ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಸಖಿ ಸತ್ಯಮಂಗಲ ಮಹಾದೇವ ಈ ಬೆಳಗಿನ ಏಕಾಂತ ಅದೇಕೊ ಮುದ ನೀಡಲಿಲ್ಲ ಸಖಿ ನಟ್ಟನಡುರಾತ್ರಿಯ ಕಡುಕತ್ತಲಲ್ಲಿ ನಿನ್ನ ಮೊಗವೊಂದೆ ಸಾಕು ಬೆಳದಿಂಗಳಂತೆ ಯಮುನಾ ತೀರದಲಲೆಯುತ ಒಂಟಿ ನಡಿಗೆಯ ಪ್ರಯಾಣ ಅದೆಷ್ಟು ನೀರಸ ಸಖಿ ಮಧುರ ಮಂಜುಳ ನಾದವೂ ಸಪ್ಪೆ ತೆರೆಯೇರಿ ಬೀಸುವ ತಂಗಾಳಿಯೂ ರುಚಿಯಿಲ್ಲ ಮೈಗೆ ನಿನ್ನ ಹೆಸರೊಂದೇ ಸಾಕು ಅದೆಷ್ಟೋ ದೂರದ ನಿನ್ನ ಸನಿಹದಂತಿರಿಸುವುದು ಪದವನರಿತ ಮನಸ್ಸಿಗೆ ಪರಿಚಯ ಬೇಕೆ ಬಣ್ಣವಾಗುವ ಕನಸುಗಳಿಗೆ ರೆಕ್ಕೆಗಳ ಬಿಡಿಸಿ ಹಾರುವುದ ಕಲಿಸಬೇಕೆ ಸಖಿ ನಿನ್ನ ಉಸಿರ ಜಾಡು ಕಣ್ಣಳತೆಯಲಿ ಹಾದು ಹೋಗುವಾಗ ನನ್ನ ಆವರಿಸಿದ ಆ ಮಹಾನಂದವನು ಬಣ್ಣಿಸಲು ಅಕ್ಷರಗಳು ಸೋಲುತ್ತಿವೆ ಏಕಾಂತದ ಆ ಮೌನಕೆ ಹೊಸಚೈತ್ರಗಳಾ ಆಮೋದಕೆ ಕಾಲ್ಬೆರಳು ಗೀಚುವ ಲಜ್ಜೆಯ ಯಾತ್ರೆಗೆ ಆ ನಗುವು ಭಾಷ್ಯ ಬರೆಯಿತು ಮುತ್ತಿಡಲು ಹೊರಟ ವಸಂತ ನಾನು ಅವನನ್ನು ಮೀರಿಸಿ ಹೊರಟೆ… ಒಳಗೊಳ್ಳುವ ಸಂವಿಧಾನಕ್ಕೆ ದುಃಖ ನೀರದಾರಿ ಅರ್ಥವಿರದ ಈ ಆಸೆಗಳ ಭ್ರೂಣಕ್ಕೆ ನೀನು ತಂದೆ ನಾನು ತಾಯಿ.

ಕಾವ್ಯಯಾನ Read Post »

ಕಾವ್ಯಯಾನ

ಗಜಲ್

ಯಾರಿಗೆ ಯಾರು ಸಂಗಾತಿ? ವಿನುತಾ ಹಂಚಿನಮನಿ ಬಾಳಿನ ಬಂಡಿ ಎಳೆಯುವ ಕನಸಿನ ಕುದುರೆಗಳೇ ಯೋಚಿಸಿ ಹೇಳಿ ನಾಲ್ಕು ದಿನದ ಬದುಕಿನಲಿ ಯಾರಿಗೆ ಯಾರು ಸಂಗಾತಿ ಹೇಳಿ ಮರಕೆ ಕೋಮಲ ಲತೆಯೇ ಸಂಗಾತಿ ಹೃದಯಕೆ ಮಧುರ ಭಾವನೆಗಳೆ ಸಂಗಾತಿ ಲತೆಯ ಭಾವನೆ ಮರ ಅರಿಯದಾದರೆ ಹೃದಯದ್ದೇನು ತಪ್ಪು ಹೇಳಿ ಚಂದಿರನಿಗೆ ಹೊಳೆವ ತಾರೆಗಳೆ ಸಂಗಾತಿ ಸುಂದರ ತನುವಿಗೆ ನಿರ್ಮಲ ಮನವೇಸಂಗಾತಿ ನಕತ್ರಗಳಿಲ್ಲದ ಆಗಸದಲ್ಲಿ ಚಂದ್ರ ಏಕಾಂಗಿಯಾದರೆ ನಿಷ್ಟೆಯಿಲ್ಲದ ಮನದ ಮಾಲಿಕ ಕುರೂಪಿಯಲ್ಲವೇ ಹೇಳಿ ಹೂವಿಗೆ ಹಾರುವ ದುಂಬಿಯೇ ಸಂಗಾತಿ ನೋವಿಗೆ ಸುರಿವ ಕಂಬನಿಯೇ ಸಂಗಾತಿ ನಂಬಿದ ಹೂವಿಂದ ದುಂಬಿ ದೂರವಾದರೆ ಕಂಬನಿ ಒರೆಸುವವರು ಯಾರು ಹೇಳಿ ವಾರಿಧಿಗೆ ಭೋರ್ಗರೆವ ತೆರೆಗಳೆ ಸಂಗಾತಿ ಹರೆಯಕೆ ಸಂಭ್ರಮದ ಕನಸುಗಳೆ ಸಂಗಾತಿ ಅಲೆಗಳಿಲ್ಲದ ಕಡಲಲಿ ನಾವೆ ತೇಲದಾದರೆ ಕನಸುಗಳು ನನಸಾಗುವ ಬಗೆ ಹೇಳಿ ಹರಿವ ನದಿಗೆ ದಡವೇ ಸಂಗಾತಿ ಮರೆವ ಮನಕೆ ರೂಡಿಯೇ ಸಂಗಾತಿ ದಡದ ಗೊಡವೆ ನದಿಗೆ ಬೇಡವಾದರೆ ವಿನೂತನ ಮರೆತ ಮನಕೆ ಗತಿಯಾರು ಹೇಳಿ.

ಗಜಲ್ Read Post »

ಕಾವ್ಯಯಾನ

ಕಾವ್ಯಯಾನ

ಸಾವಿರದ ಸಾವಿರ ಕವಿತೆ ರವಿ ರಾಯಚೂರಕರ್ ಬಳಲಿ ಬೇಕೆಂದು ಬಿಕ್ಕಳಿಸಿ ಅತ್ತವನು ಎದೆಗಂಟಿ ನುಡಿ ನುಡಿದು ಆಸೆಯ ಗೋಪುರಕೆ ಹೊಸ ಕನಸುಗಳ ತುಂಬಿ ನೆಲಕಳಚಿ ಬಿದ್ದವನು ನೀನಲ್ಲವೇ ಹಸಿದು ಕುಳಿತಾಗ ಕುಟುಕಿ ಕಾಳನಿಟ್ಟು ನಿಟ್ಟುಸುರ ಹೆಜ್ಜೆಯಲಿ ಊರ ತಿರುಗಿದ ಬಿಕ್ಕು ಪ್ರಾಯದ ಪೊರೆ ಹರಿದು ಹದಿಹರೆಯದ ಒಲವನೆರದವನು ನೀನಲ್ಲವೇ ಬರಿ ಅರ್ಥಗಳನೆ ಈ ಮೌನಕೆ ತುಂಬಿ ಹಾಗೆ ತುಳುಕುವ ಸಾವಿರದ ಸಾವಿರ ಕವಿತೆಗಳ ಹಣತೆ ಹಚ್ಚಿ ಬೆಳಗಾಗುವವರೆಗೆ ಉರಿದು,ಸುಟ್ಟು, ಬೂದಿಯಾಗಿ ಈ ಕಣ್ಣ ಕಾಡಿಗೆಯಾದವನು ನೀನಲ್ಲವೇ ಶತಮಾನದ ನೋವಿಗೆ ಪ್ರೀತಿ ಒಂದೇ ಮದ್ದೆಂದು ಬಂಡಾಯವ ನನ್ನಲಿ ಬಿತ್ತಿ ದುಡಿದು,ತಡೆದು,ಮಣಿದು ರಮಿಸಿ,ಕ್ಷಮಿಸಿ,ಮುದ್ದಿಸಿ ಮುತ್ತಿನ ಮುದ್ರೆ ಹೊತ್ತಿ ಬೆಳಕಿಲ್ಲದೆ ದಾರಿಗೆ ಕೈ ಹಿಡಿದು ನಡೆಸಿಕೊಂಡೊದವರು ನೀನಲ್ಲವೇ ಕಿರು ಪರಿಚಯ: ಕನ್ನಡ ಉಪನ್ಯಾಸಕರು.’ಬಸವಮ ಕಾಲಿನ ಜೋಡಿ ಮೆಟ್ಟು’ಕವನಸಂಕಲನ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಜಲ್ ಸಿದ್ಧರಾಮ ಹೊನ್ಕಲ್ ಇಂಥವರ ನೆನಪಾದಾಗಲೆಲ್ಲ ನಿಟ್ಟುಸಿರೊಂದು ತಾನೇ ತಾನಾಗಿ ಹೊರಬರುತ್ತದೆ ಸಾಕಿ ಕಂಡಾಗಲೆಲ್ಲ ಗಂಟಲು ಕಟ್ಟಿ ಮಾತೆ ಮಥಿಸಿ ಮೌನ ಹೆಪ್ಪುಗಟ್ಟುತ್ತದೆ ಸಾಕಿ ಯಾರ ತಪ್ಪಿಗೆ ಯಾರ ಆಯುಷ್ಯಕ್ಕೆ ಯಾರು ಹೊಣೆ ಪಾಪ!ವವರು ಸಾಕಿ ಕುಂಕುಮ ಹೂ ಬಳೆ ಕೊನೆಗೆ ನಸು ನಗೆಯು ಮರೀಚಿಕೆಯಾಗುತ್ತದೆ ಸಾಕಿ ಸಂತೆಯೊಳಗೊಂದು ಮನೆಯ ಮಾಡಿ ಸುಮ್ಮನೆ ಶಬ್ದಕ್ಕೂ ಹೆದರಿ ಬಾಳುವದು ಇದೆಯಲ್ಲ ಅದು ಕಡುಕಷ್ಟ ಸಾಕಿ ಹದಿ ಬದೆಯ ಬಯಕೆಗಳ ತುಳಿದು ಹಸಿರುಟ್ಟು ಸಹ ಬರಡು ಮರದಂತೆ ಬದುಕಾಗುತ್ತದೆ ಸಾಕಿ ಫಲ ಪುಷ್ಪ ಹೂ ಬಿಡುವ ಹಸಿರು ಮರವು ಸಹ ಕಂಬನಿಗೆ ಕಾರಣವಾಗುತ್ತದೆ ಸಾಕಿ ಅಮಾಯಕರಿಗೆ ಬದುಕೇಕೆ ಇಷ್ಟು ಕ್ರೂರವಾಗಿ ಪರೀಕ್ಷೆಗೊಡ್ಡುತ್ತದೆ ಸಾಕಿ “ಹೊನ್ನಸಿರಿ” ಅಕ್ಕ-ಮೀರಾಳಂತೆ ಬದುಕು ಅಂತ ಹೇಳುವದು ಬಹು ಸುಲಭ ಸಾಕಿ ಬಯಕೆಗಳ ನುಂಗಿ ಬರೀದೇ ಬಾನಂಗಳದಲಿ ಚುಕ್ಕಿ ನೋಡುತ್ತಾ ಜಟಕಾಬಂಡಿಯಾಗುವದು ಕಡುಕಷ್ಟವಾಗುತ್ತದೆ ಸಾಕಿ. ಕಿರುಪರಿವಯ: ಪ್ರಕಟಿತ ಕೃತಿಗಳು- ಒಟ್ಟು 40 ಕೃತಿಗಳು.ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ-1996.ಪಂಚನದಿಗಳ ನಾಡಿನಲ್ಲಿ ಪ್ರವಾಸ ಕೃತಿಗೆ.ಗುಲ್ಬರ್ಗಾ ವಿವಿ ಚಿನ್ನದ ಪದಕ ಕಥೆಗಳಿಗೆ-1991,ರಾಜ್ಯೋತ್ಸವ ಪುರಸ್ಕಾರ,ಗುಲ್ಬರ್ಗ ವಿವಿ—2002 ಮತ್ತು 2006, ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ ಕೃತಿ. ನೆಲದ ಮರೆಯ ನಿಧಾನ ಕಥಾ ಸಂಕಲನಕ್ಕೆ ಸಂಕ್ರಮಣ ಸಾಹಿತ್ಯ ಪುರಸ್ಕಾರ-ಕಾವ್ಯ ಹಾಗೂ ಲಲಿತ ಪ್ರಬಂಧಕ್ಕೆ ಶ್ರೀ ವಿಜಯ ಪುರಸ್ಕಾರ, ಅತ್ತಿಮಬ್ಬೆ ಪುರಸ್ಕಾರ-ಗಾಂಧೀಯ ನಾಡಿನಲ್ಲಿ ಪ್ರವಾಸ ಕೃತಿಗೆ.ಹೀಗೆ ಅನೇಕ ಪುರಸ್ಕಾರ.

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಜಲ್ ದೀಪಾಜಿ ಎದೆಯ ಮೇಲಿನ ಹಚ್ಚೆಗೆ ಅಗ್ಗಿಷ್ಟಿಕೆಯ ಕೆಂಡಹಚ್ಚಿ ಉಜ್ಜಿಕೊಂಡವನಲ್ಲವೇ ನೀನು ಎದೆ ಒಳಗಿನ ಇವಳನ್ನ ತೆಗೆದು ಹಾಕಲೆತ್ನಿಸಿ ಸೋತವನಲ್ಲವೇ ನೀನು ಹಿಡಿದು ತಂದ ಕೆಂಗುಲಾಬಿ ಕೆಳಗಿನ ಮುಳ್ಳ ಎಣಸ ತೊಡಗಿದ್ದ ಕುಸುಮಪ್ರೇಮಿ ಅಂತದೆ ಸುಮದ ಪರಿಮಳಕ್ಕೆ ಸೋತು ಬಿಗಿದಪ್ಪಿದ ದಿನಗಳ ಮರೆತವನಲ್ಲವೆ ನೀನು.. ಅಂಗೈಲಿ ಹಿಡಿದ ಮಧು ಪಾತ್ರೆಯೊಳಗಿನ ಬಿಂಬ ಕಲಕಿತೆಂದು ರೋಧಿಸಿದೆ ಏನು ಮಧುಹೀರಿ ಮಲಗಿದ ನಲ್ಲೆಯ ತುಟಿಗಳನೆ ಕಚ್ಚಿ ಕಡೆಗಣಿಸಿದವನಲ್ಲವೇ ನೀನು ಬಲವಂತಕ್ಕೆ ಪ್ರೀತಿಸಕೂಡದೆಂದು ಪಾಠಮಾಡುತ್ತಿದ್ದೆ ನೋಡು ಮರೆತು ಬಿಡು ಇನ್ನೂ ಜತೆಯಾಗಿ ನಡೆದುಬಂದ ದಿನಗಳನು ಎಂದು ನಶೆಯೊಳಗೂ ಪೀಡಿಸುತ್ತಿದ್ದವನಲ್ಲವೇ ನೀನು ಆಳವಿಲ್ಲದ್ದು-ಸೆಳೆತವಿಲ್ಲದ್ದು ಏನನ್ನೂ ಉಳಿಸಿಕೊಳ್ಳಲಾರದೆನ್ನುತ್ತಿದ್ದೆ‌ ನೋಡು ಬೆಳಗಿಸಿದ-ಬಾಳಿಸಿದ *ದೀಪಕ್ಕೆ ಆಳ ಹುಡುಕಿ ಸಿಗದೊಡನೆ‌ ಬೆನ್ನ ತೋರಿಸಿ ಹೊರಟನಲ್ಲವೇ ನೀನು..

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಜಲ್ ಡಾ.ಗೋವಿಂದ ಹೆಗಡೆ ಮದಿರೆಬಟ್ಟಲು ಖಾಲಿಯಾಗಿದ್ದಕ್ಕೆ ಅವಳು ಅಳುತ್ತಿದ್ದಾಳೆಎಲ್ಲಿ ಹೇಗೆ ಯಾವಾಗ ಸೋರಿಹೋಯಿತೆಂದು ಹುಡುಕುತ್ತಿದ್ದಾಳೆ ಜನ್ಮ ಜನ್ಮಾಂತರಕ್ಕೂ ತುಂಬಿರುವುದೆಂದು ಎಣಿಕೆಯಿತ್ತುಇಷ್ಟು ಬೇಗ ಎಲ್ಲ ಖಾಲಿ ಆಗಿದ್ದನ್ನು ನಂಬದಂತಿದ್ದಾಳೆ ಕನಸುಗಣ್ಣುಗಳಲ್ಲಿ ಎಷ್ಟೊಂದು ಸುರೆಯ ಸಂಗ್ರಹವಿತ್ತುಪತ್ತೆಯೇ ಇರದೆ ಸೂರೆಯಾಗಿದ್ದಕ್ಕೆ ತಳಮಳಿಸುತ್ತಿದ್ದಾಳೆ ಮಧುಬಟ್ಟಲಲ್ಲೇ ಐಬಿತ್ತೋ ಅಥವಾ ಮಧುವಿನಲೋಬಟ್ಟಲನೆತ್ತಿ ಹಿಂದೆ-ಮುಂದೆ ತಿರುತಿರುಗಿಸಿ ನೋಡುತ್ತಿದ್ದಾಳೆ ಮರಳೇ ಹಾಗೆ ಕಣಕಣವಾಗಿ ಸುರಿದು ಖಾಲಿಯಾಗುತ್ತದೆಗಡಿಯಾರ ತಿರುಗಿಸಬಹುದು, ಕಾಲವನಲ್ಲ ಮರುಳಿಯಾಗಿದ್ದಾಳೆ ಎದೆಯೊಡೆದ ಹುಚ್ಚಿ ಅವಳನ್ನು ಹೇಗೆ ಸಂತೈಸಲಿ ಸಾಕಿಹೇಗೋ ಒಂದು ಮುಕ್ಕೆರೆದು ಬಿಡು,ಚೇತರಿಸುತ್ತಾಳೆ..

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಾವಿನ ಸಾಂಗತ್ಯದಲ್ಲಿ ಮಧುಸೂದನ ಮದ್ದೂರು ಸಾವೆಂಬ ಸೂತಕದ ಹಕ್ಕಿ ರಕ್ಕೆ ಬಿಚ್ಚಿ ಹಾರುತ್ತಿದೆ ಯಾವ ಜೀವಗಳೆಂಬೋ ಹಣ್ಣ ಕಚ್ಚಿ ತಿಂದು ರಕ್ಕೆ ಪಟಪಟಿಸಿ ಗಗನದ ಚಿಕ್ಕೆಯಾಗಲಿದೆಯೋ ಬಲ್ಲವರು ಯಾರು ? ಸಾವೆಂಬ ಮಾಂತ್ರಿಕನ ಮಂತ್ರಬೂದಿಯ ಸೆಳತೆಗೆ ಸಿಲುಕಿ ಮಾಯವಾಗುವ ಮಾಯಕಾರರೆಷ್ಟೋ ಬಲ್ಲವರು ಯಾರು? ಸಾವೆಂಬ ಬುಟ್ಟಿಯಲಿ ಕಣ್ಕಟ್ಟಿನ ಯಕ್ಷಿಣಿಕಾರನ ಯಕ್ಷಿಣಿ ಕೋಲಿನ ಮಂತ್ರಕೆ ಅತಳ ಸುತಳ ಪಾತಾಳ ಸೇರುವವರೆಷ್ಟೋ ಬಲ್ಲವರು ಯಾರು? ಬಡವ-ಬಲ್ಲಿದ ಅಧಿಕಾರಸ್ಥ-ವ್ಯವಹಾರಸ್ಥ ಕಲೆಕಾರ-ಓಲೆಗಾರ ಯಾಂತ್ರಿಕ-ಮಾಂತ್ರಿಕ ವಿಜ್ಞಾನಿ-ಅಜ್ಞಾನಿ ಎಂಬೋ ಬೇಧ ಭಾವ ಎಣಿಸದ ಸಾವೆಂಬೋ ಸಾಹುಕಾರನೆದರು ಚೆಲ್ಲಾಟಗಾರನೆದುರು ಗೋಣು ಚೆಲ್ಲಲೇಬೇಕಲ್ಲವೇ…?

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ರೆಕ್ಕೆ ಮುರಿದ ಹಕ್ಕಿ ಕನಸು ಬಿದಲೋಟಿ ರಂಗನಾಥ್ ದುಃಖ ಬಚ್ಚಿಟ್ಟುಕೊಂಡು ನಗುವ ಸೂಸುವ ನಿನ್ನ ಅಂತರಂಗದ ನುಡಿಯೇ ನೋವುಗಳು ಜಾರುತ್ತಿವೆ ನಿನ್ನ ತುಟಿ ಸೀಳುಗಳ ಮೇಲೆ… ಕಣ್ಣಪದರುಗಳಲ್ಲಿ ತೇಲುವ ಕಣ್ಣೀರು ನಿಜಕ್ಕೂ ಎದೆಯಲ್ಲಡಗಿದ ಕಥೆ ಬಿಚ್ಚುತಿದೆ ಕುಂತ ನೆಲದ ಜೊಳ್ಳು ಮಾತುಗಳೋ ಸೀರೆ ಸುಟ್ಟ ನೋವೋ ಅಂತು ಸುಡುತ್ತಿದೆ ಎದೆಯ ಮೇಲೆ ಬಿದ್ದು ಉಕ್ಕಲಾರದೆ ರತಿ ಉಕ್ಕಿ ಗರಿಬಿಚ್ಚದೆ ಒಳಗೇ ಸುತ್ತಿ ಸುತ್ತಿ ಭಾವನೆಗಳ ಕೊಲ್ಲುತ.. ರತಿ ತಿಲೋತಮೆಯಂತಿದ್ದರೂ ಒಡೆದ ಒಳಮನಸಿನ ಕನ್ನಡಿಯ ಚೂರು ತಿವಿಯುತ್ತಿದೆ ಮೆತ್ತಗೆ ಮೆತ್ತಗೆ.. ಹಬೆಯಾಡದ ನಂಜು ಸುತ್ತಿ ಸುತ್ತಿ ಉಸಿರಾಡದಂತೆ ಮಾಡಿದೆ ಹೊತ್ತಿಗೊತ್ತಿಗೆ ಬಿಚ್ಚಿಕೊಳ್ಳದ ಮಾಯದ ನೋವು ಹೆಪ್ಪುಗಟ್ಟಿ ಬಿರಿಯುತ್ತಿದೆ ಕಣ್ಣೊಡಲ ಸುಖದಿಂದ ಅರಳಿ ಬೆವರಲು ಅದ್ಯಾವುದೋ ರೆಕ್ಕೆ ಮುರಿದ ಹಕ್ಕಿ ಕನಸೇ ಬೀಳುತ್ತಿದೆ..! ಹಾರಿದರೂ ಸಿಗದ ಹಕ್ಕಿಯ ಹೆಜ್ಜೆ ಗುರುತೊಂದು ಹಾಸಿಗೆಯ ಮೇಲೆ ಬಿದ್ದು ದುಃಖಿಸುವುದು ಕೇಳಿಸುತ್ತಲೇ ಇದೆ. ಈ ದೇಹದ ಮೇಲೆ ಸನ್ನದ್ದು ಪಡೆದವನ ತೋಳುಗಳು ಬಳಲಿ ಬಳಲಿ ಕಾಮಕ್ಕಾಗಿ ಕಾತರಿಸುವ ಪರಿಗೆ ಬಿತ್ತಿ ಬೆಳೆವ ಆಸೆಯು ಎದೆಯ ತುಂಬಿದರು ಒಪ್ಪಿತವಲ್ಲದ ಮನಸು ಬಂಜರು ನೆಲವಾಗಿದೆ ಸುಡುವ ನೆಲವನ್ನ ಅಪ್ಪಲು ಒಪ್ಪದ ಮನಸು ಬಿಡುಗಡೆಗೊಳ್ಳದ ಉಸಿರ ಶಪಿಸುತ್ತಿದ್ದರೂ ನಾಟಕೀಯ ನಗು ಎಂದೂ ಬಣ್ಣ ಮುಚ್ಚುವುದಿಲ್ಲ ಒಳಗೆ ನೆನಗುದಿಗೆ ಬಿದ್ದ ಭಾವದ ಕಾಲುಗಳಿಗೆ ಚಲಿಸುವ ಹವಣಿಕೆ ಇದ್ದರೂ ಪರದೆ ಎಳೆದು ನಗುತ್ತಿದ್ದೀಯಲ್ಲ. ಇದನ್ನೆಲ್ಲಾ ಕೇಳಿಸಿಕೊಂಡ ನನ್ನ ಮನಸು ಒಳಗಿನ ನೋವು ಪರಚಿ ಸೋತು ಶಬ್ಧಗಳಿಗೆ ಬಲೆ ಬೀಸಿ ಕವಿತೆ ಕಟ್ಟಿದ್ದೇನೆ ಇದರೊಂದಿಗೆ ಉಸಿರು ಬಿಡುವ ಶಕ್ತಿಯಿದ್ದರೆ , ಒಮ್ಮೆ ನಿಡಿದಾಗಿ ಉಸಿರೆಳೆದು ಹೊರಗೆ ಬಿಟ್ಟು ಬಿಡಿ.! ————————

ಕಾವ್ಯಯಾನ Read Post »

ಕಾವ್ಯಯಾನ

ಮಕ್ಕಳದಿನದ ಸಂಭ್ರಮ

ಮಕ್ಕಳ ಕವಿತೆಗಳು ಸಂತೆಬೆನ್ನೂರು ಫೈಜ್ನಾಟ್ರಾಜ್ ನಮ್ಮ ಚಂದ್ರ ನಮ್ಮ ಚಂದ್ರ ಬಾನಿಗೊಬ್ಬ ಚಂದಿರ ದೇಶಕ್ಕೊಬ್ಬ ಚಂದಿರ ಅವನೇ ಸುಭಾಸ್ ಚಂದಿರ//ಬಾ// ಶಕ್ತಿ ಕೊಡಿ ರಕ್ತ ಕೊಡಿ ಸ್ವತಂತ್ರ ಕೊಡುವೆ ಎಂದನು ಸ್ವಾರ್ಥ ಬಿಡಿ ನಿಸ್ವಾರ್ಥ ದುಡಿ ದೇಶಕದುವೆ ಹೆಮ್ಮೆ ಎಂದನು//ಬಾ// ಜೈ ಹಿಂದ್ ಜೈ ಹಿಂದ್ ಜೈಕಾರ ಕೂಗುತ ಎಂದಿಗೂ ಮುನ್ನುಗ್ಗಿ ಏನೇ ಬರಲಿ ಒಗ್ಗಟ್ಟಿರಲಿ ದೇಶಭಕ್ತರು ಒಂದಾದರೆ ಅದೇ ಸುಗ್ಗಿ //ಬಾ// ಒಂದೆ ನಾಡು ಒಂದೆ ತಾಯಿ ನಾವೆಲ್ಲರೂ ಭಾರತಾಂಬೆ ಮಕ್ಕಳು ಹಿಂದು-ಮುಸ್ಲಿಂ ಯಾರೇ ಇರಲಿ ದೇಶದಲ್ಲಿ ನಾವೆಲ್ಲ ಒಂದೆ ಒಕ್ಕಲು! //ಬಾ// ————————- ಸುಭಾಸ್ ಜೀ ನಿಮಗೆ ಸಲಾಂ ಸುಭಾಸ್ ಜೀ ನಿಮಗೆ ಸಲಾಂ ಭಾರತಮಾತೆಯ ಪುತ್ರನೇ ಸಲಾಂ //ಸು// ಆಜಾದ್ ಹಿಂದ್ ಕಟ್ಟಿದ ಸೇನಾನಿ ನೀನು ಜೈ ಹಿಂದ್-ಎಂದು ಅಬ್ಬರಿಸಿದ ಶೂರ ನೀನು ಮರೆಯಲಾರೆವು ನಾವು ನಿನ್ನ ಎಂದಿಗೂ ನಮ್ಮ ಹೃದಯದಲ್ಲಿರುವೆ ನೀನು ಎಂದಿಗೂ //ಸು// ಸ್ವತಂತ್ರಕ್ಕಾಗಿ ದೇಶ-ದೇಶ ತಿರುಗಿದೆ ನೀನು ಬ್ರಿಟಿಶರನ್ನು ಹೊರ ಹಾಕಲು ಹವಣಿಸಿದೆ ನೀನು ದೂರಾದೆ ಗೆಳೆಯ ನೀನು  ತಿಳಿಯದಂತೆ ಸುಮ್ಮನೆ ಅರ್ಪಿಸುವೆವು ನಿನಗೆ ಇದೋ ಇದೋ ನಮ್ಮನೆ! //ಸು// —————————————— ಹೊಸ ಲೆಕ್ಕ ಒಂದು ಎರೆಡು ಮೂರು ಬಾಳಲಿ ಕಷ್ಟ ನೂರಾರು ನಾಕು ಐದು ಆರು ಎಲ್ಲಾ ಮೆಟ್ಟಿಲ ನೀ ಏರು ಏಳು ಎಂಟು ಒಂಭತ್ತು ಗೆಲ್ಲು ಜೀವನದ ಆಪತ್ತು! ಹತ್ತು ಹನ್ನೊಂದು ಹನ್ನೆರೆಡು ಸಾಧನೆಯ ಬೆನ್ನತ್ತಿ ಹೊರಡು ಹದಿಮೂರು ಹದಿನಾಲ್ಕು ಹದಿನೈದು ಶಿಕ್ಷಣ ಕಲಿತರೆ ಅಪಾಯ ಏನೂ ಬರದು!—————————————————— ಬಳ್ಳಿ ಮತ್ತು ಮರದ ಮಾತುಕತೆ ಆಕಾಶಕ್ಕೆ ಮುಖ ಮಾಡಿ ಒಂದು ಮರ ನಿಂತಿತ್ತು ಮರದ ಮೈಗೆ ಫ್ರೆಂಡಾಗಿ ಬಳ್ಳಿ ಹಬ್ಬಿತ್ತು ಬಳ್ಳಿ ಜೊತೆ ಮರಕ್ಕಂತು ಗುಡ್ ಫ್ರಂ ಶಿಪ್ಪು ಇವರಿಬ್ಬರನ್ನು ನೋಡಿ ಉಳಿದವರು ಗಪ್ ಚಿಪ್ಪು! ಹಬ್ತಾ ಹಬ್ತಾ ಬಳ್ಳಿ ಮೇಲೆ ಹೋಗಿತ್ತು ಪಕ್ಕದಲ್ಲೇ ಇದ್ದ ಲೈಟ್ ಕಂಬ ಮುಟ್ಟಿತ್ತು ಅಯ್ಯೋ ಅಯ್ಯೋ ಬಳ್ಳಿ ಅದರಲ್ಲಿದೆ ಕರೆಂಟು ಹುಷಾರು ಹೆಚ್ಚು ಕಮ್ಮಿ ಆದರೆ ನೀನ್ ಜೊತೆ ನಾನು ಢಮಾರು ಇಲ್ಲಪ್ಪ ಮರ-ರಾಯ ಹೆದರಬೇಡ ಅರಾಮಾಗಿರು ಜೀವನ ಅಂದ್ರೆ ಎಲ್ಲಾ ಇರುತ್ತೆ ಖುಷಿಯಾಗಿರು ಆದ್ರೂ ಕರೆಂಟಂದ್ರೆ ಭಯ ಅಲ್ವಾ ನೀ ಯಾಕ್ ಅಪ್ಪಿದೆ? ನೀನು ನನ್ನ ಫ್ರೆಂಡ್ ನಿನ್ ಧೈರ್ಯ ನಾನ್ ಒಪ್ಪಿದೆ ನಾವು ಒಳ್ಳೆಯವರಾದ್ರೆ ಲೋಕನೆ ಒಳ್ಳೆದಂತೆ ಸ್ನೇಹದಿಂದ ಇದ್ದರಂತು ಎಲ್ಲಾನು ಗೆಲ್ಲಬಹುದಂತೆ!——————————————————

ಮಕ್ಕಳದಿನದ ಸಂಭ್ರಮ Read Post »

ಕಾವ್ಯಯಾನ

ಕಾವ್ಯಯಾನ

ಅಂಬೇಡ್ಕರ್ ಕೆಂಪಗೆ ಕಣ್ಣು ಬಿಟ್ಟಿದ್ದಾರೆ ! ಬಿದಲೋಟಿ ರಂಗನಾಥ್ ನಮ್ಮ ನಾಡಿಮಿಡಿತದಲ್ಲಿರುವ ಅಂಬೇಡ್ಕರ್ ಕೆಂಪಗೆ ಕಣ್ಣು ಬಿಟ್ಟಿದ್ದಾರೆ ಅವರೇ ಜನ್ಮವಿತ್ತ ಸಂವಿಧಾನದ ಕೂಸು ಅವರದಲ್ಲವೆಂದವರ ವಿರುದ್ಧ. ಅಲ್ಪತಿಳಿದವರ ಕುತಂತ್ರ ಬೆಳೆಯುವ ಮಕ್ಕಳ ಮನಸುಗಳ ನೆಲದ ಮೇಲೆ ವಿಷ ಬೀಜ ಕುದಿಯುವ ರಕ್ತದಲಿ ಅಂಬೇಡ್ಕರ್ ಕಣ್ಣೀರು.! ಸುಡುತ್ತದೆ ಕೋಮುವಾದಿಗಳ ಲೇಖನಿಯನ್ನು ಹೊಲಸು ಮನಸನ್ನು ನೀವೆ ತೋಡುವ ಖೆಡ್ಡಕ್ಕೆ ನೀವೆ ಮುಗ್ಗರಿಸುವಿರಿ ಭೀಮನು ನಡೆದ ನೆಲ ಬೆವರುತ್ತಿದೆ ಅಪಮಾನ ಅವಮಾನದ ಕರುಳು ಸುಡುತ್ತ ಮನದಲಿ ಕುಂತ ಶಾಂತಿಯ ಪಾರಿವಾಳಕ್ಕೆ ರಕ್ತಪಾತದ ಕನಸು ಬೀಳುತ್ತಿದೆ ಇತಿಹಾಸ ತಿರುಚುವ ನಿಮ್ಮಗಳ ಕೈಯಲ್ಲಿ ಎಲ್ಲೋ ಮುಳ್ಳುಗಳು ನೆಲೆಯೂರಿರಬೇಕು ನಾಲಿಗೆಯು ಹುಣ್ಣಾಗಿರಬೇಕು ಮನಸು ಕೊಳಕಾಗಿ ಗಬ್ಬೆದ್ದು ನಾರುತ್ತಿರಬೇಕು .! ಅವನುಂಡ ನೋವು ನಮ್ಮದು ಕರುಳು ಕಲೆತ ಮನಸುಗಳಿಗೆ ಬೆಂಕಿ ಯಾಕೆ ಸೂಡುತ್ತೀರಿ ನರವಿಲ್ಲದ ನಾಲಿಗೆ ಮೇಲಿರುವ ಸುಳ್ಳಿನ ಬೀಜ ಮೊದಲು ಸುಡಿ ಹಾಲುಗೆನ್ನೆಯ ಮಕ್ಕಳ ಬೆಳಕಿನ ಮನಸಿಗೆ ಕತ್ತಲನ್ನೇಕೆ ಮೆತ್ತುತ್ತೀರಿ ? ಅಂಬೇಡ್ಕರ್ ಸರ್ವಕಾಲಿಕ ನಾಯಕ ಅವನೇ ಬರೆದ ಸಂವಿಧಾನವಿಲ್ಲದೇ ಹೋಗಿದ್ದರೆ ನಿಮ್ಮ ಗರಿ ಗರಿ ಬಟ್ಟೆಗಳು ಮಣ್ಣು ಮೆತ್ತಿ ಗೆದ್ದಲಹುಳು ಮುಕುರುತ್ತಿದ್ದವು. ಭೀಮನು ತುಳಿದ ಮಣ್ಣಹೆಜ್ಜೆ ನೆರಳಿಗೂ ಯೋಗ್ಯತೆಯಿಲ್ಲದ ಕುಬ್ಜ ಮನಸುಗಳೇ ಯಾರೋ ಹಾಕಿದ ಹಾರ ಹಾವಾಗುವ ಮುನ್ನ ಹಿಂಪಡಿಯಿರಿ ನೀವು ಬಿತ್ತಿದ ಸುಳ್ಳಿನ ಕೈಪಿಡಿ ಇಲ್ಲವೋ ಈ ನೆಲದ ಮನಸುಗಳ ನಿಟ್ಟುಸಿರು ವಿಧಾನ ಸೌಧದ ಕಲ್ಲುಗಳ ಮೇಲೆ ಕೂತು ಕುರ್ಚಿ ಕಾಲುಗಳೇ ಮುಗುಚಿ ಊನಾಗಿ ಹುಣ್ಣಾಗಬಹುದು.!

ಕಾವ್ಯಯಾನ Read Post »

You cannot copy content of this page

Scroll to Top