ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಈ ಇರುಳು ನೂರುಲ್ಲಾ ತ್ಯಾಮಗೊಂಡ್ಲು ಈ ಇರುಳು ಕಣ್ಣುಗಳಲಿ  ಸೂರ್ಯ ಉರಿಯುತಿದ್ದಾನೆ  ಲಕ್ಷ ಲಕ್ಷ ನಕ್ಷತ್ರಗಳು ದನಿ ಕೂಡಿಸಿವೆ ನವ ಸ್ವಾತಂತ್ರ್ಯದ ಮೊಳಗಿನಲಿ  ನಮ್ಮ ಯಾತನೆಗಳು ದಿಕ್ಕು ದಿಕ್ಕಿಗೂ ಒಯ್ಯುವ ಸಮೀರನೇ ನಿನಗೆ ವಂದನೆ ಅಸಮಾನತೆ ,ಶೋಷಣೆಯಲಿ ನಲುಗಿದೆ ಈ ಹೊತ್ತು ಈ ದೇಶ ನಮ್ಮ ಪಾಡಿನ ಕಿಚ್ಚು ಮೂಡಲಿ ಎಲ್ಲೆಡೆ ಬದುಕು ಶೂನ್ಯವಾಗಿದೆ ಹೆಪ್ಪುಗಟ್ಟಿದ ರಾತ್ರಿಯಲಿ ನೋವಿನ ಹಾಡು ಹೊರಡುತಿದೆ ಇದೊ! ಎದೆ ತಂತಿಯ ನರಳಿಕೆಯಲಿ ಕಣ್ಣ ಪೊರೆ ಮಂಜಾಗಿದೆ ನಾಳಿನ ಚಿಂತೆಯಲಿ ಈ ಸುದೀರ್ಘ ರಾತ್ರಿಯಲಿ  ಕನಸುಗಳು ತೇಲುತಿವೆ ಉಲ್ಕೆಗಳಾಗಿ  ತೆರೆದು ಮುಚ್ಚುವ ರೆಪ್ಪೆಗಳಲಿ ************                                                              

ಕಾವ್ಯಯಾನ Read Post »

ಕಾವ್ಯಯಾನ

ಗಝಲ್ ಸಂಗಾತಿ

ಗಝಲ್ ಡಾ.ಗೋವಿಂದ ಹೆಗಡೆ ಅವನು ನನ್ನೊಡನೆ ಇದ್ದಿದ್ದು ಅದೊಂದೇ ಸಂಜೆ ನಾನು ನನ್ನನ್ನೇ ಮರೆತಿದ್ದು ಅದೊಂದೇ ಸಂಜೆ ಹಕ್ಕಿಗಳು ಗೂಡಿಗೆ ಮರಳಿ ಬರುವ ಹೊತ್ತು ಮನಸು ಗರಿಬಿಚ್ಚಿ ಹಾರಿದ್ದು ಅದೊಂದೇ ಸಂಜೆ ಪಡುವಣದ ಕೆನ್ನೆಗೆ ರಂಗು ಬಳಿದಿದ್ದ ಸೂರ್ಯ ಕನಸುಗಳಿಗೆ ಬಣ್ಣ ಏರಿದ್ದು ಅದೊಂದೇ ಸಂಜೆ ಎಷ್ಟೊಂದು ಅಲೆಗಳು ದಡವ ಮುದ್ದಿಟ್ಟವಾಗ ಕಡಲು ಉಕ್ಕುಕ್ಕಿ ಹರಿದಿದ್ದು ಅದೊಂದೇ ಸಂಜೆ ನಮ್ಮ ಬಡಕೋಣೆಯಲಿ ಚಂದ್ರೋದಯವಾಯ್ತು ಮಧುಪ ಮಧುವೆರೆದಿದ್ದು ಅದೊಂದೇ ಸಂಜೆ ಸಂಜೆ ಇರುಳಾಗಿ ಅಯ್ಯೋ ದಿನ ಉರುಳಿತಲ್ಲ ಕಾಡುವ ನೆನಪಾಗಿ ಉಳಿದಿದ್ದು ಅದೊಂದೇ ಸಂಜೆ ಮುಂಗುರುಳ ಚುಂಬಿಸಿ ವಿದಾಯ ನುಡಿದ ಸಖ ಬದುಕಿಗೆ ಬದುಕ ತುಂಬಿದ್ದು ಅದೊಂದೇ ಸಂಜೆ

ಗಝಲ್ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಮಂತ್ಲಿಪಿರಿಯಡ್ಸ್ ಮತ್ತು…. ವಿಜಯಶ್ರೀ ಹಾಲಾಡಿ ಮಂತ್ಲಿಪಿರಿಯಡ್ಸ್ ಮತ್ತು…. ರಕ್ತ ಕಂಡರೆ ಹೆದರುವಕೋಮಲೆಗೆ ಅನಿವಾರ್ಯ ಮಂತ್ಲಿ ಪಿರಿಯಡ್ಸ್ ! ಬ್ರೆಡ್ – ಜಾಮ್ ಹೋಲಿಕೆಗೆ ಲಘುವಾಗಿ ನಕ್ಕವಳೇ ಇನ್ನೀಗ ಅಳಬೇಕು ಹೆರಿಗೆ ಬೇನೆಯಾದರೂ ಮುಗಿಯುತ್ತದೆ ಒಮ್ಮೆಗೇ ಇಪ್ಪತ್ತೆಂಟರ ಸೈಕಲ್ ಇಪ್ಪತ್ತಾರು- ಇಪ್ಪತ್ತನಾಲ್ಕಕ್ಕೇ ಹಾಗಾದರೆ ವರ್ಷಕ್ಕೆಷ್ಟು ! ಟೆನ್ಷನ್ ಜಾಸ್ತಿಯಾದರೆ ಬ್ಲೀಡಿಂಗೂ ಜಾಸ್ತಿ ಪ್ಯಾಡುಗಳೂ ಇರಿಸುಮುರುಸುಗಳೂ ನೋವು ಅಪಮಾನಗಳೂ… ಐವತ್ತೋ ಐವತ್ಮೂರಕ್ಕೋ ನಿಲ್ಲುತ್ತದಂತೆ … ಅಂತೆಕಂತೆಗಳಿಗೂ ಆಚೆ ಬದುಕಿದೆ ಮೆನೋಪಾಸ್ ತೀಕ್ಷ್ಣತೆಗೆ ಡಿಪ್ರೆಶನ್ ಸುಸೈಡ್ ಉದಾಹರಣೆಗಳೂ ಉಂಟು! ಈ ನಡುವೆ ಯುಟಿರಸ್ ಒಂದಿಷ್ಟು ಗಲಾಟೆ ಮಾಡಿದರೆ ವಿಶ್ರಾಂತಿ ಬಯಸಿದರೆ ಹಿಸ್ಟರೆಕ್ಟಮಿ- ಸರ್ಜರಿ ….. ಹಾರ್ಮೋನ್ ಏರುಪೇರು ಉಫ್ ಮುಗಿವ ಕತೆಯಲ್ಲ ! ಸರ್ವಶಕ್ತನಾದ ದೇವನೇತಮಾಷೆಗೂ ಹೆಣ್ಣಾಗದಿರು !=====================

ಕಾವ್ಯಯಾನ Read Post »

ಕಾವ್ಯಯಾನ

ಗಝಲ್ ಸಂಗಾತಿ

ಗಝಲ್ ಡಾ.ಗೋವಿಂದ ಹೆಗಡೆ ತಪ್ಪು ನನ್ನದೇ ಗೆಳತಿ,ಬಿಡದೆ ಚುಂಬಿಸಿದೆ ಕೊಳ್ಳಿಯನ್ನು ಊದಿ ಊದಿ ಉರಿಸಬಾರದಿತ್ತು ಹೀಗೆ ನಿನ್ನ ಒಡಲನ್ನು ಎದೆಯ ಆಳ-ಅಗಲಗಳ ನಾನೇಕೆ ಕುಗ್ಗಿಸಿಕೊಂಡೆ ಅಗ್ಗವಾಗಿಸಬಾರದಿತ್ತು ಹೀಗೆ ನನ್ನ ನಿಲುವುಗಳನ್ನು ಕಂಬನಿಯಿಂದಲ್ಲವೇ ಕಿಲುಬೆದೆಯ ತೊಳೆಯುವುದು? ನಿಚ್ಚಳ ನೋಡಬೇಕಿನ್ನು ಹರಿದೆಲ್ಲ ಪೊರೆಗಳನ್ನು ಹಸಿದಿರುವೆನೆಂದು ಸಿಕ್ಕಿದ್ದನ್ನೆಲ್ಲ ತಿನ್ನಲಾದೀತೇನು ಉಳಿಸಿಕೊಳ್ಳಲೇಬೇಕು ನೀನು ಕೊಟ್ಟ ಒರೆಗಳನ್ನು ಬಿದ್ದಾಗಲೂ ನಾನು ನಾನೇ ಮರೆಯಬಾರದು, ಸಖೀ ಉಳಿಸುವೆ ಉಡುಗಲು ಬಿಡದೆ ಎದೆಯ ಪಿಸುದನಿಗಳನ್ನು =============

ಗಝಲ್ ಸಂಗಾತಿ Read Post »

ಕಾವ್ಯಯಾನ

ಕಾವ್ಯಯಾನ

ಆತನೊಲವು ಆತ್ಮ ಭಲವು ಜಗವ ಪ್ರೀತಿಸಿದ ಸಂತನ ಹುಟ್ಟು ಹಬ್ಬದ ಶುಭಾಷಯಗಳು ಸತ್ಯಮಂಗಲ ಮಹಾದೇವ ಕೇಳುತ್ತೀರಿ ನೀವು ನೀನು ಯಾರು ಎಂದು ಉತ್ತರಿಸಿದರೆ ಸಾಕು ನಿಮ್ಮದೇ ಉಯಿಲು ಲೋಕದ ಪಡಸಾಲೆಯಲ್ಲಿ ಹೇಳುವುದನ್ನು ಹೇಳಲೇ ಬೇಕು ಕಲ್ಲು ಮುಳ್ಳಿನ ಹಾದಿಯಲಿ ಮುಳ್ಳಿನ ಕಿರೀಟ ಹೊತ್ತ ಸಂತ ಮೈ ತುಂಬಾ ರಕ್ತದ ಧಾರೆ ಹರಿಯುತ್ತಿರಲು ಪ್ರೇಮದ ಸಾಕ್ಷಿ ಈ ರಕುತವೆಂದ ತಿವಿದವರ ತಿಳುವಳಿಕೆಯ ಕ್ಷಮಿಸಿರೆಂದ ಸಂಕಟಪಡುವವರ ಆತ್ಮ ಸಖನಾದ ನನ್ನೊಳಗೆ ನನ್ನನ್ನು ತಿಳಿಸಿದ ನೀನು ಯಾರು ಯಾವ ಊರು, ಯಾರಮಗ, ಯಾವ ಜಾತಿ ಆತ ಯಾವುದನ್ನು ಕೇಳದೆ ನನ್ನವನು ನೀನೆಂದ ಸಂತಸವು ಏನೆಂದು ತಿಳಿಸಿಕೊಟ್ಟ ಊರ ಹೊರಗಿನ ಹಟ್ಟಿಹುಡುಗನಿಗೆ ಗೆಳೆಯನಾದ ನಿನಾದದ ನಾದದಂತಾದ ಕೊಟ್ಟಿಗೆಯಲಿ ಹುಟ್ಟಿದ ಕಟ್ಟಕಡೆಯವನ ಮುಟ್ಟಿದ ತನ್ನಂತೆ ಇತರರನು ನೋಡೆಂದ ನೋವುಂಡು ನಲಿವಿನ ರಾಜ್ಯದ ಭರವಸೆಯ ಕೊಟ್ಟ ಈತ ಹೇಳುವುದು ನಾನು ಶಾಶ್ವತ ಗೆಳೆಯ ಹುಡುಕಿ ಕೊಡಿ ಯಾರಾದರು ಇದ್ದಾರೆಯೇ ಇವನಂತೆ ನೊಂದವರಿಗೆ ಅವ ಕಣ್ಣೀರು ಒರೆಸುವ ಸೇವಕ ನಮ್ಮೂರ ಸಂತೆಯ ಗೆಣೆಕಾರ ಯಾರು ಎಂದು ಮತ್ತೆ ಕೇಳಬೇಡಿ ಆತನೊಲವು ಆತ್ಮ ಭಲವು ಬೇರೆ ಬೇಕೆ ಸಾಕ್ಷಿಗೆ. ==================================

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

” ಹಡೆದವ್ವ” ನಿರ್ಮಲಾ ಅಪ್ಪಿಕೋ ನನ್ನ ನೀ ಹಡೆದವ್ವ ಮಲಗಿಸಿಕೊ ಮಡಿಲಲಿ ನನ್ನವ್ವ ನಿನ್ನ ಮಡಿಲಲಿ ಮಲಗಿ ಜಗವ ಮರೆವೆನವ್ವ ನೀ ಮಮಕಾರದ ಗಣಿಯೇ ಕೇಳವ್ವ ಜಗದಲಿ ಸಾಟಿಯೇ ಇಲ್ಲ ನಿನ್ನೊಲವಿಗೆ ದಾರಿದೀಪವಾದೆ ನನ್ನೀ ಬದುಕಿಗೆ ಇನ್ನೊಂದು ಹೆಸರೇ ನೀನಾದೆ ಕರುಣೆಗೆ ಅಮ್ಮ ಎಂದರೆ ಎಂತ ಆನಂದ ಮನಸಿಗೆ ಭೂಮಿಯ ಮೇಲೆ ನೀ ತ್ಯಾಗದ ಪ್ರತೀಕ ನೀನಿಲ್ಲದೆ ಇಲ್ಲ ಈ ಲೋಕ ನಿನ್ನ ಮಮಕಾರವದು ಬೆಲ್ಲದ ಪಾಕ ನೀನೇ ಸರ್ವಸ್ವವೂ ನನಗೆ ಕೊನೆತನಕ ವರವಾಗಿ ನೀಡಿದೆ ನನಗೆ ಈ ಜನುಮವ ನಿನ್ನ ಋಣವ ನಾನೆಂದೂ ತೀರಿಸೆನವ್ವ ನನ್ನ ಅಳುವಿಗೆ ಸದಾ ನಗುವಾದೆ ನನ್ನವ್ವ ಏಳೇಳು ಜನ್ಮಕೂ ನೀನೇ ನನ್ನ ಹಡೆದವ್ವ.

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಇವಳು_ಅವಳೇ ! ಹರ್ಷಿತಾ ಕೆ.ಟಿ. ಅಲಂಕಾರದ ಮೇಜಿಗೆ ಹಿಡಿದಿದ್ದ ಧೂಳು ಹೊಡೆಯುತ್ತಿದ್ದ ನನ್ನ ಶೂನ್ಯ ದೃಷ್ಟಿಗೆ ಅಚಾನಕ್ಕಾಗಿ ಕಂಡಳಿವಳು ನೀಳ್ಗನ್ನಡಿಯ ಚೌಕಟ್ಟಿನೊಳಗೆ ಒತ್ತಿ ತುಂಬಿಸಿದಂತೆ ಉಸಿರು ಕಟ್ಟಿಕೊಂಡು ನಿಂತಿದ್ದವಳು ಬೆಚ್ಚಿ ಹಿಂಜಗಿದು ಕ್ಷಣಗಳೆರೆಡು ಗುರುತು ಸಿಗದೆ ಕಣ್ಣು ಕಿರಿದು ಮಾಡಿ ದಿಟ್ಟಿಸಿದೆ ಅವಳೂ ಚಿಕ್ಕದಾಗಿಸಿದಳು ಗುಳಿ ಬಿದ್ದ ಎರಡು ಗೋಲಿಗಳನು ಅರೇ.. ನಾನೇ ಅದು! ಎಷ್ಟು ಬದಲಾಗಿದ್ದೇನೆ? ನಂಬಲಾಗದಿದ್ದರೂ ಕನ್ನಡಿಯ ಮೇಲೆ ಬೆರಳಾಡಿಸಿ ಅವಲೋಕಿಸಿದೆ ಗುಳಿಬಿದ್ದ ಕೆನ್ನೆಗಳಲಿ ಈಗ ನಕ್ಷತ್ರಗಳಿಲ್ಲ ಬರೇ ಕಪ್ಪುಚುಕ್ಕೆಗಳು, ಮೊಡವೆಯ ತೂತುಗಳು ಅವರು ದೀಪಕ್ಕೆ ಹೋಲಿಸುತಿದ್ದ ಬೆರೆಗು ಕಂಗಳಲಿ ಈಗ ಎಣ್ಣೆ ಬತ್ತಿದಂತಿದೆ ಕಾಡಿಗೆ ಮೆತ್ತಿ ವರುಷಗಳೇ ಕಳೆದಿರಬೇಕು ಅಡಿಗೆ ಕೋಣೆಯ ಗೋಡೆಗಂಟಿದ ಮಸಿ ಒರೆಸುತ್ತಾ ಮರೆತೇ ಬಿಟ್ಟಿದ್ದೆ ನೋಟ ಕೆಳಗಿಳಿಯಿತು ಸಡಿಲ ಅಂಗಿಯ ಮರೆಯಲ್ಲಿ ತೆಳ್ಳಗಿನ ದೇಹ ಇಷ್ಟು ಬಾತುಕೊಂಡಿದ್ದಾದರೂ ಯಾವಾಗ?ಅರಿವಾಗಲೇ ಇಲ್ಲ ನಡುವೆಲ್ಲಿ? ತಡಕಾಡಿದೆ ಮಗಳು ನನ್ನನ್ನು ಅಪ್ಪಿ ಟೆಡ್ಡಿ ಎಂದುದರ ಅರ್ಥ ಈಗ ತಿಳಿಯಿತು ಉಡುಗೆ ತೊಡುಗೆ ನಡಿಗೆ ಎಲ್ಲವೂ ಬದಲು ಜೋತುಬಿದ್ದ ತನುವಿನಲಿ ಇನ್ನೆಲ್ಲಿ ನಾಜೂಕು ಬಿಂಕ ಬಿನ್ನಾಣಗಳನು ಯಾವ ಧಾನ್ಯದ ಡಬ್ಬಿಯಲ್ಲಿಟ್ಟು ಮರೆತೆನೋ ನೆನಪಿಲ್ಲ ಕಣ್ಣೆದುರಿನ ಇವಳು ಕಣ್ಣೊಳಗಿದ್ದ ಆ ಅವಳ ನುಂಗಲಾರಂಭಿಸಿದಳು ಕಣ್ಣಂಚು ಕರಗತೊಡಗಿತು ಆದರೂ ನನ್ನ ಮೂಗು ಬದಲಾಗಿಲ್ಲವೆನಿಸಿ ಸಂತೈಸಿಕೊಂಡು ಮುತ್ತಿಕ್ಕುವಷ್ಟರಲ್ಲಿ ನನಗಿದು ಬೇಡವೆಂದು ರಚ್ಚೆ ಹಿಡಿದ ಮಗಳ ದನಿಗೆ ಮೊದಲಿದ್ದ ಮೂಗಿನ ತುದಿಯ ಕೋಪ ಎಂದೋ ಕರಗಿ ಹರಳಾಗಿ ಮೂಗುತಿ ಸೇರಿದ್ದು ನೆನಪಾಯಿತು ಇವಳು ನಕ್ಕಂತಾಯಿತು =======

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಥೇಟ್ ನಿನ್ನ ಹಾಗೆ! ಸಂತೆಬೆನ್ನೂರು ಫೈಜ್ನಾಟ್ರಾಜ್ ಅದೇ ಹಾಡು ತುಟಿಗೆ ಬಂದು ವಾಪಾಸಾಯಿತು ಏಕೋ ಏನೋ ಹೀಗೆ ರಸ್ತೆಯ  ಕೊನೇ ತಿರುವಲ್ಲಿ ಕಾದಿರು ಈಗ ಬಂದೆ ಎಂದು ಮಾಯವಾದ ಥೇಟ್ ನಿನ್ನ  ಹಾಗೆ! * ಕಾಫಿಯ ಘಮವೋ ಮುಡಿದ ಮಲ್ಲಿಗೆ ಗಂಧವೋ… ಉಳಿದ ಮಾತುಗಳು ಹೇಳಲಾರದೇ ಖಾಲಿಯಾದವು…. ನಿನ್ನಂತೆ! * ನೂರು ಮಾತುಗಳು ಆಡಿದರೇನು ಬರಿದೆ; ಚಹ ಪುಡಿಯಿಲ್ಲದ ಚಹ ಕುಡಿದಂತೆ ಬರಿದೆ! * ಮುಳ್ಳ ಬೆನ್ನ ಮೇಲೆಯೇ ಗುಲಾಬಿ ಕೆಸರ ಸೊಂಟದ ಪಕ್ಕದಲ್ಲೇ ಕಮಲ ಮಣ್ಣ ಕಾಲಡಿಯೇ ಚಿನ್ನ ಕೆಸರ ರಾಡಿಯಲ್ಲೇ ಅನ್ನ ಕಷ್ಟವೆಂದೇಕೆ ಅಳುವೆ; ಅದರ ಹಿಂದೆಯೇ ಅಡಗಿದೆ ಹಿತ ನಗುತ ಮುಂಸಾಗು ಅಷ್ಟೆ! * ಭೂಮಿ ದುಂಡಗೈತೆ ಅಂತ ನಮ್ಮೇಷ್ಟ್ರು ಹೇಳಿ ನಂಬಿಸಿದ್ರು ಈಗೀಗ ಈ ಅಂತರ್ಜಾಲ ದಲ್ಲಿ ಸಿಗಬಾರದವರೆಲ್ಲಾ ಸಿಕ್ರು; ಪ್ಚ್….ನೀ ಮಾತ್ರ ಕೊನಿಗೂ ಭೇಟಿ ಆಗಲೇ ಇಲ್ಲ…ನಿಜಕ್ಕೂ ಭೂಮಿ ದುಂಡಗಿದೆಯಾ….? * ಶರಾಬು ಎಲ್ಲರನ್ನೂ ಹತ್ತಿರಕ್ಕೆ ತರುತ್ತೆ ಅನ್ನೋದಾದರೆ ಸಖಿ,ಅಂಥಾ ಸಾಮಿಪ್ಯ ನನಗೆ ಬೇಡ ಜನ ದೂರಾದರೇನಂತೆ ನಾ ನಾನಾಗಿ ಉಳಿವೆ ಬೇಡವೇ ಬೇಡ ನಶೆಯ ಜಂಜಡ!

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಅರುಣ್ ಕೊಪ್ಪ ನೀನು ನಗುತ್ತಿಲ್ಲ,ತಾರೆಯಾ ಹೊದ್ದು ಭೂಪನಂತಿದ್ದರೂ ಅಹಂಕಾರವಿಲ್ಲದ ನಿಗರ್ವಿ ನೀನು ನಿನಗಾಗಿ ಅಲ್ಲವೆ ನೀನು ಕಪ್ಪಾದ ಪಂಜರದಲ್ಲಿ ಮೌನ ಸಾಕಿ ಬೀಗುವದಿಲ್ಲ ಬಡಾಯಿ ಕೊಚ್ಚೊ ಬೊಗಳೇದಾಸನಾ ನೀನು ನಿನಗಾಗಿ ಅಲ್ಲವೆ ಮುಳ್ಳು ಮೈಗೆ ಆವರಿಸಿದರೂ ಮೊಗ ನಗು ಮೊಗ್ಗು ಹೂವುಗಳು ಕೆಲ ತಾವುಗಳಲಿ ಸುರಸುಂದರಿ ನೀನು ನಿನಗಾಗಿ ಅಲ್ಲವೆ ಸುತ್ಮೂರು ಹಳ್ಳಿಗಳ ಹಿಶೆ, ನ್ಯಾಯಕೆ ಜಗರಿ ಕೂರುವ ಒಂಟಿ ಸಲಗದಂತೆ ಬೇಕು ಬೇಡಗಳ ನುಂಗಿ, ತಂಪು ಚೆಲ್ಲುವ ತಂಗಾಳಿ ಆಲ ನೀನು ನಿನಗಾಗಿ ಅಲ್ಲವೆ ಭಕ್ತರ ಹೂವು ,ಹಾಲು ,ಗಂಧ ಸುಗಂಧಗಳ ಮೆಂದು ಬೆಳಗಿನಿಂದ ಇಡಿ ದಿನ ಒಂಟಿಯಾಗಿ ಕೂತ ದೇವ ಯೆನ್ನುವ ಮೌನ ಮುರಿಯದ ನೀನು ನಿನಗಾಗಿ ಅಲ್ಲವೇ =======

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮೌನದ ಹಾಡು ದೇವು ಮಾಕೊಂಡ, ಸಿಂದ್ಗಿ ಇಳಿಸಂಜೆಯ ಒಬ್ಬಂಟಿತನದಲಿ ಮೈನೆರೆದು ನಿಂತ ಮುಳ್ಳುಕಂಟಿಗಳ ನಡುವೆ ಬೆಣ್ಣೆಯುಂಡೆಯಾಗಿದ್ದೇನೆ ಹೆಪ್ಪುಗಟ್ಟಿವೆ ಕ್ರೀಯೆಗಳು ಬಂಡೆಗಲ್ಲಿನ ಹಾಗೆ ಪತರಗುಟ್ಟುತ್ತಿವೆ ಭಾವಗಳು ಚಪ್ಪರದಂತೆ ನಿಷ್ಕ್ರೀಯಗೊಂಡಿದೆ ಚಲನೆ ಸೀಮೆಗಲ್ಲಿನಷ್ಟು ಮಧು ಕುಡಿದು ಎದೆಚುಚ್ಚುವ  ರಣಹದ್ದುಗಳದ್ದೇ ಕಾರುಬಾರುವಿಲ್ಲಿ ಅದಕ್ಕೆಂದೆ ಹೂವುಗಳು ರಾತ್ರಿಯೆದ್ದು ಹಗಲು ಮಲಗುತ್ತವೆ ಕರಾಳ ಬೆಳಕಿಗಂಜಿ ಹೆಪ್ಪುಗಟ್ಟಿದ ಬೆಳಕಿಗೆ ನೆರಳುಗಳಾಡಿಸುವ  ಹಗಲು ರಾತ್ರಿಗಳ ಪಂಜೆಗಳು ವಿಭೇದಿಸುವ ಕಪ್ಪು ನೆಲವೇ ರೂಪರೇಖೆ ನಮ್ಮೊಳಗಿನ ಮೌನದ ಹಾಡೆ ಸುಖದ ಹೆರಿಗೆ

ಕಾವ್ಯಯಾನ Read Post »

You cannot copy content of this page

Scroll to Top