ಕಾವ್ಯಯಾನ
ಮಧುಕುಮಾರ್ ಸಿ.ಹೆಚ್. ನೂತನ ಪ್ರಜ್ಞಾ ದೀಪಿಕೆ ನಿರ್ಗಮಿಸು ಸಾಕ್ಷಿಪ್ರಜ್ಞೆಯೆ, ಅಂತರಂಗದ ದನಿಯೆದುರು ಮಂಡಿಯೂರಿ ನಿಲ್ಲಬೇಡ: ಯಾರದೋ ಬಹಿರಂಗ ತಲ್ಲಣಕೆ ಮನ ತೆರೆಯಬೇಡ ತಪ್ಪು-ಒಪ್ಪುಗಳ ಕಂತೆಯನು ಅಡ್ಡಗೋಡೆಯ ಮೇಲಿಟ್ಟು ಸುಮ್ಮನೆ- ತಣ್ಣಗೆ ಪಲಾಯನ ಮಾಡು ಪ್ರತಿಕ್ರಿಯೆ – ಸ್ಪಂದನದ ಗೊಡವೆ ನಿನಗೇತಕೆ? ಭೂತದ ಬೆನ್ನು ಹತ್ತಿ; ವರ್ತಮಾನವ ಕಟ್ಟಿಡು ಸತ್ಯದರ್ಶನಕೆ ಗಾಂಧಾರಿ- ಧೃತರಾಷ್ಡçರ ಸಾಲಲ್ಲಿ ನಿಲ್ಲು ನಮ್ಮವ ನಮ್ಮವರೆಂಬ ದಾರಿಯಲಿ ಸದ್ದುಮಾಡದೆ ನುಸುಳಿ ನುಸುಳಿ ಮುಂದೆ ಸಾಗು. ಅನುಭವ ಮಂಟಪದ ಮಹಾನುಡಿಗಳನು ಅನ್ಯರಿಗೆ ಅನ್ವಯಿಸಿ ಗುಣಿಸಿಬಿಡು ಅಹಮಹಮಿಕೆಯ ಆಪ್ಯಾಯನದೊಡನೆ ಲೋಕದೆದುರು ಸರ್ವಗುಣ ಸಂಪನ್ನತೆಯ ಪೋಷಾಕು ಧರಿಸಿ ಯಾರ ಜಪ್ತಿಗೂ ಸಿಗದ ನಗೆಯ ನವಿಲನ್ನೆÃರಿ ಆ ಭಾವ ಈ ಭಾವ ಎಲ್ಲ ಭಾವಗಳ ಹಿಮ್ಮೆಟ್ಟಿಸಿ ಸುಮ್ಮನೆ- ತಣ್ಣಗೆ ಪಲಾಯನ ಮಾಡು ಸುಮ್ಮನೆ- ತಣ್ಣಗೆ ಪಲಾಯನ ಮಾಡು ======================= ಪರಿಚಯ: ಕನ್ನಡಭಾಷಾ ಶಿಕ್ಷಕರು-ಬರಹಗಾರರು









