ಕಾವ್ಯಯಾನ
ಕ್ಷಮಿಸದಿರಿ ಸಂಕಟಗಳನ್ನು ಕವಿತೆ ಮಾಡುವುದು ಕ್ರೂರ ಅನ್ನಿಸಿ ಎಷ್ಟೋ ಸಲ ಸುಮ್ಮನಾಗುತ್ತೇನೆ.. ಇದು ಕವಿತೆಯಲ್ಲ; ಒಡಲ ಉರಿ. ವಿಜಯಶ್ರಿ ಹಾಲಾಡಿ ಆಸ್ಟ್ರೇಲಿಯಾದ ಕಾಳ್ಗಿಚ್ಚಿಗೆಬೆಂದ ನರಳಿದ ನೊಂದಅಳಿಲುಗಳೇ ಮೊಲಗಳೇಜಿಂಕೆಗಳೇ ನವಿಲುಗಳೇಹುಲಿ ಚಿರತೆ ಹಾವುಗಳೇಕ್ರಿಮಿ ಕೀಟ ಜೀವಾದಿಗಳೇಮರ ಗಿಡ ಪಕ್ಷಿಗಳೇಕೆಲಸಕ್ಕೆ ಬಾರದ’ ಕವಿತೆ’ಹಿಡಿದು ನಿಮ್ಮೆದುರುಮಂಡಿಯೂರಿದ್ದೇನೆಕ್ಷಮಿಸದಿರಿ ನನ್ನನ್ನುಮತ್ತುಇಡೀ ಮನುಕುಲವನ್ನು ಹಸಿರು ಹೂವು ಚಿಗುರೆಂದುಈ ನೆಲವನ್ನು ವರ್ಣಿಸುತ್ತಲೇಕಡಿದು ಕೊಚ್ಚಿ ಮುಕ್ಕಿಸರ್ವನಾಶ ಮಾಡಿದ್ದೇವೆಇಷ್ಟಾದರೂಹನಿ ಕಣ್ಣೀರಿಗೂ ಬರಬಂದಿದೆನಮ್ಮ ನಮ್ಮ ಲೋಕಗಳುಮಹಲುಗಳನ್ನು ನಾವಿನ್ನೂಇಳಿದಿಲ್ಲ ಇಳಿಯುವುದೂ ಇಲ್ಲಕ್ಷಮಿಸಲೇಬೇಡಿ ಕೊನೆಗೊಂದು ಅರಿಕೆಪ್ರಾಣಿಪಕ್ಷಿಗಳೇಮತ್ತೊಂದು ಜನ್ಮವಿದ್ದರೆ ನನಗೆದಯಮಾಡಿ ನಿಮ್ಮ ಸಂಕುಲಕ್ಕೆಕರೆದುಕೊಳ್ಳಿ- ಇಲ್ಲವೆಂದಾದರೆನಿಮ್ಮ ಪಾದ ಸೋಕಿನಕಲ್ಲೋ ಮುಳ್ಳೋ ಮಣ್ಣೋಆಗಲಾದರೂ ಹರಸಿಬಿಡಿ ಹೆಚ್ಚು ಹೇಳುವುದಿಲ್ಲನಿಮ್ಮುಸಿರಿನ ಬೇಗುದಿನಮ್ಮೆಲ್ಲರ ಜೀವಾತ್ಮಗಳ ಬೇಯಿಸಲಿ. *******









