ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಖಾಲಿ ದೀಪ ಮತ್ತು ಕತ್ತಲು ಬಿದಲೋಟಿ ರಂಗನಾಥ್ ಕಟ್ಟಿದ ಮಣ್ಣಗೋಡೆಯು ತಪ ತಪನೆ ಬೀಳುತ್ತಿದೆ ನಿದ್ದೆಯಿಲ್ಲದ ರಾತ್ರಿಗಳ ಕನಸು ಆ ಮನೆ  ಪ್ರತಿ ಇಟ್ಟಿಗೆಯ ಮೇಲೂ  ನಿನ್ನ ಶ್ರಮದ ಬೆವರ ವಾಸನೆ ನೀನು ಮಲಗೆದ್ದ ಜಾಗದ ನಿಟ್ಟುಸಿರು ಕಣ್ಣೀರಾಕುತ್ತಿದೆ ನೀನೆ ನೆಟ್ಟ ನಂಬಿಕೆಯ ಗಿಡದ ಬುಡಕ್ಕೆ ಪಾದರಸ ಸುರಿದ ಅವಳು  ಇವತ್ತು ಬೀದಿ ನಾಯಿಯ ಬಾಲ ಅವಮಾನದ ಗಾಯ ನಂಜಾಗಿ ನಸಿರಾಡಿ ಬದುಕುವ ಭರವಸೆಯು ಕುಂದಿ ನೆಲದ ಮೇಲಿಟ್ಟ ಅಷ್ಟೂ ಹೆಜ್ಜೆಗಳು ಕೆಂಡಗಳಾಗಿ ಧಗ ಧಗಿಸಿ ಉರಿದು ಜೀವವನ್ನೇ ಸುಟ್ಟ ನರಳುವಿಕೆಯ ಧ್ವನಿಯಲ್ಲಿ ಮಕ್ಕಳ ಮೇಲಿನ ಪ್ರೀತಿ ಹಸಿ ಹಸಿಯಾಗಿತ್ತು ಮಣ್ಣು ತಿನ್ನುತ್ತಿರುವ ನಿನ್ನದೆ ದೇಹದ ಮೂಳೆಯನ್ನು ಒರಸಿ ನೋಡಿದೆ ಎಷ್ಟೊಂದು ಕನಸುಗಳು ಜೀವಂತವಾಗಿದ್ದವು ರೆಕ್ಕೆ ಪುಕ್ಕ ಎತ್ತಿಕೊಂಡು ಮುಚ್ಚಿದ ರೆಪ್ಪೆಗಳಡಿಯಲ್ಲಿ ಸವೆಯದ ಹಾದಿ ತೆರೆದೇ ಇತ್ತು  ಮಾತಾಡಿಸಿದೆ ತಮ್ಮನೆಂಬ ಹೆಸರು ಎದೆಯೊಳಗೆ ಬಿರಿದು ಮೌನದ ಗುಂಡಿಯಲಿ ಮಾತುಗಳು ಸತ್ತಿರುತ್ತವೆಂಬ ಸಣ್ಣ ಅರಿವೂ ಇಲ್ಲದೆ. ಅಲ್ಲಿಂದ ಎದ್ದು ಮಾರು ದೂರ ನಡೆದೆ  ಬಂದ ದಾರಿಗೆ ಸುಂಕವಿಲ್ಲದೆ. ತಡೆಯದ ಮನಸು ಮತ್ತೆ ತಿರುಗಿ ನೋಡಿತು ಮಣ್ಣ ಹೊದಿಕೆಯ ‘ಮಾಡಿ‘ನೊಳಗೆ ಎಷ್ಟೊಂದು ಶಾಂತತೆಯಲಿ ಮಲಗಿದೆ ಹಾರಿ ಹೋದ ಪ್ರಾಣ ಪಕ್ಷಿಯ ದೇಹ ತಲೆದೆಸೆಯ ಗೂಡ ದೀಪದೊಳಗಿನ ಬತ್ತಿ ಎಣ್ಣೆ ಇರುವವರೆಗೆ ಮಾತ್ರ ಉರಿಯುತ್ತದೆ. ನಂತರ ಉಳಿಯುವುದು ಕೇವಲ ಖಾಲಿ ದೀಪ ಮತ್ತು ಕತ್ತಲು. ***********************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗುಳಿಗೆ ಮಾರುವ ಹುಡುಗ ಅರುಣ್ ಕೊಪ್ಪ ಇವನು ಬ್ಯಾಗ್ ಹೊತ್ತು ಬೆವರು ಬಿತ್ತಿ ಜಿಪ್ಪು ಸರಿಸುತ್ತಾ ಸ್ಯಾಂಪಲ್ ಹಂಚುವ ಡಾಕ್ಟರ್ ಛೆಂಬರ್ ಲಿ ದಿನವೂ ಜ್ಞಾನಾರ್ಜನೆಯಂತೆ! ಸರತಿ ಸಾಲಿನಲ್ಲಿ ಮಾತು ಬರದವ ಹೊಡೆಯಲು ಹೋಗುತ್ತಲೇ… ಕಾಲು ಕಿತ್ತು ಬೇರೆ ವೈದ್ಯರ ಭೇಟಿಗೆ ಗೀಳಿಡುತ್ತಾನೆ ಇವ ಗುಳಿಗೆ ಮಾರುವ ಹುಡುಗನಂತೆ ಒಳ ಸೇರಿಸಿದ ಅಂಗಿ, ಕಪ್ಪು ಸೊಂಟದ ಪಟ್ಟಿ ಶೂ ಕೂಡ ಹೊಳೆವ ಹಾಗೇ ರೋಗಿಗಳು ಮತ್ತಷ್ಟು ಹಿಡಿ ಶಾಪ ಹಾಕುವ ಉತ್ತೇಜನ ನೀಡುವ ಹಾಗೇ ಅವನ ಡ್ರೆಸ್ ಕೋಡ್ ! ತನಗೂ ಇತರರಿಗೂ ಬದುಕು ಸಾಕುವ ಪಾಲಕ ಸೇವಕ, ಎಂತೆಲ್ಲ ಹಲುಬುತ್ತಾರೆ… ಅಲೆದಾಟದ ಬದುಕಲಿ ಕಾರದ ಕಲ್ಲು ಗೊತ್ತಾಗದೆ ಸವೆದ ಹಾಗೇ, ಇವ ಗುಳಿಗೆ ಮಾರುವ ಹುಡುಗನಂತೆ ಸೈಕಲ್ ತುಳಿಯುತ್ತಾನೆ ಹೆಲ್ಮೆಟ್ ಇಲ್ಲದೆ ಬೈಕ್ ಗುರ್ ಗುಡಿಸಿ ನಡೆಯುತ್ತಾ, ತಟ ತಟನೆ ಮೈ ಧಗಿಸಿ ಶ್ರಮಿಕರ ವರ್ಗದಲಿ ಇವನೂ ಒಬ್ಬ ವೈದ್ಯರ ಸಮಯಕ್ಕೆ ಇವನು ಸರಿಯಾಗಿ ಒಡೆದು ಮೂಡುತ್ತಾನೆ ತಪಸ್ಸಲಿ ದೇವರು ಕಂಡ ಹಾಗೇ ಹಪಾಹಪಿಯ ಭಾವ ಮಂದಹಾಸ ದಿನ ಕಳೆಗಟ್ಟಿದೆ ಅವಗೆ ವ್ಯಾಪಾರ ಜೋರಂತೆ ಇವ ಗುಳಿಗೆ ಮಾರುವ ಹುಡುಗನಂತೆ ಮನಸ್ಸು ಕಂಡಾಗ ಕರೆಯುವ ಕೆಲ ವಿಶೇಷ ತಜ್ಞರು ಬೆಟ್ಟಿಯಾದಾಗಲೆಲ್ಲ ತಿರುಪತಿ ವೆಂಕಟ್ರಮಣ ದರ್ಶನವಾದಂತೆ ನನಗೆ ಎನ್ನುತ್ತಾನೆ. ಒಂದಷ್ಟು ಬಿಡುವಿಲ್ಲದ ಬಿಡುವಿನಲ್ಲಿ ಮಡದಿ ಮಕ್ಕಳು ಬಂದುಗಳಿಗೆ ಇಳಿ ಪ್ರಾಯದಲ್ಲೂ ನಗುವ ಊರಲ್ಲಿ ಸಿಗುವ ತನ್ನ ಹೆತ್ತಮ್ಮನಿಗಾಗಿ ತಂದೆಗಾಗಿ ಇವನು ಗುಳಿಗೆ ಮಾರುವ ಹುಡುಗನಂತೆ ತಿಂಗಳು ಕೊನೆಯಲ್ಲಿ ಹಾಹಾಕಾರದ ಗುಬ್ಬಿಯಂತೆ ಕಡ್ಡಿ ಸೇರಿಸಿ ಗೂಡ ಹೆಣೆದಂತೆ ಸುರಿಗೂ ಇಲ್ಲದ ಆಯುಷ್ಯ ಇನ್ನು ಮನೆ ಎಲ್ಲಿ? ನೀರ ಮೇಲಿನ ಗುಳ್ಳೆಯ ಹಾಗೇ ಸ್ವಾವಲಂಭಿಯ ಒಂದು ರೂಪವಂತೆ ಇವನು ಗುಳಿಗೆ ಮಾರುವ ಹುಡುಗನಂತೆ ಉದ್ಯೋಗ ಅರಸಿ ಬಂದನಂತೆ ಕಾಂಕ್ರೀಟ್ ಕಾಡಿಗೆ, ನಿರುದ್ಯೋಗ ಮೆಟ್ಟಲು ಬದುಕ ಕಟ್ಟಲು ಮೆಟ್ಟಿಲು ಏರುತ್ತಾ ಒಂದೊಂದೇ ಆಫೀಸರ್ ಆಗುತ್ತಾನೆ, ಚಾಲಕನಾಗುತ್ತಾನೆ ಶಿಕ್ಷಕನಾಗುತ್ತಾನೆ, ವಿದ್ಯಾರ್ಥಿಯಾಗುತ್ತಾನೆ ಕೊನೆಗೆ ಹಮಾಲಿಯೂ, ಚೌಕಟ್ಟಿನ ಭಯದಲ್ಲಿ ಬದುಕ ಗೆಲ್ಲುತ್ತಾ ಇವ ಗುಳಿಗೆ ಮಾರುವ ಹುಡುಗನಂತೆ ********************************** (ಔಷಧಿ ಕಂಪನಿ ಪ್ರತಿನಿಧಿಗಳಿಗೆ (ಮೆಡಿಕಲ್ ರೇಪ್ರೆಸೆಂಟಿಟಿವ್ ) ಕವಿತೆ ಅರ್ಪಣೆ )

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಜೀವಾತ್ಮ ಕೊಟ್ರೇಶ್ ಅರಸೀಕೆರೆ ಯಾವುದೋ ಹಕ್ಕಿ ಹಾಕಿರುವ ಈ ಹಿಕ್ಕೆ ಈಗ ಸಸಿಯಾಗಿದೆ! ಉದರಾಂಬರದ ಕಾರಣ ನುಂಗಿ,ನೀರು ಕುಡಿದುದೆಲ್ಲಾ ಏನೆಲ್ಲಾ ಸಕಾರಣಗಳಿಗೆ ಕಾರಣ!! ಜಗಕ್ಕೆ ಬಿದ್ದ ಕಿರಣ,ಮೇಲಿಂದ ಬಿದ್ದ ನೀರ ಬಿಂದು,ಸುಯ್ಯನೇ ಬೀಸುವ ಗಾಳಿ…… ಯಾವ ಯಾವುದಕ್ಕೆ ಸಂಬಂಧ!! ಅಲ್ಲೊಂದು ಜೋಡಿ ಹಕ್ಕಿ, ಇಲ್ಲೊಂದು ಮಿಲನ, ನಳ ನಳಿಸುತ್ತಿರುವ ಹೂ… ಒಂಟಿಯಾಗಿ ಯಾವುದೋ ಶಿಖರ ತೇಲಿ ಹೋಗುತ್ತಿರುವ ಮೋಡಗಳು ಯಾವ ದಂಡಯಾತ್ರೆಗೆ……. ಜೀವ ಇರಲೇಬೇಕಿಲ್ಲ ಚಲನೆಗೆ ಸೃಷ್ಟಿಯ ಸಾರ ಯಾರು ಹೀರಿದ್ದಾರೆ? ಯಾರೋ ಮೇಲೋ ಯಾರ ವಿಜಯ? ಅವನು ಅವಳ ಮೇಲೆ,ಅವಳು ಇವನ… ಬೆತ್ತಲ ದೇಹದ ತರತರ ತಡುಕುವಿಕೆಯಲ್ಲಿ ಕಾಲ… ಹಿಂದಿಲ್ಲ…ಮುಂದಿಲ್ಲ ಬರೀ ಸದ್ದು..ಸಾವು ಜನನ ಜನೇಂದ್ರಿಯ! ದೇಶ,ರಾಜ್ಯ,ರಾಜ ಗಡಿಯಂತೆ…ಉಗಿ ಮುಖಕ್ಕೆ! ಯಾವ ಸಾಮ್ರಾಜ್ಯ ಈ ಗ್ಯಾಲಾಕ್ಸಿಯಲ್ಲಿ ಯಾವ ಪಥ,ಚಲನೆ,ಗಾಳಿ,ಅಣು ಅಣುವೂ ಯಾರೂ ತೋರದ ಮಹಾನ್ ಕಪ್ಪು ಕುಳಿ ಒಂದಷ್ಟು ಉಸಿರು,ಜೀವ… ಸಾಕಷ್ಟೇ.. ಅಹಂಕಾರದ ಬುಗ್ಗೆಗೆ? ಅದಕ್ಕೆ ಇದಿಯೋ ಮರುಳೇ ಮರಳು ಮರಳು..ಮರಳುಗಾಡು ಮರುಳೇ…ಮರುಳ ಜೀವ! ಯಾವ ಹಕ್ಕಿಯ ಹಾಡು ಯಾವ ಹಕ್ಕಿಯ ಹಿಕ್ಕೆ ನಾವೆಲ್ಲಾ….. !! ಆದರೂ ರುಜು ಬೇಕು ಅವಳ ಒಳಗೆ! ನನ್ನದೇ ಜೀವ ಅನ್ನುವ ಚಪಲಕ್ಕೋ….ಅಹಂಕಾರಕ್ಕೋ..!! ಮತ್ತದೇ ಹಕ್ಕಿ,ಹಿಕ್ಕೆ. ನೀರ ಬಿಂದು…ಸರಸರನೇ ಸರಸ…ಜೀವ ಜೀವಾತ್ಮ! ************************************ ಪರಿಚಯ: ಕವಿ,ಸಾಹಿತ್ಯಾಸಕ್ತರು ಅರಸೀಕೆರೆ,ಹಾಸನ ಜಿಲ್ಲೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಲ್ಲಿಗೆ-ಸಂಪಿಗೆ ಅನು ಮಹಾಲಿಂಗ ಅಂಗಳದಿ ಹರಡಿತ್ತು ಹಸಿರಿನ ಮಲ್ಲಿಗೆ ಚಪ್ಪರ ಮಳೆಹೊಯ್ದು ತಂಪಾಗೆ ಸೊಂಪಾದ ಹಂದರ ಬಳ್ಳಿಯ ತುಂಬೆಲ್ಲ ಮಲ್ಲಿಗೆ ಹೂ ರಾಶಿ ಸಂಜೆಗೆ ಕೊಯ್ದರೆ ಮನೆತುಂಬ ಘಮ ಸೂಸಿ ಮನದೊಡೆಯ ತಂದಿರುವನು ಘಂಗುಡುವ ಮಲ್ಲಿಗೆ ನಾರಿಯ ಮುಡಿಯೇರಿ ನಗುತಿರಲು ಮೆಲ್ಲಗೆ ಹಿತ್ತಲ ಮರದಲ್ಲಿ ಬಿರಿದಾಳು ಸಂಪಿಗೆ ಘಮನವಾ ಸೂಸ್ಯಾಳು ಸುತ್ತೆಲ್ಲಾ ಸುಮ್ಮಗೆ ಬಾಲೆಯ ಮನ ಸೆಳೆಯೊ ಗಗನದ ಸಂಪಿಗೆ ಮುಡಿಸೇರಿಸಲು ಪರದಾಟ ಪಕ್ಕದ ಮನೆ ಕೆಂಪನಿಗೆ ಮಲ್ಲಿಗೆ ಸಂಪಿಗೆ ಪ್ರತ್ಯೇಕ ರಾಣಿಯರುಅವರವರ ಕಕ್ಷೆಯಲಿ ಅವರವರೆ ಬೀಗುವರು. ******************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪ್ರಶ್ನೋತ್ತರ ರತ್ನನಂದಿನಿ (ಲತಾ ಆಚಾರ್ಯ) ಪ್ರೀತಿ ಅಂದರೇನು ಕೇಳಿದಳು ಅವಳು ಉತ್ತರಿಸದೆ ನಾನು ಸೊಸೆಯ ಕಡೆಗೊಮ್ಮೆ ಕೈಯ ತೋರಿಸುತ ಮುಗುಳ್ನಗೆಯ ಬೀರಿದೆ ಅರ್ಥವಾಗಿರಬೇಕು ಈಗ  ಆಕೆಗೆ  ಅಮ್ಮ ಮಗುವಿಗೆ ತುತ್ತು ಉಣ್ಣಿಸುತ್ತಿದ್ದಳು. ಸ್ನೇಹವೆಂದರೇನು ಮತ್ತೊಂದು ಪ್ರಶ್ನೆ ಈಗಲೂ ನಾನು ಮೌನ ದಿಟ್ಟಿಸಿದಳು ನನ್ನ  ಗೆಳೆಯನೋರ್ವನು ಬಂದು ಹೇಗಿರುವೆ ಎಂದನು ಮತ್ತದೇ ಅಸೌಖ್ಯ ತೋರಿದರೆ ಹೆದರದಿರು ನಾನಿರುವೆ ಜೊತೆಯಲ್ಲಿ ಎಂದಾಗ ಆಕೆ ಮೌನವಾಗಿದ್ದಳು. ಬೆಸುಗೆ ಎಂದರೇನು ಕೇಳಿದಳು ಈ ಬಾರಿ ಏನು ಹೇಳಲಿ ನಾನು ಮಾತು ಬಾರದು ನನಗೆ ಅವಳ ಗಲ್ಲವನು ಹಿಡಿದೆತ್ತಿ ಚುಂಬಿಸುತ ಬಾಹು ಬಂಧನದಲ್ಲಿ ಆಲಿಂಗಿಸಿದೆ  ಏನು ಅರ್ಥವಾಯಿತೋ ಅವಳು ತುಸು ನಕ್ಕಳು. ಕರುಣೆ ಎಂದರೇನು ಮಗದೊಂದು ಪ್ರಶ್ನೆ ಉತ್ತರಿಸಲಾರೆ ಎಂದವಳು ತಿಳಿದಿದ್ದಳು ಕಾಲು ಮುರಿದಿಹ ನಾಯಿಮರಿಯೊಂದನ್ನು ಮಗರಾಯ ಎತ್ತಿ ತರುತ್ತಿರುವುದನ್ನು ಕಿಟಿಕಿಯಿಂದಲೆ ತೋರಿಸಿದೆ ಓಹೋ ಎಂದು ತಲೆಯಾಡಿಸಿದಳು. ಇನ್ನೇನೋ ಪ್ರಶ್ನೆ ಕೇಳುವವಳಿದ್ದಳು ಹೊಟ್ಟೆಯೊಳಗೇನೋ ನೋವು ಯಾರೋ ತಿವಿದಂತೆ ನರಳಿದೆನು ಹೊರಳಾಡಿ ಮುಖವ ಕಿವುಚಿದೆನು ಅಮ್ಮ ಮಗನಲ್ಲಿ ಪಿಸುಗುಟ್ಟಿದಳು ಆಗ ಗೆಳೆಯನಿಗೂ ಕರೆ ಹೋಗಿ ಆತ ಬಂದಿದ್ದನು. ಅವಳೇಕೋ ಈಗ ಮೌನ ತಾಳಿದ್ದಳು ದವಾಖಾನೆಯಲಿ ಮಲಗಿದ್ದ ನನ್ನನ್ನು ದಿಟ್ಟಿಸುತ ಕೇಳಿದಳು ಮುತ್ತೈದೆ ಭಾಗ್ಯವನು ಕೊಡುವಿರೇನು ಪ್ರಶ್ನೆಗುತ್ತರಿಸದೆಯೇ ಮೊದಲ ಬಾರಿಗೆ ನಾನು  ಸೋತು ಹೋಗಿರುವಾಗ ಯಮರಾಯ ಸನಿಹದಲೆ ನಿಂತಿದ್ದನು *******************************

ಕಾವ್ಯಯಾನ Read Post »

ಕಾವ್ಯಯಾನ

ಕಾರ್ಟೂನ್ ಕೋಲ್ಮಿಂಚು

ಡಾ.ಎನ್.ಸುಧೀಂದ್ರ ಪರಿಚಯ: ಕನ್ನಡ  ಸ್ನಾತಕೋತ್ತರ ಪದವಿ. .”ಕನ್ನಡ ರೇಡಿಯೋ ನಾಟಕಗಳು” ವಿಷಯದಲ್ಲಿ ಕುವೆಂಪುವಿ,ವಿ ಯಿಂದ ಡಾಕ್ಟರೇಟ್. ಆಕಾಶವಾಣಿಯಲ್ಲಿ ಕಾರ್ಯಕ್ರಮ ಅಧಿಕಾರಿ ಯಾಗಿ ಸೇವೆ. ಈಗ ವಿಶ್ರಾಂತ ಸ್ಪಂದನಟೀವಿಚಾನಲ್ ಶಿವಮೊಗ್ಗ ,ಇದರಲ್ಲಿ ಕಾರ್ಯಕ್ರಮ ಮುಖ್ಯಸ್ಥರಾಗಿ  ಸೇವೆ. ಮಲೆನಾಡು ಮೀಡಿಯ ವೆಬ್ ಪೋರ್ಟಲ್ ಸಂಪಾದಕರಾಗಿ ಸೇವೆ

ಕಾರ್ಟೂನ್ ಕೋಲ್ಮಿಂಚು Read Post »

ಕಾವ್ಯಯಾನ

ಕಾವ್ಯಯಾನ

ಕಾಡುಹರಟೆ ಮತ್ತು ಕವಿಗೋಷ್ಠಿ. ವಿಜಯಶ್ರೀ ಹಾಲಾಡಿ ವಾರವಿಡೀ ಕಾಡುಮುನಿಯ ಹಕ್ಕಿಗಳು ಮರಿಗಳಿಗೆಂದು ಗೂಡುನೇಯುತ್ತಿದ್ದವು ಕಟ್ಟಿರುವೆಗಳು ಹುಲ್ಲಿನ -ಬೀಜಕ್ಕಾಗಿ ಜಗಳಾಡಿದವು ಗೋಡೆಗಳನ್ನು ಕಾಲುದಾರಿ ಮಾಡಿಕೊಂಡ ಅಳಿಲು ಮುಂಗುಸಿ ಮತ್ತದರ ಮಗು ಪಕ್ಕದ ಖಾಲಿ ಸೈಟಿನಲ್ಲಿ ವಿಹರಿಸುತ್ತಿದ್ದವು.. ಹುಲ್ಲುಗಾವಲಲ್ಲಿ ಕಿವಿಗಳು ಕಂಡದ್ದಷ್ಟೇ ಬೆಚ್ಚನೆಯ ಪಾದವನ್ನು ಎದೆಯೊಳಗೆ ಊರಿ ಮೊಲವೊಂದು ನಾಗಾಲೋಟ ಹೂಡಿತು ಹಿಂದಿನ ಮನೆಯ ಕಿಟಕಿ ಗಾಜನ್ನು ಮರಕುಟಿಕವೊಂದು ಬಡಿದದ್ದೇ ಬಡಿದದ್ದು ಅದರ ತಲೆಯೊಳಗೆ ಮೆದುಳು ಕದಡಲೇ ಇಲ್ಲವಲ್ಲ ಎಂದು ಅಚ್ಚರಿಪಡುತ್ತ ಕಾಲಹರಣಮಾಡಿದೆ.. ನನ್ನ ರಜಾದಿನಗಳು ಹೀಗೇ ಕವಿತೆ ಹುಟ್ಟಿಸುತ್ತ ಶುದ್ಧ ಕಾಡುಹರಟೆಯಾಗಿ ಸದ್ದಲ್ಲದ ಸದ್ದಿನ ಹನಿಗಳಾಗಿ ಖಾಲಿಯಾದವು ಗೆಳತೀ ಹೇಳು ನಿನ್ನ ಕವಿಗೋಷ್ಟಿಯಲ್ಲಿ ಇಂತವೆಲ್ಲ ಇದ್ದುವೇ!? ==============

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮೌನ ಮಾರಾಟಕ್ಕಿದೆ ತನುನಯ ಮೌನದ ಜೊತೆ ಮಾತು ಬಿಡುವ ಮನಸಾಗಿದೆ ಮೌನವೂ ಸಮ್ಮತಿಸಿ ಟೂ ಬಿಟ್ಟು ನಡೆದಿದೆ ಹಾಳು ಮಳೆಯ ಜೊತೆ ಕಾಡು ಹರಟೆ ಜೋರಾಗಿದೆ ನಿಲ್ಲುತ್ತಿಲ್ಲ ಮಾತಿನ ಮಳೆ ಮುಗಿಸುವ ಮನಸಿಲ್ಲದೆ ಮಳೆಗೂ ಮನಸಿಗೂ ಮಾತಿಲ್ಲದ ಜೊತೆಗಾರರಿಲ್ಲದೆ ಮಳೆಯೂ ಕೂಡ ಮೌನವನು ಮಾರಿಬಿಡು ಎನ್ನುತಿದೆ ಮಾತು ಮುಗಿಯುತ್ತಿಲ್ಲ  ಮೌನವಿಂದು ಮಾರಾಟಕ್ಕಿದೆ ಮಾತಿನ ಸಂತೆಯಲಿ ಕೊಳ್ಳುವವರಿಲ್ಲದೆ ಮೌನ ಮರುಗುತ್ತಿದೆ ಕೊಳ್ಳುವೆಯ ಮೌನವನು ನಿನ್ನ ಮಾತು ಮರೆತು ಬರೆಯುವೆನು ಕವಿತೆಯ ನಿನ್ನೊಲವ ಅರಿತು… =====================

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ವ್ಯತ್ಯಾಸ ಪ್ರಮೀಳಾ ಎಸ್.ಪಿ. ಎದೆಯ ಮೇಲೊಮ್ಮೆ ಕಿವಿಯಿಡು ನಿನ್ನೆಸರೇ ನನ್ನುಸಿರಲಿ ಎಂದಿದ್ದವ ಗೊರಕೆ ಸದ್ದುಸಹಿಸಲಾರೆ ದೂರ ಮಲಗುವೆಯಾ ಎನ್ನುತ್ತಿದ್ದಾನೆ ಬೈಕ್ ಮೇಲೆ ನಿನ್ನಬಾಡಿ ಲೈಟ್ ವೈಟ್,ಹಾರೀಯೆ ಎಂದಿದ್ದವ ಕಾರಿಗೂ ಮುಂಬಾರ ಹಿಂದೆ ಕೂರುವೆಯಾ ಎನ್ನುತ್ತಿದ್ದಾನೆ. ನಿನ್ನ ಮುಡಿಗೆ ಮಲ್ಲಿಗೆ ತಂದಿರುವೆ ಮುಡಿಯಲೇ ಬೇಕು ಎಂದಿದ್ದವ ಮಾರೀಗ ರೂಪಾಯಿ ನೂರು ಖಾಲಿ ಜಡೆಯೆ ಚೆನ್ನ ಎನ್ನುತ್ತಿದ್ದಾನೆ ಮಸಾಲೆ ದೋಸೆ ನಿನ್ನಿಷ್ಟ ತಿನ್ನು ನೀ ಎಷ್ಟಾದರೂ ಎಂದಿದ್ದವ ಅನ್ನ ಸಕ್ಕರೆ ಬೇಡ ಸಿರಿಧಾನ್ಯ ತಿನ್ನಲಾರೆಯಾ ಎನ್ನುತ್ತಿದ್ದಾನೆ. ಸೀರೆಯಲಿ ನೀ ಸುಂದರಿ ಕಡು ನೀಲಿ ನಿನಗಂದ ಎಂದಿದ್ದವ ಕಪ್ಪನೆ ಮೈ ಬಣ್ಣದವಳಿಗೆ ಅದ್ಯಾವ ಸೀರೆಯಾದರೇನು ಎನ್ನುತ್ತಿದ್ದಾನೆ ನಿನ್ನ ಮಾತೆ ಎನೆಗೆ ಕೇಳಿದಷ್ಟು ಇಂಪು, ಮನವೆಲ್ಲ ತಂಪು ಎಂದಿದ್ದವ ನಾಯಿ ಬೊಗಳಿದ ಸದ್ದು ಮಾತು ನಿಲ್ಲಿಸುವೆಯಾ ಎನ್ನುತ್ತಿದ್ದಾನೆ. ಕೇಳುವುದಾದರೂ ಯಾರಿಗೆ ನಾನು,ಪ್ರಶ್ನೆಗಳನು….? ಇರುವುದಾದರೂ ಯಾರು ಉತ್ತರಿಸಲು? ಬರೆಯಲೇನಿದೆ ಬಿಳಿ ಹಾಳೆಯ ಮೇಲೆ…. ಕಡಿಮೆಯಾಗಿದ್ದು ಪ್ರೀತಿಯೇ ಯಾರಿಗೆ ಕೇಳಲಿ? ಹೇಳಲಿ? =======

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಾ ಮನುಷ್ಯಾ ಅದೀನಿ ಚಂರಾನನ ದು:ಖ ಆದಾಗ ಅತ್ತೇನಿ ಸಂತೋಷ ಆದಾಗ ನಕ್ಕೇನಿ ಯಾಕಂದ್ರ ನಾ ಮನಷ್ಯಾ ಅದೀನಿ….. ಮನಸ್ನ್ಯಾಗೊಂದು, ಮಾತ್ನ್ಯಾಗೊಂದು, ಕೆಲಸ್ದಾಗೊಂದು ಮಾಡಿಲ್ಲ ಯಾಕಂದ್ರ ನಾ ಮನಷ್ಯಾ ಅದೀನಿ…. ಮುಖವಾಡ ಇಟ್ಕೊಂಡ್ ನೋಡಿಲ್ಲ ಮುಖವಾಡ ಹಾಕ್ಕೊಂಡ್ ಆಡಿಲ್ಲ ಯಾಕಂದ್ರ ನಾ ಮನುಷ್ಯಾ ಅದೀನಿ….. ಇದ್ರ ಕೊಟ್ಟೀನಿ,ಇಲ್ಲಾಂದ್ರ ಬಿಟ್ಟೀನಿ ಮುಂದ್ ಹೊಗಳಿಲ್ಲ,ಹಿಂದ್ ಬೈದಿಲ್ಲ ಯಾಕಂದ್ರ ನಾ ಮನಷ್ಯಾ ಅದೀನಿ….. ಕಷ್ಟ ಅಂದ್ರ ಕರಗೀನಿ,ಇಷ್ಟ ಅಂದ್ರ ಹಿಗ್ಗೀನಿ ಏನೂ ಇಲ್ಲಾಂದ್ರ ಸುಮ್ಮನದೀನಿ ಯಾಕಂದ್ರ ನಾ ಮನಷ್ಯಾ ಅದೀನಿ…… ಬದಕಾಕ ರೊಕ್ಕ ಬೇಕ,ರೊಕ್ಕಕ ಬದಕಿಲ್ಲ ಇದ್ದಾಗ ಉಂಡೇನಿ,ಇಲ್ಲದಾಗ ನೊಂದೇನಿ ಯಾಕಂದ್ರ ನಾ ಮನಷ್ಯಾ ಅದೀನಿ….. ===========================

ಕಾವ್ಯಯಾನ Read Post »

You cannot copy content of this page

Scroll to Top