕೆಂದು ಯಾರಾದರೂ ಏಕೆ ಒತ್ತಾಯಿಸಬೇಕು ಪಟ್ಟು ಹಿಡಿಯಬೇಕು ಮಾತು ಮಾತ್ರವಲ್ಲ ಮೌನ ಕೂಡ ಮಾತಿಗೂ ಇದ್ದೀತು ಬೇಸರ ಆಯಾಸ ಅಥವಾ ಬರೀ ಆಕಳಿಕೆ ಮತ್ತು ಮೌನ ಹೊದ್ದು ಉಸ್ಸೆನ್ನುವ ಕೇವಲ ಬಯಕೆ ಈ ಮಾತು ಕೂಡ ಎಷ್ಟು ಅಸಹಾಯ! ಕುಬ್ಜ ಹೆಳವ ಮತ್ತು ಚೂರು ಕಿವುಡ ಮತ್ತು ಉಬ್ಬಸ ಪಡುತ್ತ ಅದು ಹೇಳುವುದೇನನ್ನು? ಬಿಡು, ಕವಿತೆಯೆಂದರೆ ಬರಿ ಗೋಳಲ್ಲ ಎಲ್ಲ ಅಸಂಗತತೆಯಲ್ಲಿ ಏನೋ ಸೂತ್ರ ಅಥವಾ ವಿಪರೀತವೂ ಸರಿಯೇನು ಯಾರಿಗೆ ಗೊತ್ತು ಮೊನ್ನೆ ಅಷ್ಟೊಂದು ಮಾತಿನ ಲೋಕದಲ್ಲಿ ಮುಳುಗಿ ಎದ್ದು ಹೊರಟಾಗ ಊರಿಗೆ ಊರೇ ಮಾಗಿಯ ಸಂಜೆಗೆ ಮೈಯೊಡ್ಡುತ್ತ ಮಂಕು ಸೂರ್ಯನ ಮಾತಿಲ್ಲದೆ ಕಂತಿಸುತ್ತ ಹಿಂದಿನ ಸೀಟಿನಲ್ಲಿ ಅಮ್ಮನ ಕೈಯಲ್ಲಿ ಬೆಚ್ಚಗೆ ಮೊಲೆಗೂಸು ಥಟ್ಟನೆರಗಿ “ಉವ್ವೇ ಉವ್ವೇ” ರಚ್ಚೆ ಚಕಿತತೆಯಲ್ಲಿ ದಿಟ್ಟಿಸಿ ಮಾತಿಲ್ಲದೆ ಅದೊಂದು ದಿವ್ಯ ಆ ಮಗು ಆ ಸಂಜೆ ಆ ಪಯಣ- ಕ್ಕೆ ಪಕ್ಕಾದ ನನ್ನ ಪಕ್ಕ ಒರಲೆ ಹತ್ತಿದಂತೆ ಮಾತು ಸೋತಂತೆ ಆದರೂ ತಾನೇ ಮಾತಾದಂತೆ ಮುದುಕಿ ತಾಯಿ ಮಾತು ಮೌನದಲ್ಲಿ ರಮಿಸಿ ಮೌನ ಮಾತಿನಲ್ಲಿ ಕಲಸಿ ಮಾತಾದರೆ ‘ಆರಾಂ ಮಾಡು ಆಮೇಲೆ ಮಾತು’ ಸುಮ್ಮನಾದರೆ “ಅರೇ ಏನಾಯಿತು?” ಆತಂಕದಲ್ಲಿ ಮಾತು ಏನಾದರೂ ಹೇಳಲೆಂದು ಯಾರಾದರೂ ಯಾಕೆ ಒತ್ತಾಯಿಸುತ್ತಾರೆ… ===========

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸೃಷ್ಟಿಯ ಮಿಲನ. ರಾಮಾಂಜಿನಯ್ಯ ವಿ ಕಾಡ ಕಗ್ಗತ್ತಲು ಆವರಿಸಿ ಮುತ್ತಿರಲು ಜೇನ್ ಪರಾಗ ರಿಂಗಣ! ಚೆಲುವ ಮಧು ಮೃದಂಗ, ಅಧರಗಳ ಮಧುರ ಗಾನ. ಚಂದಿರನವೆ ಬಡಿತ, ಪಕಳೆಗಳ ಚಿಟಪಟ ಕೇಸರಗಳ ಆಗಮನದಿ ಸೃಷ್ಟಿಯ ಮಿಲನ.. ದುಂಬಿ ಮದರಂಗಿ ಚಲನ.. ಪೇಳ್,ಹೆಣ್ಣೆ ನಾಭಿಯಲಿ ನೆತ್ತರು ಬಿಸಿ ಎದೆಯಲ್ಲಿ ಸಮುದ್ರದಲೆ ಭೋರ್ಗರೆವ ನಾದ ತನ್ಮಯ ವಿನೋದ.. ಕರಗುವ ಮುನ್ನ ಕರಗಿಸೆನ್ನ; ಪೆಣ್ಣೆ, ಅರಳುವ ಹೂವೆ.. ಮದನದ ವದನಕ್ಕಿದು ತನು ತರುಲತೆ ಗಾನ. ಸ್ಪರ್ಶಿಸುವ ನೆಲೆಯಲ್ಲಿ ಪರಾಗಗಳ ಸೆಲೆ! ಸುಳಿಯಿರದ ಸಮುದ್ರದಿ ಕವಲುಗಳ ಕಲನ ಇದೋ, ಸೃಷ್ಟಿಯ ಮಿಲನ! =============

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಾನಲ್ಲ ದೇವದಾಸಿ ನಿರ್ಮಲಾ ನನ್ನ ಬದುಕಿದು ನನ್ನ ಸ್ವತ್ತು ಬಲವಂತವಾಗಿ ಕಟ್ಟಿಸಿದಿರಿ ನನಗೆ ಮುತ್ತು ಬೆಲೆ ಇಲ್ಲವೇ ನನ್ನಾವ ಆಸೆಗೆ ಬಲಿಯಾದೆ ಕಾಮಪಿಶಾಚಿಗಳ ಲಾಲಸೆಗೆ ಭಗವಂತನ ಸೇವೆಗೆಂದೇ ಮಾಡಿದಿರಿ ನನ್ನ ದಾಸಿ ಆದರೆ ವೇಶ್ಯೆಯೆಂದೆ ನಾನಾದೆ ಹೆಸರುವಾಸಿ ಶಾಸ್ತ್ರ ಹೇಳಿತು ದೇವನಿಗೆ ಸಂಗೀತ, ನೃತ್ಯ ಪ್ರಿಯ ದೇವನ ಹೆಸರಲಿ ಸಮಾಜ ಮಾಡಿತು ನನ್ನ ಬದುಕು ಹೇಯ ಮಾಡಿದಿರಿ ನನಗೆ ಗೆಜ್ಜೆ ಪೂಜೆ ನನ್ನಾವ ತಪ್ಪಿಗಾಗಿ ಈ ಸಜೆ ನಾನಾಗ ಬೇಕಿತ್ತಲ್ಲವೇ ಸಂಸಾರಿ ಅದೇಕೆ ಮಾಡಿದಿರಿ ನನ್ನ ವ್ಯಭಿಚಾರಿ ಹುಟ್ಟುತಾ ನಾನಲ್ಲ ದೇವದಾಸಿ ಬದುಕ ಕತ್ತಲಾಗಿಸಿದಿರಲ್ಲ ನನ್ನ ಶೋಷಿಸಿ ನನ್ನ ಬದುಕು ಬಲಿಕೊಟ್ಟು ಧರ್ಮವ ಬೆಳೆಸಿದಿರಿ ನನ್ನ ರಕ್ತವ ಬಸಿದು ನಿಮ್ಮ ಭಕ್ತಿಯ ತೋರಿಸಿದಿರಿ ಧರ್ಮದ ಹೆಸರಲಿ ನಿಮ್ಮ ಭಕ್ತಿಯ ಭಾವುಟ ಆಕಾಶಕ್ಕೆ ಹಾರಿಸಿದಿರಿ ನನ್ನ ಪಾತಾಳಕ್ಕೆ ತುಳಿದಿರಿ ವಾಕರಿಕೆಯಾಗಿದೆ ಬದುಕು ಹೇ ದೇವ ಮತ್ತೆ ಹುಟ್ಟಿ ಬರಲೊಲ್ಲೆ ನಾ ಈ ಮಾನವ ಜನುಮವ. ==========

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹೊಸ ವರ್ಷದ ಹೊಸಿಲಲ್ಲಿ…. ಡಿ.ಎಸ್.ರಾಮಸ್ವಾಮಿ ಇವತ್ತು ಈ ವರ್ಷಕ್ಕೆ ಕಡೆಯ ಮೊಳೆ ಹೊಡೆದಾಯಿತು. ಮತ್ತಷ್ಟು ಬಿಳಿಯ ಕೂದಲು ಗಡ್ಡದಲ್ಲಿ ಹಣುಕಿವೆ ತೆಲೆ ಮತ್ತಷ್ಟು ಬೊಕ್ಕಾಗಿದೆ. ಇರುವ ಸಾಲದ ಕಂತುಗಳ ಲೆಕ್ಕ ಹಾಕಿದರೆ ಬರೀ ನಿಟ್ಟುಸಿರು ಆದಾಯ ತೆರಿಗೆಯ ಸ್ಲಾಬು ಏರಿದೆ. ಎದೆ ಎತ್ತರ ಬೆಳೆದು ನಿಂತಿದ್ದಾಳೆ ಮಗಳು, ಮುಂದೆ ಹೇಗೋ ಎಂದು ತಳಮಳಿಸುವುದು ಜೀವ, ಮದುವೆಯ ಮಾತೆತ್ತಿದರೆ ಸಿಡುಕುತ್ತಾಳೆ. ಚಿನ್ನದ ಸರ ಕೊಳ್ಳುವ ಇವಳ ಮಾತು, ಅಪಥ್ಯ. ಸ್ವರ್ಣ ಬಾಂಡಿನ ಕಂತು ಮುಗಿದು ಆಭರಣಗಳ ಆಯಬೇಕಿದೆ ಅಷ್ಟೆ. ಜೊತೆಯಲ್ಲಿ ಇರದ ಸಂಜೆಗಳ ಲೆಕ್ಕ ಮಗ ಮುಂದಿಡುತ್ತಿರುವಾಗ, ತಾಳೆಯಾಗದ ಖಾತೆಗಳ ಯಾದಿಯ ಪಟ್ಟಿ ಮುಂದಿದೆ. ಅನಾರೋಗ್ಯದ ಅಮ್ಮನ ನೋಡಲು ಹೋಗದ ದಿನಗಳ ಲೆಕ್ಕ ಸಿಕ್ಕಿದರೂ ಅಂದುಕೊಂಡದ್ದೊಂದೂ ಘಟಿಸದೆ, ಬರಿಯ ನಿರಾಶೆ ಮರುಗಟ್ಟಿದೆ. ಹಳೆಯ ನಿರ್ಧಾರಗಳ ನೆನಪು ಮತ್ತೆ ಮರುಕಳಿಸಿ ತಲೆಶೂಲೆ ಗೆ ಯಾವುದು ರಾಮಬಾಣ? ಆಗೀಗ ಹುಕಿ ಹತ್ತಿದರೆ ಕರೆ ಮಾಡುವ ಗೆಳೆಯ ಇಯರ್ ಎಂಡ್ ಪಾರ್ಟಿಗೆ ಕರೆಯುತ್ತಿದ್ದಾನೆ, ಬಾರದಿದ್ದರೆ ಠೂ ಬಿಡುತ್ತೇನೆ ಎಂದಿದ್ದಾನೆ. ಹುಟ್ಟುತ್ತಿದೆ ಹೊಸ ವರ್ಷ ಬೆಚ್ಚಿಬೀಳುವ ವೇಗದಲ್ಲಿ.ಕನ್ನಡಿಯ ಹಿಂದಣ ಪಾದರಸ ಸವೆದಿದೆ ಹೊಸ ಕನ್ನಡಿ ಇನ್ನಾದರೂ ತರಬೇಕು. *****

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಭ್ರೂಣ ಕಳಚುವ ಹೊತ್ತು ಬಿದಲೋಟಿ ರಂಗನಾಥ್ ಭ್ರೂಣ ಕಳಚುವ ಹೊತ್ತು ಗಂಡು ಕೂಸಿಗಾಗಿ ಬಯಕೆ ಬಾಯಾರಿ ಹುಟ್ಟಿದ ಹೆಣ್ಣುಕಂದಮ್ಮಗಳ ಭ್ರೂಣಗಳನ್ನು ಯಾವುದೋ ಗುದ್ದರಗಳಲ್ಲಿ ಹೂತು ಮಣ್ಣೂ ತಿನ್ನಲಾರದೆ ನಾಯಿಗಳು ವಾಸನೆ ಹಿಡಿದು ಎರಡೂ ಕಾಲುಗಳಲ್ಲಿ ಬಗೆ ಬಗೆದು ಕಚ್ಚಿ ಕಚ್ಚಿತಿನ್ನುತ್ತಿವೆ ಇಟ್ಟಾಡಿಕೊಂಡು ಹಸಿಮಾಂಸವೆಂದು.! ರಕ್ತಸೇರಿ ಮಾಂಸ ತುಂಬಿ ಆಕಾರ ಮೂಡಿ ತಾಯಿಯೊಳಗಿನ ಅಂತಃಕರಣ ತುಂಬಿ ಜೀವ ಪಡೆದು ಹೆಣ್ಣು ಕೂಸು ಅಂದಾಕ್ಷಣ ಕಣ್ಣುಗಳಲ್ಲಿ ಬೆಂಕಿಯುಂಡೆ ಉರುಳಿ ಮನಸುಗಳನ್ನು ಸುಡುವ ಮುಟ್ಟಾಳತನ ಅಳುವ ಮಗುವಿನ ದ್ವನಿ ಕೇಳಿಸಿಕೊಳ್ಳುತ್ತಲೇ ಎದೆಯಲ್ಲಿ ಉಕ್ಕುವ ಹಾಲು ಹಿಂಡುತ ಹೆತ್ತೊಡಲು ನೊಂದು ಅಯ್ಯೋ ! ಎನ್ನುವ ಆ ಮಾತೆಯ ನೋವು,ನೀಟ್ಟುಸಿರು ಎಲ್ಲ ಹೆತ್ತಮ್ಮರ ನಿಟ್ಟುಸಿರು ಯೋನಿ ಬಾಯಿಯ ನೋವು ಮಾಗುತ್ತಿರುವಾಗಲೇ ಮತ್ತೆ ನಿನ್ನ ಶಿಶ್ನದ ಆರ್ಭಟ ವಿರ್ಯ ಸುರಿಸುವ ಹಂಬಲ ಮತ್ತೆ ಮೊಳಕೆ ! ನಿನ್ನ ದುರದೃಷ್ಟವೋ ಏನೋ ಅದೂ ಹೆಣ್ಣು ಶಿಶುವೆ.. ಛೇ !ಮತ್ತೆ ಮಣ್ಣಿನ ಸ್ಪರ್ಶ ನಾಯಿ ನರಿ ಹದ್ದು ಕಾಗೆಗಳಿಗೆ ಆಹಾರ ನೋಡುವ ಕಣ್ಣುಗಳ ನರಗಳು ಸೋತು ಸುಣ್ಣವಾಗುವ ಬೆಳಗು ಹೆಣ್ಣು ಕೂಸುಗಳ ಹೂತ ಜಾಗದ ಸೆಳೆತಕೆ ಸೋತು ರಕ್ತ ಗರೆಗಟ್ಟಿ ಇನ್ನಾರೋ ನೋಡದಿರಲೆಂದು ಹೊಸಮಣ್ಣನು ಬಗೆದು ಆಲದ ಗಿಡ ನೆಟ್ಟು ಮಳೆಯೇ ಬಾ ಬಿದ್ದ ರಕ್ತ ತೊಳೆದು ಗಿಡದ ಪಾಜಿಗೆ ನೀರು ಬೀಳೆಂದು ಪ್ರಾರ್ಥಿಸಿದೆ ಮೂರ್ಖನೇ ! ನೀನೆ ಆ ಆಲದ ನೆರಳಲ್ಲಿ ಬಿಸಿಲು ತಡೆಯದೇ ನಿಂತಿದ್ದು ನೋಡಿದೆ ‘ಅಪ್ಪಾ… ‘ಅನ್ನುವ ಆ ಮಕ್ಕಳ ಕೂಗು ಬಯಲ ತುಂಬುತ್ತಲೇ ಇತ್ತು ಅದು ಬಿಡುವ ಗಾಳಿ ನೀನು ಕುಡಿಯುತ್ತಲೇ ಇದ್ದೆ ಎದೆಯಲ್ಲಿನ ಆ ಮಾಯದ ನೋವು ನನ್ನೊಳಗೆ ಇಳಿಯುತ್ತಲೇ ಇತ್ತು ಪಶು ಪಕ್ಷಿಗಳು ಆ ಮರದ ನೆತ್ತಿ ಮೇಲೆ ಕೂತು ಹಣ್ಣುಗಳ ಕುಕ್ಕಿ ತಿನ್ನುವ ದೃಶ್ಯ ಕಾಣುತ್ತಲೇ ಇತ್ತು ಕನ್ನಡಿಯಾಗಿ… ***************************************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಈ ಇರುಳು ನೂರುಲ್ಲಾ ತ್ಯಾಮಗೊಂಡ್ಲು ಈ ಇರುಳು ಕಣ್ಣುಗಳಲಿ  ಸೂರ್ಯ ಉರಿಯುತಿದ್ದಾನೆ  ಲಕ್ಷ ಲಕ್ಷ ನಕ್ಷತ್ರಗಳು ದನಿ ಕೂಡಿಸಿವೆ ನವ ಸ್ವಾತಂತ್ರ್ಯದ ಮೊಳಗಿನಲಿ  ನಮ್ಮ ಯಾತನೆಗಳು ದಿಕ್ಕು ದಿಕ್ಕಿಗೂ ಒಯ್ಯುವ ಸಮೀರನೇ ನಿನಗೆ ವಂದನೆ ಅಸಮಾನತೆ ,ಶೋಷಣೆಯಲಿ ನಲುಗಿದೆ ಈ ಹೊತ್ತು ಈ ದೇಶ ನಮ್ಮ ಪಾಡಿನ ಕಿಚ್ಚು ಮೂಡಲಿ ಎಲ್ಲೆಡೆ ಬದುಕು ಶೂನ್ಯವಾಗಿದೆ ಹೆಪ್ಪುಗಟ್ಟಿದ ರಾತ್ರಿಯಲಿ ನೋವಿನ ಹಾಡು ಹೊರಡುತಿದೆ ಇದೊ! ಎದೆ ತಂತಿಯ ನರಳಿಕೆಯಲಿ ಕಣ್ಣ ಪೊರೆ ಮಂಜಾಗಿದೆ ನಾಳಿನ ಚಿಂತೆಯಲಿ ಈ ಸುದೀರ್ಘ ರಾತ್ರಿಯಲಿ  ಕನಸುಗಳು ತೇಲುತಿವೆ ಉಲ್ಕೆಗಳಾಗಿ  ತೆರೆದು ಮುಚ್ಚುವ ರೆಪ್ಪೆಗಳಲಿ ************                                                              

ಕಾವ್ಯಯಾನ Read Post »

ಕಾವ್ಯಯಾನ

ಗಝಲ್ ಸಂಗಾತಿ

ಗಝಲ್ ಡಾ.ಗೋವಿಂದ ಹೆಗಡೆ ಅವನು ನನ್ನೊಡನೆ ಇದ್ದಿದ್ದು ಅದೊಂದೇ ಸಂಜೆ ನಾನು ನನ್ನನ್ನೇ ಮರೆತಿದ್ದು ಅದೊಂದೇ ಸಂಜೆ ಹಕ್ಕಿಗಳು ಗೂಡಿಗೆ ಮರಳಿ ಬರುವ ಹೊತ್ತು ಮನಸು ಗರಿಬಿಚ್ಚಿ ಹಾರಿದ್ದು ಅದೊಂದೇ ಸಂಜೆ ಪಡುವಣದ ಕೆನ್ನೆಗೆ ರಂಗು ಬಳಿದಿದ್ದ ಸೂರ್ಯ ಕನಸುಗಳಿಗೆ ಬಣ್ಣ ಏರಿದ್ದು ಅದೊಂದೇ ಸಂಜೆ ಎಷ್ಟೊಂದು ಅಲೆಗಳು ದಡವ ಮುದ್ದಿಟ್ಟವಾಗ ಕಡಲು ಉಕ್ಕುಕ್ಕಿ ಹರಿದಿದ್ದು ಅದೊಂದೇ ಸಂಜೆ ನಮ್ಮ ಬಡಕೋಣೆಯಲಿ ಚಂದ್ರೋದಯವಾಯ್ತು ಮಧುಪ ಮಧುವೆರೆದಿದ್ದು ಅದೊಂದೇ ಸಂಜೆ ಸಂಜೆ ಇರುಳಾಗಿ ಅಯ್ಯೋ ದಿನ ಉರುಳಿತಲ್ಲ ಕಾಡುವ ನೆನಪಾಗಿ ಉಳಿದಿದ್ದು ಅದೊಂದೇ ಸಂಜೆ ಮುಂಗುರುಳ ಚುಂಬಿಸಿ ವಿದಾಯ ನುಡಿದ ಸಖ ಬದುಕಿಗೆ ಬದುಕ ತುಂಬಿದ್ದು ಅದೊಂದೇ ಸಂಜೆ

ಗಝಲ್ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಮಂತ್ಲಿಪಿರಿಯಡ್ಸ್ ಮತ್ತು…. ವಿಜಯಶ್ರೀ ಹಾಲಾಡಿ ಮಂತ್ಲಿಪಿರಿಯಡ್ಸ್ ಮತ್ತು…. ರಕ್ತ ಕಂಡರೆ ಹೆದರುವಕೋಮಲೆಗೆ ಅನಿವಾರ್ಯ ಮಂತ್ಲಿ ಪಿರಿಯಡ್ಸ್ ! ಬ್ರೆಡ್ – ಜಾಮ್ ಹೋಲಿಕೆಗೆ ಲಘುವಾಗಿ ನಕ್ಕವಳೇ ಇನ್ನೀಗ ಅಳಬೇಕು ಹೆರಿಗೆ ಬೇನೆಯಾದರೂ ಮುಗಿಯುತ್ತದೆ ಒಮ್ಮೆಗೇ ಇಪ್ಪತ್ತೆಂಟರ ಸೈಕಲ್ ಇಪ್ಪತ್ತಾರು- ಇಪ್ಪತ್ತನಾಲ್ಕಕ್ಕೇ ಹಾಗಾದರೆ ವರ್ಷಕ್ಕೆಷ್ಟು ! ಟೆನ್ಷನ್ ಜಾಸ್ತಿಯಾದರೆ ಬ್ಲೀಡಿಂಗೂ ಜಾಸ್ತಿ ಪ್ಯಾಡುಗಳೂ ಇರಿಸುಮುರುಸುಗಳೂ ನೋವು ಅಪಮಾನಗಳೂ… ಐವತ್ತೋ ಐವತ್ಮೂರಕ್ಕೋ ನಿಲ್ಲುತ್ತದಂತೆ … ಅಂತೆಕಂತೆಗಳಿಗೂ ಆಚೆ ಬದುಕಿದೆ ಮೆನೋಪಾಸ್ ತೀಕ್ಷ್ಣತೆಗೆ ಡಿಪ್ರೆಶನ್ ಸುಸೈಡ್ ಉದಾಹರಣೆಗಳೂ ಉಂಟು! ಈ ನಡುವೆ ಯುಟಿರಸ್ ಒಂದಿಷ್ಟು ಗಲಾಟೆ ಮಾಡಿದರೆ ವಿಶ್ರಾಂತಿ ಬಯಸಿದರೆ ಹಿಸ್ಟರೆಕ್ಟಮಿ- ಸರ್ಜರಿ ….. ಹಾರ್ಮೋನ್ ಏರುಪೇರು ಉಫ್ ಮುಗಿವ ಕತೆಯಲ್ಲ ! ಸರ್ವಶಕ್ತನಾದ ದೇವನೇತಮಾಷೆಗೂ ಹೆಣ್ಣಾಗದಿರು !=====================

ಕಾವ್ಯಯಾನ Read Post »

ಕಾವ್ಯಯಾನ

ಗಝಲ್ ಸಂಗಾತಿ

ಗಝಲ್ ಡಾ.ಗೋವಿಂದ ಹೆಗಡೆ ತಪ್ಪು ನನ್ನದೇ ಗೆಳತಿ,ಬಿಡದೆ ಚುಂಬಿಸಿದೆ ಕೊಳ್ಳಿಯನ್ನು ಊದಿ ಊದಿ ಉರಿಸಬಾರದಿತ್ತು ಹೀಗೆ ನಿನ್ನ ಒಡಲನ್ನು ಎದೆಯ ಆಳ-ಅಗಲಗಳ ನಾನೇಕೆ ಕುಗ್ಗಿಸಿಕೊಂಡೆ ಅಗ್ಗವಾಗಿಸಬಾರದಿತ್ತು ಹೀಗೆ ನನ್ನ ನಿಲುವುಗಳನ್ನು ಕಂಬನಿಯಿಂದಲ್ಲವೇ ಕಿಲುಬೆದೆಯ ತೊಳೆಯುವುದು? ನಿಚ್ಚಳ ನೋಡಬೇಕಿನ್ನು ಹರಿದೆಲ್ಲ ಪೊರೆಗಳನ್ನು ಹಸಿದಿರುವೆನೆಂದು ಸಿಕ್ಕಿದ್ದನ್ನೆಲ್ಲ ತಿನ್ನಲಾದೀತೇನು ಉಳಿಸಿಕೊಳ್ಳಲೇಬೇಕು ನೀನು ಕೊಟ್ಟ ಒರೆಗಳನ್ನು ಬಿದ್ದಾಗಲೂ ನಾನು ನಾನೇ ಮರೆಯಬಾರದು, ಸಖೀ ಉಳಿಸುವೆ ಉಡುಗಲು ಬಿಡದೆ ಎದೆಯ ಪಿಸುದನಿಗಳನ್ನು =============

ಗಝಲ್ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಆತನೊಲವು ಆತ್ಮ ಭಲವು ಜಗವ ಪ್ರೀತಿಸಿದ ಸಂತನ ಹುಟ್ಟು ಹಬ್ಬದ ಶುಭಾಷಯಗಳು ಸತ್ಯಮಂಗಲ ಮಹಾದೇವ ಕೇಳುತ್ತೀರಿ ನೀವು ನೀನು ಯಾರು ಎಂದು ಉತ್ತರಿಸಿದರೆ ಸಾಕು ನಿಮ್ಮದೇ ಉಯಿಲು ಲೋಕದ ಪಡಸಾಲೆಯಲ್ಲಿ ಹೇಳುವುದನ್ನು ಹೇಳಲೇ ಬೇಕು ಕಲ್ಲು ಮುಳ್ಳಿನ ಹಾದಿಯಲಿ ಮುಳ್ಳಿನ ಕಿರೀಟ ಹೊತ್ತ ಸಂತ ಮೈ ತುಂಬಾ ರಕ್ತದ ಧಾರೆ ಹರಿಯುತ್ತಿರಲು ಪ್ರೇಮದ ಸಾಕ್ಷಿ ಈ ರಕುತವೆಂದ ತಿವಿದವರ ತಿಳುವಳಿಕೆಯ ಕ್ಷಮಿಸಿರೆಂದ ಸಂಕಟಪಡುವವರ ಆತ್ಮ ಸಖನಾದ ನನ್ನೊಳಗೆ ನನ್ನನ್ನು ತಿಳಿಸಿದ ನೀನು ಯಾರು ಯಾವ ಊರು, ಯಾರಮಗ, ಯಾವ ಜಾತಿ ಆತ ಯಾವುದನ್ನು ಕೇಳದೆ ನನ್ನವನು ನೀನೆಂದ ಸಂತಸವು ಏನೆಂದು ತಿಳಿಸಿಕೊಟ್ಟ ಊರ ಹೊರಗಿನ ಹಟ್ಟಿಹುಡುಗನಿಗೆ ಗೆಳೆಯನಾದ ನಿನಾದದ ನಾದದಂತಾದ ಕೊಟ್ಟಿಗೆಯಲಿ ಹುಟ್ಟಿದ ಕಟ್ಟಕಡೆಯವನ ಮುಟ್ಟಿದ ತನ್ನಂತೆ ಇತರರನು ನೋಡೆಂದ ನೋವುಂಡು ನಲಿವಿನ ರಾಜ್ಯದ ಭರವಸೆಯ ಕೊಟ್ಟ ಈತ ಹೇಳುವುದು ನಾನು ಶಾಶ್ವತ ಗೆಳೆಯ ಹುಡುಕಿ ಕೊಡಿ ಯಾರಾದರು ಇದ್ದಾರೆಯೇ ಇವನಂತೆ ನೊಂದವರಿಗೆ ಅವ ಕಣ್ಣೀರು ಒರೆಸುವ ಸೇವಕ ನಮ್ಮೂರ ಸಂತೆಯ ಗೆಣೆಕಾರ ಯಾರು ಎಂದು ಮತ್ತೆ ಕೇಳಬೇಡಿ ಆತನೊಲವು ಆತ್ಮ ಭಲವು ಬೇರೆ ಬೇಕೆ ಸಾಕ್ಷಿಗೆ. ==================================

ಕಾವ್ಯಯಾನ Read Post »

You cannot copy content of this page

Scroll to Top