ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಗಝಲ್ ಅರುಣ್ ಕೊಪ್ಪ ನೀನು ನಗುತ್ತಿಲ್ಲ,ತಾರೆಯಾ ಹೊದ್ದು ಭೂಪನಂತಿದ್ದರೂ ಅಹಂಕಾರವಿಲ್ಲದ ನಿಗರ್ವಿ ನೀನು ನಿನಗಾಗಿ ಅಲ್ಲವೆ ನೀನು ಕಪ್ಪಾದ ಪಂಜರದಲ್ಲಿ ಮೌನ ಸಾಕಿ ಬೀಗುವದಿಲ್ಲ ಬಡಾಯಿ ಕೊಚ್ಚೊ ಬೊಗಳೇದಾಸನಾ ನೀನು ನಿನಗಾಗಿ ಅಲ್ಲವೆ ಮುಳ್ಳು ಮೈಗೆ ಆವರಿಸಿದರೂ ಮೊಗ ನಗು ಮೊಗ್ಗು ಹೂವುಗಳು ಕೆಲ ತಾವುಗಳಲಿ ಸುರಸುಂದರಿ ನೀನು ನಿನಗಾಗಿ ಅಲ್ಲವೆ ಸುತ್ಮೂರು ಹಳ್ಳಿಗಳ ಹಿಶೆ, ನ್ಯಾಯಕೆ ಜಗರಿ ಕೂರುವ ಒಂಟಿ ಸಲಗದಂತೆ ಬೇಕು ಬೇಡಗಳ ನುಂಗಿ, ತಂಪು ಚೆಲ್ಲುವ ತಂಗಾಳಿ ಆಲ ನೀನು ನಿನಗಾಗಿ ಅಲ್ಲವೆ ಭಕ್ತರ ಹೂವು ,ಹಾಲು ,ಗಂಧ ಸುಗಂಧಗಳ ಮೆಂದು ಬೆಳಗಿನಿಂದ ಇಡಿ ದಿನ ಒಂಟಿಯಾಗಿ ಕೂತ ದೇವ ಯೆನ್ನುವ ಮೌನ ಮುರಿಯದ ನೀನು ನಿನಗಾಗಿ ಅಲ್ಲವೇ =======

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮೌನದ ಹಾಡು ದೇವು ಮಾಕೊಂಡ, ಸಿಂದ್ಗಿ ಇಳಿಸಂಜೆಯ ಒಬ್ಬಂಟಿತನದಲಿ ಮೈನೆರೆದು ನಿಂತ ಮುಳ್ಳುಕಂಟಿಗಳ ನಡುವೆ ಬೆಣ್ಣೆಯುಂಡೆಯಾಗಿದ್ದೇನೆ ಹೆಪ್ಪುಗಟ್ಟಿವೆ ಕ್ರೀಯೆಗಳು ಬಂಡೆಗಲ್ಲಿನ ಹಾಗೆ ಪತರಗುಟ್ಟುತ್ತಿವೆ ಭಾವಗಳು ಚಪ್ಪರದಂತೆ ನಿಷ್ಕ್ರೀಯಗೊಂಡಿದೆ ಚಲನೆ ಸೀಮೆಗಲ್ಲಿನಷ್ಟು ಮಧು ಕುಡಿದು ಎದೆಚುಚ್ಚುವ  ರಣಹದ್ದುಗಳದ್ದೇ ಕಾರುಬಾರುವಿಲ್ಲಿ ಅದಕ್ಕೆಂದೆ ಹೂವುಗಳು ರಾತ್ರಿಯೆದ್ದು ಹಗಲು ಮಲಗುತ್ತವೆ ಕರಾಳ ಬೆಳಕಿಗಂಜಿ ಹೆಪ್ಪುಗಟ್ಟಿದ ಬೆಳಕಿಗೆ ನೆರಳುಗಳಾಡಿಸುವ  ಹಗಲು ರಾತ್ರಿಗಳ ಪಂಜೆಗಳು ವಿಭೇದಿಸುವ ಕಪ್ಪು ನೆಲವೇ ರೂಪರೇಖೆ ನಮ್ಮೊಳಗಿನ ಮೌನದ ಹಾಡೆ ಸುಖದ ಹೆರಿಗೆ

ಕಾವ್ಯಯಾನ Read Post »

ಕಾವ್ಯಯಾನ

ಗಝಲ್

ಗಝಲ್ ಸುಜಾತ ರವೀಶ್ ಬಾಳಬಾನಲಿ ಹೊಂಬೆಳಕಾಗಿ ಬಂದೆ ಏನಿರಲಿಲ್ಲ ಕಾರಣ ಇಂದೀಗ ಅಮಾವಾಸ್ಯೆಯ ಕಗ್ಗತ್ತಲು ತಿಳಿಯುತ್ತಿಲ್ಲ ಕಾರಣ ಜೀವನವನದಿ ಅರಳಿ ನಗುತ್ತಿದ್ದವು ಸುಂದರ ಹೂಗಳು ಈಗೆಲ್ಲಾ ಬರೀ ಬೋಳು ಬರಡು ಅರಿಯಲಾಗುತ್ತಿಲ್ಲ ಕಾರಣ ಜೀವ ವೀಣೆ ಮಿಡಿದು ಅಂದು ಹೊರಟಿತ್ತು ಒಂದು ಸುಶ್ರಾವ್ಯ ಗಾನ ತಂತಿ ಏಕೋ ಮುರಿದು ಅಪಸ್ವರ ಕೇಳಲಾಗುತ್ತಿಲ್ಲ ಕಾರಣ ಹೊಸ ಹೊಸ ಆಸೆ ತರಂಗಗಳು ಗಗನದೆತ್ತರ ವಿಸ್ತಾರ ಅಗಲಿಕೆಯ ಬಿರುಗಾಳಿ ಏಕೆ ಹೇಳಲಾಗುತ್ತಿಲ್ಲ ಕಾರಣ ಹಂಬಲಗಳ ನವ ಕನಸುಗಳು ಮೂಡಿಸಿದ್ದವು ಚಿತ್ತಾರ ದುಃಖಿತೆ ವಿರಹಿಣಿ ಸುಜಿಗೆ ನೀ ಹೇಳಿಹೋಗಲಿಲ್ಲ ಕಾರಣ

ಗಝಲ್ Read Post »

ಕಾವ್ಯಯಾನ

ಕಾವ್ಯಯಾನ

ಪುಣ್ಯವಂತೆ… ಅವ್ಯಕ್ತ ಕಾಣಲಿರುವ ಒಡನಾಟದ ಚುಕ್ಕಿಯಾಗಿ ಬಂದಳು ಕನಸುಗಳ ಹೊತ್ತು ನನಸ ಮಾಡುವ ಬಿರುಸಿನಲಿ ಮಿಡಿಯೋ ಮನಸುಗಳಿಗೆ ಮಿಲನದ ಔತಣವನಿಟ್ಟು ಮುಗಿಲೆತ್ತರದ ಭಾವಗಳ ಮುಟ್ಪಿಬರುವ ರೆಕ್ಕೆ ಹೊತ್ತು ನೋವುಗಳ ನುಂಗಿ ನಗುತ ನಲಿಸುವ ಕಲೆಯೇ ಸುಂದರ ಅಂತ್ಯದೆಡೆಗೆ ಹೂಹಾಸಿ ನಲಿಯುತ ಹರಿಯುವುದೇ ಸುಂದರ ತುಸು ಕ್ಷಣದ ಹನಿಗಳಲಿ ,ಮೈಮರೆತು ಲೀನಳಾಗಿ.. ನಿನ್ನಲ್ಲೆಲ್ಲೋ ನನ್ನ ಕಂಡೆ ನನ್ನಲ್ಲೆಲ್ಲೋ ನಿನ್ನ ಕಂಡೆ. ಕಣ್ರೆಪ್ಪೆ ಮಿಟುಕಿಸುವಷ್ಟರಲ್ಲಿ ಹೇಳದೇ ಮಾಯವಾಗುವವರಲ್ಲಿ, ಹೇಳಿಹೋದ ಸೌಂದರ್ಯ ಕನಿಕೆ.. ಸಾಧನೆಯ ಪುಟಗಳಲ್ಲಿ ಮಿನುಗುನಕ್ಷತ್ರ.. ನೀನಿಲ್ಲದೆ ನೀನಿಲ್ಲಿರುವೆ, ನೀನಳಿದರು ಅಳಿಯದೆ ಹೊಳೆಯುತಿರುವೆ, ತಂಪಾದ ಗಾಳಿಯಲ್ಲಿ ಸೊಂಪಾದ ಪರಿಮಳದಂತೆ, ತಿಳಿ ನೀರಿನಲಿ ಅಡಗಿರುವ ಸವಿರುಚಿಯಂತೆ, ಕಣ್ಣೀರಿನ ಅಂಚಿನಲಿ ಸಿಹಿ ನೆನಪುಗಳ ನಗುವಿನಂತೆ, ನೀನೆ ಪುಣ್ಯವಂತೆ…. ಅತಿ ವಿರಳ ಉಡುಗೊರೆ ನಿನ್ನದಾಗಿದೆ.. ಮನಗಳ ಅರಮನೆಯಲ್ಲಿ ನಿನಗೊಂದು ಶಾಶ್ವತ ಸ್ಥಾನವಿದೆ! ಆತ್ಮಕ್ಕಿಂದು ಎನ್ನ ಮನದಾಳದ ನಮನ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ತುಂಬು ಡಾ.ಗೋವಿಂದ ಹೆಗಡೆ ನಾನೂ ರಂಗವೇರಿದ್ದೇನೆ ನಿನ್ನೊಂದಿಗೆ ನರ್ತಿಸಲಲ್ಲ.. ಮೂಲೆಯಲ್ಲಿ ನಿಂತು ಕುಣಿಯುವ ನಿನ್ನ ಬಿಂಬವ ಎದೆ ತುಂಬಿಕೊಳ್ಳಲಿಕ್ಕೆ ಗೆಜ್ಜೆಯಿಂದ ಉದುರುವ ಕಿರುಗಂಟೆಯೊಂದನ್ನೆತ್ತಿ ಚುಂಬಿಸಲಿಕ್ಕೆ ನೆನಪಿನಂಗಳದಲ್ಲಿ ತೂಗಿಬಿಡಲಿಕ್ಕೆ- ಅನಂತದವರೆಗೆ…

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಶಕ್ತಿ ಅವ್ಯಕ್ತ ಸೃಷ್ಟಿ-ಸ್ಥಿತಿ-ಲಯ ಗರ್ಭದ ಮುಕ್ತ ರಹಸ್ಯ ರಾಣಿ ನಾ! ಹರಿವ ಜ್ವಾಲಾ ಶಕ್ತಿಯೊಳು ತಂಪೆರೆವ ವಿಮುಕ್ತಿ ನಾ! ಸಖಿ,ಕಾಮಿನಿ, ಧರ್ಮಿಣಿ, ಸಂಹಾರಿಣಿ, ವೈಷ್ಣವಿ ನಾ! ಸುಳಿಗಳೊಳು ಸಿಲುಕದಂತೆ ಗರಿಚಾಚಿ ಹೊಳೆವೆ ನಾ! ಪ್ರೀತಿಯ ಕಾಮನ ಬಿಲ್ಲಲಿ ಕಣ್ಣುಗಳ್ನಲಂಕರಿಸುವೆ, ಸಿಹಿಕನಸಮಳೆಯ ಮೌನ ಮುಗುಳ್ನಗೆಯೋರಳಿಸುವೆ, ಗಂಭೀರ ಮೂಗುತಿಯನ್ನು ಏರಿಸಿ ಕಾಂತಿಯ್ನ್ಹೆಚ್ಚಿಸುವೆ, ಸುಪ್ತ ಜ್ಞಾನ, ಮುಕ್ತ ಪ್ರೇಮ, ನಿರ್ಲಿಪ್ತ ಮನದ ಕುಂಕುಮ ಧರಿಸುವೆ. ವಜ್ರಕಲ್ಲಾಗಿ, ಗುಪ್ತಗಾಮಿನಿಯಾಗುವೆ ಕೇಸರಿದಾರಿಣಿಯಾಗಿಬಿಡುವೆ, ನೋಡದಿರು ಬಿಲೋಳಗಿನ ಆಳದ ಪ್ರೀತಿಯ, ಸವಿಯಲಿಚ್ಚಿಸದ್ದಿದ್ದರೆ.. ಕೇಳದಿರು ಮೌನ ದೇಗುಲದೊಳಿರುವ ಹಾಡ, ಕನಸಕಿನ್ನರನಲ್ಲದಿದ್ದರೆ.. ಮುಟ್ಟದಿರು ಮೂಗುತಿಯ, ಮುಗ್ಧತೆಗೆ ಒಲಿವ ಹರಿಯಾಗದಿದ್ದರೆ.. ಪ್ರೀತಿ, ಪ್ರೇಮ, ಸ್ನೇಹ, ತಾಳ್ಮೆ, ತ್ಯಾಗ, ಜ್ಞಾನ, ಮೌನ.. ಎರಡಕ್ಷರದ ಆಭರಣಗಳೇ ಇಡೆಯಿಂದ ಮುಡಿಗೆ.. ನಗ್ನ ನೋಟಕೆ ಎನ್ನಯ ಶಕ್ತಿಕಾಂತಿಯ ಮೂಲವಾಗಿರಲಿ

ಕಾವ್ಯಯಾನ Read Post »

ಕಾವ್ಯಯಾನ

ಗಝಲ್ ಸಂಗಾತಿ

ಗಝಲ್ ಎ.ಹೇಮಗಂಗಾ ಲೋಕದಾ ನಿಯಮಗಳ ಗಾಳಿಗೆ ತೂರಿ ಬಂದುಬಿಡು ನೀ ಮೆಲ್ಲನೆ ಹೂವೊಳು ಗಂಧ ಬೆರೆತಂತೆ ನನ್ನೊಳು ಸೇರಿಬಿಡು ನೀ ಮೆಲ್ಲನೆ ಟೀಕೆಗಳ ಕತ್ತಿ ಇರಿತಕೆ ನಲುಗಿ ಇದ್ದೂ ಇಲ್ಲದಂತಾಗಿದೆ ಜೀವ ನಲುಮೆ ತೋರಿ ಎದೆಗಪ್ಪಿ ನೋವ ಮರೆಸಿಬಿಡು ನೀ ಮೆಲ್ಲನೆ ನಿನ್ನದೇ ಕನವರಿಕೆಯಲಿ ಮುಳುಗಿ ನಿದಿರೆ ದೂರವಾಗಿದೆ ನನಗೆ ದುಃಖದಿ ಕಂಗಳು ಬಾತುಹೋಗಿರೆ ಸವರಿಬಿಡು ನೀ ಮೆಲ್ಲನೆ ಅದೆಷ್ಟು ಹೇಳಲಾಗದ ಮಾತುಗಳಿದ್ದವು ನನ್ನ ನಿನ್ನ ನಡುವೆ ! ನಗುವನ್ನೇ ಮರೆತ ಅಧರಗಳ ಒಮ್ಮೆ ಚುಂಬಿಸಿಬಿಡು ನೀ ಮೆಲ್ಲನೆ ಗುಡಿಸಲಾದರೂ ಸರಿ, ನಿನ್ನೊಡನೆ ಬಾಳುವಾಸೆ ಇದೆ ಈಗಲೂ ಕಣ್ರೆಪ್ಪೆಯೊಳು ಅವಿತಿಹ ಕನಸ ನನಸು ಮಾಡಿಬಿಡು ನೀ ಮೆಲ್ಲನೆ ನಂಜು ಮುಳ್ಳಾದ ಪ್ರೀತಿಯೇಕೋ ನನ್ನ ಬಲಿಪಡೆಯುತಿದೆ ಹೀಗೆ? ದೇಹ ನಿರ್ಜೀವಗೊಳ್ಳುವ ಮುನ್ನ ನನ್ನವನಾಗಿಬಿಡು ನೀ ಮೆಲ್ಲನೆ ದೀಕ್ಷೆ ತೊಟ್ಟಿಹೆ ನಾ ನೀನಿಲ್ಲಿಗೆ ಬರದೆ ಪ್ರಾಣ ತೊರೆಯೆನೆಂದು ‘ಹೇಮ’ಳ ಅಂತಿಮ ವಿದಾಯಕೆ ಮಡಿಲ ನೀಡಿಬಿಡು ನೀ ಮೆಲ್ಲನೆ ಇವರು ‘ಸಿರಿಗನ್ನಡ ವೇದಿಕೆ’ ಮೈಸೂರಿನ ಜಿಲ್ಲಾಧ್ಯಕ್ಷೆ……ರಾಜ್ಯ ಸಮಿತಿಯ ಉಪಾಧ್ಯಕ್ಷೆ…………..’ ಹೇಮಗಂಗಾ ಕಾವ್ಯ ಬಳಗ’ದ ಅಧ್ಯಕ್ಷೆ ಯಾಗಿ ನೂರಾರು ಕವಿಗಳನ್ನು ಬೆಳಕಿಗೆ ತಂದಿದ್ದಾರೆ . ಅನೇಕ ಸಂಘ , ಸಂಸ್ಥೆಗಳ ಪೋಷಕಿಯಾಗಿ ಸೇವೆ ಸಲ್ಲಿಸಿದ್ದಾರೆ… ಉತ್ತಮ ವಾಗ್ಮಿಯೂ, ಕವಯಿತ್ರಿಯೂ ಆಗಿರುವ ಹೇಮಗಂಗಾ ಇಲ್ಲಿಯವರೆಗೆ ಎರಡು ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ…..’ಮುಕ್ತ ವಚನಾಮೃತ’ ‌…..ನೂರು ವಚನಗಳ ಸಂಗ್ರಹ ಮತ್ತು ‘ ಹೃದಯಗಾನ’ ….ಭಾವಗೀತೆಗಳ ಸಂಕಲನ . ಕನ್ನಡ ಗಜ಼ಲ್ ಗಳ ಸಂಕಲನವೊಂದು ಪ್ರಕಟಣೆಯ ಹಂತದಲ್ಲಿದೆ

ಗಝಲ್ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಮೊಗ್ಗಿನ ಜಡೆ ಜಯಾ ಮೂರ್ತಿ ದಟ್ಟ ಕೂದಲಿನ ಪುಟ್ಟ ಸಹನ ಬಯಸಿದಳು ಒಂದುದಿನ ಜಡೆ, ಮಲ್ಲಿಗೆ ಮೊಗ್ಗಿನ ‘ಅಮ್ಮ ಹಾಕು ಮೊಗ್ಗಿನ ಜಡೆ’ ಮುದ್ದುಗರೆದಳು ಅಮ್ಮನೆಡೆ ಮಗಳ ಇಚ್ಚೆ ಪೂರೈಸಲು ಸಂತೆ ಕಡೆ ಚೀಲ ಹೆಗಲಿಗೇರಿಸಿ ತಂದೆ ಹೊರಟರು ಮಲ್ಲಿಗೆ ಕಡೆ ಘಮ ಘಮ ಮೊಗ್ಗು ಮನೆಸೇರಲು ಅಮ್ಮ ಕುಚ್ಚು, ಬೈತಲೆ ಬೊಟ್ಟು, ಜಡೆಬಿಲ್ಲೆ ಹೊರತೆಗೆದಳು ಗಳಿಗೆಯಲ್ಲಿ  ಉದ್ದ ಕೂದಲ ಬಾಚಿ ಜಡೆ ಹೆಣೆದಳು ನಲಿಯುತಲಿ ಮೊಗ್ಗ ಪೋಣಿಸುತ್ತಾ ಹೊಲೆದಳು ದಟ್ಟ ಜಡೆಗೆ ಮುಗುಳ್ನಗೆ ಯೊಳು ಕುಚ್ಚು ಗಲಗಲ ಎನ್ನಲು ಮುಗುಳ್ನಗಲು ಮೊಗ್ಗುಗಳು ಬೆರೆಯುತ್ತಾ ಕಿಲ ಕಿಲಾ ಸಹನಾಳ ನಗೆಯೊಳು ಉಡಿಸಿಹಳು  ರೇಶಿಮೆ ಸೀರೆ ತಾಯಿ ಮಗಳಿಗೆ,  ಪುಟ್ಟ ಸಹನಾ ಮೆರೆದಿರೆ ಕನ್ನಡಿಯಲ್ಲಿ ಜಡೆ ಪ್ರತಿಬಿಂಬಿಸಿರೆ ತಂದೆ ಚಿತ್ರ ತೆರೆದಿರೆ ಸಂತಸ ಮನೆಯಲ್ಲಿ ಹರಿದಿರೆ ಉಳಿದ ಮೊಗ್ಗುಗಳ ಹಾರ ಕೃಷ್ಣ ನ ವಿಗ್ರಹ ಅಲಂಕರಿಸಿರೆ ದೀಪ ಬೆಳಗಿ ಮಗಳ ಆಶೀರ್ವಾದ ತಾಯಿ ಬಯಸಿರೆ ಮಗಳ ಆನಂದ ಹೀಗೆ ಇರಲಿ ಎನ್ನುತಿರೆ ಉರುಳಿತು ಸಂವತ್ಸರುಗಳು ಇಂದು ವಧುವಾಗಿ ಸಹನಾ ನಿಂತಳು ಬಿಳಿಸೀರೆ, ಆಭರಣ ಗಳ ತೊಟ್ಟ ಮಗಳು ಮೊಗ್ಗಿನಜಡೆ ಅಲಂಕೃತ ವ ಇಮ್ಮಡಿಸಲು ಓಡಿತು ತಾಯ ಹೃದಯ ಅಂದಿನ ಸಹನಾ ಮೊಗ್ಗಿನ ಜಡೆ ಬಯಸಿದ ದಿನ ಕೃಷ್ಣ ನ ಆಶೀರ್ವಾದ ಫಲಿಸಿತ್ತು ಈ ದಿನ ಮಗಳು ಅಳಿಯರು ಮಂಟಪದಲ್ಲಿ ನಿಂತ ಸುದಿನ ಮತ್ತೇನ ಬಯಸುವರು ಜನ್ಮವಿತ್ತ ತಂದೆ ತಾಯಿಯರು ಮಗಳ ಸುಖ ಜೀವನ ಅದೇ ಜೀವನದ ಗುರಿ ಧಾರೆ ಎರೆದರು ಮಗಳ, ತುಂಬಿದ ಸಭೆ ಅಕ್ಷತೆಯ ಮಳೆ ಸುರಿಸಿಹರು          ಶುಭಮಸ್ತು, ಶುಭಾಶಯಗಳ          ಧ್ವನಿ ಪ್ರತಿಧ್ವನಿಸಲು          ಮುಗುಳ್ನಕ್ಕರು ದಂಪತಿಗಳು            ಅವರ ಆಕಾಂಕ್ಷೆ ಫಲಿಸಲು. ಕಿರು ಪರಿಚಯ:          ವಾಸ ಇಟಲಿಯಲ್ಲಿ. ಕರ್ಣಾಟಕ ದಿಂದ ಬೆಂಗಳೂರು ಮೈಸೂರು. ಕವನಗಳನ್ನು ಬರೆಯುವ ಹವ್ಯಾಸ. ಹ್ರತ್ಕಮಲ 50 ಕವನಗಳ ಪುಸ್ತಕ publish ಆಗಿದೆ. 

ಕಾವ್ಯಯಾನ Read Post »

ಕಾವ್ಯಯಾನ

ಗಝಲ್ ಸಂಗಾತಿ

ಗಝಲ್ ರೇಖಾ ಗಜಾನನ ಮೌನವ ಮುರಿದು ಮಾತಿನ ಮನೆಯ ಕಟ್ಟೋಣ ಬಾ ಗೆಳೆಯಾ ನಿನ್ನೆ ಉತ್ತ ಬಯಲಿನಲಿ ಹೊಸ ಬೀಜ ಬಿತ್ತೋಣ ಬಾ ಗೆಳೆಯಾ ಕಾಪಿಟ್ಟ ಮನೋಬಲವು ಬರಿದೇ ಧ್ಯಾನಸ್ಥವಾದರೇನು ಚೆನ್ನ ಕೈಗೆ ಕೈಜೋಡಿಸಿ ಯಶದ ಧನುಸ್ಸನ್ನು ಎತ್ತೋಣ ಬಾ ಗೆಳೆಯ ಒಲವು ಹುಟ್ಟಿತೆಂದರೆ ಅಲ್ಲೊಂದು ಹೊಸಜಗದ ಉಗಮ ತಾನೇ ಹಸಿರ ಹಾಸಿ ಕರೆದಿದೆ ನಮ್ಮಿಬ್ಬರ ಲೋಕ ಸುತ್ತೋಣ ಬಾ ಗೆಳೆಯಾ ಸುತ್ತಮುತ್ತ ಬಂಡೆಗಲ್ಲುಗಳ ಸಾಲು ಬೆಳೆಯುತ್ತಲೇ ಇದೆ ನೋಡು ಕುಶಲದಿಂದ ಕುಂದಿಲ್ಲದ ಮೂರ್ತಿಯನು ಕೆತ್ತೋಣ ಬಾ ಗೆಳೆಯಾ ಜೋಡಿ ‘ರೇಖೆ’ಯ ಪಯಣವಿದು ಜೊತೆಜೊತೆಯಿದ್ದರೆ ಮಾತ್ರ ಗುರಿ ಅದೋ ನೆಮ್ಮದಿಯೆಂಬ ಗಮ್ಯವಿದೆಯಂತೆ ಮುಟ್ಟೋಣ ಬಾ ಗೆಳೆಯಾ ಕಿರು ಪರಿಚಯ: ರೇಖಾ ಗಜಾನನ ಭಟ್ಟ ಹುಟ್ಟೂರು: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೊನ್ನಗದ್ದೆ ವೃತ್ತಿ : ಪ್ರಾಥಮಿಕ ಶಾಲಾ ಶಿಕ್ಷಕಿ ಪ್ರವೃತ್ತಿ : ಸಾಹಿತ್ಯದ ಓದು ಹಾಗೂ ಬರೆವಣಿಗೆ ಹಾಗೂ ಗಾಯನ ಪ್ರಥಮ ಕೃತಿಯಾದ ‘ಮಡಿಲ ನಕ್ಷತ್ರ’ ಗಜಲ್ ಸಂಕಲನವು ಕನ್ನಡ ಪುಸ್ತಕ ಪ್ರಾಧಿಕಾರದ ಧನಸಹಾಯ ಯೋಜನೆಯಡಿಯಲ್ಲಿ ಆಯ್ಕೆ ಆಗಿ ,ಪುರಸ್ಕಾರ ಪಡೆದಿದ್ದು, ಈ ವರ್ಷ ಬಿಡುಗಡೆಗೊಂಡಿದೆ. ಗಜಲ್, ಕವನ , ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿ

ಗಝಲ್ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸುಜಾತಾ ಲಕ್ಮನೆ ಮುಚ್ಚು ಮರೆಯಿಲ್ಲದೆ ಎದೆಕದವ ತೆರೆಯೋಣ ಅಚ್ಚು ಮೆಚ್ಚಿನಲಿ ಒಲವ ಬಂಡಿಯ ತಳ್ಳೋಣ ಅರ್ಥವಾಗದ ಮಾತು ಅದೆಷ್ಟು ಆಡಿದರೇನು ಅಕ್ಕಪಕ್ಕದಲಿ ಕೂತು ಒಳಧ್ವನಿಯ ಕೇಳೋಣ ಬಾಳ ದಾರಿಯಲೆಲ್ಲ ಹೂವಿರಲಿ, ಮುಳ್ಳೇಯಿರಲಿ ನೋವು ನಲಿವಿನ ಮಧ್ಯೆ ಮನ ಬಿಚ್ಚಿ ನಗೋಣ ತೆರೆಮರೆಯಲಿ ಕುಣಿವ ಮುಖವಾಡ ಕಂಡೆಯಾ ಒಳ ಹೊರಗುಗಳನೂ ವಂಚಿಸದೇ ಬಾಳೋಣ ನಮ್ಮ ಭರಪೂರ ಕನಸುಗಳಿಗೆ ಕಡಿವಾಣವಿರಲಿ ಸೋಲು ಗೆಲುವುಗಳಲಿ ಕೈ ಹಿಡಿದು ಸಾಗೋಣ ಎನ್ನ ಕಣ್ಣಾಳದಲಿ ನೀ ಒಮ್ಮೆ ಧುಮುಕಬಾರದೇ ಪರಿಪರಿಯ ಸುಖಕೆ ಮೈ ಮರೆತು ಸೋಲೋಣ ಸಾಗಿ ತೇಲುವ ಮುಗಿಲು ಮಡುಗಟ್ಟಿ ನಿಂತೀತೆ ಮೋಡಾಮೋಡಿಯಲಿ ದಿನ ನೂಕಿ ಬಿಡೋಣ ಎಳೆದ ರಂಗೋಲಿ ಕೆಳಗೆ ಪವಾಡವೇ ನಡೆಯಲಿ ಏರಿಳಿತದ ಬದುಕಲ್ಲಿ ಕೂಡಿ ನಾವು ಹಾಡೋಣ ಅಂತರಾಳದ ಅಳಲಿಗೆಲ್ಲ ದನಿಯಾಗೋಣ ಬಾರೆ “ಸುಜೂ” ನಾವು ಮುದ್ದಾಡಿ ಮೋಹದುಯ್ಯಾಲೆ ಜೀಕೋಣ ಕಿರುಪರಿಚಯ: ಸುಜಾತಾ ಲಕ್ಮನೆ, ಸ್ವಂತ ಊರು ಸಾಗರ. ವಾಸ ಬೆಂಗಳೂರು. ನನ್ನ ಹಲ-ಕೆಲವು ಕವನಗಳು ತುಷಾರ, ಕಸ್ತೂರಿ, ಮಯೂರ, ಕರ್ಮವೀರ , ಮಾಣಿಕ್ಯ, ಸಂಪದ ಸಾಲು, ಪಂಜು ಮುಂತಾದ ಮಾಸ/ವಾರ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ವಿಶೇಷಾಂಕಗಳಲ್ಲೂ ಪ್ರಕಟವಾಗಿವೆ. ಹಲವು ಪತ್ರಿಕೆಗಳಲ್ಲಿ ಗಜಲ್ ಗಳೂ ಪ್ರಕಟವಾಗಿವೆ. ಹವ್ಯಾಸಿ ಕವಯಿತ್ರಿ. ಹಲವು ಕವನಗಳು ತೊಂಬತ್ತರ ದಶಕದಲ್ಲಿ ತುಷಾರದಲ್ಲಿ ಹಿರಿಯರ ಆಯ್ಕೆ ಕವನಗಳಾಗಿ ಸಹ ಪ್ರಕಟವಾಗಿವೆ.

ಕಾವ್ಯಯಾನ Read Post »

You cannot copy content of this page

Scroll to Top